Connect with us

ಅಪರಾಧ

ಪವಿತ್ರಗೌಡ ಇನ್​ಸ್ಟಾದಿಂದ Phone Number ಶೇರ್ ಆಗಿದ್ದೇಗೆ.. ಮೊದಲ ಮೆಸೇಜ್ ಏನಾಗಿತ್ತು..

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ತೀವ್ರಗೊಂಡಿದೆ. ನಿನ್ನೆಯವರೆಗೆ ಒಟ್ಟು 19 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಒಂದೊಂದೇ ಮಾಹಿತಿಗಳು ಹೊರ ಬರುತ್ತಿವೆ.

ಅಶ್ಲೀಲ ಮೆಸೇಜ್ ಶುರುವಾಗಿದ್ದು ಯಾವಾಗ..?
ತನಿಖೆಯಿಂದ ತಿಳಿದುಬಂದಿದೆ ಎನ್ನಲಾಗಿರುವ ಮಾಹಿತಿಗಳ ಪ್ರಕಾರ.. ಫೆಬ್ರವರಿ ತಿಂಗಳಲ್ಲಿ ಪವಿತ್ರ ಗೌಡಗೆ ರೇಣುಕಾಸ್ವಾಮಿ ಕಡೆಯಿಂದ ಮೊದಲ ಮೆಸೇಜ್ ಬರುತ್ತದೆ. ರೆಡ್ಡಿ ಅನ್ನೋ Instagram ಅಕೌಂಟ್​ನಿಂದ ಮೊದಲ ಸಂದೇಶ ಬರುತ್ತದೆ. ಪವಿತ್ರ ಗೌಡಗೆ ಮೆಸೇಜ್​​ನಲ್ಲೇ ರೇಣುಕಾಸ್ವಾಮಿ ಬೈಯ್ಯುತ್ತಿದ್ದ. ಈ ವಿಚಾರವನ್ನು ದರ್ಶನ್ ಮನೆಯಲ್ಲಿ ಕೆಲಸ ಮಾಡ್ತಿದ್ದ ಪವನ್​​ಗೆ ಪವಿತ್ರಾ ತಿಳಿಸಿದ್ದಳು. ಪವನ್ ಜೊತೆಗೆ ಮಾತನಾಡಿದ ಬಳಿಕ ಇಬ್ಬರು ಸೇರಿ ಒಂದು ಪ್ಲಾನ್ ಮಾಡಿದ್ದರು. ನೀನು Instagramನಲ್ಲಿ ಮೆಸೇಜ್ ಮಾಡ್ಬೇಡ. ನಂಗೂ ನಿನ್ನ ಜೊತೆ ಮಾತನಾಡಬೇಕು ಅನಿಸುತ್ತಿದೆ. ಒಂದು ವಾಟ್ಸ್​​ಆ್ಯಪ್ ನಂಬರ್ ಕೊಡ್ತೀನಿ ಎಂದು ಪವಿತ್ರ ಹೆಸರಲ್ಲಿ ಮೆಸೇಜ್ ಹೋಗಿದೆ ಎನ್ನಲಾಗಿದೆ.

ಕೊನೆಗೆ ಪವನ್ ಅವರ ನಂಬರ್​ ಅನ್ನು ರೇಣುಕಾಸ್ವಾಮಿಗೆ ನೀಡಲಾಗಿತ್ತು. ಜೂನ್ ಆರಂಭದಿಂದ ರೇಣುಕಾಸ್ವಾಮಿ ಫೋನ್​ಗೆ ಚಾಟಿಂಗ್ ಮಾಡ್ತಿದ್ದ. ನಿನ್ನ ಊರು ಯಾವುದು? ಎಲ್ಲಿ ಕೆಲಸ ಮಾಡೋದು ಅನ್ನೋದೆಲ್ಲ ಕೇಳಿದ್ದ? ಪವಿತ್ರಾ ಅವಳೇ ಕೇಳ್ತಿದ್ದಾಳೆ ಅನ್ನೋ ರೀತಿಯಲ್ಲಿ ಪವನ್ ರೇಣುಕಾಸ್ವಾಮಿಗೆ ಮೆಸೇಜ್ ಮಾಡಿದ್ದ. ಇದು ನಿಜ ಎಂದು ನಂಬಿದ್ದ ರೇಣುಕಾಸ್ವಾಮಿ, ಜೋರಾಗಿ ಚಾಟ್ ಮಾಡಲು ಶುರುಮಾಡಿದ್ದಾನೆ. ತಾನು ಕೆಲಸ ಮಾಡ್ತಿದ್ದ ಮೆಡಿಕಲ್ ಶಾಪ್ ಫೋಟೋವನ್ನೂ ಕಳುಹಿಸಿದ್ದಾನೆ.

