ದೇಶ

ಉದ್ಘಾಟನೆಯಾಗಿ 6 ತಿಂಗಳ ಅಷ್ಟೇ.. ಮಳೆಗೆ ಸೋರುತ್ತಿದೆ ಅಯೋಧ್ಯೆ ರಾಮಮಂದಿರ..!

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಉದ್ಘಾಟನೆಯಾಗಿ ಆರು ತಿಂಗಳಾಗಿದೆ. ಇದೇ ವರ್ಷದ ಜನವರಿ 22ರಂದು ಪ್ರಧಾನಿ ಮೋದಿ ರಾಮಮಂದಿರ ಲೋಕಾರ್ಪಣೆ ಮಾಡಿದ್ದರು.

ಈ ಬೆನ್ನಲ್ಲೇ ದೇಶದ ಮೂಲೆ ಮೂಲೆಯಿಂದ ಕೋಟಿ ಕೋಟಿ ಭಕ್ತರು ಮಂದಿರಕ್ಕೆ ಭೇಟಿ ನೀಡಿ ರಾಮಲಲ್ಲಾನ ದರ್ಶನ ಪಡೆಯುತ್ತಿದ್ದಾರೆ. ಹೀಗಿರುವಾಗ ಅಯೋಧ್ಯೆಯಲ್ಲಿ ಸದ್ಯ ಭಾರೀ ಮಳೆಯಾಗ್ತಿದ್ದು ಮಳೆಗೆ ರಾಮಮಂದಿರದ ಛಾವಣಿ ಸೋರುತ್ತಿದೆ ಅಂತ ದೇವಾಲಯದ ಮುಖ್ಯ ಅರ್ಚಕ ಸತ್ಯೇಂದ್ರ ದಾಸ್‌ ಮಾಹಿತಿ ನೀಡಿದ್ದಾರೆ.

ಮೊದಲ ಮಳೆಗೆ ಗರ್ಭಗುಡಿಯ ಛಾವಣಿ ಮೂಲಕ ನೀರು ಒಳಗೆ ಬಂದಿದೆ. ನೂರಾರು ಎಂಜಿನಿಯರ್‌ಗಳು ಇಲ್ಲಿದ್ದಾರೆ. ಸುಸಜ್ಜಿತವಾಗಿಯೇ ರಾಮಮಂದಿರ ನಿರ್ಮಿಸಲಾಗಿದೆ. ಹೀಗಿದ್ದರೂ ಗರ್ಭಗುಡಿಯೇ ಸೋರುತ್ತಿರುವುದು ಟೀಕೆಗೆ ಕಾರಣವಾಗಿದೆ. ಕೂಡಲೇ ರಾಮಮಂದಿರದ ಕಡೆ ಗಮನ ಹರಿಸಿ, ಸಮಸ್ಯೆ ಸರಿಪಡಿಸಬೇಕಿದೆ ಎಂದಿದ್ದಾರೆ. ಇದೇ ವೇಳೆ ಅಯೋಧ್ಯೆ ಮಂದಿರದ ಕಾಮಗಾರಿ ನಡೆಯುತ್ತಿರುವುದರಿಂದ ನೀರು ಸೋರಿಕೆ ಸಹಜ ಅಂತ ದೇಗುಲ ನಿರ್ಮಾಣ ಸಮಿತಿ ಮುಖ್ಯಸ್ಥ ನೃಪೇಂದ್ರ ಮಿಶ್ರಾ ಸ್ಪಷ್ಟನೆ ಕೊಟ್ಟಿದ್ದಾರೆ.

ದೇವಾಲಯದ ಆವರಣದಲ್ಲಿ ಮಳೆ ನೀರು ಹೋಗಲು ಚರಂಡಿ ವ್ಯವಸ್ಥೆಯೂ ಇಲ್ಲ. ರಾಮಲಲ್ಲಾ ಮುಂಭಾಗದಲ್ಲಿ ‌ಅರ್ಚಕರು ಕುಳಿತುಕೊಳ್ಳುವ ಸ್ಥಳದಲ್ಲಿ ಮೇಲ್ಛಾವಣಿಯಿಂದ ನೀರು ಸೋರಿಕೆ ಆಗಿದೆ. ದೇಶದ ಪ್ರಮುಖ ಇಂಜಿನಿಯರ್ಸ್​ ರಾಮಮಂದಿರ ಕಟ್ಟಿದ್ದಾರೆ. ಆದರೆ ಇದರಲ್ಲೇ ಮಳೆ ನೀರು ಸೋರಿಕೆಯಾಗುತ್ತಿರುವುದು ಅಶ್ಚರ್ಯ ಎಂದ ರಾಮಮಂದಿರದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದಾರೆ.

ವಿಶ್ವಪ್ರಸಿದ್ದ ದೇವಾಲಯದಲ್ಲಿ ಮಳೆ ನೀರಿನ‌ ಸೋರಿಕೆಯೇ ಅಶ್ಚರ್ಯ ತಂದಿದೆ. ಇದು ಹೇಗೆ ಆಯಿತು? ದೊಡ್ಡ ದೊಡ್ಡ ಇಂಜಿನಿಯರ್​ಗಳು ನಿರ್ಮಿಸಿದ ಮೇಲೂ ಅವರ ಉಪಸ್ಥಿತಿಯಲ್ಲಿ ಮಳೆ ನೀರಿನ ಸೋರಿಕೆ , ಇದು ದೊಡ್ಡ ತಪ್ಪು. ದೇವಾಲಯದ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದ ಯುಪಿ ಕಾಂಗ್ರೆಸ್ ಅಧ್ಯಕ್ಷ ಅಜಯ್ ರಾಯ್ ಆರೋಪಿಸಿದ್ದಾರೆ

Trending

Exit mobile version