ಅಪರಾಧ

ಕೊಲೆ ಪ್ರಕರಣದಲ್ಲಿ ನಟ ದರ್ಶನ್​ಗೆ ಸಂಕಷ್ಟ ಫಿಕ್ಸ್..! ಜೀವಾವಧಿ ಸೇರಿ ಯಾವ್ಯಾವ ಶಿಕ್ಷೆ..?

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣ ನಟ ದರ್ಶನ್​​ ಮುಳುವಾಗಿ ಪರಿಣಮಿಸುತ್ತಿದೆ. ಪೊಲೀಸರ ಕಸ್ಟಡಿಯಲ್ಲಿರುವ ದರ್ಶನ್​​ಗೆ ನರಕದರ್ಶನ ಆಗ್ತಿದೆ. ಈಗಾಗ್ಲೇ ಹತ್ಯೆ ಮಾಡಿದ ಆರೋಪ ಸುತ್ಕೊಂಡ ಪಾಪಕ್ಕೆ ಜೀವಾವಧಿ ನೀಡಬಹುದಾದ IPC 302 ಸೆಕ್ಷನ್ ದಾಖಲಾಗಿದೆ. ಪ್ರಾಥಮಿಕವಾಗಿ 302 ಅಂಡ್ 201 ಅಡಿ ಕೇಸ್ ದಾಖಲಾಗಿದೆ. ಮುಂದೆ 364, 120ಬಿ ಸೆಕ್ಷನ್​​ಗಳು ಸೇರಿಸೋ ಸಾಧ್ಯತೆಯೂ ಇದೆ..

ಯಾವ್ಯಾವ ಶಿಕ್ಷೆ?

