Connect with us

ಆರೋಗ್ಯ

ಕೋಪ ಹೆಚ್ಚುತ್ತಿದೆಯೇ?; ಹಾಗಾದ್ರೆ ಈ ಆಹಾರಗಳನ್ನು ದಯವಿಟ್ಟು ನಿಯಂತ್ರಿಸಿ, ಸಿಟ್ಟು ಕಡಿಮೆ ಮಾಡಿಕೊಳ್ಳಿ!

ನಾವು ದಿನನಿತ್ಯ ಸೇವಿಸುವ ಆಹಾರ ದೈಹಿಕವಾಗಿ ಮಾತ್ರವಲ್ಲದೇ ಮಾನಸಿಕವಾಗಿಯೂ ನಮ್ಮ ಮೇಲೆ ಪರಿಣಾಮ ಬೀರುತ್ತದೆ. ಸಂತೋಷ, ಕೋಪ ಸೇರಿ ವಿವಿಧ ಭಾವನೆಗಳ ಸೃಷ್ಟಿಯಲ್ಲಿ ಆಹಾರ ಪ್ರಮುಖ ಪಾತ್ರ ವಹಿಸುತ್ತದೆ. ಕೆಲ ಆಹಾರಗಳು, ಮೆದುಳಿನಿಂದ ನಕಾರಾತ್ಮಕ ಸಂಕೇತಗಳನ್ನು ಕಳುಹಿಸುತ್ತವೆ. ಅವು ಕೋಪಕ್ಕೆ ಕಾರಣವಾಗುತ್ತದೆ. ಹಾಗಾಗಿ, ನಿತ್ಯ ನಿಮಗೆ ಕೋಪ ಹೆಚ್ಚುತ್ತಿದೆ ಎಂದೆನಿಸಿದರೆ ಅಂತಹ ಆಹಾರಗಳನ್ನು ತಿಳಿದುಕೊಂಡು, ಅವುಗಳನ್ನು ನಿಯಂತ್ರಿಸೋ ಮೂಲಕ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ.

ಸಂಸ್ಕರಿಸಿದ ಆಹಾರ (Processed food): ಸಂಸ್ಕರಿಸಿದ ಆಹಾರಗಳು ನಮಗೆ ತ್ವರಿತ ಶಕ್ತಿಯನ್ನು ನೀಡುತ್ತದೆ. ಎನರ್ಜಿ ಬೂಸ್ಟರ್ ಆಗಿಯೂ ಕೆಲಸ ಮಾಡುತ್ತದೆ. ಅದಾಗ್ಯೂ, ಹೆಚ್ಚು ಪಾಲಿಶ್ ಮಾಡಿದ ಆಹಾರಗಳು ಮತ್ತು ಸಂಸ್ಕರಿಸಿದ ಆಹಾರ ಸೇವನೆಯು (ವಿಶೇಷವಾಗಿ ಸಕ್ಕರೆ ಅಂಶವಿರುವ ಆಹಾರ) ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸಬಹುದು. ಪರಿಣಾಮ, ಮೂಡ್ ಸ್ವಿಂಗ್​ನಂತಹ ಸಮಸ್ಯೆಗಳು ನಿಮಗೆ ಕಿರಿಕಿರಿಯನ್ನುಂಟು ಮಾಡುತ್ತದೆ. ಹಾಗಾಗಿ ಇಂತಹ ಆಹಾರವನ್ನು ಕಡಿಮೆ ಮಾಡಿದಷ್ಟೂ ಒಳ್ಳೆಯದು.

