Connect with us

ರಾಜ್ಯ

ರಾಜ್​ಕುಮಾರ್​ ‘ಸಂಪತ್ತಿಗೆ ಸವಾಲ್’ ಚಿತ್ರಕ್ಕೆ 50 ವರ್ಷ! 90ರ ದಶಕದಲ್ಲೇ ಅಣ್ಣಾವ್ರ ಪ್ಯಾನ್​​ ಇಂಡಿಯಾ ಸಿನಿಮಾ!

Published

on

ಯಾರೇ ಕೂಗಾಡಲಿ, ಊರೇ ಹೋರಾಡಲಿ’ ಈ ಹಾಡು ಕೇಳಿದ್ರೆ ನೆನಪಾಗೋದು ಯಾವ ಸಿನಿಮಾ ಹೇಳಿ? ಅಣ್ಣಾವ್ರ ‘ಸಂಪತ್ತಿಗೆ ಸವಾಲ್’ ಚಿತ್ರ. ಸೂಪರ್​ ಡೂಪರ್ ಹಿಟ್ ಕಂಡ ಈ ಸಿನಿಮಾಗೆ ಈಗ 50 ವರ್ಷದ ಸಂಭ್ರಮ.

ಸಂಪತ್ತಿಗೆ ಸವಾಲ್​ 1974 ರಲ್ಲಿ ತೆರೆ ಕಂಡ ಸಿನಿಮಾ ಇವತ್ತಿಗೆ ಅದೇ ಘಮಲು ಉಳಿಸಿಕೊಂಡಿರುವ ಚಿತ್ರ. ಗಣೇಶ ಹಬ್ಬ ಇರಲಿ. ಅಣ್ಣಮ್ಮನ ಉತ್ಸವವೇ ಇರಲಿ ಅಣ್ಣವ್ರಾ ‘ಯಾರೇ ಕೂಗಾಡಲಿ’ ಹಾಡು ಇಲ್ಲದೇ ಆ ಕಾರ್ಯಕ್ರಮ ಮುಗಿಯೋದೆ ಇಲ್ಲ. ಎವಿ ಶೇಷಗಿರಿ ನಿರ್ದೇಶನ ಮಾಡಿರುವ ಈ ಸಿನಿಮಾದಲ್ಲಿ ಮಂಜುಳಾ ರಾಜ್ ಕುಮಾರ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ರು. ರಾಜ್​ಕುಮಾರ್ ಮತ್ತು ಮಂಜುಳ ಜುಗಲಬಂಧ ಇಂದಿಗೂ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದೆ. ಇವತ್ತಿಗೂ ರಿಯಾಲಿಟಿ ಶೋಗಳಲ್ಲಿ ರೀಲ್ಸ್​ಗಳಲ್ಲಿ ಸಂಪತ್ತಿಗೆ ಸವಾಲ್​ ರಿಕ್ರಿಯೇಟ್ ಆಗ್ತಾನೆ ಇರುತ್ತೆ. ‘ಯಾವ ನಾಯಿಗೆ ಬೇಕೋ, ಯಾವ ನಾಯಿಗೆ ಬೇಕೋ ನಿನ್ನ ಋಣ’, ಬೇವರ್ಸಿ, ಹಳೆ ಬೇವರ್ಸಿ, ಬಿಕನಾಸಿ, ದರ್ವೇಸಿ ಈ ಡೈಲಾಗ್​ಗಳಂತು ಇಂದಿಗೂ ಟ್ರೆಂಡಿಂಗ್​ನಲ್ಲಿರೋದು ಸಂಪತ್ತಿಗೆ ಸವಾಲ್ ಸಿನಿಮಾದ ಮತ್ತೊಂದು ಸ್ಪೆಷಾಲಿಟಿ,