ಜೊತೆಗೆ ವಾಟ್ಸ್​​ಆ್ಯಪ್​ನಲ್ಲಿ ಲೋಕೇಷನ್ ಕೂಡ ಶೇರ್ ಮಾಡಿದ್ದ. ಪವಿತ್ರ ಹೆಸರಿನಲ್ಲಿ ಪವನ್ ತುಂಬಾ ಆತ್ಮೀಯವಾಗಿ ರೇಣುಕಾಸ್ವಾಮಿಗೆ ಮೆಸೇಜ್ ಮಾಡಲು ಶುರುಮಾಡಿದ್ದಾನೆ. ತನ್ನ ಅಂಗಾಂಗದ ಫೋಟೋ ತೆಗೆದು ಕಳಿಸಿ ಹೀಗಿದೆ ನೋಡು ಎಂದು ರೇಣುಕಾಸ್ವಾಮಿ ಹೇಳಿದ್ದನಂತೆ. ಕೊನೆಗೆ ಈ ವಿಚಾರವನ್ನು ಪವನ್ ದರ್ಶನ್​​ಗೆ ಮಾಹಿತಿ ನೀಡಿದ್ದಾನೆ. ಅಕ್ಕನಿಗೆ ರೇಣುಕಾಸ್ವಾಮಿ ಎಂಬಾತ ಕೆಟ್ಟದಾಗಿ ಮೆಸೇಜ್ ಮಾಡ್ತಿದ್ದಾನೆ. ಅವನು ಮೆಡಿಕಲ್ ಶಾಪ್​ನಲ್ಲಿ ಕೆಲಸ ಮಾಡೋದು, ಚಿತ್ರದುರ್ಗದಲ್ಲಿ ಇದ್ದಾನೆ ಎಂದು ದರ್ಶನ್​​ಗೆ ತಿಳಿಸಿದ್ದ. ಈ ಎಲ್ಲಾ ವಿಚಾರಗಳು ದರ್ಶನ್ ಜೊತೆಗೆ ಚರ್ಚೆ ಆಗಿದ್ದು ಜೂನ್ 5 ರಂದು. ಇದರ ಬೆನ್ನಲ್ಲೇ ಚಿತ್ರದುರ್ಗದ ರಾಘವೇಂದ್ರನಿಗೆ ದರ್ಶನ್ ಕರೆ ಮಾಡಿದ್ದ. ರೇಣುಕಾಸ್ವಾಮಿ ಎಂಬಾತನ ಎತ್ತಾಕೊಂಡು ಬರುವಂತೆ ಸೂಚನೆ ನೀಡಿದ್ದ.

ದರ್ಶನ್ ಹೇಳಿದ್ದೇ ತಡ ರಾಘವೇಂದ್ರ ತನ್ನ ಸಹಚರರ ಜೊತೆಗೆ ಸಜ್ಜಾಗಿದ್ದ. ರೇಣುಕಾಸ್ವಾಮಿಯನ್ನು ಕಾರಿನಲ್ಲಿ ಎತ್ತಾಕೊಂಡು ಬೆಂಗಳೂರು ಕಡೆಗೆ ಹೊರಟಿದ್ದ. ಇತ್ತ ಪವನ್ ರಾಘವೇಂದ್ರನಿಗೆ ಪಟ್ಟಣಗೆರೆಯ ಶೆಡ್​ನ ಲೊಕೇಶನ್ ಕಳುಹಿಸಿದ್ದ. ಇದೇ ಲೊಕೇಶನ್​ಗೆ ರೇಣುಕಾಸ್ವಾಮಿಯನ್ನು ಕರ್ಕೊಂಡು ಬರೋಕೆ ಹೇಳಿದ್ದ. ಪವನ್ ಸೂಚನೆ ಪ್ರಕಾರ ಪಟ್ಟಣಗೆರೆ ಶೆಡ್​ಗೆ ರೇಣುಕಾಸ್ವಾಮಿಯನ್ನು ಕರ್ಕೊಂಡು ಬರಲಾಗಿತ್ತು. ಇದಾದ ಬಳಿಕ ಪವನ್ ದರ್ಶನ್ ಇದ್ದಲ್ಲಿಗೆ ಹೋಗಿ ರೇಣುಕಾಸ್ವಾಮಿನ ಕರ್ಕೊಂಡು ಬಂದಿರುವ ವಿಚಾರವನ್ನು ತಿಳಿಸಿದ್ದ. ಆಗ ದರ್ಶನ್ ಸ್ನೇಹಿತ ವಿನಯ್​ಗೆ ಸೇರಿದ್ದ ಪಬ್​ನಲ್ಲಿ ಸ್ನೇಹಿತರ ಜೊತೆಗಿದ್ದ. ನಂತರ ನಡೆದಿದ್ದೇ ಭೀಕರ ಹತ್ಯೆ ಎಂದು ತಿಳಿದುಬಂದಿದೆ.

