Connect with us

ಕ್ರೀಡೆ

ಐದು ಕೋಟಿ ಹಣ ನನಗೆ ಬೇಡ ಎಂದ ದ್ರಾವಿಡ್.. ಅದಕ್ಕೆ ಕಾರಣವೂ ಇದೆ.. ಮತ್ತೊಮ್ಮೆ ಹೃದಯಗೆದ್ದ ಕನ್ನಡಿಗ..!

ಹೃದಯವಂತ, ಕನ್ನಡಿಗ ರಾಹುಲ್ ದ್ರಾವಿಡ್​ ಮತ್ತೊಮ್ಮೆ ತಮ್ಮ ನಡೆ ಮೂಲಕ ಕೋಟ್ಯಾಂತರ ಭಾರತೀಯರ ಹೃದಯವನ್ನು ಗೆದ್ದಿದ್ದಾರೆ. ವಿಷಯ ಏನೆಂದರೆ ವಿಶ್ವಕಪ್ ಗೆದ್ದ ಬೆನ್ನಲ್ಲೇ, ಬಿಸಿಸಿಐ ಟೀಂ ಇಂಡಿಯಾಗಿ ಬಹುಮಾನವಾಗೆ ಬರೋಬ್ಬರಿ 125 ಕೋಟಿ ರೂಪಾಯಿ ಘೋಷಣೆ ಮಾಡಿತ್ತು.

ವಿಶ್ವಕಪ್​​ಗಾಗಿ ಟೀಂ ಇಂಡಿಯಾ ಜೊತೆ ಅಮೆರಿಕ ಮತ್ತು ವೆಸ್ಟ್​ ವಿಂಡೀಸ್​ಗೆ ಪ್ರಯಾಣ ಬೆಳೆಸಿದ್ದ 42 ಮಂದಿಗೆ ಈ ಹಣವನ್ನು ಹಂಚಿಕೆ ಮಾಡಲಾಗುವುದು ಎಂದು ಬಿಸಿಸಿಐ ಹೇಳಿತ್ತು. ಅದರಂತೆ ಬಿಸಿಸಿಐ ಎಲ್ಲರಿಗೂ ಹಣವನ್ನು ನೀಡುತ್ತಿದೆ. ಬಿಸಿಸಿಐ ನಿರ್ಧಾರದಂತೆ, ಮುಖ್ಯ ಕೋಚ್ ರಾಹುಲ್ ದ್ರಾವಿಡ್​​ಗೆ ಐದು ಕೋಟಿ ನೀಡೋದಾಗಿ ಹೇಳಿತ್ತು. ಆದರೆ ದ್ರಾವಿಡ್​ ನನಗೆ ಐದು ಕೋಟಿ ಹಣ ಬೇಡ. 2.5 ಕೋಟಿ ರೂಪಾಯಿ ಬಹುಮಾನ ಮಾತ್ರ ಸಾಕು ಎಂದು ಬಿಸಿಸಿಐಗೆ ಮನವಿ ಮಾಡಿಕೊಂಡಿದ್ದಾರೆ. ದ್ರಾವಿಡ್​ ಮನವಿಯನ್ನು ಪುರಸ್ಕರಿಸಿದ ಬಿಸಿಸಿಐ, ಅವರ ಅಭಿಪ್ರಾಯವನ್ನು ಗೌರವಿಸುವುದಾಗಿ ಹೇಳಿದೆ.

ರಾಹುಲ್​​ ಯಾಕೆ ಬೇಡ ಅಂದರು..?

