ದೇಶ

ಕಳಪೆ ಆಹಾರ ನೀಡಿದಕ್ಕೆ ಕೆಎಸ್‌ಸಿಎ ಮ್ಯಾನೇಜ್ಮೆಂಟ್ ವಿರುದ್ಧ ಎಫ್‌ಐಆರ್!

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಹಾಗೂ ಡೆಲ್ಲಿ ವಿರುದ್ಧದ ಪಂದ್ಯದ ವೇಳೆ ಕಳಪೆ ಆಹಾರ ಸೇವಿಸಿ ವ್ಯಕ್ತಿ ಓರ್ವನಿಗೆ ಫುಡ್ ಪಾಯಿಸನ್ ಆಗಿದ್ದು ಕೆಎಸ್‌ಸಿಎ ಮ್ಯಾನೇಜ್ಮೆಂಟ್ ವಿರುದ್ಧ ದೂರು ದಾಖಲಿಸಲಾಗಿದೆ,
ಭಾನುವಾರ ನಡೆದ ಹೈ ವೋಲ್ಟೇಜ್ ಪಂದ್ಯವನ್ನು ವೀಕ್ಷಿಸಲು ಬಂದಿದ್ದ ಚೈತನ್ಯ ಎಂಬುವವರು ಕ್ರೀಡಾಂಗಣದ ಕ್ಯಾಂಟೀನ್‌ನಲ್ಲಿ ನೀಡಲಾಗಿದ್ದ ಆಹಾರವನ್ನು ಸೇವಿಸಿದ್ದಾರೆ, ಕೆಲ ಸಮಯದ ಬಳಿಕ ಅತೀವ ಹೊಟ್ಟೆನೋವು ಉಂಟಾಗಿದೆ,
ತಕ್ಷಣವೇ ಸ್ಟೇಡಿಯಂ ಸಿಬ್ಬಂದಿಯ ನೆರವಿನಿಂದ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ, ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಈ ವೇಳೆ ಫುಡ್ ಪಾಯಿಸನ್ ಎಂದು ದೃಢ ಪಟ್ಟಿದೆ, ಸದ್ಯ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಸುತ್ತಿದ್ದಾರೆ,

Trending

Exit mobile version