ಕೆಫಿನ್: ಅನೇಕರು ದಿನನಿತ್ಯ ಕೆಫಿನ್ (ಕಾಫಿ) ಸೇವಿಸುವ ಅಭ್ಯಾಸವನ್ನು ರೂಢಿಸಿಕೊಂಡಿರುತ್ತಾರೆ. ಪ್ರಮಾಣ ಹೆಚ್ಚಾದರೆ ಅದು ನಿಮ್ಮ ಭಾವನೆಗಳ ಮೇಲೆ ಪರಿಣಾಮ ಬೀರುತ್ತದೆ. ಹೆಚ್ಚಿನ ಕೆಫಿನ್ ನಿದ್ರೆ ಮೇಲೂ ಪರಿಣಾಮ ಬೀರುತ್ತದೆ. ಇದು ಕಿರಿಕಿರಿ, ಕೋಪದಂತಹ ಭಾವನೆಗಳಿಗೆ ಕಾರಣವಾಗುತ್ತದೆ. ಕೆಫಿನ್ ಸೇವನೆಯನ್ನು ನಿಯಂತ್ರಿಸಬೇಕೆಂದುಕೊಂಡರೆ, ಗಿಡಮೂಲಿಕೆಯ ಅಂಶಗಳನ್ನೊಳಗೊಂಡ ಚಹಾಗಳನ್ನು ಬಳಸುವುದು ಸೂಕ್ತ.

ಆಲ್ಕೋಹಾಲ್: ಮದ್ಯ ಸೇವನೆ ಒಂದು ಕ್ಷಣಕ್ಕೆ ನಿಮಗೆ ಖುಷಿ ಕೊಡಬಹುದು, ವಿಶ್ರಾಂತಿಯ ಅನುಭವವಾಗಬಹುದು. ಆದರೆ, ಪ್ರಮಾಣ ಹೆಚ್ಚಾದರೆ ಕಿರಿಕಿರಿ, ಮೂಡ್ ಸ್ವಿಂಗ್‌ಗೆ ಕಾರಣವಾಗಬಹುದು. ಆಲ್ಕೋಹಾಲ್ ಮೆದುಳಿನಲ್ಲಿರುವ ನರಗಳ ಮೇಲೆ ಪರಿಣಾಮ ಬೀರುತ್ತದೆ. ಇದು ಭಾವನೆಗಳು ಅಸಮತೋಲನಕ್ಕೆ ಕಾರಣವಾಗುತ್ತದೆ. ಹಾಗಾಗಿ ಇದನ್ನು ನಿಯಂತ್ರಣದಲ್ಲಿಡಿ.

ಸಂಸ್ಕರಿಸಿದ ಕೊಬ್ಬಿನಾಂಶ: ಸಂಸ್ಕರಿತ ಆಹಾರಗಳನ್ನು ಅಧಿಕವಾಗಿ ಸೇವಿಸಿದರೆ, ಅವುಗಳಲ್ಲಿ ಇರುವ ಟ್ರಾನ್ಸ್ ಫ್ಯಾಟ್​ ಮತ್ತು ಸ್ಯಾಚುರೇಟೆಡ್ ಫ್ಯಾಟ್​​ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಈ ಕೊಬ್ಬಿನಾಂಶ ದೇಹದ ಉಷ್ಣತೆ ಹೆಚ್ಚಿಸುತ್ತದೆ. ಪರಿಣಾಮವಾಗಿ, ಮೆದುಳಿನ ಮೇಲೆ ಪರಿಣಾಮ ಬೀರುತ್ತದೆ. ನಿಮಗೆ ಕಿರಿಕಿರಿಯನ್ನುಂಟುಮಾಡುತ್ತದೆ. ಇವುಗಳ ಬದಲಿಗೆ ಅವಕಾಡೊ, ನಟ್ಸ್ ಮತ್ತು ಆಲಿವ್ ಎಣ್ಣೆಯಂತಹ ಉತ್ತಮ ಕೊಬ್ಬಿನಾಂಶ ಇರುವ ಆಹಾರಗಳನ್ನು ತೆಗೆದುಕೊಳ್ಳಬಹುದು.

