Connect with us

ಆರೋಗ್ಯ

ಮನೆಮದ್ದು- ಬೆಳ್ಳುಳ್ಳಿ

ಮನೆಮದ್ದು- ಬೆಳ್ಳುಳ್ಳಿ
ಮನೆಮದ್ದು- ಬೆಳ್ಳುಳ್ಳಿ

ಬೆಳ್ಳುಳ್ಳಿಯಲ್ಲಿ ವಿಟಮಿನ್ ಬಿ೬ ಮತ್ತು ವಿಟಮಿನ್ ಸಿ ಅಂಶ ಇದೆ. ಬೆಳ್ಳುಳ್ಳಿ, ಹೃದಯ ರಕ್ತನಾಳದ ಆರೋಗ್ಯಕ್ಕೆ ಒಳ್ಳೆಯದು.
ಬೆಳ್ಳುಳ್ಳಿಯನ್ನು ಹಸಿಯಾಗಿ ತಿನ್ನುವುದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಅಲ್ಲದೆ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ.
ಬೆಳ್ಳುಳ್ಳಿ , ಸಾಮಾನ್ಯವಾಗಿ ಎಲ್ಲರ ಅಡುಗೆ ಮನೆಯಲ್ಲೂ ಇರುತ್ತದೆ. ಆಹಾರಕ್ಕೆ ಪರಿಮಳ ನೀಡಲು, ವಿಶಿಷ್ಟ ರುಚಿ ನೀಡಲು ಇದನ್ನು ಬಳಸಲಾಗುತ್ತದೆ.
ಜತೆಗೆ ಆರೋಗ್ಯದಿಂದ ಅನೇಕ ತೊಂದರೆಗಳಿಗೆ ಚಿಕಿತ್ಸೆ ನೀಡಲು ಔಷಧವನ್ನಾಗಿಯೂ ಬಳಸಲಾಗುತ್ತದೆ.
ಬೆಳ್ಳುಳ್ಳಿ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಹಲವು ವಿಧದ ಔಷಧೀಯ ಗುಣಗಳನ್ನು ಹೊಂದಿದೆ.
ಸಾಮಾನ್ಯವಾಗಿ ಮಾಂತ್ರಿಕ ಮೂಲಿಕೆ ಎಂದು ಕರೆಯಲಾಗುತ್ತದೆ, ಆಹಾರದ ರುಚಿ ಹೆಚ್ಚಿಸಲು ಇದನ್ನು ಭಾರತೀಯ ಪಾಕಪದ್ಧತಿಯಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ.
ಬೆಳ್ಳುಳ್ಳಿ ನಂಜುನಿರೋಧಕ ಗುಣಗಳನ್ನು ಹೊಂದಿದೆ ಮತ್ತು ಸಾಂಪ್ರದಾಯಿಕವಾಗಿ ಯುದ್ಧದ ಸಮಯದಲ್ಲಿ ಗಾಯಗಳನ್ನು ಧರಿಸಲು ಬಳಸಲಾಗುತ್ತಿತ್ತು. ಬೆಳ್ಳುಳ್ಳಿಯು ಅಯೋಡಿನ್ ,
ಕ್ಲೋರಿನ್, ಸಲ್ಫರ್ ಮತ್ತು ಅಲಿಸಿನ್‌ನಂತಹ ಜಾಡಿನ ಖನಿಜಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಮೃದ್ಧವಾಗಿದೆ
ಸಂಶೋಧಕರ ಪ್ರಕಾರ, ಖನಿಜಗಳು, ಜೀವಸತ್ವಗಳು ಮತ್ತು ರೋಗನಿರೋಧಕ ಶಕ್ತಿಯನ್ನು ಬಲಪಡಿಸುವ ಅಂಶಗಳು ಬೆಳ್ಳುಳ್ಳಿಯಲ್ಲಿ ಹೇರಳವಾಗಿ ಕಂಡುಬರುತ್ತವೆ.