ರಾಹುಲ್ ದ್ರಾವಿಡ್ ನಿರ್ಧಾರಕ್ಕೆ ಕಾರಣ ಕೂಡ ಉಂಟು. ಕೋಚ್​ ಆಗಿ ಟೀಂ ಇಂಡಿಯಾ ಸೇರಿದ ದಿನದಿಂದ ದ್ರಾವಿಡ್​​, ಭಾರತದ ತಂಡದ ಪ್ರತಿ ಸಿಬ್ಬಂದಿಯನ್ನೂ ಸಮನಾಗಿ ಕಂಡವರು. ಯಾರಿಗೂ ತಾರತಮ್ಯ ಮಾಡದೇ, ಇಲ್ಲರನ್ನೂ ಒಂದೇ ರೀತಿ ಕಂಡು ಮೆಚ್ಚುಗೆ ಗಳಿಸಿದವರು. ನಡೆ, ನುಡಿಯಿಂದ ತಂಡದಲ್ಲಿ ಒಗ್ಗಟ್ಟಿನ ಮಂತ್ರವನ್ನು ಜಪಿಸಿದ್ದ ದ್ರಾವಿಡ್​​ ಅವರ ಈ ನಿರ್ಧಾರದ ಹಿಂದೆಯೂ ಒಂದು ದೊಡ್ಡ ಕಾರಣ ಇದೆ.

ವಿಷಯ ಏನೆಂದರೆ 125 ಕೋಟಿ ರೂಪಾಯಿ ಮೊತ್ತದ ಬಹುಮಾನದಲ್ಲಿ ತಂಡಕ್ಕೆ ಆಯ್ಕೆ ಆಗಿದ್ದ 15 ಆಟಗಾರರಿಗೆ ತಲಾ 5 ಕೋಟಿ ರೂಪಾಯಿ ನೀಡೋದಾಗಿ ಬಿಸಿಸಿಐ ಹೇಳಿತ್ತು. ಅವರ ಜೊತೆ ಮುಖ್ಯ ಕೋಚ್​ ದ್ರಾವಿಡ್​​ಗೂ ಐದು ಕೋಟಿ ಸಿಗಲಿದೆ ಎಂದು ಬಿಸಿಸಿಐ ಹೇಳಿತ್ತು. ಉಳಿದಂತೆ ಬೌಲಿಂಗ್, ಬ್ಯಾಟಿಂಗ್ ಹಾಗೂ ಫೀಲ್ಡಿಂಗ್ ಕೋಚ್ ಸೇರಿದಂತೆ ಇತರೆ ಕೋಚ್ ಸಿಬ್ಬಂದಿಗೆ ತಲಾ 2.5 ಕೋಟಿ ರೂಪಾಯಿ ನೀಡೋದಾಗಿ ಹೇಳಿತ್ತು. ದ್ರಾವಿಡ್​ ಅವರು ತಂಡದಲ್ಲಿದ್ದ ಎಲ್ಲಾ ಕೋಚ್​ಗಳಿಗೂ ಹಣ ನೀಡಿದಂತೆ ತಮಗೂ ನೀಡಿ. ಹೆಚ್ಚುವರಿಯಾಗಿ ನನಗೆ ಏನೂ ಬೇಡ. ಅವರಂತೆ ನಾನೂ ಸಮ ಎಂದು ಬಿಸಿಸಿಐ ಬಳಿ ಮನವಿ ಮಾಡಿಕೊಂಡಿದ್ದರು ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ.

ದ್ರಾವಿಡ್​ ಅವರು ಹೀಗೆ ಮಾಡಿದ್ದು ಇದೇ ಮೊದಲಲ್ಲ. 2018ರಲ್ಲಿ ನಡೆದ U-19 ವಿಶ್ವಕಪ್​​ನಲ್ಲಿ ಭಾರತ ತಂಡ ವಿಶ್ವಕಪ್​​ಗೆ ಮುತ್ತಿಟ್ಟಿತ್ತು. ಈ ವೇಳೆ ಹೆಡ್​ ಮಾಸ್ಟರ್​​ ದ್ರಾವಿಡ್​ಗೆ ಬಿಸಿಸಿಐ 50 ಲಕ್ಷ ರೂಪಾಯಿ ಬಹುಮಾನ ನೀಡೋದಾಗಿ ಹೇಳಿತ್ತು. ಜೊತೆಗೆ ಇತರೆ ಕೋಚ್​​ಗಳಿಗೆ 25 ಲಕ್ಷ ರೂಪಾಯಿ ಬಹುಮಾನ ನೀಡೋದಾಗಿ ಹೇಳಿತ್ತು. ಬಿಸಿಸಿಐ ಈ ನಿಲುವನ್ನು ದ್ರಾವಿಡ್ ಅಂದು ಕೂಡ ವಿರೋಧಿಸಿದ್ದರು. ದ್ರಾವಿಡ್ ಒತ್ತಾಯಕ್ಕೆ ಮಣಿದಿದ್ದ ಬಿಸಿಸಿಐ, ಇತರೆ ಕೋಚ್ ಸಿಬ್ಬಂದಿಗೆ ನೀಡಿದಂತೆ 25 ಲಕ್ಷ ರೂಪಾಯಿ ಹಣವನ್ನು ದ್ರಾವಿಡ್​ಗೆ ಬಿಸಿಸಿಐ ನೀಡಿತ್ತು.

