ರಾಜ್ಯ
ದರ್ಶನ್ ಪತ್ನಿ ವಿರುದ್ಧ ದೂರು ದಾಖಲಿಸುವೆ ಸಂಜಯ್ ಸಿಂಗ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಪವಿತ್ರ ಗೌಡ ಅವರ ಮಾಜಿ ಪತಿ ಸಂಜಯ್ ಸಿಂಗ್ ಅವರು ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ವಿರುದ್ಧ ದೂರು ದಾಖಲಿಸುವುದಾಗಿ ಹೇಳಿಕೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಅವರು ನನ್ನ ಅನುಮತಿ ಇಲ್ಲದೆ ನನ್ನ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವಿಜಯಲಕ್ಷ್ಮಿ ಹಂಚಿಕೊಂಡಿದ್ದಾರೆ, ಹಾಗಾಗಿ ಅವರ ವಿರುದ್ಧ ಮಾನಹಾನಿ ಮೊಕದ್ದಮೆ ದಾಖಲಿಸುವುದಾಗಿ ಹೇಳಿದ್ದಾರೆ,
ಪವಿತ್ರಾ ಗೌಡ ಅವರು ದರ್ಶನ್ ಜತೆಗಿನ ಫೋಟೋಗಳನ್ನು ಹಂಚಿಕೊಂಡಿದ್ದ ಕಾರಣ ಸಿಡಿಮಿಡಿಗೊಂಡಿದ್ದ ವಿಜಯಲಕ್ಷ್ಮಿ ಸಂಜಯ್ ಸಿಂಗ್ ಅವರು ತಮ್ಮ ಮಾಜಿ ಪತ್ನಿ & ಪುತ್ರಿ ಜೊತೆ ಇದ್ದ ಫೋಟೋಗಳನ್ನು ಬಿಡುಗಡೆ ಮಾಡಿದ್ದರು, ಈ ಸಂಬಂಧ ಸದ್ಯ ಸಂಜಯ್ ಸಿಂಗ್ ಗರಂ ಆಗಿದ್ದಾರೆ,