ಬಿಬಿಎಂಪಿ
ಡೆಂಗ್ಯೂ ಜ್ವರವನ್ನು ಪ್ರಯೋಗಾಲದ ಪರೀಕ್ಷೆಯಿಂದ ದೃಢೀಕರಸುವುದು ಬಹಳ ಅಗತ್ಯ ಶಾಸಕ ಎಸ್ ಟಿ ಸೋಮಶೇಖರ್

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಸಂಖ್ಯೆ ಹೆಚ್ಚಾಗುತ್ತಿದೆ, ಈ ಹಿನ್ನೆಲೆಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ ಎಂದು ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಹೇಳಿದರು, ಶಾಸಕ ಎಸ್ ಟಿ ಸೋಮಶೇಖರ್ ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಡೆಂಗಿ ಜ್ವರ ನಿಯಂತ್ರಣ ಸಂಬಂಧ ಜನರಲ್ಲಿ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಪಾಲ್ಗೋಂಡರು,
ಈ ಸಂದರ್ಭದಲ್ಲಿ ಅವರು ಮಾತನಾಡುತ್ತ ಹವಾಮಾನ ವೈಫರೀತ್ಯ ಹಾಗೂ ಬದಲಾದ ವಾತಾವರಣದಿಂದಾಗಿ ಡೆಂಗ್ಯೂ ಜ್ವರ ವ್ಯಾಪಕವಾಗಿ ಹರಡುತ್ತಿದ್ದು ತುರ್ತು ಆರೋಗ್ಯ ಪರಿಸ್ಧಿತಿಯನ್ನು ತಂದೊಡ್ಡಿದೆ, ನಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿಂತ ನೀರಿನಲ್ಲಿ ಉತ್ಪತ್ತಿಯಾಗುವ ಈಡೀಸ್ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಡೆಂಗ್ಯೂ ಸಾಂಕ್ರಾಮಿಕ ರೋಗ ಹರಡುತ್ತದೆ, ಅದರ ನಿಯಂತ್ರಣದ ಬಗ್ಗೆ ಮುನ್ನೆಚ್ಛರಿಕ್ಕೆ ಕ್ರಮ ವಹಿಸಬೇಕು ಎಂದರು,
ಮುಂಗಾರು ಮಳೆ ಕಾಣಿಸಿಕೊಂಡ ಬೆನ್ನಿಗೆ ಡೆಂಗ್ಯೂ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಳವಾಗಿದೆ, ಈ ವರ್ಷ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ದೃಢಪಟ್ಟಿವೆ, ಬಿಬಿಎಂಪಿ ಹಾಗೂ ಪಂಚಾಯಿತಿ ವ್ಯಾಪ್ತಿಯಲ್ಲಿ ಇದರ ರೋಗಲಕ್ಷಣಗಳ ಬಗ್ಗೆ ತಿಳಿಯುವುದು ಪ್ರತಿಯೊಬ್ಬರ ಜವಾಬ್ದಾರಿ ಹಾಗೂ ಸ್ವಚ್ಛಾತೆಯನ್ನು ಕಾಪಾಡಿಕೊಳ್ಳುವುದು ಕೂಡ ಎಂದರು, ಯಶವಂತಪುರ ಕ್ಷೇತ್ರದ ವ್ಯಾಪ್ತಿಯಲ್ಲಿ ಡೆಂಗ್ಯೂವನ್ನು ನಿಯಂತ್ರಿಸಲು ಆರೋಗ್ಯ ಅಧಿಕಾರಿಗಳ ಜೊತೆಗೆ ಸ್ಧಳೀಯ ನಾಯಕರುಗಳು ಇದರ ಬಗ್ಗೆ ಅರಿವು ಮೂಡಿಸುತ್ತಿರುವುದು ಸಂತಸದ ವಿಷಯ ಎಂದರು, ಕಾರ್ಯಕ್ರಮದಲ್ಲಿ ಕಗ್ಗಲೀಪುರ ಗ್ರಾವi .ಪಂಚಾಯಿತಿ ಅಧ್ಯಕ್ಷ, ಪಂಚಾಯಿತಿಯ ಸದಸ್ಯರು ಹಾಗೂ ಆರೋಗ್ಯ ಸಿಬ್ಬಂದಿ ವರ್ಗದವರು ಉಪಸ್ಧಿತರಿದ್ದರು,
