Connect with us

ಕ್ರೀಡೆ

ಪಾಕಿಸ್ತಾನ ಕ್ರಿಕೆಟ್​ ಆಯ್ಕೆ ಸಮಿತಿ ವಜಾ: ಟಿ20 ವಿಶ್ವಕಪ್​ನಲ್ಲಿ ಕೋಚ್​ಗಳ ಜೊತೆ ಕಿತ್ತಾಡಿದ್ದ ವೇಗಿ ಶಾಹೀನ್​ ಆಫ್ರಿದಿ – shaheen shah afridi

ನವದೆಹಲಿ: ಪಾಕಿಸ್ತಾನ ಕ್ರಿಕೆಟ್​ನಲ್ಲಿ ಎಲ್ಲವೂ ಸರಿಯಿಲ್ಲ. ಬುಧವಾರವಷ್ಟೆ ಆಯ್ಕೆ ಸಮಿತಿಯನ್ನು ಬರ್ಖಾಸ್ತು ಮಾಡಲಾಗಿತ್ತು. ಇದರ ಬೆನ್ನಲ್ಲೇ ಒಬ್ಬರ ಮೇಲೆ ಇನ್ನೊಬ್ಬರು ಆಪಾದನೆ ಮಾಡುತ್ತಿದ್ದಾರೆ. ಏಕದಿನ ಮತ್ತು ಟಿ-20 ತಂಡದ ನಾಯಕತ್ವದಿಂದ ದಿಢೀರ್​ ತೆಗೆದು ಹಾಕಲ್ಪಟ್ಟಿರುವ ವೇಗಿ ಶಾಹೀನ್​ ಶಾ ಆಫ್ರಿದಿ ಟಿ-20 ವಿಶ್ವಕಪ್​ ವೇಳೆ ಕೋಚ್​​ಗಳ ಜೊತೆ ಕಿತ್ತಾಡಿಕೊಂಡಿದ್ದರು ಎಂಬ ಅಂಶ- ಬೆಳಕಿಗೆ ಬಂದಿದೆ.

ಟಿ-20 ವಿಶ್ವಕಪ್​ ವೇಳೆ ಪಾಕ್​​ನ ಪ್ರಮುಖ ವೇಗಿಯಾಗಿರುವ ಶಾಹೀನ್ ತರಬೇತುದಾರರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ತಂಡದ ಕೋಚ್‌ಗಳು ಮತ್ತು ಮ್ಯಾನೇಜ್‌ಮೆಂಟ್ ಸಿಬ್ಬಂದಿ ಜೊತೆ ಅಫ್ರಿದಿ ಕೆಟ್ಟದಾಗಿ ವರ್ತಿಸುತ್ತಿದ್ದಾರೆ. ಆದರೂ ಆತನ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದಕ್ಕೆ ಕಾರಣ ಏನೆಂಬ ಬಗ್ಗೆ ಈಗ ತನಿಖೆ ನಡೆಯುತ್ತಿದೆ ವರದಿಯಲ್ಲಿ ಹೇಳಲಾಗಿದೆ.

ಭಾರತ ಮತ್ತು ಅಮೆರಿಕದ ವಿರುದ್ಧ ಸೋತು ಲೀಗ್​ ಹಂತದಲ್ಲೇ ತಂಡ ಹೊರಬಿದ್ದಿದ್ದಕ್ಕೆ ಶಾಹೀನ್​​ ತೀವ್ರ ಅಸಮಾಧಾನಗೊಂಡಿದ್ದರು. ಹೀಗಾಗಿ ಅವರ ತಂಡದ ಸಿಬ್ಬಂದಿ ಜೊತೆ ಬೈದಾಡಿಕೊಂಡಿದ್ದಾರೆ. ಶಾಹೀನ್​ ಅಲ್ಲದೇ, ಹ್ಯಾರೀಸ್​ ರೌಫ್​​ ಪಂದ್ಯಗಳ ಸೋಲಿನ ಬಳಿಕ ಅಭಿಮಾನಿಯೊಬ್ಬರ ಮೇಲೆ ದೈಹಿಕ ಹಲ್ಲೆಗೆ ಮುಂದಾಗಿದ್ದರು. ರಕ್ಷಣಾ ಸಿಬ್ಬಂದಿ ಅವರನ್ನು ತಡೆದಿದ್ದರು. ಆಟಗಾರರು ತಂಗಿದ್ದ ಹೋಟೆಲ್​ ಹೊರಗೆ ಈ ಘಟನೆ ನಡೆದಿತ್ತು.

