Connect with us

ರಾಜ್ಯ

ಒನ್ ಅಂಡ್ ಓನ್ಲಿ ವರು.. ಮಜಾ ಟಾಕೀಸ್‌ನಲ್ಲಿ ಅಭಿನಯಿಸಲು ಅಪರ್ಣಾ ಒಪ್ಪಿದ್ದು ಹೇಗೆ? ಸೃಜನ್ ಲೋಕೇಶ್ ಹೇಳಿದ್ದೇನು?

Published

on

ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ ಹಾಗೂ ನಟಿ ಅಪರ್ಣಾ ನಿಧನರಾಗಿದ್ದಾರೆ. ಸ್ವಚ್ಛ ಕನ್ನಡದ ಮರೆಯಲಾಗದ ಧ್ವನಿ ಮೌನವಾಗಿರುವುದು ಕಲಾಭಿಮಾನಿಗಳಿಗೆ ಸಹಿಸಲಾರದ ನೋವು ತಂದಿದೆ. ಅಪರ್ಣಾ ಅವರ ಅಂತಿಮ ದರ್ಶನ ಪಡೆದ ಕನ್ನಡ ಚಿತ್ರರಂಗದ ಅನೇಕ ನಟ, ನಟಿಯರು ಭಾವಪೂರ್ಣ ನಮನ ಸಲ್ಲಿಸಿದ್ದಾರೆ.

ಕನ್ನಡ ಭಾಷೆಯ ಸೊಗಸಾದ ನಿರೂಪಣೆಯಲ್ಲಿ ಅಪರ್ಣಾ ಅವರು ಸಾಕಷ್ಟು ಜನಮನ್ನಣೆ ಗಳಿಸಿದ್ದರು. ಇತ್ತೀಚೆಗೆ ಅಪರ್ಣಾ ಅವರ ಸಿನಿ ಪಯಣದಲ್ಲಿ ಹೊಸ ಹುರುಪು ತಂದಿದ್ದು, ಸೃಜನ್ ಲೋಕೇಶ್ ನಿರ್ಮಾಣದ ಮಜಾ ಟಾಕೀಸ್‌. ಮಜಾ ಟಾಕೀಸ್‌ನಲ್ಲಿ ಅಪರ್ಣಾ ಅವರ ಅಭಿನಯಕ್ಕೆ ಮನಸೋಲದವರೇ ಇಲ್ಲ.

ತುಂಬಾ ಗಂಭೀರ ಸ್ವಭಾವದ ಅಪರ್ಣಾ ಅವರು ಮಜಾಟಾಕೀಸ್‌ನಂತ ಕಾಮಿಡಿ ಪಾತ್ರದಲ್ಲಿ ಅಭಿನಯಿಸಿದ್ದೇ ಒಂದು ಅಮೋಘ. ಒನ್ ಅಂಡ್ ಓನ್ಲಿ ವರಲಕ್ಷ್ಮಿಯಾಗಿ ಅಪರ್ಣಾ ಅವರು ಅಭಿನಯಿಸಿದ್ದು ಮತ್ತೊಂದು ಅದ್ಭುತ. ಅಪರ್ಣಾ ಅವರನ್ನು ಮಜಾಟಾಕೀಸ್‌ನಲ್ಲಿ ಅಭಿನಯಿಸುವಂತೆ ಅವಕಾಶ ಕೊಟ್ಟ ಸೃಜನ್ ಲೋಕೇಶ್ ಅವರು ಭಾವುಕರಾಗಿದ್ದಾರೆ.

ಅಪರ್ಣಾ ಅವರ ಮೇರು ವ್ಯಕ್ತಿತ್ವದ ಬಗ್ಗೆ ಮಾತನಾಡಿದ ಸೃಜನ್ ಲೋಕೇಶ್ ಅವರು ಮಜಾ ಟಾಕೀಸ್ ರೀ ಲಾಂಜ್ ಬಗ್ಗೆ ನಿನ್ನೆಯೂ ಮಾತನಾಡುತ್ತಿದ್ದೆ. 20-30 ವರ್ಷಗಳ ಹಿಂದೆ ಅಪರ್ಣಾ ಅವರಿಗಿದ್ದ ಐಡೆಂಟಿಟಿ ಕಂಪ್ಲೀಟ್ ಬದಲಾಗಿದ್ದು ಮಜಾ ಟಾಕೀಸ್‌ನಲ್ಲಿ. ಈ ತರಹನೂ ಒಬ್ಬರ ವ್ಯಕ್ತಿತ್ವವನ್ನು ಬದಲಾಯಿಸಿಕೊಳ್ಳಬಹುದು ಅನ್ನೋದು ತೋರಿಸಿಕೊಟ್ಟ ಪ್ರತಿಭೆ ಅಪರ್ಣಾ ಅವರು. ಅಪರ್ಣಾ ಅವರಿಗೆ ಅಪರ್ಣಾನೇ ಸಾಟಿ ಎಂದರು.

ಅಪರ್ಣಾ ಅವರ ಸಾಧನೆ ಹಾಗೂ ವ್ಯಕ್ತಿತ್ವ ಅಷ್ಟು ದೊಡ್ಡದು. ಅವರಿಗಿದ್ದ ಕ್ಯಾನ್ಸರ್ ಕಾಯಿಲೆ ಬಗ್ಗೆ ಯಾರಿಗೂ ಹೇಳದೆ ಮುಚ್ಚಿಟ್ಟಿದ್ದರು. ಈಗಲೂ ಮಜಾ ಟಾಕೀಸ್ ನೋಡುವಾಗ ಅಪರ್ಣಾ ತುಂಬಾ ಖುಷಿ ಪಡುತ್ತಿದ್ದರು. ಡಾಕ್ಟರ್ ಅಪರ್ಣಾ ಅವರಿಗೆ ಹೆಚ್ಚು ಹೆಚ್ಚು ಮಜಾ ಟಾಕೀಸ್ ನೋಡಲು ಸಲಹೆ ನೀಡುತ್ತಿದ್ದರು.

ಮಜಾ ಟಾಕೀಸ್‌ ಶೋಗೆ ಅಪರ್ಣಾ ಅವರನ್ನು ಮೊದಲು ಆಯ್ಕೆ ಮಾಡಿದ್ದು ನಾನಲ್ಲ, ನನ್ನ ಪತ್ನಿ. ನನ್ನ ಹೆಂಡ್ತಿ ಅಪರ್ಣಾ ಅವರ ಜೊತೆ ಕೆಲಸ ಮಾಡುವಾಗ ಅವರ ಹಾಸ್ಯ ಪ್ರಜ್ಞೆಯ ಬಗ್ಗೆ ಹೇಳಿದ್ದರು. ಅವರು ಎಷ್ಟು ನಗಿಸುತ್ತಾರೆ ಅನ್ನೋದು ನಿಮಗೆ ಗೊತ್ತಿಲ್ಲ ಎಂದಿದ್ದರು. ಆಗ ನಾನು ಅಪರ್ಣಾ ಅವರ ಜೊತೆ ಮಾತನಾಡಿದೆ. 2ನೇ ದಿನಕ್ಕೆ ಅಪರ್ಣಾ ಅವರು ತುಂಬಾ ಹೆದರಿಕೊಂಡಿದ್ದರು. ನನ್ನ ಬಗ್ಗೆ ತುಂಬಾ ಜನ ಮಾತನಾಡಿದ್ದಾರೆ ಎಂದರು ಆಗ ನಾನು ನನ್ನ ಮೇಲೆ ನಂಬಿಕೆಯಿಟ್ಟು ಧೈರ್ಯ ತುಂಬಿದೆ. ಆಸ್ಟ್ರೇಲಿಯಾ ಶೋ ಮಾಡಲು ಹೋದಾಗ ನಾನು ಅಂದು ಹೇಳಿದ ಮಾತನ್ನು ನೆನಪಿಸಿಕೊಂಡಿದ್ದರು.

ಅಪರ್ಣಾ ಅವರಿಗೆ ನಾನು ವರಲಕ್ಷ್ಮಿ ಅನ್ನೋ ಪಾತ್ರ ಮಾಡಲು ಹೇಳಿದ್ದೆ. ಅವರೇ ಒನ್ ಅಂಡ್ ಓನ್ಲಿ ವರಲಕ್ಷ್ಮಿ ಅವರನ್ನು ಸೇರಿಸಿಕೊಂಡಿದ್ದರು. ತುಂಬಾ ತರ್ಲೆಗಳನ್ನು ಮಾಡಿದ್ದರು. ಮತ್ತೆ ಅದೇ ರೀತಿಯ ಅಪರ್ಣಾ ಅವರನ್ನು ಕಾಣಲು ಸಾಧ್ಯವಿಲ್ಲ ಎಂದು ಸೃಜನ್ ಲೋಕೇಶ್ ಹೇಳಿದ್ದಾರೆ.

ದೇಶ

K. Govindraj ಸೇರಿ ಗಣ್ಯರಿಗೆ ಗೌರವ ಡಾಕ್ಟರೇಟ್ – ಬಿಸಿಯು ಘಟಿಕೋತ್ಸವ ಸಂಭ್ರಮ

Published

on

By

ಬೆಂಗಳೂರು: Bengaluru City University (ಬಿಸಿಯು) 5ನೇ ಘಟಿಕೋತ್ಸವ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮಕ್ಕೆ ಕುಲಾಧಿಪತಿಗಳಾದ Thawar Chand Gehlot ಚಾಲನೆ ನೀಡಿದರು.

ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಈ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ Dr. Binay Kumar Das, Defence Research and Development Organisation (ಡಿಆರ್‌ಡಿಒ) ಮಹಾ ನಿರ್ದೇಶಕರು (ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ಸಿಸ್ಟಮ್ಸ್) ಭಾಗವಹಿಸಿದ್ದರು.

ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 6 ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಸಂಗೀತ ನಿರ್ದೇಶಕ Arjun Janya, ಕ್ರಿಕೆಟರ್ Venkatesh Prasad, ಶಿಕ್ಷಣ ತಜ್ಞ T. K. Narayanappa, ಎಂಎಲ್ಸಿ K. Govindaraj, ಶಿಕ್ಷಣ ಕ್ಷೇತ್ರದ Mohan Alva ಹಾಗೂ ಕೈಗಾರಿಕೋದ್ಯಮಿ Bava Mohammed Farooq ಅವರಿಗೆ ರಾಜ್ಯಪಾಲರು ಗೌರವಿಸಿದರು.

ಉಪ ಚುನಾವಣೆ ಪ್ರಚಾರದ ಹಿನ್ನೆಲೆ, ಉನ್ನತ ಶಿಕ್ಷಣ ಸಚಿವ Dr. C. N. Ashwath Narayan ಗೈರಾಗಿದ್ದರು.

ಘಟಿಕೋತ್ಸವದಲ್ಲಿ 73 ಪ್ರಥಮ ರ‍್ಯಾಂಕ್ ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಪ್ರಮಾಣಪತ್ರ ಮತ್ತು ನಗದು ಬಹುಮಾನ ವಿತರಿಸಲಾಯಿತು. ಒಟ್ಟು 37,370 ವಿದ್ಯಾರ್ಥಿಗಳಿಗೆ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರದಾನವಾಗಿದ್ದು, 23 ವಿದ್ಯಾರ್ಥಿಗಳಿಗೆ ಪಿಎಚ್‌ಡಿ ಪದವಿ ನೀಡಲಾಯಿತು.

ವಿಶೇಷವಾಗಿ, ಸ್ನೇಹಾ ಟಿ (ಎಂಎಸ್‌ಸಿ ರಸಾಯನಶಾಸ್ತ್ರ) 4 ಚಿನ್ನದ ಪದಕಗಳನ್ನು ಪಡೆದು ಸಾಧನೆ ಮಾಡಿದ್ದು, ಅಭಿಷೇಕ್ ಶ್ರೀರಾಮ್ (ಬಿಕಾಂ) 3 ಚಿನ್ನದ ಪದಕ, ದಿವ್ಯಶ್ರೀ ಎಸ್ (ಬಿಬಿಎ) 3 ಚಿನ್ನದ ಪದಕ ಪಡೆದು ಗಮನಸೆಳೆದಿದ್ದಾರೆ.

ಗೌರವ ಡಾಕ್ಟರೇಟ್ ಪಡೆದ ಬಳಿಕ Arjun Janya ಅವರು ಮಾತನಾಡಿ, ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಕೃತಜ್ಞತೆ ಸಲ್ಲಿಸಿದರು.

Continue Reading

ದೇಶ

ಹಳೆಯ ವಾಹನಗಳಿಗೆ HSRP ಕಡ್ಡಾಯವೇ? ಸಾರಿಗೆ ಇಲಾಖೆಯ ಸ್ಪಷ್ಟನೆ ಏನು ಗೊತ್ತಾ?

Published

on

ಬೆಂಗಳೂರು: ಹಳೆಯ ವಾಹನಗಳಿಗೆ ಹೈ ಸಿಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ (HSRP) ಅಳವಡಿಕೆ ಕಡ್ಡಾಯವಲ್ಲ ಎಂಬ ಸುದ್ದಿಗಳು ಇತ್ತೀಚೆಗೆ ಕೆಲವು ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದರೂ, ಇದಕ್ಕೆ ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದೆ. ಇಂತಹ ಸುದ್ದಿಗಳು ಸುಳ್ಳು ಎಂದು ಹೇಳಿ ಸಾರ್ವಜನಿಕರು ಯಾವುದೇ ವದಂತಿಗಳನ್ನು ನಂಬಬಾರದು ಎಂದು ಮನವಿ ಮಾಡಿದೆ.

ಕೇಂದ್ರ ಮೋಟಾರು ವಾಹನಗಳ ನಿಯಮಗಳು 1989ರ ನಿಯಮ 50ರಡಿ, ಕೇಂದ್ರ ಸರ್ಕಾರವು 2018 ಡಿಸೆಂಬರ್ 4ರಂದು ಅಧಿಸೂಚನೆ ಹೊರಡಿಸಿದ್ದು, 2019 ಏಪ್ರಿಲ್ 1ಕ್ಕಿಂತ ಮುಂಚಿತವಾಗಿ ನೋಂದಾಯಿತವಾಗಿರುವ ಎಲ್ಲಾ ವಾಹನಗಳಿಗೆ HSRP ಅಳವಡಿಕೆ ಕಡ್ಡಾಯಗೊಳಿಸಲಾಗಿದೆ. ಈ ನಿಯಮವನ್ನು ಅನುಸರಿಸಿ, ಕರ್ನಾಟಕ ಸರ್ಕಾರವು 2023 ಆಗಸ್ಟ್ 17ರಂದು ಅಧಿಸೂಚನೆ ಹೊರಡಿಸಿ ರಾಜ್ಯದಲ್ಲಿಯೂ ಇದೇ ನಿಯಮವನ್ನು ಜಾರಿಗೆ ತಂದಿದೆ.

ಇದಕ್ಕೂ ನಡುವೆ, HSRP ಅಳವಡಿಕೆ ಸಂಬಂಧ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಸರ್ಕಾರವು ಯಾವುದೇ ತರಾತುರಿ ಕ್ರಮ ಕೈಗೊಳ್ಳಬಾರದು ಎಂದು ಸೂಚಿಸಿದೆ. ಆದರೆ, ಈ ಆದೇಶವು HSRP ಕಡ್ಡಾಯ ಆದೇಶವನ್ನು ರದ್ದುಪಡಿಸುವುದಿಲ್ಲ ಎಂಬುದು ಮುಖ್ಯ.

ಸಾರಿಗೆ ಇಲಾಖೆಯ ಪ್ರಕಾರ, ಹೈಕೋರ್ಟ್ ಆದೇಶದಿಂದ ಹೊಸ ಕ್ರಮಗಳನ್ನು ಕೈಗೊಳ್ಳಲು ಅಡ್ಡಿಯಿದ್ದರೂ, HSRP ಅಳವಡಿಕೆ ಕುರಿತ ಅಧಿಸೂಚನೆ ಇನ್ನೂ ಜಾರಿಯಲ್ಲಿಯೇ ಇದೆ. ಆದ್ದರಿಂದ, ಸಾರ್ವಜನಿಕರು ತಮ್ಮ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವುದು ಕಡ್ಡಾಯವಾಗಿದೆ.

ವದಂತಿಗಳಿಂದ ಗೊಂದಲಕ್ಕೀಡಾಗಬಾರದು ಎಂದು ಸಾರಿಗೆ ಇಲಾಖೆ ಮತ್ತೊಮ್ಮೆ ಸ್ಪಷ್ಟಪಡಿಸಿದೆ.