  • ಶಿಕ್ಷೆ 01 : IPC 201 ಅಡಿ ಸಾಕ್ಷಿ ತಿರುಚುವುದು ಅಥವಾ ನಾಶ ಯತ್ನಕ್ಕೆ ಜೀವಾವಧಿ
  • ಶಿಕ್ಷೆ 02 : IPC 364 ಅಡಿ ಜೀವಾವಧಿ ಅಥವಾ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ
  • ಶಿಕ್ಷೆ 03 : IPC 120ಬಿ ಸೇರಿಸಿದ್ರೆ ಜೀವಾವಧಿ ಅಥವಾ 10 ವರ್ಷ ಕಠಿಣ ಸೆರೆಯ ಸಜೆ.
  • IPC 201 ಅಡಿ ಸಾಕ್ಷಿ ತಿರುಚುವುದು, ಸಾಕ್ಷ್ಯ ನಾಶಕ್ಕೆ ಯತ್ನಿಸಿರೋದು ಜೀವಾವಧಿ ಸಜೆ ಆಗಬಹುದು.. IPC 364 ಅಡಿ ಜೀವಾವಧಿ ಅಥವಾ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆಗೂ ಅವಕಾಶ ಇದೆ.. IPC 120ಬಿ ಸೇರಿಸಿದ್ರೆ ಜೀವಾವಧಿ ಅಥವಾ10 ವರ್ಷ ಕಠಿಣ ಸೆರೆವಾಸ ಆಗಲಿದೆ. ಇದು ಸದ್ಯ ದರ್ಶನ್​​ ಆ್ಯಂಡ್​ ಗ್ಯಾಂಗ್​ ವಿರುದ್ಧ ದಾಖಲಾದ ಮತ್ತು ದಾಖಲಾಗಲಿರುವ ಸೆಕ್ಷನ್​​ಗಳು.. ಹಾಗಾದ್ರೆ, ದರ್ಶನ್​ ವಿರುದ್ಧ ಅಷ್ಟು ಬಲವಾದ ಸಾಕ್ಷ್ಯಗಳು ಸಿಕ್ಕಿ ಬಿಟ್ವಾ?
  • ದರ್ಶನ್ ಬಗ್ಗೆ ಇರುವ ಸಾಕ್ಷಿ
  • ಸಾಕ್ಷಿ 1 : ಶೆಡ್​ಗೆ ದರ್ಶನ್ ಬಂದು ಹೋಗಿರುವ ಸಿಸಿಟಿವಿ ದೃಶ್ಯಗಳು
  • ಸಾಕ್ಷಿ 2 : ದರ್ಶನ್​ನ CDR ರಿಪೋರ್ಟ್ ಸಹ ಸ್ಪಷ್ಟವಾಗಿ ಹೋಲಿಕೆ
  • ಸಾಕ್ಷಿ 3 : ದರ್ಶನ್​ಗೆ ರೇಣುಕಾಸ್ವಾಮಿ ಕರೆತಂದ ಬಗ್ಗೆ ಫೋನ್​​​ ಕಾಲ್
  • ಸಾಕ್ಷಿ 4 : ಆರೋಪಿ ವಿನಯ್​ ಕಾಲ್ ಮಾಡಿ ಮಾಹಿತಿ ಕೊಟ್ಟ ಡಿಟೇಲ್ಸ್
  • ಸಾಕ್ಷಿ 5 : ಆದಾದ ಬಳಿಕ ಪವಿತ್ರಗೌಡಗೆ ಕರೆ ಮಾಡಿರೋದು ಸಹ ಪತ್ತೆ
  • ಸಾಕ್ಷಿ 6 : ಪವಿತ್ರಾ ಮನೆ ಬಳಿ ಹೋಗಿ ದರ್ಶನ್​ ಕರೆತಂದ ಸಾಕ್ಷಿ ಲಭ್ಯ
  • ಸಾಕ್ಷಿ 7 : ಈ ಬಗ್ಗೆ ಸಿಡಿಆರ್ ಮತ್ತು ಸಿಸಿಟಿವಿ ಸಾಕ್ಷಿಗಳು ಪತ್ತೆಯಾಗಿವೆ
  • ಸಾಕ್ಷಿ 8 : ಮಹಜರ್ ವೇಳೆ ಪಂಚರ ಮುಂದೆ ದರ್ಶನ್ ಒಪ್ಪಿದ ಹೇಳಿಕೆ
  • ಇವು ಟೆಕ್ನಿಕಲ್​ ಎವಿಡೆನ್ಸ್​.. ಇದಷ್ಟೇ ಅಲ್ಲ.. ಕೊಲೆಯಲ್ಲಿ ಭಾಗಿಯಾದ ಬಗ್ಗೆಯೂ ಸಾಕ್ಷಿಗಳು ಸಿಕ್ಕಿವೆ.. ಅವು ಕೂಡ ದರ್ಶನ್​​ ವಿರುದ್ಧವೇ ಸಾಕ್ಷಿ ನುಡಿತಿವೆ.
  • ದರ್ಶನ್ ಕೊಲೆಯಲ್ಲಿ ಭಾಗಿಗೆ ಸಾಕ್ಷಿ
