ಚುನಾವಣೆ
ಪ್ರಜ್ವಲ್ ರೇವಣ್ಣ ಪ್ರಕರಣದಿಂದ ಸಮಾಜಕ್ಕೆ ಮುಜುಗರ ಕುಮಾರಸ್ವಾಮಿ

ಶಿವಮೊಗ್ಗ: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ವೈರಲ್ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಎಸ್ಐಟಿ ರಚನೆಯಾಗಿದೆ, ಯಾರು ತಪ್ಪು ಮಾಡಿದ್ದಾರೋ ಅವರು ಶಿಕ್ಷೆ ಅನುಭವಿಸಬೇಕು, ಈ ನೆಲದ ಕಾನೂನಿನಲ್ಲಿ ಯಾರೇ ತಪ್ಪು ಮಾಡಿದರೂ ತಲೆಬಾಗಲೇಬೇಕು ಎಂದು ಹೇಳಿದರು,
ಶಿವಮೊಗ್ಗದಲ್ಲಿ ಮಾತನಾಡಿದ ಅವರು ಚುನಾವಣೆಗೂ ಮೂರು ದಿನ ವಿಡಿಯೋಗಳನ್ನು ವೈರಲ್ ಮಾಡಿದ್ದಾರೆ, ಇದು ಚುನಾವಣಾ ಫಲಿತಾಂಶದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದರು, ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ವ್ಯಕ್ತಿ ಬಗ್ಗೆ ಚರ್ಚೆ ಮಾಡಿ ಕುಟುಂಬವನ್ನು ಯಾಕೆ ಎಳೆದು ತರ್ತಿರಾ? ಎಂದು ಪ್ರಶ್ನಿಸಿದ ಅವರು ದೇವೇಗೌಡ ಹಾಗೂ ಕುಮಾರಸ್ವಾಮಿ ಹೆಸರನ್ನು ಯಾಕೆ ತರುತ್ತಿರಾ? ಎಸ್ಐಟಿ ವರದಿ ಏನು ಕೊಡುತೋ ಅದರ ಪ್ರಕಾರ ಶಿಕ್ಷಯಾಗುತ್ತದೆ, ಇಂತಹ ಪ್ರಕರಣದಿಂದ ನನಗೆ ಮಾತ್ರ ಇಡೀ ಸಮಾಜಕ್ಕೆ ಮುಜುಗರವಾಗುತ್ತದೆ ಇಂತಹಕ್ಕೆ ನನ್ನ ಸಹಮತ ಇಲ್ಲ ಎಂದರು