Connect with us

ಬೆಂಗಳೂರು

ವಿಧಾನಸೌಧ ವಾಸ್ತು ಪ್ರಕಾರ ನಿರ್ಮಾಣಗೊಂಡಿದೆ: ‘ಶಕ್ತಿಸೌಧ’ ನವೀಕರಣ ವಿಚಾರದಲ್ಲಿ ಹೊರಟ್ಟಿ -ಖಾದರ್ ನಡುವೆ ಜಟಾಪಟಿ

Published

on

ಬೆಂಗಳೂರು: 16ನೇ ವಿಧಾನಸಭೆಯ 4ನೇ ಮುಂಗಾರು ಅಧಿವೇಶನ ಜುಲೈ 15 ರಿಂದ ಜುಲೈ 26 ರವರೆಗೆ ನಡೆಯಲಿದೆ. ಒಟ್ಟು 9 ದಿನಗಳ ಕಾಲ ಅಧಿವೇಶನ ನಡೆಯಲಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.

ಎಪ್ಪತ್ತು ವರ್ಷಗಳ ನಂತರ ವಿಧಾನಸಭೆ ಪ್ರವೇಶದ್ವಾರದ ಬಳಿ ಸ್ವಲ್ಪ ಬದಲಾವಣೆ ಮಾಡಿದ್ದೇವೆ. ಕಬ್ಬಿಣದ ಗ್ರಿಲ್ ರೀತಿ ಇತ್ತು. ವಿಶಿಷ್ಠ ರೀತಿಯಲ್ಲಿ ಬದಲಾವಣೆ ಮಾಡಲಾಗಿದೆ. ಜುಲೈ 15 ರಂದು ಬೆಳಗ್ಗೆ 10.30 ಕ್ಕೆ ಸಿಎಂ ಸಿದ್ದರಾಮಯ್ಯ ಅವರು ಪ್ರವೇಶದ್ವಾರವನ್ನು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು ಸ್ಪೀಕರ್ ಯು.ಟಿ ಖಾದರ್ ತಿಳಿಸಿದರು. ಸೋಮವಾರದಿಂದ ಆರಂಭವಾಗಲಿರುವ ರಾಜ್ಯ ವಿಧಾನಮಂಡಲದ ಮುಂಬರುವ ಮುಂಗಾರು ಅಧಿವೇಶನದ ಕುರಿತು ವಿವರ ನೀಡಲು ವಿಧಾನಸಭಾಧ್ಯಕ್ಷ ಖಾದರ್ ಮತ್ತು ಪರಿಷತ್ ಸಭಾಪತಿ ಹೊರಟ್ಟಿ ಶುಕ್ರವಾರ ಸುದ್ದಿಗೋಷ್ಠಿ ಕರೆದಿದ್ದ ವೇಳೆ ಈ ಭಿನ್ನಮತ ಕಂಡು ಬಂದಿದೆ.