ನಾಟಕದ ಕಥೆ ಸಿನಿಮಾ ಆಗಿದ್ದೇ ರೋಚಕ

ಹೌದು. ನಿಮಗೂ ಇದು ಅಚ್ಚರಿ ಅನಿಸಿದ್ರೂ ಇದು ಸತ್ಯನೇ. ಯಾಕಂದ್ರೆ ಸಂಪತ್ತಿಗೆ ಸವಾಲ್ ಅನ್ನೋದು ಮೂಲತಃ ಒಂದು ನಾಟಕ. ಉತ್ತರ ಕರ್ನಾಟಕದ ಕಂಪನಿ ಒಂದು ಈ ನಾಟಕವನ್ನ ಬರೆದಿತ್ತು. 1973 ರಲ್ಲಿ ಈ ನಾಟಕವನ್ನು ಶಾರದಾ ಸಂಗೀತಾ ನಾಟಕ ಮಂಡಳಿ ಕನಕಪುರದಲ್ಲಿ ಪ್ರದರ್ಶನ ನೀಡ್ತಿತ್ತು. ಆ ಕಾಲದಲ್ಲಿ ಸಂಪತ್ತಿಗೆ ಸವಾಲ್ ನಾಟಕ ಸಿಕ್ಕಾಪಟ್ಟೆ ಪ್ರಸಿದ್ಧಿ ಪಡೆದಿತ್ತು. ವಿಚಾರ ಏನಂದ್ರೆ ಖುದ್ದು ಡಾ. ರಾಜ್​ಕುಮಾರ್ ಈ ನಾಟಕವನ್ನು ಹೋಗಿ ನೋಡಿ ಬಂದಿದ್ರಂತೆ. ಬಳಿಕ ಅದನ್ನ ಸಿನಿಮಾ ಮಾಡೋ ಆಸೆ ವ್ಯಕ್ತಪಡಿಸುತ್ತಾರೆ. ಅದ್ರಂತೆ ಶಾರದಾ ಸಂಗೀತಾ ನಾಟಕ ಮಂಡಳಿ ಮಾಲೀಕರಾದ ಬಸವರಾಜಪ್ಪ, ಮತ್ತು ನಾಟಕ ರಚನೆ ಮಾಡಿದಂತ ಪಿ ಬಿ ದುತ್ತರಿಗೆ ಒಪ್ಪಿಸಿ ನಾಟಕವನ್ನ ಸಿನಿಮಾವಾಗಿ ಮಾಡ್ತಾರೆ. ಸಿನಿಮಾ ಗಲ್ಲಾಪೆಟ್ಟಿಗಯಲ್ಲಿ ಸದ್ದು ಮಾಡಿ ಇತಿಹಾಸವನ್ನೇ ಸೃಷ್ಟಿ ಮಾಡಿಬಿಡುತ್ತೆ. ನಾವೆಲ್ಲ ಈಗ ಪ್ಯಾನ್ ಇಂಡಿಯಾ ಕಾನ್ಸೆಪ್ಟ್ ನೋಡ್ತಿದ್ದೀವಿ. ಆದ್ರೆ ಅಣ್ಣಾವ್ರ ಸಂಪತ್ತಿಗೆ ಸವಾಲ್ ಸಿನಿಮಾ 90 ರ ದಶಕದಲ್ಲೇ ಪ್ಯಾನ್ ಇಂಡಿಯಾ ಸಿನಿಮಾ ಆಗಿ ಸಕ್ಸಸ್​ ಕಂಡಿತ್ತು. 50 ವರ್ಷ ಪೂರೈಸಿರುವ ಸಂಪತ್ತಿಗೆ ಸವಾಲ್ ಚಿತ್ರ 90 ರ ಕಾಲದಲ್ಲೇ ತೆಲುಗು, ತಮಿಳು, ಹಿಂದಿ ಸೇರಿ ಮೂರು ಭಾಷೆಗಳಲ್ಲಿ ರಿಲೀಸ್ ಆಗಿತ್ತು.

