Connect with us

ರಾಜಕೀಯ

ಇಂದಿನಿಂದ ವಿಧಾನಮಂಡಲ ಅಧಿವೇಶನ: ಶಾಸಕರ ಹಾಜರಾತಿ ಗುರುತಿಸಲು ಎಐ ತಂತ್ರಜ್ಞಾನ ಬಳಕೆ – Karnataka Monsoon Session

Published

on

ಬೆಂಗಳೂರು: ಇಂದಿನಿಂದ ರಾಜ್ಯ ವಿಧಾನಮಂಡಲ ಮುಂಗಾರು ಅಧಿವೇಶನವು ನಡೆಯಲಿದೆ. ”ಕಲಾಪದಲ್ಲಿ ಶಾಸಕರ ಹಾಜರಾತಿಯನ್ನು ಗುರುತಿಸಲು ಎಐ ಆಧಾರಿತ ಕ್ಯಾಮರಾ ಬಳಸಲಾಗುತ್ತಿದೆ” ಎಂದು ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ.

ವಿಧಾನಮಂಡಲ ಅಧಿವೇಶನ ಆರಂಭದ ಹಿನ್ನೆಲೆಯಲ್ಲಿ ಭಾನುವಾರ ಪೂರ್ವ ಸಿದ್ಧತೆ ಪರಿಶೀಲಿಸಿದ ಸ್ಪೀಕರ್ ಮಾತನಾಡಿ, ಸದನಕ್ಕೆ ಯಾರು ಬೇಗ ಬರುತ್ತಾರೆ. ಕಲಾಪ ಮುಗಿಯುವ ಕೊನೆಯವರೆಗೆ ಯಾರು ಇರುತ್ತಾರೆ ಎಂಬ ಬಗ್ಗೆ ಗುರುತಿಸಲು ಎಐ ಟೆಕ್ನಾಲಜಿ ಬಳಸಲಾಗುತ್ತಿದೆ. ಶಾಸಕರು ಎಷ್ಟು ಗಂಟೆಗೆ ಬರ್ತಾರೆ, ಹೋಗ್ತಾರೆ ಎಂಬ ವಿವರಗಳನ್ನು ಎಐ ಆಧಾರಿತ ಕ್ಯಾಮರಾ ಸೆರೆ ಹಿಡಿಯಲಿದೆ” ಎಂದರು.

”ಶಾಸಕರು ಕ್ಷೇತ್ರದ ಬಗ್ಗೆ ಚರ್ಚೆ ಮಾಡಬೇಕು. 10 ದಿನಗಳ ಕಾಲ ಅಧಿವೇಶನ ನಡೆಯುತ್ತದೆ. ಇದರ ಸದುಪಯೋಗ ಮಾಡಿಕೊಳ್ಳಬೇಕು” ಎಂದು ಮನವಿ ಮಾಡಿದ ಅವರು, ವಿಪಕ್ಷಗಳಿಂದ ವಿಧಾನಸೌಧಕ್ಕೆ ಮುತ್ತಿಗೆ ವಿಚಾರವಾಗಿ ಪ್ರತಿಕ್ರಿಯಿಸುತ್ತ, ”ಇಷ್ಟು ಸಮಯ ಇತ್ತಲ್ಲಾ ಮುತ್ತಿಗೆ ಹಾಕಬೇಕಿತ್ತು, ಪ್ರಜಾಪ್ರಭುತ್ವದಲ್ಲಿ ಅವಕಾಶ ಇದೆ. ಅಧಿವೇಶನದಲ್ಲಿ ಸಮಯವನ್ನು ಕುಂಠಿತ ಮಾಡಬಾರದು. ಅಧಿವೇಶನ ಆದಮೇಲೆ ಮುತ್ತಿಗೆ ಹಾಕಬಹುದು” ಎಂದು ಮನವಿ ಮಾಡಿದರು.

