ಚುನಾವಣೆ
ಗೆಲ್ಲೋ ಅಭ್ಯರ್ಥಿಗಳು ಯಾರ್ಯಾರು ಸಚಿವರಿಂದ ಮಾಹಿತಿ ಪಡೆದ ಸಿಎಂ!

ಬೆAಗಳೂರು: ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ಮುಗಿದಿದ್ದು ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಸೋಲು ಗೆಲುವಿನ ಲೆಕ್ಕಾಚಾರ ಜೋರಾಗಿ ನಡೆಯುತ್ತಿದೆ, ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿನ ಸಾಧ್ಯತೆ ಕುರಿತು ಸಿಎಂ ಸಿದ್ದರಾಮಯ್ಯ ಅವರು ಸಚಿವರಿಂದ ಮಾಹಿತಿ ಪಡೆದಿದ್ದಾರೆ,
ಡಿಸಿಎಂ ಡಿ ಕೆ ಶಿವಕುಮಾರ್ ಗೃಹ ಸಚಿವ ಜಿ ಪರಮೇಶ್ವರ್ ಡಾ.ಎಚ್.ಸಿ.ಮಹದೇವಪ್ಪ, ಮಧು ಬಂಗಾರಪ್ಪ, ಎನ್ ಚುಲುವರಾಯಸ್ವಾಮಿ ಸೇರಿದಂತೆ ಕೆಲವು ಸಚಿವರು ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ, ತಮಗೆ ಉಸ್ತುವಾರಿ ವಹಿಸಿದ್ದ ಲೋಕಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿನ ಸಾಧ್ಯತೆ ಕುರಿತು ಚರ್ಚಿಸಿದರು,
ಗೃಹ ಸಚಿವ ಪರಮೇಶ್ವರ್ ಜೊತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ ಪ್ರಕರಣ, ಶಾಸಕ ಹೆಚ್ ಡಿ ರೇವಣ್ಣ ಬಂಧನ ಹಾಗೂ ಬಿಡುಗಡೆ ಸೇರಿದಂತೆ ಹಲವು ವಿಷಯಗಳು ಕುರಿತು ಸಿಎಂ ಮಾಹಿತಿ ಪಡೆದುಕೊಂಡರು, ಇನ್ನೂ ಲೋಕಸಭಾ ಚುನಾವಣೆಯ ಫಲಿತಾಂಶದ ಕುರಿತು ಇತ್ತೀಚಿಗೆ ಮಾತನಾಡಿದ್ದ ಸಿದ್ದರಾಮಯಯ್ಯ ಅವರು ನಾವು 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು,