ರಾಜಕೀಯ
ಸೋಮಶೇಖರ್, ಹೆಬ್ಬಾರ್ ದಾರಿ ತಪ್ಪಿದ ಮಕ್ಕಳು : ಆರ್ ಆಶೋಕ್

ಬೆಂಗಳೂರು: ಬಿಜೆಪಿ ಶಾಸಕರಾದ ಅರಬೈಲ್ ಶಿವರಾಂ ಹೆಬ್ಬಾರ್ ಹಾಗೂ ಎಸ್ ಟಿ ಸೋಮಶೇಖರ್ ಅವರು ಕಳೆದ ವಾರ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದರು, ಬಿಜೆಪಿ ಶಾಸಕರ ವರ್ತನೆಗೆ ಇದೀಗ ವಿಪಕ್ಷ ನಾಯಕ ಆರ್ ಆಶೋಕ್ ಕಿಡಿಕಾರಿದ್ದಾರೆ,
ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು ಸೋಮಶೇಖರ್ ಹಾಗೂ ಹೆಬ್ಬಾರ್ ದಾರಿತಪ್ಪಿದ ಮಕ್ಕಳು, ಈಗಾಗಲೇ ಅವರಿಬ್ಬರಿಗೆ ನೋಟಿಸ್ ನೀಡಲಾಗಿದೆ, ಸದ್ಯದಲ್ಲಿಯೇ ಹೈಕಮಾಂಡ್ನಿಂದ ಕ್ರಮವೂ ಆಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ,
ಕಳೆದ ವರ್ಷದ ವಿಧಾನಸಭಾ ಚುನಾವಣೆಯಿಂದಲೂ ಇಬ್ಬರೂ ಶಾಸಕರು ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದಾರೆ, ಬದಲಿಗೆ ಕಾಂಗ್ರೆಸ್ ನಾಯಕರ ಜೊತೆ ನಿಕಟವಾಗಿದ್ದಾರೆ, ಲೋಕಸಭಾ ಚುನಾವಣೆಯಲ್ಲಿ ಶಿವರಾಂ ಹೆಬ್ಬಾರ್ ಮತ್ತು ಸೋಮಶೇಖರ್ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರದಲ್ಲೂ ಪಾಲ್ಗೊಂಡಿರಿಲಿಲ್ಲ, ಪಕ್ಷದ ಯಾವುದೇ ಚಟುವಟಿಕೆಗಳಲ್ಲೂ ಭಾಗವಹಿಸಿರಲಿಲ್ಲ.