ರಾಜಕೀಯ
ಕೇಳಿ ಕೇಳಿ ಸಾಕಾಯ್ತು! ದುರಾದೃಷ್ಟೆ ಎಂದಿದ್ದಕ್ಕೆ ಪವನ್ ಕಲ್ಯಾಣ್ ಮಾಜಿ ಪತ್ನಿ ಫುಲ್ ಗರಂ
ಪವನ್ ಕಲ್ಯಾಣ್ (Pawan Kalyan) ಭರ್ಜರಿ ಗೆಲುವಿನ ನಂತರ ಅವರ ಮಾಜಿ ಪತ್ನಿಯ ಮಕ್ಕಳು ತಂದೆಯ ಜೊತೆ ಹಲವಾರು ಬಾರಿ ಕಂಡು ಬಂದಿದ್ದಾರೆ. ರೇಣು ದೇಸಾಯಿ (Renu Desai) ಹಾಗೂ ಪವನ್ ಕಲ್ಯಾಣ್ ಮಗ ಅಕಿರಾ ನಂದನ್ (Akira Nandan) ತಂದೆಯ ಜೊತೆ ಹೋಗಿ ಪ್ರಧಾನಿ ಮೋದಿ (PM Modi) ಅವರನ್ನೂ ಭೇಟಿಯಾಗಿದ್ದ. ಸದ್ಯ ಪವನ್ ಕಲ್ಯಾಣ್ ಅವರ ಮಾಜಿ ಪತ್ನಿ (Former Wife) ಹಾಗೂ ಮಕ್ಕಳೂ ಕೂಡಾ ಟ್ರೆಂಡ್ ಆಗಿದ್ದಾರೆ. ಆದರೆ ಇತ್ತೀಚೆಗೆ ಪವನ್ ಕಲ್ಯಾಣ್ ಗೆಲುವಿನ ನಂತರ ನೆಟ್ಟಿಗರು ರೇಣು ದೇಸಾಯಿಯತ್ತ ಬೊಟ್ಟು ಮಾಡಿ ದುರಾದೃಷ್ಟೆ ಎನ್ನತ್ತಿದ್ದಾರೆ. ಇದಕ್ಕೆ ನಟಿ ಸಿಟ್ಟಾಗಿದ್ದಾರೆ.
ನೀವು ದುರಾದೃಷ್ಟೆ ಮೇಡಂ. ತುಂಬಾ ಸುಂದರವಾದ ಮಗ ಹಾಗೂ ಮಗಳು ಎಂದು ನೆಟ್ಟಿಗರೊಬ್ಬರು ಕಮೆಂಟ್ ಮಾಡಿದ್ದರು. ಇದಕ್ಕೆ ಉತ್ತರಿಸಿದ ರೇಣು ದೇಸಾಯಿ ಅವರು ಕಮೆಂಟ್ ಮಾಡಿ ನಾನು ಯಾವ ರೀತಿ ದುರಾದೃಷ್ಟೆ, ದಯವಿಟ್ಟು ತಿಳಿಸಿ, ತಿಳಿಯಲು ಕಾಯುತ್ತಿದ್ದೇನೆ ಎಂದಿದ್ದಾರೆ.
ನನ್ನ ಗಂಡ ನನ್ನನ್ನು ಬಿಟ್ಟು ಬೇರೆಯವರನ್ನು ಮದುವೆಯಾಗಲು ನಿರ್ಧರಿಸಿದ ಕಾರಣಕ್ಕೆ ನನ್ನನ್ನು ಕೆಲವರು ಹಲವಾರು ವರ್ಷಗಳಿಂದ ದುರಾದೃಷ್ಟೆ ಎಂದು ಕರೆಯುತ್ತಲೇ ಬಂದಿದ್ದಾರೆ. ಇದನ್ನು ಕೇಳಿ ಕೇಳಿ ಸಾಕಾಯಿತು. ನೋವಾಗುತ್ತದೆ ಎಂದು ಅವರು ಬರೆದಿದ್ದಾರೆ.