ದೇಶ

Iran-ಅಮೆರಿಕ ಯುದ್ಧ ಆತಂಕ: ಮಂಗಳೂರಿನಲ್ಲಿ ಮತ್ತೊಂದು ಬೃಹತ್ ತೈಲ ಸಂಗ್ರಹಾಗಾರ, ಭಾರತದ ಇಂಧನ ಭದ್ರತೆಗೆ ONGC ಮಹತ್ವದ ನಿರ್ಧಾರ

Published

on

ನವದೆಹಲಿ: ಇರಾನ್-ಅಮೆರಿಕ (Iran-USA War) ಸಂಘರ್ಷದಿಂದ ಜಾಗತಿಕ ಕಚ್ಚಾ ತೈಲ ಪೂರೈಕೆಯಲ್ಲಿ ಅನಿಶ್ಚಿತತೆ ಹೆಚ್ಚುತ್ತಿರುವ ನಡುವೆಯೇ, ಭಾರತ ತನ್ನ ಇಂಧನ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ದೇಶದಲ್ಲಿ ತುರ್ತು ಪರಿಸ್ಥಿತಿಯಲ್ಲೂ ತೈಲ ಕೊರತೆ ಉಂಟಾಗದಂತೆ ತಡೆಯುವ ಉದ್ದೇಶದಿಂದ ಮಂಗಳೂರಿನಲ್ಲಿ (Mangaluru) ಮತ್ತೊಂದು ಬೃಹತ್ ಸ್ಟ್ರಾಟೆಜಿಕ್ ಪೆಟ್ರೋಲಿಯಂ ರಿಸರ್ವ್ (Strategic Petroleum Reserve – SPR) ನಿರ್ಮಾಣಕ್ಕೆ ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ (ONGC) ತಾತ್ವಿಕ ಅನುಮೋದನೆ ನೀಡಿದೆ.

ಹೊಸದಾಗಿ ನಿರ್ಮಾಣವಾಗಲಿರುವ ಈ ಸಂಗ್ರಹಾಗಾರವು 1.75 MMT ಸಾಮರ್ಥ್ಯ ಹೊಂದಿದ್ದು, ದೇಶದ ತುರ್ತು ತೈಲ ಸಂಗ್ರಹ ಸಾಮರ್ಥ್ಯವನ್ನು ಗಮನಾರ್ಹವಾಗಿ ಹೆಚ್ಚಿಸಲಿದೆ. ಸುಮಾರು 1.28 ಕೋಟಿ ಬ್ಯಾರೆಲ್ ಕಚ್ಚಾ ತೈಲ ಸಂಗ್ರಹಿಸಬಹುದಾದ ಈ ಯೋಜನೆ, ಜಾಗತಿಕ ಬಿಕ್ಕಟ್ಟುಗಳ ಸಮಯದಲ್ಲಿ ಭಾರತದ ಇಂಧನ ಸುರಕ್ಷತೆಗೆ ದೊಡ್ಡ ಬಲವಾಗಲಿದೆ.

ಪ್ರಸ್ತುತ ಭಾರತದಲ್ಲಿ ಮಂಗಳೂರು, ಪಾದೂರು (ಉಡುಪಿ) ಹಾಗೂ ವಿಶಾಖಪಟ್ಟಣಂನಲ್ಲಿ ಒಟ್ಟು 5.33 MMT ಸಾಮರ್ಥ್ಯದ ಭೂಗತ ತೈಲ ಸಂಗ್ರಹಾಗಾರಗಳಿವೆ. ಈಗ ಮಂಗಳೂರಿನಲ್ಲಿ ಹೆಚ್ಚುವರಿಯಾಗಿ ನಿರ್ಮಾಣವಾಗುವ ಈ ಯೋಜನೆಯಿಂದ ದೇಶದ ತುರ್ತು ತೈಲ ಬ್ಯಾಕಪ್ ಮತ್ತಷ್ಟು ಬಲಿಷ್ಠವಾಗಲಿದೆ.

