Connect with us

ದೇಶ

ಭಾರತ ಚಂದ್ರನ ಮೇಲೆ ಇಳಿಯಿತು, ಕರಾಚಿಯ ಕರಾಳ ಕಥೆ ಬಿಚ್ಚಿಟ್ಟ ಪಾಕ್ ಸಂಸದ!

ಇಸ್ಲಾಮಾಬಾದ್: ಮುತ್ತಹಿದಾ ಕ್ವಾಮಿ ಮೊವ್‌ವೆಂಟ್ ಪಾಕಿಸ್ತಾನ ಪಕ್ಷದ ಸಂಸದ ಸೈಯದ್ ಮುಸ್ತಫಾ ಕಮಾಲ್ ಅವರು ಪಾಕ್ ಸಂಸತ್ತಿನಲ್ಲಿ ಕರಾಚಿಯ ಸ್ಧಿತಿಯನ್ನು ಟೀಕಿಸಿದ್ದಾರೆ,
ಭಾರತವು ಚಂದ್ರಯಾಣ ಸೇರಿದಂತೆ ಅದ್ಭುತ ಸಾಧನೆಗಳನ್ನು ಮಾಡುತ್ತಿದೆ, ಅಂತಹ ಸುದ್ದಿಗಳನ್ನು ನಾವು ಟಿವಿಗಳಲ್ಲಿ ನೋಡುತ್ತಿದ್ದಾರೆ, ಮತ್ತೊಂದೆಡೆ ಕರಾಚಿಯಲ್ಲಿ ತೆರೆದ ಚರಂಡಿಗೆ ಬಿದ್ದು ಮಕ್ಕಳು ಸಾಯುವ ಸುದ್ದಿಯನ್ನು ನಾವು ನಿತ್ಯವೂ ವರದಿ ಮಾಡುತ್ತಿದ್ದೇವೆ ಎಂದು ಪಾಕಿಸ್ತಾನ ಸ್ಧಿತಿಯ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ,
ಕರಾಚಿ ಪಾಕಿಸ್ತಾನದ ಆದಾಯದ ಎಂಜಿನ್ ಎಂದು ಹೇಳಿರುವ ಸೈಯದ್ ಮುಸ್ತಫಾ ಕಮಾಲ್, ದೇಶವು ಎರಡು ಬಂದರಗಳನ್ನು ಹೊಂದಿದೆ, ಅವು ಕರಾಚಿಯಲ್ಲಿವೆ, ಕರಾಚಿ ನಗರವು ಪಾಕಿಸ್ತಾನ ಮಧ್ಯ ಏಷ್ಯಾ ಹಾಗೂ ಅಫ್ಘಾನಿಸ್ತಾನಕ್ಕೆ ಹೆಬ್ಬಾಗಿಲು ನಾವು ಕರಾಚಿ ನಗರದಿಂದ ಸುಮಾರು ೬೮ ಪ್ರತಿಶತದಷ್ಟು ಆದಾಯವನ್ನು ಸಂಗ್ರಹಿಸಿ ರಾಷ್ಟçಕ್ಕೆ ನೀಡುತ್ತಿದ್ದೇವೆ, ಅದರೆ ಇಲ್ಲಿ ಮೂಲಸೌಕರ್ಯಗಳ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ,
ಭಾರತದ ಚಂದ್ರಯಾನ ೩ ಮಿಷನ್ ಯಶಸ್ವಿಯಾಗಿ ಲ್ಯಾಂಡಿAಗ್ ಮಾಡಿದೆ, ಅದರೆ ನಾವು ತೆರೆದ ಚರಂಡಿಯಲ್ಲಿ ಮಕ್ಕಳ ಬಿದ್ದು ಸಾವನ್ನಪ್ಪು ಸುದ್ದಿಯನ್ನು ಮೂರು ನಾಲ್ಕು ದಿನ ಚರ್ಚೆ ಮಾಡುತ್ತಿದ್ದೇವೆ ಎಂದು ಕರಾಚಿಯ ಕರಾಳ ಕಥೆಯನ್ನು ಬಿಚ್ಚಿಟ್ಟಿದ್ದಾರೆ.
ಪಾಕಿಸ್ತಾನದಲ್ಲಿ ೨೬.೨ ಮಿಲಿಯನ್ ಮಕ್ಕಳ ಶಾಲೆಗೆ ಹೋಗುವುದಿಲ್ಲ ಸಿಂಧ್‌ನಲ್ಲಿ ಮಾತ್ರ ೪೮೦೦೦ ಶಾಲೆಗಳಿವೆ, ಅದರೆ ಈ ಪ್ರಾಂತ್ಯದ ೭೦ ಲಕ್ಷ ಮಕ್ಕಳು ಶಾಲೆಗೆ ಹೋಗಿಲ್ಲ ಎಂದು ಸಂಸತ್ತಿನಲ್ಲಿ ಹೇಳಿದ್ದಾರೆ,

