ದೇಶ
ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆ: ಆರ್ಎಸ್ಎಸ್ ಪ್ರಚಾರಕ ಸಭೆಯಲ್ಲಿ ಗಂಭೀರ ಚರ್ಚೆ, ಕಳವಳ – RSS Expansion in Uttar Pradesh

ಲಖನೌ, ಉತ್ತರಪ್ರದೇಶ: 2024ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಉತ್ತಮ ಪ್ರದರ್ಶನ ತೋರುವಲ್ಲಿ ವಿಫಲವಾಗಿರುವ ಕುರಿತು ಅನೇಕ ವಿಶ್ಲೇಷಣೆಗಳು ನಡೆಯತ್ತಿವೆ. ಇದರಲ್ಲಿ ಪ್ರಮುಖವಾಗಿರುವುದು ರಾಜ್ಯದಲ್ಲಿ ಸಂಘದ ಕಾರ್ಯದ ವಿಸ್ತರಣೆಯ ಗುರಿ ಅಪೂರ್ಣವಾಗಿರುವುದೂ ಕೂಡಾ ಒಂದು. ಸಂಘ ಹಾಕಿಕೊಂಡ ಗುರಿಯನ್ನು ತಲುಪಲಾಗದೇ ಇರುವುದು ಉತ್ತರಪ್ರದೇಶದಲ್ಲಿ ಮತದಾನದ ಶೇಕಡಾವಾರು ಪ್ರಮಾಣ ಕುಸಿಯಲು ಕಾರಣವಾಗಿದೆ ಎಂದು ಸಂಘದ ನಾಯಕರು ಕಳವಳ ವ್ಯಕಪಡಿಸಿದ್ದಾರೆ.
ಉತ್ತರ ಪ್ರದೇಶದ ಪ್ರಚಾರಕದ ಸಭೆಯಲ್ಲಿ ಈ ಕುರಿತು ಆತಂಕ ವ್ಯಕ್ತವಾಗಿದೆ. ಬುಧವಾರದಿಂದ ಉತ್ತರಪ್ರದೇಶದ ರಾಜಧಾನಿ ಲಖನೌದ ನಿರಲ ನಗರ್ನಲ್ಲಿನ ಸರಸ್ವತಿ ಶಿಶು ಮಂದಿರದಲ್ಲಿ ಮಹತ್ವದ ಸಭೆ ಆರಂಭವಾಗಿದೆ. ಈ ಸಭೆಯಲ್ಲಿ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಭಾಗಿಯಾಗಿದ್ದಾರೆ. ಸಭೆಯಲ್ಲಿ ಕುಟುಂಬ ಜ್ಞಾನ ಸೇರಿದಂತೆ ಇತರ ವಿಷಯಗಳ ಚರ್ಚೆ ನಡೆಯಲಿದೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸ್ಥಾಪನೆಯಾಗಿ 100 ವರ್ಷ ಪೂರ್ಣಗೊಂಡಿದೆ. 2025ರ ವಿಜಯದಶಮಿಯಿಂದ ಸಂಘದ ಶತಮಾನೋತ್ಸವ ವರ್ಷ ಪ್ರಾರಂಭವಾಗುತ್ತಿದೆ. ಆದರೂ ಉತ್ತರ ಭಾಗದ ಉತ್ತರ ಪ್ರದೇಶದಲ್ಲಿ ಸಂಘದ ವಿಸ್ತರಣೆ ಕಾರ್ಯದ ಗುರಿ ಹಾಗೆಯೇ ಉಳಿದಿದೆ. 2022ರಲ್ಲಿ ಈ ಸಂಬಂಧ ಪ್ರಯಾಗ್ರಾಜ್ನಲ್ಲಿನ ಕಾರ್ಯಕಾರಿ ಮಂಡಳಿ ಸಭೆ ನಡೆಸಲಾಗಿತ್ತು.
