ಬೆಂಗಳೂರು
ಇದೇನ್ರೀ.. ತುಘಲಕ್ ದರ್ಬಾರ್..! ಡಿ.ಕೆ.ಶಿ ವಿರುದ್ಧ ಸುರೇಶ್ ಕುಮಾರ್ ವ್ಯಂಗ್ಯ!

ಬೆಂಗಳೂರು: ಚನ್ನಪಟ್ಟಣದಿಂದ ಡಿ.ಕೆ.ಶಿವಕುಮಾರ್ ಕಣಕ್ಕಿಳಿಯಲಿದ್ದಾರೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಸುರೇಶ್ ಕುಮಾರ್ ಇದೊಂದು ದೊಡ್ಡ ಪ್ರಹಸನ ಎಂದಿದ್ದಾರೆ,
ಇತಿಹಾಸದಲ್ಲಿ ಓರ್ವ ವ್ಯಕ್ತಿ ತನ್ನ ರಾಜಧಾನಿಯನ್ನು ದೆಹಲಿಯಿಂದ ಸಾವಿರಾರು ಮೈಲಿ ದೂರದ ಮಹಾರಾಷ್ಟ್ರ ದಲ್ಲಿನ ದೌಲತಾಬಾದಿಗೆ ಬದಲಾಯಿಸಿದ್ದ, ನಂತರ ಮತ್ತೆ ದೌಲತಾಬಾದಿಂದ ದೆಹಲಿಗೆ ವಾಪಸ್ಸು ರಾಜಧಾನಿಯನ್ನು ತಂದ, ಇತಿಹಾಸದಲ್ಲಿ ಈ ವಿಲಕ್ಷಣ ವ್ಯಕ್ತಿ ಹೆಸರು ಯಾವಾಗಲೂ ನೆನಪಿರುತ್ತದೆ, ಇದನ್ನೇ ತುಘಲಕ್ ದರ್ಬಾರ್ ಅನ್ನುವುದು ಎಂದು ಸುರೇಶ್ ಕುಮಾರ್ ವ್ಯಂಗ್ಯವಾಡಿದ್ದಾರೆ
ಇದೀಗ ಕನಕಪುರದಿಂದ ಆಯ್ಕೆಯಾಗಿ 2028ರ ವರೆಗೆ ಶಾಸಕನಾಗಿ ಮುಂದುವರಿಯುವ ಅವಕಾಶ ಮತ್ತು ಕರ್ತವ್ಯ ಹೊಂದಿರುವ ಶ್ರೀ ಡಿ.ಕೆ.ಶಿವಕುಮಾರ್ ಚನ್ನಪಟ್ಟಣದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಹೊರಟಿರುವುದು ಒಂದು ಅನಗ್ಯ ಪ್ರಹಸನವೇ ಹೌದ ಎಂದು ಟೀಕಿಸಿದ್ದಾರೆ,
ಮಾಧ್ಯಮಗಳಲ್ಲಿ ಕೇಳಿ ಬಂದಂತೆ ಚನ್ನಪಟ್ಟಣದಿಂದ ಸ್ಪರ್ಧಿಸಿ ತಾನು ಗೆದ್ದು, ಈಗಾಗಲೇ ಆಯ್ಕೆ ಯಾಗಿರುವ ಕನಕಪುರ ಸ್ಧಾನಕ್ಕೆ ರಾಜೀನಾಮೆ ಕೊಟ್ಟು ಅಲ್ಲಿಂದ ಮೊನ್ನೆ ಲೋಕಸಭಾ ಚುನಾವಣೆಯಲ್ಲಿ ಪರಾಜಿತರಾದ ತನ್ನ ಸಹೋದರ ಡಿ.ಕೆ.ಸುರೇಶ್ ಗೆ ಸ್ಪರ್ಧಿಸುವಂತೆ ಮಾಡಿ ಅವರನ್ನು ಗೆಲ್ಲಿಸಿ ಶಾಸಕರನ್ನಾಗಿ ಮಾಡುವ ಮಹದೋದ್ದೇಶ ಡಿಕೆಶಿ ಅವರದಂತೆ,
ಇದಕ್ಕೆ ಏನು ಹೇಳಬೇಕು? ಎಂದು ಪ್ರಶ್ನಿಸಿದ್ದಾರೆ,
ಸಾರ್ವಜನಿಕರ ಹಣ, ರಾಷ್ಟ್ರದ ಸಂಪತ್ತು ಹೇಗೆ ವೈಯುಕ್ತಿಕ ಪ್ರತಿಷ್ಠೆಗಾಗಿ ವೆಚ್ಚವಾಗುತ್ತದೆ ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆ, ಡಿಕೆಶಿ ಅವರ ಈ ನಡೆ ವಿವೇಚನೆ ಮತ್ತು ವಿವೇಕದಿಂದ ಕೊಡಿದೆ ಅತಿರೇಕದ ನಡೆ ಎಂದೆನಿಸದು! ರಾಹುಲ್ ಗಾಂಧಿಯವರು ಇದಕ್ಕೆ ಒಪ್ಪುತ್ತಾರೆಯೇ ಎಂದು ಪ್ರಶ್ನೆ ಮಾಡಿದ್ದಾರೆ,