ರಾಜಕೀಯ
ಎಸ್ ಟಿ ಸೋಮಶೇಖರ ಅವರನ್ನು ಗೆಲ್ಲಿಸಿರುವುದು ಕ್ಷೇತ್ರದ ಜನರು ಬಿಜೆಪಿ ಪಕ್ಷ ಅಲ್ಲ

- /home/u521927855/domains/hosasuddi.in/public_html/wp-content/plugins/mvp-social-buttons/mvp-social-buttons.php on line 27
https://hosasuddi.in/wp-content/uploads/2024/04/WhatsApp-Image-2024-04-22-at-11.36.52-AM-e1713766265398-960x600.jpeg&description=ಎಸ್ ಟಿ ಸೋಮಶೇಖರ ಅವರನ್ನು ಗೆಲ್ಲಿಸಿರುವುದು ಕ್ಷೇತ್ರದ ಜನರು ಬಿಜೆಪಿ ಪಕ್ಷ ಅಲ್ಲ', 'pinterestShare', 'width=750,height=350'); return false;" title="Pin This Post">
- Share
- Tweet /home/u521927855/domains/hosasuddi.in/public_html/wp-content/plugins/mvp-social-buttons/mvp-social-buttons.php on line 72
https://hosasuddi.in/wp-content/uploads/2024/04/WhatsApp-Image-2024-04-22-at-11.36.52-AM-e1713766265398-960x600.jpeg&description=ಎಸ್ ಟಿ ಸೋಮಶೇಖರ ಅವರನ್ನು ಗೆಲ್ಲಿಸಿರುವುದು ಕ್ಷೇತ್ರದ ಜನರು ಬಿಜೆಪಿ ಪಕ್ಷ ಅಲ್ಲ', 'pinterestShare', 'width=750,height=350'); return false;" title="Pin This Post">
ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ 1 ಲಕ್ಷ ಅಂತರದ ಮತಗಳಿಂದ ಬಿಜೆಪಿ ವಿರುದ್ಧ ಗೆಲುವು ಸಾಧಿಸುವುದು ಎಂದು ಕಾಂಗ್ರೆಸ್ ಮುಖಂಡ ಸಜ್ಜಾದ್ ಬಾಬು ಹೇಳಿದರು, ಹೊಸ ಸುದ್ದಿಯ ವಿಶೇಷ ಸಂದರ್ಶನದಲ್ಲಿ ಕಳೆದ ಬಾರಿ ಸದಾನಂದಗೌಡರು ಉತ್ತರ ಕ್ಷೇತ್ರದಲ್ಲಿ ಏನೂ ಕೆಲಸಗಳನ್ನು ಮಾಡಿಲ್ಲ, ಕೇಂದ್ರದಲ್ಲಿ ಇರುವ ಮೋದಿ ಸರ್ಕಾರದ ಕೂಡಗೆ ಇಲ್ಲ ಅವರು ಉತ್ತಮ ಭಾಷಣೆಗಳಿಂದಲ್ಲೇ ದೇಶದ ಜನರನ್ನು ದಾರಿ ತಪ್ಪಿಸಿದ್ದಾರೆ ಎಂದರು,