ಕ್ರೀಡೆ

ಬ್ಯಾಡ್ಮಿಂಟನ್ ಆಡುತ್ತಾ ಬೆಳೆದವಳಾಗಿ ಜೀವನವನ್ನು ದೈಹಿಕವಾಗಿ, ಮಾನಸಿಕವಾಗಿ ಹೇಗೆ ರೂಪಿಸುತ್ತದೆ ನಾನು ನೇರವಾಗಿ ಅನುಭವಿಸಿದ್ದೇನೆ ದೀಪಿಕಾ

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಮ್ಮ ತಂದೆ, ಬ್ಯಾಡ್ಮಿಂಟನ್ ಲೆಜೆಂಡ್​​ ಪ್ರಕಾಶ್ ಪಡುಕೋಣೆ ಅವರ 70ನೇ ಹುಟ್ಟುಹಬ್ಬವನ್ನಿಂದು ಬಹಳ ವಿಶೇಷವಾಗಿ ಆಚರಿಸಿದರು.

‘ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್’ (ಪಿಎಸ್​ಬಿ) ಬೆಂಗಳೂರು, ಎನ್​​ಸಿಆರ್, ಮುಂಬೈ, ಚೆನ್ನೈ, ಜೈಪುರ, ಪುಣೆ, ನಾಸಿಕ್, ಮೈಸೂರು, ಪಾಣಿಪತ್, ಡೆಹ್ರಾಡೂನ್, ಉದಯಪುರ, ಕೊಯಮತ್ತೂರು, ಸಾಂಗ್ಲಿ ಮತ್ತು ಸೂರತ್ ಸೇರಿದಂತೆ 18 ನಗರಗಳಲ್ಲಿ 75ಕ್ಕೂ ಹೆಚ್ಚು ತರಬೇತಿ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಮಹತ್ವದ ಮೈಲಿಗಲ್ಲು ಸಾಧಿಸಿದೆ ಎಂದು ಇನ್​​​ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳಲಾದ ಮಾಧ್ಯಮ ಪ್ರಕಟಣೆ ಮೂಲಕ ಹೇಳಿದ್ದಾರೆ.

“ಬ್ಯಾಡ್ಮಿಂಟನ್‌ನ ಸಂತೋಷ ಮತ್ತು ಶಿಸ್ತನ್ನು ಎಲ್ಲಾ ವರ್ಗದ ಜನರಿಗೆ ತಲುಪಿಸುವುದು ನಮ್ಮ ಆಶಯ” ಎಂದೂ ಸಹ ದೀಪಿಕಾ ತಿಳಿಸಿದ್ದಾರೆ. ಈ ಮೂಲಕ ಕೇಂದ್ರಗಳ ಸಂಖ್ಯೆ ವಿಸ್ತರಿಸುವ ಬಗ್ಗೆ ಮಾಹಿತಿ ಒದಗಿಸಿದ್ದಾರೆ.

ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್​​ನಲ್ಲಿ, “ಬ್ಯಾಡ್ಮಿಂಟನ್ ಆಡುತ್ತಾ ಬೆಳೆದವಳಾಗಿ, ಈ ಕ್ರೀಡೆಯು ಒಬ್ಬರ ಜೀವನವನ್ನು ದೈಹಿಕವಾಗಿ, ಮಾನಸಿಕವಾಗಿ ಮತ್ತು ಭಾವನಾತ್ಮಕವಾಗಿ ಹೇಗೆ ರೂಪಿಸುತ್ತದೆ ಎಂಬುದನ್ನು ನಾನು ನೇರವಾಗಿ ಅನುಭವಿಸಿದ್ದೇನೆ. ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ (PSB) ಮೂಲಕ, ಬ್ಯಾಡ್ಮಿಂಟನ್‌ನ ಸಂತೋಷ ಮತ್ತು ಶಿಸ್ತನ್ನು ಎಲ್ಲಾ ಹಂತದ ಜನರಿಗೆ ತಲುಪಿಸಲು ಮತ್ತು ಆರೋಗ್ಯಕರ, ಫೋಕಸ್ಡ್​​ ಮತ್ತು ಕ್ರೀಡೆಯಿಂದ ಪ್ರೇರಿತವಾದ ಪೀಳಿಗೆಯನ್ನು ನಿರ್ಮಿಸಲು ನಾವು ಆಶಿಸುತ್ತೇವೆ. ಅಪ್ಪಾ, ನಿಮ್ಮನ್ನು ಚೆನ್ನಾಗಿ ತಿಳಿದಿರುವವರಿಗೆ ಈ ಕ್ರೀಡೆಯ ಬಗ್ಗೆ ನಿಮ್ಮ ಉತ್ಸಾಹವೂ ತಿಳಿದಿದೆ. 70ನೇ ವಯಸ್ಸಿನಲ್ಲಿಯೂ ನೀವು ಬ್ಯಾಡ್ಮಿಂಟನ್​ಗೆ ನಿಮ್ಮನ್ನು ಸಮರ್ಪಿಸಿದ್ದೀರಿ. ನಿಮ್ಮ ಉತ್ಸಾಹವನ್ನು ನಿಜವಾಗಿಸಲು ನಾವು ಬದ್ಧರಾಗಿದ್ದೇವೆ. ಎಲ್ಲರಿಗಾಗಿ ಬ್ಯಾಡ್ಮಿಂಟನ್! 70ನೇ ಹುಟ್ಟುಹಬ್ಬದ ಶುಭಾಶಯಗಳು ಪಪ್ಪಾ!” ಎಂದು ಬರೆದುಕೊಂಡಿದ್ದಾರೆ.

ನಟಿ ಶೇರ್ ಮಾಡಿದ ಪ್ರಕಟಣೆಯಲ್ಲಿ, ಪಿಎಸ್‌ಬಿಯ ಮಾರ್ಗದರ್ಶಕ ಮತ್ತು ಸಲಹೆಗಾರ ಪ್ರಕಾಶ್ ಪಡುಕೋಣೆ ತಮ್ಮ ಮನದಾಳವನ್ನೂ ಹಂಚಿಕೊಂಡರು. “ಕ್ರೀಡೆಯು ಬೆಳವಣಿಗೆಯ ಅವಿಭಾಜ್ಯ ಅಂಗವಾಗಿದೆ. ಇದು ಶಿಸ್ತು, ಸ್ಥಿತಿಸ್ಥಾಪಕತ್ವ ಮತ್ತು ಗೆಲುವಿನ ಮನಸ್ಥಿತಿಯನ್ನು ಹುಟ್ಟಿಸುತ್ತದೆ. ಪಿಎಸ್‌ಬಿಯೊಂದಿಗೆ, ಗುಣಮಟ್ಟದ ತರಬೇತಿಯನ್ನು ಸುಲಭವಾಗಿ ಮತ್ತು ಕೈಗೆಟುಕುವಂತೆ ಮಾಡುವುದು, ತಳಮಟ್ಟದಿಂದ ಪ್ರತಿಭೆಯನ್ನು ಪೋಷಿಸುವುದು ಮತ್ತು ಭಾರತೀಯ ಬ್ಯಾಡ್ಮಿಂಟನ್‌ನ ಭವಿಷ್ಯಕ್ಕೆ ಬಲವಾದ ಅಡಿಪಾಯವನ್ನು ಹಾಕುವುದು ನಮ್ಮ ಗುರಿ” ಎಂದು ಹೇಳಿದರು.

