ದೇಶ
ಶಾರುಖ್ಗೆ ಛೀಮಾರಿ ಹಾಕ್ತಿರೋ ಜನ, ದುಡ್ಡಿನ ಆಸೆಗೆ ಇದೆಂಥ ಕೆಲ್ಸ ಪ್ರತಿಭಟನಾಕಾರರು
ಶಾರುಖ್ ಖಾನ್ ಪಠಾಣ್ ಯಶಸ್ಸಿನ ಬಳಕಿ ಈಗ ಜವಾನ್ ಖುಷಿಯಲ್ಲಿದ್ದಾರೆ. ಇವರ ಜವಾನ್ ಚಿತ್ರಕ್ಕಾಗಿ ಫ್ಯಾನ್ಸ್ ಕಾತರದಿಂದ ಕಾಯುತ್ತಿದ್ದಾರೆ. ಇದರ ನಡುವೆಯೇ ಈಗ ಮುಂಬೈನಲ್ಲಿರುವ ಶಾರುಖ್ ಮನೆಯ ಮುಂದೆ ಮುಂಬೈ ಪೊಲೀಸರ ದೊಡ್ಡ ದಂಡೇ ಹರಿದುಬಂದಿದೆ. ಶಾರುಖ್ ಮನೆಯ ಮುಂದೆ ಬಂದು ಒಂದಿಷ್ಟು ಜನ ಪ್ರತಿಭಟನೆ ಮಾಡುತ್ತಿದ್ದಾರೆ. ಅವರನ್ನು ಚದುರಿಸಲು ಪೊಲೀಸರ ಕಣ್ಗಾವಲು ಹಾಕಲಾಗಿದೆ. ಇದಾಗಲೇ ಕೆಲವು ಮಂದಿಯನ್ನು ಅರೆಸ್ಟ್ ಕೂಡ ಮಾಡಲಾಗಿದೆ. ಶಾರುಖ್ ಮನೆ ಮನ್ನತ್ ಮುಂದೆ ಪ್ರತಿಭಟನೆ ಮಾಡಲು ಬಂದವರನ್ನು ಪೊಲೀಸರು ಅರೆಸ್ಟ್ ಮಾಡಿರುವ ಸುದ್ದಿ ವೈರಲ್ ಆಗುತ್ತಲೇ ಶಾರುಖ್ ಖಾನ್ಗೇ ಅಭಿಮಾನಿಗಳು ಸೇರಿ ಜನರು ಬಯ್ಯುತ್ತಿದ್ದಾರೆ, ಚಿತ್ರ ಮಾಡಿ ಸಹಸ್ರಾರು ಕೋಟಿ ರೂಪಾಯಿ ದುಡಿದದ್ದು ಸಾಲದು ಎಂದು ಇವೆಲ್ಲಾ ಕೆಟ್ಟ ಕೆಲಸ ಬೇಕಿತ್ತಾ ಅಂತಿದ್ದಾರೆ. ಪ್ರತಿಭಟನೆ ಮಾಡುತ್ತಿರುವುದೂ ಸರಿಯಾಗಿಯೇ ಇದೆ ಎನ್ನುತ್ತಿದ್ದಾರೆ.
