ಬೆಂಗಳೂರು
ಕೆಲವೇ ಕ್ಷಣದಲ್ಲಿ ಜಡ್ಜ್ ಮುಂದೆ ದರ್ಶನ್ ಹಾಜರ್… 10 ದಿನ ಕಸ್ಟಡಿಗೆ?

ಬೆಂಗಳೂರು: ನಟ ದರ್ಶನ್ ಆಪ್ತೆ ಪವಿತ್ರಾಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪದಡಿ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬವವರನ್ನು ಕೊಲೆಗೈದು ಕೇಸ್ ಸಂಬಂಧ ಆರೋಪಿಗಳಾದ ಪವಿತ್ರಾಗೌಡ, ದರ್ಶನ್ ಮತ್ತು ಟೀಂ ಸೇರಿ ಒಟ್ಟ 13 ಜನರನ್ನು ಕೆಲವೇ ಹೊತ್ತಲ್ಲಿ ಪೊಲೀಸರು ಕೋರ್ಟ್ಗೆ ಹಾಜರುಪಡಿಸಲಿದ್ದಾರೆ.
ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಎಲ್ಲಾ ಆರೋಪಿಗಳನ್ನು ಹಾಜರುಪಡಿಸಲು ಪೊಲೀಸರು ಮುಂದಾಗಿದ್ದು, ಆರೋಪಿಗಳ ಹೆಚ್ಚಿನ ವಿಚಾರಣೆಗಾಗಿ 10 ದಿನಗಳ ಕಾಲ ಪೊಲೀಸ್ ಕಸ್ಟಡಿ ಕೇಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಈಗಾಗಲೇ ದರ್ಶನ, ಪವಿತ್ರಾಗೌಡ ಸೇರಿ ಎಲ್ಲಾ ಆರೋಪಿಗಳಿಗೆ ಮೆಡಿಕಲ್ ಟೆಸ್ಟ್ ಮಾಡಲಾಗಿದೆ, ಸಂಜೆ 5-30 ಕ್ಕೆ ಪೊಲೀಸರು ಆರೋಪಿಗಳನ್ನು ಕೋರ್ಟ್ಗೆ ಹಾಜರು ಮಾಡುವ ಸಾಧ್ಯತೆ ಇದೆ.
ಜೂ.8ರಂದು ರೇಣುಕಾಸ್ವಾಮಿಯನ್ನು ಬೆಂಗಳೂರಿನ ಶೆಡ್ನಲ್ಲಿ ಹತ್ಯೆ ಮಾಡಿ ಕಾಮಾಕ್ಷಿಪಾಳ್ಯದ ಮೋರಿಗೆ ಎಸೆಯಲಾಗಿತ್ತು. ಜೂ 9 ರಂದು ಶವ ಪತ್ತೆಯಾಗಿದ್ದು, ಕಾಮಾಕ್ಷಿಪಾಳ್ಯದ ಪೊಲೀಸರು ತನಿಖೆಯಲ್ಲಿ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ, ರೇಣುಕಾಸ್ವಾಮಿ ಹಲ್ಲೆ ಸಂದರ್ಭದಲ್ಲಿ ದರ್ಶನ್ ಸ್ಧಳದಲ್ಲಿಯೇ ಇದ್ದರೂ ಎಂಬ ಆರೋಪವು ಇದೆ.