ಕ್ರೀಡೆ

JAIN UNIVERSITY : ಜೈನ್ ಯುನಿವರ್ಸಿಟಿಯಲ್ಲಿ ಮಹಿಳಾ ಬಾಸ್ಕೆಟ್‌ಬಾಲ್ ಹಬ್ಬ

ಬೆಂಗಳೂರು, ಫೆ.11: ಕನಕಪುರ ರಸ್ತೆಯ ಜೈನ್ ಯುನಿವರ್ಸಿಟಿ ಗ್ಲೋಬಲ್ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಮಹಿಳಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ (All India Inter University Women’s Basketball Championship) ಎರಡನೇ ದಿನದ ಲೀಗ್ ಪಂದ್ಯಗಳು ರೋಚಕತೆಯಿಂದ ಸಾಗಿದವು.

ಮೊದಲ ಪಂದ್ಯದಲ್ಲಿ ಚಂಡೀಗಢ ವಿಶ್ವವಿದ್ಯಾಲಯ 70-59 ಅಂತರದಲ್ಲಿ ಡಿಎವಿ ಇಂಡೋರ್ ತಂಡವನ್ನು ಮಣಿಸಿತು. ಕುಸುಭು (25) ಮತ್ತು ದೀಪ್ಷಿಖಾ (19) ಚಂಡೀಗಢ ತಂಡದ ಪರ ಮಿಂಚಿದರು.

ಎರಡನೇ ಪಂದ್ಯದಲ್ಲಿ ಆತಿಥೇಯ ಜೈನ್ ವಿಶ್ವವಿದ್ಯಾಲಯ 65-25 ಅಂತರದಲ್ಲಿ ಯುನಿವರ್ಸಿಟಿ ಆಫ್ ಕಲ್ಕತ್ತಾ ವಿರುದ್ಧ ಭರ್ಜರಿ ಗೆಲುವು ದಾಖಲಿಸಿತು. ಹರ್ಷಿತಾ (13) ಮತ್ತು ಆದ್ಯಾ ಗೌಡ (10) ಗಮನಾರ್ಹ ಆಟವಾಡಿದರು.

ಮೂರನೇ ಪಂದ್ಯದಲ್ಲಿ ಎಸ್‌ಆರ್‌ಎಂ ವಿಶ್ವವಿದ್ಯಾಲಯ 58-15 ಅಂತರದಲ್ಲಿ ಎಂಭಿಎಸ್‌ಪಿಎಸ್‌ಯು ಪಟಿಯಾಲಾ ವಿರುದ್ಧ ಜಯ ಸಾಧಿಸಿತು.

ನಾಲ್ಕನೇ ಪಂದ್ಯದಲ್ಲಿ ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ 63-58 ಅಂತರದಲ್ಲಿ ಕ್ರೈಸ್ಟ್ ವಿಶ್ವವಿದ್ಯಾಲಯವನ್ನು ರೋಚಕವಾಗಿ ಸೋಲಿಸಿತು.