ಅಪರಾಧ

ಎಸ್ಪಿಗೆ ರಿಲೀವ್, ನಿಂಗಪ್ಪನ ಮೊಬೈಲ್‌ನಲ್ಲಿ ರಹಸ್ಯ?

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯ ಮೇಲೆ ಭ್ರಷ್ಟಾಚಾರದ ಆರೋಪದ ಕಳಂಕವೊಡ್ಡಿದೆ. ಸರಕಾರಿ ಅಧಿಕಾರಿಗಳಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ ಆರೋಪದಡಿ ಮಾಜಿ ಹೆಡ್ ಕಾನ್ಸ್ಟೆಬಲ್ ನಿಂಗಪ್ಪನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಆದರೆ, ಈ ಪ್ರಕರಣದಲ್ಲಿ ಲೋಕಾಯುಕ್ತದ ಕೆಲ ಪೊಲೀಸರೂ ಭಾಗಿಯಾಗಿರುವ ಆರೋಪ ಗಂಭೀರ ಆತಂಕವನ್ನುಂಟುಮಾಡಿದೆ. ಈ ಬೆಳವಣಿಗೆಯ ನಡುವೆ ಲೋಕಾಯುಕ್ತ ಬೆಂಗಳೂರು ಘಟಕದ ಎಸ್ಪಿ ಮಹದೇವ ಶ್ರೀನಾಥ ಜೋಶಿ ಅವರನ್ನು ಮಂಗಳವಾರ ಸೇವೆಯಿಂದ ರಿಲೀವ್ ಮಾಡಲಾಗಿದೆ. ಈ ಘಟನೆಯಿಂದ ಲೋಕಾಯುಕ್ತ ಸಂಸ್ಥೆಯ ವಿಶ್ವಾಸಾರ್ಹತೆಯೇ ಪ್ರಶ್ನಾರ್ಹವಾಗಿದೆ.

ಹೈಕೋರ್ಟ್ ಆದೇಶದಂತೆ ಮೂರು ವರ್ಷಗಳ ಹಿಂದೆ ಎಫ್‌ಐಆರ್ ದಾಖಲಿಸುವ ಅಧಿಕಾರ ಪಡೆದ ಲೋಕಾಯುಕ್ತ ಪೊಲೀಸ್ ವಿಭಾಗವು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಗುರಿಯನ್ನು ಹೊಂದಿತ್ತು. ಆದರೆ, ಈಗ ಆ ಸಂಸ್ಥೆಯೊಳಗಿನ ಕೆಲವರು ಭ್ರಷ್ಟಾಚಾರದಲ್ಲಿ ತೊಡಗಿರುವ ಆರೋಪ ಕೇಳಿಬಂದಿದೆ. ಬಿಡಿಎ, ಅಬಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಲೋಕಾಯುಕ್ತ ದಾಳಿಯ ಬೆದರಿಕೆ ಹಾಕಿ ಹಣ ಸುಲಿಗೆ ಮಾಡುತ್ತಿದ್ದ ಆರೋಪದಡಿ ನಿಂಗಪ್ಪನನ್ನು ಎಸ್ಪಿ ಕೋನ ವಂಶಿಕೃಷ್ಣ ನೇತೃತ್ವದ ತಂಡ ಕೆಲ ದಿನಗಳ ಹಿಂದೆ ಬಂಧಿಸಿತ್ತು.

