Connect with us

ದೇಶ

ಹೊಸ ಜಾಹೀರಾತು ನೀತಿ, ಒಂದು ವಾರದೊಳಗೆ ಸಾರ್ವಜನಿಕ ಚರ್ಚೆಗೆ ಅವಕಾಶ: ಡಿಸಿಎಂ

ಬೆಂಗಳೂರು: ಮುಂದಿನ ಒಂದು ವಾರದೊಳಗೆ ಜಾಹೀರಾತು ನೀತಿಯ ಕರಡು ಪ್ರತಿಯನ್ನು ಸಾರ್ವಜನಿಕ ಚರ್ಚೆಗೆ ಬಿಡುಗಡೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಸಭೆ ಬಳಿಕ ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದ ಅವರು, ಕರಡು ಪ್ರತಿಯ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗುವುದು. ಅನೇಕ ವರ್ಷಗಳಿಂದ ನ್ಯಾಯಾಲಯದಲ್ಲಿ ಪ್ರಕರಣಗಳು ಇದ್ದ ಕಾರಣಕ್ಕೆ ಕಳೆದ ಒಂದು ವರ್ಷದಿಂದ ಜಾಹೀರಾತು ನೀತಿ ಬಾಕಿ ಉಳಿದಿತ್ತು. ಪ್ರಸ್ತುತ ಸಂಘ, ಸಂಸ್ಥೆಗಳ ಜೊತೆ ಚರ್ಚೆ ನಡೆಸಲಾಗಿದೆ ಎಂದು ಹೇಳಿದರು.

60 ಅಡಿಗಿಂತ ಹೆಚ್ಚು ಅಗಲ ಇರುವ ರಸ್ತೆಗಳಲ್ಲಿ ಗ್ರೂಪ್ ಪ್ಯಾಕೇಜ್ ತಯಾರಿಸಿ ಅವಕಾಶ ನೀಡಲಾಗುವುದು. ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳ ಮೇಲೆ ಜಾಹೀರಾತು ನೀಡಲು ಅವಕಾಶ ನೀಡಲಾಗುವುದು. ಬಿಬಿಎಂಪಿಗೆ ತೆರಿಗೆ ನೀಡಿ ಖಾಸಗಿ ಕಟ್ಟಡಗಳು ಬಾಡಿಗೆ ನೀಡಬಹುದು. ಕಟ್ಟಡಗಳ ವಿಸ್ತೀರ್ಣ, ಎತ್ತರಕ್ಕೆ ತಕ್ಕಂತೆ ಯೂನಿಫಾರ್ಮಿಟಿ ತರಲಾಗುವುದು. ಮನಬಂದಂತೆ ಹಾಕಲು ಅವಕಾಶವಿಲ್ಲ. ಫಲಕಗಳನ್ನು ಮಾಡಲು ಯಾವ ಗುಣಮಟ್ಟದ ವಸ್ತು ಬಳಸಬೇಕು ಎಂದು ನಂತರ ತಿಳಿಸಲಾಗುವುದು. ಸರ್ಕಾರದಲ್ಲಿ ಇರುವ ಮೀಸಲಾತಿಗೆ ಅನುಗುಣವಾಗಿ ನೀಡಲಾಗುವುದು. ಪಿಪಿಪಿ ಮಾದರಿಯಲ್ಲಿ ಹಿಂದಿನ ಸರ್ಕಾರ ಒಂದಷ್ಟು ಅವಕಾಶ ನೀಡಿದ್ದು ಕಾನೂನು ಪ್ರಕಾರವಾಗಿ ಇದ್ದರೆ ರಕ್ಷಣೆ ಮಾಡಲಾಗುವುದು. ಏನೂ ಮಾಡದೇ ಇದ್ದವರನ್ನು ಕಾನೂನಿನ ಪ್ರಕಾರ ವಜಾ ಮಾಡಲಾಗುವುದು ಎಂದು ಹೇಳಿದರು.