”ಸಿಕ್ಕಿರುವ ಸಮಯವಕಾಶವನ್ನು ಕ್ಷೇತ್ರದ ಸಮಸ್ಯೆ ಮನವಿಗಳ ಬಗ್ಗೆ ಮಾತಾಡಲಿ. ಅಧಿವೇಶನದಲ್ಲಿ ಸಮಸ್ಯೆಗಳ ಚರ್ಚೆ ಆಗಬೇಕು. ಪ್ರತಿಪಕ್ಷಗಳಿಗೆ ಎಲ್ಲಾ ರೀತಿಯ ಸಹಕಾರ ಕೊಡುತ್ತೇನೆ. ನಾನು ಅವರ ಮಿತ್ರ. ರಾಜ್ಯದ, ದೇಶದ ಹಿತಕ್ಕೋಸ್ಕರ ವಿಪಕ್ಷಗಳು ಅಧಿವೇಶನದ ಸದುಪಯೋಗ ಮಾಡಿಕೊಳ್ಳಬೇಕು” ಎಂದು ಮನವಿ ಮಾಡಿದರು.

ಕೆಂಗಲ್ ಗೇಟ್ ದ್ವಾರಕ್ಕೆ ಹೊಸ ಮೆರಗು: ವಿಧಾನಸೌಧದ ಕೆಂಗಲ್ ಗೇಟ್​​​ಗೆ ಹೊಸ ಮೆರುಗು ನೀಡಲಾಗಿದೆ. ಮರದ ಕೆತ್ತನೆಗಳ ದ್ವಾರ ಅಳವಡಿಕೆ ಮಾಡಲಾಗಿದ್ದು, ಶಾಸಕರು ಪ್ರವೇಶಿಸುವ ವಿಧಾನಸಭಾ ಸಂಭಾಗಣದ ದ್ವಾರಕ್ಕೆ ಹೊಸ ರೂಪ ನೀಡಲಾಗಿದೆ.

ಕೆಂಗಲ್ ಗೇಟ್ ಬಳಿ ಮೆಟ್ಟಿಲುಗಳಿಗೆ ರೆಡ್ ಕಾರ್ಪೆಟ್ ಹಾಸಲಾಗಿದೆ. ದ್ವಾರದಲ್ಲಿ ರಾಜ್ಯದ ಲಾಂಛನ ಗಂಡಭೇರುಂಡ ಜೊತೆಗೆ ಕ್ಲಾಕ್ ಅಳವಡಿಸಿ ವಿಶೇಷ ಮೆರುಗು ನೀಡಲಾಗಿದೆ. ಸದನ ಪ್ರಾರಂಭವಾಗುವ ಮುನ್ನ ನೂತನ ದ್ವಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಲಿದ್ದಾರೆ.

ಹೋರಾಟಕ್ಕೆ ಪ್ರತಿಪಕ್ಷಗಳು ಸಜ್ಜು: ಅಧಿವೇಶನದಲ್ಲಿ ಹಗರಣಗಳ ಅಸ್ತ್ರದೊಂದಿಗೆ ಸರ್ಕಾರದ ವಿರುದ್ಧ ಉಭಯ ಸದನಗಳಲ್ಲಿಯೂ ಏಕ ಕಾಲಕ್ಕೆ ಹೋರಾಟ ನಡೆಸಲು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸಿದ್ಧಗೊಂಡಿವೆ. ದೊಡ್ಡ ಮಟ್ಟದ ಹೋರಾಟಕ್ಕೆ ಸಜ್ಜುಗೊಂಡಿರುವ ಹಿನ್ನೆಲೆಯಲ್ಲಿ ಕಲಾಪದಲ್ಲಿ ಈ ಬಾರಿ ಗದ್ದಲ, ಗಲಾಟೆ ಏರ್ಪಡಲಿದೆ. ವಾಲ್ಮೀಕಿ ನಿಗಮದ ಹಗರಣ ಮತ್ತು ಮೈಸೂರಿನ ಮುಡಾ ಹಗರಣದ ಆರೋಪಗಳನ್ನು ಉಭಯ ಸದನದಲ್ಲಿಯೂ ಪ್ರಸ್ತಾಪಿಸಿ ಏಕಕಾಲಕ್ಕೆ ಸರ್ಕಾರವನ್ನು ಹಣಿಯಲು ಬಿಜೆಪಿ, ಜೆಡಿಎಸ್ ನಿರ್ಧರಿಸಿವೆ. ವಾಲ್ಮೀಕಿ ನಿಗಮದ ಪ್ರಕರಣದಲ್ಲಿ ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ನೀಡಿದ್ದು, ಇ.ಡಿ ಅಧಿಕಾರಿಗಳಿಂದ ಬಂಧನಕ್ಕೂ ಒಳಗಾಗಿದ್ದಾರೆ. ಆದರೆ ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎನ್ನುವುದು ವಿಪಕ್ಷಗಳ ಬೇಡಿಕೆಯಾಗಿದ್ದು, ಅದನ್ನೇ ಮುಂದಿಟ್ಟು ಸದನದಲ್ಲಿ ಹೋರಾಟ ಮಾಡಲಿವೆ.

