Connect with us

ದೇಶ

ಭಾರತೀಯ ವಿದ್ಯಾರ್ಥಿಗಳಿಗೆ ಬಂಪರ್​ ಆಫರ್​; ವಿದೇಶಿ ವಿದ್ಯಾರ್ಥಿಗಳಿಗೆ ಗ್ರೀನ್ ಕಾರ್ಡ್ ನೀಡುವ ವ್ಯವಸ್ಥೆ: ಟ್ರಂಪ್ ಮೆಗಾ ಭರವಸೆ

ವಾಷಿಂಗ್ಟನ್ (ಅಮೆರಿಕ): ”ತಾವು ಅಧ್ಯಕ್ಷರಾಗಿ ಮರು ಆಯ್ಕೆಯಾದರೆ, ಅಮೆರಿಕದ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿದ ವಿದೇಶಿ ವಿದ್ಯಾರ್ಥಿಗಳಿಗೆ ಸ್ವಯಂಚಾಲಿತವಾಗಿ ಗ್ರೀನ್ ಕಾರ್ಡ್‌ಗಳನ್ನು ನೀಡುವ ಕಾರ್ಯಕ್ರಮವನ್ನು ಜಾರಿಗೆ ತರಲಾಗುವುದು ಎಂದು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಟ್ರಂಪ್ ನಿಜವಾಗಿಯೂ ಮರು ಆಯ್ಕೆಯಾದರೆ ಮತ್ತು ಅವರ ಭರವಸೆಯನ್ನು ಪೂರೈಸಿದರೆ, ಭಾರತದ ವಿದ್ಯಾರ್ಥಿಗಳು ಅತಿದೊಡ್ಡ ಫಲಾನುಭವಿಗಳಾಗಲಿದ್ದಾರೆ. ಅಮರಿಕದಲ್ಲಿ ಚೀನಾದ ವಿದ್ಯಾರ್ಥಿಗಳು ಅತಿ ಹೆಚ್ಚು ಸಂಖ್ಯೆಯಲ್ಲಿದ್ದಾರೆ. 2023ರಲ್ಲಿ ಅಮೆರಿಕದಲ್ಲಿ ದಾಖಲಾದ ಎಲ್ಲಾ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆ ಶೇ. 53ರಷ್ಟಿದೆ.

ಗುರುವಾರ, ಇಬ್ಬರು ಸಿಲಿಕಾನ್ ವ್ಯಾಲಿ ಹೂಡಿಕೆದಾರರೊಂದಿಗಿನ ಪಾಡ್‌ಕ್ಯಾಸ್ಟ್‌ನಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಟ್ರಂಪ್ ಅವರು, “ನಾನು ಭರವಸೆ ನೀಡುತ್ತೇನೆ, ಜೊತೆಗೆ ನಾನು ಅದನ್ನು ಒಪ್ಪುತ್ತೇನೆ. ಪ್ರಮುಖವಾಗಿ ನಾನು ಏನು ಮಾಡುತ್ತೇನೆಂದ್ರೆ, ನೀವು ಅಮೆರಿಕದ ಕಾಲೇಜಿನಿಂದ ಪದವಿ ಪೂರ್ಣಗೊಳಿಸಿದ ನಂತರ, ಈ ದೇಶದಲ್ಲಿ ಉಳಿಯಲು ಗ್ರೀನ್ ಕಾರ್ಡ್ ಅನ್ನು ನೀವು ಸ್ವಯಂಚಾಲಿತವಾಗಿ ಪಡೆಯಬೇಕು ಎಂದು ನಾನು ಭಾವಿಸುತ್ತೇನೆ” ಎಂದು ಭರವಸೆ ನೀಡಿದರು.