ಪಾಕ್​ ಆಯ್ಕೆ ಸಮಿತಿ ವಜಾ: ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ)ಯು ತನ್ನ ರಾಷ್ಟ್ರೀಯ ಆಯ್ಕೆ ಸಮಿತಿಯನ್ನು ಬುಧವಾರ ವಜಾ ಮಾಡಿದೆ. ಸಮಿತಿಯಲ್ಲಿದ್ದ ವಹಾಬ್ ರಿಯಾಜ್ ಮತ್ತು ಅಬ್ದುಲ್​ ರಜಾಕ್​ರನ್ನು ಮಂಡಳಿಯು ಹುದ್ದೆಯಿಂದ ಕಿತ್ತೆಸೆದಿದೆ. ರಾಷ್ಟ್ರೀಯ ಆಯ್ಕೆ ಸಮಿತಿಯಲ್ಲಿ ಇನ್ನು ಮುಂದೆ ನಿಮ್ಮ ಸೇವೆ ಅಗತ್ಯವಿಲ್ಲ ಎಂದು ರಜಾಕ್ ಮತ್ತು ರಿಯಾಜ್ ಅವರಿಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಸೂಚಿಸಿದೆ. ಅಬ್ದುಲ್ ರಜಾಕ್ ಪುರುಷ ಮತ್ತು ಮಹಿಳಾ ಆಯ್ಕೆ ಸಮಿತಿಯ ಭಾಗವಾಗಿದ್ದರೆ, ವಹಾಬ್ ಪುರುಷರ ತಂಡದ ಆಯ್ಕೆಗಾರರಾಗಿದ್ದರು.

ಈ ಬಗ್ಗೆ ವಹಾಬ್​ ರಿಯಾಜ್​ ತಮ್ಮ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದು, ತಂಡದ, ಮತ್ತಿತರರ ಬಗ್ಗೆ ಹೇಳಲು ಬಹಳಷ್ಟಿದೆ. ಆದರೆ, ಆಪಾದನೆಗಳಲ್ಲೇ ಕಾಲ ಕಳೆಯಲು ಇಷ್ಟವಿಲ್ಲ. ನಾನು ಆಯ್ಕೆ ಸಮಿತಿಯ ಸದಸ್ಯನಾಗಿ ದೇಶಕ್ಕಾಗಿ ಸೇವೆ ಸಲ್ಲಿಸಿರುವೆ. ನಾನು ಇಷ್ಟಪಡುವ ಆಟದಲ್ಲಿ ಜನರು ನನ್ನನ್ನು ಸೇವಕ ಎಂದು ಅರಿತರೆ ಸಾಕು. ನಂಬಿಕೆ ಮತ್ತು ಪ್ರಾಮಾಣಿಕತೆಯಿಂದ ಪಾಕಿಸ್ತಾನ ಕ್ರಿಕೆಟ್‌ನ ಉನ್ನತಿಗಾಗಿ ನನ್ನೆಲ್ಲ ಶ್ರಮ ಹಾಕಿ ಕೆಲಸ ಮಾಡಿದ್ದೇನೆ ಎಂದು ಅವರು ಬರೆದುಕೊಂಡಿದ್ದಾರೆ.

ತಂಡದ ಮುಖ್ಯ ಕೋಚ್ ಗ್ಯಾರಿ ಕರ್ಸ್ಟನ್ ಮತ್ತು ಇತರ ಕೋಚ್​ಗಳಿಗೆ ಪ್ರತಿ ಆಟಗಾರರು ಬೆಂಬಲ, ಗೌರವ ನೀಡಬೇಕು ಎಂದು ಶಾಹೀನ್​ ಆಫ್ರಿದಿ ವಿಚಾರವನ್ನು ಪ್ರಸ್ತಾಪಿಸಿದ್ದಾರೆ.

ಕ್ರೀಡೆ

ನಾನು ಹುಚ್ಚ ಅಲ್ಲ, ರಾಯಲ್ ಚಾಲೆಂಜ್ ಕೂಡಾ ಕುಡಿಯುವುದಿಲ್ಲ’: RCB ಖರೀದಿ ಕುರಿತ ವದಂತಿಗೆ ಡಿಕೆಶಿ ಪ್ರತಿಕ್ರಿಯೆ

ನವದೆಹಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಆಡಳಿತ ಮಂಡಳಿಯ ಭಾಗವಾಗಲು ನನಗೆ ಆಫರ್‌ಗಳು ಬಂದಿವೆ. ಆದರೆ ನನಗೆ ಸಮಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಆರ್‌ಸಿಬಿ ಫ್ರಾಂಚೈಸಿಯನ್ನು ಖರೀದಿಸುವ ಕುರಿತ ಊಹಾಪೋಹಗಳ ಪ್ರಶ್ನೆಗೆ, “ನಾನು ಹುಚ್ಚನಲ್ಲ. ನಾನು ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್‌ (ಕೆಎಸ್ ಸಿಎ)ನ ಸದಸ್ಯ ಮಾತ್ರ” ಎಂದರು.

ಇದಕ್ಕೆಲ್ಲ ನನಗೆ ಸಮಯವಿಲ್ಲ. ಅಷ್ಟಕ್ಕೂ ನನಗೆ ಆರ್‌ಸಿಬಿ ಏಕೆ ಬೇಕು?. ನಾನು ರಾಯಲ್ ಚಾಲೆಂಜ್ ಕೂಡಾ ಕುಡಿಯುವುದಿಲ್ಲ. ಆದರೆ, ಆಡಳಿತ ಮಂಡಳಿಯ ಭಾಗವಾಗಲು ನನಗೆ ಆಫರ್‌ಗಳು ಬಂದಿವೆ” ಎಂದರು.

ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಭೀಕರ ಕಾಲ್ತುಳಿತ: ಐಪಿಎಲ್ ಚಾಂಪಿಯನ್ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ (ಜೂನ್ 4ರಂದು) ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಕ್ರಿಕೆಟ್ ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ದುರಂತದ ನಂತರ ಮರುದಿನ (ಜೂನ್ 5ರಂದು) ಕರ್ನಾಟಕ ಸರ್ಕಾರ ನಗರ ಪೊಲೀಸ್ ಆಯುಕ್ತರೂ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿತ್ತು. ಘಟನೆಯ ತನಿಖೆ ನಡೆಸಿ ವರದಿ ನೀಡಲು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಏಕ ಸದಸ್ಯ ಆಯೋಗ ರಚಿಸಿದೆ.

ರಾಜಕೀಯ ಕೆಸರೆರಚಾಟ: ಈ ಘಟನೆಯನ್ನು ಉಲ್ಲೇಖಿಸಿ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಬಿಜೆಪಿ ನಾಯಕರು ಒತ್ತಾಯಿಸುತ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ, ಬಿಜೆಪಿ ಎಲ್ಲದರಲ್ಲೂ ರಾಜಕೀಯ ಮಾಡುತ್ತಿದೆ ಎಂದು ಟೀಕಿಸಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ ಮಹಾ ಕುಂಭಮೇಳದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದಾಗ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜೀನಾಮೆಗೆ ಬಿಜೆಪಿ ಏಕೆ ಒತ್ತಾಯಿಸಲಿಲ್ಲ ಎಂದು ಮರು ಪ್ರಶ್ನಿಸಿದ್ದಾರೆ.

ನಾಳೆ ಮಧ್ಯಾಹ್ನ ಹೈಕೋರ್ಟ್ ಆದೇಶ: ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ತಮ್ಮ ಬಂಧನ ಕಾನೂನುಬಾಹಿರ ಎಂದು ಮಧ್ಯಂತರ ಪರಿಹಾರ ಕೋರಿ ಆರ್‌ಸಿಬಿಯ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಸಲ್ಲಿಸಿದ್ದ ಅರ್ಜಿ ಕುರಿತ ಆದೇಶವನ್ನು ಹೈಕೋರ್ಟ್ ನಾಳೆ ಮಧ್ಯಾಹ್ನ 2.30ಕ್ಕೆ ಕಾಯ್ದಿರಿಸಿದೆ.

