ದೇಶ
ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ.. 10 ವರ್ಷದ ಬಳಿಕ ಲೋಕಸಭೆಗೆ ಅಧಿಕೃತ ವಿಪಕ್ಷ ನಾಯಕ!

ಈ ಬಾರಿ ಲೋಕಸಭೆಯಲ್ಲಿ ಪ್ರಧಾನಿ ಮೋದಿ ವರ್ಸಸ್ ರಾಹುಲ್ ಗಾಂಧಿ ಕಾಳಗ ಫಿಕ್ಸ್ ಆಗಿದೆ. ನಾ ಒಲ್ಲೆ ನಾ ಒಲ್ಲೆ ಅಂತಾನೇ ಹೇಳುತ್ತಾ ಬಂದಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಈಗ ವಿಪಕ್ಷಗಳ ಸಾರಥಿಯಾಗೋಕೆ ಒಪ್ಪಿದ್ದಾರೆ. ಅಧಿಕೃತ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆಯಾಗಿದ್ದಾರೆ. ಆದ್ರೆ ಈ ಹುದ್ದೆ ರಾಗಾಗೆ ಹೂವಿನ ಹಾಸಿಗೆ ಆಗಿಲ್ಲ.
2014 ಹಾಗೂ 2019ರಲ್ಲಿ ಹೀನಾಯ ಪ್ರದರ್ಶನ ಕಂಡಿದ್ದ ಹಸ್ತ ಪಡೆ 2024ರ ಲೋಕಸಭೆ ಚುನಾವಣೆಯಲ್ಲಿ ಪುಟಿದೆದ್ದಿದೆ. ಶತಾಯಗತಾಯ ಪ್ರಧಾನಿ ಮೋದಿಯನ್ನು ಸೋಲಿಸಲೇಬೇಕೆಂದು ಮಿತ್ರರನ್ನೆಲ್ಲ ಒಗ್ಗೂಡಿಸಿ ಇಂಡಿಯಾ ಮೈತ್ರಿಕೂಟವೆಂದು ಲೋಕಸಮರದ ರಣಭೂಮಿಗೆ ಇಳಿದಿದ್ದ ಹಸ್ತ ಪಡೆ ಬಹುಮತ ಪಡೆಯದಿದ್ರೂ ಕಳೆದೆರಡು ಬಾರಿಗಿಂತ ಉತ್ತಮ ಸಾಧನೆ ಮಾಡಿದೆ. ಇದೇ ಹುಮ್ಮಸ್ಸಿನಲ್ಲಿರುವ ಕಾಂಗ್ರೆಸ್ ನಾಯಕರು ಈಗ ಎನ್ಡಿಎ ವಿರುದ್ಧದ ಹೋರಾಟ ತೀವ್ರಗೊಳಿಸುವ ಹಾದಿಯಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ.
ಲೋಕಸಭೆಯ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ
ಹೊಸ ಸಂಸತ್ ಭವನದಲ್ಲಿ ಪ್ರಧಾನಿ ಮೋದಿ 3ನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದ್ರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭೆಯ ಅಧಿಕೃತ ವಿಪಕ್ಷ ನಾಯಕರಾಗಿ ಆಯ್ಕೆ ಆಗಿದ್ದಾರೆ. ಭಾರತ್ ಜೋಡೋ ಯಾತ್ರೆ ಹಾಗೂ ನ್ಯಾಯ್ ಯಾತ್ರೆ ಮೂಲಕ ದೇಶಾದ್ಯಂತ ಸಂಚರಿಸಿ ಕಾಂಗ್ರೆಸ್ ಪಕ್ಷಕ್ಕೆ ಬಲ ತುಂಬಿದ್ದರು. ಈ ಹಿನ್ನೆಲೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಅತ್ಯುತ್ತಮ ಸಾಧನೆ ಮಾಡಿದೆ. ಕಾಂಗ್ರೆಸ್ 99 ಸೀಟು ಗೆದ್ದು ಹೆಚ್ಚಿನ ಸ್ಥಾನ ಗಳಿಸಿದೆ. ಹೀಗಾಗಿ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಯೇ ಆಗಬೇಕೆಂದು ಕಾಂಗ್ರೆಸ್ ನಾಯಕರು ಆಗ್ರಹ ಮಾಡಿದ್ದರು. ಆದರೆ ರಾಹುಲ್ ಗಾಂಧಿ ಕಡೆಯಿಂದ ಯಾವುದೇ ಅಂತಿಮ ತೀರ್ಮಾನ ಬಂದಿರಲಿಲ್ಲ. ಈಗ ರಾಹುಲ್ ಗಾಂಧಿ ವಿಪಕ್ಷ ನಾಯಕನ ಸ್ಥಾನವನ್ನು ಒಪ್ಪಿಕೊಂಡಿದ್ದಾರೆ.
ಇಂಡಿಯಾ ಒಕ್ಕೂಟ ನಾಯಕರ ಸಭೆಯಲ್ಲಿ ನಿರ್ಧಾರ
ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ನಿರ್ಧಾರವನ್ನು ರಾಹುಲ್ ಗಾಂಧಿ ಒಪ್ಪಿಕೊಂಡಿದ್ದು, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಸಜ್ಜಾಗಿದ್ದಾರೆ. ನವದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ನಡೆದ ಇಂಡಿಯಾ ಒಕ್ಕೂಟ ನಾಯಕರ ಸಭೆಯಲ್ಲಿ ರಾಹುಲ್ ಗಾಂಧಿಯನ್ನು ಲೋಕಸಭೆಯಲ್ಲಿ ವಿಪಕ್ಷ ನಾಯಕರನ್ನಾಗಿ ನೇಮಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ಗೆ ಪತ್ರ ಬರೆದಿದ್ದು, ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿಯನ್ನು ನೇಮಕ ಮಾಡುವ ನಿರ್ಧಾರ ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಮೋದಿ vs ರಾಹುಲ್ ಫೈಟ್ ಫಿಕ್ಸ್
ಇನ್ನು ಲೋಕಸಭೆಯಲ್ಲಿ ಇನ್ಮುಂದೆ ಮೋದಿ ವರ್ಸಸ್ ರಾಹುಲ್ ಗಾಂಧಿ ಫೈಟ್ ಫಿಕ್ಸ್ ಆಗಿದೆ. ಲೋಕಸಭೆಯಲ್ಲಿ ಪ್ರಧಾನಿ ಮೋದಿ ಸಂಸದರಾಗಿ ಪ್ರಮಾಣ ವಚನ ಸ್ವೀಕಾರ ಮಾಡುವಾಗಲು ರಾಹುಲ್ ಗಾಂಧಿ ಸಂವಿಧಾನ ಪ್ರತಿಯನ್ನು ಪ್ರದರ್ಶನ ಮಾಡಿದ್ದರು.
10 ವರ್ಷದ ಬಳಿಕ ಅಧಿಕೃತ ವಿಪಕ್ಷ ನಾಯಕ!
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 99 ಸ್ಥಾನ ಗೆದ್ದಿದ್ದು ಒಂದು ದಾಖಲೆಯಾದ್ರೆ, ರಾಹುಲ್ ಗಾಂಧಿ ವಿರೋಧ ಪಕ್ಷ ನಾಯಕನಾಗಿರೋದು ಮತ್ತೊಂದು ದಾಖಲೆಯಾಗಿದೆ. ಈ ಹಿಂದಿನ 2014 ಹಾಗೂ 2019ರ ಚುನಾವಣೆಯಲ್ಲಿ ಯಾವುದೇ ಪಕ್ಷವೂ ಅಧಿಕೃತ ವಿರೋಧ ಪಕ್ಷವಾಗುವ ಸಂಖ್ಯಾಬಲ ಪಡೆದಿರಲಿಲ್ಲ. ಇದೀಗ ಕಾಂಗ್ರೆಸ್ ಏಕಾಂಗಿಯಾಗಿ 99 ಸ್ಥಾನ ಗೆದ್ದಿದ್ದರಿಂದ ಅಧಿಕೃತ ವಿರೋಧ ಪಕ್ಷದ ಸ್ಥಾನಮಾನ ಸಿಕ್ಕಿದೆ. ಲೋಕಸಭಾ ವಿರೋಧ ಪಕ್ಷದ ನಾಯಕನಾಗಿ ಆಯ್ಕೆ ಆಗುತ್ತಿದ್ದಂತೆ ರಾಹುಲ್ ಗಾಂಧಿಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಎಲ್ಲ ಕಾಂಗ್ರೆಸ್ ನಾಯಕರು ಶುಭಾಶಯ ಕೋರಿದ್ದಾರೆ. ಇನ್ನು ಕಾಂಗ್ರೆಸ್ಗೆ ಅಧಿಕೃತ ವಿಪಕ್ಷ ಸ್ಥಾನವಿದ್ದರೂ ವಿಪಕ್ಷ ನಾಯಕನ ಆಯ್ಕೆ ಸಂದರ್ಭದಲ್ಲೂ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಇಂಡಿಯಾ ಮೈತ್ರಿಕೂಟದ ನಾಯಕರ ಅಭಿಪ್ರಾಯ ಸಂಗ್ರಹಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ವಿಪಕ್ಷ ನಾಯಕರು ಒಗ್ಗಟ್ಟಾಗಿದ್ದೆವೆ ಎಂಬ ಸಂದೇಶವನ್ನು ಕಾಂಗ್ರೆಸ್ ರವಾನಿಸಿದೆ. ಈ ಬಾರಿ ಲೋಕಸಭೆಯಲ್ಲಿ ಪ್ರಧಾನಿ ಮೋದಿ ವರ್ಸಸ್ ವಿಪಕ್ಷ ನಾಯಕ ರಾಹುಲ್ ಗಾಂಧಿ ಕಾಳಗ ಪಕ್ಕಾ ಆಗಿದೆ. ಇದನ್ನು ರಾಗಾ ಯಾವ ರೀತಿ ಬಳಸಿಕೊಳ್ತಾರೆ ಅಂತ ಕಾದುನೋಡಬೆಕಿದೆ.
ದೇಶ
ನಾವು ಉಗ್ರವಾದ ಪೋಷಿಸಿದ್ದು ನಿಜ ಎಂದು ತಪ್ಪೊಪ್ಪಿಕೊಂಡ ಪಾಕ್ ನಾಯಕಿ!

ಪಾಕಿಸ್ತಾನವು ಉಗ್ರರನ್ನು ಹಾಗೂ ಉಗ್ರರ ಚಟುವಟಿಕೆಯನ್ನು ಪೋಷಿಸಿಕೊಂಡು ಬಂದಿರುವುದು ಸತ್ಯ ಎಂದು ಪಾಕಿಸ್ತಾನ ಪೀಪಲ್ಸ್ ಪಾರ್ಟಿ ನಾಯಕಿ ಹಾಗೂ ಸಂಸದೆ ಶೆರ್ರಿ ರೆಹಮಾನ್ ಅವರು ಒಪ್ಪಿಕೊಂಡಿದ್ದಾರೆ,
ಸ್ಕೈ ನ್ಯೂಸ್ ನಡೆಸಿದ ವಿಶೇಷ ಸಂದರ್ಶನದಲ್ಲಿ ಸಂಸದೆ ಶೆರ್ರಿ ರೆಹಮಾನ್ ಭಾಗಿಯಾಗಿದ್ದು, ನಿರೂಪಕಿ ಹಾಗೂ ಸಂಸದೆಯ ನಡುವೆ ಮಾತಿನ ಚಕಮಕಿ ನಡೆದಿದೆ, ಸಂದರ್ಶನದ ಬಿರುಸಿನ ನಡುವೆ ನಿರೂಪಕಿ ಸಾಕ್ಷ್ಯಾಧಾರಗಳನ್ನು ತೋರಿಸಿದ್ದು, ಈ ವೇಳೆ ಪಾಕಿಸ್ತಾನದ ಸಂಸದೆಯ ಬಾಯಿಂದ ಪಾಕಿಸ್ತಾನ ಹಾಗೂ ಉಗ್ರರಿಗೂ ಇರುವ ನಂಟಿನ ಅಸಲಿ ವಿಚಾರಗಳು ಬಹಿರಂಗೊಂಡಿದೆ,
ನಿರೂಪಕಿ ಯಾಲ್ದಾ ಹಕೀಮ್ ಬ್ರಿಗೇಡ್ 313 ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶೆರ್ರಿ ರೆಹಮಾನ್ ಈ ಹಿಂದೆ ಪಾಕಿಸ್ತಾನವು ಭಯೋತ್ಪಾದನೆಯನ್ನು ಪೋಷಿಸಿಕೊಂಡು ಬಂದಿದ್ದು ನಿಜ, ಆದರೆ ನಾವು ಈಗ ಉಗ್ರವಾದ ವಿರುದ್ಧ ಹೋರಾಟ ನಡೆಸುತ್ತಿದ್ದೇವೆ, ಪಾಕಿಸ್ತಾನ ರಾಷ್ಟ್ರವು ಬದಲಾಗಿದೆ ಎಂದರು,
ಇನ್ನು ಕಾಶ್ಮೀರವನ್ನು ಗುರಯಾಗಿಸಿಕೊಂಡು ಭಾರತದಲ್ಲಿ ನಡೆಯುತ್ತಿರುವ ದಾಳಿ ಬಗ್ಗೆ ನಿರೂಪಕಿ ಪ್ರಸ್ತಾಪಿಸದಾಗ ಉತ್ತರಿಸಿದ ಶೆರ್ರಿ ರೆಹಮಾನ್ ಭಾರತದಲ್ಲೂ ಆಂತರಿಕ ಸಂಘರ್ಷಗಳು ನಡೆಯುತ್ತಿವೆ, ಅಲ್ಲಿನ ಭದ್ರತೆಗೆ ಏನಾದರೂ ಸಮಸ್ಯೆಯಾದರೆ ಅದಕ್ಕೆ ನಾವು ಜವಾಬ್ದಾರರೇ? ಎಂದು ಪ್ರಶ್ನಿಸಿದರು,
ಕ್ರೀಡೆ
ಒಂದೇ ತಿಂಗಳಲ್ಲಿ 6 ಕ್ರಿಕೆಟಿಗರು ನಿವೃತ್ತಿ-ಲಿಸ್ಟ್ ನಲ್ಲಿದ್ದಾರೆ ಭಾರತದ ದಿಗ್ಗಜರು!

ನವದೆಹಲಿ: ರೋಹಿತ್ ಶರ್ಮಾ ಟೆಸ್ಟ್ ನಿವೃತ್ತಿಯೊಂದಿಗೆ ಶುರುವಾದ ಸ್ಟಾರ್ ಆಟಗಾರರ ಗುಡ್ ಬೈ ಪರ್ವ ಮುಂದುವರೆದಿದೆ, ಅದರಲ್ಲೂ ಮೇ ಮತ್ತು ಜೂನ್ ತಿಂಗಳ ನಡುವೆ ಒಟ್ಟು 6 ಆಟಗಾರರು ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ,
ರೋಹಿತ್ ಶರ್ಮಾ: ಭಾರತದ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಕಳೆದ ತಿಂಗಳು ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದರು, ಈಗಾಗಲೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿರುವ ಹಿಟ್ ಮ್ಯಾನ್ ಇನ್ಮುಂದೆ ಏಕದಿನದಲ್ಲಿ ಮಾತ್ರ ಟೀಮ್ ಇಂಡಿಯಾ ಪ್ರತಿನಿಧಿಸಲಿದ್ದಾರೆ,
ವಿರಾಟ್ ಕೊಹ್ಲಿ: ರೋಹಿತ್ ಶರ್ಮಾ ಬೆನ್ನಲ್ಲೇ ವಿರಾಟ್ ಕೊಹ್ಲಿನ ಕೂಡ ಟೆಸ್ಟ್ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ, ಮೇ 12 ರಂದು ಟೆಸ್ಟ್ ಗೆ ನಿವೃತ್ತಿ ಪ್ರಕಟಿಸಿದ್ರು, ಕಿಂಗ್ ಕೊಹ್ಲಿ ಇನ್ನು ಏಕದಿನ ಕ್ರಿಕೆಟ್ ನಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ,
ಏಂಜೆಲೊ ಮ್ಯಾಥ್ಯೂಸ್: ಶ್ರೀಲಂಕಾ ತಂಡದ ಸ್ಟಾರ್ ಆಲ್ರೌಂಡರ್ ಏಂಜೆಲೊ ಮ್ಯಾಥ್ಯೂಸ್ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ, ಆಸ್ಟ್ರೇಲಿಯಾ ತಂಡದ ಪ್ರಮುಖ ಆಟಗಾರ ಗ್ಲೆನ್ ಮ್ಯಾಕ್ಸ್ವೆಲ್ ಏಕದಿನ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ,
ಆದರೂ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಮುಂದುವರೆಯಲಿದ್ದಾರೆ,
ಹೆನ್ರಿಕ್ ಕ್ಲಾಸೆನ್: ಸೌತ್ ಆಫ್ರಿಕಾದ ಹೊಡಿಬಡಿ ದಾಂಡಿಗ ಹೆನ್ರಿಕ್ ಕ್ಲಾಸೆನ್ ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ, ಕೇವಲ 33 ವರ್ಷದ ಕ್ಲಾಸೆನ್, ಮುಂಬರುವ ದಿನಗಳಲ್ಲಿ ಟಿ20 ಲೀಗ್ ಗಳಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ,
ನಿಕೋಲಸ್ ಪೂರನ್: ವೆಸ್ಟ್ ಇಂಡೀಸ್ ನ ವಿಕೆಟ್ ಕೀಪರ್ ಬ್ಯಾಟರ್ ನಿಕೋಲಸ್ ಪೂರನ್ ಕೂಡ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ, ಅದು ಕೂಡ 29 ನೇ ವಯಸ್ಸಿನಲ್ಲಿ ಎಂಬುದು ಅಚ್ಚರಿ.
ಕ್ರೀಡೆ
ಬ್ಯಾಡ್ಮಿಂಟನ್ ಆಡುತ್ತಾ ಬೆಳೆದವಳಾಗಿ ಜೀವನವನ್ನು ದೈಹಿಕವಾಗಿ, ಮಾನಸಿಕವಾಗಿ ಹೇಗೆ ರೂಪಿಸುತ್ತದೆ ನಾನು ನೇರವಾಗಿ ಅನುಭವಿಸಿದ್ದೇನೆ ದೀಪಿಕಾ

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಮ್ಮ ತಂದೆ, ಬ್ಯಾಡ್ಮಿಂಟನ್ ಲೆಜೆಂಡ್ ಪ್ರಕಾಶ್ ಪಡುಕೋಣೆ ಅವರ 70ನೇ ಹುಟ್ಟುಹಬ್ಬವನ್ನಿಂದು ಬಹಳ ವಿಶೇಷವಾಗಿ ಆಚರಿಸಿದರು.
‘ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್’ (ಪಿಎಸ್ಬಿ) ಬೆಂಗಳೂರು, ಎನ್ಸಿಆರ್, ಮುಂಬೈ, ಚೆನ್ನೈ, ಜೈಪುರ, ಪುಣೆ, ನಾಸಿಕ್, ಮೈಸೂರು, ಪಾಣಿಪತ್, ಡೆಹ್ರಾಡೂನ್, ಉದಯಪುರ, ಕೊಯಮತ್ತೂರು, ಸಾಂಗ್ಲಿ ಮತ್ತು ಸೂರತ್ ಸೇರಿದಂತೆ 18 ನಗರಗಳಲ್ಲಿ 75ಕ್ಕೂ ಹೆಚ್ಚು ತರಬೇತಿ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಮಹತ್ವದ ಮೈಲಿಗಲ್ಲು ಸಾಧಿಸಿದೆ ಎಂದು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಳ್ಳಲಾದ ಮಾಧ್ಯಮ ಪ್ರಕಟಣೆ ಮೂಲಕ ಹೇಳಿದ್ದಾರೆ.
“ಬ್ಯಾಡ್ಮಿಂಟನ್ನ ಸಂತೋಷ ಮತ್ತು ಶಿಸ್ತನ್ನು ಎಲ್ಲಾ ವರ್ಗದ ಜನರಿಗೆ ತಲುಪಿಸುವುದು ನಮ್ಮ ಆಶಯ” ಎಂದೂ ಸಹ ದೀಪಿಕಾ ತಿಳಿಸಿದ್ದಾರೆ. ಈ ಮೂಲಕ ಕೇಂದ್ರಗಳ ಸಂಖ್ಯೆ ವಿಸ್ತರಿಸುವ ಬಗ್ಗೆ ಮಾಹಿತಿ ಒದಗಿಸಿದ್ದಾರೆ.
ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ, “ಬ್ಯಾಡ್ಮಿಂಟನ್ ಆಡುತ್ತಾ ಬೆಳೆದವಳಾಗಿ, ಈ ಕ್ರೀಡೆಯು ಒಬ್ಬರ ಜೀವನವನ್ನು ದೈಹಿಕವಾಗಿ, ಮಾನಸಿಕವಾಗಿ ಮತ್ತು ಭಾವನಾತ್ಮಕವಾಗಿ ಹೇಗೆ ರೂಪಿಸುತ್ತದೆ ಎಂಬುದನ್ನು ನಾನು ನೇರವಾಗಿ ಅನುಭವಿಸಿದ್ದೇನೆ. ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ (PSB) ಮೂಲಕ, ಬ್ಯಾಡ್ಮಿಂಟನ್ನ ಸಂತೋಷ ಮತ್ತು ಶಿಸ್ತನ್ನು ಎಲ್ಲಾ ಹಂತದ ಜನರಿಗೆ ತಲುಪಿಸಲು ಮತ್ತು ಆರೋಗ್ಯಕರ, ಫೋಕಸ್ಡ್ ಮತ್ತು ಕ್ರೀಡೆಯಿಂದ ಪ್ರೇರಿತವಾದ ಪೀಳಿಗೆಯನ್ನು ನಿರ್ಮಿಸಲು ನಾವು ಆಶಿಸುತ್ತೇವೆ. ಅಪ್ಪಾ, ನಿಮ್ಮನ್ನು ಚೆನ್ನಾಗಿ ತಿಳಿದಿರುವವರಿಗೆ ಈ ಕ್ರೀಡೆಯ ಬಗ್ಗೆ ನಿಮ್ಮ ಉತ್ಸಾಹವೂ ತಿಳಿದಿದೆ. 70ನೇ ವಯಸ್ಸಿನಲ್ಲಿಯೂ ನೀವು ಬ್ಯಾಡ್ಮಿಂಟನ್ಗೆ ನಿಮ್ಮನ್ನು ಸಮರ್ಪಿಸಿದ್ದೀರಿ. ನಿಮ್ಮ ಉತ್ಸಾಹವನ್ನು ನಿಜವಾಗಿಸಲು ನಾವು ಬದ್ಧರಾಗಿದ್ದೇವೆ. ಎಲ್ಲರಿಗಾಗಿ ಬ್ಯಾಡ್ಮಿಂಟನ್! 70ನೇ ಹುಟ್ಟುಹಬ್ಬದ ಶುಭಾಶಯಗಳು ಪಪ್ಪಾ!” ಎಂದು ಬರೆದುಕೊಂಡಿದ್ದಾರೆ.
ನಟಿ ಶೇರ್ ಮಾಡಿದ ಪ್ರಕಟಣೆಯಲ್ಲಿ, ಪಿಎಸ್ಬಿಯ ಮಾರ್ಗದರ್ಶಕ ಮತ್ತು ಸಲಹೆಗಾರ ಪ್ರಕಾಶ್ ಪಡುಕೋಣೆ ತಮ್ಮ ಮನದಾಳವನ್ನೂ ಹಂಚಿಕೊಂಡರು. “ಕ್ರೀಡೆಯು ಬೆಳವಣಿಗೆಯ ಅವಿಭಾಜ್ಯ ಅಂಗವಾಗಿದೆ. ಇದು ಶಿಸ್ತು, ಸ್ಥಿತಿಸ್ಥಾಪಕತ್ವ ಮತ್ತು ಗೆಲುವಿನ ಮನಸ್ಥಿತಿಯನ್ನು ಹುಟ್ಟಿಸುತ್ತದೆ. ಪಿಎಸ್ಬಿಯೊಂದಿಗೆ, ಗುಣಮಟ್ಟದ ತರಬೇತಿಯನ್ನು ಸುಲಭವಾಗಿ ಮತ್ತು ಕೈಗೆಟುಕುವಂತೆ ಮಾಡುವುದು, ತಳಮಟ್ಟದಿಂದ ಪ್ರತಿಭೆಯನ್ನು ಪೋಷಿಸುವುದು ಮತ್ತು ಭಾರತೀಯ ಬ್ಯಾಡ್ಮಿಂಟನ್ನ ಭವಿಷ್ಯಕ್ಕೆ ಬಲವಾದ ಅಡಿಪಾಯವನ್ನು ಹಾಕುವುದು ನಮ್ಮ ಗುರಿ” ಎಂದು ಹೇಳಿದರು.
ಭಾರತದ 18 ನಗರಗಳಲ್ಲಿ 75 ಕೇಂದ್ರಗಳು ಆರಂಭಗೊಂಡಿದ್ದು, ಈ ವರ್ಷದ ಕೊನೆಗೆ 100 ಕೇಂದ್ರಗಳು ಮತ್ತು 2027ರ ಹೊತ್ತಿಗೆ 250 ಕೇಂದ್ರಗಳಿಗೆ ವಿಸ್ತರಿಸುವ ಗುರಿಯನ್ನು ‘ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್’ ಹೊಂದಿದೆ. ದೀಪಿಕಾ ಪಡುಕೋಣೆ ಇದರ ಸಂಸ್ಥಾಪಕಿಯಾದರೆ, ಪ್ರಕಾಶ್ ಪಡುಕೋಣೆ ಮಾರ್ಗದರ್ಶಕರಾಗಿ ಪಿಎಸ್ಬಿಯ ಭಾಗವಾಗಿದ್ದಾರೆ
-
ಬಿಬಿಎಂಪಿ4 weeks ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು1 year ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು7 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