ಇದುವರೆಗೆ ದೇಶದ ತುರ್ತು ತೈಲ ಸಂಗ್ರಹಾಗಾರಗಳನ್ನು Indian Strategic Petroleum Reserves Limited (ISPRL) ನಿರ್ಮಿಸುತ್ತಿತ್ತು. ಆದರೆ, ಮೊದಲ ಬಾರಿಗೆ ONGC ತನ್ನ ಸ್ವಂತ ಸಂಪನ್ಮೂಲಗಳನ್ನು ಬಳಸಿ ಇಂತಹ ಬೃಹತ್ ಯೋಜನೆಯನ್ನು ಕೈಗೆತ್ತಿಕೊಳ್ಳುತ್ತಿರುವುದು ವಿಶೇಷವಾಗಿದೆ.

ಮಂಗಳೂರಿನಲ್ಲಿ ಈಗಾಗಲೇ MRPL ಸಂಸ್ಥೆಯು ದಿನಕ್ಕೆ ಸುಮಾರು 3 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಶುದ್ಧೀಕರಿಸುವ ಸಾಮರ್ಥ್ಯದ ರಿಫೈನರಿ ಹೊಂದಿದೆ. ಹೊಸ ಸಂಗ್ರಹಾಗಾರವನ್ನು ಇದೇ ಮೂಲಸೌಕರ್ಯಕ್ಕೆ ಸಂಪರ್ಕಿಸುವ ಯೋಜನೆ ರೂಪಿಸಲಾಗಿದ್ದು, ವಾಣಿಜ್ಯ ಬಳಕೆಗೆ ಅವಕಾಶ ನೀಡುವಂತೆ ಕೇಂದ್ರ ಸರ್ಕಾರವನ್ನು ONGC ಕೋರಿದೆ.

MRPL ಷೇರುಗಳಲ್ಲಿ ಭಾರಿ ಏರಿಕೆ

ಈ ಘೋಷಣೆಯ ಬಳಿಕ ONGC ಅಂಗಸಂಸ್ಥೆಯಾದ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಷೇರುಗಳು ಮಾರುಕಟ್ಟೆಯಲ್ಲಿ ಭರ್ಜರಿ ಏರಿಕೆ ಕಂಡಿವೆ. ಶುಕ್ರವಾರದ ವಹಿವಾಟಿನಲ್ಲಿ ಷೇರುಗಳು ಸುಮಾರು 9% (₹12.17) ಏರಿಕೆಯಾಗಿದ್ದು, ಮಾರುಕಟ್ಟೆ ತಜ್ಞರ ಪ್ರಕಾರ ₹165 ಮಟ್ಟ ದಾಟಿದರೆ ಮುಂದಿನ ದಿನಗಳಲ್ಲಿ ₹190 ರಿಂದ ₹200ರವರೆಗೆ ಏರಿಕೆ ಕಾಣುವ ಸಾಧ್ಯತೆಯಿದೆ.

ತುರ್ತು ತೈಲ ಸಂಗ್ರಹ ಏಕೆ ಅಗತ್ಯ?

ಭಾರತವು ವಿಶ್ವದ ಮೂರನೇ ಅತಿ ದೊಡ್ಡ ಕಚ್ಚಾ ತೈಲ ಆಮದುದಾರ ದೇಶವಾಗಿದೆ. ಯುದ್ಧ, ಜಾಗತಿಕ ಬಿಕ್ಕಟ್ಟು ಅಥವಾ ಪೂರೈಕೆ ವ್ಯತ್ಯಯದ ಸಂದರ್ಭದಲ್ಲಿ ದೇಶದಲ್ಲಿ ಇಂಧನ ಕೊರತೆ ಉಂಟಾಗದಂತೆ ತಡೆಯಲು ಸ್ಟ್ರಾಟೆಜಿಕ್ ಪೆಟ್ರೋಲಿಯಂ ರಿಸರ್ವ್ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ.