ಭಾರತದ 18 ನಗರಗಳಲ್ಲಿ 75 ಕೇಂದ್ರಗಳು ಆರಂಭಗೊಂಡಿದ್ದು, ಈ ವರ್ಷದ ಕೊನೆಗೆ 100 ಕೇಂದ್ರಗಳು ಮತ್ತು 2027ರ ಹೊತ್ತಿಗೆ 250 ಕೇಂದ್ರಗಳಿಗೆ ವಿಸ್ತರಿಸುವ ಗುರಿಯನ್ನು ‘ಪಡುಕೋಣೆ ಸ್ಕೂಲ್​ ಆಫ್​​ ಬ್ಯಾಡ್ಮಿಂಟನ್’ ಹೊಂದಿದೆ. ದೀಪಿಕಾ ಪಡುಕೋಣೆ ಇದರ ಸಂಸ್ಥಾಪಕಿಯಾದರೆ, ಪ್ರಕಾಶ್​ ಪಡುಕೋಣೆ ಮಾರ್ಗದರ್ಶಕರಾಗಿ ಪಿಎಸ್​ಬಿಯ ಭಾಗವಾಗಿದ್ದಾರೆ

Continue Reading

ದೇಶ

2034ರಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿ ಆಗುವ ಸಾಧ್ಯತೆ

ನವದೆಹಲಿ: ಭಾರತದಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ (One Nation, One Election) ಯೋಜನೆಯನ್ನು 2034ರ ವೇಳೆಗೆ ಜಾರಿಗೆ ತರಲು ಸರ್ಕಾರ ಯೋಜಿಸುತ್ತಿದೆ ಎಂದು ಇತ್ತೀಚಿನ ವರದಿಯೊಂದು ತಿಳಿಸಿದೆ. ಈ ಯೋಜನೆಯು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಗುರಿಯನ್ನು ಹೊಂದಿದೆ. ಇದರಿಂದ ಚುನಾವಣಾ ವೆಚ್ಚವನ್ನು ಕಡಿಮೆ ಮಾಡುವುದು ಮತ್ತು ಆಡಳಿತದ ಸಮಯವನ್ನು ಉಳಿಸುವುದು ಸಾಧ್ಯವಾಗಲಿದೆ. ಈ ಯೋಜನೆಯನ್ನು ಸಾಂವಿಧಾನಿಕ ತಿದ್ದುಪಡಿಯ ಮೂಲಕ ಜಾರಿಗೊಳಿಸಲು ಸಂವಿಧಾನ (129ನೇ ತಿದ್ದುಪಡಿ) ಮಸೂದೆ, 2024 ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳ (ತಿದ್ದುಪಡಿ) ಮಸೂದೆ, 2024ರಲ್ಲಿ ನಿಬಂಧನೆಗಳನ್ನು ಸೇರಿಸಲಾಗಿದೆ.

