Connect with us

ಅಪರಾಧ

ದರ್ಶನ್​ ಗ್ಯಾಂಗ್​ನ ರವಿ ಮನೆಯಲ್ಲಿ ನರಕಯಾತನೆ.. ಕಣ್ಣು ಕಾಣದ ತಾಯಿಗೆ ಮಾತ್ರೆ ತಂದು ಕೊಡಲು ಈಗ ಯಾರೂ ಇಲ್ಲ..

ಚಿತ್ರದುರ್ಗ: ರೇಣುಕಾಸ್ವಾಮಿ ಹತ್ಯೆ ಕೇಸ್​ನಲ್ಲಿ ದರ್ಶನ್ ಅಂಡ್ ಗ್ಯಾಂಗ್ ಜೈಲು ಸೇರಿದೆ. ಪ್ರಕರಣದ 8ನೇ ಆರೋಪಿ ರವಿ ಕೂಡ ಜೈಲು ಜೈಲಿನಲ್ಲಿದ್ದಾನೆ. ಇತ್ತ ಆರೋಪಿ ಮನೆಯ ಸ್ಥಿತಿ ಹೇಳ ತೀರದ್ದಾಗಿದೆ. ದರ್ಶನ್ ಮೇಲಿನ ಅಭಿಮಾನದಿಂದ ರವಿ ಕುಟುಂಬ ಭಾರೀ ಕಷ್ಟಗಳನ್ನು ಎದುರಿಸುತ್ತಿದೆ. ಕಣ್ಣು ಕಾಣದ ತಾಯಿಗೆ ಮಾತ್ರೆ ತಂದು ಕೊಡುವವರಿಲ್ಲದ ಸ್ಥಿತಿ ನಿರ್ಮಾಣ ಆಗಿದೆ.

ನಟ ದರ್ಶನ ಮೇಲಿನ ಅಭಿಮಾನ, ಆರೋಪಿ ರವಿ ಮಕ್ಕಳು ಶಿಕ್ಷಣದಿಂದ ವಂಚಿತರಾಗುವಂತೆ ಮಾಡಿದೆ. ಪತ್ನಿ ಕವಿತಾ ಅವರು ಶಾಲಾ ಫೀಸು ಕಟ್ಟಲಾಗದೇ ಮಕ್ಕಳನ್ನು ಶಾಲೆ ಬಿಡಿಸಿದ್ದಾರೆ. ರವಿ ಮನೆಯ ಎಲ್ಲ ವ್ಯವಹಾರ ನೋಡಿಕೊಳ್ಳುತ್ತಿದ್ದ. ಆದರೆ ರವಿ ಜೈಲು ಸೇರಿದ ಮೇಲೆ ಮನೆಯ ಆರ್ಥಿಕ ಸ್ಥಿತಿ ತೀರ ಹದಗೆಟ್ಟಿದೆ. ದರ್ಶನ್ ಮೇಲಿನ ಅಭಿಮಾನಕ್ಕೆ ಕುಟುಂಬವೊಂದು ಇದೀಗ ಬೀದಿಗೆ ಬಂದು ನಿಂತಿದೆ.

ರವಿ ತಾಯಿ ಕೆಂಚಮ್ಮಗೆ ಕಣ್ಣಿಲ್ಲ, ಇವರಿಗೆ ಮಾತ್ರೆ ತಂದು ಕೊಡುವುದಕ್ಕೂ ಮನೆಯಲ್ಲಿ ಯಾರೂ ಇಲ್ಲ. ಮನೆಯಲ್ಲಿ ಏಕಾಂಗಿಯಾಗಿ ಬದುಕು ಸಾಗಿಸುತ್ತಿದ್ದಾರೆ. ಯಾರಾದರು ಹಣ ಕೊಟ್ಟರೆ ಮಾತ್ರ ಕೆಂಚಮ್ಮಗೆ ಔಷಧಿ, ಮಾತ್ರೆಗಳು ಲಭ್ಯವಾಗುತ್ತವೆ. ಹೀಗಾಗಿ ತನ್ನ ಮಗನ ಬರುವಿಕೆಗೆ ತಾಯಿ ಕಾಯುತ್ತಿದ್ದಾಳೆ. ದರ್ಶನ್​ ಜೊತೆ ಪ್ರಕರಣದಲ್ಲಿ ತನ್ನ ಗಂಡನ ಹೆಸರು ಕೇಳಿ ಬರುತ್ತಿದ್ದಂತೆ ಪತ್ನಿ ಕವಿತಾ ತನ್ನ ಸಹೋದರಿ ಮನೆ ಸೇರಿಕೊಂಡಿದ್ದಾರೆ. ಆರೋಪಿ ರವಿ ಪತ್ನಿ ಮಕ್ಕಳನ್ನು ಶಾಲೆಗೆ ಕಳಿಸಲಾಗುತ್ತಿಲ್ಲ, ಜೊತೆಗೆ ತನ್ನ ಅತ್ತೆಯನ್ನು ಜೋಪಾನವಾಗಿ ನೋಡಿಕೊಳ್ಳಲು ಆಗದ ಸಂಕಷ್ಟ ಅವರಿಗೆ ಇದೆ.

ಈ ಸಂಬಂಧ ಆರೋಪಿ ರವಿ ಪತ್ನಿ ಕವಿತಾ ನ್ಯೂಸ್​ಫಸ್ಟ್​ ಜೊತೆ ಮಾತನಾಡಿದ್ದಾರೆ. ಅತ್ತೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗೋಕೂ ದುಡ್ಡಿಲ್ಲ. ಅತ್ತೆ ಪರಿಸ್ಥಿತಿ ಹೇಳುವುದಕ್ಕೆ ಆಗಲ್ಲ. ಅದನ್ನ ಅನುಭವಿಸಿದವರಿಗೆ ಗೊತ್ತಾಗುತ್ತದೆ. ಹೊರಗಡೆ ಓಡಾಡೋದೆ ನನಗೆ ಕಷ್ಟ ಆಗಿದೆ. ನಿನ್ನ ಗಂಡ ದುಡ್ಡು ತಂದಿದ್ದಾನಂತೆ. ಅಲ್ಲಿಗೆ ಹೋಗಿದ್ದನಂತೆ ಅಂತ ಜನ ಕೇಳುತ್ತಿದ್ದಾರೆ. ಇದರಿಂದ ಹೊರಗೆ ಬರಲಾಗುತ್ತಿಲ್ಲ. ಹೊರಗೆ ಓಡಾಡೋದೇ ಬಿಟ್ಟಿದ್ದೀವಿ. ಗಂಡ ಇದ್ದಾಗ ಎಲ್ಲವೂ ಚೆನ್ನಾಗಿತ್ತು. ಈಗ ಕಷ್ಟ ಆಗಿದೆ. ಮನೆಯಲ್ಲಿ ದುಡಿಯೋರೇ ಇಲ್ಲದಾಗ ಶಾಲೆಗೆ ದುಡ್ಡು ಹೇಗೆ ಕಟ್ಟುವುದು. ಸಂಘ, ಗಾಡಿ ಇಎಂಐ ಸೇರಿ ಇತರೆ ಸಾಲಗಳಿಗೆ ಹಣವಿಲ್ಲ. ಮೊನ್ನೆ ಬೆಂಗಳೂರಿಗೆ ಹೋಗಿ ಗಂಡನನ್ನ ನೋಡಿಕೊಂಡು ಬರೋಕೆ ಹೋದಾಗ 10 ರಿಂದ 15 ಸಾವಿರ ರೂಪಾಯಿ ಖರ್ಚು ಆಗಿದೆ. ಮಕ್ಕಳನ್ನು ತೋರಿಸೋಕೆ ಬಿಡಲಿಲ್ಲ. ನಾವು ಮಾತ್ರ ನೋಡಿದ್ವಿ. ಅವರೇ ಬಿಡಿಸಿಕೊಡ್ತಾರೆ ಎನ್ನುವ ನಂಬಿಕೆ ಮೇಲೆ ಇದ್ದೇವೆ. ನಮ್ಮ ಹೊಲ, ಮನೆ ಮಾರಿ ಹಣ ಕೊಡ್ತೀವಿ, ಗಂಡನನ್ನ ಬಿಟ್ಟರೆ ಸಾಕು. ಊರಲ್ಲಿ ಇರೋಕೆ ಆಗ್ತಿಲ್ಲ, ಅಷ್ಟು ಬೇಸರ ಆಗಿದೆ ಎಂದು ಕಣ್ಣೀರು ಇಟ್ಟಿದ್ದಾರೆ.

ಅಪರಾಧ

ಧರ್ಮಸ್ಥಳ ಶವ ಹೂತು ಪ್ರಕರಣ: ಮೂರು ಅಸ್ಥಿಪಂಜರ ಪತ್ತೆ, ಎಸ್‌ಐಟಿ ತನಿಖೆಗೆ ಹೊಸ ತಿರುವು!