ನನ್ನ ಅದೃಷ್ಟ ಯಾಕೆ ಒಬ್ಬ ಪುರುಷನೊಂದಿಗೆ ಜೋಡಿಸಲ್ಪಟ್ಟಿದೆ? ನಾನು ಜೀವನದಲ್ಲಿ ತುಂಬಾ ಆಶಿರ್ವದಿಸಲ್ಪಟ್ಟಿದ್ದೇನೆ ಎಂದು ಅನಿಸುತ್ತದೆ. ನನ್ನಲ್ಲಿ ಇಲ್ಲದ್ದರ ಬಗ್ಗೆಯೋ ಅಥವಾ ಯಾವುದರ ಬಗ್ಗೆಯೂ ಬೇಸರದ ಭಾವನೆಗಿಂತಲೂ ನನ್ನಲ್ಲಿರುವುದರ ಬಗ್ಗೆ ನನಗೆ ಸಾಕಷ್ಟು ಒಳ್ಳೆಯ ಭಾವನೆ ಇದೆ. ಮದುವೆ ಎನ್ನುವ ವಿಷಯ ವರ್ಕೌಟ್ ಆಗಲಿಲ್ಲ ಎನ್ನುವ ಮಾತ್ರಕ್ಕೆ ತಮ್ಮ ಜೀವನ ದುರಾದೃಷ್ಟ ಅಲ್ಲ ಎಂದು ಎಲ್ಲಾ ಡಿವೋರ್ಸ್ ಆಗಿರುವ ಪುರುಷರು ಮಹಿಳೆಯರು ಅರ್ಥ ಮಾಡಿಕೊಳ್ಳುತ್ತಾರೆ ಎಂದು ನಂಬುತ್ತೇನೆ ಎಂದು ಅವರು ಬರೆದಿದ್ದಾರೆ.
ಪವನ್ ಕಲ್ಯಾಣ್ ಅವರನ್ನು ನನ್ನ ವೈಯಕ್ತಿಕ ಜೀವನಕ್ಕೆ ಕರೆತರಬೇಡಿ ಎಂದು ರೇಣು ದೇಸಾಯಿ ವಾರ್ನಿಂಗ್ ಕೂಡ ಕೊಟ್ಟಿದ್ರು. ಈಗಾಗಲೇ ಅಭಿಮಾನಿಗಳಿಗೆ ಹಲವು ಬಾರಿ ಮನವಿ ಮಾಡಿದ್ರು. ಆದ್ರೆ ಪವನ್ ಅವರ ಅಭಿಮಾನಿಗಳು ಪವನ್ ಬಗೆಗಿನ ಪೋಸ್ಟ್ ಗಳಿಗೆ ಮಾಜಿ ಪತ್ನಿ ರೇಣು ದೇಸಾಯಿ ಅವರನ್ನು ಲಿಂಕ್ ಮಾಡುತ್ತಲೇ ಇರುತ್ತಾರೆ.
ಪವನ್ ಕಲ್ಯಾಣ್ ಬಗ್ಗೆ ಅಭಿಮಾನಿಯೊಬ್ಬ ಹಾಕಿದ್ದ ಪೋಸ್ಟ್ ಗೆ ರೇಣು ದೇಸಾಯಿ ಮತ್ತೊಮ್ಮೆ ಸ್ಟ್ರಾಂಗ್ ವಾರ್ನಿಂಗ್ ನೀಡಿದ್ದಾರೆ. ತಾನಾಯ್ತು, ತನ್ನ ಕೆಲಸ ಆಯ್ತು ಎಂದು ರೇಣು ದೇಸಾಯಿ ಇದ್ದಾರೆ. ಪವನ್ ಫ್ಯಾನ್ ಅವನ್ನು ಸುಮ್ಮನೆ ಬಿಟ್ಟಿಲ್ಲ. ‘ಅತ್ತಿಗೆ, ಸ್ವಲ್ಪ ದಿನ ತಾಳ್ಮೆಯಿಂದ ಇದ್ದಿದ್ದರೆ ಚೆನ್ನಾಗಿತ್ತು. ದೇವರನ್ನು ಮದುವೆಯಾಗಿ ತನ್ನ ಅಂತರಂಗವನ್ನು ಅರಿಯದೆ ಹೊರಟುಹೋದಿರಿ. ಆದರೆ ಇವತ್ತಿಗೂ ನಿಮಗೆ ಪವನ್ ಮೌಲ್ಯ ಗೊತ್ತಿದೆ. ಹೀಗಾದರೂ ಅದೃಷ್ಟ ಎಲ್ಲವನ್ನೂ ನಿರ್ಧರಿಸುತ್ತದೆ. ಇಂದು ಮಕ್ಕಳು ನಮ್ಮ ಅಣ್ಣನ ಬಳಿ ಇದ್ದಾರೆ ಎಂದು ಪೋಸ್ಟ್ ಮಾಡಿದ್ದರು.
