ಅಪರಾಧ
ಕೊಲೆ ಪ್ರಕರಣದಲ್ಲಿ ನಟ ದರ್ಶನ್ಗೆ ಸಂಕಷ್ಟ ಫಿಕ್ಸ್..! ಜೀವಾವಧಿ ಸೇರಿ ಯಾವ್ಯಾವ ಶಿಕ್ಷೆ..?

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣ ನಟ ದರ್ಶನ್ ಮುಳುವಾಗಿ ಪರಿಣಮಿಸುತ್ತಿದೆ. ಪೊಲೀಸರ ಕಸ್ಟಡಿಯಲ್ಲಿರುವ ದರ್ಶನ್ಗೆ ನರಕದರ್ಶನ ಆಗ್ತಿದೆ. ಈಗಾಗ್ಲೇ ಹತ್ಯೆ ಮಾಡಿದ ಆರೋಪ ಸುತ್ಕೊಂಡ ಪಾಪಕ್ಕೆ ಜೀವಾವಧಿ ನೀಡಬಹುದಾದ IPC 302 ಸೆಕ್ಷನ್ ದಾಖಲಾಗಿದೆ. ಪ್ರಾಥಮಿಕವಾಗಿ 302 ಅಂಡ್ 201 ಅಡಿ ಕೇಸ್ ದಾಖಲಾಗಿದೆ. ಮುಂದೆ 364, 120ಬಿ ಸೆಕ್ಷನ್ಗಳು ಸೇರಿಸೋ ಸಾಧ್ಯತೆಯೂ ಇದೆ..
ಯಾವ್ಯಾವ ಶಿಕ್ಷೆ?
- ಶಿಕ್ಷೆ 01 : IPC 201 ಅಡಿ ಸಾಕ್ಷಿ ತಿರುಚುವುದು ಅಥವಾ ನಾಶ ಯತ್ನಕ್ಕೆ ಜೀವಾವಧಿ
- ಶಿಕ್ಷೆ 02 : IPC 364 ಅಡಿ ಜೀವಾವಧಿ ಅಥವಾ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ
- ಶಿಕ್ಷೆ 03 : IPC 120ಬಿ ಸೇರಿಸಿದ್ರೆ ಜೀವಾವಧಿ ಅಥವಾ 10 ವರ್ಷ ಕಠಿಣ ಸೆರೆಯ ಸಜೆ.
- IPC 201 ಅಡಿ ಸಾಕ್ಷಿ ತಿರುಚುವುದು, ಸಾಕ್ಷ್ಯ ನಾಶಕ್ಕೆ ಯತ್ನಿಸಿರೋದು ಜೀವಾವಧಿ ಸಜೆ ಆಗಬಹುದು.. IPC 364 ಅಡಿ ಜೀವಾವಧಿ ಅಥವಾ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆಗೂ ಅವಕಾಶ ಇದೆ.. IPC 120ಬಿ ಸೇರಿಸಿದ್ರೆ ಜೀವಾವಧಿ ಅಥವಾ10 ವರ್ಷ ಕಠಿಣ ಸೆರೆವಾಸ ಆಗಲಿದೆ. ಇದು ಸದ್ಯ ದರ್ಶನ್ ಆ್ಯಂಡ್ ಗ್ಯಾಂಗ್ ವಿರುದ್ಧ ದಾಖಲಾದ ಮತ್ತು ದಾಖಲಾಗಲಿರುವ ಸೆಕ್ಷನ್ಗಳು.. ಹಾಗಾದ್ರೆ, ದರ್ಶನ್ ವಿರುದ್ಧ ಅಷ್ಟು ಬಲವಾದ ಸಾಕ್ಷ್ಯಗಳು ಸಿಕ್ಕಿ ಬಿಟ್ವಾ?