Continue Reading

ಕ್ರೀಡೆ

ಗ್ಯಾಸ್‌ಗಾಗಿ ಜನ ಸಾಲು, ಟಿಕೆಟ್‌ಗಾಗಿ ಪಿಎ ಸಾಲು: ಶಾಸಕರಿಗೆ ಟೀಕೆ!

Published

on

ಬೆಂಗಳೂರು: ರಾಜ್ಯದಲ್ಲಿ ಅಡುಗೆ ಅನಿಲ ಕೊರತೆಯಿಂದ ಜನರು ಸಂಕಷ್ಟ ಅನುಭವಿಸುತ್ತಿರುವ ನಡುವೆ, ಜನಪ್ರತಿನಿಧಿಗಳ ವರ್ತನೆ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಒಂದು ಕಡೆ ಆಟೋ ಚಾಲಕರು ಗ್ಯಾಸ್‌ಗಾಗಿ ರಾತ್ರಿಯಿಡೀ ಸಾಲಿನಲ್ಲಿ ನಿಲ್ಲುತ್ತಿರುವಾಗ, ಇನ್ನೊಂದು ಕಡೆ ಶಾಸಕರು IPL 2026 ಟಿಕೆಟ್ ಪಡೆಯಲು ತಮ್ಮ ಪಿಎಗಳನ್ನು ಕ್ಯೂನಲ್ಲಿ ನಿಲ್ಲಿಸಿರುವುದು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಮಾಹಿತಿಯ ಪ್ರಕಾರ, ಸರ್ಕಾರ ಮತ್ತು Karnataka State Cricket Association (KSCA) ನಡುವೆ ಪ್ರತಿ ಐಪಿಎಲ್ ಪಂದ್ಯಕ್ಕೆ ಶಾಸಕರಿಗೆ ಉಚಿತವಾಗಿ 3 ಟಿಕೆಟ್ ನೀಡುವ ಕುರಿತು ಒಪ್ಪಂದವಾಗಿದೆ. ಇದರ ಹಿನ್ನೆಲೆಯಲ್ಲಿ, Royal Challengers Bengaluru ಮತ್ತು Chennai Super Kings ನಡುವಿನ ಪಂದ್ಯಕ್ಕೆ ಟಿಕೆಟ್ ಪಡೆಯಲು ಶಾಸಕರ ಪಿಎಗಳು ಸ್ಪೀಕರ್ ಕಚೇರಿ ಮುಂದೆ ಸಾಲಿನಲ್ಲಿ ನಿಂತಿರುವ ದೃಶ್ಯಗಳು ಗಮನ ಸೆಳೆದಿವೆ.

ಸ್ಪೀಕರ್ ಕಚೇರಿಯಲ್ಲೇ ಟಿಕೆಟ್ ವಿತರಣೆ ನಡೆಯುತ್ತಿರುವುದರಿಂದ, ಶಾಸಕರ ಸೂಚನೆ ಮೇರೆಗೆ ಪಿಎಗಳು ಟಿಕೆಟ್ ಪಡೆಯಲು ಕ್ಯೂನಲ್ಲಿ ನಿಂತಿದ್ದಾರೆ ಎಂದು ತಿಳಿದುಬಂದಿದೆ.

ಇದರಿಂದ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಜನಪ್ರತಿನಿಧಿಗಳು ತಮ್ಮ ವೈಯಕ್ತಿಕ ಆಸಕ್ತಿಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ ಎಂಬ ಟೀಕೆಗಳು ಕೇಳಿಬರುತ್ತಿವೆ. ಗ್ಯಾಸ್ ಕೊರತೆ, ದೈನಂದಿನ ಸಮಸ್ಯೆಗಳ ನಡುವೆ ಈ ರೀತಿಯ ಘಟನೆಗಳು ಸಾರ್ವಜನಿಕರ ಅಸಮಾಧಾನವನ್ನು ಮತ್ತಷ್ಟು ಹೆಚ್ಚಿಸಿವೆ.

ರಾಜಕೀಯ ವಲಯದಲ್ಲಿಯೂ ಈ ಘಟನೆ ಚರ್ಚೆಗೆ ಕಾರಣವಾಗಿದ್ದು, ಜನಪ್ರತಿನಿಧಿಗಳು ತಮ್ಮ ಜವಾಬ್ದಾರಿಗಳನ್ನು ಮರೆಯಬಾರದು ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

Continue Reading

Trending