ಅಪರಾಧ
ದರ್ಶನ್ ಗ್ಯಾಂಗ್ನ ರವಿ ಮನೆಯಲ್ಲಿ ನರಕಯಾತನೆ.. ಕಣ್ಣು ಕಾಣದ ತಾಯಿಗೆ ಮಾತ್ರೆ ತಂದು ಕೊಡಲು ಈಗ ಯಾರೂ ಇಲ್ಲ..

ಚಿತ್ರದುರ್ಗ: ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ ದರ್ಶನ್ ಅಂಡ್ ಗ್ಯಾಂಗ್ ಜೈಲು ಸೇರಿದೆ. ಪ್ರಕರಣದ 8ನೇ ಆರೋಪಿ ರವಿ ಕೂಡ ಜೈಲು ಜೈಲಿನಲ್ಲಿದ್ದಾನೆ. ಇತ್ತ ಆರೋಪಿ ಮನೆಯ ಸ್ಥಿತಿ ಹೇಳ ತೀರದ್ದಾಗಿದೆ. ದರ್ಶನ್ ಮೇಲಿನ ಅಭಿಮಾನದಿಂದ ರವಿ ಕುಟುಂಬ ಭಾರೀ ಕಷ್ಟಗಳನ್ನು ಎದುರಿಸುತ್ತಿದೆ. ಕಣ್ಣು ಕಾಣದ ತಾಯಿಗೆ ಮಾತ್ರೆ ತಂದು ಕೊಡುವವರಿಲ್ಲದ ಸ್ಥಿತಿ ನಿರ್ಮಾಣ ಆಗಿದೆ.
ನಟ ದರ್ಶನ ಮೇಲಿನ ಅಭಿಮಾನ, ಆರೋಪಿ ರವಿ ಮಕ್ಕಳು ಶಿಕ್ಷಣದಿಂದ ವಂಚಿತರಾಗುವಂತೆ ಮಾಡಿದೆ. ಪತ್ನಿ ಕವಿತಾ ಅವರು ಶಾಲಾ ಫೀಸು ಕಟ್ಟಲಾಗದೇ ಮಕ್ಕಳನ್ನು ಶಾಲೆ ಬಿಡಿಸಿದ್ದಾರೆ. ರವಿ ಮನೆಯ ಎಲ್ಲ ವ್ಯವಹಾರ ನೋಡಿಕೊಳ್ಳುತ್ತಿದ್ದ. ಆದರೆ ರವಿ ಜೈಲು ಸೇರಿದ ಮೇಲೆ ಮನೆಯ ಆರ್ಥಿಕ ಸ್ಥಿತಿ ತೀರ ಹದಗೆಟ್ಟಿದೆ. ದರ್ಶನ್ ಮೇಲಿನ ಅಭಿಮಾನಕ್ಕೆ ಕುಟುಂಬವೊಂದು ಇದೀಗ ಬೀದಿಗೆ ಬಂದು ನಿಂತಿದೆ.
ರವಿ ತಾಯಿ ಕೆಂಚಮ್ಮಗೆ ಕಣ್ಣಿಲ್ಲ, ಇವರಿಗೆ ಮಾತ್ರೆ ತಂದು ಕೊಡುವುದಕ್ಕೂ ಮನೆಯಲ್ಲಿ ಯಾರೂ ಇಲ್ಲ. ಮನೆಯಲ್ಲಿ ಏಕಾಂಗಿಯಾಗಿ ಬದುಕು ಸಾಗಿಸುತ್ತಿದ್ದಾರೆ. ಯಾರಾದರು ಹಣ ಕೊಟ್ಟರೆ ಮಾತ್ರ ಕೆಂಚಮ್ಮಗೆ ಔಷಧಿ, ಮಾತ್ರೆಗಳು ಲಭ್ಯವಾಗುತ್ತವೆ. ಹೀಗಾಗಿ ತನ್ನ ಮಗನ ಬರುವಿಕೆಗೆ ತಾಯಿ ಕಾಯುತ್ತಿದ್ದಾಳೆ. ದರ್ಶನ್ ಜೊತೆ ಪ್ರಕರಣದಲ್ಲಿ ತನ್ನ ಗಂಡನ ಹೆಸರು ಕೇಳಿ ಬರುತ್ತಿದ್ದಂತೆ ಪತ್ನಿ ಕವಿತಾ ತನ್ನ ಸಹೋದರಿ ಮನೆ ಸೇರಿಕೊಂಡಿದ್ದಾರೆ. ಆರೋಪಿ ರವಿ ಪತ್ನಿ ಮಕ್ಕಳನ್ನು ಶಾಲೆಗೆ ಕಳಿಸಲಾಗುತ್ತಿಲ್ಲ, ಜೊತೆಗೆ ತನ್ನ ಅತ್ತೆಯನ್ನು ಜೋಪಾನವಾಗಿ ನೋಡಿಕೊಳ್ಳಲು ಆಗದ ಸಂಕಷ್ಟ ಅವರಿಗೆ ಇದೆ.
