ಬೆಂಗಳೂರು
ನೀಟ್ ಅಕ್ರಮ ಖಂಡಿಸಿ ಯುವ ಕಾಂಗ್ರೆಸ್ ಘಟಕ ಪ್ರತಿಭಟನೆ

ಬೆಂಗಳೂರು; ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ ಈಗಾಗಲೇ ದೇಶದೆಲ್ಲೆಡೆ ಕಿಡಿ ಹೊತ್ತಿಸಿದೆ, ಈ ವಿಚಾರವಾಗಿ ಪ್ರತಿಪಕ್ಷಗಳು ಸಹ ತೀವ್ರವಾಗಿ ಕೇಂದ್ರ ಸರ್ಕಾರದ ವಿರುದ್ಧ ಮುಗಿಬಿದ್ದಿವೆ,
ಈ ಹಿನ್ನೆಲೆಯಲ್ಲಿ ನೀಟ್ ಅಕ್ರಮವನ್ನು ಖಂಡಿಸಿ ಇಂದು ಭಾರತ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟ ಹಾಗೂ ಯುವ ಕಾಂಗ್ರೆಸ್ ರಾಜ್ಯ ಘಟಕದ ಅದ್ಯಕ್ಷ ಮೊಹಮ್ಮದ್ ನಲಪಾಡ್ ಹ್ಯಾರಿಸ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು,
ಪ್ರತಿಭಟನಾಕಾರರು ಕೇಂದ್ರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು, ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಹೈಗ್ರೌಂಡ್ ಪೊಲೀಸರು ಹಲವು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದರ, ನಲಪಾಡ್ ಅವರನ್ನು ವಶಕ್ಕೆ ಪಡೆದು ಪ್ರತಿಭಟನೆಯನ್ನು ಪೊಲೀಸರು ತಿಳಿಗೊಳಿಸಿದರು,