ಗ್ರೀನ್ ಕಾರ್ಡ್ ಹೊಂದಿರುವವರು ಶಾಶ್ವತವಾಗಿ ಅಮೆರಿಕದಲ್ಲಿ ಉಳಿಯಲು ಮತ್ತು ಕೆಲಸ ಮಾಡಲು ಅನುಮತಿಸಲಾಗುತ್ತದೆ. ಶಾಶ್ವತ ನಿವಾಸ ಮತ್ತು ಇದು ಪೂರ್ಣ ಪೌರತ್ವದಿಂದ ಒಂದು ಹೆಜ್ಜೆ ದೂರದಲ್ಲಿರಲಿದೆ. ಅಮೆರಿಕ ಪ್ರತಿ ವರ್ಷ ಅಂದಾಜು 1 ಮಿಲಿಯನ್ ಗ್ರೀನ್ ಕಾರ್ಡ್‌ಗಳನ್ನು ನೀಡುತ್ತದೆ ಮತ್ತು ಹೆಚ್ಚಾಗಿ ಚೀನಾ ಮತ್ತು ಭಾರತದಿಂದ ಪ್ರತಿ ವರ್ಷ 1 ಮಿಲಿಯನ್ ವಿದೇಶಿ ವಿದ್ಯಾರ್ಥಿಗಳಿಗೆ ಈ ಲಾಭ ದೊರೆಯಲಿದ್ದಾರೆ. ಮಾಜಿ ಅಧ್ಯಕ್ಷ ಟ್ರಂಪ್​ ಚುನಾಯಿತರಾದರೆ ಈ ಭರವಸೆಯನ್ನು ನಿಜವಾಗಿ ಪೂರೈಸಿದರೆ, ಇದು ಕಾರ್ಯಕ್ರಮದ ಪ್ರಮುಖ ವಿಸ್ತರಣೆ ಆಗುತ್ತದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ. ವಾರ್ಷಿಕವಾಗಿ ನೀಡಲಾಗುವ ಗ್ರೀನ್ ಕಾರ್ಡ್‌ಗಳ ಸಂಖ್ಯೆಯನ್ನು ದ್ವಿಗುಣಗೊಳಿಸುತ್ತದೆ. ಆದರೆ, ಅವರು ನಿಜವಾಗಿಯೂ ಈ ಭರವಸೆಯನ್ನು ಈಡೇರಿಸುತ್ತಾರೆಯೇ ಎಂಬುದು ಈಗಿರುವ ದೊಡ್ಡ ಪ್ರಶ್ನೆಯಾಗಿದೆ.

H-1B ಅಲ್ಪಾವಧಿಯ ವಲಸೆಯೇತರ ಕೆಲಸದ ವೀಸಾ: 2017 ರಿಂದ 2021 ರವರೆಗೆ ಅಧಿಕಾರದಲ್ಲಿದ್ದಾಗ, ಅವರ ಆಡಳಿತವು ವಲಸಿಗರನ್ನು ನಿರ್ಬಂಧಿಸಲು ಪ್ರಯತ್ನಿಸಿತ್ತು ಮತ್ತು ವಾಸ್ತವವಾಗಿ, H-1B ಅಲ್ಪಾವಧಿಯ ವಲಸೆಯೇತರ ಕೆಲಸದ ವೀಸಾಗಳಲ್ಲಿ ಅಮೆರಿಕಕ್ಕೆ ಬರುವ ಭಾರತೀಯರನ್ನು ಟಾರ್ಗೆಟ್​ ಮಾಡಲಾಗಿತ್ತು. ಅಧಿಕಾರ ವಹಿಸಿಕೊಳ್ಳುವ ಮೊದಲು ಅವರು H-1B ಕಾರ್ಯಕ್ರಮವನ್ನು ಬೆಂಬಲಿಸಿದ್ದರು.

