Connect with us

ಚುನಾವಣೆ

ಕೆಲವೇ ಗಂಟೆಗಳಲ್ಲಿ ಪ್ರದೀಪ್ ಈಶ್ವರ್ ರಾಜೀನಾಮೆ’- ಪ್ರತಾಪ್ ಸಿಂಹ ಖಡಕ್ ಚಾಲೆಂಜ್‌!

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯ ವಿರುದ್ಧ ಸ್ಪರ್ಧಿಸಿರುವ ಡಾ.ಕೆ ಸುಧಾಕರ್ ಅವರು 1 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಜಯ ದಾಖಲಿಸಿದ್ದಾರೆ. ಎನ್‌ ಡಿ ಎ ಅಭ್ಯರ್ಥಿ ಡಾ.ಕೆ ಸುಧಾಕರ್ ಅವರ ಗೆಲುವಿನ ಹಿನ್ನೆಲೆಯಲ್ಲಿ ಬಿಜೆಪಿ ನಾಯಕ ಪ್ರತಾಪ್ ಸಿಂಹ ಅವರು ಕಾಂಗ್ರೆಸ್ ನಾಯಕರ ಕಾಲು ಎಳೆದಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸುಧಾಕರ್ ಅವರ ಗೆಲುವಿನ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಅವರು ಸೋಷಿಯಲ್ ಮೀಡಿಯಾ Xನಲ್ಲಿ ಪೋಸ್ಟ್ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಅವರು ಸುಧಾಕರ್ ಅವರಿಗೆ ಹಾಕಿದ್ದ ಸವಾಲಿನ ಹಳೆ ವಿಡಿಯೋವನ್ನು ಪೋಸ್ಟ್ ಮಾಡಿರುವ ಪ್ರತಾಪ್ ಸಿಂಹ್ ಅವರು ಕೆಲವೇ ಗಂಟೆಗಳಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ವ್ಯಂಗ್ಯ ಮಾಡಿದ್ದಾರೆ.

ಪ್ರದೀಪ್ ಈಶ್ವರ್ ಹೇಳಿದ್ದೇನು?
ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ 100 / ವಿನ್. ನಾನು ಇಲ್ಲೇ ಕುಳಿತುಕೊಂಡು ಚಾಲೆಂಜ್ ಮಾಡಿದ್ದೀನಿ. ಆ ಚಾಲೆಂಜ್ ಪರವಾಗಿ ನಿಲ್ಲುತ್ತೇನೆ. ಈ ಜನರೇಷನ್ ರಾಜಕಾರಣ ನಾವು ಸ್ಮಾರ್ಟ್‌ ಆಗಿ ಇದ್ದು ಆಗುತ್ತೆ ಅಂತಲ್ಲ. ನಾವು ಗೆಲ್ಲುತ್ತೇವೆ ಅಂತ ಹೇಳಿದ್ದೇವೆ ಗೆಲ್ಲುತ್ತೇವೆ.

ನನ್ನ ಡೈಲಾಗ್ ಕರೆಕ್ಟಾಗಿ ರಿಪೀಟ್ ಮಾಡಿ ಜೂಮ್ ಹಾಕಿಕೊಂಡು ಕೇಳಿ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ಒಂದು ವೋಟ್ ಸುಧಾಕರ್‌ ಹೆಚ್ಚು ತೆಗೆದುಕೊಂಡ್ರೆ ನಾನು ರಾಜೀನಾಮೆ ಕೊಡ್ತೀನಿ. ಚಿಕ್ಕಬಳ್ಳಾಪುರದಲ್ಲಿ 3 ಸಲ ಎಂಎಲ್‌ಎ ಆಗಿದ್ದರು. ಒಂದೇ ಒಂದು ವೋಟ್ ತೆಗೆದುಕೊಳ್ಳಲಿ ನಾನು ರಾಜೀನಾಮೆ ಪತ್ರ ತೆಗೆದುಕೊಂಡು ಬರ್ತೀನಿ.