ಈ ಪೋಸ್ಟ್ ಗೆ ರೇಣು ದೇಸಾಯಿ ಸಖತ್ ಎಚ್ಚರಿಕೆ ನೀಡಿದ್ದಾರೆ. ಸ್ವಲ್ಪ ಬುದ್ದಿ ಇದ್ದರೆ ನೀವು ಹೀಗೆ ಹೇಳಿಬಾರದು,. ನಾನು ಪವನ್ ಕಲ್ಯಾಣ್ ಅವರನ್ನು ಬಿಟ್ಟಿಲ್ಲ. ಅವರೇ ನನ್ನನ್ನು ಬಿಟ್ಟು ಬೇರೆ ಮದುವೆಯಾಗಿದ್ದಾನೆ. ದಯವಿಟ್ಟು ನನ್ನನ್ನು ಹಿಂಸಿಸಬೇಡಿ ಎಂದು ರೇಣು ದೇಸಾಯಿ ಬರೆದಿದ್ದರು.
ದೇಶ
ಸಿಎಂ ಕುರ್ಚಿ ಉಳಿಸಿಕೊಳ್ಳಲು ಶಾಸಕರ ವಿದೇಶ ಪ್ರವಾಸ? ವಿಜಯೇಂದ್ರ ಗಂಭೀರ ಆರೋಪ
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಸರ್ಕಾರ ಬಂದ ಬಳಿಕ ಅನುದಾನ ಬೇಡಿಕೆ ಇಟ್ಟಿದ್ದರೂ ಗಂಗಕಲ್ಯಾಣ ಯೋಜನೆ, ಮನೆ ನಿರ್ಮಾಣ ಸೇರಿದಂತೆ ಹಲವು ಕಾರ್ಯಗಳು ನಡೆಯದೆ ಜನರಲ್ಲಿ ಅಸಮಾಧಾನ ಮೂಡಿದೆ ಎಂದು ಆರೋಪಿಸಿದರು. ಶಾಸಕರು ತಮ್ಮ ಖರ್ಚಿನಲ್ಲಿ ವಿದೇಶಕ್ಕೆ ಹೋಗುತ್ತಿದ್ದಾರೆ ಎಂಬ ಸಿಎಂ ಹೇಳಿಕೆಯನ್ನು ಪ್ರಶ್ನಿಸಿ, “ತಮ್ಮ ಕುರ್ಚಿ ಉಳಿಸಿಕೊಳ್ಳಲು ತಾವೇ ಅವರನ್ನು ಕಳಿಸುತ್ತಿದ್ದಾರೆ” ಎಂದು ಟೀಕಿಸಿದರು.
ರೆಸಾರ್ಟ್ ರಾಜಕೀಯದ ಮೇಲೆ ಲೇವಡಿ
ಕಾಂಗ್ರೆಸ್ ಶಾಸಕರು ರೆಸಾರ್ಟ್ ಬುಕ್ ಮಾಡಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, “ಅವರಿಗೆ ಅನುಕೂಲವಾಗಲಿ ಎಂದು ಬಿಜೆಪಿಯಿಂದ ಬಡಿಗೆ ರೆಡಿ ಮಾಡಿಸಿದ್ದೇವೆ” ಎಂದು ವ್ಯಂಗ್ಯವಾಡಿದರು. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಅಂತರದ ರಾಜಕೀಯ ನಡೆಯುತ್ತಿದೆ ಎಂದು ಹೇಳಿದರು.