ಅಷ್ಟಕ್ಕೂ ಈ ಪ್ರತಿಭಟನೆ ಯಾಕೆ? ಪೊಲೀಸರು ಬಂದಿದ್ದೇಕೆ ಎನ್ನುವುದಾದರೆ ವರದಿಗಳ ಪ್ರಕಾರ, ಶಾರುಖ್ ಖಾನ್ ಆನ್ಲೈನ್ ಗೇಮಿಂಗ್ ಅಪ್ಲಿಕೇಶನ್ ಪ್ರಚಾರ ಮಾಡುತ್ತಿರುವುದಕ್ಕೆ! ಕೆಲವೊಂದು ಆನ್ಲೈನ್ ಗೇಮ್ಸ್ ರಾಯಭಾರಿಯಾಗಿ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುತ್ತಿರುವುದಕ್ಕೆ. ಬಹುತೇಕರಿಗೆ ತಿಳಿದಿರುವಂತೆ ಆನ್ಲೈನ್ ಗೇಮ್ ಆಡಿ ಇದ್ದದ್ದನ್ನೆಲ್ಲಾ ಕಳೆದುಕೊಂಡು ಹುಚ್ಚರಾದವರೂ ಇದ್ದಾರೆ, ಪ್ರಾಣ ಕಳೆದುಕೊಂಡವರೂ ಇದ್ದಾರೆ. ಇದರ ಚಟಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡವರಲ್ಲಿ ಯುವಕರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇದೇ ಕಾರಣಕ್ಕೆ ಕೋರ್ಟ್ ಕೂಡ ಈ ಹಿಂದೆ ಆನ್ಲೈನ್ ಗೇಮಿಂಗ್ ಬ್ಯಾನ್ಗೆ ಆದೇಶಿಸಿತ್ತು. ಆದರೆ ಅದ್ಯಾವುದೋ ಕಾರಣಕ್ಕೆ ಕೋರ್ಟ್ ಕೂಡ ಇದಕ್ಕೆ ಸಮ್ಮತಿ ಸೂಚಿಸಿದಾಗಿನಿಂದಲೂ ಮತ್ತೆ ಆನ್ಲೈನ್ ಗೇಮ್ ಎಂಬ ರಾಕ್ಷಸನ ತೆಕ್ಕೆಗೆ ಯುವ ಪೀಳಿಗೆ ಸಾಗುತ್ತಿದೆ.
ಯಾವುದೇ ಜಾಹೀರಾತು ಮಾಡುವುದಿದ್ದರೂ ಜಾಹೀರಾತು ಕಂಪೆನಿಗಳು ನಟರನ್ನು ಇಲ್ಲವೇ ಕ್ರಿಕೆಟ್ ತಾರೆಯರನ್ನು ತಮ್ಮ ಮೊದಲ ಆಯ್ಕೆ ಮಾಡಿಕೊಳ್ಳುವುದು ಸಹಜ. ಅದರಲ್ಲಿಯೂ ವಿಷಕಾರಿ ಪಾನೀಯವೇ ಇರಲಿ, ಯುವ ಸಮುದಾಯವನ್ನು ಹಾಳು ಮಾಡುವ ಯಾವುದೇ ವಸ್ತುವಿರಲಿ, ಆಟವಿರಲಿ… ಇವುಗಳಿಗೆ ನಟರು ಹಾಗೂ ಕ್ರಿಕೆಟಿಗರನ್ನು ಹಾಕಿಕೊಂಡರೆ ಸುಲಭದಲ್ಲಿ ಯುವಕರು ಮರುಳಾಗುತ್ತಾರೆ ಎನ್ನುವ ಅರಿವು ಜಾಹೀರಾತು ಕಂಪೆನಿಗಳಿಗೆ ಇದೆ. ಅವರು ನೀಡುವ ಕೋಟಿ ಕೋಟಿ ಆಸೆಗೆ ಬಿದ್ದು ನಟರು ಕೂಡ ಇವುಗಳಿಗೆ ರಾಯಭಾರಿಗಳಾಗಿ ಹೋಗುವುದು ಎಲ್ಲರಿಗೂ ತಿಳಿದಿರುವ ವಿಷಯವೇ. ಇದೀಗ ಜನರೇ ಶಾರುಖ್ ವಿರುದ್ಧ ರೊಚ್ಚಿಗೆದ್ದಿದ್ದಾರೆ. ಆನ್ಲೈನ್ ಗೇಮಿಂಗ್ ಆ್ಯಪ್ಗಳು ಯುವಕರನ್ನು ದಾರಿ ತಪ್ಪಿಸುತ್ತವೆ ಮತ್ತು ಭ್ರಷ್ಟಗೊಳಿಸುತ್ತವೆ ಮತ್ತು ಸೆಲೆಬ್ರಿಟಿಗಳು ಅವುಗಳನ್ನು ಸಮರ್ಥಿಸಬಾರದು ಎಂದು ಪ್ರತಿಭಟನಾಕಾರರು ಅಭಿಪ್ರಾಯಪಟ್ಟಿದ್ದಾರೆ.