ಈ ಸಂಬಂಧ ಆರೋಪಿ ರವಿ ಪತ್ನಿ ಕವಿತಾ ನ್ಯೂಸ್ಫಸ್ಟ್ ಜೊತೆ ಮಾತನಾಡಿದ್ದಾರೆ. ಅತ್ತೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗೋಕೂ ದುಡ್ಡಿಲ್ಲ. ಅತ್ತೆ ಪರಿಸ್ಥಿತಿ ಹೇಳುವುದಕ್ಕೆ ಆಗಲ್ಲ. ಅದನ್ನ ಅನುಭವಿಸಿದವರಿಗೆ ಗೊತ್ತಾಗುತ್ತದೆ. ಹೊರಗಡೆ ಓಡಾಡೋದೆ ನನಗೆ ಕಷ್ಟ ಆಗಿದೆ. ನಿನ್ನ ಗಂಡ ದುಡ್ಡು ತಂದಿದ್ದಾನಂತೆ. ಅಲ್ಲಿಗೆ ಹೋಗಿದ್ದನಂತೆ ಅಂತ ಜನ ಕೇಳುತ್ತಿದ್ದಾರೆ. ಇದರಿಂದ ಹೊರಗೆ ಬರಲಾಗುತ್ತಿಲ್ಲ. ಹೊರಗೆ ಓಡಾಡೋದೇ ಬಿಟ್ಟಿದ್ದೀವಿ. ಗಂಡ ಇದ್ದಾಗ ಎಲ್ಲವೂ ಚೆನ್ನಾಗಿತ್ತು. ಈಗ ಕಷ್ಟ ಆಗಿದೆ. ಮನೆಯಲ್ಲಿ ದುಡಿಯೋರೇ ಇಲ್ಲದಾಗ ಶಾಲೆಗೆ ದುಡ್ಡು ಹೇಗೆ ಕಟ್ಟುವುದು. ಸಂಘ, ಗಾಡಿ ಇಎಂಐ ಸೇರಿ ಇತರೆ ಸಾಲಗಳಿಗೆ ಹಣವಿಲ್ಲ. ಮೊನ್ನೆ ಬೆಂಗಳೂರಿಗೆ ಹೋಗಿ ಗಂಡನನ್ನ ನೋಡಿಕೊಂಡು ಬರೋಕೆ ಹೋದಾಗ 10 ರಿಂದ 15 ಸಾವಿರ ರೂಪಾಯಿ ಖರ್ಚು ಆಗಿದೆ. ಮಕ್ಕಳನ್ನು ತೋರಿಸೋಕೆ ಬಿಡಲಿಲ್ಲ. ನಾವು ಮಾತ್ರ ನೋಡಿದ್ವಿ. ಅವರೇ ಬಿಡಿಸಿಕೊಡ್ತಾರೆ ಎನ್ನುವ ನಂಬಿಕೆ ಮೇಲೆ ಇದ್ದೇವೆ. ನಮ್ಮ ಹೊಲ, ಮನೆ ಮಾರಿ ಹಣ ಕೊಡ್ತೀವಿ, ಗಂಡನನ್ನ ಬಿಟ್ಟರೆ ಸಾಕು. ಊರಲ್ಲಿ ಇರೋಕೆ ಆಗ್ತಿಲ್ಲ, ಅಷ್ಟು ಬೇಸರ ಆಗಿದೆ ಎಂದು ಕಣ್ಣೀರು ಇಟ್ಟಿದ್ದಾರೆ.
ಅಪರಾಧ
ಎಸ್ಪಿಗೆ ರಿಲೀವ್, ನಿಂಗಪ್ಪನ ಮೊಬೈಲ್ನಲ್ಲಿ ರಹಸ್ಯ?

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯ ಮೇಲೆ ಭ್ರಷ್ಟಾಚಾರದ ಆರೋಪದ ಕಳಂಕವೊಡ್ಡಿದೆ. ಸರಕಾರಿ ಅಧಿಕಾರಿಗಳಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ ಆರೋಪದಡಿ ಮಾಜಿ ಹೆಡ್ ಕಾನ್ಸ್ಟೆಬಲ್ ನಿಂಗಪ್ಪನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಆದರೆ, ಈ ಪ್ರಕರಣದಲ್ಲಿ ಲೋಕಾಯುಕ್ತದ ಕೆಲ ಪೊಲೀಸರೂ ಭಾಗಿಯಾಗಿರುವ ಆರೋಪ ಗಂಭೀರ ಆತಂಕವನ್ನುಂಟುಮಾಡಿದೆ. ಈ ಬೆಳವಣಿಗೆಯ ನಡುವೆ ಲೋಕಾಯುಕ್ತ ಬೆಂಗಳೂರು ಘಟಕದ ಎಸ್ಪಿ ಮಹದೇವ ಶ್ರೀನಾಥ ಜೋಶಿ ಅವರನ್ನು ಮಂಗಳವಾರ ಸೇವೆಯಿಂದ ರಿಲೀವ್ ಮಾಡಲಾಗಿದೆ. ಈ ಘಟನೆಯಿಂದ ಲೋಕಾಯುಕ್ತ ಸಂಸ್ಥೆಯ ವಿಶ್ವಾಸಾರ್ಹತೆಯೇ ಪ್ರಶ್ನಾರ್ಹವಾಗಿದೆ.
ಹೈಕೋರ್ಟ್ ಆದೇಶದಂತೆ ಮೂರು ವರ್ಷಗಳ ಹಿಂದೆ ಎಫ್ಐಆರ್ ದಾಖಲಿಸುವ ಅಧಿಕಾರ ಪಡೆದ ಲೋಕಾಯುಕ್ತ ಪೊಲೀಸ್ ವಿಭಾಗವು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಗುರಿಯನ್ನು ಹೊಂದಿತ್ತು. ಆದರೆ, ಈಗ ಆ ಸಂಸ್ಥೆಯೊಳಗಿನ ಕೆಲವರು ಭ್ರಷ್ಟಾಚಾರದಲ್ಲಿ ತೊಡಗಿರುವ ಆರೋಪ ಕೇಳಿಬಂದಿದೆ. ಬಿಡಿಎ, ಅಬಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಲೋಕಾಯುಕ್ತ ದಾಳಿಯ ಬೆದರಿಕೆ ಹಾಕಿ ಹಣ ಸುಲಿಗೆ ಮಾಡುತ್ತಿದ್ದ ಆರೋಪದಡಿ ನಿಂಗಪ್ಪನನ್ನು ಎಸ್ಪಿ ಕೋನ ವಂಶಿಕೃಷ್ಣ ನೇತೃತ್ವದ ತಂಡ ಕೆಲ ದಿನಗಳ ಹಿಂದೆ ಬಂಧಿಸಿತ್ತು.
ಪೊಲೀಸ್ ಇಲಾಖೆಯಲ್ಲಿ ಹೆಡ್ ಕಾನ್ಸ್ಟೆಬಲ್ ಆಗಿದ್ದ ನಿಂಗಪ್ಪ ಕೆಲ ವರ್ಷಗಳ ಹಿಂದೆ ಸೇವೆಯಿಂದ ವಜಾಗೊಂಡಿದ್ದ. ಬಳಿಕ ಲೋಕಾಯುಕ್ತದ ಹೆಸರಿನಲ್ಲಿ ಸರಕಾರಿ ಅಧಿಕಾರಿಗಳಿಗೆ ಬೆದರಿಕೆ ಹಾಕಿ ಹಣ ಸುಲಿಗೆಯನ್ನೇ ವೃತ್ತಿಯಾಗಿ ಮಾಡಿಕೊಂಡಿದ್ದ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಠಾಣೆಗಳಲ್ಲಿ ಆತನ ವಿರುದ್ಧ ಪ್ರಕರಣಗಳು ದಾಖಲಾಗಿದ್ದು, ಹಲವು ಬಾರಿ ಜೈಲು ಸೇರಿದ್ದ,
ನಿಂಗಪ್ಪನ ಕೃತ್ಯದಲ್ಲಿ ಲೋಕಾಯುಕ್ತದ ಕೆಲವು ಪೊಲೀಸರು ಭಾಗಿಯಾಗಿದ್ದರೆ, ಸುಲಿಗೆಯ ಹಣದಲ್ಲಿ ಪಾಲು ಪಡೆಯುತ್ತಿದ್ದರೆಂಬ ಶಂಕೆಯಿದೆ. ನಿಂಗಪ್ಪನ ಮೊಬೈಲ್ನಿಂದ ದೊರೆತ ಸಾಕ್ಷ್ಯಗಳನ್ನು ಆಧರಿಸಿ, ಆತ ಯಾರಿಗೆ ಹಣ ತಲುಪಿಸಿದ್ದ, ಯಾರ ಜೊತೆ ಸಂಪರ್ಕದಲ್ಲಿದ್ದ ಎಂಬುದನ್ನು ತನಿಖೆಯ ಮೂಲಕ ಕಂಡುಹಿಡಿಯಲಾಗುತ್ತಿದೆ. ಈ ಪ್ರಕರಣದಲ್ಲಿ ಎಸ್ಪಿ ಮಹದೇವ ಶ್ರೀನಾಥ ಜೋಶಿಯವರ ರಿಲೀವ್ಗೆ ನಿಖರ ಕಾರಣ ತಿಳಿದಿಲ್ಲವಾದರೂ, ಈ ಬೆಳವಣಿಗೆ ಲೋಕಾಯುಕ್ತದೊಳಗಿನ ಆಂತರಿಕ ಸಮಸ್ಯೆಗಳನ್ನು ಎತ್ತಿ ತೋರಿಸಿದೆ.
ಈ ಘಟನೆಯಿಂದ ಲೋಕಾಯುಕ್ತ ಸಂಸ್ಥೆಯ ಕಾರ್ಯವೈಖರಿಯ ಬಗ್ಗೆ ಜನರಲ್ಲಿ ಅನುಮಾನ ಮೂಡಿದೆ. ಭ್ರಷ್ಟಾಚಾರದ ವಿರುದ್ಧ ಹೋರಾಡಬೇಕಾದ ಸಂಸ್ಥೆಯೇ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವುದು ಆಘಾತಕಾರಿಯಾಗಿದೆ. ಈ ಪ್ರಕರಣದ ತನಿಖೆಯಿಂದ ಸತ್ಯ ಹೊರಬಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬುದು ಜನರ ಆಗ್ರಹವಾಗಿದೆ.
ಅಪರಾಧ
ಮಹಿಳಾ ಪೇದೆಗೆ ಬೂಟುಗಾಲಿನಿಂದ ಒದ್ದ ಹೆಡ್ ಕಾನ್ಸ್ಟೇಬಲ್!