75 ವರ್ಷದಿಂದ ಕಾಂಗ್ರೆಸ್ ಅವರ ಕೊಡುಗೆ ಅಪಾರ ಈಗ 10 ವರ್ಷದಿಂದ ಭಾರತವನ್ನು ಬದಲಾಯಿಸಿದ್ದೇವೆ ಎಂದು ಅವರು ಹೇಳುತ್ತಾರೆ, ಕಾಂಗ್ರೆಸ್ ಪಕ್ಷ ದೇಶಕ್ಕೆ ಅನೇಕ ಯೋಜನೆಗಳನ್ನು ನೀಡಿದೆ ಅದರೆ ಇಂದು ಪ್ರಧಾನಿ ಮೋದಿ ಅವರು ಎಲ್ಲಾ ನಾನೇ ಮಾಡಿರುವುದು ಎಂದು ಹೇಳುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದರು,
ಆಲ್ಪ ಸಂಖ್ಯಾತರು ಕಾಂಗ್ರೆಸ್ ಪಕ್ಷವನ್ನು ಯಾವುದೇ ಕಾರಣಕ್ಕೂ ಬಿಡಲ್ಲ, ಏಕೆಂದರೆ ಬಿಜೆಪಿ ಪಕ್ಷದವರು ಎಲ್ಲಾ ಸಮುದಾಯಗಳಿಗೆ ಕೆಲಸ ಮಾಡಲ್ಲ, ಇಂದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಎಲ್ಲಾ ಸಮುದಾಯಗಳಿಗೆ ಯೋಜನೆ ನೀಡಿದೆ ಅವರು ಜಾತಿ ಎಂಬ ವಿಷಯವನ್ನು ನೋಡದೆ ಎಲ್ಲರಿಗೂ ಕೆಲಸ ಮಾಡುತ್ತಾರೆ ಅದರೆ ಬಿಜೆಪಿ ಮಾಡಲ್ಲ ಎಂದು ಆರೋಪಿಸಿದರು,
ನಾವು ಭಾರತದಲ್ಲೇ ಹುಟ್ಟಿ ಬೆಳದಿರುವುದು ನಮ್ಮಗೆ ಸಿಎಎ ಬಗ್ಗೆ ಯಾವುದೇ ಭಯವಿಲ್ಲ, ಅದರೆ ನಮ್ಮ ಜನಾಂಗದಲ್ಲಿ ಕೆಲವರಿಗೆ ಸಿಎಎ ಬಗ್ಗೆ ಸರಿಯಾದ ಮಾಹಿತಿ ಇಲ್ಲ, ನಮ್ಮ ಸಮುದಾಯದಲ್ಲಿ ವಿದ್ಯಾವಂತರು ಕಡಿಮೆ ಆ ಕಾರಣದಿಂದ ವೋಟರ್ ಹಾಗೂ ಅಧಾರ್ ಕಾರ್ಡ್ನಲ್ಲಿ ಬಹಳಷ್ಟು ಬಾರಿ ಹೆಸರುಗಳನ್ನು ಸರಿಯಾಗಿ ಇರುವುದಿಲ್ಲ ಏಕೆಂದರೆ ಕೆಲ ಬಾರಿ ಹೆಸರುಗಳ ಉಚ್ಚಾಟನೆ ವೇಳೆ ತಪ್ಪು ನಡದಿರುತ್ತದೆ ಎಂದರು,
ಯಶವಂತಪುರ ಕ್ಷೇತ್ರದಲ್ಲಿ ಶಾಸಕ ಎಸ್ ಟಿ ಸೋಮಶೇಖರ ಅವರನ್ನು ಗೆಲ್ಲಿಸಿರುವುದು ಕ್ಷೇತ್ರದ ಜನರು ಬಿಜೆಪಿ ಪಕ್ಷ ಅಲ್ಲ, ಅವರು ಮಾಡಿರುವ ಅಭಿವೃದ್ಧಿ ಕೆಲಸಗಳಿಂದ ಗೆದ್ದಿರುವುದು ಇಂದು ಅವರ ಜೊತೆ ನಾವು ನಿಂತಿದ್ದೇವೆ ಎಂದರೆ ಅದಕ್ಕೆ ಮುಖ್ಯ ಕಾರಣ ಅವರು ಚುನಾವಣೆಯ ಫಲಿತಾಂಶ ಏನೇ ಇರಲಿ ಅವರು ನಿರಂತರವಾಗಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾರೆ ಅದರೆ ಜನಾತದಳದ ಅಭ್ಯರ್ಥಿ ಜವರಾಯಿಗಡ್ರ ತರ ಚುನಾವಣೆ ಸಂದರ್ಭದಲ್ಲಿ ಬಂದು ಕಣ್ಣೀರು ಹಾಕಲ್ಲ ಹಾಗೂ ಚುನಾವಣೆ ಸೋತ ನಂತರ ಕ್ಷೇತ್ರದಲ್ಲಿ ಅವರನ್ನು ನೋಡಲು ಸಾಧ್ಯವೇ ಇಲ್ಲ ಎಂದರು, ಎಸ್ ಟಿ ಸೋಮಶೇಖರ ಅವರು ಕ್ಷೇತ್ರದ ಜನರ ಕಷ್ಟ ಸುಖಗಳಲ್ಲಿ ಅವರು ಭಾಗಿಯಾಗಿ ಇರುತ್ತಾರೆ ಇದು ನಾವುಗಳು ಹೆಮ್ಮೆ ಪಡುವ ವಿಷಯ ಎಂದರು,