ಪ್ರತಿಭಟನೆಯ ನೇತೃತ್ವ ವಹಿಸಿರುವ ಸಂಘಟನೆಯ ಅಧಿಕೃತ ಹೇಳಿಕೆಯಲ್ಲಿ, ‘ಪ್ರಸಿದ್ಧ ನಟರು ಮತ್ತು ನಟಿಯರು ಈ ಜಾಹೀರಾತುಗಳಲ್ಲಿ ಕೆಲಸ ಮಾಡುತ್ತಾರೆ ಮತ್ತು ಅವರು ಸಮಾಜವನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಶಾರುಖ್ ಖಾನ್ ಅವರ ಮನ್ನತ್ ಬಂಗಲೆಯ ಹೊರಗೆ ಅನ್ಟಚ್ ಇಂಡಿಯಾ ಫೌಂಡೇಶನ್ ಪರವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಲಾಗಿದೆ. ಹೊಸ ತಲೆಮಾರು ಜಂಗ್ಲಿ ರಮ್ಮಿ ಆಡುವುದರಲ್ಲಿ ತೊಡಗಿಸಿಕೊಂಡಿದೆ. ಯಾರಾದರೂ ಜಂಗ್ಲೀ ರಮ್ಮಿ ಆಡುತ್ತಿದ್ದರೆ ಅಥವಾ ಹೊರಗೆ ಜೂಜಾಡುತ್ತಿದ್ದರೆ, ಪೊಲೀಸರು ಅವರನ್ನು ಬಂಧಿಸುತ್ತಾರೆ, ಆದರೆ ಆನ್ಲೈನ್ ಆಟಗಳನ್ನು ಉತ್ತೇಜಿಸುವ ದೊಡ್ಡ ಬಾಲಿವುಡ್ ತಾರೆಗಳು ಯುವ ಪೀಳಿಗೆಯನ್ನು ದಾರಿ ತಪ್ಪಿಸುತ್ತಿದ್ದಾರೆ. ಇದು ತಪ್ಪು ಎಂದು ಬಾಲಿವುಡ್ ತಾರೆಯರಿಗೂ ಗೊತ್ತಿದೆ, ಆದರೆ ಅವರು ಹಣ ಪಡೆಯುತ್ತಿದ್ದಾರೆ. ಆದ್ದರಿಂದ ಅವರು ಪ್ರಚಾರ ಮಾಡುತ್ತಿದ್ದಾರೆ. ನಾವು ಈ ಸ್ಟಾರ್ಗಳನ್ನು ಅವರ ಚಲನಚಿತ್ರಗಳನ್ನು ನೋಡಿ ನಮ್ಮ ಹಣವನ್ನು ಖರ್ಚು ಮಾಡುವ ಮೂಲಕ ಪ್ರಸಿದ್ಧರಾಗುತ್ತೇವೆ. ಈ ಜಾಹೀರಾತುಗಳನ್ನು ನಿಲ್ಲಿಸಲು ನಾವು ಒತ್ತಾಯಿಸುತ್ತೇವೆ. ಈ ಅಪ್ಲಿಕೇಶನ್ಗಳು ಕಾನೂನುಬಾಹಿರ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.
ನಾವು ಅಜಯ್ ದೇವಗನ್, ರಾಕುಲ್ ಪ್ರೀತ್ ಸಿಂಗ್, ಪ್ರಕಾಶ್ ರಾಜ್, ಅಣ್ಣು ಕಪೂರ್, ರಾಣಾ ದಗ್ಗುಬಾಟಿ ಮತ್ತು ಆನ್ಲೈನ್ ಆಟವನ್ನು ಉತ್ತೇಜಿಸುವ ಕ್ರಿಕೆಟಿಗರನ್ನು ವಿರೋಧಿಸುತ್ತೇವೆ. ಈ ತಾರೆಯರ ಮನೆಗಳ ಹೊರಗೆ ನಾವು ಪ್ರತಿಭಟನೆ ಮಾಡಲು ಬಯಸಿದ್ದೇವೆ, ಆದರೆ ಪೊಲೀಸರು ನಮ್ಮನ್ನು ಬಂಧಿಸಿದ್ದಾರೆ ಎಂದು ಜನ ಆಕ್ರೋಶ ಹೊರಹಾಕುತ್ತಿದ್ದಾರೆ. ಇದರ ನಡುವೆಯೇ ಪೊಲೀಸ್ ಭದ್ರತೆ ಇಷ್ಟೆಲ್ಲಾ ನೀಡುತ್ತಿರುವುದಕ್ಕೆ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮುಂಬೈನಲ್ಲಿ ಮೊದಲೇ ಪೊಲೀಸರ ಕೊರತೆ ಇದೆ. ಇರೋ ಪೊಲೀಸರನ್ನು ಇಂಥವರ ರಕ್ಷಣೆಗೆ ಇಟ್ಟರೆ ದೆಹಲಿಯ ಕಥೆಯೇನು ಕೇಳುತ್ತಿದ್ದಾರೆ
ದೇಶ
ಎಪ್ಸ್ಟೀನ್ ಫೈಲ್ಸ್ನಲ್ಲಿ ಹರ್ದೀಪ್ ಪುರಿ ಹೆಸರು? ಸಂಸತ್ತಿನಲ್ಲಿ ಗದ್ದಲ, ಸಚಿವರ ಸ್ಪಷ್ಟನೆ
ಹೊಸದಿಲ್ಲಿ: ಜಗತ್ತಿನಾದ್ಯಂತ ಸಂಚಲನ ಮೂಡಿಸಿರುವ ಜೆಫ್ರಿ ಎಪ್ಸ್ಟೀನ್ (Jeffrey Epstein) ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕದ ನ್ಯಾಯಾಂಗ ಇಲಾಖೆ ಬಿಡುಗಡೆಗೊಳಿಸಿರುವ ಮಿಲಿಯನ್ಗಟ್ಟಲೆ ಇಮೇಲ್ಗಳು ಮತ್ತು ದಾಖಲೆಗಳು ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿವೆ. ಈ ದಾಖಲೆಗಳಲ್ಲಿ ಕೆಲವು ಭಾರತೀಯರ ಹೆಸರುಗಳು ಕಾಣಿಸಿಕೊಂಡಿರುವುದು ಸಂಸತ್ತಿನಲ್ಲೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಈ ಪಟ್ಟಿಯಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri) ಅವರ ಹೆಸರು ಉಲ್ಲೇಖವಾಗಿರುವುದಾಗಿ ವರದಿಯಾಗುತ್ತಿದ್ದಂತೆಯೇ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸಂಸತ್ತಿನೊಳಗೂ ಹೊರಗೂ ಮಾತನಾಡಿದ ಅವರು, ಎಪ್ಸ್ಟೀನ್ ಪ್ರಕರಣದ ಉಲ್ಲೇಖದೊಂದಿಗೆ ಕೇಂದ್ರ ಸರ್ಕಾರವನ್ನು ಟೀಕಿಸಿದರು.
ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಹರ್ದೀಪ್ ಪುರಿ, “ನಾನು ಜೆಫ್ರಿ ಎಪ್ಸ್ಟೀನ್ ಅವರನ್ನು ಕೆಲವೇ ಬಾರಿ, ಅದೂ ಔಪಚಾರಿಕ ಸಂದರ್ಭಗಳಲ್ಲಿ ಮಾತ್ರ ಭೇಟಿ ಮಾಡಿದ್ದೇನೆ. ಅವರ ಅಕ್ರಮ ಚಟುವಟಿಕೆಗಳಿಗೆ ನನ್ನೊಂದಿಗೆ ಯಾವುದೇ ಸಂಬಂಧವಿಲ್ಲ” ಎಂದು ಸ್ಪಷ್ಟಪಡಿಸಿದರು.
ಮೂರು ಮಿಲಿಯನ್ ಇಮೇಲ್ಗಳಲ್ಲಿ ತಮ್ಮ ಹೆಸರು ಕೇವಲ 3-4 ಬಾರಿ ಮಾತ್ರ ಉಲ್ಲೇಖವಾಗಿದೆ. ನಿಯೋಗದ ಭಾಗವಾಗಿ ಕೆಲ ಸಂದರ್ಭಗಳಲ್ಲಿ ಭೇಟಿಯಾಗಿದ್ದು, ಕೇವಲ ಒಂದು ಇಮೇಲ್ ವಿನಿಮಯ ಮಾಡಿಕೊಂಡಿದ್ದೇನೆ ಅಷ್ಟೇ ಹೊರತು, ಯಾವುದೇ ಅಕ್ರಮ ಸಂಬಂಧ ಇಲ್ಲ ಎಂದು ಹೇಳಿದರು.