₹5,000 ಕೋಟಿ ಎಲ್ಲಿಗೆ ಹೋಯ್ತು?
ಗೃಹ ಲಕ್ಷ್ಮೀ ಯೋಜನೆಯ ₹5,000 ಕೋಟಿ ಹಣದ ಬಗ್ಗೆ ಸ್ಪಷ್ಟ ಉತ್ತರ ಸಿಗಲಿಲ್ಲ ಎಂದು ಆರೋಪಿಸಿದ ಅವರು, “ಹಣ ಉಪಯೋಗ ಆಯ್ತಾ? ದುರಪಯೋಗ ಆಯ್ತಾ? ಸಿಎಂ ಉತ್ತರ ಕೊಡಬೇಕು” ಎಂದು ಆಗ್ರಹಿಸಿದರು. ಕೇಂದ್ರ ಸರ್ಕಾರಕ್ಕೆ ನಕಲಿ ದಾಖಲೆ ನೀಡಿರುವ ವಿಚಾರದಲ್ಲೂ ಮುಂದಿನ ದಿನಗಳಲ್ಲಿ ವಿವರವಾದ ಸುದ್ದಿಗೋಷ್ಠಿ ನಡೆಸುವುದಾಗಿ ತಿಳಿಸಿದರು.
ಪ್ರಾದೇಶಿಕ ಅಸಮಾನತೆ ಹೆಚ್ಚಳ
ಪ್ರಾದೇಶಿಕ ಅಸಮಾನತೆ ನಿವಾರಣೆ ಸಮಿತಿ ವರದಿ ಉಲ್ಲೇಖಿಸಿ, ರಾಜ್ಯದಲ್ಲಿ ಅಸಮಾನತೆ ಶೇಕಡಾ 60ರಿಂದ 72.08ಕ್ಕೆ ಏರಿಕೆಯಾಗಿದೆ ಎಂದು ಹೇಳಿದರು. ಕಿತ್ತೂರು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ಹಿಂದುಳಿದಿದೆ ಎಂದು ಆರೋಪಿಸಿದರು.
ಕುರಿಗಾರರಿಗೆ ಪರಿಹಾರ ಬಾಕಿ
ಅನುಗ್ರಹ ಯೋಜನೆಯಡಿ 45 ಕೋಟಿ ರೂ. ಬಾಕಿ ಇಟ್ಟಿದ್ದು, 90 ಸಾವಿರ ಸಾವಿನ ಪೈಕಿ ಕೇವಲ 30 ಸಾವಿರ ಕುರಿಮರಿಗಳಿಗೆ ಮಾತ್ರ ಪರಿಹಾರ ನೀಡಲಾಗಿದೆ ಎಂದು ಆರೋಪಿಸಿದರು.
ಬಿಜೆಪಿ ಕಾರ್ಯಕಾರಿಣಿ ಸಭೆ
ಫೆಬ್ರವರಿ 19ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಸರ್ಕಾರದ ವೈಫಲ್ಯಗಳು ಮತ್ತು ಮುಂದಿನ ಚುನಾವಣಾ ತಂತ್ರಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದು ಹೇಳಿದರು.
ದೇಶ
LATEST : “ದೆಹಲಿಗೆ ಬಂದಿರೋದೇ ರಾಜಕಾರಣಕ್ಕೆ”: ಡಿಕೆಶಿ ಹೇಳಿಕೆ ಕುತೂಹಲ
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ತೀವ್ರಗೊಂಡಿರುವ ನಡುವೆಯೇ ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸೋನಿಯಾ ಗಾಂಧಿ ನಿವಾಸಕ್ಕೆ ಭೇಟಿ ನೀಡಿದ ಡಿಕೆಶಿ, ಅಸ್ಸಾಂ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ ಎಂದು ತಿಳಿಸಿದ್ದರೂ, ಅವರ ಹೇಳಿಕೆಗಳು ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿವೆ.