ವಿಧಾನಸೌಧ ಸೌಂದರ್ಯೀಕರಣ ವಿಚಾರದಲ್ಲಿ ಸ್ಪೀಕರ್‌ ಖಾದರ್‌ ಹಾಗೂ ಸಭಾಪತಿ ಬಸವರಾಜ ಹೊರಟ್ಟಿ ಭಿನ್ನಧ್ವನಿ ಪ್ರಕಟಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ. . ಮೊದಲು ಖಾದರ್‌ ಮಾತನಾಡಿ, 70 ವರ್ಷದ ಬಳಿಕ ಇದೇ ಮೊದಲ ಬಾರಿಗೆ ವಿಧಾನಸಭೆ ಪ್ರವೇಶ ದ್ವಾರವನ್ನು ಬದಲಾವಣೆ ಮಾಡಲಾಗುತ್ತಿದೆ. ಇಲ್ಲಿ ಮೊದಲು ಕಬ್ಬಿಣದ ಗ್ರಿಲ್‌ ಇತ್ತು. ದೇಶ-ವಿದೇಶದ ಗಣ್ಯರು ಭೇಟಿ ನೀಡಲು ಬಂದಾಗ ಇದು ಸೊಗಸಾಗಿ ಕಾಣುತ್ತಿರಲಿಲ್ಲ. ಹೀಗಾಗಿ ದ್ವಾರವನ್ನು ಸುಂದರವಾಗಿ ರೂಪಿಸಲಾಗಿದ್ದು ಜುಲೈ 15ರಂದು 10.30ಕ್ಕೆ ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಭವಿಷ್ಯದಲ್ಲಿ ಸಂಪೂರ್ಣ ವಿಧಾನಸೌಧವನ್ನು ಪರಂಪರೆಗೆ ಧಕ್ಕೆಯಾಗದಂತೆ ಸೌಂದರ್ಯೀಕರಿಸಲಾಗುವುದು ಎಂದು ಹೇಳಿದರು.ಇದಕ್ಕೆ ಪ್ರತಿಕ್ರಿಯಿಸಿದ ಹೊರಟ್ಟಿ, ಪರೋಕ್ಷವಾಗಿ ವಿರೋಧಿಸಿದರು. ವಿಧಾನಸೌಧದ ಕೊಠಡಿಗಳ ಮೂಲೆಯನ್ನು ಬದಲಾಯಿಸಬಾರದು ಎಂಬ ನಿಯಮವೇ ಇದೆ. ಈ ಹಿಂದೆ ಸಚಿವರೊಬ್ಬರು ಗೋಡೆ ಒಡೆದು ವಿವಾದಕ್ಕೆ ಕಾರಣವಾಗಿದ್ದರು. ಸಣ್ಣಪುಟ್ಟ ಬದಲಾವಣೆ ಬೇಕಾದರೆ ಮಾಡಿಕೊಳ್ಳಬಹುದು. ಆದರೆ ಸಂಪೂರ್ಣವಾಗಿ ಗೋಡೆ ಒಡೆಯುವುದಕ್ಕೆ ಅವಕಾಶವೇ ಇಲ್ಲ. ಇತಿಹಾಸವನ್ನು ಸ್ವಲ್ಪ ಓದಿದರೆ ಗೊತ್ತಾಗುತ್ತದೆ, ವಿಧಾನಸೌಧದಲ್ಲಿ ವಾಸ್ತು ಪ್ರಕಾರ ನವೀಕರಣ ಮಾಡುವ ಅಗತ್ಯವೇ ಇಲ್ಲ. ಏಕೆಂದರೆ ಇಡೀ ವಿಧಾನಸೌಧ ವಾಸ್ತು ಪ್ರಕಾರ ನಿರ್ಮಾಣಗೊಂಡಿದೆ ಎಂದರು..

ಅಧಿವೇಶನ ಸಮಯಕ್ಕೆ ಸರಿಯಾಗಿ ಹಾಜರಾಗುವ ಶಾಸಕರಿಗೆ ಟೀ ಕಪ್ ನೀಡಲಾಗುವುದು. ಕಳೆದ ಬಾರಿ ನೀಡಿದ ಅವಕಾಶ ಈ ಬಾರಿಯೂ ನೀಡುತ್ತೇವೆ. ಇಡೀ‌ ದಿನ ಇರುವ ಸದಸ್ಯರುಗಳಿಗೆ ವಿಶೇಷ ಅವಕಾಶ ನೀಡಲಾಗುತ್ತದೆ. ಹೊಸ ತಂತ್ರಜ್ಞಾನ ಮೂಲಕ ಶಾಸಕರು ಎಷ್ಟುತ್ತಿಗೆ ಬರುತ್ತಾರೆ, ಹೋಗುತ್ತಾರೆ ಎಂದು ತಿಳಿದುಕೊಳ್ಳಲಾಗುವುದು. ಒಬ್ಬ ಸದಸ್ಯ ಅಧಿವೇಶನದ ಒಳಗೆ ಎಷ್ಟೊತ್ತು ಕುಳಿತಿದ್ದಾರೆ ಎಂಬ ಮಾಹಿತಿ ಪಡೆದುಕೊಳ್ಳುತ್ತೇವೆ ಎಂದರು. ಕ್ರೀಡೆಗೆ ಪ್ರೋತ್ಸಾಹ ನೀಡಲು ಶಾಸಕರು, ವಿಧಾನಮಂಡಲದ ಸಿಬ್ಬಂದಿಗೆ ಕಪ್ ಇಡಲಾಗಿದೆ. ವಿಧಾನಸೌಧದ ಬ್ಯಾಕ್ವೆಂಟ್ ಹಾಲ್​ನಲ್ಲಿ ಜು.20 ರಂದು ಚೆಸ್ ಸ್ಪರ್ಧೆ ಏರ್ಪಡಿಸಲಾಗಿದೆ. ವಿಧಾನಸಭೆ ಮತ್ತು‌ ವಿಧಾನ ಪರಿಷತ್​ನ ಸದಸ್ಯರು ಭಾಗಿಯಾಗಬಹುದು. ಗೆದ್ದವರಿಗೆ ಬಹುಮಾನ ನೀಡುತ್ತೇವೆ. ಕಲಾಪ‌ ವೀಕ್ಷಣೆಗೆ ಬರುವ ಮಕ್ಕಳು, ವಿದ್ಯಾರ್ಥಿಗಳಿಗೆ ಎಂದಿನಂತೆ ವ್ಯವಸ್ಥೆ ಇರಲಿದೆ ಎಂದು ತಿಳಿಸಿದರು.

ಈ ವೇಳೆ, ಶಾಸಕ ಬಿ.ನಾಗೇಂದ್ರ ಅವರನ್ನು ವಶಕ್ಕೆ ಪಡೆದ ಬಗ್ಗೆ ಪ್ರತಿಕ್ರಿಯಿಸಿದ ಸ್ಪೀಕರ್​, ಇಡಿ ಅವರು ನಮಗೆ ಮಾಹಿತಿ ನೀಡಿಲ್ಲ. ಅಧಿವೇಶನದ ಒಳಗೆ ಇದ್ದರೆ ನಮ್ಮ ಅನುಮತಿ ಪಡೆಯಬೇಕು. ಹೊರಗಿದ್ದರೆ ಒಬ್ಬ ಶಾಸಕರನ್ನು ವಶಕ್ಕೆ ತೆಗೆದುಕೊಳ್ಳುವಾಗ ಸ್ಪೀಕರ್ ಅವರಿ​ಗೆ ಮಾಹಿತಿ ನೀಡಬೇಕಾಗುತ್ತದೆ. ಆದರೆ ಆ ಬಗ್ಗೆ ಮಾಹಿತಿ ಬಂದಿಲ್ಲ ಎಂದು ಹೇಳಿದರು.

ದೇಶ

ಬೆಂಗಳೂರಿನಲ್ಲಿ ಎಲ್‌ಪಿಜಿ ಸಂಕಷ್ಟ: ಆಟೊ ಚಾಲಕರ ಬದುಕು ಸಂಕಷ್ಟಕ್ಕೆ

Published

on

By

ಬೆಂಗಳೂರು: ನಗರದಲ್ಲಿ ಉಂಟಾಗಿರುವ ಎಲ್‌ಪಿಜಿ ಕೊರತೆಯಿಂದ ಆಟೊ ಚಾಲಕರ ಸಮಸ್ಯೆಗಳು ದಿನೇ ದಿನೇ ಗಂಭೀರವಾಗುತ್ತಿವೆ. ಗ್ಯಾಸ್‌ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದಾಗಿ ಲಭ್ಯವಿರುವ ಬಂಕ್‌ಗಳ ಬಳಿ ಆಟೊ ಚಾಲಕರು ಗಂಟೆಗಟ್ಟಲೆ ಕಾದು ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವಾರು ಬಂಕ್‌ಗಳು ತಾತ್ಕಾಲಿಕವಾಗಿ ಬಾಗಿಲು ಮುಚ್ಚಿದ್ದು, ಉಳಿದ ಬಂಕ್‌ಗಳಲ್ಲೂ ‘ನೋ ಸ್ಟಾಕ್’ ಫಲಕಗಳು ಸಾಮಾನ್ಯ ದೃಶ್ಯವಾಗಿವೆ.

ರಾಜಾಜಿನಗರ, ಮತ್ತೀಕೆರೆ, ದಾಸರಹಳ್ಳಿ, ಗುಟ್ಟಹಳ್ಳಿ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಸಮಸ್ಯೆ ತೀವ್ರಗೊಂಡಿದೆ. ಬಂಕ್‌ಗಳ ಬಳಿ ಆಟೊಗಳು ಸಾಲುಗಟ್ಟಿ ನಿಲ್ಲುವುದರಿಂದ ಸಂಚಾರ ದಟ್ಟಣೆಗೂ ಕಾರಣವಾಗುತ್ತಿದೆ. ಎಲ್‌ಪಿಜಿ ಕೊರತೆಯಿಂದ ಸಾವಿರಾರು ಆಟೊಗಳು ರಸ್ತೆಗಿಳಿಯಲು ಸಾಧ್ಯವಾಗದೇ, ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಮೇಲೂ ಒತ್ತಡ ಹೆಚ್ಚಾಗಿದೆ.

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಗ್ಯಾಸ್‌ ಪೂರೈಕೆಗೆ ತೀವ್ರ ಹೊಡೆತ ಬಿದ್ದಿದ್ದು, ಆಟೊ ಚಾಲಕರ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಗ್ಯಾಸ್‌ ಬೆಲೆ ಏರಿಕೆಯಿಂದಾಗಿ ಚಾಲಕರು ಕಡಿಮೆ ದೂರಕ್ಕೂ ಪ್ರಯಾಣಿಕರಿಂದ ಹೆಚ್ಚು ಬಾಡಿಗೆ ವಸೂಲು ಮಾಡುತ್ತಿದ್ದಾರೆ. ಇದರಿಂದ ಪ್ರಯಾಣಿಕರಿಗೂ ಹೆಚ್ಚುವರಿ ಹೊರೆ ಬೀಳುತ್ತಿದೆ.

ಗ್ಯಾಸ್‌ ಲಭ್ಯವಿರುವ ಮಾಹಿತಿ ಸಿಕ್ಕ ತಕ್ಷಣ ನೂರಾರು ಆಟೊಗಳು ಬಂಕ್‌ಗಳತ್ತ ಧಾವಿಸುತ್ತಿವೆ. ಪರಿಣಾಮ, ಕೆಲವೇ ಗಂಟೆಗಳಲ್ಲಿ ಸ್ಟಾಕ್‌ ಖಾಲಿಯಾಗುತ್ತಿದೆ. ಸಿಎನ್‌ಜಿ ಕೊರತೆಯೂ ಕಾಣಿಸಿಕೊಂಡಿರುವುದರಿಂದ ಸಮಸ್ಯೆ ಇನ್ನಷ್ಟು ಸಂಕೀರ್ಣವಾಗಿದೆ.

ಇದರಿಂದಾಗಿ ವಿದ್ಯುತ್‌ ಚಾಲಿತ ಆಟೊಗಳ ಬಳಕೆ ಹೆಚ್ಚಾಗುತ್ತಿದ್ದು, ಪ್ರಯಾಣಿಕರು ಇವುಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಪರಿಸ್ಥಿತಿ ಮುಂದುವರಿದರೆ ಅನೇಕ ಆಟೊ ಚಾಲಕರು ವೃತ್ತಿ ತೊರೆಯುವ ಸ್ಥಿತಿ ಎದುರಾಗುವ ಸಾಧ್ಯತೆ ಇದೆ.

