Connect with us

ದೇಶ

ಇರುವೆಗಳೂ ಆಪರೇಷನ್ ಮಾಡ್ತವೆ..! ಮನುಷ್ಯರ ಹೊರತುಪಡಿಸಿದ್ರೆ ಈ ಕಲೆಗಾರಿಕೆ ಇರೋದು ಇವುಗಳಿಗೆ ಮಾತ್ರ..!

ಇರಲಾರದೇ ಇರುವೆ ಬಿಟ್ಕೊಂಡರು ಅನ್ನುವ ಹಾಗೆ ಸಂಶೋಧನೆಗೆ ಅಂತಾ ಒಂದಷ್ಟು ಇರುವೆಗಳನ್ನು ಬಿಟ್ಕೊಂಡಿದ್ದ ವಿಜ್ಞಾನಿಗಳ ತಂಡಕ್ಕೆ ಅಚ್ಚರಿಯ ಸಂಗತಿಯೊಂದು ಸಿಕ್ಕಿದೆ. ಇದು ವಿಜ್ಞಾನಿಗಳ ಕುತೂಹಲವನ್ನು ಮತ್ತಷ್ಟು ಕೆರಳಿಸಿದ್ದು, ಇನ್ನಷ್ಟು ಸಂಶೋಧನೆಗೆ ಮುಂದಾಗಿದ್ದಾರೆ. ಅಸಲಿ ವಿಚಾರ ಏನಂದರೆ ಇರುವೆಗಳು ಕೂಡ ತಮ್ಮವರಿಗೆ ಶಸ್ತ್ರಚಿಕಿತ್ಸೆಯನ್ನು ಮಾಡುತ್ತವೆಯಂತೆ!

ಅಚ್ಚರಿ ಅನಿಸಿದರೂ ನಿಜ! ವಿಜ್ಞಾನಿಗಳು ನಡೆಸಿದ ಸಂಶೋಧನೆಯಲ್ಲಿ ಹೀಗೊಂದು ಮಾಹಿತಿ ಬೆಳಕಿಗೆ ಬಂದಿದೆ. ಸಾಮಾನ್ಯವಾಗಿ ಮನುಷ್ಯರಿಗೆ ದೈಹಿಕ ಸಮಸ್ಯೆಗಳು ಅಥವಾ ಅನಾರೋಗ್ಯ ಉಂಟಾದಾಗ ಗುಣಪಡಿಸಲು ಚಿಕಿತ್ಸೆಯ ಮೊರೆ ಹೋಗುತ್ತೇವೆ. ತೀರಾ ಅಗತ್ಯ ಬಿದ್ದರೆ ವೈದ್ಯರು ಶಸ್ತ್ರಚಿಕಿತ್ಸೆಯನ್ನೂ ಮಾಡುತ್ತಾರೆ. ಅಂತಹ ಪ್ರತಿಭೆ ಕೇವಲ ಮನುಷ್ಯರಿಗೆ ಮಾತ್ರ ಇರೋದು ಅನ್ಕೊಂಡರೆ ಅದು ಖಂಡಿತ ತಪ್ಪು. ಮಾನವರು ಮಾತ್ರವಲ್ಲ, ಇರುವೆಗಳು ಕೂಡ ಆಪರೇಷನ್ ಮಾಡಿಕೊಳ್ಳುತ್ತವೆ ಎಂದರೆ ನೀವು ನಂಬಲೇಬೇಕು!

ಈ ಮೂಲಕ ಮನುಷ್ಯರನ್ನು ಹೊರತುಪಡಿಸಿ ಭೂಮಿ ಮೇಲೆ ವೈದ್ಯಕೀಯ ಕಾರ್ಯಾಚರಣೆ ನಡೆಸುವ ಸಾಮರ್ಥ್ಯ ಹೊಂದಿರುವ ಎರಡನೇ ಜೀವಿ ಇರುವೆಗಳು. ಹೌದು, ಫ್ಲೋರಿಡಾದಲ್ಲಿ (Florida) ಶಸ್ತ್ರಚಿಕಿತ್ಸೆ ನಡೆಸುತ್ತಿರುವ ಇರುವೆಗಳು (Ants) ಪತ್ತೆಯಾಗಿವೆ. ಅವುಗಳನ್ನು ಕ್ಯಾಂಪೊನೋಟಸ್ (Camponotus) ಇರುವೆ ಎಂದು ಕರೆಯಲಾಗುತ್ತಿದೆ. ಅಧ್ಯಯನದಲ್ಲಿ ತಿಳಿದುಬಂದಿರುವ ಅಂಶಗಳ ಪ್ರಕಾರ, ಇವು ಗೂಡಿನಲ್ಲಿ ಸಂಗಾತಿಗಳ ಜೊತೆ ಇರುತ್ತವೆ. ಈ ಸಂದರ್ಭದಲ್ಲಿ ತಮ್ಮ ಸಂಗಾತಿಗಳ ಕಾಲುಗಳಿಗೆ ಆಗಿರುವ ಗಾಯವನ್ನು ಗುರುತಿಸುತ್ತವೆ. ಗಾಯವನ್ನು ಗುರುತಿಸಿ ಅದಕ್ಕೆ ಟ್ರೀಟ್ಮೆಂಟ್ ನೀಡಿ ಸ್ವಚ್ಛವಾಗಿ ಗುಣಪಡಿಸುತ್ತವೆ. ಕೆಲವೊಮ್ಮೆ ಕಾಲು ಅಥವಾ ಇರುವೆಗಳ ಇತರೆ ಭಾಗಗಳನ್ನು ಕತ್ತರಿಸಿ ಹಾಕುತ್ತವೆ ಎಂದು Current Biology ಜರ್ನಲ್ ಜುಲೈ 2 ರಂದು ವರದಿಯನ್ನು ಪ್ರಕಟಿಸಿದೆ.

ಜರ್ನಮನಿಯ University of Wurzburg ವಿಶ್ವವಿದ್ಯಾಲಯದ ಪರಿಸರ ಶಾಸ್ತ್ರಜ್ಞ ಎರಿಕ್ ಫ್ರಾಂಕ್ (Erik Frank) ಹೇಳುವಂತೆ.. ಜೀವ ಇರುವ ಯಾವುದೇ ಜೀವಿಗಳ ಅಂಗವನ್ನು ಕತ್ತರಿಸಬೇಕು ಅಂದಾಗ ಸಾಕಷ್ಟು ಪ್ರತಿಭೆ ಇರಬೇಕು. ಅದೊಂದು ಲಯಬದ್ಧ ಮತ್ತು ಸಂಕೀರ್ಣ ವಿಧಾನ. ಅಂತಹ ಕೆಲಸ ಮಾಡಲು ಮನುಷ್ಯರಿಗೆ ಸಾಕಷ್ಟು ಅಧ್ಯಯನ, ಸಮಯ ಹಾಗೂ ನಿಖರತೆಯ ಅಗತ್ಯ ಇರುತ್ತದೆ. ಆದರೆ ಈ ಇರುವೆಗಳ ಶಸ್ತ್ರಚಿಕಿತ್ಸೆಯು ಅಚ್ಚರಿ ತಂದಿದೆ ಎನ್ನುತ್ತಾರೆ.

2023ರಲ್ಲಿ ಫ್ರಾಂಕ್ ಅವರ ತಂಡವು ಆಫ್ರಿಕನ್ ಇರುವೆಗಳ ಜಾತಿಗಳನ್ನು (African ant species) ಕಂಡು ಹಿಡಿದಿದೆ. ಮೆಗಾಪೊನೆರಾ (Megaponera analis) ಎಂಬ ಪ್ರಬೇಧದ ಇರುವೆ ಗಾಯಗೊಂಡ ತನ್ನ ಸಹಚರರಿಗೆ ಆಂಟಿಮೈಕ್ರೋಬಿಯಲ್ (antimicrobial substance) ಮೂಲಕ ಚಿಕಿತ್ಸೆ ನೀಡುತ್ತಿತ್ತು. ಈ antimicrobial ಇರುವೆಯ ದೇಹದಿಂದ ಹೊರ ಬರುತ್ತದೆ. ಫ್ಲೊರಿಡಾದ ಕ್ಯಾಂಪೊನೋಟಸ್ ಜಾತಿಯ ಇರುವೆಗಳು ಈ ಸಾಮರ್ಥ್ಯವನ್ನು ಹೊಂದಿಲ್ಲ. ಆದರೆ ಅವು ಕಾಲು ಕತ್ತರಿಸುವುದರಲ್ಲಿ ನಿಪುಣವಾಗಿರುತ್ತವೆ ಎಂದು ಸ್ಟಡಿ ಹೇಳಿದೆ.

ಅಧ್ಯಯನದಲ್ಲಿ ವಿಜ್ಞಾನಿಗಳು ಇರುವೆಗಳ ಎರಡು ರೀತಿಯ ಚಿಕಿತ್ಸೆಯನ್ನು ಗಮನಿಸಿದ್ದಾರೆ. ಇರುವೆಗಳ ತೊಡೆಯ ಭಾಗದಲ್ಲಿ ಸೀಳುವಿಕೆ ಆದಾಗ ಹಾಗೂ ಟಿಬಿಯಾದಲ್ಲಿ ಸೀಳುವಿಕೆ ಆದಾಗ ಅದನ್ನು ಗುಣಪಡಿಸಲು ಪ್ರಯತ್ನಿಸುತ್ತವೆ. ಮೊದಲು ಗಾಯವನ್ನು ಸ್ವಚ್ಛಗೊಳಿಸಲು ಪ್ರಯತ್ನಿಸುತ್ತವೆ. ಅದಕ್ಕಾಗಿ ಇರುವೆಗಳು ತಮ್ಮ ಬಾಯಿ ಬಳಸುತ್ತವೆ. ಒಂದು ವೇಳೆ ವಾಸಿಯಾಗದಿದ್ದರೆ ಬಾಯಿ ಮೂಲಕವೇ ಕತ್ತರಿಸಿ ಪ್ರತ್ಯೇಕಿಸಿ ಜೀವ ಉಳಿಸುತ್ತವೆಯಂತೆ.

ಎರಡು ರೀತಿಯ ಚಿಕಿತ್ಸೆಯಲ್ಲೂ ಜೀವದಾನ
ಟಿಬಿಯಾವನ್ನು ಸ್ವಚ್ಛಗೊಳಿಸುವ ಮೂಲಕ ಗಾಯವನ್ನು ವಾಸಿ ಮಾಡಲು ಪ್ರಯತ್ನಿಸುತ್ತವೆ. ಇದರಿಂದ ಅವು ಸಾಯದಂತೆ ರಕ್ಷಣೆಯಾಗುತ್ತದೆ. ತೊಡೆಯ ಮೇಲಿನ ಗಾಯವು ವಾಸಿಯಾದರೆ ಶೇಕಡಾ 40 ರಷ್ಟು ಇರುವೆಗಳು ಬದುಕುತ್ತವೆ. ತೊಡೆಯನ್ನು ಕತ್ತರಿಸಿಕೊಂಡ ಇರುವೆಗಳು ಶೇಕಡಾ 90 ರಿಂದ 95 ರಷ್ಟು ಇರುವೆಗಳು ಬದುಕುಳಿಯುತ್ತವೆ. ಅದೇ ರೀತಿ ಟಿಬಿಯಾ ಗಾಯವನ್ನು ಗುಣಪಡಿಸಿದ ನಂತರ ಶೇಕಡಾ 15 ರಿಂದ 75 ರಷ್ಟು ಪತಿಶತ ಇರುವೆಗಳು ಬದುಕುಳಿಯುತ್ತವೆ. ತೊಡೆಗೆ ಗಾಯವಾದಾಗ ಮಾತ್ರ ಇರುವೆಗಳು ಕಾಲನ್ನು ಕಚ್ಚುತ್ತವೆ. ಕಾಲಿನ ಇತರೆ ಭಾಗಗಳಲ್ಲಿ ಗಾಯವಾದರೆ ಕಾಲನ್ನು ಕತ್ತರಿಸುವುದಿಲ್ಲ. ಗಾಯಗೊಂಡ ಇರುವೆಯ ಕಾಲನ್ನು ಕತ್ತರಿಸಲು ಅವುಗಳಿಗೆ ಕನಿಷ್ಠ 40 ನಿಮಿಷಗಳು ಬೇಕಾಗುತ್ತದೆ ಎಂದು ವಿಜ್ಞಾನಿಗಳು ಹೇಳುತ್ತಾರೆ.

Micro-CT scans ಬಳಸಿ ಅಧ್ಯಯನ
ಈ ಅಧ್ಯಯನಕ್ಕಾಗಿ ವಿಜ್ಞಾನಿಗಳು ಮೈಕ್ರೋ ಸಿಟಿ ಸ್ಕ್ಯಾನ್ ಸಹಾಯವನ್ನು ತೆಗೆದುಕೊಂಡರು. ಗಾಯಗೊಂಡ ಕಾಲಿನಿಂದ ರಕ್ತ ಸೋರುತ್ತಿದ್ದಾಗ, ರಕ್ತವನ್ನು ಪೂರೈಸುವ ಸ್ನಾಯುಗಳಲ್ಲಿನ ರಕ್ತದ ಹರಿವನ್ನು ನಿಧಾನಗೊಳಿಸುವುದನ್ನೂ ವಿಜ್ಞಾನಿಗಳು ಕಂಡುಕೊಂಡಿದ್ದಾರೆ ಎಂದು ವರದಿಯಾಗಿದೆ. ಏನೇ ಇರಲಿ. ನೋಡೋಕೆ ಇರುವೆ ಅಂತೀವಿ. ಮನುಷ್ಯರನ್ನೂ ಮೀರಿ ಚಿಕಿತ್ಸೆ ನೀಡುವ ಕಲೆಗಾರಿಕೆ ಮತ್ತು ನ್ಯಾಕ್ ಇರುವೆಗಳಿಗೆ ಇದೆ ಅಂದರೆ ಅದು ಸಾಮಾನ್ಯ ಸಂಗತಿಯೇನಲ್ಲ.

ದೇಶ

ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಎಚ್ಚರಿಕೆ: “ಭಾರತಕ್ಕೆ ಮರಳದಿದ್ದರೆ ಅರ್ಜಿ ವಿಚಾರಣೆ ಇಲ್ಲ”

ಮುಂಬೈ: ಭಾರತದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ (Vijay Mallya) ನ್ಯಾಯಾಲಯದ ಪ್ರಕ್ರಿಯೆಗಳಲ್ಲಿ ಹಾಜರಾಗದ ಹಿನ್ನೆಲೆ, ಮುಂದಿನ ವಿಚಾರಣೆಯಲ್ಲಿಯೂ ಇದೇ ರೀತಿಯ ವರ್ತನೆ ತೋರಿದರೆ ಯಾವುದೇ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್ ಕಠಿಣ ಎಚ್ಚರಿಕೆ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಗೌತಮ್ ಅಂಕದ್ ಅವರ ಪೀಠ, ಮಲ್ಯ ಭಾರತಕ್ಕೆ ಮರಳುವ ಉದ್ದೇಶ ಹೊಂದಿದ್ದಾರೋ ಇಲ್ಲವೋ ಎಂಬುದನ್ನು ಸ್ಪಷ್ಟಪಡಿಸಲು “ಕೊನೆಯ ಅವಕಾಶ” ನೀಡಿದೆ.

“ನೀವು ಭಾರತಕ್ಕೆ ಹಿಂತಿರುಗಲೇಬೇಕು. ಹಿಂತಿರುಗದಿದ್ದರೆ ನಿಮ್ಮ ಅರ್ಜಿಯನ್ನು ನಾವು ವಿಚಾರಣೆ ನಡೆಸಲು ಸಾಧ್ಯವಿಲ್ಲ,” ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.


FEOA ಕಾಯ್ದೆ ಪ್ರಶ್ನೆ

ವಿಜಯ್ ಮಲ್ಯ ಅವರು ದೇಶಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆ (FEOA) ಯ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿ ಹಾಗೂ ಅವರನ್ನು ‘Fugitive Economic Offender’ ಎಂದು ಘೋಷಿಸುವ ಪ್ರಕ್ರಿಯೆಗಳ ವಿರುದ್ಧದ ಅರ್ಜಿಯನ್ನು ನ್ಯಾಯಾಲಯ ವಿಚಾರಿಸುತ್ತಿದೆ.

ಡಿಸೆಂಬರ್‌ನಲ್ಲಿ ನ್ಯಾಯಪೀಠ, ಮಲ್ಯ ಭಾರತಕ್ಕೆ ಮರಳಿ ನ್ಯಾಯಾಲಯದ ವ್ಯಾಪ್ತಿಗೆ ಒಳಪಟ್ಟರೆ ಮಾತ್ರ ಅವರ ಅರ್ಜಿಯನ್ನು ಪರಿಗಣಿಸುವುದಾಗಿ ಹೇಳಿತ್ತು.

ನ್ಯಾಯಾಧೀಶರು, “ನೀವು ನ್ಯಾಯಾಲಯದ ಪ್ರಕ್ರಿಯೆಯಿಂದ ದೂರ ಓಡುತ್ತಿದ್ದೀರಿ. ಆದ್ದರಿಂದ ಸಮಾನ ಪರಿಹಾರವನ್ನು ನಿರೀಕ್ಷಿಸಲು ಸಾಧ್ಯವಿಲ್ಲ” ಎಂದು ಅಭಿಪ್ರಾಯಪಟ್ಟರು.


ಇಡಿ ಪರ ವಾದ

ಜಾರಿ ನಿರ್ದೇಶನಾಲಯ (ED) ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಮಲ್ಯ ಬ್ಯಾಂಕುಗಳ ಹಕ್ಕುಗಳನ್ನು ಪ್ರಶ್ನಿಸಿ ಅಫಿಡವಿಟ್ ಸಲ್ಲಿಸಿರುವುದನ್ನು ಉಲ್ಲೇಖಿಸಿ, ಅವರು ವಸೂಲಾತಿ ಪ್ರಕ್ರಿಯೆಗಳನ್ನು ಬೇರೆ ದಿಕ್ಕಿಗೆ ತಳ್ಳಲು ಯತ್ನಿಸುತ್ತಿದ್ದಾರೆ ಎಂದು ವಾದಿಸಿದರು.

ಮಲ್ಯ ಅವರನ್ನು ಪರಾರಿಯಾಗಿದ್ದಾನೆಂದು ಘೋಷಿಸಿದ ನಂತರ ಹಾಗೂ ಲಂಡನ್‌ನಲ್ಲಿ ಹಸ್ತಾಂತರ ಪ್ರಕ್ರಿಯೆ ಮುಂದುವರಿದ ಹಂತದಲ್ಲಿದ್ದಾಗ ಮಾತ್ರ FEOAಗೆ ಸವಾಲು ಹಾಕಿದ್ದಾರೆ ಎಂದು ಮೆಹ್ತಾ ಹೇಳಿದರು.

“ಭಾರತೀಯ ನ್ಯಾಯಾಲಯಗಳಿಂದ ಪರಿಹಾರ ಕೇಳುವವರು ಭಾರತೀಯ ಕಾನೂನಿನ ಮೇಲೆ ನಂಬಿಕೆ ಇಡಬೇಕು,” ಎಂದು ಇಡಿ ಪರ ವಾದ ಮಂಡಿಸಲಾಯಿತು.


ಮಲ್ಯ ಪರ ವಾದ

ವಿಜಯ್ ಮಲ್ಯ ಪರ ವಕೀಲ ಅಮಿತ್ ದೇಸಾಯಿ, ಮಲ್ಯ ಭೌತಿಕವಾಗಿ ಭಾರತಕ್ಕೆ ಮರಳದಿದ್ದರೂ ಅವರ ಅರ್ಜಿಯನ್ನು ವಿಚಾರಣೆ ಮಾಡಬಹುದು ಎಂದು ವಾದಿಸಿದರು.

ಆದರೆ, ಮಲ್ಯ ಸಲ್ಲಿಸಿರುವ ಅಫಿಡವಿಟ್ ಪ್ರಕಾರ ಅವರು ನಡೆದುಕೊಳ್ಳುತ್ತಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.

ನ್ಯಾಯಾಲಯ ಸ್ಪಷ್ಟವಾಗಿ ಹೇಳಿದ್ದು:

  • ಮಲ್ಯ ಭಾರತಕ್ಕೆ ಹಿಂದಿರುಗುವುದಿಲ್ಲವೆಂದು ಅಫಿಡವಿಟ್ ಸಲ್ಲಿಸಬಹುದು.
  • ಆದರೆ ನ್ಯಾಯಾಲಯದ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.
  • ದೇಶಕ್ಕೆ ಮರಳಲು ಇದು ಅಂತಿಮ ಅವಕಾಶ.

ಮುಂದಿನ ವಾರ ವಿಚಾರಣೆ ಮುಂದುವರಿಯಲಿದೆ.

Continue Reading

ಕ್ರೀಡೆ

IND vs PAK ಹೈವೋಲ್ಟೇಜ್ ಪಂದ್ಯಕ್ಕೆ ಮುನ್ನ ಉಸ್ಮಾನ್ ತಾರಿಕ್ ಎಚ್ಚರಿಕೆ: “ಭಾರತೀಯರು ನನ್ನ ಬೌಲಿಂಗ್‌ಗೆ ಹೆದರುತ್ತಿದ್ದಾರೆ!”

ಟಿ20 ವಿಶ್ವಕಪ್ ಟೂರ್ನಿಯ ಬಹು ನಿರೀಕ್ಷಿತ ಭಾರತ–ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ ಫೆಬ್ರವರಿ 15ರಂದು ಶ್ರೀಲಂಕಾದ ಕೊಲಂಬೊದಲ್ಲಿ ನಡೆಯಲಿದೆ. ಶಿವರಾತ್ರಿ ಹಬ್ಬದಂದೇ ನಡೆಯಲಿರುವ ಈ ನಿರ್ಣಾಯಕ ಸಮರಕ್ಕಾಗಿ ಎರಡೂ ತಂಡಗಳು ಭರ್ಜರಿ ಸಿದ್ಧತೆಯಲ್ಲಿ ತೊಡಗಿವೆ.

ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ, ಫೆ.12ರಂದು ನಮೀಬಿಯಾ ವಿರುದ್ಧ ಕಣಕ್ಕಿಳಿದು ಗೆಲುವಿನ ಆತ್ಮವಿಶ್ವಾಸದೊಂದಿಗೆ ಪಾಕಿಸ್ತಾನ ಎದುರಿಸಲು ಸಜ್ಜಾಗಿದೆ.

ಈ ಮಧ್ಯೆ, ಪಾಕಿಸ್ತಾನದ ನಿಗೂಢ ಸ್ಪಿನ್ನರ್ ಉಸ್ಮಾನ್ ತಾರಿಕ್ ಭಾರತಕ್ಕೆ ಬಲವಾದ ಎಚ್ಚರಿಕೆ ನೀಡಿದ್ದಾರೆ. “ಭಾರತೀಯರು ನನ್ನ ಬೌಲಿಂಗ್‌ಗೆ ಹೆದರುತ್ತಿದ್ದಾರೆ. ಅದಕ್ಕಾಗಿ ನನ್ನ ಬೌಲಿಂಗ್ ಶೈಲಿಯ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ” ಎಂದು ಸಂಚಲನಕಾರಿ ಹೇಳಿಕೆ ನೀಡಿದ್ದಾರೆ.


ಮಾತಿನ ಸಮರ ಜೋರಾಗಿದೆ

ಟಿ20 ವಿಶ್ವಕಪ್ ಈಗ ರೋಚಕ ಹಂತ ತಲುಪಿದ್ದು, ಈಗಾಗಲೇ 15ಕ್ಕೂ ಹೆಚ್ಚು ಪಂದ್ಯಗಳು ಪೂರ್ಣಗೊಂಡಿವೆ. ಭಾರತ–ಪಾಕಿಸ್ತಾನ ಪಂದ್ಯ ನಡೆಯುತ್ತದೆಯೇ? ಎಂಬ ಅನುಮಾನಕ್ಕೆ ತೆರೆಬಿದ್ದಿದ್ದು, ಪಾಕಿಸ್ತಾನ ಪಂದ್ಯಕ್ಕೆ ಒಪ್ಪಿಗೆ ನೀಡಿದೆ.

ಪಂದ್ಯ ಖಚಿತವಾದ ಬೆನ್ನಲ್ಲೇ ಎರಡೂ ತಂಡಗಳ ನಡುವೆ ಮಾತಿನ ಸಮರ ಜೋರಾಗಿದೆ. ಪಾಕಿಸ್ತಾನಿ ಆಟಗಾರರು ಭಾರತವನ್ನು ಸೋಲಿಸುತ್ತೇವೆ ಎಂದು ಹೇಳುತ್ತಿದ್ದರೆ, ಭಾರತೀಯರು ಪಾಕಿಸ್ತಾನವನ್ನು ಮಣಿಸುತ್ತೇವೆ ಎಂದು ತಿರುಗೇಟು ನೀಡುತ್ತಿದ್ದಾರೆ.


ತಾರಿಕ್ ಸಮರ್ಥನೆ

ಭಾರತೀಯರು ನನ್ನ ಬೌಲಿಂಗ್ ಕುರಿತು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಐಸಿಸಿ ನಿಯಮಗಳ ಪ್ರಕಾರ ನನ್ನ ಬೌಲಿಂಗ್ ಶೈಲಿ ಮಾನ್ಯವಾಗಿದೆ ಎಂದು ಉಸ್ಮಾನ್ ತಾರಿಕ್ ಸಮರ್ಥಿಸಿಕೊಂಡಿದ್ದಾರೆ.

“ಭಾರತೀಯ ಆಟಗಾರರಿಗೆ ನನ್ನ ಬೌಲಿಂಗ್‌ನಿಂದ ಹೆಚ್ಚುವರಿ ಒತ್ತಡ ಇದೆ. ಅದಕ್ಕಾಗಿಯೇ ಆರೋಪ ಮಾಡುತ್ತಿದ್ದಾರೆ. ಫೆಬ್ರವರಿ 15ರಂದು ಭಾರತದ ಅಗ್ರ ಕ್ರಮಾಂಕವನ್ನು ಕೆಡವುತ್ತೇನೆ” ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ನನ್ನ ಬಗ್ಗೆ ಏನು ಚರ್ಚೆ ನಡೆಯುತ್ತಿದೆ ಎಂಬುದನ್ನು ನಾನು ಪರಿಗಣಿಸುವುದಿಲ್ಲ. ನನ್ನ ಗಮನ ಪಂದ್ಯದಲ್ಲೇ ಇದೆ” ಎಂದು ತಾರಿಕ್ ಹೇಳಿದ್ದಾರೆ.

Continue Reading

ದೇಶ

ಜೈರಾಮ್ ರಮೇಶ್‌ಗೆ ಸುಪ್ರೀಂಕೋರ್ಟ್ ಕಿಡಿ: “ಮಾಧ್ಯಮ ಪ್ರಚಾರಕ್ಕೇ ಅರ್ಜಿ?”

ಹೊಸದಿಲ್ಲಿ: ಪರಿಸರ ಪರವಾನಿಗೆಗೆ ಸಂಬಂಧಿಸಿದ ರಿಟ್ ಅರ್ಜಿಯ ವಿಚಾರಣೆ ವೇಳೆ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ವಿರುದ್ಧ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. “ಇದೆಲ್ಲವನ್ನೂ ನೀವು ಕೇವಲ ಮಾಧ್ಯಮ ಪ್ರಚಾರಕ್ಕಾಗಿ ಮಾಡುತ್ತಿದ್ದೀರಾ?” ಎಂದು ತ್ರಿಸದಸ್ಯ ಪೀಠ ಕಿಡಿಕಾರಿತು.

ಭಾರತದ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠದಲ್ಲಿ ನ್ಯಾ. ಸೂರ್ಯಕಾಂತ್, ನ್ಯಾ. ಜಾಯ್‌ಮಾಲ್ಯ ಬಾಗ್ಚಿ ಹಾಗೂ ನ್ಯಾ. ಉಜ್ಜಲ್ ಭುಯಾನ್ ಇದ್ದರು. ಪರಿಸರ ಪರವಾನಿಗೆಯನ್ನು ಪೂರ್ವ ಅನ್ವಯವಾಗುವಂತೆ (Retrospective Environmental Clearance) ನೀಡುವ ಕ್ರಮವನ್ನು ಪ್ರಶ್ನಿಸಿ ಜೈರಾಮ್ ರಮೇಶ್ ರಿಟ್ ಅರ್ಜಿ ಸಲ್ಲಿಸಿದ್ದರು.

ರಿಟ್ ಅರ್ಜಿ ಸ್ವೀಕರಿಸಲು ನಿರಾಕರಣೆ

ವಿಚಾರಣೆ ವೇಳೆ ಪೀಠ, ಈ ಅರ್ಜಿ ಕೇಂದ್ರ ಸರ್ಕಾರದ ಕುಂದುಕೊರತೆಯನ್ನು ಹೈಲೆಟ್ ಮಾಡುವ ಬದಲು ಸಾರ್ವಜನಿಕ ಗಮನ ಸೆಳೆಯಲು ಸಲ್ಲಿಸಿದಂತಿದೆ ಎಂದು ಅಭಿಪ್ರಾಯಪಟ್ಟಿತು. ನವೆಂಬರ್ 2025ರ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ ರಿಟ್ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ (ಫೆ.12) ಸ್ವೀಕರಿಸಲು ನಿರಾಕರಿಸಿತು.

“ದಂಡ ಎದುರಿಸಲು ಸಿದ್ದರಾಗಿ” ಎಚ್ಚರಿಕೆ

“ತೀರ್ಪಿನ ವಿರುದ್ಧ ರಿಟ್ ಅರ್ಜಿ ಯಾಕೆ? ಮರುಪರಿಶೀಲನಾ ಅರ್ಜಿ (Review Petition) ಸಲ್ಲಿಸಬಹುದು ಅಲ್ಲವೇ? ರಿಟ್ ಮೂಲಕ ಮರುಪರಿಶೀಲನೆ ಸಾಧ್ಯವಿಲ್ಲ ಎಂಬುದು ತಿಳಿದಿಲ್ಲವೇ? ದಂಡ ಎದುರಿಸಲು ಸಿದ್ದರಾಗಿ” ಎಂದು ನ್ಯಾ. ಸೂರ್ಯಕಾಂತ್ ಎಚ್ಚರಿಸಿದರು.

ನ್ಯಾಯಾಲಯದ ಎಚ್ಚರಿಕೆಯ ಬಳಿಕ ಜೈರಾಮ್ ರಮೇಶ್ ಪರ ವಕೀಲರು ಅರ್ಜಿಯನ್ನು ಹಿಂಪಡೆಯಲು ವಿನಂತಿಸಿಕೊಂಡರು. ನ್ಯಾಯಪೀಠ ಅದಕ್ಕೆ ಅನುಮತಿ ನೀಡಿ, ಕಾನೂನಿನ ಪ್ರಕಾರ ಲಭ್ಯವಿರುವ ಪರಿಹಾರವನ್ನು ಪಡೆಯುವಂತೆ ಸೂಚಿಸಿತು.


ಪ್ರಕರಣದ ಹಿನ್ನೆಲೆ

ಜೈರಾಮ್ ರಮೇಶ್ ಯಾವುದೇ ಯೋಜನೆ ಆರಂಭವಾದ ನಂತರ ಪರಿಸರ ಪರವಾನಿಗೆ ನೀಡುವ ಕ್ರಮವನ್ನು ಪ್ರಶ್ನಿಸಿದ್ದರು. ಈ ರೀತಿಯ ಅನುಮತಿ ಕಾನೂನುಬಾಹಿರ ಚಟುವಟಿಕೆಗಳಿಗೆ ದಾರಿ ಮಾಡಿಕೊಡುತ್ತದೆ ಮತ್ತು ಸಾರ್ವಜನಿಕ ಆರೋಗ್ಯಕ್ಕೆ ಹಾನಿಕಾರಕವಾಗಬಹುದು ಎಂದು ಅವರು ವಾದಿಸಿದ್ದರು.

ಕೇಂದ್ರ ಸರ್ಕಾರದ ನಿಯಮ ಏನು?

  • 2006ರಲ್ಲಿ ಯೋಜನೆ ಆರಂಭಿಸುವ ಮೊದಲು ಪರಿಸರ ಪರವಾನಿಗೆ ಕಡ್ಡಾಯಗೊಳಿಸಲಾಗಿತ್ತು.
  • 2017 ಮತ್ತು 2021ರ ಅಧಿಸೂಚನೆಗಳ ಮೂಲಕ ಕೆಲವು ಯೋಜನೆಗಳಿಗೆ ಷರತ್ತುಬದ್ದ ಪೂರ್ವಾನ್ವಯ ಅನುಮತಿ ಅವಕಾಶ ನೀಡಲಾಗಿತ್ತು.
  • ಮೇ 2025ರಲ್ಲಿ ಈ ಕ್ರಮವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿತ್ತು.
  • ಆದರೆ ನವೆಂಬರ್ 2025ರಲ್ಲಿ CREDAI ಅರ್ಜಿಯ ವಿಚಾರಣೆ ವೇಳೆ ಹಿಂದಿನ ತೀರ್ಪಿನಲ್ಲಿ ಸಡಿಲಿಕೆ ನೀಡಲಾಗಿತ್ತು.

ಈ ಮರುಪರಿಶೀಲಿತ ತೀರ್ಪನ್ನೇ ಜೈರಾಮ್ ರಮೇಶ್ ಪ್ರಶ್ನಿಸಿದ್ದರು.

Continue Reading

Trending