ಸ್ನ್ಯಾಕ್ಸ್: ಚಿಪ್ಸ್ ಮತ್ತು ಕ್ರ್ಯಾಕರ್ಸ್​​​ನಂತಹ ಹೆಚ್ಚು ಸಂಸ್ಕರಿಸಿದ ಆಹಾರವನ್ನು ಸೇವಿಸುವುದರಿಂದ ನಿರ್ಜಲೀಕರಣ ಮತ್ತು ಮೂಡ್ ಸ್ವಿಂಗ್‌ ಸಮಸ್ಯೆ ಕಾಡುತ್ತದೆ. ಹೆಚ್ಚಿನ ಸೋಡಿಯಂ ಸೇವನೆಯು ಅಧಿಕ ರಕ್ತದೊತ್ತಡ, ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದಂತೆ ಸೈಡ್ ಎಫೆಕ್ಟ್ಸ್​​ಗೆ ಕಾರಣವಾಗಬಹುದು. ಬದಲಿಗೆ ತಾಜಾ ಹಣ್ಣುಗಳು ಮತ್ತು ಕಾಳುಗಳನ್ನು ತೆಗೆದುಕೊಳ್ಳುವುದು ಉತ್ತಮ.

ಬೆಳಗಿನ ಉಪಾಹಾರದಲ್ಲಿ ಸಕ್ಕರೆ ನಿಯಂತ್ರಿಸಿ: ಹೆಚ್ಚಿನ ಸಕ್ಕರೆಯಂಶವುಳ್ಳ ಉಪಾಹಾರ ನಿಮ್ಮ ಶಕ್ತಿಯನ್ನು ಹೆಚ್ಚಿಸಲು ಉಪಯುಕ್ತವಾಗಿದೆ. ಆದರೆ, ಇದು ನಿಮ್ಮ ನೈಜ ಶಕ್ತಿಯನ್ನು ಕುಗ್ಗಿಸುತ್ತದೆ. ಶಕ್ತಿಯ ಹಠಾತ್ ಹೆಚ್ಚಳ ನಿಮ್ಮ ಸಕ್ಕರೆ ಮಟ್ಟದಲ್ಲಿನ ಬದಲಾವಣೆಗೆ ಕಾರಣವಾಗಬಹುದು. ಹಾಗಾಗಿ ಸಕ್ಕರೆ ಕಡಿಮೆ ಇರುವ ಆಹಾರವನ್ನು ಸೇವಿಸುವುದು ಉತ್ತಮ.

ಗಮನದಲ್ಲಿಡಿ: ಇಲ್ಲಿ ಒದಗಿಸಲಾದ ಎಲ್ಲ ಆರೋಗ್ಯ ಮಾಹಿತಿ, ವೈದ್ಯಕೀಯ ಸಲಹೆಗಳ ನಿಮ್ಮ ತಿಳಿವಳಿಕೆಗಾಗಿ ಮಾತ್ರ. ವೈಜ್ಞಾನಿಕ ಸಂಶೋಧನೆ, ಅಧ್ಯಯನಗಳು, ವೈದ್ಯಕೀಯ – ಆರೋಗ್ಯ ವೃತ್ತಿಪರ ಸಲಹೆಯನ್ನು ಆಧರಿಸಿ ನಾವು ಈ ಮಾಹಿತಿಯನ್ನು ಒದಗಿಸುತ್ತಿದ್ದೇವೆ. ಆದರೆ ಇವುಗಳನ್ನು ಅನುಸರಿಸುವ ಮೊದಲು ನೀವು ವೈದ್ಯರ ಸಲಹೆ ತೆಗೆದುಕೊಳ್ಳುವುದು ಉತ್ತಮ.

ಆರೋಗ್ಯ

ಕೊಲೆಸ್ಟ್ರಾಲ್ ಕಂಟ್ರೋಲ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ! ಹೃದಯವನ್ನು ಆರೋಗ್ಯವಾಗಿಡಿ..!

ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಆರೋಗ್ಯಕರ ಜೀವನಕ್ಕೆ ಅತ್ಯಗತ್ಯ. ಹೆಚ್ಚಿನ ಕೊಲೆಸ್ಟ್ರಾಲ್ ಹೃದಯ ಕಾಯಿಲೆ, ಸ್ಟ್ರೋಕ್, ಮತ್ತು ಇತರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಔಷಧಿಗಳು ಮತ್ತು ಆಹಾರ ಕ್ರಮದ ಜೊತೆಗೆ, ಮನೆಯಲ್ಲಿಯೇ ಲಭ್ಯವಿರುವ ಕೆಲವು ವಸ್ತುಗಳನ್ನು ಬಳಸಿಕೊಂಡು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಬಹುದು. ಈ ಲೇಖನದಲ್ಲಿ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಕೆಲವು ಸರಳ ಮತ್ತು ಪರಿಣಾಮಕಾರಿ ಸಲಹೆಗಳನ್ನು ತಿಳಿಯಿರಿ.

ಕೊಲೆಸ್ಟ್ರಾಲ್ ಎಂಬುದು ರಕ್ತದಲ್ಲಿ ಕಂಡುಬರುವ ಕೊಬ್ಬಿನಂತಹ ವಸ್ತು. ಇದು ದೇಹದ ಕಾರ್ಯನಿರ್ವಹಣೆಗೆ ಅಗತ್ಯವಾದರೂ, ಅತಿಯಾದ ಕೊಲೆಸ್ಟ್ರಾಲ್ (ವಿಶೇಷವಾಗಿ LDL ಅಥವಾ “ಕೆಟ್ಟ” ಕೊಲೆಸ್ಟ್ರಾಲ್) ರಕ್ತನಾಳಗಳಲ್ಲಿ ಸಂಗ್ರಹವಾಗಿ ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ. HDL ಅಥವಾ “ಒಳ್ಳೆಯ” ಕೊಲೆಸ್ಟ್ರಾಲ್ ದೇಹಕ್ಕೆ ಒಳಿತು ಮಾಡುತ್ತದೆ. ಆದ್ದರಿಂದ, LDL ಕಡಿಮೆ ಮಾಡುವುದು ಮತ್ತು HDL ಹೆಚ್ಚಿಸುವುದು ಮುಖ್ಯ.

ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಸರಳ ಮನೆಮದ್ದುಗಳು

ಕೊಲೆಸ್ಟ್ರಾಲ್ ನಿಯಂತ್ರಿಸಲು ಕೆಲವು ಮನೆಮದ್ದುಗಳು ಪರಿಣಾಮಕಾರಿಯಾಗಿವೆ:
1. ಬೆಳ್ಳುಳ್ಳಿ: ಬೆಳ್ಳುಳ್ಳಿಯು ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಾಯಕವಾಗಿದೆ. ದಿನಕ್ಕೆ 1-2 ಬೆಳ್ಳುಳ್ಳಿ ಎಸಳುಗಳನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿ.
2. ಶುಂಠಿ: ಶುಂಠಿಯ ರಸವನ್ನು ಜೇನುತುಪ್ಪದೊಂದಿಗೆ ಸೇವಿಸುವುದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಬಹುದು.
3. ಓಟ್ಸ್: ಓಟ್ಸ್‌ನಲ್ಲಿ ಒಳಗೊಂಡಿರುವ ಫೈಬರ್ ಕೊಲೆಸ್ಟ್ರಾಲ್ ಹೀರಿಕೊಳ್ಳುವಿಕೆಯನ್ನು ಕಡಿಮೆ ಮಾಡುತ್ತದೆ. ದಿನನಿತ್ಯದ ಉಪಾಹಾರದಲ್ಲಿ ಓಟ್ಸ್ ಸೇವಿಸಿ.
4. ತುಳಸಿ: ತುಳಸಿ ಚಹಾವನ್ನು ಕುಡಿಯುವುದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಬಹುದು.
5. ಬಾದಾಮಿ: ದಿನಕ್ಕೆ ಕೆಲವು ಬಾದಾಮಿಗಳನ್ನು ಸೇವಿಸುವುದರಿಂದ HDL ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಬಹುದು.

ಆರೋಗ್ಯಕರ ಆಹಾರ ಕ್ರಮ

ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಆಹಾರ ಕ್ರಮವು ಕೀಲಿಯಾಗಿದೆ:
 ಕೊಬ್ಬಿನ ಆಹಾರವನ್ನು ತಪ್ಪಿಸಿ: ಟ್ರಾನ್ಸ್ ಫ್ಯಾಟ್, ತಿಂಡಿಗಳು, ಮತ್ತು ತೈಲಯುಕ್ತ ಆಹಾರವನ್ನು ಕಡಿಮೆ ಮಾಡಿ.
 ಫೈಬರ್ ಆಹಾರ: ಹಣ್ಣುಗಳು, ತರಕಾರಿಗಳು, ಮತ್ತು ಧಾನ್ಯಗಳನ್ನು ಆಹಾರದಲ್ಲಿ ಸೇರಿಸಿ.
 ಒಮೆಗಾ-3: ಮೀನು, ಚಿಯಾ ಬೀಜಗಳು, ಮತ್ತು ಅಗಸೆ ಬೀಜಗಳಂತಹ ಒಮೆಗಾ-3 ಆಹಾರಗಳು ಹೃದಯಕ್ಕೆ ಒಳ್ಳೆಯದು.
 ಗ್ರೀನ್ ಟೀ: ಗ್ರೀನ್ ಟೀಯಲ್ಲಿರುವ ಆಂಟಿಆಕ್ಸಿಡೆಂಟ್‌ಗಳು ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಾಯಕ.
 ನೀರಿನ ಸೇವನೆ: ದಿನಕ್ಕೆ ಕನಿಷ್ಠ 8-10 ಗ್ಲಾಸ್ ನೀರನ್ನು ಕುಡಿಯಿರಿ.

ವ್ಯಾಯಾಮದ ಪ್ರಾಮುಖ್ಯತೆ

ದೈನಂದಿನ ವ್ಯಾಯಾಮವು ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಅತ್ಯಗತ್ಯ. ವಾರಕ್ಕೆ ಕನಿಷ್ಠ 150 ನಿಮಿಷಗಳ ಮಧ್ಯಮ ತೀವ್ರತೆಯ ವ್ಯಾಯಾಮವನ್ನು ಮಾಡಿ. ಇದರಲ್ಲಿ ತ್ವರಿತ ನಡಿಗೆ, ಈಜು, ಸೈಕ್ಲಿಂಗ್, ಅಥವಾ ಯೋಗವನ್ನು ಸೇರಿಸಬಹುದು. ವ್ಯಾಯಾಮವು HDL ಕೊಲೆಸ್ಟ್ರಾಲ್‌ನ್ನು ಹೆಚ್ಚಿಸುವುದರ ಜೊತೆಗೆ ಒಟ್ಟಾರೆ ಹೃದಯ ಆರೋಗ್ಯವನ್ನು ಸುಧಾರಿಸುತ್ತದೆ.

ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಜೀವನಶೈಲಿಯ ಬದಲಾವಣೆಗಳು ಮುಖ್ಯ:
 ಧೂಮಪಾನ ತ್ಯಜಿಸಿ: ಧೂಮಪಾನವು HDL ಕೊಲೆಸ್ಟ್ರಾಲ್‌ನ್ನು ಕಡಿಮೆ ಮಾಡುತ್ತದೆ.
 ತೂಕ ನಿಯಂತ್ರಣ: ದೇಹದ ತೂಕವನ್ನು ಸಮತೋಲನದಲ್ಲಿಡುವುದರಿಂದ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ.
 ಒತ್ತಡ ನಿರ್ವಹಣೆ: ಧ್ಯಾನ, ಯೋಗ, ಮತ್ತು ಶ್ವಾಸಕೋಶದ ವ್ಯಾಯಾಮಗಳು ಒತ್ತಡವನ್ನು ಕಡಿಮೆ ಮಾಡುತ್ತವೆ.
 ನಿಯಮಿತ ತಪಾಸಣೆ: ಕೊಲೆಸ್ಟ್ರಾಲ್ ಮಟ್ಟವನ್ನು ತಿಳಿಯಲು ವೈದ್ಯರ ಬಳಿ ನಿಯಮಿತ ತಪಾಸಣೆ ಮಾಡಿಸಿ.

ಕೊಲೆಸ್ಟ್ರಾಲ್ ನಿಯಂತ್ರಣವು ಕೇವಲ ಔಷಧಿಗಳಿಗೆ ಸೀಮಿತವಲ್ಲ. ಸರಿಯಾದ ಆಹಾರ ಕ್ರಮ, ವ್ಯಾಯಾಮ, ಮತ್ತು ಜೀವನಶೈಲಿಯ ಬದಲಾವಣೆಗಳ ಮೂಲಕ ಆರೋಗ್ಯಕರ ಹೃದಯವನ್ನು ಕಾಪಾಡಿಕೊಳ್ಳಬಹುದು. ಈ ಸರಳ ಮನೆಮದ್ದುಗಳನ್ನು ಅನುಸರಿಸಿ ಮತ್ತು ನಿಮ್ಮ ಆರೋಗ್ಯವನ್ನು ರಕ್ಷಿಸಿಕೊಳ್ಳಿ.

Continue Reading

ಆರೋಗ್ಯ

 ಸರಕಾರ ಹೈ ಅಲರ್ಟ್‌, ಆಸ್ಪತ್ರೆಗಳಲ್ಲಿ ಕೋವಿಡ್‌ ಬೆಡ್‌ ಹೆಚ್ಚಳ, ಆರೋಗ್ಯ ಸಿಬ್ಬಂದಿ ರಜೆ ರದ್ದು

ಬೆಂಗಳೂರು: ಕೊರೊನಾ ವೈರಸ್‌ (Corona Virus) ಹೆಚ್ಚಳ ಹಿನ್ನೆಲೆ ಸರ್ಕಾರ (karnataka Government) ಹೈ ಅಲರ್ಟ್ ಆಗಿದ್ದು, ಬೆಂಗಳೂರಿನ ಆಸ್ಪತ್ರೆಗಳಲ್ಲಿ ಕೋವಿಡ್ ಬೆಡ್ (Covid 19 beds) ಮೀಸಲಿಡಲು ಸರ್ಕಾರ ಸೂಚನೆ ನೀಡಿದೆ. ಭಾರತಕ್ಕೆ ಕೊರೋನಾ ರೂಪಾಂತರ ಹೊಸ ತಳಿ ಕಾಲಿಟ್ಟಿದ್ದು, ಇದುವರೆಗೂ ಭಾರತದಾದ್ಯಂತ ಒಂದು ಸಾವಿರಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ಪತ್ತೆ ಆಗಿವೆ. ಇದೀಗ ರಾಜ್ಯದಲ್ಲಿ ಇಂದು 80 ಜನರಿಗೆ ಕೊರೋನಾ ಸೋಂಕು ದೃಢವಾಗಿದೆ. ಅಲ್ಲದೆ ಬೆಂಗಳೂರಿನಲ್ಲೇ ನಿನ್ನೆ 73 ಜನರಿಗೆ ಕೊರೊನಾ ಪಾಸಿಟಿವ್ (Covid positive) ವರದಿ ಬಂದಿದೆ.