“ನಾನು ದೆಹಲಿಗೆ ಬಂದಿರೋದೇ ರಾಜಕಾರಣ ಮಾಡಲು. ಏನೂ ಮಾತನಾಡದೆ ಸುಮ್ಮನೆ ಹೋಗಲು ಸಾಧ್ಯವೇ?” ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ರೂಪೇಶ್ ಬಘೇಲ್ ಜೊತೆಗೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿದ ಅವರು, ಅಸ್ಸಾಂ ಸೇರಿದಂತೆ ಇತರೆ ರಾಜ್ಯಗಳ ಚುನಾವಣಾ ಸ್ಥಿತಿಗತಿಗಳ ಕುರಿತು ಚರ್ಚೆ ನಡೆದಿದೆ ಎಂದರು. “ಎಲ್ಲಾ ವಿಚಾರಗಳನ್ನು ಮಾತನಾಡಲೇಬೇಕು. ಕಾಲವೇ ಎಲ್ಲಕ್ಕೂ ಉತ್ತರ ಕೊಡಲಿದೆ” ಎಂಬ ಅವರ ಮಾತುಗಳಿಗೆ ಹಲವು ಅರ್ಥಗಳು ನೀಡಲಾಗುತ್ತಿದೆ.
ಇದೇ ವೇಳೆ ಬಜೆಟ್ ಪೂರ್ವಸಿದ್ಧತಾ ಸಭೆಗೆ ಗೈರಾಗಿದ್ದ ಡಿಕೆಶಿ ದೆಹಲಿಗೆ ತೆರಳಿರುವುದು ಗಮನಾರ್ಹ. ಸಿಎಂ ಸಿದ್ದರಾಮಯ್ಯ ಅವರ ಅನುಮತಿ ಪಡೆದುಕೊಂಡೇ ಅವರು ತೆರಳಿದ್ದಾರೆ ಎನ್ನಲಾಗಿದ್ದರೂ, ದೆಹಲಿಯ ರಾಜಕೀಯ ಚಟುವಟಿಕೆಗಳು ಕುತೂಹಲ ಹುಟ್ಟಿಸಿವೆ. ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದರಾ? ಎಂಬ ಪ್ರಶ್ನೆಗೆ ಅವರು ಸ್ಪಷ್ಟ ಉತ್ತರ ನೀಡಿಲ್ಲ.
ರಾಜ್ಯ ನಾಯಕತ್ವ ವಿಚಾರದಲ್ಲಿ ರಾಹುಲ್ ಗಾಂಧಿಯ ನಿರ್ಧಾರವೇ ಅಂತಿಮ ಎಂಬುದು ಕಾಂಗ್ರೆಸ್ ವಲಯದ ನಿಲುವು. ಇದೀಗ ಡಿಕೆಶಿ ರಾಹುಲ್ ಗಾಂಧಿಯನ್ನು ಭೇಟಿ ಮಾಡುವ ಸಾಧ್ಯತೆಗಳೂ ಚರ್ಚೆಯಾಗುತ್ತಿವೆ. ರಾಜ್ಯ ರಾಜಕೀಯದಲ್ಲಿ ಈ ಬೆಳವಣಿಗೆ ಹೊಸ ತಿರುವು ಪಡೆಯುವ ಸೂಚನೆ ನೀಡಿದೆ.
ಅಪರಾಧ
BAIRATHI BASAVARJU BREAKING NEWS : ಸಿಐಡಿ ಲುಕ್ಔಟ್ ನೋಟಿಸ್ ಜಾರಿ, ತನಿಖೆ ತೀವ್ರ
ಬೆಂಗಳೂರು: ರೌಡಿಶೀಟರ್ ಬಿಲ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಅವರಿಗೆ ಮತ್ತೊಂದು ಕಾನೂನು ಹಿನ್ನಡೆ ಎದುರಾಗಿದೆ. ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಅವರ ಬಂಧನದ ಭೀತಿ ಮತ್ತಷ್ಟು ಗಟ್ಟಿಯಾಗಿದೆ.