ಅನೇಕ ರೋಗಗಳನ್ನು ಗುಣಪಡಿಸಲು ಬೆಳ್ಳುಳ್ಳಿಯನ್ನು ಶತಮಾನಗಳಿಂದ ಬಳಸಲಾಗುತ್ತಿದೆ. -ಮೂಲ್ಯವ್ಯಾಧಿ,ಮಲಬದ್ಧತೆ,ಕಿವಿನೋವು,ರಕ್ತದೊತ್ತಡ ಇತ್ಯಾದಿ ಅನೇಕ ಕಾಯಿಲೆಗಳಿಗೆ ಇದು ರಾಮಬಾಣ. ಮೊಡವೆ ಮತ್ತು ಗಾಯದ ಕಲೆ ನಿವಾರಣೆಗೆ ಬೆಳ್ಳುಳ್ಳಿ ಒಳ್ಳೆಯದು , ಬೆಳ್ಳುಳ್ಳಿ ನೈರ‍್ಗಿಕ ಇಮ್ಯುನಿಟಿ ಬೂಸ್ಟರ್ ಆಗಿ ಕರ‍್ಯನರ‍್ವಹಿಸುತ್ತದೆ, ಹಸಿವನ್ನು ಹೆಚ್ಚಿಸುವ ಕೆಲಸವನ್ನು ಇದು ಮಾಡುತ್ತದೆ.
ಬೆಳ್ಳೆಗ್ಗೆ ಬೆಳ್ಳುಳ್ಳಿ ಸೇವಿಸಿದ ಒಂದು ಗಂಟೆಯಲ್ಲಿ ಜರ‍್ಣವಾಗಿ ಅದು ಆರೋಗ್ಯ ವೃದ್ಧಿ ಮಾಡುತ್ತದೆ.ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಶರೀರದಲ್ಲಿ ವಿಷ ಪದರ‍್ಥವನ್ನು ಮಲ ಹಾಗೂ ಮೂತ್ರದ ಮೂಲಕ ಹೊರ ಹಾಕುತ್ತದೆ.ದೇಹದ ಆಲ್ಯಸ ಕಡಿಮೆ ಮಾಡಿ ಶರೀರಕ್ಕೊಂದು ವಿಶೇಷ ಶಕ್ತಿ ಕೊಡುತ್ತದೆ. ಹುರಿದ ಬೆಳ್ಳುಳ್ಳಿಯನ್ನು ಸೇವನೆ ಮಾಡುವುದರಿಂದ ಕ್ಯಾನ್ಸರ್ ಕೋಶಗಳು ಶಕ್ತಿ ಕಳೆದುಕೊಳ್ಳುತ್ತವೆ.ಬೆಳ್ಳುಳ್ಳಿ ಲೈಂಗಿಕ ಚಾಲನೆಯನ್ನು ಹೆಚ್ಚಿಸುತ್ತದೆ, ಪ್ರತಿದಿನ ಹುರಿದ ಬೆಳ್ಳುಳ್ಳಿ ಸೇವನೆ ಮಾಡುವುದರಿಂದ ಚಯಾಪಚಯ ಕ್ರಿಯೆ ಸುಲಭವಾಗಿ ದೇಹದ ಬೊಜ್ಜು ಕರಗಿಸುವಲ್ಲಿ ಸಹಾಯ ಮಾಡುತ್ತದೆ. ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಅಸ್ತಮಾ,ಕೆಮ್ಮು,ಕಫ ಕಡಿಮೆ ಮಾಡುವಲ್ಲಿ ಸಹಾಯ ಮಾಡುತ್ತದೆ. -ಬೆಳ್ಳುಳ್ಳಿಯನ್ನು ಬಾಯಲ್ಲಿ ಇಟ್ಟು ಕೊಳ್ಳುವುದರಿಂದ ಸಾಂಕ್ರಾಮಿಕ ಜ್ವರ ಮತ್ತು ಉಸಿರಾಟದ ತೊಂದರೆಯಿಂದ ದೂರವಾಗಿರಬಹುದು. ಕಾರಣ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಶಕ್ತಿ ಈ ಪುಟ್ಟ ಬೆಳ್ಳುಳ್ಳಿಗಿದೆ.ಬೆಳ್ಳುಳ್ಳಿ ಸೇವನೆಯಿಂದ ರಕ್ತ ಶುದ್ಧಿಯಾಗುತ್ತದೆ. ಜೊತೆಗೆ ಜಠರಕ್ಕೆ ಯಾವುದೇ ಸೋಂಕು ಮತ್ತು ಗಾಯವಾಗದಂತೆ ನೋಡಿಕೊಳ್ಳುತ್ತದೆ. ಕೂದಲು ಮತ್ತು ರ‍್ಮದ ಆರೋಗ್ಯಕ್ಕೂ ಬೆಳ್ಳುಳ್ಳಿ ಸಹಕಾರಿ ಕ್ಯಾನ್ಸರ್ ಕಾಯಿಲೆಯನ್ನು ದೂರವಿರಿಸುತ್ತದೆ, ಮಾನಸಿಕ ಒತ್ತಡ ನಿಯಂತ್ರಿಸುವ ಗುಣ ಬೆಳ್ಳುಳ್ಳಿಯಲ್ಲಿದೆ. ಬಿಳಿ ರಕ್ತಕಣ ಹೆಚ್ಚಿಸುತ್ತದೆ ಬೆಳ್ಳುಳ್ಳಿ.

ರಕ್ತಹೀನತೆ ಇದ್ದವರು ಬೆಳ್ಳುಳ್ಳಿಯ ಎಸಳನ್ನು ಬಾಯಲ್ಲಿ ಇಟ್ಟುಕೊಳ್ಳಬೇಕು. ಇದು ಲಾಲಾರಸದ ಮೂಲಕ ಆಹಾರದಲ್ಲಿ ಸೇರುತ್ತದೆ. ಹೀಗೆ ಮಾಡುವುದರಿಂದ ರಕ್ತಹೀನತೆ ನಿವಾರಣೆಯಾಗುತ್ತದೆ.ಬೆಳ್ಳುಳ್ಳಿಯನ್ನು ಹಸಿಯಾಗಿ ಸೇವಿಸಿದರೆ ಇನ್ನೂ ಒಳ್ಳೆಯದು. ಇದರಲ್ಲಿರುವ ಆಲಿಸಿನ್‌ ಬೇಯಿಸಿದ ಬೆಳ್ಳುಳ್ಳಿಗಿಂತಲೂ ಹೆಚ್ಚು ಪ್ರಬಲವಾಗಿರುತ್ತದೆ. ಬೆಳ್ಳುಳ್ಳಿಯು ಕ್ಯಾನ್ಸರ್, ಅಧಿಕ ರಕ್ತದೊತ್ತಡ, ಸಕ್ಕರೆ ಕಾಯಿಲೆ ಸೇರಿದಂತೆ ಹಲವಾರು ರೋಗಗಳಿಗೆ ಉತ್ತಮ ಮನೆ ಮದ್ದಾಗಿದೆ, ಋತುಚಕ್ರದ ಸಮಯದಲ್ಲಿ ಹೊಟ್ಟೆನೋವು ಬರುತ್ತಿದ್ದರೆ ಒಂದು ವಾರಕ್ಕೆ ಮುಂಚಿತವಾಗಿ ಎರಡು ಎಸಳುಗಳನ್ನು ಬೆಲ್ಲದೊಂದಿಗೆ ಸೇರಿಸಿ ಪ್ರತಿನಿತ್ಯ ರಾತ್ರಿ ಮಲಗುವಾಗ ಸೇವಿಸಿದರೆ ಹೊಟ್ಟೆನೋವು ಕಡಿಮೆಯಾಗುವುದು.

ಆರೋಗ್ಯ

LIFE STYLE ನಿಂತುಕೊಂಡು ನೀರು ಕುಡಿಯುವುದರಿಂದ ಏನಾಗುತ್ತದೆ?

ಬೆಂಗಳೂರು: ಇಂದಿನ ವೇಗದ ಜೀವನಶೈಲಿಯಲ್ಲಿ ನಾವು ಅನೇಕ ಸಣ್ಣ ಅಭ್ಯಾಸಗಳನ್ನು ಗಮನಿಸದೆ ನಿರ್ಲಕ್ಷಿಸುತ್ತೇವೆ. ಅದರಲ್ಲಿ ಪ್ರಮುಖವಾದುದು ನಿಂತುಕೊಂಡು ನೀರು ಕುಡಿಯುವ ಅಭ್ಯಾಸ. ಕಚೇರಿಯಾಗಲಿ, ಮನೆಯಲ್ಲಾಗಲಿ ಅಥವಾ ಹೊರಗಡೆ ಇದ್ದಾಗಲೂ ಜನರು ನಿಂತೆಯೇ ನೀರು ಕುಡಿಯುತ್ತಾರೆ. ಆದರೆ ಈ ಸಣ್ಣ ಅಭ್ಯಾಸವೇ ಭವಿಷ್ಯದಲ್ಲಿ ದೊಡ್ಡ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎನ್ನುವುದು ಆಯುರ್ವೇದದ ಎಚ್ಚರಿಕೆ.

ನಾವು ಕುಳಿತುಕೊಂಡು ನೀರು ಕುಡಿದಾಗ ದೇಹವು ಅದನ್ನು ನಿಧಾನವಾಗಿ ಹೀರಿಕೊಳ್ಳಲು ಅವಕಾಶ ದೊರಕುತ್ತದೆ. ಇದರಿಂದ ನೀರು ದೇಹದ ಅಂಗಾಂಗಗಳಿಗೆ ಸಮರ್ಪಕವಾಗಿ ವಿತರಣೆ ಆಗುತ್ತದೆ. ಆದರೆ ನಿಂತುಕೊಂಡು ನೀರು ಕುಡಿಯುವಾಗ ನೀರು ವೇಗವಾಗಿ ಹೊಟ್ಟೆಗೆ ಸೇರುತ್ತದೆ. ಇದರಿಂದ ದೇಹವು ಅದನ್ನು ಸರಿಯಾಗಿ ಬಳಸಿಕೊಳ್ಳಲು ಸಾಧ್ಯವಾಗದೆ, ಜೀರ್ಣಕ್ರಿಯೆಯ ಮೇಲೆ ದುಷ್ಪರಿಣಾಮ ಬೀರುತ್ತದೆ.

ಆಯುರ್ವೇದದ ಪ್ರಕಾರ, ನಿಂತು ನೀರು ಕುಡಿಯುವುದರಿಂದ ದೇಹದ ನೀರಿನ ಸಮತೋಲನ ಹಾಳಾಗುತ್ತದೆ. ಪರಿಣಾಮವಾಗಿ ನೀರು ಕೀಲುಗಳು ಮತ್ತು ಮೊಣಕಾಲುಗಳ ಸುತ್ತ ಸಂಗ್ರಹವಾಗುತ್ತದೆ. ಇದರಿಂದ ಚಿಕ್ಕ ವಯಸ್ಸಿನಲ್ಲಿಯೇ ಮೊಣಕಾಲು ನೋವು, ಕೀಲು ಬಿಗಿತ ಮತ್ತು ಸಂಧಿ ಸಮಸ್ಯೆಗಳು ಕಾಣಿಸಿಕೊಳ್ಳಬಹುದು.