ಈ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಸಂಘದ ಕಾರ್ಯವನ್ನು ಮಂಡಲ್ ಮಟ್ಟದಲ್ಲಿ ಆರಂಭಿಸುವ ಕುರಿತು ಗುರಿ ಹೊಂದಲಾಗಿತ್ತು. ಆದರೆ, ರಾಜ್ಯದ ಉತ್ತರ ಭಾಗದಲ್ಲಿ ಮಂಡಲ್ ಮಟ್ಟದಲ್ಲಿ ಸಂಘದ ಕೆಲಸವನ್ನು ಮುಟ್ಟಿಸುವಲ್ಲಿ ವಿಫಲವಾಗಿದೆ. ಮಂಡಲ್ ಮಟ್ಟದಲ್ಲಿ ಅನೇಕ ಬ್ರಾಂಚ್ಗಳ ಕೊರತೆ ಇರುವುದು ಕೂಡ ಸಂಘದ ಪ್ರಮುಖ ನಾಯಕರ ಚಿಂತೆಗೆ ಕಾರಣವಾಗಿದೆ. ಇದರಿಂದ ಸಂಘದ ಅನೇಕ ಪ್ರಯತ್ನಗಳ ಹೊರತಾಗಿಯುವ ಮತದಾನದ ಶೇಕಡಾವಾರು ಪ್ರಮಾಣ ಹೆಚ್ಚಿಲ್ಲ. ಪರಿಣಾಮ ನಿರೀಕ್ಷಿತ ಫಲಿತಾಂಶವನ್ನು ಪಡೆಯುವಲ್ಲಿ ಸಾಧ್ಯವಾಗಿಲ್ಲ ಎಂದು ಕಳವಳ ವ್ಯಕ್ತಪಡಿಸಲಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಸಂಘ ಸಾರ್ವಜನಿಕ ಅಭಿಪ್ರಾಯವನ್ನು ಪರಿಷ್ಕರಿಸುವ ಕೆಲಸ ಮಾಡಿತ್ತು. ಇದಕ್ಕಾಗಿ ಪ್ರತಿ ಲೋಕಸಭಾದಲ್ಲಿ 10 ಸಾವಿರ ಡ್ರಾಯಿಂಗ್ ರೂಮ್ ಸೆಮಿನಾರ್ ನಡಸಲಾಗಿತ್ತು. ಆದರೆ, ಪೂರ್ವಾಂಚಲದಲ್ಲಿ ಮಂಡಲ್ ಮಟ್ಟದಲ್ಲಿ ಅಂದುಕೊಂಡಂತೆ ಕೆಲಸ ನಡೆಯದ ಹಿನ್ನೆಲೆ ಈ ಸಭೆಯನ್ನು ನಡೆಸಲಾಗಿತ್ತು. ಲಖನೌ ಮತ್ತು ಕಾಶಿಯಂತಹ ನಗರದಲ್ಲಿ ಮತದಾನದ ಶೇಖಡಾವಾರು ಪ್ರಮಾಣ ಕಡಿಮೆ ಆಗಿದೆ. ಚುನಾವಣಾ ಫಲಿತಾಂಶ ಮತ್ತು ಮತದಾನದ ಶೇಕಡಾವಾರು ಗಮನಿಸಿದಾಗ ಕಾಶಿ ಪ್ರಾಂತ್ಯದಲ್ಲೇ ಅತ್ಯಂತ ಕಳಪೆ ಮತದಾನ ಆಗಿರುವುದು ಕಂಡು ಬಂದಿದೆ.
ಸದ್ಯ ರಾಷ್ಟ್ರೀಯ ಸ್ವಯಂಸೇವಕ್ ಸಂಘದ ಪ್ರಚಾರಕರ ಸಭೆಯು ಉತ್ತರ ಪ್ರದೇಶದ ಉತ್ತರ ಭಾಗದ ಪ್ರದೇಶದಲ್ಲಿನ ಸರಸ್ವತಿ ಕುಂಜ್ ನಿರಲನಗರ್ನಲ್ಲಿ ನಡೆಯುತ್ತಿದೆ. ಜೂನ್ 29ರವರೆಗೆ ವಿವಿಧ ವಿಭಾಗಗಳಲ್ಲಿ ಸಭೆ ನಡೆಯಲಿದೆ.
