Connect with us

ಬೆಂಗಳೂರು

ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಮಾತಿಗೆ ಮತ್ತಷ್ಟು ರೆಕ್ಕೆ-ಪುಕ್ಕ

ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಮಾತಿಗೆ ಮತ್ತಷ್ಟು ರೆಕ್ಕೆ-ಪುಕ್ಕ

ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಮಾತಿಗೆ ಮತ್ತಷ್ಟು ರೆಕ್ಕೆ-ಪುಕ್ಕ

ಹೋಗಲ್ಲ ಹಾಗಲ್ಲ ಹೀಗಲ್ಲ ಎನ್ನುತ್ತಲೇ ಬಾಂಬೆ ಶಾಸಕರ ತವರು ಪಕ್ಷದ ಮೋಹ ಹೆಚ್ಚಾಗುತ್ತಿದೆ. ಸೋಮಶೇಖರ್ ಸಿಎಂ ಭೇಟಿ ಬಳಿಕ ಇದೀಗ ಸಿದ್ದರಾಮಯ್ಯ ಭೇಟಿ ಮಾಡಿ ಚರ್ಚೆಗೆ ನಾಂದಿ ಹಾಡಿದ್ದು ಯಲ್ಲಾಪುರದ ಶಾಸಕರು. ಬಾಂಬೆ ತಂಡದ ಖಾಯಂ ಸದಸ್ಯರಾಗಿದ್ದ ಶಿವರಾಮ್ ಹೆಬ್ಬಾರ್ ಕೂಡ ಈಗ ಎತ್ತ ಮುಖ ಮಾಡಿದ್ದಾರೆ ಎಂಬುದಕ್ಕೆ ಸಿಎಂ ಭೇಟಿ ಉತ್ತರ ಕೊಟ್ಟಿದೆ. ಇದರೊಂದಿಗೆ ಬಾಂಬೆ ಫ್ರೆಂಡ್ಸ್‌ ಕಾಂಗ್ರೆಸ್ ಸೇರುವ ಮಾತಿಗೆ ಮತ್ತಷ್ಟು ರೆಕ್ಕೆ-ಪುಕ್ಕ ಮೂಡಿವೆ.

ಬಾಂಬೆ ಶಾಸಕರು ಮತ್ತೆ ತವರು ಮನೆಯ ಕದವನ್ನು ತಟ್ಟುತ್ತಿರುವ ಸುದ್ದಿ ಹಳೆಯದೇನೂ ಅಲ್ಲ. ಆಪರೇಷನ್ ಹಸ್ತದ ಚಟುವಟಿಕೆ ಗುಟ್ಟಾಗಿಯೂ ಉಳಿದಿಲ್ಲ. ಎಸ್.ಟಿ ಸೋಮಶೇಖರ್  ಕಳೆದ ವಾರವಷ್ಟೇ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಬಿಜೆಪಿ ಬಿಟ್ಟು ವಾಪಸ್‌ ಕಾಂಗ್ರೆಸ್‌ಗೆ ತೆರಳುವ ಸುದ್ದಿಗೆ ಮತ್ತಷ್ಟು ಜೀವ ಬರುವಂತೆ ಮಾಡಿತ್ತು. ಇದೀಗ ಮತ್ತೊಬ್ಬ ಬಾಂಬೆ ಫ್ರೆಂಡ್ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಕೂಡ ಮತ್ತೆ ಸೋಮಶೇಖರ್ ಹಾದಿಯನ್ನೇ ತುಳಿದಿದ್ದಾರ. ಶಿವರಾಮ್ ಹೆಬ್ಬಾರ್ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಹೆಬ್ಬಾರ್ ಕೂಡ  ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ ಎಂಬುದಕ್ಕೆ ಇದು ಬಲವಾದ ಪುಷ್ಟಿ ನೀಡಿದೆ. ಬಿಜೆಪಿಯ ಉಳಿದ ಶಾಸಕರಿಗೆ ಇಲ್ಲದ ಕ್ಷೇತ್ರದ ಕೆಲಸಗಳು ಬಾಂಬೆ ಫ್ರೆಂಡ್ಸ್ ಖ್ಯಾತಿಯ ಶಾಸಕರಿಗೆ ಮಾತ್ರ ಸಿಎಂ ಸಿದ್ದರಾಮಯ್ಯ ಬಳಿ ಹೆಚ್ಚಾಗಿ ನಡೆಯುತ್ತಿರುವುದು ಎಲ್ಲ ಅನುಮಾನಗಳಿಗೂ ಎಡೆಮಾಡಿಕೊಟ್ಟಿದೆ. ಮುಂಬರುವ ದಿನಗಳಲ್ಲಿ ಶಿವರಾಂ ಹೆಬ್ಬಾರ್ ಕೂಡ ಕಾಂಗ್ರೆಸ್ ಕಡೆ ಮುಖ ಮಾಡುವುದಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ಅಡಿಪಾಯ ಹಾಕಿದಂತಿದೆ.  ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ಈಗಾಗಲೇ ಬಿಜೆಪಿಯಿಂದ ಒಂದು ಕಾಲು ಹೊರಗಿಟ್ಟಿದ್ದಾರೆ. ಎಸ್‌ಟಿಎಸ್ ಅವರ ಆಪ್ತರು, ಅನೇಕ ಬೆಂಬಲಿಗರು ಈಗಾಗಲೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ… ಯಾವಾಗ ಬೇಕಾದ್ರೂ ಎಸ್‌ಟಿ.ಸೋಮಶೇಖರ್ ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ. ಇದ್ರ ಬೆನ್ನಲ್ಲೇ ಎಸ್‌ಟಿ ಸೋಮಶೇಖರ್ ಕ್ಷೇತ್ರದ ಮೇಲೆ ಡಿಸಿಎಂ ಡಿಕೆಶಿವಕುಮಾರ್‌ಗೂ ಪ್ರೀತಿ ಹೆಚ್ಚಾಗಿದೆ. ನಿನ್ನೆ(ಆಗಸ್ಟ್ 26) ಯಶವಂತಪುರ ಕ್ಷೇತ್ರದ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. 