ಅಮೆರಿಕ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಹೆಚ್ಚಿನ ಭಾರತೀಯ ವಿದ್ಯಾರ್ಥಿಗಳು H-1B ವೀಸಾಗಳಲ್ಲಿ ಅಮೆರಿಕನ್​ ಕಂಪನಿಗಳಿಗೆ ಕೆಲಸ ಮಾಡಲು ಹೋಗುತ್ತಾರೆ. ನಂತರ ಗ್ರೀನ್ ಕಾರ್ಡ್‌ಗಳು ಮತ್ತು ಪೌರತ್ವಕ್ಕೆ ಪಡೆದುಕೊಳ್ಳುತ್ತಾರೆ. ಗೂಗಲ್ ಸಿಇಒ ಸುಂದರ್ ಪಿಚೈ ಮತ್ತು ಅಡೋಬ್ ಸಿಇಒ ಶಾಂತನು ನಾರಾಯಣ್ ಇದಕ್ಕೆ ಪ್ರಮುಖ ಉದಾಹರಣೆಗಳಾಗಿದ್ದಾರೆ.

ವಿದೇಶಿ ವಿದ್ಯಾರ್ಥಿಗಳು ಗ್ರೀನ್ ಕಾರ್ಡ್‌ಗಳನ್ನು ಪಡೆಯಲು H-1B ಅಥವಾ ಇತರ ಕೆಲಸದ ವೀಸಾಗಳ ಹಂತವನ್ನು ದಾಟಿಕೊಂಡು ಹೋಗಬೇಕಾಗುತ್ತದೆ. ಮಾಜಿ ಅಧ್ಯಕ್ಷ ಟ್ರಂಪ್ ಆ ಹಂತವನ್ನು ತೆಗೆದುಹಾಕುವುದಾಗಿ ಮತ್ತು ವಿದೇಶಿ ವಿದ್ಯಾರ್ಥಿಗಳಿಗೆ ಅವರ ಪದವಿ ಪೂರ್ಣಗೊಳಿಸಿದ ನಂತರ ಗ್ರೀನ್ ಕಾರ್ಡ್‌ಗಳನ್ನು ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ.

ದೇಶ

ಪಿಎಂ ಮೋದಿ ಆಗಸ್ಟ್ 10ರಂದು ಬೆಂಗಳೂರಿಗೆ: ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ

ಬೆಂಗಳೂರು: ನಮ್ಮ ಮೆಟ್ರೋ (Namma Metro) ಹಳದಿ ಮಾರ್ಗದ (Yellow Line) ಉದ್ಘಾಟನೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು (PM Modi) ಆಗಸ್ಟ್ 10ರಂದು ಬೆಂಗಳೂರಿಗೆ ಬರುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಧಾನಿಯವರು ಆಗಸ್ಟ್ 10ರಂದು ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟನೆ ಮಾಡುವ ಉದ್ದೇಶದಿಂದ ಬರುತ್ತಿದ್ದಾರೆ. ಅವರ ಭೇಟಿಗೆ ಸಿದ್ಧತೆಗಳು ನಡೆಯುತ್ತಿವೆ. ಟೈಮ್ ಟು ಟೈಮ್ ಕಾರ್ಯಕ್ರಮಗಳ ಬಗ್ಗೆ ಇನ್ನೂ ವಿವರ ಬಾಕಿಯಿದೆ,” ಎಂದು ಹೇಳಿದರು.

ವೈಭವದಿಂದ ಕಾರ್ಯಕ್ರಮ?
ಆದರೆ, ಮೂಲ ಯೋಜನೆಗೆ ಬದಲಾವಣೆ ಆಗಿದೆ. ಈಗ ಪ್ರಧಾನಿಯವರು ಕೇವಲ ಹಳದಿ ಮಾರ್ಗದ ಮೆಟ್ರೋ ಮತ್ತು ವಂದೇ ಭಾರತ್ ರೈಲು ಉದ್ಘಾಟನೆಗೆ ಮಾತ್ರ ಭಾಗಿಯಾಗಲಿದ್ದಾರೆ. ಬಿಜೆಪಿ ಕಾರ್ಯಕರ್ತರ ಸಮಾವೇಶ ಮತ್ತು ರೋಡ್ ಶೋ ಕಾರ್ಯಾಚರಣೆಗಳು ರದ್ದುಪಡಿಸಲಾಗಿದೆ.