60 ಅಡಿಗಿಂತ ರಸ್ತೆ ಕಡಿಮೆ ಇದ್ದು, ಕಮರ್ಷಿಯಲ್ ವಲಯ ಎಂದು ಗುರುತಿಸಿದ್ದರೆ ಅಲ್ಲಿ ಜಾಹೀರಾತು ಅಳವಡಿಕೆಗೆ ಅವಕಾಶ ನೀಡಲಾಗುವುದು. ಜನಸಾಂದ್ರತೆ ಹಾಗೂ ವಹಿವಾಟು ಹೆಚ್ಚಿರುವ ಕಡೆ ಅವಕಾಶ ನೀಡಲಾಗುವುದು. ಸರ್ಕಾರಕ್ಕೆ ಹಣ ಬಾಕಿ ಉಳಿಸಿಕೊಂಡಿರುವ, ದಾವೆ ಹೂಡಿರುವವರಿಗೆ ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡುವುದಿಲ್ಲ. ನಾವು ಹೇಗೆ ಚುನಾವಣೆಗೆ ನಿಲ್ಲುವಾಗ ಯಾವುದೇ ಬಾಕಿಗಳನ್ನು ಉಳಿಸಿಕೊಳ್ಳದೇ ಇರುತ್ತೇವೆ, ಅದೇ ರೀತಿ ಇಲ್ಲಿ ಭಾಗವಹಿಸುವವರು ಎಲ್ಲಾ ಬಾಕಿಗಳನ್ನು ಕಟ್ಟಬೇಕು ಎಂದರು.

ನ್ಯಾಯಲಯದಲ್ಲಿರುವ ಒಂದಷ್ಟು ಪ್ರಕರಣಗಳ ಕುರಿತ ಪ್ರಶ್ನೆಗೆ ಉತ್ತರಿಸಿ, ಆ ಪ್ರಕರಣಗಳಿಗೆ ನಾವು ಏನು ಮಾಡಲು ಆಗುವುದಿಲ್ಲ. ಅಲ್ಲಿ ತೀರ್ಮಾನವಾದ ನಂತರ ಬಗೆಹರಿಸಬಹುದು. ಜೊತೆಗೆ ನ್ಯಾಯಾಲಯವು ಒಂದಷ್ಟು ಸೂಚನೆಗಳನ್ನು ನೀಡಿತ್ತು ಅದನ್ನು ಗಣನೆಗೆ ತೆಗೆದುಕೊಂಡು ನಿಯಮಗಳನ್ನು ರೂಪಿಸಲಾಗಿದೆ. ಮೆಟ್ರೋ ಒಳಗೆ ನಿಗಮ ನೋಡಿಕೊಳ್ಳುತ್ತದೆ. ಹೊರಗಡೆ ಪಾಲಿಕೆ ಮತ್ತು ಮೆಟ್ರೋ ಸಹಭಾಗಿತ್ವದಲ್ಲಿ ಪ್ರತ್ಯೇಕ ಪ್ಯಾಕೇಜ್ ಘೋಷಣೆ ಮಾಡಲಾಗುವುದು ಎಂದು ಹೇಳಿದರು.

ಸುಮಾರು 600 ಕೋಟಿ ಜಾಹೀರಾತು ಹಣ ಬಾಕಿ ಇದೆ ಇದಕ್ಕೆ ಪರಿಹಾರ ಏನು ಎನ್ನುವ ಪ್ರಶ್ನೆಗೆ ಉತ್ತರಿಸಿ, ಎಲ್ಲವನ್ನು ವಸೂಲಿ ಮಾಡಲಾಗುವುದು, ಹಾಗೂ ಬಾಕಿ ಉಳಿಸಿಕೊಂಡವರು ಭಾಗವಹಿಸಲು ಅವಕಾಶ ನೀಡುವುದಿಲ್ಲ ಎಂದರು. ವಾರ್ಷಿಕ ಆದಾಯದ ಕುರಿತ ಪ್ರಶ್ನೆಗೆ ಇನ್ನು ಮಗುನೇ ಹುಟ್ಟಿಲ್ಲ, ಮೊದಲೇ ಬಟ್ಟೆಯನ್ನು ಏಕೆ ಹೊಲೆಸಲಿ ಎಂದು ಮರು ಪ್ರಶ್ನಿಸಿದರು.

ದೇಶ

ಪಿಎಂ ಮೋದಿ ಆಗಸ್ಟ್ 10ರಂದು ಬೆಂಗಳೂರಿಗೆ: ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ

ಬೆಂಗಳೂರು: ನಮ್ಮ ಮೆಟ್ರೋ (Namma Metro) ಹಳದಿ ಮಾರ್ಗದ (Yellow Line) ಉದ್ಘಾಟನೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು (PM Modi) ಆಗಸ್ಟ್ 10ರಂದು ಬೆಂಗಳೂರಿಗೆ ಬರುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಧಾನಿಯವರು ಆಗಸ್ಟ್ 10ರಂದು ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟನೆ ಮಾಡುವ ಉದ್ದೇಶದಿಂದ ಬರುತ್ತಿದ್ದಾರೆ. ಅವರ ಭೇಟಿಗೆ ಸಿದ್ಧತೆಗಳು ನಡೆಯುತ್ತಿವೆ. ಟೈಮ್ ಟು ಟೈಮ್ ಕಾರ್ಯಕ್ರಮಗಳ ಬಗ್ಗೆ ಇನ್ನೂ ವಿವರ ಬಾಕಿಯಿದೆ,” ಎಂದು ಹೇಳಿದರು.