ರಾಜ್ಯದಲ್ಲಿ ಕೋವಿಡ್ ಆಕ್ಟಿವ್ ಪ್ರಕರಣಗಳ ಸಂಖ್ಯೆ ಇದೀಗ 80ಕ್ಕೆ ಏರಿಕೆಯಾಗಿವೆ. ದಕ್ಷಿಣ ಕನ್ನಡ ವಿಜಯನಗರ ಜಿಲ್ಲೆಯಲ್ಲಿ ತಲಾ ಒಂದೊಂದು ಪ್ರಕರಣ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಎರಡು, ಮೈಸೂರು ಜಿಲ್ಲೆಯಲ್ಲಿ ಮೂವರಿಗೆ ಕೊರೋನಾ ಪಾಸಿಟಿಟೀವ್ ವರದಿ ಬಂದಿದ್ದು, ಆರೋಗ್ಯ ಇಲಾಖೆಯಿಂದ ಕೋವಿಡ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ.

ಕೋವಿಡ್ ಪಾಸಿಟಿವ್ ಸೋಂಕಿತರು ಬೆಂಗಳೂರಿನಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದಾರೆ. ಕೋವಿಡ್ ಟೆಸ್ಟಿಂಗ್ ಕೂಡ ಬೆಂಗಳೂರಿನಲ್ಲಿ ಹೆಚ್ಚಿಸಲಾಗಿದೆ. ಇಂದಿಗೆ ರಾಜ್ಯದಲ್ಲಿ ಒಟ್ಟು 80 ಕೋವಿಡ್ ಪಾಸಿಟಿವ್ ಸಕ್ರಿಯ ಪ್ರಕರಣಗಳು ಕಂಡುಬಂದಿದ್ದು, ಬೆಂಗಳೂರಿನಲ್ಲೇ 73 ಪ್ರಕರಣಗಳಿವೆ. ಏಲ್ಲಿಯೂ ಕೋವಿಡ್ ನಿಂದಾಗಿ ಸಾವು ಸಂಭವಿಸಿಲ್ಲ. ಆರೋಗ್ಯ ಇಲಾಖೆ ಕೋವಿಡ್ ಪರಿಸ್ಥಿತಿಯನ್ನು ನಿಗಾ ವಹಿಸಿದ್ದು, ಹತೋಟಿಗೆ ತರಲು ಕ್ರಮಗಳನ್ನ ಕೈಗೊಳ್ಳುತ್ತಿದೆ. ಆತಂಕ ಪಡುವ ಪರಿಸ್ಥಿತಿ ಬಂದಿಲ್ಲವಾದರೂ, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲಿ ಎಂದು ನಾನು ಮನವಿ ಮಾಡುತ್ತೇನೆ” ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಟ್ವೀಟ್‌ ಮೂಲಕ ಸೂಚನೆ ನೀಡಿದ್ದಾರೆ.

ದಿನದಿಂದ ದಿನಕ್ಕೆ ಕರೋನಾ ಸೋಂಕಿತರ ಸಂಖ್ಯೆ ಏರಿಕೆಯಾದ ಬೆನ್ನಲ್ಲೇ, ಆರೋಗ್ಯ ಇಲಾಖೆ ಸಿಬ್ಬಂದಿ ರಜಾ ಹಾಕಿ ತೆರಳದೆ ಕೇಂದ್ರ ಸ್ಥಾನದಲ್ಲಿಯೇ ಇದ್ದು ಕಾರ್ಯ ನಿರ್ವಹಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಕೋವಿಡ್ ನಿಯಂತ್ರಣ ಸಂಬಂಧ ಬೆಂಗಳೂರಿನ ಸಿಎಂ ನಿವಾಸ ಕಾವೇರಿಯಲ್ಲಿ ನಿನ್ನೆ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸಿಎಂ ನಿರ್ದೇಶನ ನೀಡಿದ್ದಾರೆ ಎಂದರು.‌