ಪೊಲೀಸ್ ಇಲಾಖೆಯಲ್ಲಿ ಹೆಡ್ ಕಾನ್ಸ್ಟೆಬಲ್ ಆಗಿದ್ದ ನಿಂಗಪ್ಪ ಕೆಲ ವರ್ಷಗಳ ಹಿಂದೆ ಸೇವೆಯಿಂದ ವಜಾಗೊಂಡಿದ್ದ. ಬಳಿಕ ಲೋಕಾಯುಕ್ತದ ಹೆಸರಿನಲ್ಲಿ ಸರಕಾರಿ ಅಧಿಕಾರಿಗಳಿಗೆ ಬೆದರಿಕೆ ಹಾಕಿ ಹಣ ಸುಲಿಗೆಯನ್ನೇ ವೃತ್ತಿಯಾಗಿ ಮಾಡಿಕೊಂಡಿದ್ದ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಠಾಣೆಗಳಲ್ಲಿ ಆತನ ವಿರುದ್ಧ ಪ್ರಕರಣಗಳು ದಾಖಲಾಗಿದ್ದು, ಹಲವು ಬಾರಿ ಜೈಲು ಸೇರಿದ್ದ,

ನಿಂಗಪ್ಪನ ಕೃತ್ಯದಲ್ಲಿ ಲೋಕಾಯುಕ್ತದ ಕೆಲವು ಪೊಲೀಸರು ಭಾಗಿಯಾಗಿದ್ದರೆ, ಸುಲಿಗೆಯ ಹಣದಲ್ಲಿ ಪಾಲು ಪಡೆಯುತ್ತಿದ್ದರೆಂಬ ಶಂಕೆಯಿದೆ. ನಿಂಗಪ್ಪನ ಮೊಬೈಲ್‌ನಿಂದ ದೊರೆತ ಸಾಕ್ಷ್ಯಗಳನ್ನು ಆಧರಿಸಿ, ಆತ ಯಾರಿಗೆ ಹಣ ತಲುಪಿಸಿದ್ದ, ಯಾರ ಜೊತೆ ಸಂಪರ್ಕದಲ್ಲಿದ್ದ ಎಂಬುದನ್ನು ತನಿಖೆಯ ಮೂಲಕ ಕಂಡುಹಿಡಿಯಲಾಗುತ್ತಿದೆ. ಈ ಪ್ರಕರಣದಲ್ಲಿ ಎಸ್ಪಿ ಮಹದೇವ ಶ್ರೀನಾಥ ಜೋಶಿಯವರ ರಿಲೀವ್‌ಗೆ ನಿಖರ ಕಾರಣ ತಿಳಿದಿಲ್ಲವಾದರೂ, ಈ ಬೆಳವಣಿಗೆ ಲೋಕಾಯುಕ್ತದೊಳಗಿನ ಆಂತರಿಕ ಸಮಸ್ಯೆಗಳನ್ನು ಎತ್ತಿ ತೋರಿಸಿದೆ.

ಈ ಘಟನೆಯಿಂದ ಲೋಕಾಯುಕ್ತ ಸಂಸ್ಥೆಯ ಕಾರ್ಯವೈಖರಿಯ ಬಗ್ಗೆ ಜನರಲ್ಲಿ ಅನುಮಾನ ಮೂಡಿದೆ. ಭ್ರಷ್ಟಾಚಾರದ ವಿರುದ್ಧ ಹೋರಾಡಬೇಕಾದ ಸಂಸ್ಥೆಯೇ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವುದು ಆಘಾತಕಾರಿಯಾಗಿದೆ. ಈ ಪ್ರಕರಣದ ತನಿಖೆಯಿಂದ ಸತ್ಯ ಹೊರಬಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬುದು ಜನರ ಆಗ್ರಹವಾಗಿದೆ.

Continue Reading

ಅಪರಾಧ

ಮಹಿಳಾ ಪೇದೆಗೆ ಬೂಟುಗಾಲಿನಿಂದ ಒದ್ದ ಹೆಡ್ ಕಾನ್ಸ್‍ಟೇಬಲ್!