ಕ್ರೀಡೆ

ಐಪಿಎಲ್ 2025 ರದ್ದು: ದೇಶದ ಭದ್ರತೆಗೆ ಬಿಸಿಸಿಐ ಆದ್ಯತೆ, ಆರ್‌ಸಿಬಿ ಕನಸು ಭಗ್ನ!

ಭಾರತ-ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಮತ್ತು ಭದ್ರತಾ ಆತಂಕಗಳಿಂದಾಗಿ ವಿಶ್ವದ ಅತಿದೊಡ್ಡ ಕ್ರಿಕೆಟ್ ಲೀಗ್ ಆಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಐಪಿಎಲ್ 2025ರ 18ನೇ ಆವೃತ್ತಿಯನ್ನು ಅರ್ಧದಲ್ಲೇ ರದ್ದುಗೊಳಿಸಲಾಗಿದೆ ಎಂದು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ ಬಿಸಿಸಿಐ ಘೋಷಿಸಿದೆ. ಈ ನಿರ್ಧಾರವು ಕ್ರಿಕೆಟ್ ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಆರ್‌ಸಿಬಿ ಸೇರಿದಂತೆ ಹಲವು ತಂಡಗಳ ಕಪ್ ಗೆಲ್ಲುವ ಕನಸು ಭಗ್ನವಾಗಿದೆ.

ಮೇ 8, 2025 ರಂದು ಪಂಜಾಬ್‌ನ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಐಪಿಎಲ್ 2025ರ 58ನೇ ಪಂದ್ಯದ ವೇಳೆ, 10.1 ಓವರ್‌ಗಳಲ್ಲಿ ಫ್ಲಡ್‌ಲೈಟ್ ವೈಫಲ್ಯದಿಂದಾಗಿ ಆಟ ತಾತ್ಕಾಲಿಕವಾಗಿ ಸ್ಥಗಿತಗೊಂಡಿತು. ಆದರೆ, ಇದಕ್ಕೆ ಕಾರಣ ಪಾಕಿಸ್ತಾನದಿಂದ ನಡೆದ ಡ್ರೋನ್ ದಾಳಿಯಿಂದ ಉಂಟಾದ ವಿದ್ಯುತ್ ಕಡಿತವಾಗಿತ್ತು ಎಂದು ವರದಿಯಾಗಿದೆ. ಭದ್ರತಾ ಕಾರಣಗಳಿಂದ ಆ ಪಂದ್ಯವನ್ನು ರದ್ದುಗೊಳಿಸಲಾಯಿತು, ಮತ್ತು ಕ್ರೀಡಾಂಗಣದಲ್ಲಿದ್ದ ಎಲ್ಲರನ್ನೂ ತಕ್ಷಣವೇ ಸ್ಥಳಾಂತರಿಸಲಾಯಿತು. ಈ ಘಟನೆಯು ಐಪಿಎಲ್‌ನ ಉಳಿದ ಪಂದ್ಯಗಳ ಮೇಲೆ ಗಂಭೀರ ಪರಿಣಾಮ ಬೀರಿತು.

ವಿದೇಶಿ ಆಟಗಾರರ ಭದ್ರತೆ:

ಐಪಿಎಲ್‌ನಲ್ಲಿ ಭಾಗವಹಿಸುವ ವಿದೇಶಿ ಆಟಗಾರರ ಭದ್ರತೆಯು ಬಿಸಿಸಿಐಗೆ ಪ್ರಮುಖ ಆದ್ಯತೆಯಾಗಿದೆ. ಪಾಕಿಸ್ತಾನದಿಂದ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳ ಭೀತಿಯಿಂದಾಗಿ, ದೇಶದ ಭದ್ರತಾ ವ್ಯವಸ್ಥೆಯನ್ನು ತೀವ್ರಗೊಳಿಸಲಾಗಿದೆ. ಈ ಸಂದರ್ಭದಲ್ಲಿ, ವಿದೇಶಿ ಆಟಗಾರರ ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳಲು ಸಾಧ್ಯವಾಗದ ಕಾರಣ, ಬಿಸಿಸಿಐ ಐಪಿಎಲ್ 2025ರ ಉಳಿದ 14 ಪಂದ್ಯಗಳನ್ನು ಮತ್ತು ಫೈನಲ್ ಪಂದ್ಯವನ್ನು ರದ್ದುಗೊಳಿಸುವ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದೆ. ಮೇ 9, 2025 ರಂದು ನಡೆದ ತುರ್ತು ಸಭೆಯಲ್ಲಿ ಈ ತೀರ್ಮಾನವನ್ನು ಘೋಷಿಸಲಾಗಿದೆ ಎಂದು ವರದಿಯಾಗಿದೆ.

ಕ್ರಿಕೆಟ್ ಅಭಿಮಾನಿಗಳಿಗೆ ನಿರಾಸೆ

ಐಪಿಎಲ್ 2025ರ ರದ್ದತಿಯ ಸುದ್ದಿಯು ಕ್ರಿಕೆಟ್ ಪ್ರಿಯರಿಗೆ ಭಾರೀ ನಿರಾಸೆಯನ್ನುಂಟು ಮಾಡಿದೆ. ಈಗಾಗಲೇ 57 ಪಂದ್ಯಗಳು ಮುಗಿದಿದ್ದು, ಲೀಗ್ ತನ್ನ ಅಂತಿಮ ಹಂತದಲ್ಲಿತ್ತು. ಆದರೆ, ದೇಶದ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಆರ್‌ಸಿಬಿ ತಂಡದ ಅಭಿಮಾನಿಗಳಿಗೆ ಈ ವರ್ಷವೂ ಕಪ್ ಗೆಲ್ಲುವ ಕನಸು ಭಗ್ನವಾಗಿದೆ, ಇದು ಅವರಿಗೆ ದೊಡ್ಡ ಆಘಾತವನ್ನುಂಟು ಮಾಡಿದೆ. ಸಾಮಾಜಿಕ ಮಾಧ್ಯಮದಲ್ಲಿ ಅಭಿಮಾನಿಗಳು ತಮ್ಮ ನಿರಾಸೆಯನ್ನು ವ್ಯಕ್ತಪಡಿಸುತ್ತಿದ್ದಾರೆ, ಆದರೆ ದೇಶದ ಭದ್ರತೆಗಿಂತ ಕ್ರಿಕೆಟ್ ದೊಡ್ಡದಲ್ಲ ಎಂಬ ಅಭಿಪ್ರಾಯವೂ ಜನಪ್ರಿಯವಾಗಿದೆ.

ಬಿಸಿಸಿಐನ ಸಂದೇಶ

ಬಿಸಿಸಿಐ ಅಧ್ಯಕ್ಷ ಅರುಣ್ ಧುಮಾಲ್ ಈ ಬಗ್ಗೆ ಪ್ರತಿಕ್ರಿಯಿಸಿ, “ದೇಶದ ಭದ್ರತೆಯೇ ನಮಗೆ ಮೊದಲ ಆದ್ಯತೆ. ಆಟಗಾರರ ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳಲು ಸಾಧ್ಯವಾಗದ ಸಂದರ್ಭದಲ್ಲಿ, ಐಪಿಎಲ್ 2025ರ ರದ್ದತಿಯ ನಿರ್ಧಾರವು ಅನಿವಾರ್ಯವಾಗಿತ್ತು. ಕ್ರಿಕೆಟ್ ಅಭಿಮಾನಿಗಳಿಗೆ ಈ ನಿರ್ಧಾರ ಕಷ್ಟಕರವಾಗಿದ್ದರೂ, ದೇಶದ ಸುರಕ್ಷತೆಗೆ ಯಾವುದೇ ರಾಜಿಯಿಲ್ಲ,” ಎಂದು ತಿಳಿಸಿದ್ದಾರೆ. ಶೀಘ್ರದಲ್ಲೇ ಈ ರದ್ದತಿಯ ಬಗ್ಗೆ ಅಧಿಕೃತ ಘೋಷಣೆಯಾಗುವ ಸಾಧ್ಯತೆಯಿದೆ.