ಜಂಟಿ ಸಂಸದೀಯ ಸಮಿತಿಯ ಮುಖ್ಯಸ್ಥರಾದ ಪಿ.ಪಿ. ಚೌಧರಿ ಅವರು ತಿಳಿಸಿದ ಪ್ರಕಾರ, 2029ರ ನಂತರ ಚುನಾಯಿತವಾಗುವ ರಾಜ್ಯ ವಿಧಾನಸಭೆಗಳು 2034ರ ಲೋಕಸಭಾ ಚುನಾವಣೆಯೊಂದಿಗೆ ಸಮನ್ವಯಗೊಳ್ಳಲು ಕಡಿಮೆ ಅವಧಿಯನ್ನು ಹೊಂದಿರುತ್ತವೆ. ಉದಾಹರಣೆಗೆ, ಉತ್ತರ ಪ್ರದೇಶದಂತಹ ದೊಡ್ಡ ರಾಜ್ಯದಲ್ಲಿ 2032ರಲ್ಲಿ ಚುನಾಯಿತವಾಗುವ ವಿಧಾನಸಭೆಗೆ ಕೇವಲ ಎರಡು ವರ್ಷಗಳ ಕಾಲಾವಧಿಯಿರುತ್ತದೆ. ಇದು 2034ರ ಲೋಕಸಭಾ ಚುನಾವಣೆಯೊಂದಿಗೆ ಹೊಂದಾಣಿಕೆಯಾಗುವಂತೆ ವಿನ್ಯಾಸಗೊಳಿಸಲಾಗುತ್ತದೆ. ಈ ರೀತಿಯ ಕಡಿಮೆ ಅವಧಿಯ ವಿಧಾನಸಭೆಗಳು ಏಕಕಾಲಿಕ ಚುನಾವಣೆಯ ಯಶಸ್ವಿ ಜಾರಿಗೆ ಸಹಕಾರಿಯಾಗಲಿವೆ.

ಈ ಯೋಜನೆಯ ಪ್ರಕಾರ, ಸಾರ್ವತ್ರಿಕ ಚುನಾವಣೆಯ ನಂತರ ಲೋಕಸಭೆಯ ಮೊದಲ ಅಧಿವೇಶನದ ಕುರಿತು ರಾಷ್ಟ್ರಪತಿಗಳು ಅಧಿಸೂಚನೆಯನ್ನು ಹೊರಡಿಸುವರು. ಈ ದಿನಾಂಕದ ನಂತರ ರಚನೆಯಾಗುವ ಎಲ್ಲಾ ರಾಜ್ಯ ವಿಧಾನಸಭೆಗಳ ಅಧಿಕಾರಾವಧಿಯು ಲೋಕಸಭೆಯ ಐದು ವರ್ಷಗಳ ಅವಧಿಯೊಂದಿಗೆ ಏಕಕಾಲದಲ್ಲಿ ಕೊನೆಗೊಳ್ಳುತ್ತದೆ. ಒಂದು ವೇಳೆ ಲೋಕಸಭೆ ಅಥವಾ ರಾಜ್ಯ ವಿಧಾನಸಭೆಯು ತನ್ನ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸುವ ಮೊದಲು ವಿಸರ್ಜನೆಗೊಂಡರೆ, ಉಳಿದ ಅವಧಿಯನ್ನು ಒಳಗೊಳ್ಳಲು ಪ್ರತ್ಯೇಕ ಚುನಾವಣೆಗಳನ್ನು ನಡೆಸಲಾಗುತ್ತದೆ.

ಭಾರತೀಯ ಚುನಾವಣಾ ಆಯೋಗ (ECI) ಈ ಯೋಜನೆಯ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಒಂದು ವೇಳೆ ರಾಜ್ಯ ವಿಧಾನಸಭೆಯ ಚುನಾವಣೆಯನ್ನು ಏಕಕಾಲಿಕ ಚುನಾವಣೆಯ ಭಾಗವಾಗಿ ನಡೆಸಲಾಗದೆಂದು ಆಯೋಗ ತೀರ್ಮಾನಿಸಿದರೆ, ಆ ಚುನಾವಣೆಯನ್ನು ಮುಂದೂಡಲು ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಬಹುದು. ರಾಷ್ಟ್ರಪತಿಗಳು ಆ ಶಿಫಾರಸಿನ ಆಧಾರದ ಮೇಲೆ ಚುನಾವಣೆಯನ್ನು ನಂತರದ ದಿನಾಂಕಕ್ಕೆ ನಿಗದಿಪಡಿಸಬಹುದು.

