ರಾಜ್ಯ
ಒನ್ ಅಂಡ್ ಓನ್ಲಿ ವರು.. ಮಜಾ ಟಾಕೀಸ್ನಲ್ಲಿ ಅಭಿನಯಿಸಲು ಅಪರ್ಣಾ ಒಪ್ಪಿದ್ದು ಹೇಗೆ? ಸೃಜನ್ ಲೋಕೇಶ್ ಹೇಳಿದ್ದೇನು?

ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ ಹಾಗೂ ನಟಿ ಅಪರ್ಣಾ ನಿಧನರಾಗಿದ್ದಾರೆ. ಸ್ವಚ್ಛ ಕನ್ನಡದ ಮರೆಯಲಾಗದ ಧ್ವನಿ ಮೌನವಾಗಿರುವುದು ಕಲಾಭಿಮಾನಿಗಳಿಗೆ ಸಹಿಸಲಾರದ ನೋವು ತಂದಿದೆ. ಅಪರ್ಣಾ ಅವರ ಅಂತಿಮ ದರ್ಶನ ಪಡೆದ ಕನ್ನಡ ಚಿತ್ರರಂಗದ ಅನೇಕ ನಟ, ನಟಿಯರು ಭಾವಪೂರ್ಣ ನಮನ ಸಲ್ಲಿಸಿದ್ದಾರೆ.
ಕನ್ನಡ ಭಾಷೆಯ ಸೊಗಸಾದ ನಿರೂಪಣೆಯಲ್ಲಿ ಅಪರ್ಣಾ ಅವರು ಸಾಕಷ್ಟು ಜನಮನ್ನಣೆ ಗಳಿಸಿದ್ದರು. ಇತ್ತೀಚೆಗೆ ಅಪರ್ಣಾ ಅವರ ಸಿನಿ ಪಯಣದಲ್ಲಿ ಹೊಸ ಹುರುಪು ತಂದಿದ್ದು, ಸೃಜನ್ ಲೋಕೇಶ್ ನಿರ್ಮಾಣದ ಮಜಾ ಟಾಕೀಸ್. ಮಜಾ ಟಾಕೀಸ್ನಲ್ಲಿ ಅಪರ್ಣಾ ಅವರ ಅಭಿನಯಕ್ಕೆ ಮನಸೋಲದವರೇ ಇಲ್ಲ.
ತುಂಬಾ ಗಂಭೀರ ಸ್ವಭಾವದ ಅಪರ್ಣಾ ಅವರು ಮಜಾಟಾಕೀಸ್ನಂತ ಕಾಮಿಡಿ ಪಾತ್ರದಲ್ಲಿ ಅಭಿನಯಿಸಿದ್ದೇ ಒಂದು ಅಮೋಘ. ಒನ್ ಅಂಡ್ ಓನ್ಲಿ ವರಲಕ್ಷ್ಮಿಯಾಗಿ ಅಪರ್ಣಾ ಅವರು ಅಭಿನಯಿಸಿದ್ದು ಮತ್ತೊಂದು ಅದ್ಭುತ. ಅಪರ್ಣಾ ಅವರನ್ನು ಮಜಾಟಾಕೀಸ್ನಲ್ಲಿ ಅಭಿನಯಿಸುವಂತೆ ಅವಕಾಶ ಕೊಟ್ಟ ಸೃಜನ್ ಲೋಕೇಶ್ ಅವರು ಭಾವುಕರಾಗಿದ್ದಾರೆ.
ಅಪರ್ಣಾ ಅವರ ಮೇರು ವ್ಯಕ್ತಿತ್ವದ ಬಗ್ಗೆ ಮಾತನಾಡಿದ ಸೃಜನ್ ಲೋಕೇಶ್ ಅವರು ಮಜಾ ಟಾಕೀಸ್ ರೀ ಲಾಂಜ್ ಬಗ್ಗೆ ನಿನ್ನೆಯೂ ಮಾತನಾಡುತ್ತಿದ್ದೆ. 20-30 ವರ್ಷಗಳ ಹಿಂದೆ ಅಪರ್ಣಾ ಅವರಿಗಿದ್ದ ಐಡೆಂಟಿಟಿ ಕಂಪ್ಲೀಟ್ ಬದಲಾಗಿದ್ದು ಮಜಾ ಟಾಕೀಸ್ನಲ್ಲಿ. ಈ ತರಹನೂ ಒಬ್ಬರ ವ್ಯಕ್ತಿತ್ವವನ್ನು ಬದಲಾಯಿಸಿಕೊಳ್ಳಬಹುದು ಅನ್ನೋದು ತೋರಿಸಿಕೊಟ್ಟ ಪ್ರತಿಭೆ ಅಪರ್ಣಾ ಅವರು. ಅಪರ್ಣಾ ಅವರಿಗೆ ಅಪರ್ಣಾನೇ ಸಾಟಿ ಎಂದರು.
ಅಪರ್ಣಾ ಅವರ ಸಾಧನೆ ಹಾಗೂ ವ್ಯಕ್ತಿತ್ವ ಅಷ್ಟು ದೊಡ್ಡದು. ಅವರಿಗಿದ್ದ ಕ್ಯಾನ್ಸರ್ ಕಾಯಿಲೆ ಬಗ್ಗೆ ಯಾರಿಗೂ ಹೇಳದೆ ಮುಚ್ಚಿಟ್ಟಿದ್ದರು. ಈಗಲೂ ಮಜಾ ಟಾಕೀಸ್ ನೋಡುವಾಗ ಅಪರ್ಣಾ ತುಂಬಾ ಖುಷಿ ಪಡುತ್ತಿದ್ದರು. ಡಾಕ್ಟರ್ ಅಪರ್ಣಾ ಅವರಿಗೆ ಹೆಚ್ಚು ಹೆಚ್ಚು ಮಜಾ ಟಾಕೀಸ್ ನೋಡಲು ಸಲಹೆ ನೀಡುತ್ತಿದ್ದರು.
ಮಜಾ ಟಾಕೀಸ್ ಶೋಗೆ ಅಪರ್ಣಾ ಅವರನ್ನು ಮೊದಲು ಆಯ್ಕೆ ಮಾಡಿದ್ದು ನಾನಲ್ಲ, ನನ್ನ ಪತ್ನಿ. ನನ್ನ ಹೆಂಡ್ತಿ ಅಪರ್ಣಾ ಅವರ ಜೊತೆ ಕೆಲಸ ಮಾಡುವಾಗ ಅವರ ಹಾಸ್ಯ ಪ್ರಜ್ಞೆಯ ಬಗ್ಗೆ ಹೇಳಿದ್ದರು. ಅವರು ಎಷ್ಟು ನಗಿಸುತ್ತಾರೆ ಅನ್ನೋದು ನಿಮಗೆ ಗೊತ್ತಿಲ್ಲ ಎಂದಿದ್ದರು. ಆಗ ನಾನು ಅಪರ್ಣಾ ಅವರ ಜೊತೆ ಮಾತನಾಡಿದೆ. 2ನೇ ದಿನಕ್ಕೆ ಅಪರ್ಣಾ ಅವರು ತುಂಬಾ ಹೆದರಿಕೊಂಡಿದ್ದರು. ನನ್ನ ಬಗ್ಗೆ ತುಂಬಾ ಜನ ಮಾತನಾಡಿದ್ದಾರೆ ಎಂದರು ಆಗ ನಾನು ನನ್ನ ಮೇಲೆ ನಂಬಿಕೆಯಿಟ್ಟು ಧೈರ್ಯ ತುಂಬಿದೆ. ಆಸ್ಟ್ರೇಲಿಯಾ ಶೋ ಮಾಡಲು ಹೋದಾಗ ನಾನು ಅಂದು ಹೇಳಿದ ಮಾತನ್ನು ನೆನಪಿಸಿಕೊಂಡಿದ್ದರು.
ಅಪರ್ಣಾ ಅವರಿಗೆ ನಾನು ವರಲಕ್ಷ್ಮಿ ಅನ್ನೋ ಪಾತ್ರ ಮಾಡಲು ಹೇಳಿದ್ದೆ. ಅವರೇ ಒನ್ ಅಂಡ್ ಓನ್ಲಿ ವರಲಕ್ಷ್ಮಿ ಅವರನ್ನು ಸೇರಿಸಿಕೊಂಡಿದ್ದರು. ತುಂಬಾ ತರ್ಲೆಗಳನ್ನು ಮಾಡಿದ್ದರು. ಮತ್ತೆ ಅದೇ ರೀತಿಯ ಅಪರ್ಣಾ ಅವರನ್ನು ಕಾಣಲು ಸಾಧ್ಯವಿಲ್ಲ ಎಂದು ಸೃಜನ್ ಲೋಕೇಶ್ ಹೇಳಿದ್ದಾರೆ.
ಬೆಂಗಳೂರು
ಇಂದಿನಿಂದ ಮೂರು ದಿನಗಳ ಕಾಲ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಬಳ್ಳಾಪುರ: ಜೂ.19ರಂದು ನಂದಿಗಿರಿಧಾಮದಲ್ಲಿ (Nandi Hills) ರಾಜ್ಯ ಸಚಿವ ಸಂಪುಟ (Cabinet Meeting) ಸಭೆ ನಡೆಯಲಿರುವ ಹಿನ್ನೆಲೆ ಇಂದಿನಿಂದ ಮೂರು ದಿನಗಳ ಕಾಲ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಈ ಕುರಿತು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಆದೇಶ ಹೊರಡಿಸಿದ್ದು, ಇಂದು ಸಂಜೆ 5 ಗಂಟೆಯಿಂದ ಜೂ.20ರ ಬೆಳಿಗ್ಗೆ 5 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಜೊತೆಗೆ ನಂದಿಗಿರಿಧಾಮದ ಮೇಲ್ಭಾಗದಲ್ಲಿರುವ ವಸತಿ ಕೊಠಡಿಗಳ ಬುಕಿಂಗ್ಗೂ ನಿಷೇಧ ವಿಧಿಸಿದ್ದಾರೆ.
ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ನಡೆಯಲಿದ್ದು, ಸಭೆಗೆ ಬೇಕಾದ ಅಗತ್ಯ ಸಿದ್ಧತೆ ಸಲುವಾಗಿ ಮೂರು ದಿನಗಳ ಮೊದಲೇ ಪ್ರವಾಸಿಗರ ಪ್ರವೇಶ ಹಾಗೂ ವಾಹನಗಳ ಸಂಚಾರಕ್ಕೂ ಬ್ರೇಕ್ ಹಾಕಲಾಗಿದೆ.
ಸಚಿವ ಸಂಪುಟ ಸಭೆಗೆ ಸಿಎಂ, ಡಿಸಿಎಂ ಹಾಗೂ ಕರ್ನಾಟಕ ಸರ್ಕಾರದ ಸಚಿವ ಸಂಪುಟ ದರ್ಜೆಯ ಎಲ್ಲಾ ಮಂತ್ರಿಗಳು, ಶಾಸನ ಸಭಾ ಹಾಗೂ ವಿಧಾನಸಭಾ ಸದಸ್ಯರು, ಇಲಾಖಾ ಮುಖ್ಯಸ್ಥರು ಹಾಗೂ ಪತ್ರಕರ್ತರು ಆಗಮಿಸುತ್ತಿದ್ದಾರೆ. ಆದ್ದರಿಂದ ನಂದಿಗಿರಿಧಾಮಕ್ಕೆ ಹೋಗಲು ಮತ್ತು ಬರಲು ಒಂದೇ ರಸ್ತೆ ಇರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ಜೊತೆಗೆ ನಂದಿಬೆಟ್ಟದಲ್ಲಿ ಕಡಿದಾದ ತಿರುವುಗಳಿಂದ ಕೂಡಿದ ರಸ್ತೆಗಳಲ್ಲಿ ವಾಹನ ಮತ್ತು ಪ್ರವಾಸಿಗರನ್ನು ನಿಯಂತ್ರಿಸುವುದು ಅತಿ ಕಷ್ಟಕರವಾಗಿರುತ್ತದೆ. ಅಪಘಾತಗಳಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಬೆಂಗಳೂರು
ನಮ್ಮ ಹೊಟ್ಟೆಯ ಮೇಲೆ ಹೊಡೆಯಬೇಡಿ ರಾಹುಲ್ ಗಾಂಧಿಗೆ ಅಸೋಸಿಯೇಷನ್ ಪತ್ರ!

