ಬೆಂಗಳೂರು

ಲೋಕಸಭೆ ಚುನಾವಣೆ ಫಲಿತಾಂಶ ಬಳಿಕ ಬಿಬಿಎಂಪಿ, ಜಿಪಂ,ತಾಪಂ ಚುನಾವಣೆ ಸಿಎಂ ಸಿದ್ದು

ಮೈಸೂರು: ಲೋಕಸಭೆಯ ಚುನಾವಣೆಯ ಫಲಿತಾಂಶ ಹೊರಬಿದ್ದ ನಂತರದಲ್ಲಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ನಗರ ಸ್ಧಳೀಯ ಸಂಸ್ಧೆಗಳು ಬಿಬಿಎಂಪಿ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದರು,
ಇಂದು ಮೈಸೂರಿನಲ್ಲಿ ಮಾತನಾಡಿದ ಅವರು ಕಾನೂನು ಪ್ರಕಾರ ಏನೇನು ಮಾಡಬೇಕೆಂದು ಅಡ್ವೋಕೇಟ್ ಜನರಲ್ ಜೊತೆ ಚರ್ಚೆ ಮಾಡಿ ಕ್ಷೇತ್ರ ಪುನರ್ ವಿಂಗಡಣೆ ಹಾಗೂ ಮೀಸಲಾತಿ ಪ್ರಕಟಿಸುತ್ತೇವೆ ಎಂದರು, ಈ ಎಲ್ಲಾ ಚುನಾವಣೆ ನಡೆಸಲು ತಯಾರಿದ್ದೇವೆ, ಚುನಾವಣೆಗಾಗಿ ಅಗತ್ಯವಾದ ಕ್ರಮಗಳನ್ನು ಸರ್ಕಾರದಿಂದ ಕೈಗೊಳ್ಳಲಾಗುವುದು ಎಂದು ಹೇಳಿದರು,
ಇನ್ನೂ ಲೈಂಗಿಕ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಬರೆದ ಪತ್ರದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ದೇವೇಗೌಡರಿಗೆ ಅವರ ಮನೆಯವರಿಗೆ ಗೊತ್ತಿಲ್ಲದಂತೆ ಪ್ರಜ್ವಲ್ ವಿದೇಶಕ್ಕೆ ಹೋದ್ನಾ? ಅವರ ಕುಟುಂಬದ ಸಂಪರ್ಕದಲ್ಲಿ ಪ್ರಜ್ವಲ್ ಇಲ್ವಾ ಎಂದು ಪ್ರಶ್ನಿಸಿದರು, ಅವರ ಕುಟುಂಬಕ್ಕೆ ಪ್ರಜ್ವಲ್ ವಿಚಾರವೆಲ್ಲಾ ಗೊತ್ತಿದೆ ಎಂದರು

Trending

Exit mobile version