Continue Reading

ದೇಶ

ಸುಪ್ರೀಂ ಕೋರ್ಟ್ ಆದೇಶ ಬಳಿಕ ಬೀದಿ ನಾಯಿಗಳ ಲೆಕ್ಕಾಚಾರ: ನಗರದಲ್ಲಿ ಆತಂಕ

Published

on

By

ಬೆಂಗಳೂರು ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿರುವ ಬೀದಿ ನಾಯಿಗಳ ಸಮಸ್ಯೆ ಗಂಭೀರವಾಗುತ್ತಿರುವ ಹಿನ್ನೆಲೆ, Bruhat Bengaluru Mahanagara Palike ಸರ್ವೆ ಕಾರ್ಯ ಆರಂಭಿಸಿದೆ. Supreme Court of India ನೀಡಿದ ನಿರ್ದೇಶನದಂತೆ ಬೀದಿ ನಾಯಿಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ಶಾಲೆ, ಕಾಲೇಜು, ಆಸ್ಪತ್ರೆ, ಬಸ್ ನಿಲ್ದಾಣ, ಕ್ರೀಡಾಂಗಣ ಹಾಗೂ ಆಟದ ಮೈದಾನಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಒಟ್ಟು 2,670 ಬೀದಿ ನಾಯಿಗಳು ಪತ್ತೆಯಾಗಿವೆ. ಕೇಂದ್ರ ವಲಯದಲ್ಲಿ 504, ಉತ್ತರ ವಲಯದಲ್ಲಿ 875, ಪಶ್ಚಿಮ ವಲಯದಲ್ಲಿ 591, ದಕ್ಷಿಣ ವಲಯದಲ್ಲಿ 331 ಹಾಗೂ ಪೂರ್ವ ವಲಯದಲ್ಲಿ 369 ನಾಯಿಗಳಿವೆ ಎಂದು ಮಾಹಿತಿ ನೀಡಲಾಗಿದೆ.

ಆದರೆ, ಈ ಅಂಕಿ-ಅಂಶಗಳ ನಿಖರತೆ ಬಗ್ಗೆ ಪ್ರಶ್ನೆಗಳು ಮೂಡಿವೆ. ಕೆಲವು ವಲಯಗಳಲ್ಲಿ ಪೂರ್ಣ ಮಾಹಿತಿ ಲಭ್ಯವಾಗಿಲ್ಲ ಎನ್ನಲಾಗಿದ್ದು, ಕೆಲವು ಸಂಸ್ಥೆಗಳು ತಮ್ಮ ವ್ಯಾಪ್ತಿಯ ಲೆಕ್ಕ ನೀಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ಬೀದಿ ನಾಯಿಗಳ ಸ್ಥಳಾಂತರಕ್ಕಾಗಿ ಆನೇಕಲ್ ವ್ಯಾಪ್ತಿಯ ಬಿಂಗೀಪುರದಲ್ಲಿ 5 ಎಕರೆ ಜಾಗ ಗುರುತಿಸಲಾಗಿದ್ದು, ಸುಮಾರು 500 ನಾಯಿಗಳಿಗೆ ಆಶ್ರಯ ನೀಡುವ ಸಾಮರ್ಥ್ಯದ ಶೆಲ್ಟರ್ ನಿರ್ಮಾಣಕ್ಕೆ 2 ಕೋಟಿ ರೂ. ವೆಚ್ಚದ ಯೋಜನೆ ರೂಪಿಸಲಾಗಿದೆ.

ಇದೇ ವೇಳೆ, ಉತ್ತರ ಹಾಗೂ ಪಶ್ಚಿಮ ವಲಯಗಳಲ್ಲಿ ಹೆಚ್ಚುವರಿ ಆಶ್ರಯ ತಾಣ ನಿರ್ಮಾಣದ ಕಾರ್ಯ ಕೂಡ ಪ್ರಗತಿಯಲ್ಲಿದೆ.

ಒಟ್ಟಿನಲ್ಲಿ, ಬೀದಿ ನಾಯಿಗಳ ಸಮಸ್ಯೆ ನಿಯಂತ್ರಣಕ್ಕೆ ಈ ಕ್ರಮ ಕೈಗೊಳ್ಳಲಾಗುತ್ತಿದ್ದರೂ, ಅಂಕಿ-ಅಂಶಗಳ ಸ್ಪಷ್ಟತೆ ಹಾಗೂ ಅನುಷ್ಠಾನದ ಪರಿಣಾಮಕಾರಿತ್ವ ಬಗ್ಗೆ ಇನ್ನೂ ಅನುಮಾನಗಳು ಉಳಿದಿವೆ.