ಮೊದಲ ದಿನದ ಸಭೆಯಲ್ಲಿ ಪ್ರಾದೇಶಿಕ ಕಾರ್ಯಕಾರಿ ಪ್ರಚಾರಕರು ಭಾಗಿಯಾಗಿದ್ದರು. ಎರಡನೇ ದಿನ ರಾಜ್ಯದ ಉತ್ತರ ಭಾಗದ ವಿಭಾಗ ಮಟ್ಟದ ಪ್ರಚಾರಕರು ಮತ್ತು ಸಹ ವಿಭಾಗದ ಪ್ರಚಾರಕರು ಭಾಗಿಯಾಗಲಿದ್ದಾರೆ. ಸಂಘದ ಶತಮಾನವನ್ನು ಗಮನದಲ್ಲಿರಿಸಿಕೊಂಡು ವಿಭಾಗ್ ಪ್ರಚಾರಕರು ತಮ್ಮ ಕಾರ್ಯ ವಿಸ್ತರಣೆ ಮತ್ತು ಕೆಲಸ ಗುಣಮಟ್ಟ ಹೆಚ್ಚಿಸುವ ಅಂಶದ ಕುರಿತು ಚರ್ಚಿಸಲಾಗುವುದು. ವಿಭಾಗದ ಪ್ರಚಾರಕರಿಗೆ ವಿದ್ಯಾರ್ಥಿಗಳ ಶಾಖೆ ಮೇಲೆ ತಮ್ಮ ಗುರಿ ನೆಡುವಂತೆ ಸೂಚಿಸಲಾಗಿದೆ.
ಈ ಸಭೆಯಲ್ಲಿ ರಾಜ್ಯದ ಉತ್ತರ ಭಾಗ, ಔದ್, ಕಾನ್ಫುರ್, ಕಾಶಿ ಮತ್ತು ಗೋರಖ್ ನಾಲ್ಕು ಪ್ರಾಂತ್ಯದ ಪ್ರಾಂತೀಯ ಮತ್ತು ಸಹ ಪ್ರಾಂತೀಯ ಪ್ರಚಾರಕರು ಭಾಗಿಯಾಗಿದ್ದಾರೆ. ಸಭೆಯಲ್ಲಿ ಪ್ರಾಂತೀಯ ಮಟ್ಟದ ಪ್ರಚಾರಕರು ಮತ್ತು ಕಡೆಯ ದಿನ ಪ್ರಾದೇಶಿಕ ಅಧಿಕಾರಿಗಳೊಂದಿಗೆ ಸಭೆ ನಡೆಯಲಿದೆ. ಇತ್ತೀಚಿಗೆ ಸಂಘ ಶಿಕ್ಷಾ ವರ್ಗ ಎಲ್ಲ ಪ್ರಾಂತ್ಯದಲ್ಲೂ ಪೂರ್ಣಗೊಳಿಸಿದೆ.
ಪ್ರಾದೇಶಿಕ ಮಟ್ಟದಲ್ಲಿ ಪ್ರಥಮ ಸಂಘ ಶಿಕ್ಷಾ ವರ್ಗ ವಿಶೇಷ ಹಾಗೂ ಕಾರ್ಯಕರ್ತರ ವಿಕಾಸ ವರ್ಗ ಪೂರ್ಣಗೊಂಡಿದೆ. ಸಭೆಯಲ್ಲಿ ಸಂಘ ಶಿಕ್ಷಾ ವರ್ಗಗಳ ಬಗ್ಗೆ ಪರಾಮರ್ಶೆ ನಡೆಸಲಾಗುವುದು. ಜೊತೆಗೆ ಪ್ರಾಂತ್ಯಗಳಲ್ಲಿ ಯೋಜನಾ ಸಭೆಗಳನ್ನೂ ನಡೆಸಲಾಗಿದೆ. ಕೆಲವು ಪ್ರಚಾರಕರ ಕಾರ್ಯಕ್ಷೇತ್ರಗಳಲ್ಲಿ ಬದಲಾವಣೆಯಾಗಿದೆ. ಸಭೆಯಲ್ಲಿ ಶ್ರೀ ಗುರುಪೂಜೆಯ ಯೋಜನೆಯನ್ನೂ ನಡೆಸಲಾಗುವುದು.
ದೇಶ
ನವರಾತ್ರಿ ಸಮಯದಲ್ಲಿ ವಿಮಾನ ನಿಲ್ದಾಣಗಳಲ್ಲಿ ಭಯೋತ್ಪಾದಕ ದಾಳಿ ಎಚ್ಚರಿಕೆ – ಭದ್ರತೆ ಬಿಗಿ ಕ್ರಮ

ಭಾರತದ ಪ್ರಮುಖ ವಿಮಾನ ನಿಲ್ದಾಣಗಳ ಮೇಲೆ ನವರಾತ್ರಿಯ ವೇಳೆ ಭಯೋತ್ಪಾದಕ ದಾಳಿಯ ಅಪಾಯವಿರುವ ಬಗ್ಗೆ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿದ್ದು, ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮ ಜಾರಿಯಲ್ಲಿದೆ.
ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (BCAS) ಆಗಸ್ಟ್ 4ರಂದು ಎಚ್ಚರಿಕೆ ಪ್ರಕಟಿಸಿ, ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ಭಯೋತ್ಪಾದನೆ ಅಥವಾ ಸಮಾಜ ವಿರೋಧಿ ಶಕ್ತಿಗಳಿಂದ ದಾಳಿ ಸಂಭವಿಸಬಹುದೆಂದು ಸೂಚಿಸಿದೆ.
🕵️ ಗುಪ್ತಚರ ಮೂಲದ ಮಹತ್ವದ ಎಚ್ಚರಿಕೆ:
ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳು ದಾಳಿಗೆ ಸಿದ್ಧತೆ ನಡೆಸುತ್ತಿವೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಎಲ್ಲಾ ವಿಮಾನ ನಿಲ್ದಾಣಗಳು, ಏರ್ಸ್ಟ್ರಿಪ್ಗಳು, ಹೆಲಿಪ್ಯಾಡ್ಗಳು ಮತ್ತು ತರಬೇತಿ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳಾಗಿ ಈ ಕೆಳಗಿನ ಕ್ರಮಗಳು ಜಾರಿಗೆ ಬಂದಿವೆ:
- ಸಿಬ್ಬಂದಿ ಮತ್ತು ಸಂದರ್ಶಕರ ಗುರುತಿನ ಪರಿಶೀಲನೆ
- ಸಿಸಿಟಿವಿ ಕಣ್ಗಾವಲು ಬಿಗಿತ
- ಸರಕು, ಪಾರ್ಸೆಲ್ ಮತ್ತು ಮೇಲ್ಗಳ ತಪಾಸಣೆ
- ಸ್ಥಳೀಯ ಪೊಲೀಸ್ ಮತ್ತು ಭದ್ರತಾ ಸಂಸ್ಥೆಗಳೊಂದಿಗೆ ಸಹಕಾರ
🇮🇳 ರಾಷ್ಟ್ರೀಯ ಭದ್ರತೆಗೆ ಒತ್ತು:
ದೆಹಲಿ, ಮುಂಬೈ, ಬೆಂಗಳೂರು ಮತ್ತು ಚೆನ್ನೈ ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳು ಈ ಕ್ರಮಗಳನ್ನು ಜಾರಿಗೊಳಿಸುತ್ತಿದ್ದು, ಪ್ರಯಾಣಿಕರು ತಮ್ಮ ಗುರುತಿನ ದಾಖಲೆಗಳನ್ನು ಸಿದ್ಧವಾಗಿಡಬೇಕು. ತಪಾಸಣೆ ವಿಳಂಬದ ಸಾಧ್ಯತೆಯಿರುವುದರಿಂದ ಸಹಕಾರ ನೀಡುವಂತೆ BCAS ಮನವಿ ಮಾಡಿದೆ.