ದಕ್ಷಿಣ ಕನ್ನಡ, ಆಗಸ್ಟ್ 5 – ಧರ್ಮಸ್ಥಳದ ಸುತ್ತಮುತ್ತಲ ಶವ ಹೂತು ಪ್ರಕರಣಕ್ಕೆ ದಿನೇ ದಿನೆ ನ್ಯೂ ಟ್ವಿಸ್ಟ್ ಸಿಗುತ್ತಿದ್ದು, ಇದೀಗ ಮೂರು ಅಸ್ಥಿಪಂಜರಗಳು ಪತ್ತೆಯಾಗಿವೆ ಎಂಬ ಸುದ್ದಿ ಚಕ್ಕರಿಗೊಳ್ಳುತ್ತಿದೆ. ಈ ಕುರಿತು ದೂರುದಾರ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಎಸ್‌ಐಟಿ ತಂಡದ ಶೋಧ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಿನ್ನೆ ನಡೆದ ಉತ್ಖನನದ ವೇಳೆ:

  • ಸ್ಟಾಟ್ ನಂಬರ್ 12ರ ಬಳಿ ಕಾರ್ಮಿಕರಿಂದ ಅಗೆಸಿದಾಗ, ಮೂರು ಅಸ್ಥಿಪಂಜರಗಳು ಹಾಗೂ ಮಹಿಳೆಯ ಸೀರೆ ಪತ್ತೆಯಾಗಿವೆ.
  • ಸುಮಾರು 140 ಮೂಳೆಗಳ ತುಂಡುಗಳು ಪತ್ತೆಯಾದ ಕುರಿತು ವರದಿ ಇದೆ.
  • ಅಸ್ಥಿಪಂಜರಗಳನ್ನು ತಕ್ಷಣವೇ ಕೆಎಂಸಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ.

ಇಂದಿನ ಉತ್ಖನನ:

  • ನೇತ್ರಾವತಿ ನದಿಯ ದಡದ ಬಳಿ 11ನೇ ಪಾಯಿಂಟ್‌ನಲ್ಲಿ ಅಗೆತ ಕೆಲಸ ನಡೆಯುತ್ತಿದೆ.
  • 6 ಅಡಿಯವರೆಗೆ ಶೋಧ ನಡೆದ ಬಳಿಕ ಸಾಕ್ಷ್ಯ ಸಿಕ್ಕದರೆ ಮುಂದಿನ ಪಾಯಿಂಟ್‌ಗೆ ಹೋಗುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಪೂರ್ವ ಘಟನೆ:

  • ಜುಲೈ 31ರಂದು 6ನೇ ಗುರುತುಸ್ಥಳದಲ್ಲಿ ಅಸ್ಥಿಪಂಜರ ಪತ್ತೆಯಾದ ಹಿನ್ನೆಲೆ, ಎಸ್‌ಐಟಿ ಅಧಿಕಾರಿಗಳಾದ ಐಪಿಎಸ್ ಜಿತೇಂದ್ರ ಕುಮಾರ್ ದಯಾಮ ಅವರು ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು, ಆಧಾರದ ಮೇಲೆ UDR ಪ್ರಕರಣ ದಾಖಲಾಗಿದೆ.
Continue Reading

ಅಪರಾಧ

ಕೆಂಗೇರಿಯಲ್ಲಿ ಮಹಿಳೆಯ ಮೇಲೆ ಅಸಭ್ಯ ವರ್ತನೆ ಮತ್ತು ಹಲ್ಲೆ!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಕೆಂಗೇರಿ ಉಪನಗರದಲ್ಲಿ ಮತ್ತೊಂದು ಭಯಾನಕ ಘಟನೆ ಬೆಳಕಿಗೆ ಬಂದಿದೆ. ಮಾಲ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬಳ ಮುಂದೆ ವ್ಯಕ್ತಿಯೊಬ್ಬ ಪ್ಯಾಂಟ್ ಜಿಪ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದಾಳೆ. ಇದೇ ಸಮಯದಲ್ಲಿ ಆಕೆಯ ಮೇಲೆ ಹಲ್ಲೆ ನಡೆಸಿದ ಆರೋಪಿಯು ಪೊಲೀಸರು ಬಂದಾಗ ಪರಾರಿಯಾಗಲು ಯತ್ನಿಸಿದರೂ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಸೂತ್ರಗಳ ಪ್ರಕಾರ, ಕೆಂಗೇರಿಯಲ್ಲಿರುವ ಮಾಲ್‌ನಲ್ಲಿ ವಾಚ್‌ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಚಂದ್ರಾಹಸನ್ ಎಂಬಾತ, ಅಲ್ಲಿಗೆ ಬರುವ ಹೆಣ್ಣುಮಕ್ಕಳಿಗೆ ತೊಂದರೆ ಕೊಡುತ್ತಿದ್ದ. ಸಂತ್ರಸ್ತೆಯು ಈ ಬಗ್ಗೆ ಮ್ಯಾನೇಜರ್‌ಗೆ ದೂರು ನೀಡಲು ಹೋಗುತ್ತಿದ್ದಾಗ, ತನ್ನ ಪ್ಯಾಂಟ್‌ನ ಜಿಪ್‌ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದ. ನಂತರ ಆಕೆಯ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ.