ಇನ್ನೂ, ನಿಂತು ನೀರು ಕುಡಿಯುವುದರಿಂದ ನೀರು ಸರಿಯಾಗಿ ಶೋಧನೆ ಆಗದೆ ನೇರವಾಗಿ ಮೂತ್ರಪಿಂಡಗಳಿಗೆ ತಲುಪುತ್ತದೆ. ಇದು ಮೂತ್ರಪಿಂಡಗಳ ಮೇಲೆ ಹೆಚ್ಚುವರಿ ಒತ್ತಡ ಉಂಟುಮಾಡುತ್ತದೆ. ದೀರ್ಘಕಾಲ ಈ ಅಭ್ಯಾಸ ಮುಂದುವರಿದರೆ ಕಿಡ್ನಿ ಸಮಸ್ಯೆಗಳಿಗೂ ಕಾರಣವಾಗಬಹುದು.

ಜೀರ್ಣಕ್ರಿಯೆ ಹದಗೆಡುವುದರಿಂದ ಗ್ಯಾಸ್, ಆಮ್ಲೀಯತೆ, ಎದೆಯುರಿ, ಮಲಬದ್ಧತೆ ಹಾಗೂ ಹೊಟ್ಟೆ ಭಾರವಾದ ಅನುಭವ ಉಂಟಾಗುತ್ತದೆ. ದೇಹವು ನೀರನ್ನು ಸರಿಯಾಗಿ ಬಳಸಿಕೊಳ್ಳದಾಗ ಶಕ್ತಿ ಕುಂಠಿತವಾಗುತ್ತದೆ ಮತ್ತು ವ್ಯಕ್ತಿಗೆ ನಿರಂತರ ದಣಿವು ಹಾಗೂ ಆಲಸ್ಯ ಕಾಣಿಸಿಕೊಳ್ಳುತ್ತದೆ.

ಆರೋಗ್ಯವಾಗಿರಲು ಬಯಸಿದರೆ ಯಾವಾಗಲೂ ಆರಾಮವಾಗಿ ಕುಳಿತು, ನಿಧಾನವಾಗಿ ನೀರು ಕುಡಿಯಬೇಕು. ತುಂಬಾ ತಣ್ಣನೆಯ ನೀರನ್ನು ತಪ್ಪಿಸಿ, ಕೋಣೆಯ ಉಷ್ಣಾಂಶದ ನೀರನ್ನು ಗಾಜು ಅಥವಾ ಮಣ್ಣಿನ ಪಾತ್ರೆಯಲ್ಲಿ ಸಂಗ್ರಹಿಸಿ ಕುಡಿಯುವುದು ಉತ್ತಮ ಎಂದು ತಜ್ಞರು ಸಲಹೆ ನೀಡುತ್ತಾರೆ.

Continue Reading

Blog

ತೀರ್ಥಹಳ್ಳಿಯಲ್ಲಿ ಮಂಗನ ಕಾಯಿಲೆಗೆ ಯುವಕ ಬಲಿ

ಶಿವಮೊಗ್ಗ, ಜನವರಿ 29: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸಸಿ ತೋಟ ಗ್ರಾಮದಲ್ಲಿ ಮಂಗನ ಕಾಯಿಲೆ (KFD – Kyasanur Forest Disease) ಸೋಂಕಿಗೆ ಮತ್ತೊಂದು ಬಲಿ ಬಿದ್ದಿದೆ. 29 ವರ್ಷದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದು ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ.

ಮೃತರನ್ನು ಸಸಿ ತೋಟ ನಿವಾಸಿ ಕಿಶೋರ್ ಎಂದು ಗುರುತಿಸಲಾಗಿದೆ. ಜನವರಿ 20ರಿಂದ ಕಿಶೋರ್ ಅವರಿಗೆ ತೀವ್ರ ಜ್ವರ, ತಲೆನೋವು, ದೇಹದ ನೋವು ಸೇರಿದಂತೆ ಮಂಗನ ಕಾಯಿಲೆಗೆ ಸಂಬಂಧಿಸಿದ ಲಕ್ಷಣಗಳು ಕಾಣಿಸಿಕೊಂಡಿದ್ದವು. ಆರಂಭದಲ್ಲಿ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿದ್ದು, ಜ್ವರ ತಗ್ಗದೆ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು.

ರೋಗಲಕ್ಷಣಗಳು ಉಲ್ಬಣಗೊಂಡ ಹಿನ್ನೆಲೆ ಜನವರಿ 25ರಂದು ಹೆಚ್ಚಿನ ಚಿಕಿತ್ಸೆಗೆ ಉಡುಪಿ ಜಿಲ್ಲೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿನ ತಜ್ಞ ವೈದ್ಯರ ತಂಡ ಸತತವಾಗಿ ಚಿಕಿತ್ಸೆ ನೀಡಿದರೂ, ಸೋಂಕಿನ ತೀವ್ರತೆ ಹೆಚ್ಚಾಗಿದ್ದರಿಂದ ಕಿಶೋರ್ ಚಿಕಿತ್ಸೆಗೇ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಈ ಘಟನೆ ಬಳಿಕ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು, ತೀರ್ಥಹಳ್ಳಿ ಮತ್ತು ಸುತ್ತಮುತ್ತಲಿನ ಅರಣ್ಯ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಬಿಗಿಗೊಳಿಸಲಾಗಿದೆ. ಮಂಗನ ಕಾಯಿಲೆ ಟಿಕ್‌ (Tick) ಮೂಲಕ ಹರಡುವ ಸೋಂಕಾಗಿರುವುದರಿಂದ ಅರಣ್ಯ ಪ್ರದೇಶಕ್ಕೆ ತೆರಳುವವರು ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಕಳೆದ ಕೆಲ ತಿಂಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಅರಣ್ಯ ಅಂಚಿನ ಗ್ರಾಮಗಳಲ್ಲಿ ವಾಸಿಸುವ ಜನರು ಮತ್ತು ಅರಣ್ಯಕ್ಕೆ ಹೋಗುವ ಕೂಲಿ ಕಾರ್ಮಿಕರು ವಿಶೇಷ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಜ್ವರ, ತಲೆನೋವು, ರಕ್ತಸ್ರಾವದಂತಹ ಲಕ್ಷಣಗಳು ಕಂಡುಬಂದರೆ ತಕ್ಷಣವೇ ಸಮೀಪದ ಸರ್ಕಾರಿ ಆಸ್ಪತ್ರೆಗೆ ಸಂಪರ್ಕಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.

Continue Reading

ಆರೋಗ್ಯ

EGG HEALTH BENIFITS : ಪ್ರತಿದಿನ ಮೊಟ್ಟೆ ತಿನ್ನುವುದರಿಂದ ಏನು ಲಾಭ?

ಆರೋಗ್ಯ ಡೆಸ್ಕ್: ಮೊಟ್ಟೆ (Egg) ಅತ್ಯಂತ ಪೌಷ್ಟಿಕ ಹಾಗೂ ಸುಲಭವಾಗಿ ಲಭ್ಯವಿರುವ ಆಹಾರಗಳಲ್ಲಿ ಒಂದಾಗಿದೆ. ಆದರೆ ದಿನಕ್ಕೆ ಎಷ್ಟು ಮೊಟ್ಟೆಗಳನ್ನು ಸೇವಿಸಬೇಕು ಎಂಬ ಗೊಂದಲ ಬಹುತೇಕ ಜನರಲ್ಲಿ ಕಂಡುಬರುತ್ತದೆ. ಅತಿಯಾದ ಮೊಟ್ಟೆ ಸೇವನೆ ಆರೋಗ್ಯಕ್ಕೆ ಹಾನಿಕಾರಕವಾಗಬಹುದಾದ್ದರಿಂದ ಸರಿಯಾದ ಪ್ರಮಾಣ ತಿಳಿದುಕೊಳ್ಳುವುದು ಬಹಳ ಮುಖ್ಯ.

ಹಾರ್ವರ್ಡ್ ಹಾಗೂ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯಗಳೊಂದಿಗೆ ಕಾರ್ಯನಿರ್ವಹಿಸುವ ಖ್ಯಾತ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಸೌರಭ್ ಸೇಥಿ ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅವರ ಪ್ರಕಾರ, ಮೊಟ್ಟೆಗಳು ಸಂಪೂರ್ಣ ಪ್ರೋಟೀನ್ ಅನ್ನು ಹೊಂದಿದ್ದು, ಒಂಬತ್ತು ಅಗತ್ಯ ಅಮೈನೋ ಆಮ್ಲಗಳನ್ನು ಒಳಗೊಂಡಿವೆ. ಇದರಿಂದ ಸ್ನಾಯುಗಳ ನಿರ್ಮಾಣ ಮತ್ತು ಪುನರ್ ನಿರ್ಮಾಣಕ್ಕೆ ಸಹಾಯವಾಗುತ್ತದೆ. ಜಿಮ್‌ಗೆ ಹೋಗುವವರಿಗೆ ಇದು ಅತ್ಯುತ್ತಮ ಮತ್ತು ಕಡಿಮೆ ವೆಚ್ಚದ ಆಹಾರವಾಗಿದೆ.

ಡಾ. ಸೇಥಿ ಅವರು ಹಸಿ ಮೊಟ್ಟೆ ಸೇವನೆ ತಪ್ಪಿಸಬೇಕು ಎಂದು ಎಚ್ಚರಿಸಿದ್ದಾರೆ. ಹಸಿ ಮೊಟ್ಟೆಗಳಿಂದ ಸಾಲ್ಮೊನೆಲ್ಲಾ ಸೋಂಕಿನ ಅಪಾಯವಿದ್ದು, ಬೇಯಿಸಿದ ಮೊಟ್ಟೆಗಳಲ್ಲಿ ಇರುವ ಪ್ರೋಟೀನ್ ದೇಹಕ್ಕೆ ಉತ್ತಮವಾಗಿ ಹೀರಿಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.

ಮೊಟ್ಟೆಗಳು ವಿಟಮಿನ್ ಎ, ಡಿ, ಇ, ಬಿ12 ಹಾಗೂ ಕಬ್ಬಿಣ, ಸೆಲೆನಿಯಮ್, ರಂಜಕದಂತಹ ಖನಿಜಗಳಲ್ಲಿ ಸಮೃದ್ಧವಾಗಿವೆ. ಮೊಟ್ಟೆಯ ಹಳದಿ ಭಾಗದಲ್ಲಿರುವ ಲುಟೀನ್ ಮತ್ತು ಜಿಯಾಕ್ಸಾಂಥಿನ್ ಕಣ್ಣುಗಳ ಆರೋಗ್ಯಕ್ಕೆ ಉಪಯುಕ್ತವಾಗಿದ್ದು, ವಯಸ್ಸಿನ ಪರಿಣಾಮದಿಂದ ಉಂಟಾಗುವ ದೃಷ್ಟಿ ಸಮಸ್ಯೆಗಳಿಂದ ರಕ್ಷಿಸುತ್ತದೆ.

ಸಾಮಾನ್ಯವಾಗಿ, ಪ್ರತಿದಿನ 1 ರಿಂದ 2 ಮೊಟ್ಟೆಗಳನ್ನು ಸೇವಿಸುವುದು ಹೆಚ್ಚಿನ ಜನರಿಗೆ ಸುರಕ್ಷಿತ ಎಂದು ಡಾ. ಸೌರಭ್ ಸೇಥಿ ಹೇಳಿದ್ದಾರೆ. ಸರಿಯಾದ ಪ್ರಮಾಣದಲ್ಲಿ ಮೊಟ್ಟೆ ಸೇವಿಸಿದರೆ ತೂಕ ನಿಯಂತ್ರಣ, ಹೃದಯ ಆರೋಗ್ಯ ಮತ್ತು ಒಟ್ಟಾರೆ ದೈಹಿಕ ಕ್ಷೇಮಕ್ಕೆ ಸಹಕಾರಿ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Continue Reading

Trending