ಇನ್ನೊಂದೆಡೆ ಸ್ವಪಕ್ಷೀಯ ನಾಯಕರ ವಿರುದ್ಧ ಎಸ್.ಟಿ.ಸೋಮಶೇಖರ್ ಮತ್ತೆ ಬಹಿರಂಗವಾಗಿ ಟೀಕಿಸಿದ್ದಾರೆ. ಬಿಜೆಪಿಯಲ್ಲಿ ಬೂದಿಮುಚ್ಚಿದ ಕೆಂಡದಂಥ ಪರಿಸ್ಥಿತಿ ಇರುವುದು ನಿಜ ಎಂದು ಹೇಳಿರುವುದು ಅಚ್ಚರಿಕೆ ಕಾರಣವಾಗಿದೆ. ಇದೆ ವೇಳೆ ನನ್ನ ರಾಜಕೀಯ ಬೆಳವಣಿಗೆಗೆ ಡಿ.ಕೆ.ಶಿವಕುಮಾರ್ ಕಾರಣ ಅಂತಲೂ ಬಣ್ಣಿಸಿದ್ದಾರೆ.

ಇನ್ನು ಯಶವಂತಪುರದ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಡಿಕೆಶಿ ಮಾತನಾಡಿ, ನನ್ನ, ಸೋಮಶೇಖರ್ ಸಂಬಂಧ ಇಂದಿನದ್ದಲ್ಲ, 35 ವರ್ಷ ಹಳೆಯದ್ದು. ನಾವು ಬಿತ್ತಿದ ಬೀಜ, ನಾವು ಗೊಬ್ಬರ ಹಾಕಿದ ಗಿಡ ಈಗ ಮರವಾಗಿದೆ.. ಹಣ್ಣನ್ನು ಬೇರೆಯವರು ಕಿತ್ತು ತಿನ್ನಬಾರದೆಂದು ಇಲ್ಲಿಗೆ ಅವರ ಜತೆ ಬಂದಿರುವೆ ಅಂತೇಳಿದ್ದಾರೆ.

ಎಸ್.ಟಿ ಸೋಮಶೇಖರ್ ಮನವಿ ಮೇರೆಗೆ ಡಿಸಿಎಂ ಡಿಕೆಶಿವಕುಮಾರ್ ಇಂದು ಕನಕಪುರ ರಸ್ತೆಯ ಯಶವಂತಪುರ ಕ್ಷೇತ್ರದ ರೆಸಿಡೆನ್ಶಿಯಲ್ ಅಸೋಸಿಯೇಷನ್‌ಗಳ ಅಹವಾಲು ಆಲಿಸಲಿದ್ದಾರೆ. ಈ ಮೂಲಕ ಸೋಮಶೇಖರ್ ಕೂಡ ಕಾಂಗ್ರೆಸ್ ಸೇರ್ಪಡೆಗೆ ಬೇಕಾದ ವೇದಿಕೆಯನ್ನು ಕನಕಪುರ ರಸ್ತೆಯಿಂದಲೇ ಗಟ್ಟಿ ಮಾಡಿಕೊಳ್ಳುವಂತೆ ಕಾಣುತ್ತಿದೆ.

ಸದ್ಯಕ್ಕೆ ಆಪರೇಷನ್ ಹಸ್ತದ ತಂತ್ರಗಾರಿಕೆಗೆ ಸೋಮಶೇಖರ್ ಹಾಗೂ ಹೆಬ್ಬಾರ್ ತಾವೇ ಒಳಗಾದಂತೆ ಕಾಣುತ್ತಿದೆ. ಬರುವವರೆಲ್ಲ ಬರಲಿ ಎಂಬ ಮಾತಿನ ಮೂಲಕ ಉಳಿದ ನಾಯಕರಿಗೆ ಸಿದ್ದರಾಮಯ್ಯ, ಡಿ.ಕೆಶಿವಕುಮಾರ್ ಜೋಡಿ ರೆಡ್ ಕಾರ್ಪೇಟ್ ಹಾಕುತ್ತಿರುವುದು ಸ್ಪಷ್ಟ.

ಬೆಂಗಳೂರು

ಕಾಲ್ತುಳಿತ ದುರಂತ ಬಗ್ಗೆ ಮಾಹಿತಿ ನೀಡುವ ಸಾರ್ವಜನಿಕರಿಗೆ ಜೂ.​ 24 ಕೊನೆಯ ದಿನ: ನಿವೃತ್ತ ನ್ಯಾಯಾಧೀಶರಿಂದ ಜಾಹೀರಾತು

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವು ಸಂಬಂಧ ನಿವೃತ್ತ ನ್ಯಾಯಮೂರ್ತಿ ಜಾನ್​ ಮೈಕಲ್​ ಕುನ್ಹಾ ನೇತೃತ್ವದ ಏಕಸದಸ್ಯ ಆಯೋಗವು ವಿಚಾರಣೆ ಚುರುಕುಗೊಳಿಸಿದೆ. ಈ ನಿಟ್ಟಿನಲ್ಲಿ ದುರ್ಘಟನೆ ಬಗ್ಗೆ ಮಾಹಿತಿ ನೀಡಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿದೆ.

ಜೂನ್ 4ರಂದು ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದರೆ ಹಾಗೂ 50ಕ್ಕಿಂತ ಹೆಚ್ಚು ಮಂದಿ ಗಾಯಗೊಂಡಿದ್ದರು. ರಾಜ್ಯ ಸರ್ಕಾರವು ಮ್ಯಾಜಿಸ್ಟ್ರೇಟ್, ಸಿಐಡಿ ಹಾಗೂ ನಿವೃತ್ತ ನ್ಯಾಯಾಧೀಶರಾದ ಕುನ್ನಾ ಅವರ ನೇತೃತ್ವದ ಆಯೋಗ ರಚಿಸಿದೆ. ಈ ಸಂಬಂಧ ಪ್ರತ್ಯೇಕ ತನಿಖೆ ನಡೆಸುತ್ತಿದೆ. ದುರ್ಘಟನೆ ವೇಳೆ ಘಟನೆಯ ವಾಸ್ತವಾಂಶದ ವಿವರಗಳು, ಮಾಹಿತಿ ಹಾಗೂ ಸತ್ಯ ಸಂಗತಿಗಳ ತಿಳಿದಿರುವ ಸಾರ್ವಜನಿಕರು ಆಯೋಗಕ್ಕೆ ತಿಳಿಸಬಹುದಾಗಿದೆ.

