ಅಪರಾಧ
ಸಿಎಂ ಭೇಟಿಯಾಗಿ ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಪೋಷಕರು ಮನವಿ

ಬೆಂಗಳೂರು: ನಟ ದರ್ಶನ್ (Challenging Star Darshan) ಟೀಂನಿಂದ ಕೊಲೆಯಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ತಂದೆ-ತಾಯಿ ಇಂದು ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ.
ಮಾಜಿ ಸಚಿವ ಆಂಜನೇಯ ನೇತೃತ್ವದಲ್ಲಿ ಕಾವೇರಿ ನಿವಾಸದಲ್ಲಿ ಭೇಟಿಯಾದ ಪೋಷಕರು ಸಿಎಂ ಮುಂದೆ ಅಳಲು ತೋಡಿಕೊಂಡರು. ಸಿಎಂ ಭೇಟಿ ವೇಳೆ ತಮ್ಮ ಮನೆಯ ಪರಿಸ್ಥಿತಿಯ ಬಗ್ಗೆ ಹೇಳಿಕೊಂಡು ರೇಣುಕಾಸ್ವಾಮಿ ತಂದೆ-ತಾಯಿ ಕಣ್ಣೀರು ಹಾಕಿದರು
ಸದ್ಯ ಪೊಲೀಸರ ತನಿಖೆ ಬಗ್ಗೆ ಸಮಾಧಾನ ವ್ಯಕ್ತಪಡಿಸಿದ ರೇಣುಕಾಸ್ವಾಮಿ ತಂದೆ-ತಾಯಿ, ಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ನೀಡುವಂತೆ ಮನವಿ ಮಾಡಿದ್ರು. ಪೋಷಕರ ಮನವಿಗೆ ಸಿಎಂ ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ರು.
ಜೂನ್ 8 ರಂದು ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕಿಡ್ನಾಪ್ ಮಾಡಿ ಬೆಂಗಳೂರಿಗೆ ಕರೆತರಲಾಗಿತ್ತು. ಅಲ್ಲಿಂದ ಪಟ್ಟಣಗೆರೆ ಶೆಡ್ಗೆ ಕರೆದೊಯ್ದು ಚಿತ್ರಹಿಸೆ ನೀಡಿ ದರ್ಶನ್ & ಗ್ಯಾಂಗ್ ಬರ್ಬರವಾಗಿ ಕೊಲೆ ಮಾಡಿತ್ತು. ಕೊಲೆ ಬಳಿಕ ಮೃತದೇಹವನ್ನು ಸುಮ್ಮನಹಳ್ಳಿ ಮೊರಿ ಬಳಿ ಎಸೆಯಲಾಗಿತ್ತು.