- ದರ್ಶನ್ ಬಗ್ಗೆ ಇರುವ ಸಾಕ್ಷಿ
- ಸಾಕ್ಷಿ 1 : ಶೆಡ್ಗೆ ದರ್ಶನ್ ಬಂದು ಹೋಗಿರುವ ಸಿಸಿಟಿವಿ ದೃಶ್ಯಗಳು
- ಸಾಕ್ಷಿ 2 : ದರ್ಶನ್ನ CDR ರಿಪೋರ್ಟ್ ಸಹ ಸ್ಪಷ್ಟವಾಗಿ ಹೋಲಿಕೆ
- ಸಾಕ್ಷಿ 3 : ದರ್ಶನ್ಗೆ ರೇಣುಕಾಸ್ವಾಮಿ ಕರೆತಂದ ಬಗ್ಗೆ ಫೋನ್ ಕಾಲ್
- ಸಾಕ್ಷಿ 4 : ಆರೋಪಿ ವಿನಯ್ ಕಾಲ್ ಮಾಡಿ ಮಾಹಿತಿ ಕೊಟ್ಟ ಡಿಟೇಲ್ಸ್
- ಸಾಕ್ಷಿ 5 : ಆದಾದ ಬಳಿಕ ಪವಿತ್ರಗೌಡಗೆ ಕರೆ ಮಾಡಿರೋದು ಸಹ ಪತ್ತೆ
- ಸಾಕ್ಷಿ 6 : ಪವಿತ್ರಾ ಮನೆ ಬಳಿ ಹೋಗಿ ದರ್ಶನ್ ಕರೆತಂದ ಸಾಕ್ಷಿ ಲಭ್ಯ
- ಸಾಕ್ಷಿ 7 : ಈ ಬಗ್ಗೆ ಸಿಡಿಆರ್ ಮತ್ತು ಸಿಸಿಟಿವಿ ಸಾಕ್ಷಿಗಳು ಪತ್ತೆಯಾಗಿವೆ
- ಸಾಕ್ಷಿ 8 : ಮಹಜರ್ ವೇಳೆ ಪಂಚರ ಮುಂದೆ ದರ್ಶನ್ ಒಪ್ಪಿದ ಹೇಳಿಕೆ
- ಇವು ಟೆಕ್ನಿಕಲ್ ಎವಿಡೆನ್ಸ್.. ಇದಷ್ಟೇ ಅಲ್ಲ.. ಕೊಲೆಯಲ್ಲಿ ಭಾಗಿಯಾದ ಬಗ್ಗೆಯೂ ಸಾಕ್ಷಿಗಳು ಸಿಕ್ಕಿವೆ.. ಅವು ಕೂಡ ದರ್ಶನ್ ವಿರುದ್ಧವೇ ಸಾಕ್ಷಿ ನುಡಿತಿವೆ.
- ದರ್ಶನ್ ಕೊಲೆಯಲ್ಲಿ ಭಾಗಿಗೆ ಸಾಕ್ಷಿ
ಸ್ವತಃ ದರ್ಶನ್ ಬಗ್ಗೆ ಆತನ ಅಪ್ತ ವಿನಯ್ ಕೊಟ್ಟ ಹೇಳಿಕೆ ಮುಳುವಾಗಿದೆ. ದರ್ಶನ್ ಹೊಡೆದಾಗಲೇ ರೇಣುಕಾ ಸತ್ತಿದ್ದು ಅಂತ ವಿನಯ್ ಹೇಳಿಕೆ ನೀಡಿದ್ದಾನೆ. ಅಲ್ಲದೆ, ದರ್ಶನ್ ಹಲ್ಲೆ ಮಾಡಿರೋ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಲ್ಲದೇ ಆರೋಪಿ ದೀಪಕ್ ಹಲ್ಲೆ ಮಾಡಿದ ವಿಡಿಯೋ ರೆಕಾರ್ಡ್ ಮಾಡ್ಕೊಂಡಿದ್ದಾನೆ. ಸದ್ಯ ಇದೇ ದೀಪಕ್ನಿಂದ 164 ಹೇಳಿಕೆ ದಾಖಲಿಸಲು ಪೊಲೀಸರು ಮುಂದಾಗಿದ್ದಾರೆ.. ಮಹಜರ್ ವೇಳೆ ಆತನ ಎತ್ತಿ ಎಸೆದ ಬಗ್ಗೆ ಹತ್ಯೆ ಆರೋಪಿ ದರ್ಶನ್ ಒಪ್ಪಿದ್ದು, ಟೆಂಪೋ ಟ್ರಾವೆಲ್ಲರ್ಗೆ ರೇಣುಕಾ ತಲೆ ಬಡಿದ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ.. ಅಲ್ಲದೇ ಶೆಡ್ನಲ್ಲಿ ಮೃತನ ಬಯೋಲಾಜಿಕಲ್ ಎವಿಡೆನ್ಸ್ ಸಿಕ್ಕಿವೆ.. ಮೃತನ ರಕ್ತ, ಫಿಂಗರ್ ಪ್ರಿಂಟ್, ಕೂದಲು ಮತ್ತು ಚರ್ಮದ ತುಂಡು ಲಭ್ಯ ಆಗಿವೆ.ಈ ಮೂಲಕ ರೇಣುಕಾಸ್ವಾಮಿ ಶೆಡ್ನಲ್ಲೇ ಸತ್ತಿದ್ದು ಕನ್ಫರ್ಮ್ ಆಗಿದೆ.. ಜತೆಗೆ ಹಲ್ಲೆ ಮಾಡಿದ ವೆಪನ್ಸ್ಗಳು ಸೀಜ್ ಮಾಡ್ಲಾಗಿದೆ. - ಹಲ್ಲೆ ಮಾಡಿದ ವೆಫನ್ಸ್ ಸೀಜ್
- ರಿಪೀಸ್, ಸ್ಟಿಕ್ ಮತ್ತು ಹಗ್ಗದಿಂದ ಹಲ್ಲೆ ಮಾಡಲಾಗಿತ್ತು.. ಸದ್ಯ ಆ ರಿಪೀಸ್, ಸ್ಟಿಕ್ ಮತ್ತು ಹಗ್ಗವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.. ರೇಣುಕಾ ಮೃತದೇಹದಲ್ಲಿ ದರ್ಶನ್ ಪಿಂಗರ್ ಪ್ರಿಂಟ್ ಸಹ ಪತ್ತೆ ಆಗಿದೆ.. ಅಲ್ಲದೇ ವೆಪನ್ ಮೇಲೂ ದರ್ಶನ್ ಪಿಂಗರ್ ಪ್ರಿಂಟ್ ಇದೆ.. ಇನ್ನು, ಟೆಂಪೋ ಟ್ರಾವೆಲ್ಲರ್, ಕೃತ್ಯಕ್ಕೆ ಬಳಸಿದ ವಾಹನಗಳನ್ನ ಸೀಜ್ ಮಾಡ್ಲಾಗಿದೆ. ಈ ಪ್ರಕರಣದಲ್ಲಿ ತುಂಬಾ ಇಂಪಾರ್ಟೆಂಟ್ ಅಂದ್ರೆ ಮರಣೊತ್ತರ ಪರೀಕ್ಷೆ.. ಈ ಪರೀಕ್ಷೆಯಲ್ಲಿ ಅತ್ಯಂತ ಕ್ರೂರವಾಗಿ ಹತ್ಯೆ ಮಾಡ್ಲಾಗಿದೆ ಅಂತ ವರದಿ ನೀಡ್ಲಾಗಿದೆ. ಕುತ್ತಿಗೆ, ಮೂಗು ಕಟ್ ಆಗಿದೆ, ತಲೆ ಒಡೆದಿದೆ. ದೇಹಕ್ಕೆ ಬರೆ ಹಾಕಿರೋ ಬಗ್ಗೆಯೂ ಗೊತ್ತಾಗಿದೆ. ಪೋಸ್ಟ್ಮಾರ್ಟ್ಂ ರಿಪೋರ್ಟ್ನಲ್ಲಿ 15ಕ್ಕೂ ಹೆಚ್ಚು ಕಡೆ ಗಾಯಗಳು ಪತ್ತೆ ಆಗಿವೆ. ಸದ್ಯ ದರ್ಶನ್ನ ಅಟ್ಟಹಾಸ, ಜೈಲು ದರ್ಶನವಾಗಿದೆ.
ಅಪರಾಧ
ಎಸ್ಪಿಗೆ ರಿಲೀವ್, ನಿಂಗಪ್ಪನ ಮೊಬೈಲ್ನಲ್ಲಿ ರಹಸ್ಯ?