ದೇಶ

“ಚಾಮರಾಜಪೇಟೆಗೆ ಬಂದ್ರೆ ಸುಮ್ಮನೆ ಇರ್ತಿನಾ?”: ಜಮೀರ್‌ ಟಾಂಗ್‌, ದಾವಣಗೆರೆ ರಾಜಕೀಯ ಕುತೂಹಲ

Published

on

By

ದಾವಣಗೆರೆ ದಕ್ಷಿಣ ಉಪಚುನಾವಣೆ ರಾಜಕೀಯ ಕಣ ದಿನೇದಿನೇ ರಂಗೇರುತ್ತಿದ್ದು, ಸಚಿವ ಜಮೀರ್‌ ಅಹ್ಮದ್‌ ಖಾನ್ ಅವರ ಆಗಮನದಿಂದ ಹೊಸ ತಿರುವು ಪಡೆದುಕೊಂಡಿದೆ. ಹಲವು ದಿನಗಳಿಂದ ಮುಂದುವರಿದಿದ್ದ ಭಿನ್ನಾಭಿಪ್ರಾಯಗಳ ನಡುವೆಯೇ ಅವರು ಕೊನೆಗೂ ದಾವಣಗೆರೆಗೆ ಭೇಟಿ ನೀಡಿ ಪ್ರಚಾರ ಆರಂಭಿಸಿದ್ದಾರೆ.

ಟಿಕೆಟ್‌ ಹಂಚಿಕೆ ವೇಳೆ ಉಂಟಾದ ಗಲಾಟೆ ಸಂದರ್ಭದಲ್ಲಿ ಎಸ್‌ಎಸ್‌ ಮಲ್ಲಿಕಾರ್ಜುನ್ ಅವರು “ಯಾರ್ರಿ ಜಮೀರ್‌ ದಾವಣಗೆರೆ ಬಗ್ಗೆ ಮಾತನಾಡಲು” ಎಂದು ಹೇಳಿದ್ದರಿಂದ ವಿವಾದ ಸೃಷ್ಟಿಯಾಗಿತ್ತು. ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ಸಿಕ್ಕಿಲ್ಲ ಎಂಬ ಕಾರಣಕ್ಕೂ ಜಮೀರ್‌ ಅಸಮಾಧಾನಗೊಂಡಿದ್ದರು.

