ದೇಶ
ದೇಶದಲ್ಲಿ ಇಂದಿನಿಂದ ಹೊಸ ಅಪರಾಧ ಕಾನೂನುಗಳು ಜಾರಿಗೆ; ಏನೆಲ್ಲ ಬದಲಾವಣೆ ಗೊತ್ತಾ? – NEW CRIMINAL LAWS
ನವದೆಹಲಿ: ದೇಶಾದ್ಯಂತ ಮೂರು ಹೊಸ ಅಪರಾಧ ಕಾನೂನುಗಳು ಸೋಮವಾರ (ಜುಲೈ 1)ದಿಂದ ಜಾರಿಗೆ ಬರಲಿವೆ. ಈ ಕಾನೂನುಗಳು ದೇಶದ ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ತರಲಿದ್ದು, ವಸಾಹತುಶಾಹಿ ಯುಗದ ಕಾನೂನುಗಳಿಗೆ ಇತಿಶ್ರೀ ಹಾಡಲಿವೆ.
ಬ್ರಿಟಿಷರ ಕಾಲದ ಭಾರತೀಯ ದಂಡ ಸಂಹಿತೆ, ಅಪರಾಧ ಪ್ರಕ್ರಿಯ ಸಂಹಿತೆ ಮತ್ತು ಭಾರತೀಯ ಸಾಕ್ಷಿ ಕಾಯ್ದೆಗಳ ಬದಲಿಗೆ ಕ್ರಮವಾಗಿ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷಿ ಅಧಿನಿಯಂಗಳನ್ನು ಕೇಂದ್ರ ಸರ್ಕಾರ ರೂಪಿಸಿದೆ. ಈ ಹೊಸ ಕಾನೂನುಗಳು ಆಧುನಿಕ ನ್ಯಾಯ ವ್ಯವಸ್ಥೆಗೆ ಮುನ್ನುಡಿ ಬರೆಯಲಿವೆ.
ಶೂನ್ಯ ಎಫ್ಐಆರ್, ಪೊಲೀಸ್ ದೂರುಗಳ ಆನ್ಲೈನ್ ನೋಂದಣಿ, ಎಸ್ಎಂಎಸ್ನಂತಹ ಎಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕ ಸಮನ್ಸ್ ಮತ್ತು ಎಲ್ಲ ಘೋರ ಅಪರಾಧಗಳಿಗೆ ಅಪರಾಧದ ದೃಶ್ಯಗಳ ಕಡ್ಡಾಯ ವಿಡಿಯೋಗ್ರಫಿಯಂತಹ ನಿಬಂಧನೆಗಳನ್ನು ಒಳಗೊಂಡಿವೆ. ಪ್ರಸ್ತುತ ಕೆಲವು ಸಾಮಾಜಿಕ ವಾಸ್ತವತೆಗಳು ಮತ್ತು ಅಪರಾಧಗಳನ್ನು ಪರಿಹರಿಸಲು ಈ ಕಾನೂನುಗಳು ಪ್ರಯತ್ನಿಸಲಿವೆ. ಸಂವಿಧಾನದಲ್ಲಿ ಪ್ರತಿಪಾದಿಸಿರುವ ಆದರ್ಶಗಳನ್ನು ಗಮನದಲ್ಲಿಟ್ಟುಕೊಂಡು ಇವುಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಕಾರ್ಯವಿಧಾನವನ್ನು ಒದಗಿಸಲಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
45 ದಿನಗಳಲ್ಲಿ ತೀರ್ಪು: ಹೊಸ ಕಾನೂನುಗಳ ಪ್ರಕಾರ, ಕ್ರಿಮಿನಲ್ ಪ್ರಕರಣಗಳಲ್ಲಿ ವಿಚಾರಣೆ ಪೂರ್ಣಗೊಂಡ 45 ದಿನಗಳಲ್ಲಿ ತೀರ್ಪು ಬರಬೇಕು. ಮೊದಲ ವಿಚಾರಣೆಯ 60 ದಿನಗಳಲ್ಲಿ ಆರೋಪಪಟ್ಟಿ ರಚಿಸಬೇಕು. ಅತ್ಯಾಚಾರ ಸಂತ್ರಸ್ತರ ಹೇಳಿಕೆಯನ್ನು ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಆಕೆಯ ಪೋಷಕರು ಅಥವಾ ಸಂಬಂಧಿಕರ ಸಮ್ಮುಖದಲ್ಲಿ ದಾಖಲಿಸಿಕೊಳ್ಳಬೇಕು ಮತ್ತು ವೈದ್ಯಕೀಯ ವರದಿಗಳು ಏಳು ದಿನಗಳಲ್ಲಿ ಬರಬೇಕು.
ದೇಶದ್ರೋಹವಲ್ಲ, ದೇಶವಿರೋಧಿ: ಸಂಘಟಿತ ಅಪರಾಧಗಳು ಮತ್ತು ಭಯೋತ್ಪಾದನೆಯ ಕೃತ್ಯಗಳನ್ನು ವ್ಯಾಖ್ಯಾನಿಸಲಾಗಿದೆ. ದೇಶದ್ರೋಹವನ್ನು ದೇಶವಿರೋಧಿ ಎಂದು ಬದಲಾಯಿಸಲಾಗಿದೆ. ಎಲ್ಲ ತಪಾಸಣೆ ಮತ್ತು ಜಪ್ತಿ ಕಾರ್ಯಗಳನ್ನು ವಿಡಿಯೋ ರೆಕಾರ್ಡಿಂಗ್ಅನ್ನು ಕಡ್ಡಾಯಗೊಳಿಸಲಾಗಿದೆ. ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧಗಳ ಕುರಿತು ಹೊಸ ಅಧ್ಯಾಯ ಸೇರಿಸಲಾಗಿದೆ. ಯಾವುದೇ ಮಗು ಖರೀದಿ ಮತ್ತು ಮಾರಾಟ ಮಾಡುವುದು ಘೋರ ಅಪರಾಧವೆಂದು ಪರಿಗಣಿಸಲಾಗಿದೆ ಮತ್ತು ಅಪ್ರಾಪ್ತ ವಯಸ್ಕರ ಸಾಮೂಹಿಕ ಅತ್ಯಾಚಾರಕ್ಕೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆಗೆ ಅವಕಾಶವಿದೆ.
ಈಗ ಕೇವಲ 358 ಸೆಕ್ಷನ್ಗಳು: ಭಾರತೀಯ ದಂಡ ಸಂಹಿತೆಯಲ್ಲಿನ 511 ಸೆಕ್ಷನ್ಗಳ ಬದಲಿಗೆ ಕೇವಲ 358 ಸೆಕ್ಷನ್ಗಳು ಒಳಗೊಂಡಿವೆ. ಉದಾಹರಣೆಗೆ, ಸೆಕ್ಷನ್ 6ರಿಂದ 52ರ ವರೆಗಿನ ವ್ಯಾಖ್ಯಾನಗಳನ್ನು ಒಂದು ಸೆಕ್ಷನ್ ಅಡಿಯಲ್ಲಿ ತರಲಾಗಿದೆ. 18 ಸೆಕ್ಷನ್ಗಳನ್ನು ಈಗಾಗಲೇ ರದ್ದುಗೊಳಿಸಲಾಗಿದೆ. ವಿವಾಹದ ಸುಳ್ಳು ಭರವಸೆಯ ಪ್ರಕರಣಗಳು, ಅಪ್ರಾಪ್ತ ವಯಸ್ಕರ ಸಾಮೂಹಿಕ ಅತ್ಯಾಚಾರ, ಗುಂಪು ಹತ್ಯೆ, ಸರಗಳ್ಳತನ ಇತ್ಯಾದಿಗಳು ವರದಿಯಾಗುತ್ತವೆ. ಆದರೆ, ಪ್ರಸ್ತುತ ಭಾರತೀಯ ದಂಡ ಸಂಹಿತೆ ಅಂತಹ ಘಟನೆಗಳನ್ನು ಎದುರಿಸಲು ನಿರ್ದಿಷ್ಟ ನಿಬಂಧನೆಗಳನ್ನು ಹೊಂದಿಲ್ಲ. ಈಗ ಇವುಗಳನ್ನು ಭಾರತೀಯ ನ್ಯಾಯ ಸಂಹಿತೆಯಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಠಾಣೆಗೆ ಹೋಗುವ ಅಗತ್ಯವಿಲ್ಲ: ಹೊಸ ಕಾನೂನುಗಳ ಅಡಿಯಲ್ಲಿ ಒಬ್ಬ ವ್ಯಕ್ತಿಯು ಈಗ ದೈಹಿಕವಾಗಿ ಪೊಲೀಸ್ ಠಾಣೆಗೆ ಭೇಟಿ ನೀಡುವ ಅಗತ್ಯವಿಲ್ಲದೇ, ಎಲೆಕ್ಟ್ರಾನಿಕ್ ಸಂವಹನದ ಮೂಲಕ ಘಟನೆಗಳನ್ನು ವರದಿ ಮಾಡಬಹುದು. ಇದು ಸುಲಭವಾಗಿ ಮತ್ತು ತ್ವರಿತವಾಗಿ ವರದಿ ಮಾಡಲು ಅನುಮತಿಸುತ್ತದೆ. ಪೊಲೀಸರಿಂದ ತ್ವರಿತ ಕ್ರಮವನ್ನು ಸುಗಮಗೊಳಿಸುತ್ತದೆ. ಝೀರೋ ಎಫ್ಐಆರ್ನ ಪರಿಚಯದೊಂದಿಗೆ ಒಬ್ಬ ವ್ಯಕ್ತಿಯು ಅಧಿಕಾರ ವ್ಯಾಪ್ತಿಯನ್ನು ಲೆಕ್ಕಿಸದೆ ಯಾವುದೇ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸಬಹುದು.
ಕಾನೂನಿನಲ್ಲಿನ ಹೊಸ ಸೇರ್ಪಡೆ: ಇದು ಕಾನೂನು ಪ್ರಕ್ರಿಯೆಗಳನ್ನು ಪ್ರಾರಂಭಿಸುವಲ್ಲಿ ವಿಳಂಬವನ್ನು ನಿವಾರಿಸುತ್ತದೆ ಮತ್ತು ಅಪರಾಧದ ತಕ್ಷಣದ ವರದಿಯನ್ನು ಖಚಿತಪಡಿಸುತ್ತದೆ. ಕಾನೂನಿನಲ್ಲಿನ ಆಸಕ್ತಿದಾಯಕ ಸೇರ್ಪಡೆಯೆಂದರೆ, ಬಂಧನದ ಸಂದರ್ಭದಲ್ಲಿ ವ್ಯಕ್ತಿಯು ತನ್ನ ಆಯ್ಕೆಯ ವ್ಯಕ್ತಿಗೆ ತನ್ನ ಪರಿಸ್ಥಿತಿಯ ಬಗ್ಗೆ ತಿಳಿಸುವ ಹಕ್ಕನ್ನು ಹೊಂದಿರುತ್ತಾನೆ. ಇದು ಬಂಧಿತ ವ್ಯಕ್ತಿಗೆ ತಕ್ಷಣದ ಬೆಂಬಲ ಮತ್ತು ಸಹಾಯವನ್ನು ಖಚಿತಪಡಿಸುತ್ತದೆ.
ಠಾಣೆಗಳಲ್ಲಿ ಬಂಧನದ ವಿವರ: ಇದಲ್ಲದೆ, ಬಂಧನದ ವಿವರಗಳನ್ನು ಈಗ ಪೊಲೀಸ್ ಠಾಣೆಗಳು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಪ್ರಮುಖವಾಗಿ ಪ್ರದರ್ಶಿಸಲಾಗುತ್ತದೆ. ಬಂಧಿತ ವ್ಯಕ್ತಿಯ ಕುಟುಂಬಗಳು ಮತ್ತು ಸ್ನೇಹಿತರಿಗೆ ಪ್ರಮುಖ ಮಾಹಿತಿಯನ್ನು ಸುಲಭವಾಗಿ ಪಡೆಯಲು ಅನುವು ಮಾಡಿಕೊಡುತ್ತದೆ. ಪ್ರಕರಣಗಳು ಮತ್ತು ತನಿಖೆಗಳನ್ನು ಬಲಪಡಿಸಲು ಫೋರೆನ್ಸಿಕ್ ತಜ್ಞರು ಗಂಭೀರ ಅಪರಾಧಗಳ ಸ್ಥಳಗಳಿಗೆ ಭೇಟಿ ನೀಡುವುದು ಮತ್ತು ಸಾಕ್ಷ್ಯಗಳನ್ನು ಸಂಗ್ರಹಿಸುವುದು ಕಡ್ಡಾಯವಾಗಿದೆ.
ಸಂತ್ರಸ್ತರಿಗೆ ಉಚಿತ ಚಿಕಿತ್ಸೆ: ಹೊಸ ಕಾನೂನುಗಳ ಅಡಿಯಲ್ಲಿ ಮಹಿಳೆಯರ ವಿರುದ್ಧದ ಅಪರಾಧದ ಸಂತ್ರಸ್ತರು ತಮ್ಮ ಪ್ರಕರಣದ ಪ್ರಗತಿಯನ್ನು 90 ದಿನಗಳಲ್ಲಿ ನಿಯಮಿತವಾಗಿ ಮಾಹಿತಿ ಪಡೆಯಲು ಅರ್ಹರಾಗಿರುತ್ತಾರೆ. ಈ ನಿಬಂಧನೆಯು ಸಂತ್ರಸ್ತರಿಗೆ ಮಾಹಿತಿ ನೀಡುತ್ತದೆ ಮತ್ತು ಕಾನೂನು ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುತ್ತದೆ. ಪಾರದರ್ಶಕತೆ ಮತ್ತು ನಂಬಿಕೆಯನ್ನು ಹೆಚ್ಚಿಸುತ್ತದೆ. ಹೊಸ ಕಾನೂನುಗಳು ಎಲ್ಲ ಆಸ್ಪತ್ರೆಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧಗಳ ಸಂತ್ರಸ್ತರಿಗೆ ಉಚಿತ ಪ್ರಥಮ ಚಿಕಿತ್ಸೆ ಅಥವಾ ವೈದ್ಯಕೀಯ ಚಿಕಿತ್ಸೆಯನ್ನು ಖಾತರಿಪಡಿಸುತ್ತದೆ.
ಎಸ್ಎಂಎಸ್ ಮೂಲಕ ಸಮನ್ಸ್: ಎಸ್ಎಂಎಸ್ನಂತಹ ಎಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕ ಸಮನ್ಸ್ ಜಾರಿ ಮಾಡಬಹುದು. ಇದರಿಂದ ಕಾನೂನು ಪ್ರಕ್ರಿಯೆಗಳನ್ನು ತ್ವರಿತಗೊಳಿಸಬಹುದು, ದಾಖಲೆಗಳನ್ನು ಕಡಿಮೆ ಮಾಡಬಹುದು ಮತ್ತು ಒಳಗೊಂಡಿರುವ ಎಲ್ಲ ಪಕ್ಷಗಳ ನಡುವೆ ಸಮರ್ಥ ಸಂವಹನ ಖಚಿತಪಡಿಸಿಕೊಳ್ಳಬಹುದು. ಜೊತೆಗೆ ಆರೋಪಿ ಮತ್ತು ಸಂತ್ರಸ್ತರು ಇಬ್ಬರೂ ಎಫ್ಐಆರ್, ಪೊಲೀಸ್ ವರದಿ, ಚಾರ್ಜ್ ಶೀಟ್, ಹೇಳಿಕೆಗಳು, ತಪ್ಪೊಪ್ಪಿಗೆಗಳು ಮತ್ತು ಇತರ ದಾಖಲೆಗಳ ಪ್ರತಿಗಳನ್ನು 14 ದಿನಗಳಲ್ಲಿ ಸ್ವೀಕರಿಸಲು ಅರ್ಹರಾಗಿರುತ್ತಾರೆ.
ದೇಶ
K. Govindraj ಸೇರಿ ಗಣ್ಯರಿಗೆ ಗೌರವ ಡಾಕ್ಟರೇಟ್ – ಬಿಸಿಯು ಘಟಿಕೋತ್ಸವ ಸಂಭ್ರಮ
ಬೆಂಗಳೂರು: Bengaluru City University (ಬಿಸಿಯು) 5ನೇ ಘಟಿಕೋತ್ಸವ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮಕ್ಕೆ ಕುಲಾಧಿಪತಿಗಳಾದ Thawar Chand Gehlot ಚಾಲನೆ ನೀಡಿದರು.
ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಈ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ Dr. Binay Kumar Das, Defence Research and Development Organisation (ಡಿಆರ್ಡಿಒ) ಮಹಾ ನಿರ್ದೇಶಕರು (ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ಸಿಸ್ಟಮ್ಸ್) ಭಾಗವಹಿಸಿದ್ದರು.
ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 6 ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಸಂಗೀತ ನಿರ್ದೇಶಕ Arjun Janya, ಕ್ರಿಕೆಟರ್ Venkatesh Prasad, ಶಿಕ್ಷಣ ತಜ್ಞ T. K. Narayanappa, ಎಂಎಲ್ಸಿ K. Govindaraj, ಶಿಕ್ಷಣ ಕ್ಷೇತ್ರದ Mohan Alva ಹಾಗೂ ಕೈಗಾರಿಕೋದ್ಯಮಿ Bava Mohammed Farooq ಅವರಿಗೆ ರಾಜ್ಯಪಾಲರು ಗೌರವಿಸಿದರು.
ಉಪ ಚುನಾವಣೆ ಪ್ರಚಾರದ ಹಿನ್ನೆಲೆ, ಉನ್ನತ ಶಿಕ್ಷಣ ಸಚಿವ Dr. C. N. Ashwath Narayan ಗೈರಾಗಿದ್ದರು.
ಘಟಿಕೋತ್ಸವದಲ್ಲಿ 73 ಪ್ರಥಮ ರ್ಯಾಂಕ್ ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಪ್ರಮಾಣಪತ್ರ ಮತ್ತು ನಗದು ಬಹುಮಾನ ವಿತರಿಸಲಾಯಿತು. ಒಟ್ಟು 37,370 ವಿದ್ಯಾರ್ಥಿಗಳಿಗೆ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರದಾನವಾಗಿದ್ದು, 23 ವಿದ್ಯಾರ್ಥಿಗಳಿಗೆ ಪಿಎಚ್ಡಿ ಪದವಿ ನೀಡಲಾಯಿತು.
ವಿಶೇಷವಾಗಿ, ಸ್ನೇಹಾ ಟಿ (ಎಂಎಸ್ಸಿ ರಸಾಯನಶಾಸ್ತ್ರ) 4 ಚಿನ್ನದ ಪದಕಗಳನ್ನು ಪಡೆದು ಸಾಧನೆ ಮಾಡಿದ್ದು, ಅಭಿಷೇಕ್ ಶ್ರೀರಾಮ್ (ಬಿಕಾಂ) 3 ಚಿನ್ನದ ಪದಕ, ದಿವ್ಯಶ್ರೀ ಎಸ್ (ಬಿಬಿಎ) 3 ಚಿನ್ನದ ಪದಕ ಪಡೆದು ಗಮನಸೆಳೆದಿದ್ದಾರೆ.
ಗೌರವ ಡಾಕ್ಟರೇಟ್ ಪಡೆದ ಬಳಿಕ Arjun Janya ಅವರು ಮಾತನಾಡಿ, ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಕೃತಜ್ಞತೆ ಸಲ್ಲಿಸಿದರು.
ಚುನಾವಣೆ
TN 2026 ಟೀಸರ್ಗೆ ರಾಜಕೀಯ ಕಿಚ್ಚು! ವಿಜಯ್ ಟಾರ್ಗೆಟ್ ಆರೋಪ – ತಮಿಳುನಾಡಿನಲ್ಲಿ ಬಿಗುವಿನ ವಾತಾವರಣ
ಚೆನ್ನೈ: ಮುಂದಿನ ವಾರ ಬಿಡುಗಡೆಯಾಗಲಿರುವ ತಮಿಳು ಸಿನಿಮಾ TN 2026 – ತಂಗೈ ನಚ್ಚಥಿರಂ ಟೀಸರ್ ಏಪ್ರಿಲ್ 2ರಂದು ಬಿಡುಗಡೆಯಾದ ಬಳಿಕ ಭಾರೀ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಟೀಸರ್ನಲ್ಲಿ ನಟ Nataraj (Natti) ಅಭಿನಯಿಸಿರುವ “ಗೋಲ್ಡನ್ ಸ್ಟಾರ್ ಗುಲ್ಕಂದ್ ಕುಮಾರ್” ಎಂಬ ಪಾತ್ರ ರಾಜಕೀಯಕ್ಕೆ ಪ್ರವೇಶಿಸುವುದನ್ನು ತೋರಿಸಲಾಗಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗಿದೆ.