ಏಕಕಾಲಿಕ ಚುನಾವಣೆಯ ಪ್ರಯೋಜನಗಳು
ಈ ಯೋಜನೆಯು ಚುನಾವಣಾ ವೆಚ್ಚವನ್ನು ಗಣನೀಯವಾಗಿ ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. ಒಂದೇ ಬಾರಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳನ್ನು ನಡೆಸುವುದರಿಂದ ಸರ್ಕಾರದ ಸಂಪನ್ಮೂಲಗಳ ಒತ್ತಡ ಕಡಿಮೆಯಾಗುತ್ತದೆ. ಜೊತೆಗೆ, ಆಡಳಿತಾತ್ಮಕ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಮತ್ತು ಚುನಾವಣೆಯಿಂದಾಗಿ ಆಗುವ ಆಡಳಿತದ ಅಡಚಣೆಗಳನ್ನು ತಡೆಗಟ್ಟಲು ಈ ಯೋಜನೆ ಸಹಾಯಕವಾಗಲಿದೆ.

Continue Reading

ದೇಶ

ರೇಷನ್ ಕಾರ್ಡ್​​ನಿಂದ ಏನೆಲ್ಲಾ ಪ್ರಯೋಜನ?: ನೀವು ಪಡೆದುಕೊಂಡಿದ್ದೀರಾ?

ಬೆಂಗಳೂರು: ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಅನುಕೂಲ ಕಲ್ಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ಅದರಲ್ಲಿ ಪ್ರಮುಖವಾಗಿ ಪಡಿತರ ಚೀಟಿಯೂ ಒಂದು.

ರೇಷನ್ ಕಾರ್ಡ್ ಇದ್ದರೆ ಆಯಾ ಕಾರ್ಡ್​​ಗಳನ್ನು ಅನುಸರಿಸಿ ಬಡ ಮತ್ತು ಮಧ್ಯಮ ವರ್ಗದವರಿಗೆ ಕಡಿಮೆ ದರದಲ್ಲಿ ಅಕ್ಕಿ, ಬೇಳೆ, ಗೋಧಿ, ಸಕ್ಕರೆ ಸೇರಿ ಹಲವು ಆಹಾರ ಪದಾರ್ಥಗಳು ದೊರೆಯುತ್ತದೆ. ಬಿಪಿಎಲ್ ಕಾರ್ಡ್​ದಾರರ ಕುಟುಂಬಕ್ಕೆ ಅಕ್ಕಿ, ಗೋಧಿ, ಸಕ್ಕರೆ ಮತ್ತಿತರ ಆಹಾರ ಪದಾರ್ಥಿಗಳು ಉಚಿತವಾಗಿ ದೊರೆತರೆ, ಎಪಿಎಲ್ ಕಾರ್ಡ್​ದಾರರಿಗೆ ಸರ್ಕಾರ ನಿಗದಿಪಡಿಸಿದ ಕಡಿಮೆ ದರದಲ್ಲಿ ಪಡಿತರ ಸಿಗುತ್ತದೆ. ಇದರಿಂದ ಹಲವಾರು ಕುಟುಂಬಗಳು ನೆಮ್ಮದಿಯ ಜೀವನ ಸಾಗಿಸಬಹುದಾಗಿದೆ. ಇಷ್ಟೇ ಅಲ್ಲದೆ, ರೇಷನ್ ಕಾರ್ಡ್ ಇದ್ದರೆ ಇನ್ನೂ ಹಲವು ಸೌಲಭ್ಯಗಳು ಸರ್ಕಾರದಿಂದ ಉಚಿತವಾಗಿ ಸಿಗುತ್ತವೆ. ಅದೆಷ್ಟೋ ಜನರಿಗೆ ಇದರ ಸರಿಯಾದ ಮಾಹಿತಿ ಇರುವುದಿಲ್ಲ.