ಇದರ ಪರಿಣಾಮವಾಗಿ, ಒಂದು ವರ್ಷದಿಂದ ಮೋದಿಯವರ ಆಗಮನದ ನಿರೀಕ್ಷೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರು ನಿರಾಸೆಗೊಳಗಾಗಿದ್ದಾರೆ ಎಂದು ವರದಿಯಾಗಿದೆ.

Continue Reading

ದೇಶ

ಭಾರತ vs ಅಮೆರಿಕ: ರಷ್ಯಾದ ತೈಲದ ಬಗ್ಗೆ ಉದ್ವಿಗ್ನತೆ, ಸೇನೆಯಿಂದ ತಿರುಗೇಟು

ಬೆಂಗಳೂರು: ರಷ್ಯಾದಿಂದ ಕಚ್ಚಾ ತೈಲ ಖರೀದಿಯ ಕುರಿತು ಭಾರತ-ಅಮೆರಿಕ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಂತಾಗಿದೆ. ಭಾರತ ರಷ್ಯಾದಿಂದ ತೈಲ ಆಮದು ಮಾಡುತ್ತಿರುವುದಕ್ಕೆ ಅಮೆರಿಕ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, ಭಾರತೀಯ ಸೇನೆ ಅಮೆರಿಕದ ದ್ವೇಧಾಚರಣೆ ವಿರುದ್ಧ ತಿರುಗೇಟು ನೀಡಿದೆ.

ಸೋಷಿಯಲ್ ಮೀಡಿಯಾದಲ್ಲಿ “ಈ ದಿನ ಆ ವರ್ಷ – ಯುದ್ಧದ ನಿರ್ಮಾಣ – 05 ಆಗಸ್ಟ್ 1971” ಎಂಬ ಶೀರ್ಷಿಕೆಯಡಿ ಸೇನೆಯು 1971ರ ಯುದ್ಧದ ಕಾಲದ ಪತ್ರಿಕಾ ಕಟಿಂಗ್‌ ಹಂಚಿಕೊಂಡಿದೆ. 1954ರಿಂದ 1971ರವರೆಗೆ ಅಮೆರಿಕ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ಪೂರೈಸಿದ ಬಗ್ಗೆ ಪೇಪರ್ ಕಟಿಂಗ್‌ ಉಲ್ಲೇಖಿಸುತ್ತಾ, “ಅಮೆರಿಕ ಪಾಕ್ ಪರ ಕೆಲಸ ಮಾಡಿತ್ತಲ್ಲವೆ?” ಎಂದು ಪ್ರಶ್ನಿಸಿದೆ.

ಇದು ಉಕ್ರೇನ್ ವಿರುದ್ಧದ ಯುದ್ಧಕ್ಕೆ ಭಾರತ ಹಣ ಒದಗಿಸುತ್ತಿದೆ ಎಂಬ ಅಮೆರಿಕದ ಆರೋಪಕ್ಕೆ ಪ್ರತಿಕ್ರಿಯೆಯಾಗಿದೆ. ಭಾರತವು ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟದ ಟೀಕೆಗಳನ್ನು ‘ಅಸಮರ್ಥನೀಯ ಹಾಗೂ ಅಸಮಂಜಸ’ವೆಂದು ತಿರಸ್ಕರಿಸಿದೆ. ಭಾರತ ತನ್ನ ತೈಲ ನೀತಿಯನ್ನು ಆರ್ಥಿಕ ಶಕ್ತಿಯ ದೃಷ್ಟಿಯಿಂದ ಮುಂದುವರಿಸುತ್ತಿದೆ.