ವೈಭವದಿಂದ ಕಾರ್ಯಕ್ರಮ?
ಆದರೆ, ಮೂಲ ಯೋಜನೆಗೆ ಬದಲಾವಣೆ ಆಗಿದೆ. ಈಗ ಪ್ರಧಾನಿಯವರು ಕೇವಲ ಹಳದಿ ಮಾರ್ಗದ ಮೆಟ್ರೋ ಮತ್ತು ವಂದೇ ಭಾರತ್ ರೈಲು ಉದ್ಘಾಟನೆಗೆ ಮಾತ್ರ ಭಾಗಿಯಾಗಲಿದ್ದಾರೆ. ಬಿಜೆಪಿ ಕಾರ್ಯಕರ್ತರ ಸಮಾವೇಶ ಮತ್ತು ರೋಡ್ ಶೋ ಕಾರ್ಯಾಚರಣೆಗಳು ರದ್ದುಪಡಿಸಲಾಗಿದೆ.

ಇದರ ಪರಿಣಾಮವಾಗಿ, ಒಂದು ವರ್ಷದಿಂದ ಮೋದಿಯವರ ಆಗಮನದ ನಿರೀಕ್ಷೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರು ನಿರಾಸೆಗೊಳಗಾಗಿದ್ದಾರೆ ಎಂದು ವರದಿಯಾಗಿದೆ.

Continue Reading

ದೇಶ

ಭಾರತ vs ಅಮೆರಿಕ: ರಷ್ಯಾದ ತೈಲದ ಬಗ್ಗೆ ಉದ್ವಿಗ್ನತೆ, ಸೇನೆಯಿಂದ ತಿರುಗೇಟು

ಬೆಂಗಳೂರು: ರಷ್ಯಾದಿಂದ ಕಚ್ಚಾ ತೈಲ ಖರೀದಿಯ ಕುರಿತು ಭಾರತ-ಅಮೆರಿಕ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಂತಾಗಿದೆ. ಭಾರತ ರಷ್ಯಾದಿಂದ ತೈಲ ಆಮದು ಮಾಡುತ್ತಿರುವುದಕ್ಕೆ ಅಮೆರಿಕ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, ಭಾರತೀಯ ಸೇನೆ ಅಮೆರಿಕದ ದ್ವೇಧಾಚರಣೆ ವಿರುದ್ಧ ತಿರುಗೇಟು ನೀಡಿದೆ.

ಸೋಷಿಯಲ್ ಮೀಡಿಯಾದಲ್ಲಿ “ಈ ದಿನ ಆ ವರ್ಷ – ಯುದ್ಧದ ನಿರ್ಮಾಣ – 05 ಆಗಸ್ಟ್ 1971” ಎಂಬ ಶೀರ್ಷಿಕೆಯಡಿ ಸೇನೆಯು 1971ರ ಯುದ್ಧದ ಕಾಲದ ಪತ್ರಿಕಾ ಕಟಿಂಗ್‌ ಹಂಚಿಕೊಂಡಿದೆ. 1954ರಿಂದ 1971ರವರೆಗೆ ಅಮೆರಿಕ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ಪೂರೈಸಿದ ಬಗ್ಗೆ ಪೇಪರ್ ಕಟಿಂಗ್‌ ಉಲ್ಲೇಖಿಸುತ್ತಾ, “ಅಮೆರಿಕ ಪಾಕ್ ಪರ ಕೆಲಸ ಮಾಡಿತ್ತಲ್ಲವೆ?” ಎಂದು ಪ್ರಶ್ನಿಸಿದೆ.

