Blog

ರ್‍ಯಾಪರ್‌ ಚಂದನ್ ಶೆಟ್ಟಿ- ನಿವೇದಿತಾ ದಾಂಪತ್ಯದಲ್ಲಿ ಬಿರುಕು!

ಕನ್ನಡ ಕಿರುತೆರೆಯ ಜನಪ್ರಿಯ ಜೋಡಿಗಳಲ್ಲಿ ಒಂದಾದ ರ್‍ಯಾಪರ್‌ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ಚಂದನ್ ಶೆಟ್ಟಿ, ನಿವೇದಿತಾ ಗೌಡ ವಿಚ್ಛೇದನಕ್ಕೆ ಕೋರ್ಟ್​ ಮಂಜೂರು ನೀಡಿದೆ. ಚಂದನ್ ಶೆಟ್ಟಿ- ನಿವೇದಿತಾ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ಪರಸ್ಪರ ಒಪ್ಪಿಗೆ ಮೂಲಕ ವಿಚ್ಛೇದನಕ್ಕೆ ಮುಂದಾಗಿದ್ದು, ನಾಲ್ಕು ವರ್ಷಗಳ ದಾಂಪತ್ಯ ಅಂತ್ಯವಾಗಲಿದೆ. ಈ ಸಂಬಂಧ ಶಾಂತಿನಗರದ ಕೋರ್ಟ್ ನಲ್ಲಿ ನಿನ್ನೆ ಕೇಸ್ ದಾಖಲಿಸಿದ್ದರು. ಪ್ರಕರಣದ ಮೊದಲ ವಿಚಾರಣೆ ಹಿನ್ನೆಲೆಯಲ್ಲಿ ಇಬ್ಬರೂ ಇಂದು 2ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯಕ್ಕೆ ಹಾಜರಾದರು.ಬಿಗ್​ ಬಾಸ್​ ಕನ್ನಡ ಸೀಸನ್​ 5’ ರಿಯಾಲಿಟಿ ಶೋನಲ್ಲಿ ನಿವೇದಿತಾ ಗೌಡ ಹಾಗೂ ಚಂದನ್​ ಶೆಟ್ಟಿ ಅವರು ಸ್ಪರ್ಧಿಸಿದ್ದರು. ಅಲ್ಲಿಯೇ ಅವರಿಗೆ ಮೊದಲ ಬಾರಿಗೆ ಪರಿಚಯ ಆಗಿ, ಸ್ನೇಹ ನಂತರ ಪ್ರೀತಿಯಾಗಿ ಬದಲಾಯಿತು. 2017ರಲ್ಲಿ ಮೈಸೂರಿನ ಯುವ ದಸರಾ ವೇದಿಕೆಯಲ್ಲಿ ನಿವೇದಿತಾಗೆ ಚಂದನ್​ ಶೆಟ್ಟಿ ಅವರು ಪ್ರಪೋಸ್​ ಮಾಡಿದ್ದರು. ಬಳಿಕ ಅವರಿಬ್ಬರು 2020 ಫೆಬ್ರವರಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಹಲವು ಟಿವಿ ರಿಯಾಲಿಟಿ ಶೋಗಳಲ್ಲಿ ಈ ಜೋಡಿ ಕಾಣಿಸಿಕೊಳ್ಳುತಿತ್ತು. ಇನ್ನೂ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಟಿವ್ ಆಗಿರುವ ನಿವೇದಿತಾ ಗೌಡ ಆಗಾಗ ಹೊಸ ಹೊಸ ರೀಲ್ಸ್​ ಹಂಚಿಕೊಳ್ಳುತ್ತಾರೆ. ಕೆಲವು ರೀಲ್ಸ್‌ಗಳನ್ನು ನೋಡಿ ನೆಟ್ಟಿಗರು ಗರಂ ಆಗುತ್ತಿದ್ದರು. ಕಮೆಂಟ್​ಗಳಲ್ಲಿ ಅನೇಕರು ಚಂದನ್​ ಶೆಟ್ಟಿಯ ಹೆಸರನ್ನೂ ಆಗಾಗ ಎಳೆದು ತರುತ್ತಿದ್ದರು.
ಇವರಿಬ್ಬರ ವಿಚ್ಛೇದನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ನಾನಾ ರೀತಿಯ ಸುದ್ದಿ ಹರಿದಾಡುತ್ತಿವೆ. ಕ್ಯೂಟ್ ಕಪಲ್ ಎಂದೇ ಕರೆಯಿಸಿಕೊಂಡಿದ್ದ ಈ ಜೋಡಿ ಏಕಾಏಕಿ ಡಿವೋರ್ಸ್​ ನಿರ್ಧಾರ ಕೈಗೊಂಡಿದ್ಯಾಕೆ? ಕಾರಣವೇನು? ಇವರಲ್ಲಿ ಯಾರ ತಪ್ಪು ಇರಬಹುದು? ಇಬ್ಬರಲ್ಲಿ ಮೊದಲಿಗೆ ಡಿವೋರ್ಸ್ ಬಯಸಿದ್ದು ಯಾರು? ಹೀಗೇ ನಾನಾ ವಿಚಾರಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳು ಶುರುವಾಗಿವೆ. ಚಂದನ್​ ಹಾಗೂ ನಿವೇದಿತಾ ಆಗಲೇ ತಮ್ಮ ವಿಚ್ಛೇದನಕ್ಕೆ ನಿರ್ದಿಷ್ಟ ಕಾರಣ ಏನು ಎನ್ನುವುದನ್ನು ಬಹಿರಂಗಪಡಿಸಿಲ್ಲ.

Trending

Exit mobile version