Connect with us

ಬೆಂಗಳೂರು

ನಾವು ಯಾವುದನ್ನೂ ಮುಚ್ಚಿ ಹಾಕುವುದಿಲ್ಲ, ಎಲ್ಲ ಪ್ರಕರಣಗಳ ತನಿಖೆ ನಡೆಯುತ್ತದೆ’ – G Parameshwar

ಬೆಂಗಳೂರು: “ನಾವು ಯಾವುದನ್ನೂ ಮುಚ್ಚಿ ಹಾಕೋದಿಲ್ಲ, ಎಲ್ಲದರ ತನಿಖೆ ನಡೆಯುತ್ತೆ. ಈಗಾಗಲೇ ಇದರ ಬಗ್ಗೆ ಸಿಎಂ‌ ಸ್ಪಷ್ಟೀಕರಣ ಕೊಟ್ಟಿದ್ದಾರೆ” ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಇಂದು ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಮುಡಾ ಪ್ರಕರಣ ಮುಚ್ಚಿ ಹಾಕಲು ಹುನ್ನಾರ ಎಂಬ ಬಿಜೆಪಿ, ಹೆಚ್​ಡಿಕೆ ಆರೋಪಗಳ ಕುರಿತು ಪ್ರತಿಕ್ರಿಯಿಸಿದರು.

“ಸಿಎಂ ಆಗಲು ಪೈಪೋಟಿ ನಡೆಸುತ್ತಿರುವವರು ಮುಡಾ ಪ್ರಕರಣವನ್ನು ಬಯಲಿಗೆ ತಂದಿದ್ದಾರೆ ಎಂಬ ಹೆಚ್​ಡಿಕೆ ಹೇಳಿಕೆ ಬಗ್ಗೆಯೂ ನನಗೆ ಗೊತ್ತಿಲ್ಲ. ಮುಡಾ ಪ್ರಕರಣದಲ್ಲಿ ಇಲಾಖೆ ತನಿಖೆ ನಡೆಯುತ್ತಿದೆ. ಹೀಗಾಗಿ ಎಸ್ಐಟಿ ತನಿಖೆ ಅಗತ್ಯವಿಲ್ಲ. ಈಗಾಗಲೇ ಇದರ ಬಗ್ಗೆ ಸಿಎಂ ಸ್ಪಷ್ಟನೆ ಕೊಟ್ಟಿದ್ದಾರೆ” ಎಂದರು.

ರೇಣುಕಾಸ್ವಾಮಿ ಕೊಲೆ ಪ್ರಕರಣ ತನಿಖೆ ಕುರಿತು ಮಾತನಾಡಿ, “ಆರೋಪಿಗಳನ್ನು ಬಂಧಿಸಲಾಗಿದೆ, ಸಾಕ್ಷ್ಯಗಳ‌ ಸಂಗ್ರಹ ನಡೆಯುತ್ತಿದೆ. ಚಾರ್ಜ್‌ಶೀಟ್ ಹಾಕುತ್ತಾರೆ. ಪ್ರಕರಣದ ತನಿಖೆ ಶೀಘ್ರಗತಿಯಲ್ಲಿ ಮಾಡುವುಂತೆ ಮಾಧ್ಯಮದವರು ಹೇಳಿಬಿಟ್ಟರೆ ಆಗುತ್ತಾ? ಅದಕ್ಕೇ ಆದಂಥ ನಿಯಮ, ಪ್ರಕ್ರಿಯೆಗಳಿವೆ. ಅಗತ್ಯ ಸಾಕ್ಷ್ಯ ಸಂಗ್ರಹಿಸಿ ಚಾರ್ಜ್‌ಶೀಟ್ ಹಾಕ್ತಾರೆ. ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಅಗತ್ಯ ಇಲ್ಲ, ಮಾಡೋದೂ ಇಲ್ಲ” ಎಂದು ಸ್ಪಷ್ಟಪಡಿಸಿದರು.

ಗ್ಯಾರಂಟಿಗಳಿಂದ ಆರ್ಥಿಕ ವಿಪತ್ತು, ಗ್ಯಾರಂಟಿ ರದ್ದಿಗೆ ಸೂಚಿಸಿ ಎಂದು ಕೇಂದ್ರಕ್ಕೆ ಯತ್ನಾಳ್ ಪತ್ರ ಬರೆದ ವಿಚಾರವಾಗಿ ಮಾತನಾಡಿ, “ರಾಜ್ಯದ ಆಡಳಿತ ನಡೆಸಲು ಜನ ನಮ್ಮನ್ನು ಆರಿಸಿರುವುದು, ಅವರನ್ನಲ್ಲ. ಕೇಂದ್ರದಲ್ಲಿ ಅವರಿಗೆ ಆಡಳಿತ ನಡೆಸಲು ಜನ ಅವಕಾಶ ಕೊಟ್ಟಿದ್ದಾರೆ. ಅವರು ಅಲ್ಲಿ, ನಾವು ಇಲ್ಲಿ ಆಡಳಿತ ನಡೆಸುತ್ತೇವೆ. ಪತ್ರ ಬರೆದಿದ್ದಾರೆ, ಕೇಂದ್ರದ ನಿರ್ದೇಶನ ಬರಲಿ, ಆಮೇಲೆ ನೋಡುತ್ತೇವೆ. ಗ್ಯಾರಂಟಿಗಳಿಂದ ಆರ್ಥಿಕ ಮುಗ್ಗಟ್ಟು ಇದೆ ಅನ್ನೋದು ಬಿಜೆಪಿಯವರ ಆರೋಪ. ಅದನ್ನು ಆಡಳಿತ ನಡೆಸುವ ನಾವು ಹೇಳಿಲ್ಲವಲ್ಲ. ನಾವು ನಮ್ಮ ಆರ್ಥಿಕ ವ್ಯವಸ್ಥೆಯಲ್ಲಿ ಏನು ಮಾಡಬೇಕೋ ಅದಕ್ಕಾಗಿ ಗ್ಯಾರಂಟಿ ಜಾರಿ ಮಾಡಿದ್ದೇವೆ. ಸಮಸ್ಯೆ ಏನಾದರೂ ಬಂದರೆ ಅದನ್ನು ಪರಿಹರಿಸುವ ಜವಾಬ್ದಾರಿ ನಮ್ಮದೇ. 58 ಸಾವಿರ ಕೋಟಿ ರೂ. ಹಣವನ್ನು ನಾವು ಗ್ಯಾರಂಟಿಗಳಿಗೆ ಖರ್ಚು ಮಾಡುತ್ತಿದ್ದೇವೆ. ಗ್ಯಾರಂಟಿಗಳ ಸಾಧಕ-ಬಾಧಕ ನಾವೇ ನೋಡಿಕೊಳ್ಳುತ್ತೇವೆ. ಇದರಲ್ಲಿ ಬಿಜೆಪಿಯವರ ಸಲಹೆ ಸೂಚನೆ ನಮಗೆ ಬೇಕಾಗಿಲ್ಲ” ಎಂದು ತಿರುಗೇಟು ನೀಡಿದರು.

ಅಕ್ಕಿ ಖರೀದಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂಬ ಜೋಶಿ ಟೀಕೆ ಕುರಿತು ಪ್ರತಿಕ್ರಿಯಿಸಿ, “ಮಾನ್ಯ ಜೋಶಿಯವರು ಪತ್ರ ಬರೆಯಲಿ. ನಾವು ಅವರ ಪತ್ರಕ್ಕೆ ಯಾವ ರೀತಿ ಸ್ಪಂದಿಸುತ್ತೇವೆ ಎನ್ನುವುದು ಅವರಿಗೆ ಗೊತ್ತಾಗುತ್ತೆ” ಎಂದು ಟಾಂಗ್ ಕೊಟ್ಟರು.

ಸಿಎಂ, ಡಿಸಿಎಂ ಚರ್ಚೆಗೆ ಫುಲ್ ಸ್ಟಾಪ್ ಹಾಕಿ ಎಂದು ಹೈಕಮಾಂಡ್ ಸಂದೇಶ ಬಂದಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿ, “ಮೊನ್ನೆ ನಾವೆಲ್ಲಾ ದೆಹಲಿಗೆ ಹೋಗಿದ್ದೆವು. ಆಗ ಹೈಕಮಾಂಡ್​ ಆ ವಿಚಾರವಾಗಿ ಏನೂ ಮಾತಾಡಲೇ ಇಲ್ಲ. ಒಳ್ಳೆಯ ಕೆಲಸ ಮಾಡ್ತಿದ್ದೀರಿ ಅಂತ ನಮಗೆ ಶಹಬ್ಬಾಸ್‌ಗಿರಿ ಕೊಟ್ಟು ಕಳಿಸಿದ್ರು” ಎಂದರು.

ಬೆಂಗಳೂರು

ಸು ಫ್ರಮ್ ಸೋ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಕಲೆಕ್ಷನ್ ಸೆನ್ಸೇಷನ್: ಶ್ರಾವಣದ ಹಬ್ಬಕ್ಕೂ ಮುನ್ನ ಧನಲಕ್ಷ್ಮೀ ವರ!

ಬೆಂಗಳೂರು: ಶ್ರಾವಣ ತಿಂಗಳು ಅಂದ್ರೆ ಬಂಗಾರದ ತಿಂಗಳು. ಮನೆಮಾಲೀಕರಿಗೆ ವರಮಹಾಲಕ್ಷ್ಮೀ ಹಬ್ಬ, ಕನ್ನಡ ಚಿತ್ರರಂಗಕ್ಕೆ “ಸು ಫ್ರಮ್ ಸೋ” ಚಿತ್ರದ ಯಶಸ್ಸು! ರಾಜ್ ಬಿ.ಶೆಟ್ಟಿ ಅಭಿನಯದ ಈ ಹಾರರ್-ಕಾಮಿಡಿ ಸಿನಿಮಾ ಇದೀಗ ಮೂರನೇ ವಾರದಲ್ಲೂ ಭರ್ಜರಿಯಾಗಿ ಓಡುತ್ತಿದ್ದು, ಬಾಕ್ಸ್ ಆಫೀಸ್‌ನಲ್ಲಿ ಹವಾ ಸೃಷ್ಟಿಸಿದೆ.

ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಉತ್ತಮ ಕಂಟೆಂಟ್ ಹೊಂದಿರುವ ಸಿನಿಮಾಗಳಿಗೆ ಅಭಿಮಾನಿಗಳ ಮೆಚ್ಚುಗೆ ಹೆಚ್ಚಾಗುತ್ತಿದೆ. ‘ಎಕ್ಕ’, ‘ಜೂನಿಯರ್’ ನಂತರ ‘ಸು ಫ್ರಮ್ ಸೋ’ ಕೂಡ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
75 ಲಕ್ಷ ಬಜೆಟ್‌ನಲ್ಲಿ ತಯಾರಾದ ಈ ಸಿನಿಮಾ ಈಗಾಗಲೇ ₹25 ಕೋಟಿ ಕಲೆಕ್ಷನ್ ಮಾಡಿದ್ದು, ಶೀಘ್ರದಲ್ಲೇ ₹50 ಕೋಟಿ ಕ್ಲಬ್ ಸೇರುವ ಲಕ್ಷಣವಿದೆ.

ಮುಂಬೈ, ದೆಹಲಿ, ಚೆನ್ನೈ, ಹೈದರಾಬಾದ್, ಕೇರಳ ಹಾಗೂ ವಿದೇಶಗಳಲ್ಲೂ ರಿಲೀಸ್ ಆದ ಈ ಸಿನಿಮಾ ಎಲ್ಲೆಡೆ ಹೌಸ್‌ಫುಲ್ ಪ್ರದರ್ಶನ ಪಡೆಯುತ್ತಿದೆ. ರಾಜ್ ಬಿ.ಶೆಟ್ಟಿ ಹಾಗೂ ನಿರ್ದೇಶಕ ಜೆ.ಪಿ. ತುಮಿನಾಡ್ ಅವರ ಶ್ರದ್ಧೆ ಫಲ ನೀಡಿದ್ದು, “ಬಂದರೋ ಬಂದರು.. ಬಾವ ಬಂದರು” ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗುತ್ತಿದೆ.

ಇನ್ನು ಮಲಯಾಳಂ ಡಬ್ಬಿಂಗ್ ಆಗಿ ಆಗಸ್ಟ್ 1ರಂದು ಬಿಡುಗಡೆಗೊಂಡ ‘ಸು ಫ್ರಮ್ ಸೋ’ ಚಿತ್ರ, ಕೊಚ್ಚಿಯಲ್ಲಿ ಒಂದೇ ದಿನ 8 ಸಾವಿರ ಟಿಕೆಟ್ ಮಾರಾಟ ಮಾಡಿದ ದಾಖಲೆ ಸ್ಥಾಪಿಸಿದೆ. ಆದುದರಿಂದ, ಚಿತ್ರದ ಬಯೋಪಿಕ್ ಮತ್ತಷ್ಟು ಭಾಷೆಗಳಿಗೆ ವಿಸ್ತರಿಸುವ ಸಾಧ್ಯತೆ ಇದೆ.

Continue Reading

ಬೆಂಗಳೂರು

ವೇತನ ವಿವಾದದಲ್ಲಿ ಸಿಎಂ ಸ್ಪಷ್ಟನೆ: 14 ತಿಂಗಳ ಹಿಂಬಾಕಿಗೆ ಮಾತ್ರ ಸರ್ಕಾರ ಸಿದ್ಧ

ಬೆಂಗಳೂರು: ಸಾರಿಗೆ ನೌಕರರ 38 ತಿಂಗಳ ವೇತನ ಹಿಂಬಾಕಿ ಪಾವತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. “ಈ ಬೇಡಿಕೆ ಸಮಂಜಸವಲ್ಲ. ಸರ್ಕಾರ ಕೇವಲ 14 ತಿಂಗಳ ಹಿಂಬಾಕಿಗೆ ಸಿದ್ಧ” ಎಂದು ಅವರು ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಂಧಾನ ಸಭೆಯಲ್ಲಿ ತಿಳಿಸಿದ್ದಾರೆ.

2020ರಿಂದ 2023ರ ಫೆಬ್ರವರಿವರೆಗಿನ ಬಾಕಿ ವೇತನ ಪಾವತಿಗೆ ನೌಕರ ಸಂಘಗಳು ಒತ್ತಾಯಿಸಿದ್ದರೊಂದಿಗೆ, 2024ರಿಂದ ನೂತನ ವೇತನವನ್ನೂ ಜಾರಿಗೆ ತರುವಂತೆ ಒತ್ತಾಯಿಸಲಾಗಿದೆ. ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, “ನಿಗಮಗಳ ಆರ್ಥಿಕ ಪರಿಸ್ಥಿತಿ ಮತ್ತು ಹಿಂದಿನ ಸರ್ಕಾರದ ಆದೇಶಗಳ ದೋಷಗಳನ್ನು ಪರಿಗಣಿಸಿ 14 ತಿಂಗಳ ವೇತನ ಹಿಂಬಾಕಿಗೆ ಸಮ್ಮತಿಯಿದೆ,” ಎಂದು ಸ್ಪಷ್ಟಪಡಿಸಿದರು.

ವೇತನ ಪರಿಷ್ಕರಣೆ ಪಶ್ಚಾತ್ಪಟ
2016ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ 12.5% ವೇತನ ಹೆಚ್ಚಳ ಜಾರಿಗೆ ಬಂದಿತ್ತು. ಆದರೆ 2020ರ ಕೋವಿಡ್ ಕಾರಣದಿಂದ ಆ ವೇಳೆಗೆ ಯಾವುದೇ ಪರಿಷ್ಕರಣೆ ಆಗಿರಲಿಲ್ಲ. ನಂತರದ ಕಾಂಗ್ರೆಸ್ ಸರ್ಕಾರದಲ್ಲಿ ಶ್ರೀನಿವಾಸ ಮೂರ್ತಿ ಸಮಿತಿ ಶಿಫಾರಸ್ಸಿನಂತೆ 2022ರ ಜೂನ್‌ 01ರಿಂದ 2023ರ ಫೆಬ್ರವರಿವರೆಗೆ ಹಿಂಬಾಕಿ ಪಾವತಿ ಮಾಡಲು ತೀರ್ಮಾನಿಸಲಾಗಿತ್ತು.