ಇದೇ ವೇಳೆ, 2017ರಲ್ಲಿ ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ಭೇಟಿ ಕುರಿತ ಉಲ್ಲೇಖಗಳನ್ನೂ ವಿದೇಶಾಂಗ ಸಚಿವಾಲಯ ತಳ್ಳಿಹಾಕಿದೆ. “ಇದು ಅಧಿಕೃತ ಭೇಟಿಯೇ ಹೊರತು, ಉಳಿದ ಉಲ್ಲೇಖಗಳು ಶಿಕ್ಷೆಗೊಳಗಾದ ಅಪರಾಧಿಯ ವ್ಯರ್ಥ ಕಲ್ಪನೆಗಳಾಗಿವೆ” ಎಂದು ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.
ಎಪ್ಸ್ಟೀನ್ ಫೈಲ್ಸ್ ಪ್ರಕರಣ ಇದೀಗ ಭಾರತೀಯ ರಾಜಕೀಯದಲ್ಲೂ ಚರ್ಚೆಯ ಕೇಂದ್ರಬಿಂದುವಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ರಾಜಕೀಯ ಪ್ರತಿಕ್ರಿಯೆಗಳು ಎದುರಾಗುವ ಸಾಧ್ಯತೆ ಇದೆ.
ಕ್ರೀಡೆ
JAIN UNIVERSITY : ಜೈನ್ ಯುನಿವರ್ಸಿಟಿಯಲ್ಲಿ ಮಹಿಳಾ ಬಾಸ್ಕೆಟ್ಬಾಲ್ ಹಬ್ಬ
ಬೆಂಗಳೂರು, ಫೆ.11: ಕನಕಪುರ ರಸ್ತೆಯ ಜೈನ್ ಯುನಿವರ್ಸಿಟಿ ಗ್ಲೋಬಲ್ ಕ್ಯಾಂಪಸ್ನಲ್ಲಿ ನಡೆಯುತ್ತಿರುವ ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಮಹಿಳಾ ಬಾಸ್ಕೆಟ್ಬಾಲ್ ಚಾಂಪಿಯನ್ಶಿಪ್ನಲ್ಲಿ (All India Inter University Women’s Basketball Championship) ಎರಡನೇ ದಿನದ ಲೀಗ್ ಪಂದ್ಯಗಳು ರೋಚಕತೆಯಿಂದ ಸಾಗಿದವು.
ಮೊದಲ ಪಂದ್ಯದಲ್ಲಿ ಚಂಡೀಗಢ ವಿಶ್ವವಿದ್ಯಾಲಯ 70-59 ಅಂತರದಲ್ಲಿ ಡಿಎವಿ ಇಂಡೋರ್ ತಂಡವನ್ನು ಮಣಿಸಿತು. ಕುಸುಭು (25) ಮತ್ತು ದೀಪ್ಷಿಖಾ (19) ಚಂಡೀಗಢ ತಂಡದ ಪರ ಮಿಂಚಿದರು.
ಎರಡನೇ ಪಂದ್ಯದಲ್ಲಿ ಆತಿಥೇಯ ಜೈನ್ ವಿಶ್ವವಿದ್ಯಾಲಯ 65-25 ಅಂತರದಲ್ಲಿ ಯುನಿವರ್ಸಿಟಿ ಆಫ್ ಕಲ್ಕತ್ತಾ ವಿರುದ್ಧ ಭರ್ಜರಿ ಗೆಲುವು ದಾಖಲಿಸಿತು. ಹರ್ಷಿತಾ (13) ಮತ್ತು ಆದ್ಯಾ ಗೌಡ (10) ಗಮನಾರ್ಹ ಆಟವಾಡಿದರು.
ಮೂರನೇ ಪಂದ್ಯದಲ್ಲಿ ಎಸ್ಆರ್ಎಂ ವಿಶ್ವವಿದ್ಯಾಲಯ 58-15 ಅಂತರದಲ್ಲಿ ಎಂಭಿಎಸ್ಪಿಎಸ್ಯು ಪಟಿಯಾಲಾ ವಿರುದ್ಧ ಜಯ ಸಾಧಿಸಿತು.