ಐದನೇ ಪಂದ್ಯದಲ್ಲಿ ಐಟಿಎಂ ವಿಶ್ವವಿದ್ಯಾಲಯ 65-30 ಅಂತರದಲ್ಲಿ ಎಸ್‌ಜಿಜಿವಿಎ ಯುನಿವರ್ಸಿಟಿಯನ್ನು ಮಣಿಸಿತು.

ಆರನೇ ಪಂದ್ಯದಲ್ಲಿ ಎಲ್‌ಎನ್‌ಐಪಿಇ ವಿಶ್ವವಿದ್ಯಾಲಯ 68-28 ಅಂತರದಲ್ಲಿ ಪಂಡಿತ್ ರವಿ ಶಂಕರ್ ವಿಶ್ವವಿದ್ಯಾಲಯವನ್ನು ಸೋಲಿಸಿತು.

ಇದಕ್ಕೂ ಮೊದಲು ಫೆ.10ರ ಸಂಜೆ ನಡೆದ ಲೀಗ್ ಪಂದ್ಯಗಳಲ್ಲಿ ಚಂಡೀಗಢ ವಿಶ್ವವಿದ್ಯಾಲಯ, ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ ಹಾಗೂ ಎಂಜಿ ಯುನಿವರ್ಸಿಟಿ ಕೊಟ್ಟಾಯಂ ಜಯಗಳಿಸಿದ್ದವು.

ಟೂರ್ನಿಯ ಮುಂದಿನ ಲೀಗ್ ಪಂದ್ಯಗಳು ಹಾಗೂ ನಾಕೌಟ್ ಹಂತದ ಪಂದ್ಯಗಳಿಗೆ ಕ್ರೀಡಾಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

Continue Reading

ಕ್ರೀಡೆ

T20 WORLD CUP : ಡಬಲ್ ಸೂಪರ್ ಓವರ್‌ನಲ್ಲಿ ದಕ್ಷಿಣ ಆಫ್ರಿಕಾದ ರೋಚಕ ಗೆಲುವು

ಅಹಮದಾಬಾದ್: ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಆಫ್ರಿಕಾ ಹಾಗೂ ಅಫ್ಘಾನಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯ ಕ್ರಿಕೆಟ್ ಅಭಿಮಾನಿಗಳಿಗೆ ನಿಜವಾದ ಥ್ರಿಲ್ಲರ್ ಅನುಭವ ನೀಡಿತು. ಕೊನೆಯ ಕ್ಷಣದವರೆಗೂ ರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ‘ಡಬಲ್ ಸೂಪರ್ ಓವರ್’ನಲ್ಲಿ 4 ರನ್‌ಗಳ ಅಂತರದಿಂದ ಗೆಲುವು ಸಾಧಿಸಿತು.

ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 187 ರನ್ ಗಳಿಸಿತು. 188 ರನ್‌ಗಳ ಗುರಿ ಬೆನ್ನಟ್ಟಿದ ಅಫ್ಘಾನಿಸ್ತಾನ 19.4 ಓವರ್‌ಗಳಲ್ಲಿ 187 ರನ್‌ಗಳಿಗೆ ಆಲೌಟ್ ಆಗಿ ಪಂದ್ಯ ಟೈ ಮಾಡಿತು.

ಮೊದಲ ಸೂಪರ್ ಓವರ್‌ನಲ್ಲಿ ಅಜ್ಮತ್ತುಲ್ಲ ಒಮರ್ಜಾಯಿ ಸ್ಫೋಟಕ ಬ್ಯಾಟಿಂಗ್ ಮೂಲಕ 17 ರನ್ ಗಳಿಸಿದರು. 18 ರನ್ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾಗೆ ಕೊನೆಯ ಎಸೆತದಲ್ಲಿ 7 ರನ್ ಬೇಕಾಗಿದ್ದಾಗ ಟ್ರಿಸ್ಟನ್ ಸ್ಟಬ್ಸ್ ಫಜಲ್ಹಕ್ ಫಾರೂಕಿ ಎಸೆತವನ್ನು ಸಿಕ್ಸರ್‌ಗೆ ಬಾರಿಸಿ ಪಂದ್ಯವನ್ನು ಮತ್ತೆ ಟೈ ಮಾಡಿದರು.