ಬಿಬಿಎಂಪಿ
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಆಡಳಿತದ ಹೊಣೆ ಹೊತ್ತಿದ್ದ ʻಬಿಬಿಎಂಪಿʼ (BBMP) ಹೆಸರು ಇತಿಹಾಸ ಪುಟ ಸೇರಲಿದ್ದು, ನಾಳೆಯಿಂದ (ಮೇ 15) ಗ್ರೇಟರ್ ಬೆಂಗಳೂರು ಆಡಳಿತ ಜಾರಿಯಾಗಲಿದೆ. ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಯು ʻಗ್ರೇಟರ್ ಬೆಂಗಳೂರು ಪ್ರಾಧಿಕಾರʼ (Greater Bengaluru Authority) ಆಗಿ ಬದಲಾಗಲಿದೆ. ಈ ಕುರಿತು ರಾಜ್ಯ ಸರ್ಕಾರ ಇಂದು ಅಧಿಕೃತ ಅಧಿಸೂಚನೆ ಹೊರಡಿಸಿದೆ.
ಇದರೊಂದಿಗೆ ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಯಲ್ಲಿ (Bengaluru Administrative Act) ಸುಗಮ ಆಡಳಿತ ತರುವ ದೃಷ್ಟಿಯಿಂದ ಗರಿಷ್ಠ 7 ಪಾಲಿಕೆ ರಚನೆಗೆ ಪ್ರಸ್ತಾಪ ಮಾಡಲಾಗಿದೆ. ಈ ಕಾಯ್ದೆಗೆ ನಿಯಮಾವಳಿ ರೂಪಿಸಿದ ಬಳಿಕ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ. ಜೊತೆಗೆ ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ಜಿಬಿಎ ಮುಖ್ಯ ಆಯುಕ್ತರು ಎಂದು ಹೆಸರು ಬದಲಾವಣೆ ಮಾಡಲಾಗಿದೆ. ಜೊತೆಗೆ ಹೊಸ ಆಡಳಿತಾಧಿಕಾರಿಯನ್ನೂ ನೇಮಕ ಮಾಡಲಾಗುತ್ತದೆ.
ಕಾಯ್ದೆ ಹಾದಿ ಹೇಗೆ?
ವಿಧಾನ ಮಂಡಲದಲ್ಲಿ ಮಾರ್ಚ್ 13ರಂದು ಅಂಗೀಕಾರವಾಗಿದ್ದ ʻಗ್ರೇಟರ್ ಬೆಂಗಳೂರು ಆಡಳಿತ ಮಸೂದೆ-2024ʼಯನ್ನು ರಾಜ್ಯಪಾಲರ ಅಂಕಿತಕ್ಕಾಗಿ 2025ರ ಮಾರ್ಚ್ 17ರಂದು ಕಳುಹಿಸಲಾಗಿತ್ತು. ಮಸೂದೆಯು ಸಂವಿಧಾನದ 74ನೇʼ ತಿದ್ದುಪಡಿಗೆ ವಿರುದ್ಧವಾಗಿದೆ ಮತ್ತು ದೆಹಲಿ ಮಹಾನಗರ ಪಾಲಿಕೆಯ ವಿಭಜನೆ ಸಂದರ್ಭದಲ್ಲಿ ಆದಂತೆ ಸಮಸ್ಯೆಗಳು ಸೃಷ್ಟಿಯಾಗುತ್ತವೆʼ ಎಂದು ಬೆಂಗಳೂರು ಟೌನ್ ಹಾಲ್ ಸಂಘಟನೆ ಹಾಗೂ ಬಿಜೆಪಿ ನಾಯಕರ ನಿಯೋಗಗಳು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದವು. ಮಸೂದೆಯನ್ನು ತಡೆ ಹಿಡಿಯುವಂತೆಯೂ ಒತ್ತಾಯಿಸಿದ್ದವು.