ಈ ಘಟನೆಗೆ ತಕ್ಷಣ ಪ್ರತಿಕ್ರಿಯಿಸಿದ ಸಾರ್ವಜನಿಕರು ಮತ್ತು ಪೊಲೀಸರು ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಸದ್ಯ ಈ ಕುರಿತು ಕೆಂಗೇರಿ ಮಹಿಳಾ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಲಾಗಿದೆ. ಮಹಿಳೆ ತೀವ್ರವಾಗಿ ಗಾಯಗೊಂಡಿದ್ದು, ಆಕೆಗಾಗಿ ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ.

ಇದೇ ಹಿನ್ನಲೆಯಲ್ಲಿ ಕೆಲ ದಿನಗಳ ಹಿಂದೆ ಯುವತಿಯರ ಮುಂದೆ ಅಸಭ್ಯವಾಗಿ ವರ್ತಿಸಿದ್ದ ಆಯುಬ್ ಎಂಬ ಕಾಮುಕನನ್ನು ಕೂಡ ಪೊಲೀಸರು ಬಂಧಿಸಿದ್ದರು. ಈತನ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಡಿದ್ದು, ಸಾರ್ವಜನಿಕ ಆಕ್ರೋಶ ಹೆಚ್ಚಿತ್ತು.

Continue Reading

ಅಪರಾಧ

ರೇಣುಕಾಸ್ವಾಮಿ ಪ್ರಕರಣ: ರಮ್ಯಾ ಪೋಸ್ಟ್‌ಗೆ ಅಸಭ್ಯ ಪ್ರತಿಕ್ರಿಯೆ – ಆರೋಪಿಗಳ ಬಂಧನ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ವಿರುದ್ಧ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್‌ನ ಅಭಿಪ್ರಾಯವನ್ನು ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಈ ಸಂಬಂಧ ಅವರು ತಮ್ಮ ಅಭಿಪ್ರಾಯವನ್ನು ಇನ್‌ಸ್ಟಾಗ್ರಾಂ ಹಾಗೂ ಇತರ ಪ್ಲಾಟ್‌ಫಾರ್ಮ್‌ಗಳಲ್ಲಿ ಪ್ರಕಟಿಸಿದ್ದರು.

ಈ ಪೋಸ್ಟ್ ನಂತರ, ಕೆಲ ಕಿಡಿಗೇಡಿಗಳು ರಮ್ಯಾ ವಿರುದ್ಧ ಅಶ್ಲೀಲ ಹಾಗೂ ಅಪಮಾನಕಾರಕ ಸಂದೇಶಗಳನ್ನು ಕಮೆಂಟ್‌ಗಳ ರೂಪದಲ್ಲಿ ಹಾಕಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಉಂಟಾಗಿದೆ. ಮಹಿಳಾ ವಿರುದ್ಧದ ಈ ರೀತಿಯ ಆನ್‌ಲೈನ್ ದೌರ್ಜನ್ಯಕ್ಕೆ ವಿರೋಧ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹೆಣ್ಣುಮಕ್ಕಳಿಗೆ ಸುರಕ್ಷತೆ ಇಲ್ಲದ ಸ್ಥಿತಿಯ ಬಗ್ಗೆ ಮತ್ತೊಮ್ಮೆ ಚರ್ಚೆ ಶುರುವಾಗಿದೆ. ಈ ನಡುವೆ, ನಟಿ ರಮ್ಯಾ ಬೆಂಬಲಿಗರು ಹಾಗೂ ಮಹಿಳಾ ಹಕ್ಕು ಕಾರ್ಯಕರ್ತರು solchen ಅಭಿವ್ಯಕ್ತಿಗಳನ್ನು ಖಂಡಿಸಿದ್ದಾರೆ.

ಅಧಿಕೃತರು ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯವೂ ವ್ಯಕ್ತವಾಗಿದೆ.

Continue Reading

Trending