ಈಗಾಗಲೇ ಆರೋಗ್ಯ ಇಲಾಖೆ ಕೋವಿಡ್ ಮಾರ್ಗಸೂಚಿಯನ್ನ ಹೊರಡಿಸಿದೆ.‌ ಕೇಂದ್ರ ಸರ್ಕಾರದ ಜೊತೆ ಇಲಾಖೆ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿದ್ದು, ಮಾನಿಟರ್ ಮಾಡುತ್ತಿದ್ದಾರೆ. ಮಕ್ಕಳಿಗೆ ಕೋವಿಡ್ ಹರಡದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಈ ಹಿನ್ನೆಲೆಯಲ್ಲಿ ಜ್ವರ, ಶೀತ ಕಂಡುಬಂದ ಮಕ್ಕಳನ್ನ ಶಾಲೆಗೆ ಕಳಿಸದಂತೆ ಪೊಷಕರು ಎಚ್ಚರಿಕೆ ವಹಿಸಬೇಕು. ಅಲ್ಲದೇ ಶಾಲಾ ಆಡಳಿತ ಮಂಡಳಿಯವರು ಕೂಡಾ, ಜ್ವರ ಬಂದ ಮಕ್ಕಳಿಗೆ ರಜೆ ನೀಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಮಾರ್ಗಸೂಚಿ ಹೊರಡಿಸಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಮುನ್ನೆಚ್ಚರಿಕೆ ದೃಷ್ಟಿಯಿಂದ ರೆಮ್ಡಿಸೀವರ್ ಇಂಜೆಕ್ಷನ್ ಅನ್ನು ಖರೀದಿಸಲು ಸೂಚನೆ ನೀಡಲಾಗಿದೆ. ಇದು ಕೋವಿಡ್ ಒಮೆಕ್ರಾನ್ ಜೆ.ಎನ್ 1 ತಳಿಯಾಗಿದ್ದು, ಸೌಮ್ಯ ಸ್ವಭಾವದ ಲಕ್ಷಣಗಳನ್ನ ಹೊಂದಿದೆ. ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಸ್ವಲ್ಪ ಏರಿಕೆ ಕಂಡರು, ಗಂಭೀರವಾಗಿಲ್ಲ. ಹೀಗಾಗಿ ಜನರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಎಚ್ಚರಿಕೆ ವಹಿಸುವುದು ಮುಖ್ಯ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು

Continue Reading

ಆರೋಗ್ಯ

ಶಾಲಾಕಾಲೇಜುಗಳಿಗೆ ಪ್ರತ್ಯೇಕ ಮಾರ್ಗಸೂಚಿ ಇಲ್ಲ-ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ, ಆದರೆ ಇದೀಗ ಮೇ.29 ರಿಂದ ಶಾಲಾ-ಕಾಲೇಜುಗಳು ಆರಂಭವಾಗಲಿದ್ದು, ಯಾವುದೇ ರೀತಿಯ ಪ್ರತ್ಯೇಕ ಮಾರ್ಗಸೂಚಿಗಳಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು,
ಈ ಬಗ್ಗೆ ಮಾತನಾಡಿದ ಅವರು ರಾಜ್ಯದಲ್ಲಿ ಕೋವಿಡ್ ಸೋಂಕುಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ, ಮೇ.29 ರಂದು ಶಾಲಾ ಕಾಲೇಜುಗಳು ಆರಂಭವಾಗಲಿದೆ, ಅದರೆ ಸದ್ಯದ ಪರಿಸ್ಧಿತಿಗೆ ಯಾವುದೇ ಮಾರ್ಗಸೂಚಿ ನೀಡಿಲ್ಲ ಎಂದರು,
ಶಾಲೆಗಳಿಗೆ ಮಾರ್ಗಸೂಚಿ ನೀಡಿಲ್ಲ ಎಂದು ಸುಮ್ಮನಾಗಬಾರದು, ಬದಲಿಗೆ ಮುಂಜಾಗರೂಕ ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವರು ತಿಳಿಸಿದ್ದಾರೆ, ಜೊತೆಗೆ ಮುಂದಿನ ದಿನಗಳಲ್ಲಿ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಕೊಟ್ಟರೆ ಅದನ್ನು ಅನುಷ್ಠಾನಕ್ಕೆ ತರುತ್ತೇವೆ ಎಂದು ಹೇಳಿದರು,

Continue Reading

Trending