ಕಾರ್ಡ್ ಇದ್ದರೆ ಗ್ಯಾಸ್ ಸಿಲಿಂಡರ್, ಆರೋಗ್ಯ ವಿಮೆ, ಶಿಕ್ಷಣಕ್ಕೆ ಆರ್ಥಿಕ ನೆರವು, ಉಚಿತ ಹೊಲಿಗೆ ಯಂತ್ರ ಸೇರಿದಂತೆ ಹಲವು ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಸರ್ಕಾರದಿಂದ ಯಾವೆಲ್ಲಾ ಸೌಲಭ್ಯಗಳು ಸಿಗುತ್ತವೆ ಎಂಬುದರ ಮಾಹಿತಿ ಇಲ್ಲಿದೆ.

ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ನೆರವು: ಒಂದು ಕುಟುಂಬದ ಆರ್ಥಿಕ ಸ್ಥಿತಿಗತಿಯನ್ನು ರೇಷನ್ ಕಾರ್ಡ್ ತೋರಿಸುತ್ತಿರುವುದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಶಿಕ್ಷಣ ನೆರವು ಯೋಜನೆಗಳಲ್ಲಿ ಅರ್ಹತೆ ರೂಪದಲ್ಲಿ ರೇಷನ್ ಕಾರ್ಡ್​ ಬಳಕೆ ಮಾಡಬಹುದು. ಶುಲ್ಕ ಮನ್ನಾ ಹಾಗೂ ವಿದ್ಯಾರ್ಥಿ ವೇತನ ಮತ್ತಿತರ ಸೌಲಭ್ಯ ದೊರೆಯುತ್ತದೆ. ಅಷ್ಟೇ ಅಲ್ಲದೆ, ವ್ಯಕ್ತಿಯ ಹೆಸರು, ವಯಸ್ಸು ಮತ್ತು ವಿಳಾಸ, ಕುಟುಂಬದ ವಿವರಗಳನ್ನು ಒಳಗೊಂಡಿರುವ ಕಾರಣ ರೇಷನ್ ಕಾರ್ಡ್​​ ಅನ್ನು ಪ್ರಮುಖ ಗುರುತಿನ ಚೀಟಿಯಾಗಿಯೂ ಬಳಸಬಹುದು. ಮತದಾನ ಮತ್ತಿತರ ಕಡೆ ಐಡಿ ಪ್ರೂಪ್ ಆಗಿ ಈ ಕಾರ್ಡ್ ಬಳಕೆ ಮಾಡಬಹುದು. ಕೆಲವು ಪಿಂಚಣಿ ಯೋಜನೆಗಳಿಗೆ ಅಥವಾ ಬ್ಯಾಂಕ್​ನಲ್ಲಿ ಖಾತೆ ತೆರೆಯಲು ಸಹ ಪಡಿತರ ಚೀಟಿ ಬಳಸಬಹುದಾಗಿದೆ.

ಉಜ್ವಲ ಗ್ಯಾಸ್ ಸಿಲಿಂಡರ್ : ಅಡುಗೆ ಗ್ಯಾಸ್ ಇಲ್ಲದವರಿಗೆ ಕೇಂದ್ರ ಸರ್ಕಾರ ನೀಡುತ್ತಿರುವ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಿಲಿಂಡರ್ ಸಿಗುತ್ತದೆ. ರೇಷನ್ ಕಾರ್ಡ್ ಬಳಸಿಕೊಂಡು ಈ ಯೋಜನೆ ಪಡೆಯುಬಹುದಾಗಿದೆ.

ಶ್ರಮಿಕ್ ಕಾರ್ಡ್ : ಅಸಂಘಟಿತ ವಲಯದ ಕಾರ್ಮಿಕರಿಗೆ ಶ್ರಮಿಕ್ ಕಾರ್ಡ್ ಯೋಜನೆಯಡಿ ರೇಷನ್ ಕಾರ್ಡ್ ಆಧಾರವಾಗಿ ಕೆಲಸದ ಲಾಭ, ಉದ್ಯೋಗ ಅವಕಾಶ ಸೇರಿದಂತೆ ಹಲವು ನೆರವು ದೊರೆಯುತ್ತದೆ. ಆ ಮೂಲಕ ಕಾರ್ಮಿಕರು ಕಾನೂನುಬದ್ಧವಾಗಿ ಸರ್ಕಾರದ ಸವಲತ್ತುಗಳನ್ನು ಪಡೆಯಬಹುದು ಎನ್ನುತ್ತಾರೆ ಅಧಿಕಾರಿಗಳು.