ಎರಡನೇ ಸೂಪರ್ ಓವರ್‌ನಲ್ಲಿ ಡೇವಿಡ್ ಮಿಲ್ಲರ್ ಕೇವಲ 4 ಎಸೆತಗಳಲ್ಲಿ 16 ರನ್ ಸಿಡಿಸಿ ತಂಡವನ್ನು 23 ರನ್‌ಗಳಿಗೆ ಕೊಂಡೊಯ್ದರು. 24 ರನ್ ಗುರಿ ಬೆನ್ನಟ್ಟಿದ ಅಫ್ಘಾನಿಸ್ತಾನ ಪರ ರಹಮಾನುಲ್ಲಾ ಗುರ್ಬಾಜ್ ಸತತ ಮೂರು ಸಿಕ್ಸರ್‌ಗಳನ್ನು ಬಾರಿಸಿ ಪಂದ್ಯವನ್ನು ತೀವ್ರ ರೋಚಕಗೊಳಿಸಿದರು. ಆದರೆ ಕೊನೆಯ ಎಸೆತದಲ್ಲಿ ಬೌಂಡರಿ ಯತ್ನದಲ್ಲಿ ಕ್ಯಾಚ್ ನೀಡಿ ಔಟಾದರು. ಹೀಗಾಗಿ ದಕ್ಷಿಣ ಆಫ್ರಿಕಾ ರೋಚಕ 4 ರನ್ ಜಯ ಸಾಧಿಸಿತು.

Continue Reading

ಕ್ರೀಡೆ

“ಈ ನಾಟಕ ಮೊದಲೇ ಗೊತ್ತಿತ್ತು” – ರಿಕಿ ಪಾಂಟಿಂಗ್

ಇಸ್ಲಾಮಾಬಾದ್:

ಹಲವು ಸುತ್ತಿನ ನಾಟಕದ ನಂತರ ಕೊನೆಗೂ ಪಾಕಿಸ್ತಾನ ಕ್ರಿಕೆಟ್ ತಂಡವು ಹೈವೋಲ್ಟೇಜ್ ಭಾರತ ವಿರುದ್ಧದ ಪಂದ್ಯವನ್ನು ಫೆಬ್ರವರಿ 15ರಂದು ಆಡಲು ಒಪ್ಪಿಗೆ ಸೂಚಿಸಿದೆ. ಕೊಲೊಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಶಿವರಾತ್ರಿ ದಿನದಂದು ಈ ಮಹತ್ವದ ಪಂದ್ಯ ನಡೆಯಲಿದೆ.

ಭಾರತ ವಿರುದ್ಧ ಪಂದ್ಯ ಆಡಲು ಮೊದಲಿಗೆ ಒಪ್ಪಿಕೊಂಡು, ಬಳಿಕ ಯು-ಟರ್ನ್ ಹೊಡೆದಿದ್ದ ಪಾಕಿಸ್ತಾನ ಕ್ರಿಕೆಟ್ ಬೋರ್ಡ್‌ (PCB) ನಿರ್ಧಾರಕ್ಕೆ ಈಗ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಈ ಬೆಳವಣಿಗೆಯ ಕುರಿತು ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ತೀವ್ರ ವ್ಯಂಗ್ಯವಾಡಿದ್ದು, “ಪಾಕಿಸ್ತಾನದ ಈ ಡ್ರಾಮಾ ಮೊದಲೇ ಗೊತ್ತಿತ್ತು” ಎಂದು ಲೇವಡಿ ಮಾಡಿದ್ದಾರೆ. ಇದೇ ಅಭಿಪ್ರಾಯವನ್ನು ಭಾರತದ ದಿಗ್ಗಜ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕೂಡ ವ್ಯಕ್ತಪಡಿಸಿದ್ದರು.

