ಚುನಾವಣೆ
ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಉಚ್ಛಾಟನೆ!?

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಲುಕಿರುವ ಹಾಸನ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಪ್ರಜ್ಚಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟನೆಗೊಳಿಸಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ,
ವಿಡಿಯೋ ಕೇಸ್ ದೇಶಾದ್ಯಂತ ಚರ್ಚೆಗೆ ಗುರಿಯಾಗಿದ್ದು ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿಯವರನ್ನೂ ಎಳೆದು ತಂದು ಟೀಕಿಸುತ್ತಿದ್ದಾರೆ, ಚುನಾವಣೆ ಸಮಯದಲ್ಲಿ ಮೋದಿ ಪ್ರಜ್ವಲ್ ರೇವಣ್ಣ ಪರ ಪ್ರಚಾರ ನಡೆಸಿದ್ದರೂ ಕೂಡ
ಹೀಗಾಗಿ ಕೋರ್ ಕಮಿಟಿ ಸಭೆ ನಡೆದಿದ್ದು ಶಾಸಕರ ಒತ್ತಾಯದ ಮೇರೆಗೆ ಹಾಗೂ ಪಕ್ಷಕ್ಕೆ ಮತ್ತು ಪ್ರಧಾನಿ ಮೋದಿಯವರಿಗೆ ಆಗುವ ಮುಜುಗರವನ್ನು ತಪ್ಪಿಸಲು ಪ್ರಜ್ವಲ್ ಅವರನ್ನು ಜೆಡಿಎಸ್ನಿಂದ ಉಚ್ಛಾಟಿಸಲಾಗಿದೆ ಎನ್ನಲಾಗಿದ್ದು ಮಾಜಿ ಪ್ರಧಾನಿ ದೇವೇಗೌಡ ಈಗಾಗಲೇ ಈ ಬಗ್ಗೆ ಮೌಖಿಕ ಅದೇಶ ನೀಡಿದ್ದು ಅಧಿಕೃತ ಅದೇಶ ಪ್ರತಿ ಹೊರಬೀಳಬೇಕಿದೆ,