ಟೀಸರ್ ವೈರಲ್ ಆದ ತಕ್ಷಣ, Tamilaga Vettri Kazhagam (ಟಿವಿಕೆ) ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ನಟ Vijay ಅವರನ್ನು ಗುರಿಯಾಗಿಸಿಕೊಂಡು ಟೀಸರ್ ರೂಪಿಸಲಾಗಿದೆ ಎಂಬುದು ಅವರ ಆರೋಪವಾಗಿದೆ.
ಟೀಸರ್ನಲ್ಲಿ ಗುಲ್ಕಂದ್ ಕುಮಾರ್ ಪಾತ್ರವು ಬಿಳಿ ಶರ್ಟ್ ಮತ್ತು ಖಾಕಿ ಪ್ಯಾಂಟ್ ಧರಿಸಿ, ವಿಜಯ್ ಅವರಂತೆಯೇ ‘ಸಾಲ್ಟ್ ಅಂಡ್ ಪೆಪ್ಪರ್’ ಲುಕ್ನಲ್ಲಿ ಕಾಣಿಸಿಕೊಂಡಿದ್ದು, ಜೊತೆಗೆ ಅವರ ನಡಿಗೆ ಮತ್ತು ಜನರತ್ತ ಕೈ ಬೀಸುವ ಶೈಲಿಯನ್ನು ಅನುಕರಿಸಿರುವುದು ವಿವಾದಕ್ಕೆ ಪ್ರಮುಖ ಕಾರಣವಾಗಿದೆ. ಅಲ್ಲದೆ, ನಟ Redin Kingsley ಅವರ ಪಾತ್ರವೊಂದು ವೇದಿಕೆಯಲ್ಲಿ “ಹೇ ಮೂವಿ-ಬಾಯ್…” ಎಂದು ಗೇಲಿ ಮಾಡುವ ಸಂಭಾಷಣೆ ಕೂಡ ಟೀಕೆಗೆ ಗುರಿಯಾಗಿದೆ.
ಟೀಸರ್ ಕೊನೆಯಲ್ಲಿ ಕೇಳಿಬರುವ “ಓಂ ಶಕ್ತಿ ಪರಾಶಕ್ತಿ” ಘೋಷಣೆ ಕೂಡ ವಿಜಯ್ ಇತ್ತೀಚೆಗೆ ರಾಜಕೀಯ ವೇದಿಕೆಯಲ್ಲಿ ಬಳಸಿದ ನುಡಿಗಟ್ಟನ್ನು ಹೋಲುತ್ತದೆ ಎನ್ನಲಾಗುತ್ತಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಟಿವಿಕೆ ನಾಯಕ Aadhav Arjun, “ಇದು ವಿಜಯ್ ವರ್ಚಸ್ಸಿಗೆ ಧಕ್ಕೆ ತರಲು Dravida Munnetra Kazhagam (ಡಿಎಂಕೆ) ಮತ್ತು ಬಿಜೆಪಿ ಜಂಟಿಯಾಗಿ ನಡೆಸಿದ ಪಿತೂರಿ” ಎಂದು ಆರೋಪಿಸಿದ್ದಾರೆ. ಜನರು ಇಂತಹ ಚಿತ್ರಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದೂ ಅವರು ಕಿಡಿಕಾರಿದ್ದಾರೆ.
Umapathy Ramaiah ನಿರ್ದೇಶನದ ಈ ಚಿತ್ರದಲ್ಲಿ Thambi Ramaiah, M. S. Bhaskar, Ilavarasu, Yashika Aannand ಸೇರಿದಂತೆ ಹಲವು ನಟರು ಅಭಿನಯಿಸಿದ್ದಾರೆ. ಏಪ್ರಿಲ್ 10ರಂದು ಬಿಡುಗಡೆಯಾಗಲಿರುವ ಈ ಚಿತ್ರ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡುತ್ತದೆಯೇ ಎಂಬ ಕುತೂಹಲ ಹೆಚ್ಚಾಗಿದೆ.