ಇದಕ್ಕೆ ಪ್ರತಿಕ್ರಿಯಿಸಿದ್ದ ರಾಜ್ಯಪಾಲರು ʻಎರಡೂ ಮನವಿಗಳನ್ನು ನಾನು ಪರಿಶೀಲಿಸಿದ್ದೇನೆ. ಈ ಮಸೂದೆಯು ಕಾನೂನಾತ್ಮಕ ಮತ್ತು ಸಾರ್ವಜನಿಕ ಹಿತಾಸಕ್ತಿಯ ವಿಷಯಗಳನ್ನು ಒಳಗೊಂಡಿದೆ. ಆದ್ದರಿಂದ ಎರಡೂ ಮನವಿ ಪತ್ರಗಳಲ್ಲಿ ಪ್ರಸ್ತಾಪಿಸಿರುವ ಪ್ರಮುಖ ವಿಷಯಗಳ ಕುರಿತು ಸ್ಪಷ್ಟನೆ ಅಗತ್ಯವಿದೆ’ ಎಂದು ಮಾರ್ಚ್ 25ರಂದು ಮಸೂದೆಯನ್ನು ಹಿಂದಿರುಗಿಸಿದ್ದರು. ಅದಕ್ಕೆ ಅಗತ್ಯ ಸ್ಪಷನೆಯನ್ನು ರಾಜ್ಯ ಸರ್ಕಾರ ನೀಡಿತ್ತು. ಏಪ್ರಿಲ್ 24ರಂದು ಮಸೂದೆಗೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದರು. ಅಂದು ಸಂಜೆಯೇ ‘ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ- 2024’ ಅನ್ನು ಅಧಿಸೂಚಿಸಿ, ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿತ್ತು.
ಮೇ 15ರಿಂದ:
ಸದ್ಯ ಬಿಬಿಎಂಪಿಯ 225 ವಾರ್ಡ್ಗಳು ಜೆಬಿಎ ವ್ಯಾಪ್ತಿಯಲ್ಲಿರಲಿದೆ. ನಂತರ ಬಿಬಿಎಂಪಿ ವ್ಯಾಪ್ತಿ ಮಾತ್ರ ʻಗ್ರೇಟರ್ ಬೆಂಗಳೂರು ಪ್ರದೇಶʼ ಎಂದಾಗಲಿದ್ದರೂ ನಂತರದ ದಿನಗಳಲ್ಲಿ ವ್ಯಾಪ್ತಿ ಹಿಗ್ಗಲಿದೆ. ತಲಾ ಸುಮಾರು 125 ವಾರ್ಡ್ಗಳ ಮೂರು ನಗರ ಪಾಲಿಕೆಗಳನ್ನು ರಚಿಸುವ ಯೋಜನೆ ಇದ್ದು ಅದಕ್ಕೆ ತಕ್ಕಂತೆ ʻಗ್ರೇಟರ್ ಬೆಂಗಳೂರು ಪ್ರದೇಶʼದ ಗಡಿಯನ್ನು ಗುರುತಿಸಲಾಗುತ್ತದೆ. ನಗರದ ಸುತ್ತಲಿರುವ ಕೈಗಾರಿಕಾ ಪ್ರದೇಶಗಳನ್ನೂ ಒಳಗೊಂಡಂತೆ ಎಲೆಕ್ಟ್ರಾನಿಕ್ ಸಿಟಿ ಅತ್ತಿಬೆಲೆ ಜಿಗಣಿ ಕೈಗಾರಿಕೆ ಪ್ರದೇಶ ಬೊಮ್ಮಸಂದ್ರ, ಸರ್ಜಾಪುರ, ಬಾಗಲೂರು, ರಾಜಾನುಕುಂಟೆ, ಹೆಸರಘಟ್ಟ, ದಾಸನಪುರ, ಮಾಕಳಿ, ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ʻಗ್ರೇಟರ್ ಬೆಂಗಳೂರು ಪ್ರದೇಶʼಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ಇದೆ. ಕಾಯ್ದೆಯಲ್ಲೇ ಇರುವಂತೆ ಎಲ್ಲ ನಗರ ಪಾಲಿಕೆಗಳ ಹೆಸರು ʻಬೆಂಗಳೂರುʼ ಎಂದೇ ಆರಂಭವಾಗಬೇಕಿದೆ. ʻಬೆಂಗಳೂರು ಕೇಂದ್ರ ನಗರ ಪಾಲಿಕೆʼ ʻಬೆಂಗಳೂರು ಉತ್ತರ ನಗರ ಪಾಲಿಕೆʼ ʻಬೆಂಗಳೂರು ದಕ್ಷಿಣ ನಗರ ಪಾಲಿಕೆʼ… ಹೀಗೆ ಹೆಸರಿಸಲಾಗುತ್ತದೆ. ʻಗ್ರೇಟರ್ ಬೆಂಗಳೂರು ಪ್ರದೇಶʼ ವ್ಯಾಪ್ತಿಯನ್ನು ಹಿಗ್ಗಿಸಿದ ಮೇಲೆ ಅದರನ್ವಯ ಮೂರು ಅಥವಾ ಐದು ನಗರಪಾಲಿಕೆಗಳನ್ನು ರಚಿಸಲಾಗುತ್ತದೆ ಎಂದು ಸರ್ಕಾರಿ ಮೂಲಗಳು ಮಾಹಿತಿ ನೀಡಿವೆ.
ಬಿಬಿಎಂಪಿ
ಬೈಕ್..ಕಾರ್ ತೊಳೆಯಲು ಕುಡಿಯುವ ನೀರು ಬಳಕೆ: ಬೆಂಗಳೂರಲ್ಲಿ ಬಿತ್ತು ಲಕ್ಷ ಲಕ್ಷ ದಂಡ

ಬೆಂಗಳೂರು: ನಗರದಲ್ಲಿ ಬಿಸಿಲಿನ ಆರ್ಭಟ ಶುರುವಾಗಿದ್ದು, ಜನರ ಬಸವಳಿದಿದ್ದಾರೆ, ಈ ಸಮಯದಲ್ಲೇ ನೀರಿಗೂ ಹಾಹಾಕಾರ ಎದುರಾಗುವ ಚಿಂತೆ ಶುರುವಾಗಿದೆ, ಬೇಸಿಗೆಯ ಬಿಸಿ ಹೆಚ್ಚಾದಂತೆ ನೀರಿಗಾಗಿ ಹಾಹಾಕಾರ ಶುರುವಾಗುವ ಸಾಧ್ಯತೆ ಇದೆ, ಹೀಗಾಗಿ ನೀರು ಪೋಲು ಮಾಡುವುದನ್ನು ತಡೆಗಟ್ಟಲು ಈಗಾಗಲೇ ಜಲಮಂಡಲಿ ದಂಡಾಸ್ತ್ರ ಪ್ರಯೋಗ ಶುರು ಮಾಡಿದ.
ನೀರು ದುರ್ಬಳಕೆ ಮಾಡಿಕೊಳ್ಳುವವರ ವಿರುದ್ಧ ಬೆಂಗಳೂರು ಜಲ ಮಂಡಳಿ ಕಠಿಣ ಕ್ರಮ ಕೈಗೊಳ್ಳುತ್ತಿದ್ದು, ಈವರೆಗೂ 5.60 ಲಕ್ಷ ರೂಪಾಯಿ ದಂಡ ವಿಧೀಸಿದೆ,
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕುಡಿಯುವ ನೀರನ್ನು ಅನ್ಯ ಉದ್ದೇಶಗಳಿಗೆ ಬಳಸದಂತೆ ನಿಷೇಧ ಹೇರಲಾಗಿದ್ದು, ಬೆಂಗಳೂರು ಜಲ ಮಂಡಳಿಯು ಆದೇಶ ಹೊರಡಿಸಿ, ಈಗಾಗಲೇ ಒಂದು ವಾರ ಕಳೆದಿದೆ, ಈ ಒಂದು ವಾರದಲ್ಲಿ ಸುಮಾರು 112 ಪ್ರಕರಣ ದಾಖಲಿಸಿರುವ ಅಧಿಕಾರಿಗಳು, ದಂಡ ಪ್ರಯೋಗ ಮಾಡಿದ್ದಾರೆ,
ಕಾರು,ಬೈಕು ತೊಳೆಯಲು ಮತ್ತು, ಅಂಗಳ ಸ್ವಚ್ಛತೆ,ಗಾರ್ಡನ್ ಗೆ ಕುಡಿಯುವ ನೀರು ಹಾಕಿದವರಿಗೆ ಒಟ್ಟಾರೆ 5.60 ಲಕ್ಷ ದಂಡ ವಿಧಿಸಲಾಗಿದೆ, ಈ ಮೂಲಕ ಬೇಸಿಗೆಯ ಆರಂಭಕ್ಕೂ ಮೊದಲೇ ನೀರು ಪೋಲು ಮಾಡದಿರುವಂತೆ ಸಾರ್ವಜನಕರಿಗೆ ಖಡಕ್ ಎಚ್ಚರಿಕೆ ಸಂದೇಶ ರವಾನೆಯಾಗಿದ್ದು, ಕುಡಿಯುವ ನೀರು ಉಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ,
ಬಿಬಿಎಂಪಿ
ನಾಳೆ ಗಣೇಶ ಚತುರ್ಥಿ: ಬೆಂಗಳೂರು ನಗರದಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

ಬೆಂಗಳೂರು: ನಾಳೆ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬೆಂಗಳೂರು ನಗರದಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿದೆ. ಈ ಕುರಿತು ಬಿಬಿಎಂಪಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ನಾಳೆ ಶನಿವಾರ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರುವಂತಿಲ್ಲ ಎಂದು ಬಿಬಿಎಂಪಿ ಜಂಟಿ ನಿರ್ದೇಶಕರು (ಪಶುಪಾಲನೆ) ಸುತ್ತೋಲೆ ಹೊರಡಿಸಿದ್ದಾರೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಗಣೇಶ ಹಬ್ಬಕ್ಕೆ ಬೆಸ್ಕಾಂ ಮಾರ್ಗಸೂಚಿ: ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆ, ವಿಸರ್ಜನೆ, ಮೆರವಣಿಗೆ ವೇಳೆ ವಿದ್ಯುತ್ ಅವಘಡಗಳ ಬಗ್ಗೆ ಎಚ್ಚರವಹಿಸುವಂತೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಕೆಲ ಮಾರ್ಗ ಸೂಚನೆಗಳನ್ನು ಬಿಡುಗಡೆ ಮಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬೆಸ್ಕಾಂ, ವಿದ್ಯುತ್ ಅವಘಡಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮಾರ್ಗಸೂಚಿಗಳನ್ನು ಅನುಸರಿಸುವ ಮೂಲಕ ಸುರಕ್ಷತೆಗೆ ಆದ್ಯತೆ ನೀಡಿ. ಜಾಗರೂಕರಾಗಿರಿ, ಯಾವುದೇ ವಿದ್ಯುತ್ ಅವಘಡಗಳಿಗೆ ಕೂಡಲೇ 1912 ಸಹಾಯವಾಣಿಗೆ ಕರೆ ಮಾಡಿ. ಒಟ್ಟಾಗಿ, ನಾವು ಈ ಹಬ್ಬವನ್ನು ಸುರಕ್ಷಿತವಾಗಿ ಮತ್ತು ಸ್ಮರಣೀಯವಾಗಿಸೋಣ ಎಂದು ತಿಳಿಸಿದೆ.
-
ಬಿಬಿಎಂಪಿ4 weeks ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು1 year ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು7 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