ಕ್ಷೇತ್ರದ ಬಿಜೆಪಿ ನಾಯಕರುಗಳು ಶಾಸಕರ ವಿರುದ್ಧ ಕೆಲಸ ಮಾಡಿರುವುದು ಆತೀ ಹೆಚ್ಚು ಬೇಸರ ತಂದಿದೆ, ಅವರುಗಳು ನಿಷ್ಟವಂತ ಕಾರ್ಯಕರ್ತರು ನಾವು ಎಂದು ಹೇಳುತ್ತಾರೆ, ನಾನು ಬಿಜೆಪಿ ಪಕ್ಷದಲ್ಲಿ ಆಲ್ಪ ಸಂಖ್ಯಾತರ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ, ನಮ್ಮ ಸಮುದಾಯದಲ್ಲಿ ಸಿಎಎ ಬಗ್ಗೆ ಜಾಗೃತಿ ಮೂಡಿಸಲು ನಾನು ಕೆಲಸ ಮಾಡಿದ್ದೇನೆ ಹಾಗೂ ಕರೋನಾ ಸಂದರ್ಭದಲ್ಲಿ ಮನ ಮನೆಗೆ ಹೋಗಿ ಜನಸಾಮನ್ಯರ ಕಷ್ಟಕ್ಕೆ ನಾನು ಎಸ್ ಟಿ ಸೋಮಶೇಖರ ಅವರ ಅದೇಶದಂತೆ ಕೆಲಸ ಮಾಡಿದ್ದೇನೆ ಎಂದರು,
ಕಾAಗ್ರೆಸ್ ಸರ್ಕಾರದವರು ಬಂದರೆ ಕೋಮು ಗಲಭೆಗೆ ಆಸ್ಪಧ ಆಗಲ್ಲ, ಕೆಲವು ದಿನಗಳ ಹಿಂದೆ ವಿಧಾನಸೌಧದಲ್ಲಿ ಕೇಳಿ ಬಂದ ಜೈ ಪಾಕಿಸ್ತಾನವನ್ನು ನಾನು ಕಂಡಿಸಿತ್ತೇನೆ, ಭಾರತ ದೇಶದಲ್ಲಿ ಹುಟ್ಟಿ ಪಾಪಿ ಪಾಕಿಸ್ತಾನಕ್ಕೆ ಬೆಂಬಲ ನೀಡಲ್ಲ, ಎಲ್ಲಾ ಮಸೀದಿಯಲ್ಲಿ ನಮ್ಮ ಗುರುಗಳು ಪ್ರಯಿಯೊಬ್ಬರಿಗೆ ತಪ್ಪ ಮಾಡಬೇಡಿ ಎಂದು ತಿಳಿ ಹೇಳುತ್ತಾರೆ ಅದರೆ ಕೆಲವರು ಅರ್ಥ ಮಾಡಿಕೊಳ್ಳದೆ ಇಂತಹ ಕೆಲಸಗಳನ್ನು ಮಾಡುತ್ತಿದ್ದಾರೆ, ನಾವು ಕೂಡ ಭಾರತೀಯರೇ ಎಂಬುದನ್ನು ಅವರುಗಳು ಮೆರಯಬಾರದರು ಎಂದರು,
ಬೆಂಗಳೂರು
ವೇತನ ವಿವಾದದಲ್ಲಿ ಸಿಎಂ ಸ್ಪಷ್ಟನೆ: 14 ತಿಂಗಳ ಹಿಂಬಾಕಿಗೆ ಮಾತ್ರ ಸರ್ಕಾರ ಸಿದ್ಧ

ಬೆಂಗಳೂರು: ಸಾರಿಗೆ ನೌಕರರ 38 ತಿಂಗಳ ವೇತನ ಹಿಂಬಾಕಿ ಪಾವತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. “ಈ ಬೇಡಿಕೆ ಸಮಂಜಸವಲ್ಲ. ಸರ್ಕಾರ ಕೇವಲ 14 ತಿಂಗಳ ಹಿಂಬಾಕಿಗೆ ಸಿದ್ಧ” ಎಂದು ಅವರು ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಂಧಾನ ಸಭೆಯಲ್ಲಿ ತಿಳಿಸಿದ್ದಾರೆ.