ಪ್ರಸ್ತುತ ಭಾರತದ ತುರ್ತು ತೈಲ ಸಂಗ್ರಹವು ಸುಮಾರು 9 ದಿನಗಳ ಅವಶ್ಯಕತೆಯನ್ನು ಪೂರೈಸುವ ಸಾಮರ್ಥ್ಯ ಹೊಂದಿದೆ. ಮುಂದಿನ ಹತ್ತು ವರ್ಷಗಳಲ್ಲಿ ಈ ಸಾಮರ್ಥ್ಯವನ್ನು 15 MMTಗೆ ಹೆಚ್ಚಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಇಂಟರ್‌ನ್ಯಾಷನಲ್ ಎನರ್ಜಿ ಏಜೆನ್ಸಿ (IEA) ತನ್ನ ಸದಸ್ಯ ರಾಷ್ಟ್ರಗಳು ಕನಿಷ್ಠ 90 ದಿನಗಳ ತೈಲ ಸಂಗ್ರಹ ಹೊಂದಿರಬೇಕೆಂದು ಶಿಫಾರಸು ಮಾಡಿದೆ.

ಭಾರತದ ಇಂಧನ ಭದ್ರತೆಯನ್ನು ಬಲಪಡಿಸುವ ಈ ಹೊಸ ಯೋಜನೆ ಭವಿಷ್ಯದ ಜಾಗತಿಕ ಬಿಕ್ಕಟ್ಟುಗಳನ್ನು ಎದುರಿಸಲು ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗುತ್ತಿದೆ.

Continue Reading

ದೇಶ

ಅಶೋಕ್ ರೈ ಕಂಬಳಕ್ಕೆ ಸಿದ್ಧ, ಯದುವೀರ್-ಪ್ರತಾಪ್ ಸಿಂಹ ವಿರೋಧ; ದಸರಾದಲ್ಲಿ ಹೊಸ ವಿವಾದ

Published

on

ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಮಹೋತ್ಸವದ ಸಿದ್ಧತೆಗಳು ಆರಂಭವಾಗುತ್ತಿದ್ದಂತೆಯೇ ಈ ಬಾರಿ ದಸರಾ ಕಾರ್ಯಕ್ರಮದಲ್ಲಿ ಕಂಬಳ (Kambala) ಆಯೋಜನೆ ಮಾಡುವ ವಿಚಾರ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಒಂದೆಡೆ ಪುತ್ತೂರು ಶಾಸಕ ಅಶೋಕ್ ರೈ (Ashok Rai) ಕಂಬಳ ಆಯೋಜನೆಗೆ ಸಿದ್ಧತೆ ಆರಂಭಿಸಿರುವುದಾಗಿ ತಿಳಿಸಿದ್ದರೆ, ಮತ್ತೊಂದೆಡೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Wadiyar) ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿ ನಡೆದ ದಸರಾ ಉನ್ನತ ಮಟ್ಟದ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ನೇತೃತ್ವದಲ್ಲಿ ಮಹೋತ್ಸವದ ಸಿದ್ಧತೆ ಕುರಿತು ಚರ್ಚೆ ನಡೆಯಿತು. ಆಗಸ್ಟ್ 26ರಂದು ಗಜಪಯಣ ಆರಂಭವಾಗಲಿದ್ದು, ಅಕ್ಟೋಬರ್ 11ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆಯಾಗಲಿದೆ. ಅಕ್ಟೋಬರ್ 21ರಂದು ವಿಜಯದಶಮಿಯಂದು ಮಧ್ಯಾಹ್ನ 4:10ಕ್ಕೆ ಮೀನಾ ಲಗ್ನದಲ್ಲಿ ಐತಿಹಾಸಿಕ ಜಂಬೂ ಸವಾರಿ ನಡೆಯಲಿದೆ.