ಬೆಂಗಳೂರು: ಪೊಲೀಸ್ ಠಾಣೆಯೊಂದರಲ್ಲೇ ಸಿಬ್ಬಂದಿಗಳು ಹೊಡೆದಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ನಡೆದಿದೆ, ಠಾಣೆಯ ಹೆಡ್ ಕಾನ್ಸ್ಟೇಬಲ್ ಮಹಿಳಾ ಪೇದೆಗೆ ಬೂಟುಗಾಲಿನಿಂದ ಒದ್ದ ಆರೋಪ ಹೊರಿಸಲಾಗಿದ್ದು ಈ ಬಗ್ಗೆ ದೂರು ದಾಖಲಾಗಿದೆ,
ಠಾಣೆಯಲ್ಲಿ ಕೆಲಸ ಮಾಡ್ತಿದ್ದ ಮಹಿಳಾ ಪೇದೆಗೆ ಅಲ್ಲೇ ಹೆಡ್ ಕಾನ್ಸ್ಟೇಬಲ್ ಆಗಿರುವ ಬಿಜಿ ಗೋವಿಂದರಾಜು ಎಂಬುವವರು ಬೂಟುಗಾಲಿನಲ್ಲಿ ಒದ್ದಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ, ಜೂನ್ 10 ರಂದು ಈ ಘಟನೆ ನಡೆದಿದೆ, ರಾತ್ರಿ ಕಂಪ್ಯೂಟರ್ ವಿಭಾಗದಲ್ಲಿ ಮಹಿಳಾ ಪೇದೆ ರೇಣುಕಾ ಕರ್ತವ್ಯ ನಿರ್ವಹಿಸುತ್ತಿದ್ದರು,
ಈ ವೇಳೆ ರೇಣುಕಾ ಮನೆ ಬಿಟ್ಟು ಹೋಗಿ ಠಾಣೆ ಸೇರಿದ್ದ ಇಬ್ಬರು ಹೆಣ್ಣುಮಕ್ಕಳಿಗೆ ಊಟ ಮಾಡಿಸುತ್ತಿದ್ದರು, ಆಗ ಹೆಡ್ ಕಾನ್ಸ್ಟೇಬಲ್ ಗೋವಿಂದರಾಜು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ, ಮಾತ್ರವಲ್ಲದೇ ಮೂರ್ನಾಲ್ಕು ಬಾರಿ ಬೂಟುಗಾಲಿನಿಂದ ಒದ್ದಿದ್ದಾರೆ ಎಂದು ಆರೋಪಸಲಾಗಿದೆ,
ಕಾನ್ಸ್ಟೇಬಲ್ ರೇಣುಕಾ ದೂರು ಆಧರಿಸಿ ಹೆಡ್ ಕಾನ್ಸಟೇಬಲ್ ಗೋವಿಂದರಾಜು ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,
ಅಪರಾಧ
ವಿರಾಟ್ ಕೊಹ್ಲಿ ಮಾಲೀಕತ್ವದ ‘One8 Commune’ ಪಬ್ ವಿರುದ್ಧ FIR ದಾಖಲು

ಬೆಂಗಳೂರು: ಪ್ರತ್ಯೇಕ ಸ್ಥಳವಿಲ್ಲದೆ ಧೂಮಪಾನಕ್ಕೆ ಅವಕಾಶ ನೀಡಿ, ನಿಯಮ ಉಲ್ಲಂಘನೆ ಮಾಡಿದ ಆರೋಪ ಹಿನ್ನೆಲೆಯಲ್ಲಿ ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ‘ಒನ್ 8 ಕಮ್ಯೂನ್’ ಪಬ್ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ಮೇ 29ರಂದು ಕಬ್ಬನ್ ಪಾರ್ಕ್ ಪೊಲೀಸರು ಪಬ್ ಮೇಲೆ ದಾಳಿ ಮಾಡಿ, ಸ್ವಯಂಪ್ರೇರಿತವಾಗಿ ಎನ್ಸಿಆರ್ ದಾಖಲಿಸಿಕೊಂಡಿದ್ದರು. ಇದೀಗ ನ್ಯಾಯಾಲಯದ ಅನುಮತಿ ಪಡೆದು, ಕೊಟ್ಪಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದಕ್ಕೂ ಮುನ್ನ 2024ರ ಜುಲೈನಲ್ಲಿ ಇದೇ ಬಾರ್ ಮೇಲೆ ಅವಧಿ ಮೀರಿ ಪಬ್ ನಡೆಸುತ್ತಿದ್ದರು ಎಂದು ದೂರು ದಾಖಲಾಗಿತ್ತು. ಜು.6 ರಂದು ರಾತ್ರಿ 1:20ರವರೆಗೆ ಪಬ್ ತೆರೆದಿತ್ತು. ರಾತ್ರಿ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಪಬ್ ಓಪನ್ ಇರುವುದಾಗಿ ಮಾಹಿತಿ ಇತ್ತು. ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಅವಧಿ ಮುಗಿದಿದ್ದರೂ ಗ್ರಾಹಕರು ಇದ್ದರು. ಹೀಗಾಗಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಇದೀಗ ಪ್ರತ್ಯೇಕ ಸ್ಥಳ ಮೀಸಲಿಡದೆ ಧೂಮಪಾನಕ್ಕೆ ಅವಕಾಶ ನೀಡಿದ್ದಕ್ಕಾಗಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಮ್ಯಾನೇಜರ್, ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
-
ಬಿಬಿಎಂಪಿ1 month ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು1 year ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು7 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