ದೇಶ
ಅಮೆರಿಕ-ರಷ್ಯಾ ವ್ಯವಹಾರ: ಭಾರತದ ಟೀಕೆಗೆ ಟ್ರಂಪ್ ನುಣುಚು ಪ್ರತಿಕ್ರಿಯೆ

ವಾಷಿಂಗ್ಟನ್: ರಷ್ಯಾದಿಂದ ಈಗಲೂ ವ್ಯವಹಾರ ನಡೆಸುತ್ತಿರುವ ಅಮೆರಿಕದ ಕುರಿತಾಗಿ ಭಾರತ ಮಾಡಿರುವ ಗಂಭೀರ ಆರೋಪಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನುಣುಚು ಪ್ರತಿಕ್ರಿಯೆ ನೀಡಿದ್ದಾರೆ.
ಭಾರತ ಆರೋಪಿಸಿದಂತೆ, ಅಮೆರಿಕ 2024ರಲ್ಲಿ 1.1 ಶತಕೋಟಿ ಡಾಲರ್ ಮೌಲ್ಯದ ರಸಗೊಬ್ಬರ, 878 ಮಿಲಿಯನ್ ಡಾಲರ್ ಮೌಲ್ಯದ ಪಲ್ಲಾಡಿಯಮ್ ಸೇರಿದಂತೆ ಹಲವು ಅಮೂಲ್ಯ ಲೋಹಗಳನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಯುರೇನಿಯಂ ಹೆಕ್ಸಾಫ್ಲೋರೈಡ್ನಂತಹ ಪರಮಾಣು ಉತ್ಪನ್ನಗಳ ಆಮದು ಕೂಡ ಮುಂದುವರಿದಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಟ್ರಂಪ್, “ನನಗೆ ಈ ವ್ಯಾಪಾರದ ವಿವರಗಳು ತಿಳಿದಿಲ್ಲ, ನಾನು ಪರಿಶೀಲನೆ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.
ಭಾರತದ ಖಡಕ್ ಪ್ರತಿಕ್ರಿಯೆ:
ಭಾರತ, ತನ್ನ ರಷ್ಯಾ ತೈಲ ಆಮದು ಬಗ್ಗೆ ಅಮೆರಿಕದ ಟೀಕೆಗೆ ಅಂಕಿ-ಅಂಶಗಳೊಂದಿಗೆ ತಿರುಗೇಟು ನೀಡಿದೆ. ಯುರೋಪ್ ದೇಶಗಳೇ ರಷ್ಯಾದಿಂದ ಭಾರಿ ಪ್ರಮಾಣದಲ್ಲಿ ಎಲ್ಎನ್ಜಿ, ರಸಗೊಬ್ಬರ, ಲೋಹಗಳನ್ನು ಆಮದು ಮಾಡಿಕೊಳ್ಳುತ್ತಿವೆ. 2024ರಲ್ಲಿ ಯುರೋಪಿಯನ್ ಒಕ್ಕೂಟವು 67.5 ಬಿಲಿಯನ್ ಯುರೋಗಳಷ್ಟು ಸರಕು ವ್ಯಾಪಾರ ಹಾಗೂ 17.2 ಬಿಲಿಯನ್ ಯುರೋಗಳಷ್ಟು ಸೇವಾ ವ್ಯಾಪಾರವನ್ನು ರಷ್ಯಾ ಜೊತೆ ನಡೆಸಿದೆ.
ಟ್ರಂಪ್ ಅವರ ಆರೋಪ:
ಟ್ರಂಪ್ ಹೇಳುವಂತೆ, ಭಾರತ ರಷ್ಯಾದ ತೈಲವನ್ನು ಖರೀದಿ ಮಾಡುತ್ತಿದ್ದು, ಅದನ್ನು ಮುಕ್ತ ಮಾರುಕಟ್ಟೆಯಲ್ಲಿ ಲಾಭಕ್ಕಾಗಿ ಮಾರಾಟ ಮಾಡುತ್ತಿದೆ. ಅವರು ಈ ಕಾರಣಕ್ಕಾಗಿ ಭಾರತದಿಂದ ಸಂಗ್ರಹಿಸಬೇಕಾದ ಸುಂಕವನ್ನು ಹೆಚ್ಚಿಸುವುದಾಗಿ ಹೇಳಿದ್ದಾರೆ.