Continue Reading

ದೇಶ

ಸೇನೆ ಕುರಿತ ಹೇಳಿಕೆ: ಸುಪ್ರೀಂ ಕೋರ್ಟ್ ಟೀಕೆಗೆ ಪ್ರಿಯಾಂಕಾ ಗಾಂಧಿಯಿಂದ ಕಠಿಣ ಪ್ರತಿಕ್ರಿಯೆ

ನವದೆಹಲಿ: ಭಾರತೀಯ ಸೇನೆ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಇದೀಗ ಅವರ ಸಹೋದರಿ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.

ರಾಹುಲ್ ಗಾಂಧಿಯ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ ಟೀಕೆಗೆ ಪ್ರತಿಕ್ರಿಯಿಸಿ ಪ್ರಿಯಾಂಕಾ ಗಾಂಧಿ,

“ಯಾರು ನಿಜವಾದ ಭಾರತೀಯರು ಎಂಬುದನ್ನು ನಿರ್ಧರಿಸಲು ನ್ಯಾಯಾಧೀಶರು ಯೋಗ್ಯರಲ್ಲ. ರಾಹುಲ್ ಗಾಂಧಿಗೆ ಭಾರತೀಯ ಸೇನೆಯ ಬಗ್ಗೆ ಅಪಾರ ಗೌರವವಿದೆ. ಅವರು ಎಂದಿಗೂ ಸೇನೆಯ ವಿರುದ್ಧ ಕೆಟ್ಟ ಮಾತುಗಳನ್ನು ಮಾತನಾಡಲ್ಲ,” ಎಂದು ತಿಳಿಸಿದ್ದಾರೆ.

ಗಲ್ವಾನ್ ಕಣಿವೆ ಸಂಘರ್ಷ ಕುರಿತು ಮಾತನಾಡಿದ ವೇಳೆ ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ‘ಅನುಚಿತ’ ಎಂದು ಖಂಡಿಸಿದ್ದು, “ನಿಜವಾದ ಭಾರತೀಯರು ಈ ರೀತಿ ಮಾತನಾಡುವುದಿಲ್ಲ” ಎಂದು ಹೇಳಿದ್ದಾರೆ. ಇದನ್ನು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದು, “ವಿರೋಧ ಪಕ್ಷದ ನಾಯಕರಾಗಿ ಸರ್ಕಾರವನ್ನು ಪ್ರಶ್ನಿಸುವುದು ರಾಹುಲ್ ಅವರ ಕರ್ತವ್ಯ. ನ್ಯಾಯಮೂರ್ತಿಗಳು ಇಂತಹ ಹೇಳಿಕೆ ನೀಡುವುದು ಸರಿಯಲ್ಲ,” ಎಂದಿದ್ದಾರೆ.

ಅದೇ ರೀತಿ, ಪ್ರಿಯಾಂಕಾ ಗಾಂಧಿ ಸರ್ಕಾರದ ನಡೆಗೆ ಶಂಕೆ ವ್ಯಕ್ತಪಡಿಸಿ,

“ರಾಹುಲ್ ಗಾಂಧಿಯ ಪ್ರಶ್ನೆಗಳಿಗೆ ಸರ್ಕಾರದ ಬಳಿ ಉತ್ತರಗಳಿಲ್ಲ. ಅವರು ಚರ್ಚೆಗೆ ತಯಾರಿಲ್ಲ. ಸಂಸತ್ತನ್ನು ಸರಿಯಾಗಿ ನಡೆಸಲಾಗುತ್ತಿಲ್ಲ. ಇದನ್ನೆಲ್ಲಾ ಮರೆಮಾಚಲು ಈ ರೀತಿಯ ತಂತ್ರಗಳನ್ನು ಬಳಸುತ್ತಿದ್ದಾರೆ,” ಎಂದು ವಾಗ್ದಾಳಿ ನಡೆಸಿದ್ದಾರೆ.

Continue Reading

Trending