ಬೆಂಗಳೂರು: ಪೊಲೀಸ್ ಠಾಣೆಯೊಂದರಲ್ಲೇ ಸಿಬ್ಬಂದಿಗಳು ಹೊಡೆದಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ನಡೆದಿದೆ, ಠಾಣೆಯ ಹೆಡ್ ಕಾನ್ಸ್‍ಟೇಬಲ್ ಮಹಿಳಾ ಪೇದೆಗೆ ಬೂಟುಗಾಲಿನಿಂದ ಒದ್ದ ಆರೋಪ ಹೊರಿಸಲಾಗಿದ್ದು ಈ ಬಗ್ಗೆ ದೂರು ದಾಖಲಾಗಿದೆ,
ಠಾಣೆಯಲ್ಲಿ ಕೆಲಸ ಮಾಡ್ತಿದ್ದ ಮಹಿಳಾ ಪೇದೆಗೆ ಅಲ್ಲೇ ಹೆಡ್ ಕಾನ್ಸ್‍ಟೇಬಲ್ ಆಗಿರುವ ಬಿಜಿ ಗೋವಿಂದರಾಜು ಎಂಬುವವರು ಬೂಟುಗಾಲಿನಲ್ಲಿ ಒದ್ದಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ, ಜೂನ್ 10 ರಂದು ಈ ಘಟನೆ ನಡೆದಿದೆ, ರಾತ್ರಿ ಕಂಪ್ಯೂಟರ್ ವಿಭಾಗದಲ್ಲಿ ಮಹಿಳಾ ಪೇದೆ ರೇಣುಕಾ ಕರ್ತವ್ಯ ನಿರ್ವಹಿಸುತ್ತಿದ್ದರು,
ಈ ವೇಳೆ ರೇಣುಕಾ ಮನೆ ಬಿಟ್ಟು ಹೋಗಿ ಠಾಣೆ ಸೇರಿದ್ದ ಇಬ್ಬರು ಹೆಣ್ಣುಮಕ್ಕಳಿಗೆ ಊಟ ಮಾಡಿಸುತ್ತಿದ್ದರು, ಆಗ ಹೆಡ್ ಕಾನ್ಸ್‍ಟೇಬಲ್ ಗೋವಿಂದರಾಜು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ, ಮಾತ್ರವಲ್ಲದೇ ಮೂರ್ನಾಲ್ಕು ಬಾರಿ ಬೂಟುಗಾಲಿನಿಂದ ಒದ್ದಿದ್ದಾರೆ ಎಂದು ಆರೋಪಸಲಾಗಿದೆ,
ಕಾನ್ಸ್‍ಟೇಬಲ್ ರೇಣುಕಾ ದೂರು ಆಧರಿಸಿ ಹೆಡ್ ಕಾನ್ಸಟೇಬಲ್ ಗೋವಿಂದರಾಜು ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,

Continue Reading

ಅಪರಾಧ

 ವಿರಾಟ್​ ಕೊಹ್ಲಿ ಮಾಲೀಕತ್ವದ ‘One8 Commune’ ಪಬ್ ವಿರುದ್ಧ FIR ದಾಖಲು

ಬೆಂಗಳೂರು: ಪ್ರತ್ಯೇಕ ಸ್ಥಳವಿಲ್ಲದೆ ಧೂಮಪಾನಕ್ಕೆ ಅವಕಾಶ ನೀಡಿ, ನಿಯಮ ಉಲ್ಲಂಘನೆ ಮಾಡಿದ ಆರೋಪ ಹಿನ್ನೆಲೆಯಲ್ಲಿ ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ‘ಒನ್ 8 ಕಮ್ಯೂನ್’ ಪಬ್ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

ಮೇ 29ರಂದು ಕಬ್ಬನ್ ಪಾರ್ಕ್ ಪೊಲೀಸರು ಪಬ್ ಮೇಲೆ ದಾಳಿ ಮಾಡಿ, ಸ್ವಯಂಪ್ರೇರಿತವಾಗಿ ಎನ್‌ಸಿಆರ್ ದಾಖಲಿಸಿಕೊಂಡಿದ್ದರು. ಇದೀಗ ನ್ಯಾಯಾಲಯದ ಅನುಮತಿ ಪಡೆದು, ಕೊಟ್ಪಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ 2024ರ ಜುಲೈನಲ್ಲಿ ಇದೇ ಬಾರ್ ಮೇಲೆ ಅವಧಿ ಮೀರಿ ಪಬ್ ನಡೆಸುತ್ತಿದ್ದರು ಎಂದು ದೂರು ದಾಖಲಾಗಿತ್ತು. ಜು.6 ರಂದು ರಾತ್ರಿ 1:20ರವರೆಗೆ ಪಬ್ ತೆರೆದಿತ್ತು. ರಾತ್ರಿ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಪಬ್ ಓಪನ್ ಇರುವುದಾಗಿ ಮಾಹಿತಿ ಇತ್ತು. ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಅವಧಿ ಮುಗಿದಿದ್ದರೂ ಗ್ರಾಹಕರು ಇದ್ದರು. ಹೀಗಾಗಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಇದೀಗ ಪ್ರತ್ಯೇಕ ಸ್ಥಳ ಮೀಸಲಿಡದೆ ಧೂಮಪಾನಕ್ಕೆ ಅವಕಾಶ ನೀಡಿದ್ದಕ್ಕಾಗಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಮ್ಯಾನೇಜರ್, ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

Continue Reading

Trending