2020ರಿಂದ 2023ರ ಫೆಬ್ರವರಿವರೆಗಿನ ಬಾಕಿ ವೇತನ ಪಾವತಿಗೆ ನೌಕರ ಸಂಘಗಳು ಒತ್ತಾಯಿಸಿದ್ದರೊಂದಿಗೆ, 2024ರಿಂದ ನೂತನ ವೇತನವನ್ನೂ ಜಾರಿಗೆ ತರುವಂತೆ ಒತ್ತಾಯಿಸಲಾಗಿದೆ. ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, “ನಿಗಮಗಳ ಆರ್ಥಿಕ ಪರಿಸ್ಥಿತಿ ಮತ್ತು ಹಿಂದಿನ ಸರ್ಕಾರದ ಆದೇಶಗಳ ದೋಷಗಳನ್ನು ಪರಿಗಣಿಸಿ 14 ತಿಂಗಳ ವೇತನ ಹಿಂಬಾಕಿಗೆ ಸಮ್ಮತಿಯಿದೆ,” ಎಂದು ಸ್ಪಷ್ಟಪಡಿಸಿದರು.
ವೇತನ ಪರಿಷ್ಕರಣೆ ಪಶ್ಚಾತ್ಪಟ
2016ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ 12.5% ವೇತನ ಹೆಚ್ಚಳ ಜಾರಿಗೆ ಬಂದಿತ್ತು. ಆದರೆ 2020ರ ಕೋವಿಡ್ ಕಾರಣದಿಂದ ಆ ವೇಳೆಗೆ ಯಾವುದೇ ಪರಿಷ್ಕರಣೆ ಆಗಿರಲಿಲ್ಲ. ನಂತರದ ಕಾಂಗ್ರೆಸ್ ಸರ್ಕಾರದಲ್ಲಿ ಶ್ರೀನಿವಾಸ ಮೂರ್ತಿ ಸಮಿತಿ ಶಿಫಾರಸ್ಸಿನಂತೆ 2022ರ ಜೂನ್ 01ರಿಂದ 2023ರ ಫೆಬ್ರವರಿವರೆಗೆ ಹಿಂಬಾಕಿ ಪಾವತಿ ಮಾಡಲು ತೀರ್ಮಾನಿಸಲಾಗಿತ್ತು.
ಸರ್ಕಾರದ ಆರ್ಥಿಕ ಹೊಣೆಗಾರಿಕೆ
ಸಿದ್ದರಾಮಯ್ಯ ಅವರು ಹೇಳಿದ್ದಾರೆ: “ನಾವು ಅಧಿಕಾರಕ್ಕೆ ಬಂದಾಗ ನಿಗಮಗಳಿಗೆ ಒಟ್ಟಾರೆ ₹4000 ಕೋಟಿ ಸಾಲ ಇತ್ತು. 2018 ರಲ್ಲಿ ಈ ಮೊತ್ತ ಕೇವಲ ₹14 ಕೋಟಿ ಮಾತ್ರ ಇತ್ತು. ಯಾವುದೇ ನಿಗಮ ಲಾಭದಲ್ಲಿ ಇಲ್ಲ.” ಅಂತಹ ಪರಿಸ್ಥಿತಿಯಲ್ಲಿ ಎಲ್ಲಾ ನೌಕರರ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.