ಈ ಹಿಂದೆ ಇದೇ ಪ್ರಕರಣದಲ್ಲಿ ಹೈಕೋರ್ಟ್ ಕೂಡ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಅದರ ನಂತರ ಬೈರತಿ ಬಸವರಾಜ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಲ್ಲಿ ಸಹ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ವಿಚಾರಣೆ ವೇಳೆ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿರುವುದು ಗಮನಾರ್ಹ.
ಈ ಬೆಳವಣಿಗೆಯೊಂದಿಗೆ ತನಿಖಾ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಈಗಾಗಲೇ ಸಿಐಡಿ ಪೊಲೀಸರು ಬೈರತಿ ಬಸವರಾಜ್ ವಿರುದ್ಧ ಲುಕ್ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಕಾನೂನು ಕ್ರಮಗಳು ಮತ್ತಷ್ಟು ಗಟ್ಟಿಯಾಗುವ ಸಾಧ್ಯತೆಗಳಿವೆ.
ರಾಜಕೀಯ ವಲಯದಲ್ಲೂ ಈ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಪ್ರಕರಣ ಹೊಸ ತಿರುವು ಪಡೆದಿದೆ.
-
ಬೆಂಗಳೂರು11 hours agoBENGALURU : ವಸಂತಪುರ ಶ್ರೀವಸಂತವಲ್ಲಭರಾಯ ಸ್ವಾಮಿಯ ಶಯನೋತ್ಸವ ವೈಭವ
-
ದೇಶ10 hours agoGBA ELECTION : 5 ಪಾಲಿಕೆಗಳಿಗೆ ವಾರ್ಡ್ ಗಡಿ ಪಾಲನೆ ಕಡ್ಡಾಯ – ಮುಖ್ಯ ಆಯುಕ್ತ ಸೂಚನೆ
-
ಅಪರಾಧ10 hours agoCRIME : ಬೆಂಗಳೂರಿನಲ್ಲಿ ಮತ್ತೆ ರೋಡ್ ರೇಜ್: ಬಾನೆಟ್ ಮೇಲೆ ವ್ಯಕ್ತಿ ಇದ್ದರೂ 1 ಕಿ.ಮೀ ಕಾರು ಚಲಾಯಿಸಿದ ಚಾಲಕ
-
ದೇಶ8 hours agoLATEST : “ದೆಹಲಿಗೆ ಬಂದಿರೋದೇ ರಾಜಕಾರಣಕ್ಕೆ”: ಡಿಕೆಶಿ ಹೇಳಿಕೆ ಕುತೂಹಲ
-
ದೇಶ8 hours ago2026 ಪ್ರೇಮಿಗಳ ದಿನ ಶನಿವಾರ: ರೋಮ್ಯಾಂಟಿಕ್ ವಾರಾಂತ್ಯಕ್ಕೆ ಟಾಪ್ 5 ಪ್ರವಾಸ ತಾಣಗಳು
-
ದೇಶ9 hours agoBHARATH BANDH : ದೇಶವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರ ಹೋರಾಟ, ಹಲವು ರಾಜ್ಯಗಳಲ್ಲಿ ಬಂದ್ ಪರಿಣಾಮ
-
ಕ್ರೀಡೆ5 hours agoIND vs PAK ಹೈವೋಲ್ಟೇಜ್ ಪಂದ್ಯಕ್ಕೆ ಮುನ್ನ ಉಸ್ಮಾನ್ ತಾರಿಕ್ ಎಚ್ಚರಿಕೆ: “ಭಾರತೀಯರು ನನ್ನ ಬೌಲಿಂಗ್ಗೆ ಹೆದರುತ್ತಿದ್ದಾರೆ!”
-
ದೇಶ9 hours agoಹೊಸಕೋಟೆಗೆ ಬಜೆಟ್ ಬಲ ಸಿಗುತ್ತಾ? ಮೆಟ್ರೋ, ನೀರಾವರಿ, ಒಳಚರಂಡಿ ಯೋಜನೆಗಳ ನಿರೀಕ್ಷೆ