ಪಾಕಿಸ್ತಾನ ಟಿವಿ ಚರ್ಚೆಯಲ್ಲಿ ಭಾಗವಹಿಸಿದ್ದ ಮಾಜಿ ನಾಯಕ ಶಹೀದ್ ಅಫ್ರಿದಿ, ಪಿಸಿಬಿಯ ನಿರ್ಧಾರವನ್ನು ತೀವ್ರವಾಗಿ ಟೀಕಿಸಿದ್ದಾರೆ. “ಯು-ಟರ್ನ್ ತೆಗೆದುಕೊಳ್ಳುವುದೇ ಇದ್ದರೆ ಇಷ್ಟೊಂದು ನಾಟಕ ಯಾಕೆ? ಕೊನೆಗೆ ಪಿಸಿಬಿ ಬಿಸಿಸಿಐ ಮುಂದೆ ಮಂಡಿಯೂರಿದೆ” ಎಂದು ಅವರು ಕಿಡಿಕಾರಿದ್ದಾರೆ.

“ನಾವು ಹಿಂದೆ ಭಾರತದಲ್ಲಿ ಸಾಕಷ್ಟು ಕ್ರಿಕೆಟ್ ಆಡಿದ್ದೇವೆ. ಅಲ್ಲಿನ ಜನರು ಪಾಕಿಸ್ತಾನಿಗಳನ್ನು ಪ್ರೀತಿಸುತ್ತಿದ್ದರು. ಆದರೆ, ನರೇಂದ್ರ ಮೋದಿ ಪ್ರಧಾನಿಯಾದ ನಂತರ ಪರಿಸ್ಥಿತಿ ಸಂಪೂರ್ಣ ಬದಲಾಗಿದೆ. ನಾಲ್ಕು ಗುಜರಾತಿಗಳು ಭಾರತವನ್ನು ನಡೆಸುತ್ತಿದ್ದಾರೆ. ಅವರ ಆಟಕ್ಕೆ ಪಿಸಿಬಿ ಬುಗುರಿಯಂತೆ ಸುತ್ತುತ್ತಿದೆ” ಎಂದು ಅಫ್ರಿದಿ ಲೇವಡಿ ಮಾಡಿದ್ದಾರೆ.

ಇದೇ ವೇಳೆ, ರಿಕಿ ಪಾಂಟಿಂಗ್ ಕೂಡ ಪಾಕಿಸ್ತಾನ ಸರ್ಕಾರದ ಮಾನವನ್ನೂ ಈ ವಿಷಯದಲ್ಲಿ ಹರಾಜು ಹಾಕಲಾಗಿದೆ ಎಂದು ಕಟುವಾಗಿ ಟೀಕಿಸಿದ್ದಾರೆ. “ಪ್ರತಿ ಬಾರಿ ಪಿಸಿಬಿಯ ಮಾನ ಹೋಗುತ್ತಿತ್ತು. ಈ ಬಾರಿ ಸರ್ಕಾರದ ಮಾನವೂ ಹಾಳಾಗಿದೆ” ಎಂದು ಹೇಳಿದ್ದಾರೆ.

ಪಾಕಿಸ್ತಾನ ಭಾರತ ವಿರುದ್ಧ ಪಂದ್ಯ ಆಡಲು ಮೂರು ಷರತ್ತುಗಳನ್ನು ಮುಂದಿಟ್ಟಿತ್ತು. ದ್ವಿಪಕ್ಷೀಯ ಸರಣಿ ಹಾಗೂ ಬಾಂಗ್ಲಾದೇಶ ಸೇರಿ ತ್ರಿಕೋಣ ಸರಣಿಯ ಪ್ರಸ್ತಾಪವೂ ಇದರಲ್ಲಿ ಸೇರಿತ್ತು. ಆದರೆ, ಐಸಿಸಿ ಈ ಎಲ್ಲಾ ಷರತ್ತುಗಳನ್ನು ತಿರಸ್ಕರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

Continue Reading

Trending