ದೇಶ
ಹಳೆಯ ವಾಹನಗಳಿಗೆ HSRP ಕಡ್ಡಾಯವೇ? ಸಾರಿಗೆ ಇಲಾಖೆಯ ಸ್ಪಷ್ಟನೆ ಏನು ಗೊತ್ತಾ?
ಬೆಂಗಳೂರು: ಹಳೆಯ ವಾಹನಗಳಿಗೆ ಹೈ ಸಿಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ (HSRP) ಅಳವಡಿಕೆ ಕಡ್ಡಾಯವಲ್ಲ ಎಂಬ ಸುದ್ದಿಗಳು ಇತ್ತೀಚೆಗೆ ಕೆಲವು ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದರೂ, ಇದಕ್ಕೆ ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದೆ. ಇಂತಹ ಸುದ್ದಿಗಳು ಸುಳ್ಳು ಎಂದು ಹೇಳಿ ಸಾರ್ವಜನಿಕರು ಯಾವುದೇ ವದಂತಿಗಳನ್ನು ನಂಬಬಾರದು ಎಂದು ಮನವಿ ಮಾಡಿದೆ.
ಕೇಂದ್ರ ಮೋಟಾರು ವಾಹನಗಳ ನಿಯಮಗಳು 1989ರ ನಿಯಮ 50ರಡಿ, ಕೇಂದ್ರ ಸರ್ಕಾರವು 2018 ಡಿಸೆಂಬರ್ 4ರಂದು ಅಧಿಸೂಚನೆ ಹೊರಡಿಸಿದ್ದು, 2019 ಏಪ್ರಿಲ್ 1ಕ್ಕಿಂತ ಮುಂಚಿತವಾಗಿ ನೋಂದಾಯಿತವಾಗಿರುವ ಎಲ್ಲಾ ವಾಹನಗಳಿಗೆ HSRP ಅಳವಡಿಕೆ ಕಡ್ಡಾಯಗೊಳಿಸಲಾಗಿದೆ. ಈ ನಿಯಮವನ್ನು ಅನುಸರಿಸಿ, ಕರ್ನಾಟಕ ಸರ್ಕಾರವು 2023 ಆಗಸ್ಟ್ 17ರಂದು ಅಧಿಸೂಚನೆ ಹೊರಡಿಸಿ ರಾಜ್ಯದಲ್ಲಿಯೂ ಇದೇ ನಿಯಮವನ್ನು ಜಾರಿಗೆ ತಂದಿದೆ.
ಇದಕ್ಕೂ ನಡುವೆ, HSRP ಅಳವಡಿಕೆ ಸಂಬಂಧ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಸರ್ಕಾರವು ಯಾವುದೇ ತರಾತುರಿ ಕ್ರಮ ಕೈಗೊಳ್ಳಬಾರದು ಎಂದು ಸೂಚಿಸಿದೆ. ಆದರೆ, ಈ ಆದೇಶವು HSRP ಕಡ್ಡಾಯ ಆದೇಶವನ್ನು ರದ್ದುಪಡಿಸುವುದಿಲ್ಲ ಎಂಬುದು ಮುಖ್ಯ.
ಸಾರಿಗೆ ಇಲಾಖೆಯ ಪ್ರಕಾರ, ಹೈಕೋರ್ಟ್ ಆದೇಶದಿಂದ ಹೊಸ ಕ್ರಮಗಳನ್ನು ಕೈಗೊಳ್ಳಲು ಅಡ್ಡಿಯಿದ್ದರೂ, HSRP ಅಳವಡಿಕೆ ಕುರಿತ ಅಧಿಸೂಚನೆ ಇನ್ನೂ ಜಾರಿಯಲ್ಲಿಯೇ ಇದೆ. ಆದ್ದರಿಂದ, ಸಾರ್ವಜನಿಕರು ತಮ್ಮ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವುದು ಕಡ್ಡಾಯವಾಗಿದೆ.
ವದಂತಿಗಳಿಂದ ಗೊಂದಲಕ್ಕೀಡಾಗಬಾರದು ಎಂದು ಸಾರಿಗೆ ಇಲಾಖೆ ಮತ್ತೊಮ್ಮೆ ಸ್ಪಷ್ಟಪಡಿಸಿದೆ.