ನಾಲ್ಕನೇ ಪಂದ್ಯದಲ್ಲಿ ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ 63-58 ಅಂತರದಲ್ಲಿ ಕ್ರೈಸ್ಟ್ ವಿಶ್ವವಿದ್ಯಾಲಯವನ್ನು ರೋಚಕವಾಗಿ ಸೋಲಿಸಿತು.
ಐದನೇ ಪಂದ್ಯದಲ್ಲಿ ಐಟಿಎಂ ವಿಶ್ವವಿದ್ಯಾಲಯ 65-30 ಅಂತರದಲ್ಲಿ ಎಸ್ಜಿಜಿವಿಎ ಯುನಿವರ್ಸಿಟಿಯನ್ನು ಮಣಿಸಿತು.
ಆರನೇ ಪಂದ್ಯದಲ್ಲಿ ಎಲ್ಎನ್ಐಪಿಇ ವಿಶ್ವವಿದ್ಯಾಲಯ 68-28 ಅಂತರದಲ್ಲಿ ಪಂಡಿತ್ ರವಿ ಶಂಕರ್ ವಿಶ್ವವಿದ್ಯಾಲಯವನ್ನು ಸೋಲಿಸಿತು.
ಇದಕ್ಕೂ ಮೊದಲು ಫೆ.10ರ ಸಂಜೆ ನಡೆದ ಲೀಗ್ ಪಂದ್ಯಗಳಲ್ಲಿ ಚಂಡೀಗಢ ವಿಶ್ವವಿದ್ಯಾಲಯ, ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ ಹಾಗೂ ಎಂಜಿ ಯುನಿವರ್ಸಿಟಿ ಕೊಟ್ಟಾಯಂ ಜಯಗಳಿಸಿದ್ದವು.
ಟೂರ್ನಿಯ ಮುಂದಿನ ಲೀಗ್ ಪಂದ್ಯಗಳು ಹಾಗೂ ನಾಕೌಟ್ ಹಂತದ ಪಂದ್ಯಗಳಿಗೆ ಕ್ರೀಡಾಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ದೇಶ
LATEST : ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಪ್ರಸ್ತಾವನೆ? ರಿಜುಜು ಕಿಡಿ
ನವದೆಹಲಿ: ಸದನಕ್ಕೆ ತಪ್ಪು ಮಾಹಿತಿ ನೀಡಿದ್ದು ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿರುವ ಹಿನ್ನೆಲೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಹಕ್ಕುಚ್ಯುತಿ (Breach of Privilege) ಪ್ರಸ್ತಾವನೆ ಮಂಡಿಸಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜುಜು (Kiren Rijiju) ತಿಳಿಸಿದ್ದಾರೆ.
ಬಜೆಟ್ ಮೇಲಿನ ಚರ್ಚೆ ವೇಳೆ ರಾಹುಲ್ ಗಾಂಧಿ ಕೇಂದ್ರ ಸರ್ಕಾರವು ‘ಭಾರತ ಮಾತೆಯನ್ನು ಮಾರಿಬಿಟ್ಟಿದೆ’ ಎಂದು ಆರೋಪಿಸಿದ್ದರು. ಭಾರತ–ಅಮೆರಿಕ ವಾಣಿಜ್ಯ ಒಪ್ಪಂದವನ್ನು ‘ಸಂಪೂರ್ಣ ಶರಣಾಗತಿ’ ಎಂದು ಟೀಕಿಸಿದ ಅವರು, ದೇಶದ ಶಕ್ತಿ ಸುರಕ್ಷತೆ ಅಮೆರಿಕಕ್ಕೆ ಒಪ್ಪಿಸಲಾಗಿದೆ ಹಾಗೂ ರೈತರ ಹಿತಾಸಕ್ತಿಗಳನ್ನು ರಾಜಿ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಈ ಹೇಳಿಕೆಗಳಿಗೆ ತೀವ್ರ ಪ್ರತಿಕ್ರಿಯೆ ನೀಡಿದ ಕಿರಣ್ ರಿಜುಜು, ರಾಹುಲ್ ಗಾಂಧಿ ಸರ್ಕಾರ ಮತ್ತು ಪ್ರಧಾನಮಂತ್ರಿ ವಿರುದ್ಧ ಸುಳ್ಳು ಹಾಗೂ ಆಧಾರರಹಿತ ಆರೋಪ ಮಾಡಿದ್ದಾರೆ ಎಂದು ಆರೋಪಿಸಿದರು. “ಭಾರತವನ್ನು ಯಾರೂ ಮಾರಲಾರರು, ಖರೀದಿಸಲಾರರು. ಗಂಭೀರ ಆರೋಪ ಮಾಡಲು ನಿಯಮಾನುಸಾರ ಮುಂಚಿತ ನೋಟಿಸ್ ನೀಡಬೇಕು ಮತ್ತು ಪುರಾವೆ ಸಲ್ಲಿಸಬೇಕು. ಆದರೆ ರಾಹುಲ್ ಗಾಂಧಿ ಯಾವುದೇ ಪುರಾವೆ ಇಲ್ಲದೆ ಆರೋಪ ಮಾಡಿದ್ದಾರೆ,” ಎಂದು ರಿಜುಜು ಹೇಳಿದರು.