ಇದು ಉಕ್ರೇನ್ ವಿರುದ್ಧದ ಯುದ್ಧಕ್ಕೆ ಭಾರತ ಹಣ ಒದಗಿಸುತ್ತಿದೆ ಎಂಬ ಅಮೆರಿಕದ ಆರೋಪಕ್ಕೆ ಪ್ರತಿಕ್ರಿಯೆಯಾಗಿದೆ. ಭಾರತವು ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟದ ಟೀಕೆಗಳನ್ನು ‘ಅಸಮರ್ಥನೀಯ ಹಾಗೂ ಅಸಮಂಜಸ’ವೆಂದು ತಿರಸ್ಕರಿಸಿದೆ. ಭಾರತ ತನ್ನ ತೈಲ ನೀತಿಯನ್ನು ಆರ್ಥಿಕ ಶಕ್ತಿಯ ದೃಷ್ಟಿಯಿಂದ ಮುಂದುವರಿಸುತ್ತಿದೆ.

Continue Reading

ದೇಶ

ಸೇನೆ ಕುರಿತ ಹೇಳಿಕೆ: ಸುಪ್ರೀಂ ಕೋರ್ಟ್ ಟೀಕೆಗೆ ಪ್ರಿಯಾಂಕಾ ಗಾಂಧಿಯಿಂದ ಕಠಿಣ ಪ್ರತಿಕ್ರಿಯೆ

ನವದೆಹಲಿ: ಭಾರತೀಯ ಸೇನೆ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಇದೀಗ ಅವರ ಸಹೋದರಿ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.

ರಾಹುಲ್ ಗಾಂಧಿಯ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ ಟೀಕೆಗೆ ಪ್ರತಿಕ್ರಿಯಿಸಿ ಪ್ರಿಯಾಂಕಾ ಗಾಂಧಿ,

“ಯಾರು ನಿಜವಾದ ಭಾರತೀಯರು ಎಂಬುದನ್ನು ನಿರ್ಧರಿಸಲು ನ್ಯಾಯಾಧೀಶರು ಯೋಗ್ಯರಲ್ಲ. ರಾಹುಲ್ ಗಾಂಧಿಗೆ ಭಾರತೀಯ ಸೇನೆಯ ಬಗ್ಗೆ ಅಪಾರ ಗೌರವವಿದೆ. ಅವರು ಎಂದಿಗೂ ಸೇನೆಯ ವಿರುದ್ಧ ಕೆಟ್ಟ ಮಾತುಗಳನ್ನು ಮಾತನಾಡಲ್ಲ,” ಎಂದು ತಿಳಿಸಿದ್ದಾರೆ.

ಗಲ್ವಾನ್ ಕಣಿವೆ ಸಂಘರ್ಷ ಕುರಿತು ಮಾತನಾಡಿದ ವೇಳೆ ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ‘ಅನುಚಿತ’ ಎಂದು ಖಂಡಿಸಿದ್ದು, “ನಿಜವಾದ ಭಾರತೀಯರು ಈ ರೀತಿ ಮಾತನಾಡುವುದಿಲ್ಲ” ಎಂದು ಹೇಳಿದ್ದಾರೆ. ಇದನ್ನು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದು, “ವಿರೋಧ ಪಕ್ಷದ ನಾಯಕರಾಗಿ ಸರ್ಕಾರವನ್ನು ಪ್ರಶ್ನಿಸುವುದು ರಾಹುಲ್ ಅವರ ಕರ್ತವ್ಯ. ನ್ಯಾಯಮೂರ್ತಿಗಳು ಇಂತಹ ಹೇಳಿಕೆ ನೀಡುವುದು ಸರಿಯಲ್ಲ,” ಎಂದಿದ್ದಾರೆ.

ಅದೇ ರೀತಿ, ಪ್ರಿಯಾಂಕಾ ಗಾಂಧಿ ಸರ್ಕಾರದ ನಡೆಗೆ ಶಂಕೆ ವ್ಯಕ್ತಪಡಿಸಿ,

“ರಾಹುಲ್ ಗಾಂಧಿಯ ಪ್ರಶ್ನೆಗಳಿಗೆ ಸರ್ಕಾರದ ಬಳಿ ಉತ್ತರಗಳಿಲ್ಲ. ಅವರು ಚರ್ಚೆಗೆ ತಯಾರಿಲ್ಲ. ಸಂಸತ್ತನ್ನು ಸರಿಯಾಗಿ ನಡೆಸಲಾಗುತ್ತಿಲ್ಲ. ಇದನ್ನೆಲ್ಲಾ ಮರೆಮಾಚಲು ಈ ರೀತಿಯ ತಂತ್ರಗಳನ್ನು ಬಳಸುತ್ತಿದ್ದಾರೆ,” ಎಂದು ವಾಗ್ದಾಳಿ ನಡೆಸಿದ್ದಾರೆ.

Continue Reading

Trending