ದೇಶ
ಹೊಯ್ಸಳ ಪೊಲೀಸರಿಂದ ವಸೂಲಿ ಇಬ್ಬರು ಅಮಾನತು!

ಬೆಂಗಳೂರು: ಹೊಯ್ಸಳ ವಾಹನದಲ್ಲಿ ಬಂದ ಪೊಲೀಸರು ಸಾರ್ವಜನಿಕರಿಂದ ವಸೂಲಿ ಮಾಡಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇಬ್ಬರು ಪೊಲೀಸರನ್ನು ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ, ಎಎಸ್ಐ ರಾಮಲಿಂಗಯ್ಯ ಮುಖ್ಯ ಪೊಲೀಸ್ ಪೇದೆ ಕುಮಾರ್ ಅಮಾನತುಗೊಂಡವರು, ಹೊಯ್ಸಳ ವಾಹನದಲ್ಲಿದ್ದ ಪೊಲೀಸರು ವಸೂಲಿ ಮಾಡುತ್ತಿರುವ ದೃಶ್ಯವನ್ನು ಮೊಬೈಲ್ನಲ್ಲಿ ಶೂಟ್ ಮಾಡುತ್ತಿದ್ದಂತೆ ಹೊಯ್ಸಳ ವಾಹನದೊಂದಿಗೆ ಪೊಲೀಸರು ಸ್ಧಳದಿಂದ ಪರಾರಿಯಾಗಲು ಯತ್ನಿಸಿದ್ದಾರೆ, ಈ ವೇಳೆ ಕಳ್ಳ ಕಳ್ಳ ಎಂದು ಅಟ್ಟಿಸಿಕೊಂಡು ಹೋಗಿರುವ ಆರೋಪ ಕೇಳಿಬಂದಿದೆ, ಈ ಹಿನ್ನೆಲೆಯಲ್ಲಿ ಇಬ್ಬರು ಪೊಲೀಸರನ್ನು ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತ ಆದೇಶ ಹೊರಡಿಸಿದ್ದಾರೆ, ಈ ಬಗ್ಗೆ ಸೂಕ್ತ ತನಿಖೆಗೆ ಆದೇಶ ಸಹ ನೀಡಿದ್ದಾರೆ,