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಷೇಧಗೊಂಡಿದೆ, ಈ ಹಿನ್ನೆಲೆ ನಮ್ಮ ಬೈಕ್ ಟ್ಯಾಕ್ಸಿ ಅಸೋಸಿಯೇಷನ್ ಅಧ್ಯಕ್ಷ ಮೊಹಮ್ಮದ್ ಸಲೀಂ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದು ನಿಷೇಧ ಮಾಡಿದರುವಂತೆ ಮನವಿ ಮಾಡಿದ್ದಾರೆ,
ಲಕ್ಷಾಂತರ ಮಂದಿ ವಿದ್ಯಾರ್ಥಿಗಳು, ನಿರುದ್ಯೋಗಿಗಳು, ಪೋಷಕರು ಹಾಗೂ ದಿನಗೂಲಿ ಕಾರ್ಮಿಕರು ಬೈಕ್ ಟ್ಯಾಕ್ಸಿ ಸೇವೆಯಿಂದ ದಿನನಿತ್ಯ ಹೊಟ್ಟೆ ಹೊರೆದುಕೊಳ್ಳುತ್ತಿದ್ದಾರೆ, ಇವು ನಮ್ಮ ಬಿಡುವಿನ ವೇಳೆಯ ಕೆಲಸವಾಗಿರದೇ ಮೂಲ ಉದ್ಯೋಗವೇ ಆಗಿದೆ, ಈ ರೀತಿ ಏಕಾಏಕಿ ನಿಷೇಧ ಮಾಡುವುದರಿಂದ ನಮ್ಮ ಕುಟುಂಬಗಳು ಬೀದಿಗೆ ಬೀಳುತ್ತವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ,
ಸುರಕ್ಷತೆ, ವಿಮೆ ನಿಯಮ ಹಾಗೂ ತರಬೇತಿ ನಿಯಮಗಳನ್ನು ಜಾರಿಗೆ ತಂದು ನಮ್ಮನ್ನು ಅಧಿಕೃತ ಉದ್ಯೋಗಿಗಳನ್ನಾಗಿ ಮಾಡುವ ಬದಲು ನಿಷೇಧಗೊಳಿಸುವುದು ಎಷ್ಟು ಸರಿ ಎಂದು ಪತ್ರದಲ್ಲಿ ಪ್ರಶ್ನಿಸಲಾಗಿದ್ದು, ಗಿಗ್ ಕಾರ್ಮಿಕರಾದ ನಮಗೆ ನೀವು ಚುನಾವಣೆಯ ಮುನ್ನ ನೀಡಿದ್ದ ಭರವಸೆಯನ್ನು ಮರೆತಿದ್ದೀರಿ ಎಂದು ಹೇಳಲಾಗಿದೆ,
ಅಪರಾಧ
ನಕಲಿ ವೈದ್ಯನ ಚಿಕಿತ್ಸೆಯಿಂದ ಮಗು ಬಲಿ

ರಾಮನಗರ: ರಾಮನಗರದಲ್ಲಿ (Ramanagara news) ನಕಲಿ ವೈದ್ಯನ ಚಿಕಿತ್ಸೆಯಿಂದಾಗಿ (treatment) ಶಿವರಾಜ್ ಎಂಬವರ ಆರು ತಿಂಗಳ ಕಂದಮ್ಮ (child death) ಸಾವನ್ನಪ್ಪಿದೆ. 6 ತಿಂಗಳ ಮಗುವಿನ ಸಾವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಕ್ತ ಕ್ರಮಕ್ಕೂ ಸೂಚನೆ ನೀಡಿದೆ. ಶಿವರಾಜ್ ಎಂಬವರ ಆರು ತಿಂಗಳ ಪ್ರಾಯದ ಮಗು ಶರಣ್ಯ ಮೃತಪಟ್ಟವಳು. ನಕಲಿ ವೈದ್ಯ (Fake Doctor) ಮಹಮ್ಮದ್ ಸೈಫುಲ್ಲ ಎಂಬಾತ ಎಂದು ಗುರುತಿಸಲಾಗಿದೆ.
ಮಹಮ್ಮದ್ ಸೈಫುಲ್ಲ ಎಂಬವನು ವೈದ್ಯಕೀಯ ಕೋರ್ಸ್ ಮಾಡದೇ, ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆಯದೇ ಸಣ್ಣ ಕೋಣೆಯೊಂದರಲ್ಲಿ ಚಿಕಿತ್ಸೆ ನೀಡುತ್ತಿದ್ದ. ಈತನಿಂದಾಗಿ ಮಗು ಮರಳಿ ಬಾರದ ಲೋಕಕ್ಕೆ ತೆರಳಿದೆ. ಇದು ಜಿಲ್ಲೆಯ ಜನರನ್ನು ಸಾಕಷ್ಟು ಆತಂಕಕ್ಕೆ ಒಳಗಾಗುವಂತೆ ಮಾಡಿದೆ. ರಾಮನಗರದಲ್ಲಿ ಸಾಕಷ್ಟು ನಕಲಿ ಕ್ಲಿನಿಕ್ಗಳು ತಲೆ ಎತ್ತಿದ್ದು ಅವುಗಳ ವಿರುದ್ಧ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.
ಬೆಂಗಳೂರು ದಕ್ಷಿಣ ಜಿಲ್ಲೆಯಾದ್ಯಂತ ಒಟ್ಟು 193 ಕ್ಲಿನಿಕ್ ಹಾಗೂ ಆಸ್ಪತ್ರೆಗಳಿಗೆ ಮಾತ್ರ ಆರೋಗ್ಯ ಇಲಾಖೆಯಿಂದ ಅನುಮತಿ ಸಿಕ್ಕಿದೆ. ಆದರೆ ಕೆಲವರು ಹಣದಾಸೆಗೆ ನಕಲಿ ಕ್ಲಿನಿಕ್ ನಡೆಸುತ್ತಿದ್ದಾರೆ. ಆರೋಗ್ಯ ಇಲಾಖೆ ಕಳೆದ ನಾಲ್ಕು ತಿಂಗಳಲ್ಲಿ ಆರು ನಕಲಿ ವೈದ್ಯರನ್ನು ಪತ್ತೆ ಮಾಡಿದೆ. ಇಬ್ಬರ ವಿರುದ್ಧ ಕ್ರಮ ತೆಗೆದುಕೊಂಡಿದ್ದರೂ ಇನ್ನೂ ಕೆಲವರು ಹಣದಾಸೆಗೆ ನಕಲಿ ಕ್ಲಿನಿಕ್ ನಡೆಸುತ್ತಿದ್ದಾರೆ. ನಕಲಿ ಕ್ಲಿನಿಕ್ಗಳ ಬಗ್ಗೆ ಜನರು ಎಚ್ಚರಿದಿಂದ ಇರಬೇಕು. ಗಮನಕ್ಕೆ ಬಂದ ಕೂಡಲೇ ಅವುಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್ ಮನವಿ ಮಾಡಿದ್ದಾರೆ
-
ಬಿಬಿಎಂಪಿ1 month ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು1 year ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು7 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