ತನಿಖಾ ಆಯೋಗಕ್ಕೆ ಹೇಳಿಕೆ ನೀಡಲು ಹಾಗೂ ಸಾಕ್ಷ್ಯ ದಾಖಲೆಗಳನ್ನು ಒದಗಿಸಲು ಇಚ್ಛಿಸುವವರು ಎರಡು ಪ್ರತಿಗಳಲ್ಲಿ ದೃಢೀಕೃತ ಪ್ರಮಾಣ ಪತ್ರದೊಂದಿಗೆ ಸಲ್ಲಿಸಬಹುದಾಗಿದೆ. ಜೂನ್ 24ರ ಒಳಗೆ ಸಹಿ ಮಾಡಿದ ಹಾಗೂ ಸ್ಕ್ಯಾನ್ ಮಾಡಿದ ಪ್ರಮಾಣಪತ್ರ ಹಾಗೂ ದಾಖಲೆಗಳೊಂದಿಗೆ cdinqcom@gmail.com ಕಳುಹಿಸಬೇಕು.

ಅಲ್ಲದೇ ಕೊಠಡಿ ಸಂಖ್ಯೆ 12, ಒಂದನೇ ಮಹಡಿ, ಹಳೆಕಟ್ಟಡ, ಕುಮಾರಕೃಪಾ ಅತಿಥಿ ಗೃಹ, ಬೆಂಗಳೂರು-560001. ಈ ಕಚೇರಿ ವಿಳಾಸಕ್ಕೆ ಕೊರಿಯರ್ ಮಾಡಬಹುದಾಗಿದೆ ಎಂದು ದಿನಪತ್ರಿಕೆಗಳಲ್ಲಿ ಒಳಾಡಳಿತ ಇಲಾಖೆಯು ಜಾಹೀರಾತು ನೀಡಿದೆ

Continue Reading

ಬೆಂಗಳೂರು

 ಇಂದು ಶ್ರೀನಿವಾಸಪುರ ತಾಲೂಕು ಬಂದ್

ಕೋಲಾರ: ಹಣ್ಣುಗಳ ರಾಜ ಮಾವಿನ ಹಣ್ಣಿಗೆ (Mango) ಬೆಲೆ ಕುಸಿದ ಹಿನ್ನೆಲೆ ಇಂದು ಕೋಲಾರದ (Kolar) ಶ್ರೀನೀವಾಸಪುರ (Srinivaspur) ತಾಲೂಕು ಬಂದ್‌ಗೆ ಕರೆ ನೀಡಲಾಗಿದೆ.

ಮಾವು ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಬಂದ್‌ಗೆ ಕರೆ ನೀಡಿದ್ದು, ಮಾವು ಬೆಳೆಗಾರರರು ಸೇರಿದಂತೆ ವಿವಿಧ ಸಂಘಟನೆಗಳು ಬಂದ್‌ಗೆ ಸಾಥ್ ಕೊಟ್ಟಿವೆ. ಮಾವು ಬೆಳೆಗೆ ಬೆಲೆ ಕುಸಿತ ಹಿನ್ನೆಲೆ ಕಂಗಾಲಾಗಿರುವ ಮಾವು ಬೆಳೆಗಾರರು, ಆಂದ್ರಪ್ರದೇಶ ಮಾದರಿಯಲ್ಲಿ ರಾಜ್ಯ ಸರ್ಕಾರ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಬಂದ್‌ಗೆ ಕರೆ ಕೊಡಲಾಗಿದೆ. ಮಾವು ಬೆಳೆಗಾರರ ಬಂದ್‌ಗೆ ಬಿಜೆಪಿ, ಜೆಡಿಎಸ್ ಸೇರಿ ಹಲವು ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ. ಒಂದು ಟನ್ ಮಾವು 3 ರಿಂದ 4 ಸಾವಿರ ರೂ.ಗೆ ಮಾರಾಟ ಮಾಡಲಾಗುತ್ತಿದೆ. ಸರ್ಕಾರ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಲಾಗಿದೆ.

ಇನ್ನು ಶ್ರೀನಿವಾಸಪುರದಲ್ಲಿ ಮಾವು ರಸ್ತೆಯಲ್ಲಿ ಸುರಿದು ರೈತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ರೀನಿವಾಸಪುರದ ಬಸ್ ನಿಲ್ದಾಣದಲ್ಲಿ ಮಾವು ರಸ್ತೆಯಲ್ಲಿ ಸುರಿದು ಪ್ರತಿಭಟನೆ ನಡೆಸಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

Continue Reading

ಬಿಬಿಎಂಪಿ

ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತಾ ಕಡ್ಡಾಯ: ಜು.1ರಿಂದ ಹೊಸ ನಿಯಮ ಜಾರಿಗೆ..!

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಸ್ವತ್ತುಗಳು ಇ-ಖಾತಾ ಪಡೆದಿರುವುದನ್ನು ಕಡ್ಡಾಯಗೊಳಿಸಿ ಬಿಬಿಎಂಪಿ ಆದೇಶಿಸಿದೆ.

ಈ ಸಂಬಂಧ ಸೋಮವಾರ ಆದೇಶ ಹೊರಡಿಸಿರುವ ಮುಖ್ಯ ಆಯುಕ್ತ ಮಹೇಶ್ವರ್ ರಾವ್‌ ಅವರು, ಕಂದಾಯ ವಿಭಾಗದಿಂದ ಇ-ಆಸ್ತಿ ತಂತ್ರಾಂಶವನ್ನು ಜಾರಿ ಮಾಡಲಾಗಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಈಗಾಗಲೇ ಇ-ಖಾತಾ ನೀಡಲಾಗುತ್ತಿದೆ. ಆದುದರಿಂದ ಸ್ವತ್ತುಗಳ ದತ್ತಾಂಶವು ಇ-ಆಸ್ತಿ ತಂತ್ರಾಂಶದಲ್ಲಿ ಲಭ್ಯವಿರುತ್ತದೆ ಎಂದು ಹೇಳಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮತ್ತು ವಿತರಣೆ ವ್ಯವಸ್ಥೆ ಮಾಡಲಾಗಿದೆ. ಅದರ ಜತೆಗೆ ಸ್ವತ್ತುಗಳಿಗೆಇ-ಖಾತಾವನ್ನು ಆನ್‌ಲೈನ್‌ಮೂಲಕ ನೀಡಲಾಗುತ್ತಿದೆ. ಇದೀಗ ಎರಡೂ ತಂತ್ರಾಂಶವನ್ನು ಏಕೀಕರಣಗೊಳಿಸಲಾಗುತ್ತಿದೆ. ಹೀಗಾಗಿ ಕಟ್ಟಡನಕ್ಷೆ ಮಂಜೂರಾತಿಗೆ ಅರ್ಜಿಸಲ್ಲಿ ಸುವವರು ಮೊದಲು ಇ- ಖಾತಾವನ್ನು ಪಡೆದಿರಬೇಕಿದೆ.

ಹೀಗಾಗಿ ಜು. 1ರಿಂದ ನಕ್ಷೆ ಮಂಜೂರಾತಿಗೆ ಅರ್ಜಿ ಸಲ್ಲಿಸುವವರುಇ-ಖಾತಾ ಅಥವಾ ಇಪಿಐಡಿ ಸಂಖ್ಯೆಯನ್ನು ತಂತ್ರಾಂಶದಲ್ಲಿ ನಮೂದಿಸುವುದು ಹಾಗೂ ಇ- ಖಾತಾ ಸಲ್ಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇ-ಖಾತಾ ಸಲ್ಲಿಸದ ಅರ್ಜಿಗಳನ್ನು ಕಟ್ಟಡ ನಕ್ಷೆ ಮಂಜೂರಾತಿಗೆ ಪರಿಗಣಿಸದಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇನ್ನು, ನಂಬಿಕೆಯೊಂದಿಗೆ ಪರಿಶೀಲನೆ ವ್ಯವಸ್ಥೆ ಅಡಿಯಲ್ಲಿ ನಿಗದಿತ ಕಾಲಮಿತಿಯಲ್ಲಿ ತಾತ್ಕಾಲಿಕ ನಕ್ಷೆ ಮಂಜೂರಾತಿ ಹೊಣೆಯನ್ನು ಸಂಬಂಧಪಟ್ಟ ಸಹಾಯಕ ನಿರ್ದೇಶಕ (ನಗರ ಯೋಜನೆ) ಅವರಿಗೆ ನೀಡಲಾಗಿದೆ. ಒಂದು ವೇಳೆ ಸಹಾಯಕ ನಿರ್ದೇಶಕ (ನಗರ ಯೋಜನೆ) ನಿಗದಿತ ಕಾಲ ಮಿತಿಯಲ್ಲಿ ಅರ್ಜಿಗಳನ್ನು ಪರಿಶೀಲಿಸದಿದ್ದರೆ ತಂತ್ರಾಶದಲ್ಲಿ ಅರ್ಜಿಗಳಿಗೆ ಸ್ವಯಂಚಾಲಿತವಾಗಿ ಡೀಮ್ಡ್ ಅನುಮೋದನೆ ದೊರೆಯಲಿದೆ.

ಒಂದು ವೇಳೆ ನಕ್ಷೆ ಮಂಜೂರಾತಿ ಅರ್ಜಿಗಳು ಇ-ಖಾತಾ ಸೇರಿದಂತೆ ಇನ್ನಿತರ ದಾಖಲೆಗಳನ್ನು ಸಲ್ಲಿಸದೇ ಡೀಮ್ ಅನುಮೋದನೆ ದೊರೆತರೆ, ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆ ಮಾಡಿ ನಿಯಮದ ಪ್ರಕಾರ ಶಿಸ್ತು ಕ್ರಮಕೈಗೊಳ್ಳುವುದಾಗಿ ಆದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ.

5 ಲಕ್ಷ ನಾಗರಿಕರಿಗೆ ಅಂತಿಮ ಇ-ಖಾತಾ ವಿತರಣೆ

ಬಿಬಿಎಂಪಿ ಪಾಲಿಕೆ ವ್ಯಾಪ್ತಿಯಲ್ಲಿ ಈವರೆಗೂ 5 ಲಕ್ಷ ನಾಗರಿಕರು ಅಂತಿಮ ಇ-ಖಾತಾ ಪಡೆದಿದ್ದಾರೆ ಎಂದು ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್‌ ಮೌದ್ಗಿಲ್ ತಿಳಿಸಿದ್ದಾರೆ.

25 ಲಕ್ಷಕ್ಕಿಂತ ಹೆಚ್ಚು ಕರಡು ಇ-ಖಾತಾಗಳು ಆನ್‌ಲೈನ್‌ನಲ್ಲಿ ಲಭ್ಯವಿದೆ. ನಾಗರಿಕರು ತಮ್ಮ ಆಧಾರ್‌ ಸಂಖ್ಯೆ, ಮಾರಾಟ ದಸ್ತಾವೇಜಿನ ಸಂಖ್ಯೆ, ಆಸ್ತಿಯ ತೆರಿಗೆ ಐ.ಡಿ, ಬೆಸ್ಕಾಂ ಸಂಖ್ಯೆ (ಖಾಲಿ ಜಾಗಕ್ಕೆ ಐಚ್ಛಿಕ) ಮತ್ತು ಆಸ್ತಿಯ ಫೋಟೋ ಹಾಕಬೇಕು. ಈ ಮಾಹಿತಿಗಳನ್ನು ನೀಡಿದ ನಂತರ ನಾಗರಿಕರಿಗೆ ಅಂತಿಮ ಇ-ಖಾತಾ ಕನಿಷ್ಠ 1 ರಿಂದ 2 ದಿನಗಳಲ್ಲಿ ಲಭ್ಯವಾಗಲಿದೆ ಎಂದು ಹೇಳಿದ್ದಾರೆ.

ಪ್ರತಿದಿನ ಸುಮಾರು 3,000 ಜನರು ಈ ಪ್ರಕ್ರಿಯೆ ನಡೆಸುತ್ತಿದ್ದಾರೆ. ಮತ್ತು ಇಷ್ಟೇ ಸಂಖ್ಯೆಯವರಿಗೆ ಇ-ಖಾತಾ ಅನುಮೋದನೆ ದೊರೆಯುತ್ತಿದೆ. ಈವರೆಗೆ ಸುಮಾರು 5 ಲಕ್ಷ ನಾಗರಿಕರು ತಮ್ಮ ಇ-ಖಾತಾ ಪಡೆದುಕೊಂಡಿದ್ದಾರೆ. ಅರ್ಜಿ ಸಲ್ಲಿಕೆಯಾದ 1 ರಿಂದ 2 ದಿನಗಳಲ್ಲಿ ಇ-ಖಾತಾ ಅನುಮೋದಿತವಾಗಲಿದೆ. ನಾಗಕರಿರು ಇ-ಖಾತಾವನ್ನು ಆನ್‌ಲೈನ್‌ BBMPeAasthi.karnataka.gov.in ಮೂಲಕ ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ

Continue Reading

Trending