ಸಂಘದ ಚುನಾವಣೆ ಮತ್ತು ಮುಂದಿನ ಕ್ರಮ
ಸಾರಿಗೆ ನೌಕರರ ಸಂಘದ ಚುನಾವಣೆ ಹಾಗೂ ಬೇಡಿಕೆಗಳ ಕುರಿತಂತೆ ಸರ್ಕಾರ ಪರಿಶೀಲನೆ ನಡೆಸಲಿದ್ದು, ಮಾತುಕತೆ ಮೂಲಕ ಎಲ್ಲ ಅಹವಾಲುಗಳನ್ನು ಬಗೆಹರಿಸಲು ಸಿದ್ಧವಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು
ಸಾರಿಗೆ ನೌಕರರ ಮುಷ್ಕರ ಆರಂಭ: ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ – “ಹಠವಿಲ್ಲದೆ ಸಹಕಾರ ನೀಡಿ”

ಬೆಂಗಳೂರು: ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಸಾರಿಗೆ ನೌಕರರು ಮುಷ್ಕರಕ್ಕೆ (Transport Employees Strike) ಇಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಸಾರಿಗೆ ನೌಕರರು ಕೇಳಿರುವ ಬೇಡಿಕೆಯಲ್ಲಿ ತಪ್ಪಿಲ್ಲ. ಆದರೆ ಸರ್ಕಾರದ ಪರಿಸ್ಥಿತಿಯನ್ನೂ ಅವರು ಗಮನದಲ್ಲಿಟ್ಟುಕೊಳ್ಳಬೇಕು. ಹಠವಿಲ್ಲದೆ ಸಹಕಾರ ನೀಡಬೇಕು” ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಸಚಿವರು ನೌಕರರೊಂದಿಗೆ ಸಭೆ ನಡೆಸಿದ್ದಾರೆ ಎಂಬುದನ್ನು ಅವರು ನೆನಪಿಸಿದ್ದಾರೆ.
“ಸಾರ್ವಜನಿಕರ ಹಿತವೇ ಮೊದಲಾದ್ದು. ಕೆಲವು ನೌಕರರು ಈಗಾಗಲೇ ಕೆಲಸಕ್ಕೆ ಹಾಜರಾಗಿದ್ದಾರೆ. ಅವರಿಗೆ ಅಭಿನಂದನೆ” ಎಂದು ಡಿಸಿಎಂ ಹೇಳಿದ್ದಾರೆ.
ಇತ್ತ, ಹಳದಿ ಮೆಟ್ರೊ ಮಾರ್ಗದ (Yellow Metro Line) ಉದ್ಘಾಟನೆಯ ಕುರಿತು ಮಾತನಾಡಿದ ಡಿ.ಕೆ.ಶಿವಕುಮಾರ್, “ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಸ್ಟ್ 10ರಂದು ಬರುವ ಸಾಧ್ಯತೆ ಇದೆ. ನಾವು ಈಗಾಗಲೇ ತಯಾರಿ ಪರಿಶೀಲನೆ ಆರಂಭಿಸಿದ್ದೇವೆ. ಕಾರ್ಯಕ್ರಮದ ಅಧಿಕೃತ ಸಮಯ ಇನ್ನೂ ಘೋಷಣೆಯಾಗಿಲ್ಲ” ಎಂದು ತಿಳಿಸಿದ್ದಾರೆ.
ಇದೇ ದಿನ ಬಿಜೆಪಿ ವತಿಯಿಂದ ರೈಲ್ವೆ ಸಂಬಂಧಿತ ಕಾರ್ಯಕ್ರಮವೂ ನಡೆಯಲಿದೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರು
ಕೆಆರ್ಎಸ್ ಡ್ಯಾಂ ಕಟ್ಟಲು ಮೈಸೂರಿನ ರಾಜಮಾತೆಯ ತ್ಯಾಗ: ಟಿಪ್ಪು ವಿವಾದದ ನಡುವೆ ಪೀಠಾಧಿಪತಿಯ ಸ್ಪಷ್ಟನೆ!

ರಾಯಚೂರು: ಕಾವೇರಿ ನದೀಪ್ರಾಂತ್ಯದ ಜನರಿಗೆ ನೀರಿನ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಮೈಸೂರಿನ ರಾಜಮಾತೆ ತಮ್ಮ ಆಭರಣಗಳನ್ನು ಮಾರಾಟ ಮಾಡಿ ಕೆಆರ್ಎಸ್ ಡ್ಯಾಂವನ್ನು ನಿರ್ಮಿಸಿದರು ಎಂದು ಗುರುರಾಘವೇಂದ್ರ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಮಂತ್ರಾಲಯದಲ್ಲಿ ಮಾತನಾಡಿದ ಅವರು, ಕೆಆರ್ಎಸ್ ಜಲಾಶಯಕ್ಕೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ದಾರೆ ಎಂಬ ಸಚಿವ ಮಹಾದೇವಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, “ಇದು ರಾಜಮನೆತನದ ತ್ಯಾಗದ ಫಲ. ಇತಿಹಾಸವನ್ನು ನಿಖರವಾಗಿ ತಿಳಿದುಕೊಳ್ಳಬೇಕಾದದ್ದು ಇತಿಹಾಸ ತಜ್ಞರ ಕೆಲಸ” ಎಂದು ಹೇಳಿದರು.
ಇದೇ ವೇಳೆ ಧರ್ಮಸ್ಥಳದ ತಾತ್ಕಾಲಿಕ ವಿವಾದಗಳ ಕುರಿತು ಮಾತನಾಡಿದ ಶ್ರೀಗಳು, “ಧಾರ್ಮಿಕ ಕ್ಷೇತ್ರಗಳ ಪಾವಿತ್ರ್ಯತೆಗಿಂತ ವ್ಯವಸ್ಥೆ ಬಗ್ಗೆ ಚರ್ಚೆ ಮಾಡಬೇಕು. ಜನ ಭಕ್ತಿಯಿಂದ ನಂಬುವ ಕ್ಷೇತ್ರಗಳನ್ನು ರಾಜಕೀಯವಾಗಿಸಬಾರದು” ಎಂದು ಎಚ್ಚರಿಸಿದರು.
ಸಾರಿಗೆ ನೌಕರರ ಮುಷ್ಕರದ ವಿಚಾರಕ್ಕೂ ಪ್ರತಿಕ್ರಿಯೆ ನೀಡಿದ ಅವರು, “ಅವರ ಬೇಡಿಕೆಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಭಕ್ತರಿಗೆ ತೊಂದರೆಯಾಗದಂತೆ ಸೂಕ್ತ ಪರಿಹಾರ ಒದಗಿಸಲಿ” ಎಂದಿದ್ದಾರೆ.
ಇದಕ್ಕೂ ಮುನ್ನ ಸಚಿವ ಎಚ್.ಸಿ. ಮಹಾದೇವಪ್ಪ ಟಿಪ್ಪು ಸುಲ್ತಾನ್ ಕನ್ನಂಬಾಡಿ ಡ್ಯಾಂಗೆ ಅಡಿಗಲ್ಲು ಹಾಕಿದರೆಂದು ಹೇಳಿಕೆ ನೀಡಿದ್ದರು. ಆದರೆ, ಇತಿಹಾಸವನ್ನ ತಿರುವುಮಾಡುವುದು ಸರಿಯಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು1 year ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