Continue Reading

ಕ್ರೀಡೆ

ಟೀಂ ಇಂಡಿಯಾ ಆಯ್ಕೆ, BCCI ವಿರುದ್ಧ ದಾದಾ ಕೆಂಗಣ್ಣು

ಮುಂಬೈ: ಇಂಗ್ಲೆಂಡ್ ವಿರುದ್ಧದ ಮುಂಬರುವ ಟೆಸ್ಟ್ ಸರಣಿಗೆ ಶ್ರೇಯಸ್ ಅಯ್ಯರ್ ಅವರನ್ನು ಹೊರಗಿಡುವ ಬಗ್ಗೆ ಮಾಜಿ ಭಾರತೀಯ ಕ್ರಿಕೆಟ್ ತಂಡದ ನಾಯಕ ಸೌರವ್ ಗಂಗೂಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶ್ರೇಯಸ್ ಕಳೆದ ವರ್ಷದಿಂದ ಅದ್ಭುತ ಫಾರ್ಮ್‌ನಲ್ಲಿದ್ದಾರೆ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ರಲ್ಲಿ ಪಂಜಾಬ್ ಕಿಂಗ್ಸ್ ಪರ ಅತಿ ಹೆಚ್ಚು ಸ್ಕೋರರ್ ಆಗಿ ಹೊರಹೊಮ್ಮಿದ್ದಾರೆ.

ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ, ಶ್ರೇಯಸ್ ಅವರನ್ನು ಮಧ್ಯಮ ಕ್ರಮಾಂಕದ ಅಗ್ರ ಸ್ಪರ್ಧಿಯಾಗಿ ಸೂಚಿಸಲಾಗಿತ್ತು ಆದರೆ ಅವರಿಗೆ ಅಂತಿಮ ತಂಡದಲ್ಲಿ ಸ್ಥಾನ ಸಿಗಲಿಲ್ಲ. ಶ್ರೇಯಸ್ ಅವರನ್ನು ಅವರ ಪ್ರಸ್ತುತ ಫಾರ್ಮ್ ಆಧರಿಸಿ ಆಯ್ಕೆ ಮಾಡಬೇಕಿತ್ತು ಮತ್ತು ಅವರು “ಹೊರಗುಳಿಯುವ ಆಟಗಾರ” ಅಲ್ಲ ಎಂದು ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.

ಅವರು ಕಳೆದ ಒಂದು ವರ್ಷದಿಂದ ತಮ್ಮ ಅತ್ಯುತ್ತಮ ಆಟವಾಡುತ್ತಿದ್ದಾರೆ ಮತ್ತು ಈ ತಂಡದಲ್ಲಿ ಶ್ರೇಯಸ್ ಇರಬೇಕಿತ್ತು. ಕಳೆದ ಒಂದು ವರ್ಷ ಅವರಿಗೆ ಅದ್ಭುತವಾಗಿದೆ. ಅವರು ಹೊರಗುಳಿದ ಆಟಗಾರನಲ್ಲ. ಅವರು ಈಗ ಒತ್ತಡದಲ್ಲಿ ಸ್ಕೋರ್ ಮಾಡುತ್ತಿದ್ದಾರೆ, ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತಿದ್ದಾರೆ, ಶಾರ್ಟ್ ಬಾಲ್ ನ್ನು ಚೆನ್ನಾಗಿ ಆಡುತ್ತಿದ್ದಾರೆ. ಟೆಸ್ಟ್ ಕ್ರಿಕೆಟ್ ವಿಭಿನ್ನವಾಗಿದ್ದರೂ, ಅವರು ಏನು ಮಾಡಬಹುದು ಎಂದು ನೋಡಲು ಈ ಸರಣಿಯಲ್ಲಿ ಅವರನ್ನು ತಂಡದಲ್ಲಿ ನೋಡಲು ಬಯಸುತ್ತೇನೆ” ಎಂದು ಗಂಗೂಲಿ ರೆವ್‌ಸ್ಪೋರ್ಟ್ಜ್‌ಗೆ ತಿಳಿಸಿದ್ದಾರೆ.

ಜೂನ್ 20 ರಿಂದ ಹೆಡಿಂಗ್ಲೆಯಲ್ಲಿ ಮೊದಲ ಪಂದ್ಯದಿಂದ ಪ್ರಾರಂಭವಾಗುವ ಐದು ಪಂದ್ಯಗಳ ಸರಣಿಯಲ್ಲಿ ಇಂಗ್ಲೆಂಡ್ ವಿರುದ್ಧ ಭಾರತವು ತನ್ನ ಹೊಸ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಟೂರ್ನಿಯನ್ನು ಪ್ರಾರಂಭಿಸುತ್ತದೆ.

Continue Reading

ಕ್ರೀಡೆ

ಒಂದೇ ತಿಂಗಳಲ್ಲಿ 6 ಕ್ರಿಕೆಟಿಗರು ನಿವೃತ್ತಿ-ಲಿಸ್ಟ್ ನಲ್ಲಿದ್ದಾರೆ ಭಾರತದ ದಿಗ್ಗಜರು!

ನವದೆಹಲಿ: ರೋಹಿತ್ ಶರ್ಮಾ ಟೆಸ್ಟ್ ನಿವೃತ್ತಿಯೊಂದಿಗೆ ಶುರುವಾದ ಸ್ಟಾರ್ ಆಟಗಾರರ ಗುಡ್ ಬೈ ಪರ್ವ ಮುಂದುವರೆದಿದೆ, ಅದರಲ್ಲೂ ಮೇ ಮತ್ತು ಜೂನ್ ತಿಂಗಳ ನಡುವೆ ಒಟ್ಟು 6 ಆಟಗಾರರು ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ,
ರೋಹಿತ್ ಶರ್ಮಾ: ಭಾರತದ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಕಳೆದ ತಿಂಗಳು ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದರು, ಈಗಾಗಲೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿರುವ ಹಿಟ್ ಮ್ಯಾನ್ ಇನ್ಮುಂದೆ ಏಕದಿನದಲ್ಲಿ ಮಾತ್ರ ಟೀಮ್ ಇಂಡಿಯಾ ಪ್ರತಿನಿಧಿಸಲಿದ್ದಾರೆ,
ವಿರಾಟ್ ಕೊಹ್ಲಿ: ರೋಹಿತ್ ಶರ್ಮಾ ಬೆನ್ನಲ್ಲೇ ವಿರಾಟ್ ಕೊಹ್ಲಿನ ಕೂಡ ಟೆಸ್ಟ್ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ, ಮೇ 12 ರಂದು ಟೆಸ್ಟ್ ಗೆ ನಿವೃತ್ತಿ ಪ್ರಕಟಿಸಿದ್ರು, ಕಿಂಗ್ ಕೊಹ್ಲಿ ಇನ್ನು ಏಕದಿನ ಕ್ರಿಕೆಟ್ ನಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ,
ಏಂಜೆಲೊ ಮ್ಯಾಥ್ಯೂಸ್: ಶ್ರೀಲಂಕಾ ತಂಡದ ಸ್ಟಾರ್ ಆಲ್‍ರೌಂಡರ್ ಏಂಜೆಲೊ ಮ್ಯಾಥ್ಯೂಸ್ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ, ಆಸ್ಟ್ರೇಲಿಯಾ ತಂಡದ ಪ್ರಮುಖ ಆಟಗಾರ ಗ್ಲೆನ್ ಮ್ಯಾಕ್ಸ್‍ವೆಲ್ ಏಕದಿನ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ,
ಆದರೂ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಮುಂದುವರೆಯಲಿದ್ದಾರೆ,
ಹೆನ್ರಿಕ್ ಕ್ಲಾಸೆನ್: ಸೌತ್ ಆಫ್ರಿಕಾದ ಹೊಡಿಬಡಿ ದಾಂಡಿಗ ಹೆನ್ರಿಕ್ ಕ್ಲಾಸೆನ್ ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ, ಕೇವಲ 33 ವರ್ಷದ ಕ್ಲಾಸೆನ್, ಮುಂಬರುವ ದಿನಗಳಲ್ಲಿ ಟಿ20 ಲೀಗ್ ಗಳಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ,
ನಿಕೋಲಸ್ ಪೂರನ್: ವೆಸ್ಟ್ ಇಂಡೀಸ್ ನ ವಿಕೆಟ್ ಕೀಪರ್ ಬ್ಯಾಟರ್ ನಿಕೋಲಸ್ ಪೂರನ್ ಕೂಡ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ, ಅದು ಕೂಡ 29 ನೇ ವಯಸ್ಸಿನಲ್ಲಿ ಎಂಬುದು ಅಚ್ಚರಿ.

Continue Reading

Trending