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯ ಮೇಲೆ ಭ್ರಷ್ಟಾಚಾರದ ಆರೋಪದ ಕಳಂಕವೊಡ್ಡಿದೆ. ಸರಕಾರಿ ಅಧಿಕಾರಿಗಳಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ ಆರೋಪದಡಿ ಮಾಜಿ ಹೆಡ್ ಕಾನ್ಸ್ಟೆಬಲ್ ನಿಂಗಪ್ಪನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಆದರೆ, ಈ ಪ್ರಕರಣದಲ್ಲಿ ಲೋಕಾಯುಕ್ತದ ಕೆಲ ಪೊಲೀಸರೂ ಭಾಗಿಯಾಗಿರುವ ಆರೋಪ ಗಂಭೀರ ಆತಂಕವನ್ನುಂಟುಮಾಡಿದೆ. ಈ ಬೆಳವಣಿಗೆಯ ನಡುವೆ ಲೋಕಾಯುಕ್ತ ಬೆಂಗಳೂರು ಘಟಕದ ಎಸ್ಪಿ ಮಹದೇವ ಶ್ರೀನಾಥ ಜೋಶಿ ಅವರನ್ನು ಮಂಗಳವಾರ ಸೇವೆಯಿಂದ ರಿಲೀವ್ ಮಾಡಲಾಗಿದೆ. ಈ ಘಟನೆಯಿಂದ ಲೋಕಾಯುಕ್ತ ಸಂಸ್ಥೆಯ ವಿಶ್ವಾಸಾರ್ಹತೆಯೇ ಪ್ರಶ್ನಾರ್ಹವಾಗಿದೆ.
ಹೈಕೋರ್ಟ್ ಆದೇಶದಂತೆ ಮೂರು ವರ್ಷಗಳ ಹಿಂದೆ ಎಫ್ಐಆರ್ ದಾಖಲಿಸುವ ಅಧಿಕಾರ ಪಡೆದ ಲೋಕಾಯುಕ್ತ ಪೊಲೀಸ್ ವಿಭಾಗವು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಗುರಿಯನ್ನು ಹೊಂದಿತ್ತು. ಆದರೆ, ಈಗ ಆ ಸಂಸ್ಥೆಯೊಳಗಿನ ಕೆಲವರು ಭ್ರಷ್ಟಾಚಾರದಲ್ಲಿ ತೊಡಗಿರುವ ಆರೋಪ ಕೇಳಿಬಂದಿದೆ. ಬಿಡಿಎ, ಅಬಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಲೋಕಾಯುಕ್ತ ದಾಳಿಯ ಬೆದರಿಕೆ ಹಾಕಿ ಹಣ ಸುಲಿಗೆ ಮಾಡುತ್ತಿದ್ದ ಆರೋಪದಡಿ ನಿಂಗಪ್ಪನನ್ನು ಎಸ್ಪಿ ಕೋನ ವಂಶಿಕೃಷ್ಣ ನೇತೃತ್ವದ ತಂಡ ಕೆಲ ದಿನಗಳ ಹಿಂದೆ ಬಂಧಿಸಿತ್ತು.
ಪೊಲೀಸ್ ಇಲಾಖೆಯಲ್ಲಿ ಹೆಡ್ ಕಾನ್ಸ್ಟೆಬಲ್ ಆಗಿದ್ದ ನಿಂಗಪ್ಪ ಕೆಲ ವರ್ಷಗಳ ಹಿಂದೆ ಸೇವೆಯಿಂದ ವಜಾಗೊಂಡಿದ್ದ. ಬಳಿಕ ಲೋಕಾಯುಕ್ತದ ಹೆಸರಿನಲ್ಲಿ ಸರಕಾರಿ ಅಧಿಕಾರಿಗಳಿಗೆ ಬೆದರಿಕೆ ಹಾಕಿ ಹಣ ಸುಲಿಗೆಯನ್ನೇ ವೃತ್ತಿಯಾಗಿ ಮಾಡಿಕೊಂಡಿದ್ದ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಠಾಣೆಗಳಲ್ಲಿ ಆತನ ವಿರುದ್ಧ ಪ್ರಕರಣಗಳು ದಾಖಲಾಗಿದ್ದು, ಹಲವು ಬಾರಿ ಜೈಲು ಸೇರಿದ್ದ,
ನಿಂಗಪ್ಪನ ಕೃತ್ಯದಲ್ಲಿ ಲೋಕಾಯುಕ್ತದ ಕೆಲವು ಪೊಲೀಸರು ಭಾಗಿಯಾಗಿದ್ದರೆ, ಸುಲಿಗೆಯ ಹಣದಲ್ಲಿ ಪಾಲು ಪಡೆಯುತ್ತಿದ್ದರೆಂಬ ಶಂಕೆಯಿದೆ. ನಿಂಗಪ್ಪನ ಮೊಬೈಲ್ನಿಂದ ದೊರೆತ ಸಾಕ್ಷ್ಯಗಳನ್ನು ಆಧರಿಸಿ, ಆತ ಯಾರಿಗೆ ಹಣ ತಲುಪಿಸಿದ್ದ, ಯಾರ ಜೊತೆ ಸಂಪರ್ಕದಲ್ಲಿದ್ದ ಎಂಬುದನ್ನು ತನಿಖೆಯ ಮೂಲಕ ಕಂಡುಹಿಡಿಯಲಾಗುತ್ತಿದೆ. ಈ ಪ್ರಕರಣದಲ್ಲಿ ಎಸ್ಪಿ ಮಹದೇವ ಶ್ರೀನಾಥ ಜೋಶಿಯವರ ರಿಲೀವ್ಗೆ ನಿಖರ ಕಾರಣ ತಿಳಿದಿಲ್ಲವಾದರೂ, ಈ ಬೆಳವಣಿಗೆ ಲೋಕಾಯುಕ್ತದೊಳಗಿನ ಆಂತರಿಕ ಸಮಸ್ಯೆಗಳನ್ನು ಎತ್ತಿ ತೋರಿಸಿದೆ.
ಈ ಘಟನೆಯಿಂದ ಲೋಕಾಯುಕ್ತ ಸಂಸ್ಥೆಯ ಕಾರ್ಯವೈಖರಿಯ ಬಗ್ಗೆ ಜನರಲ್ಲಿ ಅನುಮಾನ ಮೂಡಿದೆ. ಭ್ರಷ್ಟಾಚಾರದ ವಿರುದ್ಧ ಹೋರಾಡಬೇಕಾದ ಸಂಸ್ಥೆಯೇ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವುದು ಆಘಾತಕಾರಿಯಾಗಿದೆ. ಈ ಪ್ರಕರಣದ ತನಿಖೆಯಿಂದ ಸತ್ಯ ಹೊರಬಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬುದು ಜನರ ಆಗ್ರಹವಾಗಿದೆ.
ಅಪರಾಧ
ಮಹಿಳಾ ಪೇದೆಗೆ ಬೂಟುಗಾಲಿನಿಂದ ಒದ್ದ ಹೆಡ್ ಕಾನ್ಸ್ಟೇಬಲ್!

ಬೆಂಗಳೂರು: ಪೊಲೀಸ್ ಠಾಣೆಯೊಂದರಲ್ಲೇ ಸಿಬ್ಬಂದಿಗಳು ಹೊಡೆದಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ನಡೆದಿದೆ, ಠಾಣೆಯ ಹೆಡ್ ಕಾನ್ಸ್ಟೇಬಲ್ ಮಹಿಳಾ ಪೇದೆಗೆ ಬೂಟುಗಾಲಿನಿಂದ ಒದ್ದ ಆರೋಪ ಹೊರಿಸಲಾಗಿದ್ದು ಈ ಬಗ್ಗೆ ದೂರು ದಾಖಲಾಗಿದೆ,
ಠಾಣೆಯಲ್ಲಿ ಕೆಲಸ ಮಾಡ್ತಿದ್ದ ಮಹಿಳಾ ಪೇದೆಗೆ ಅಲ್ಲೇ ಹೆಡ್ ಕಾನ್ಸ್ಟೇಬಲ್ ಆಗಿರುವ ಬಿಜಿ ಗೋವಿಂದರಾಜು ಎಂಬುವವರು ಬೂಟುಗಾಲಿನಲ್ಲಿ ಒದ್ದಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ, ಜೂನ್ 10 ರಂದು ಈ ಘಟನೆ ನಡೆದಿದೆ, ರಾತ್ರಿ ಕಂಪ್ಯೂಟರ್ ವಿಭಾಗದಲ್ಲಿ ಮಹಿಳಾ ಪೇದೆ ರೇಣುಕಾ ಕರ್ತವ್ಯ ನಿರ್ವಹಿಸುತ್ತಿದ್ದರು,
ಈ ವೇಳೆ ರೇಣುಕಾ ಮನೆ ಬಿಟ್ಟು ಹೋಗಿ ಠಾಣೆ ಸೇರಿದ್ದ ಇಬ್ಬರು ಹೆಣ್ಣುಮಕ್ಕಳಿಗೆ ಊಟ ಮಾಡಿಸುತ್ತಿದ್ದರು, ಆಗ ಹೆಡ್ ಕಾನ್ಸ್ಟೇಬಲ್ ಗೋವಿಂದರಾಜು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ, ಮಾತ್ರವಲ್ಲದೇ ಮೂರ್ನಾಲ್ಕು ಬಾರಿ ಬೂಟುಗಾಲಿನಿಂದ ಒದ್ದಿದ್ದಾರೆ ಎಂದು ಆರೋಪಸಲಾಗಿದೆ,
ಕಾನ್ಸ್ಟೇಬಲ್ ರೇಣುಕಾ ದೂರು ಆಧರಿಸಿ ಹೆಡ್ ಕಾನ್ಸಟೇಬಲ್ ಗೋವಿಂದರಾಜು ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,
ಅಪರಾಧ
ವಿರಾಟ್ ಕೊಹ್ಲಿ ಮಾಲೀಕತ್ವದ ‘One8 Commune’ ಪಬ್ ವಿರುದ್ಧ FIR ದಾಖಲು

ಬೆಂಗಳೂರು: ಪ್ರತ್ಯೇಕ ಸ್ಥಳವಿಲ್ಲದೆ ಧೂಮಪಾನಕ್ಕೆ ಅವಕಾಶ ನೀಡಿ, ನಿಯಮ ಉಲ್ಲಂಘನೆ ಮಾಡಿದ ಆರೋಪ ಹಿನ್ನೆಲೆಯಲ್ಲಿ ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ‘ಒನ್ 8 ಕಮ್ಯೂನ್’ ಪಬ್ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ಮೇ 29ರಂದು ಕಬ್ಬನ್ ಪಾರ್ಕ್ ಪೊಲೀಸರು ಪಬ್ ಮೇಲೆ ದಾಳಿ ಮಾಡಿ, ಸ್ವಯಂಪ್ರೇರಿತವಾಗಿ ಎನ್ಸಿಆರ್ ದಾಖಲಿಸಿಕೊಂಡಿದ್ದರು. ಇದೀಗ ನ್ಯಾಯಾಲಯದ ಅನುಮತಿ ಪಡೆದು, ಕೊಟ್ಪಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದಕ್ಕೂ ಮುನ್ನ 2024ರ ಜುಲೈನಲ್ಲಿ ಇದೇ ಬಾರ್ ಮೇಲೆ ಅವಧಿ ಮೀರಿ ಪಬ್ ನಡೆಸುತ್ತಿದ್ದರು ಎಂದು ದೂರು ದಾಖಲಾಗಿತ್ತು. ಜು.6 ರಂದು ರಾತ್ರಿ 1:20ರವರೆಗೆ ಪಬ್ ತೆರೆದಿತ್ತು. ರಾತ್ರಿ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಪಬ್ ಓಪನ್ ಇರುವುದಾಗಿ ಮಾಹಿತಿ ಇತ್ತು. ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಅವಧಿ ಮುಗಿದಿದ್ದರೂ ಗ್ರಾಹಕರು ಇದ್ದರು. ಹೀಗಾಗಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಇದೀಗ ಪ್ರತ್ಯೇಕ ಸ್ಥಳ ಮೀಸಲಿಡದೆ ಧೂಮಪಾನಕ್ಕೆ ಅವಕಾಶ ನೀಡಿದ್ದಕ್ಕಾಗಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಮ್ಯಾನೇಜರ್, ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
-
ಬಿಬಿಎಂಪಿ1 month ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು1 year ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು7 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