ಸರ್ಕಾರದ ಆರ್ಥಿಕ ಹೊಣೆಗಾರಿಕೆ
ಸಿದ್ದರಾಮಯ್ಯ ಅವರು ಹೇಳಿದ್ದಾರೆ: “ನಾವು ಅಧಿಕಾರಕ್ಕೆ ಬಂದಾಗ ನಿಗಮಗಳಿಗೆ ಒಟ್ಟಾರೆ ₹4000 ಕೋಟಿ ಸಾಲ ಇತ್ತು. 2018 ರಲ್ಲಿ ಈ ಮೊತ್ತ ಕೇವಲ ₹14 ಕೋಟಿ ಮಾತ್ರ ಇತ್ತು. ಯಾವುದೇ ನಿಗಮ ಲಾಭದಲ್ಲಿ ಇಲ್ಲ.” ಅಂತಹ ಪರಿಸ್ಥಿತಿಯಲ್ಲಿ ಎಲ್ಲಾ ನೌಕರರ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಸಂಘದ ಚುನಾವಣೆ ಮತ್ತು ಮುಂದಿನ ಕ್ರಮ
ಸಾರಿಗೆ ನೌಕರರ ಸಂಘದ ಚುನಾವಣೆ ಹಾಗೂ ಬೇಡಿಕೆಗಳ ಕುರಿತಂತೆ ಸರ್ಕಾರ ಪರಿಶೀಲನೆ ನಡೆಸಲಿದ್ದು, ಮಾತುಕತೆ ಮೂಲಕ ಎಲ್ಲ ಅಹವಾಲುಗಳನ್ನು ಬಗೆಹರಿಸಲು ಸಿದ್ಧವಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

Continue Reading

ಬೆಂಗಳೂರು

ಸಾರಿಗೆ ನೌಕರರ ಮುಷ್ಕರ ಆರಂಭ: ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ – “ಹಠವಿಲ್ಲದೆ ಸಹಕಾರ ನೀಡಿ”

ಬೆಂಗಳೂರು: ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಸಾರಿಗೆ ನೌಕರರು ಮುಷ್ಕರಕ್ಕೆ (Transport Employees Strike) ಇಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಸಾರಿಗೆ ನೌಕರರು ಕೇಳಿರುವ ಬೇಡಿಕೆಯಲ್ಲಿ ತಪ್ಪಿಲ್ಲ. ಆದರೆ ಸರ್ಕಾರದ ಪರಿಸ್ಥಿತಿಯನ್ನೂ ಅವರು ಗಮನದಲ್ಲಿಟ್ಟುಕೊಳ್ಳಬೇಕು. ಹಠವಿಲ್ಲದೆ ಸಹಕಾರ ನೀಡಬೇಕು” ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಸಚಿವರು ನೌಕರರೊಂದಿಗೆ ಸಭೆ ನಡೆಸಿದ್ದಾರೆ ಎಂಬುದನ್ನು ಅವರು ನೆನಪಿಸಿದ್ದಾರೆ.

“ಸಾರ್ವಜನಿಕರ ಹಿತವೇ ಮೊದಲಾದ್ದು. ಕೆಲವು ನೌಕರರು ಈಗಾಗಲೇ ಕೆಲಸಕ್ಕೆ ಹಾಜರಾಗಿದ್ದಾರೆ. ಅವರಿಗೆ ಅಭಿನಂದನೆ” ಎಂದು ಡಿಸಿಎಂ ಹೇಳಿದ್ದಾರೆ.

ಇತ್ತ, ಹಳದಿ ಮೆಟ್ರೊ ಮಾರ್ಗದ (Yellow Metro Line) ಉದ್ಘಾಟನೆಯ ಕುರಿತು ಮಾತನಾಡಿದ ಡಿ.ಕೆ.ಶಿವಕುಮಾರ್, “ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಸ್ಟ್ 10ರಂದು ಬರುವ ಸಾಧ್ಯತೆ ಇದೆ. ನಾವು ಈಗಾಗಲೇ ತಯಾರಿ ಪರಿಶೀಲನೆ ಆರಂಭಿಸಿದ್ದೇವೆ. ಕಾರ್ಯಕ್ರಮದ ಅಧಿಕೃತ ಸಮಯ ಇನ್ನೂ ಘೋಷಣೆಯಾಗಿಲ್ಲ” ಎಂದು ತಿಳಿಸಿದ್ದಾರೆ.

ಇದೇ ದಿನ ಬಿಜೆಪಿ ವತಿಯಿಂದ ರೈಲ್ವೆ ಸಂಬಂಧಿತ ಕಾರ್ಯಕ್ರಮವೂ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

Continue Reading

Trending