    ಸ್ವತಃ ದರ್ಶನ್ ಬಗ್ಗೆ ಆತನ ಅಪ್ತ ವಿನಯ್ ಕೊಟ್ಟ ಹೇಳಿಕೆ ಮುಳುವಾಗಿದೆ. ದರ್ಶನ್ ಹೊಡೆದಾಗಲೇ ರೇಣುಕಾ ಸತ್ತಿದ್ದು ಅಂತ ವಿನಯ್​ ಹೇಳಿಕೆ ನೀಡಿದ್ದಾನೆ. ಅಲ್ಲದೆ, ದರ್ಶನ್ ಹಲ್ಲೆ ಮಾಡಿರೋ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಲ್ಲದೇ ಆರೋಪಿ ದೀಪಕ್​​ ಹಲ್ಲೆ ಮಾಡಿದ ವಿಡಿಯೋ ರೆಕಾರ್ಡ್ ಮಾಡ್ಕೊಂಡಿದ್ದಾನೆ. ಸದ್ಯ ಇದೇ ದೀಪಕ್​​ನಿಂದ 164 ಹೇಳಿಕೆ ದಾಖಲಿಸಲು ಪೊಲೀಸರು ಮುಂದಾಗಿದ್ದಾರೆ.. ಮಹಜರ್ ವೇಳೆ ಆತನ ಎತ್ತಿ ಎಸೆದ ಬಗ್ಗೆ ಹತ್ಯೆ ಆರೋಪಿ ದರ್ಶನ್ ಒಪ್ಪಿದ್ದು, ಟೆಂಪೋ ಟ್ರಾವೆಲ್ಲರ್​ಗೆ ರೇಣುಕಾ ತಲೆ ಬಡಿದ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ.. ಅಲ್ಲದೇ ಶೆಡ್​ನಲ್ಲಿ ಮೃತನ ಬಯೋಲಾಜಿಕಲ್ ಎವಿಡೆನ್ಸ್ ಸಿಕ್ಕಿವೆ.. ಮೃತನ ರಕ್ತ, ಫಿಂಗರ್ ಪ್ರಿಂಟ್, ಕೂದಲು ಮತ್ತು ಚರ್ಮದ ತುಂಡು ಲಭ್ಯ ಆಗಿವೆ.ಈ ಮೂಲಕ ರೇಣುಕಾಸ್ವಾಮಿ ಶೆಡ್​ನಲ್ಲೇ ಸತ್ತಿದ್ದು ಕನ್ಫರ್ಮ್ ಆಗಿದೆ.. ಜತೆಗೆ ಹಲ್ಲೆ ಮಾಡಿದ ವೆಪನ್ಸ್​ಗಳು ಸೀಜ್​​ ಮಾಡ್ಲಾಗಿದೆ.
  • ಹಲ್ಲೆ ಮಾಡಿದ ವೆಫನ್ಸ್ ಸೀಜ್
  • ರಿಪೀಸ್, ಸ್ಟಿಕ್ ಮತ್ತು ಹಗ್ಗದಿಂದ ಹಲ್ಲೆ ಮಾಡಲಾಗಿತ್ತು.. ಸದ್ಯ ಆ ರಿಪೀಸ್, ಸ್ಟಿಕ್ ಮತ್ತು ಹಗ್ಗವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.. ರೇಣುಕಾ ಮೃತದೇಹದಲ್ಲಿ ದರ್ಶನ್ ಪಿಂಗರ್ ಪ್ರಿಂಟ್ ಸಹ ಪತ್ತೆ ಆಗಿದೆ.. ಅಲ್ಲದೇ ವೆಪನ್​ ಮೇಲೂ ದರ್ಶನ್ ಪಿಂಗರ್ ಪ್ರಿಂಟ್ ಇದೆ.. ಇನ್ನು, ಟೆಂಪೋ ಟ್ರಾವೆಲ್ಲರ್, ಕೃತ್ಯಕ್ಕೆ ಬಳಸಿದ ವಾಹನಗಳನ್ನ ಸೀಜ್ ಮಾಡ್ಲಾಗಿದೆ. ಈ ಪ್ರಕರಣದಲ್ಲಿ ತುಂಬಾ ಇಂಪಾರ್ಟೆಂಟ್​​ ಅಂದ್ರೆ ಮರಣೊತ್ತರ ಪರೀಕ್ಷೆ.. ಈ ಪರೀಕ್ಷೆಯಲ್ಲಿ ಅತ್ಯಂತ ಕ್ರೂರವಾಗಿ ಹತ್ಯೆ ಮಾಡ್ಲಾಗಿದೆ ಅಂತ ವರದಿ​​ ನೀಡ್ಲಾಗಿದೆ. ಕುತ್ತಿಗೆ, ಮೂಗು ಕಟ್ ಆಗಿದೆ, ತಲೆ ಒಡೆದಿದೆ. ದೇಹಕ್ಕೆ ಬರೆ ಹಾಕಿರೋ ಬಗ್ಗೆಯೂ ಗೊತ್ತಾಗಿದೆ. ಪೋಸ್ಟ್​​​ಮಾರ್ಟ್​ಂ ರಿಪೋರ್ಟ್​​ನಲ್ಲಿ 15ಕ್ಕೂ ಹೆಚ್ಚು ಕಡೆ ಗಾಯಗಳು ಪತ್ತೆ ಆಗಿವೆ. ಸದ್ಯ ದರ್ಶನ್​​​ನ ಅಟ್ಟಹಾಸ, ಜೈಲು ದರ್ಶನವಾಗಿದೆ.

Trending

Exit mobile version