Continue Reading

ಚುನಾವಣೆ

ಮತಗಟ್ಟೆಯಲ್ಲಿ ಸರ್ಕಾರಿ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ಅಭ್ಯರ್ಥಿ

ರಾಜಸ್ಥಾನ: ಇಲ್ಲಿನ ಮತಗಟ್ಟೆಯೊಂದರಲ್ಲಿ ಅಘಾತಕಾರಿ ಘಟನೆ ನಡೆದಿದೆ. ಸರ್ಕಾರಿ ಅಧಿಕಾರಿಗೆ ಡಿಯೋಲಿ-ಉನಿಯಾರಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯೊಬ್ಬರು ಕಪಾಳಮೋಕ್ಷ ಮಾಡಿದ್ದಾರೆ.

ಡಿಯೋಲಿ-ಉನಿಯಾರಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ನರೇಶ್ ಮೀನಾ ಅವರು, ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಗೆ ಕಪಾಳಮೋಕ್ಷ ಮಾಡುತ್ತಿರುವುದು ವೀಡಿಯೋದಲ್ಲಿ ಸೆರೆಯಾಗಿದೆ.

ಸಂರವತ ಮತಗಟ್ಟೆಯಲ್ಲಿ ಈ ಘಟನೆ ನಡೆದಿದೆ. ಮತಗಟ್ಟೆಗೆ ತೆರಳಿದ್ದ ಮೀನಾ ಅವರು, ಚುನಾವಣಾ ಪ್ರೋಟೋಕಾಲ್ ಅನ್ನು ಮೇಲ್ವಿಚಾರಣೆ ಮಾಡಲು ಕರ್ತವ್ಯದಲ್ಲಿದ್ದ ಎಸ್‌ಡಿಎಂ ಅಮಿತ್ ಚೌಧರಿ ಅವರಿಗೆ ಕಪಾಳಮೋಕ್ಷ ಮಾಡಿದ್ದಾರೆ. ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಗಲಾಟೆ ಮಾಡದಂತೆ ತಡೆದಿದ್ದಾರೆ.

2018 ಮತ್ತು 2023 ರಲ್ಲಿ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದ ಕಾಂಗ್ರೆಸ್ ನಾಯಕ ಹರೀಶ್ ಚಂದ್ರ ಮೀನಾ ಅವರು ಸಾರ್ವತ್ರಿಕ ಚುನಾವಣೆಯ ನಂತರ ಲೋಕಸಭೆಗೆ ಪ್ರವೇಶಿಸಿದ್ದಾರೆ. ತೆರವಾಗಿದ್ದ ಅವರ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದೆ.

1,914 ಮತಗಟ್ಟೆಗಳಲ್ಲಿ 9,000 ಸಿಬ್ಬಂದಿ ನಿಯೋಜಿಸಲಾಗಿದ್ದು, ಡಿಯೋಲಿ-ಉನಿಯಾರಾ ಸೇರಿದಂತೆ ರಾಜಸ್ಥಾನದಾದ್ಯಂತ ಏಳು ವಿಧಾನಸಭಾ ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ.

Continue Reading

ಚುನಾವಣೆ

FACT CHECK ಟ್ರಂಪ್ ಭಾಷಣದ ವೇಳೆ ಜನ ಮೋದಿ ಮೋದಿ ಎಂದು ಕೂಗಿದ್ರಾ? ಇಲ್ಲಿದೆ ಅಸಲಿಯತ್ತು

ವಾಷಿಂಗ್ಟನ್: ಟ್ರಂಟ್ ಅವರ ವಿಜಯೋತ್ಸವ ಭಾಷಣದಲ್ಲಿ ಮೋದಿ, ಮೋದಿ ಎಂದು ಕೂಗಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು, ಅದರೆ ಇದೀಗ ಆ ವಿಡಿಯೋ ಎಡಿಟ್ ಮಾಡಿರುವುದು ಎನ್ನಲಾಗಿದೆ,
ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರು ಗೆಲುವಿನ ನಂತರ ವಿಜಯದ ಭಾಷಣ ಮಾಡಿದ್ದರು, ಈ ವೇಳೆ ಜನರು ಪ್ರಧಾನಿ ನರೇಂದ್ರ ಮೋದಿ ಹೆಸರನ್ನು ಜಪಿಸುತ್ತಿರುವ ವಿಡಿಯೋ ವೈರೆಲ್ ಆಗಿದೆ,
ಅಮೆರಿಕವನ್ನು ಮತ್ತೆ ಆರೋಗ್ಯವಂತರನ್ನಾಗಿ ಮಾಡಿ ಎಂದು ಟ್ರಂಪ್ ಹೇಳುವುದರೊಂದಿಗೆ ವಿಡಿಯೋ ಪ್ರಾರಂಭವಾಗುತ್ತದೆ, ಅದರ ನಂತರ ಜನರು ಮೋದಿ ಮೋದಿ ಎಂದು ಘೋಷಣೆ ಕೂಗುತ್ತಾರೆ, ಇದಕ್ಕೆ ಪ್ರತಿಕ್ರಿಯಿಸಿದ ಟ್ರಂಪ್ ಅವರೊಬ್ಬ ಮಹಾನ್ ವ್ಯಕ್ತಿ ಎಂದು ನನಗೆ ತಿಳಿದಿದೆ ಎಂದು ಹೇಳುತ್ತಾರೆ,
ಅದರೆ ಈ ವಿಡಿಯೋದ ಅಸಲಿಯತ್ತು ಇದೀಗ ಬಯಲಾಗಿದೆ, ಟ್ರಂಪ್ ಅವರ ಸಂಪೂರ್ಣ ಭಾಷಣವಿರುವ ವಿಡಿಯೋದಲ್ಲಿ ಯೂಟ್ಯೂಬ್ ವಿಡಿಯೋದಲ್ಲಿ 19 ನಿಮಿಷ 37 ಸೆಕೆಂಡ್‍ನಲ್ಲಿ ಈ ವಿಡಿಯೋವನ್ನು ಗಮನಿಸಬಹುದಾಗಿದೆ, ಅದರಲ್ಲಿ ಮೋದಿ ಘೋಷಣೆಯಿಲ್ಲ, ಬದಲಿಗೆ ಟ್ರಂಪರ ಮಿತ್ರ ರಾಬರ್ಟ್ ಎಫ್ ಕೆನಡಿ ಜೂನಿಯರ್ ಗಾಗಿ ಜನರು ಘೋಷಣೆ ಕೂಗಿದ್ದಾರೆ, ಈ ವೇಳೆ ಜನರು ಮೋದಿ ಬದಲಿಗೆ ಬಾಬಿ ಎಂಬ ಅಡ್ಡಹೆಸರನ್ನು ಕೂಗಿದ್ದಾರೆ.
ಭಾಷಣದ ವೇಳೆ ಒಮ್ಮೆಯೂ ಜನ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಜಪಿಸಲಿಲ್ಲ, ಟ್ರಂಪ್ ಕೂಡ ಮೋದಿಯನ್ನು ಪ್ರಸ್ತಾಪಿಸಲಿಲ್ಲ ಎನ್ನಲಾಗಿದೆ,

Continue Reading

Trending