ಸಭೆಯಲ್ಲಿ ಕಂಬಳ ಆಯೋಜನೆ ವಿಚಾರವೂ ಪ್ರಸ್ತಾಪವಾಗಿದ್ದು, ಅಂತಿಮ ನಿರ್ಧಾರವನ್ನು ಮುಂದಿನ ಸಭೆಯಲ್ಲಿ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ. ಅಶೋಕ್ ರೈ ಅವರ ಪ್ರಕಾರ, ಕಂಬಳ ಆಯೋಜನೆಗೆ ಸುಮಾರು ₹5 ರಿಂದ ₹6 ಕೋಟಿ ವೆಚ್ಚವಾಗಲಿದ್ದು, ಜುಲೈ 15ರಿಂದಲೇ ಸಿದ್ಧತೆ ಆರಂಭಿಸಲು ಯೋಜಿಸಲಾಗಿದೆ. ಕಂಬಳದ ಮೂಲಕ ಕರಾವಳಿಯ ಸಾಂಸ್ಕೃತಿಕ ಪರಂಪರೆಯನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ ಉದ್ದೇಶವಿದೆ ಎಂದು ಅವರು ಹೇಳಿದ್ದಾರೆ.

ಆದರೆ, ಯದುವೀರ್ ಒಡೆಯರ್ ದಸರಾದಲ್ಲಿ ಕಂಬಳ ಸೇರಿಸುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಮಾಜಿ ಸಂಸದ ಪ್ರತಾಪ್ ಸಿಂಹ ಕೂಡ ದಸರಾ, ಕಂಬಳ ಮತ್ತು ಇತರೆ ಜಾತ್ರೆಗಳಿಗೆ ತಮ್ಮದೇ ಆದ ವೈಶಿಷ್ಟ್ಯವಿದ್ದು, ಪ್ರತಿಯೊಂದು ಆಚರಣೆಯೂ ತನ್ನ ಸಾಂಪ್ರದಾಯಿಕ ಸ್ವರೂಪದಲ್ಲೇ ನಡೆಯಬೇಕು ಎಂದು ಹೇಳಿದ್ದಾರೆ. ಕಂಬಳದ ಬಗ್ಗೆ ವಿರೋಧವಿಲ್ಲದಿದ್ದರೂ ದಸರಾದ ಮೂಲ ಪರಂಪರೆಯಲ್ಲಿ ಬದಲಾವಣೆ ಬೇಡ ಎಂಬುದು ಅವರ ನಿಲುವಾಗಿದೆ.

Continue Reading

ದೇಶ

ಬೆಂಗಳೂರು ಗ್ರಾಮಾಂತರದಲ್ಲಿ ರಸ್ತೆ ಕಾಮಗಾರಿ ಸ್ಥಗಿತ: ಡಾಂಬರು ದರ 40% ಏರಿಕೆ

Published

on

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಮುಂದುವರಿದಿರುವ ಯುದ್ಧದ ಪರಿಣಾಮ ಇದೀಗ ಕರ್ನಾಟಕದ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಮೇಲೂ ನೇರ ಪರಿಣಾಮ ಬೀರಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ (Bengaluru Rural) ಸುಮಾರು 98 ಕಿಲೋಮೀಟರ್ ರಸ್ತೆ ಕಾಮಗಾರಿಗಳು ಡಾಂಬರು (Bitumen) ಕೊರತೆ ಹಾಗೂ ಬೆಲೆ ಏರಿಕೆಯಿಂದ ಸ್ಥಗಿತಗೊಂಡಿವೆ.

ಲೋಕೋಪಯೋಗಿ ಇಲಾಖೆ ಮೂಲಗಳ ಪ್ರಕಾರ, ಮಧ್ಯಪ್ರಾಚ್ಯದಿಂದ ಭಾರತಕ್ಕೆ ಆಮದಾಗುವ ಬಿಟುಮೆನ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಸಾಗಣೆ ವೆಚ್ಚವೂ ಗಣನೀಯವಾಗಿ ಹೆಚ್ಚಿದೆ. ಕಚ್ಚಾ ತೈಲದ ಬೆಲೆ ಏರಿಕೆಯ ಪರಿಣಾಮ ಕಳೆದ ಎರಡು ತಿಂಗಳಲ್ಲಿ ಡಾಂಬರು ದರವು ಶೇ.35 ರಿಂದ 40ರಷ್ಟು ಏರಿಕೆಯಾಗಿದೆ. ಮೇ ತಿಂಗಳಲ್ಲಿ ಪ್ರತಿ ಮೆಟ್ರಿಕ್ ಟನ್‌ಗೆ ₹52 ಸಾವಿರ ಇದ್ದ VG-30 ದರ್ಜೆಯ ಡಾಂಬರು ಇದೀಗ ₹72 ಸಾವಿರ ದಾಟಿದ್ದರೆ, VG-40 ದರ ₹78 ಸಾವಿರಕ್ಕೆ ಏರಿಕೆಯಾಗಿದೆ.

ದರ ಏರಿಕೆಯಿಂದ ಈಗಾಗಲೇ ಟೆಂಡರ್ ಪಡೆದಿರುವ ಗುತ್ತಿಗೆದಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರತಿ ಕಿಲೋಮೀಟರ್ ರಸ್ತೆ ನಿರ್ಮಾಣಕ್ಕೆ ಹೆಚ್ಚುವರಿಯಾಗಿ ₹8 ರಿಂದ ₹10 ಲಕ್ಷ ವೆಚ್ಚವಾಗುತ್ತಿದೆ ಎಂದು ಗುತ್ತಿಗೆದಾರರು ತಿಳಿಸಿದ್ದಾರೆ. ಸರ್ಕಾರ ದರ ಪರಿಷ್ಕರಣೆ ಮಾಡಬೇಕು, ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ ಆಮದು ಸುಂಕ ಕಡಿಮೆ ಮಾಡಬೇಕು ಅಥವಾ ಸಬ್ಸಿಡಿ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಮಧ್ಯಪ್ರಾಚ್ಯದ ಪರಿಸ್ಥಿತಿ ಶೀಘ್ರ ಸುಧಾರಿಸದಿದ್ದರೆ, ಮುಂಗಾರು ಬಳಿಕವೂ ರಸ್ತೆ ಕಾಮಗಾರಿಗಳನ್ನು ಪುನರಾರಂಭಿಸುವುದು ಕಷ್ಟವಾಗಬಹುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ. ಇದರಿಂದ ಸಾರ್ವಜನಿಕರಿಗೆ ಸಂಚಾರ ತೊಂದರೆ ಹೆಚ್ಚುವುದರ ಜೊತೆಗೆ ಸಾವಿರಾರು ಕಾರ್ಮಿಕರ ಉದ್ಯೋಗಕ್ಕೂ ಆತಂಕ ಎದುರಾಗಲಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಬೆಂಗಳೂರು ಗ್ರಾಮಾಂತರ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ರಂಜಿತ್ ಕುಮಾರ್, “ಡಾಂಬರು ಲಭ್ಯವಾಗದ ಕಾರಣ 98 ಕಿ.ಮೀ ರಸ್ತೆ ಕಾಮಗಾರಿ ಸ್ಥಗಿತಗೊಂಡಿದೆ. ಬೆಲೆ ಏರಿಕೆ ಹಾಗೂ ನಿರಂತರ ಮಳೆಯೂ ಕಾಮಗಾರಿಗೆ ಅಡ್ಡಿಯಾಗಿದೆ. ಗುತ್ತಿಗೆದಾರರೊಂದಿಗೆ ಸಮಾಲೋಚನೆ ನಡೆಸಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

Continue Reading

Trending