ಇದಲ್ಲದೆ, ರಾಹುಲ್ ಗಾಂಧಿ ಅವರ ಭಾಷಣದಲ್ಲಿ ದಾಖಲಾಗಿರುವ ತಪ್ಪು ಹೇಳಿಕೆಗಳು ಮತ್ತು ಅಸಭ್ಯ ಪದಗಳನ್ನು ಸದನದ ದಾಖಲೆಗಳಿಂದ ತೆಗೆದುಹಾಕಬೇಕು ಎಂದು ಅವರು ಒತ್ತಾಯಿಸಿದರು. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ವಿರುದ್ಧವೂ ನೋಟಿಸ್ ಇಲ್ಲದೆ ಗಂಭೀರ ಆರೋಪ ಮಾಡಲಾಗಿದೆ ಎಂದು ರಿಜುಜು ತಿಳಿಸಿದರು.
ಈ ಬೆಳವಣಿಗೆಗಳ ನಡುವೆ ಸಂಸತ್ ಕಲಾಪದಲ್ಲಿ ಮತ್ತಷ್ಟು ರಾಜಕೀಯ ಉದ್ವಿಗ್ನತೆ ಉಂಟಾಗುವ ಸಾಧ್ಯತೆ ಇದೆ.
-
ದೇಶ5 hours agoರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಹಾಡುವುದು ಕಡ್ಡಾಯ
-
ದೇಶ12 hours agoಬಿ.ಕೆ. ಹರಿಪ್ರಸಾದ್ ಅವರನ್ನು ತಕ್ಷಣವೇ ರಾಜ್ಯ ಸಂಪುಟಕ್ಕೆ ಸೇರಿಸಿ ಉಪ ಮುಖ್ಯಮಂತ್ರಿ ಮಾಡಬೇಕು: ರಾಷ್ಟ್ರೀಯ ಅಹಿಂದ ಸಂಘಟನೆ ಆಗ್ರಹ
-
ಚುನಾವಣೆ12 hours agoBENGALURU : ವಾರ್ಡ್ ಮರುವಿಂಗಡಣೆ ವಿರೋಧಿಸಿ ಶಾಸಕ ಎಂ. ಕೃಷ್ಣಪ್ಪ ಹೈಕೋರ್ಟ್ ಅರ್ಜಿ
-
ದೇಶ4 hours agoBIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ
-
ದೇಶ12 hours agoDigital Services Tax: ಡಿಜಿಟಲ್ ತೆರಿಗೆಗೆ ಅಮೆರಿಕದ ವಿರೋಧ ಏಕೆ?
-
ದೇಶ12 hours agoಚರ್ಚೆ ಮುಗಿಯುವವರೆಗೆ ಸದನಕ್ಕೆ ಹಾಜರಾಗಲ್ಲ ಎಂದ ಲೋಕಸಭಾ ಸ್ಪೀಕರ್
-
ಕ್ರೀಡೆ5 hours agoT20 WORLD CUP : ಡಬಲ್ ಸೂಪರ್ ಓವರ್ನಲ್ಲಿ ದಕ್ಷಿಣ ಆಫ್ರಿಕಾದ ರೋಚಕ ಗೆಲುವು
-
ಅಪರಾಧ4 hours agoBENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ
