Blog
ರ್ಯಾಪರ್ ಚಂದನ್ ಶೆಟ್ಟಿ- ನಿವೇದಿತಾ ದಾಂಪತ್ಯದಲ್ಲಿ ಬಿರುಕು!
ಕನ್ನಡ ಕಿರುತೆರೆಯ ಜನಪ್ರಿಯ ಜೋಡಿಗಳಲ್ಲಿ ಒಂದಾದ ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ಚಂದನ್ ಶೆಟ್ಟಿ, ನಿವೇದಿತಾ ಗೌಡ ವಿಚ್ಛೇದನಕ್ಕೆ ಕೋರ್ಟ್ ಮಂಜೂರು ನೀಡಿದೆ. ಚಂದನ್ ಶೆಟ್ಟಿ- ನಿವೇದಿತಾ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ಪರಸ್ಪರ ಒಪ್ಪಿಗೆ ಮೂಲಕ ವಿಚ್ಛೇದನಕ್ಕೆ ಮುಂದಾಗಿದ್ದು, ನಾಲ್ಕು ವರ್ಷಗಳ ದಾಂಪತ್ಯ ಅಂತ್ಯವಾಗಲಿದೆ. ಈ ಸಂಬಂಧ ಶಾಂತಿನಗರದ ಕೋರ್ಟ್ ನಲ್ಲಿ ನಿನ್ನೆ ಕೇಸ್ ದಾಖಲಿಸಿದ್ದರು. ಪ್ರಕರಣದ ಮೊದಲ ವಿಚಾರಣೆ ಹಿನ್ನೆಲೆಯಲ್ಲಿ ಇಬ್ಬರೂ ಇಂದು 2ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯಕ್ಕೆ ಹಾಜರಾದರು.ಬಿಗ್ ಬಾಸ್ ಕನ್ನಡ ಸೀಸನ್ 5’ ರಿಯಾಲಿಟಿ ಶೋನಲ್ಲಿ ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಅವರು ಸ್ಪರ್ಧಿಸಿದ್ದರು. ಅಲ್ಲಿಯೇ ಅವರಿಗೆ ಮೊದಲ ಬಾರಿಗೆ ಪರಿಚಯ ಆಗಿ, ಸ್ನೇಹ ನಂತರ ಪ್ರೀತಿಯಾಗಿ ಬದಲಾಯಿತು. 2017ರಲ್ಲಿ ಮೈಸೂರಿನ ಯುವ ದಸರಾ ವೇದಿಕೆಯಲ್ಲಿ ನಿವೇದಿತಾಗೆ ಚಂದನ್ ಶೆಟ್ಟಿ ಅವರು ಪ್ರಪೋಸ್ ಮಾಡಿದ್ದರು. ಬಳಿಕ ಅವರಿಬ್ಬರು 2020 ಫೆಬ್ರವರಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಹಲವು ಟಿವಿ ರಿಯಾಲಿಟಿ ಶೋಗಳಲ್ಲಿ ಈ ಜೋಡಿ ಕಾಣಿಸಿಕೊಳ್ಳುತಿತ್ತು. ಇನ್ನೂ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಟಿವ್ ಆಗಿರುವ ನಿವೇದಿತಾ ಗೌಡ ಆಗಾಗ ಹೊಸ ಹೊಸ ರೀಲ್ಸ್ ಹಂಚಿಕೊಳ್ಳುತ್ತಾರೆ. ಕೆಲವು ರೀಲ್ಸ್ಗಳನ್ನು ನೋಡಿ ನೆಟ್ಟಿಗರು ಗರಂ ಆಗುತ್ತಿದ್ದರು. ಕಮೆಂಟ್ಗಳಲ್ಲಿ ಅನೇಕರು ಚಂದನ್ ಶೆಟ್ಟಿಯ ಹೆಸರನ್ನೂ ಆಗಾಗ ಎಳೆದು ತರುತ್ತಿದ್ದರು.
ಇವರಿಬ್ಬರ ವಿಚ್ಛೇದನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ನಾನಾ ರೀತಿಯ ಸುದ್ದಿ ಹರಿದಾಡುತ್ತಿವೆ. ಕ್ಯೂಟ್ ಕಪಲ್ ಎಂದೇ ಕರೆಯಿಸಿಕೊಂಡಿದ್ದ ಈ ಜೋಡಿ ಏಕಾಏಕಿ ಡಿವೋರ್ಸ್ ನಿರ್ಧಾರ ಕೈಗೊಂಡಿದ್ಯಾಕೆ? ಕಾರಣವೇನು? ಇವರಲ್ಲಿ ಯಾರ ತಪ್ಪು ಇರಬಹುದು? ಇಬ್ಬರಲ್ಲಿ ಮೊದಲಿಗೆ ಡಿವೋರ್ಸ್ ಬಯಸಿದ್ದು ಯಾರು? ಹೀಗೇ ನಾನಾ ವಿಚಾರಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳು ಶುರುವಾಗಿವೆ. ಚಂದನ್ ಹಾಗೂ ನಿವೇದಿತಾ ಆಗಲೇ ತಮ್ಮ ವಿಚ್ಛೇದನಕ್ಕೆ ನಿರ್ದಿಷ್ಟ ಕಾರಣ ಏನು ಎನ್ನುವುದನ್ನು ಬಹಿರಂಗಪಡಿಸಿಲ್ಲ.