Continue Reading

ಕ್ರೀಡೆ

ಚಿನ್ನಸ್ವಾಮಿಯಲ್ಲಿ ರನ್ ಮಳೆ: ಆರ್ಸಿಬಿ 250 ರನ್ ಸಿಡಿತ!

Published

on

By

ಬೆಂಗಳೂರುದ ಎಂ. ಚಿನ್ನಸ್ವಾಮಿ ಕ್ರೀಡಾಂಗಣನಲ್ಲಿ ನಡೆಯುತ್ತಿರುವ Indian Premier League ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದೆ.

ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ರುತುರಾಜ್ ಗಾಯಕ್ವಾಡ್ ಮೊದಲು ಆರ್ಸಿಬಿಗೆ ಬ್ಯಾಟಿಂಗ್ ಆಹ್ವಾನಿಸಿದರು. ಆರಂಭದಲ್ಲಿ ವಿರಾಟ್ ಕೊಹ್ಲಿ (28) ಬೇಗ ಔಟ್ ಆದರೂ, ಫಿಲ್ ಸಾಲ್ಟ್ (46) ತಂಡಕ್ಕೆ ವೇಗ ನೀಡಿದರು.

ಆದರೆ, ನಂತರದ ಹಂತದಲ್ಲಿ ಆರ್ಸಿಬಿ ಬ್ಯಾಟಿಂಗ್ ಭರ್ಜರಿಯಾಗಿ ಸಿಡಿಯಿತು. ದೇವದತ್ತ ಪಡಿಕಲ್ (50) ಅರ್ಧಶತಕ ಸಿಡಿಸಿ ತಂಡಕ್ಕೆ ಬಲ ನೀಡಿದರೆ, ನಾಯಕ ರಜತ್ ಪಾಟೀದಾರ್ (48*) ವೇಗದ ಇನ್ನಿಂಗ್ಸ್ ಆಡಿದರು. ಅಂತಿಮವಾಗಿ ಟಿಮ್ ಡೇವಿಡ್ (70*) ಬ್ಯಾಕ್ ಟು ಬ್ಯಾಕ್ ಸಿಕ್ಸರ್‌ಗಳಿಂದ ಚೆನ್ನೈ ಬೌಲರ್ಗಳನ್ನು ಕಂಗೆಡಿಸಿದರು.

ಪವರ್ಪ್ಲೇಯಲ್ಲೇ ವಿಕೆಟ್ ಪಡೆಯಲು ವಿಫಲವಾದ ಸಿಎಸ್ಕೆ ಬೌಲರ್ಗಳು ಮತ್ತೆ ಅದೇ ತಪ್ಪನ್ನು ಮುಂದುವರೆಸಿದರು. ಪರಿಣಾಮವಾಗಿ, ಆರ್ಸಿಬಿ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಭಾರೀ 250 ರನ್ ಗಳಿಸಿತು.

ಈ ಬೃಹತ್ ಗುರಿಯನ್ನು ಬೆನ್ನತ್ತುತ್ತಿರುವ ಸಿಎಸ್ಕೆ, ತನ್ನ ಮೊದಲ ಗೆಲುವು ದಾಖಲಿಸಬಹುದೇ ಎಂಬುದು ಈಗ ಕುತೂಹಲ ಮೂಡಿಸಿದೆ.

ಆರ್ಸಿಬಿ ಬ್ಯಾಟಿಂಗ್ ವಿವರ:

  • ವಿರಾಟ್ ಕೊಹ್ಲಿ – 28 (18)
  • ಫಿಲ್ ಸಾಲ್ಟ್ – 46 (30)
  • ದೇವದತ್ತ ಪಡಿಕಲ್ – 50 (29)
  • ರಜತ್ ಪಾಟೀದಾರ್ – 48* (19)
  • ಟಿಮ್ ಡೇವಿಡ್ – 70* (25)
Continue Reading

Trending