ಭಾರತದ ನಿಲುವು:
ಭಾರತ, ತನ್ನ ರಾಷ್ಟ್ರೀಯ ಹಿತಾಸಕ್ತಿಗಳನ್ನು ಕಾಪಾಡುವ ಸಲುವಾಗಿ ಕಚ್ಚಾ ತೈಲವನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಇಂಧನದ ದರಗಳನ್ನು ಜನತೆಗೆ ಕೈಗೆಟುಕುವಂತೆ ಇರಿಸಲು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಕ್ರೀಡೆ
ರಿಷಭ್ ಪಂತ್ ಮಾನವೀಯತೆ: ಬಡ ವಿದ್ಯಾರ್ಥಿನಿಗೆ BCA ಪ್ರವೇಶಕ್ಕೆ ₹40,000 ನೆರವು!

ಬಾಗಲಕೋಟೆ: ಟೀಂ ಇಂಡಿಯಾದ ವಿಕೆಟ್ ಕೀಪರ್ ಹಾಗೂ ತೀಕ್ಷ್ಣ ಬ್ಯಾಟ್ಸ್ಮನ್ ರಿಷಭ್ ಪಂತ್ ಅವರು ಕ್ರೀಡಾಕ್ಷೇತ್ರದಷ್ಟೇ ದಾನಶೀಲತೆಯಲ್ಲೂ ಮಾದರಿಯಾಗಿದ್ದಾರೆ. ಇತ್ತೀಚೆಗೆ ಅವರು ಬಾಗಲಕೋಟೆ ಜಿಲ್ಲೆಯ ಬಡ ವಿದ್ಯಾರ್ಥಿನಿಯೊಬ್ಬಳಿಗೆ ಆರ್ಥಿಕ ನೆರವು ನೀಡಿ ಜನಮನ ಗೆದ್ದಿದ್ದಾರೆ.
ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರಮಠ ದ್ವಿತೀಯ ಪಿಯುಸಿಯಲ್ಲಿ 85% ಅಂಕ ಗಳಿಸಿದ್ದರೂ, ಮನೆ ಪರಿಸ್ಥಿತಿಯಿಂದ BCA ಕೋರ್ಸ್ಗೆ ಸೇರುವ ಕನಸು ತೊಡೆತಗೊಂಡಿತ್ತು. ತಂದೆ ಚಿಕ್ಕ ಟೀ ಅಂಗಡಿ ನಡೆಸುವವರಾಗಿದ್ದು ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ.
ಇದನ್ನು ಗುತ್ತಿಗೆದಾರ ಅನಿಲ್ ಹುಣಸಿಕಟ್ಟಿ ಅವರು ಗಮನಿಸಿ, ತಮ್ಮ ಸಂಪರ್ಕಗಳಿಂದ ರಿಷಭ್ ಪಂತ್ ಅವರ ಗಮನಕ್ಕೆ ತಂದರು. ಇದನ್ನು ಕೇಳಿದ ಪಂತ್, ಜುಲೈ 17ರಂದು ₹40,000 ನೇರವಾಗಿ BLDE ಕಾಲೇಜಿನ ಖಾತೆಗೆ ವರ್ಗಾಯಿಸಿ, ಜ್ಯೋತಿಯ ಮೊದಲ ಸೆಮಿಸ್ಟರ್ ಶುಲ್ಕವನ್ನು ಭರಿಸಿದರು.
ಜ್ಯೋತಿ ಎಮೋಶನಲ್ ಆಗಿ, “ರಿಷಭ್ ಪಂತ್ ಸಹಾಯದಿಂದ ನನ್ನ ಕನಸು ಸಾಧ್ಯವಾಯಿತು. ಅವರಿಗೆ ದೇವರು ಆಯುಷ್ಯ ಕೊಡಲಿ,” ಎಂದಿದ್ದಾರೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