ರೈತರ ಬೆಳೆ ವಿಮೆಗೆ ಕಾರ್ಡ್ ಬಳಕೆ : ರೈತರ ಬೆಳೆ ವಿಮೆಗೂ ಈ ಕಾರ್ಡ್ ಬಳಕೆಯಾಗುತ್ತದೆ. ಕೃಷಿಯಲ್ಲಿ ನಷ್ಟ ಸಂಭವಿಸಿದರೆ ರೈತರು ರೇಷನ್ ಕಾರ್ಡ್ ಮೂಲಕ ಈ ಯೋಜನೆಗೆ ಅರ್ಜಿ ಸಲ್ಲಿಸಿ ಬೆಳೆ ನಷ್ಟ ಪರಿಹಾರ ಪಡೆಯಬಹುದು. ವಿಶೇಷವಾಗಿ ಬರ, ಪ್ರವಾಹ, ಮಳೆಹಾನಿ ವೇಳೆ ಗುರುತಿಗಾಗಿ ರೇಷನ್ ಕಾರ್ಡ್ ನೀಡಬಹುದು.

ಮನೆ ನಿರ್ಮಾಣಕ್ಕೂ ನೆರವು : ಎಷ್ಟೋ ಜನರಿಗೆ ಮನೆ ನಿರ್ಮಾಣಕ್ಕೆ ಸರ್ಕಾರದಿಂದ ಆರ್ಥಿಕ ನೆರವು ಸಿಗುತ್ತದೆ ಎಂಬುದೇ ಗೊತ್ತಿರುವುದಿಲ್ಲ. ರೇಷನ್ ಕಾರ್ಡ್​​ದಾರರು ಮನೆಗೆ ಅರ್ಜಿ ಸಲ್ಲಿಸಿ ಹಣದ ಸಹಾಯ ಪಡೆದು ತಮ್ಮ ಸ್ವಂತ ಮನೆ ಕಟ್ಟಿಕೊಳ್ಳಬಹುದು. ಪ್ರಧಾನ ಮಂತ್ರಿ ಅವಾಜ್ ಯೋಜನೆ (ರಾಜ್ಯ ಸರ್ಕಾರದಲ್ಲೂ ಈ ಯೋಜನೆ ಇದೆ) ಬಳಕೆ ಆಗುತ್ತದೆ. ಜೊತೆಗೆ ಕಾರ್ಡ್ ಇದ್ದರೆ ಮನೆ ಸಾಲದ ಮೇಲಿನ ಸಬ್ಸಿಡಿ ಸಹ ಸಿಗುತ್ತದೆ.

ಮಹಿಳೆಯರಿಗೆ ಹೊಲಿಗೆ ಯಂತ್ರ : ಮಹಿಳೆಯರು ಸ್ವಾವಲಂಬಿ ಆಗಲು ರಾಜ್ಯ ಸರ್ಕಾರ ನೀಡುತ್ತಿರುವ ಮತ್ತೊಂದು ಯೋಜನೆ ಎಂದರೆ ಅದು ಉಚಿತ ಹೊಲಿಗೆ ಯಂತ್ರ ವಿತರಣೆ. ಪಡಿತರ ಚೀಟಿ ಹೊಂದಿರುವ ಮಹಿಳೆಯರು ಹೊಲಿಗೆ ಯಂತ್ರವನ್ನು ಉಚಿತವಾಗಿ ಪಡೆದು ಸ್ವಂತ ಉದ್ಯೋಗ ಪ್ರಾರಂಭಿಸಬಹುದು. ಮಹಿಳೆಯರ ಸ್ವಾವಲಂಬಿ ಬದುಕಿಗೆ ಈ ಯೋಜನೆ ಪ್ರಮುಖವಾಗಿದೆ.

Continue Reading

Trending