ಆದರೆ ಇದೀಗ ರಾಜಕೀಯ ವಾತಾವರಣ ಬದಲಾಗಿದ್ದು, ಜಮೀರ್‌ ಅವರನ್ನು ಸ್ವತಃ ಮಲ್ಲಿಕಾರ್ಜುನ್‌ ಅವರು ಸ್ವಾಗತಿಸಿ ಪ್ರಚಾರಕ್ಕೆ ಕರೆಸಿಕೊಂಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್‌, “ನಾವಿಬ್ಬರೂ ಸ್ನೇಹಿತರು. ಯಾವುದೇ ಬೇಸರ ಇಲ್ಲ. ಸಿಟ್ಟಿನಲ್ಲಿ ಹೇಳಿದ ಮಾತು ಅಷ್ಟೇ,” ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಅವರು ಪರೋಕ್ಷವಾಗಿ ಟಾಂಗ್ ಕೊಡುತ್ತಾ, “ನನ್ನ ಕ್ಷೇತ್ರ ಚಾಮರಾಜಪೇಟೆಗೆ ಬಂದು ಯಾರಾದರೂ ಮಾತನಾಡಿದರೆ ನಾನು ಸುಮ್ಮನೆ ಇರ್ತಿನಾ?” ಎಂದು ಪ್ರತಿಕ್ರಿಯೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ್‌, “ಈಗ ಎಲ್ಲವೂ ಬಗೆಹರಿದಿದೆ. ನಾವು ಬಹಳ ವರ್ಷಗಳಿಂದ ಸ್ನೇಹಿತರು,” ಎಂದು ಹೇಳಿದರು.

ಈ ಬೆಳವಣಿಗೆ ದಾವಣಗೆರೆ ರಾಜಕೀಯದಲ್ಲಿ ಹೊಸ ಚೈತನ್ಯ ಮೂಡಿಸಿದ್ದು, ಉಪಚುನಾವಣೆ ಕಣದಲ್ಲಿ ಕಾಂಗ್ರೆಸ್‌ ಬಲ ಹೆಚ್ಚಿದಂತೆ ಕಾಣುತ್ತಿದೆ.

Continue Reading

ದೇಶ

ಜಮೀರ್ ಅಹ್ಮದ್‌ಗೆ ಎಐಸಿಸಿಯಲ್ಲಿ ಮಹತ್ವದ ಹುದ್ದೆ!

Published

on

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯದ ಜನಪ್ರಿಯ ನಾಯಕನಾಗಿ ಹೊರಹೊಮ್ಮುತ್ತಿರುವ ವಸತಿ ಸಚಿವ Zameer Ahmed Khan ಅವರಿಗೆ ಎಐಸಿಸಿಯಲ್ಲಿ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಅವರ ಪ್ರಭಾವವನ್ನು ಗಮನಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ K. C. Venugopal ಈ ನಿರ್ಧಾರ ಕೈಗೊಂಡಿದ್ದಾರೆ.

ಪ್ರಸ್ತುತ ಕೇರಳ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಜಮೀರ್ ಅಹ್ಮದ್, ರಾಜ್ಯದ ಉಪಚುನಾವಣೆಗಳ ಪ್ರಚಾರಕ್ಕೆ ಬರಲು ಸಾಧ್ಯವಾಗದೇ ಬ್ಯುಸಿಯಾಗಿದ್ದಾರೆ. ಕೇರಳದ ಹಲವು ಕ್ಷೇತ್ರಗಳಲ್ಲಿ ಮುಸ್ಲಿಂ ಮತಗಳು ನಿರ್ಣಾಯಕವಾಗಿರುವ ಹಿನ್ನೆಲೆಯಲ್ಲಿ, ಅವರನ್ನು ಅಲ್ಲಿಯೇ ಪ್ರಚಾರಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಭಾಗವಹಿಸಲು ಜಮೀರ್ ಅವರಿಗೆ ಆಹ್ವಾನ ನೀಡಲಾಗಿದ್ದರೂ, ಕೇರಳದ ಪ್ರಚಾರ ಕಾರ್ಯದಿಂದ ಬಿಡುವಿಲ್ಲ ಎಂಬುದಾಗಿ ಅವರು ಪ್ರತಿಕ್ರಿಯಿಸಿದ್ದಾರೆ. ಮುಖ್ಯಮಂತ್ರಿ Siddaramaiah ಸೂಚನೆ ಇದ್ದರೂ, ಎಐಸಿಸಿ ನಾಯಕತ್ವದಿಂದಲೇ ತಡೆಯಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇದಕ್ಕೂ ನಡುವೆ, ಎಐಸಿಸಿ ಅಲ್ಪಸಂಖ್ಯಾತ ಘಟಕದ ಸಲಹಾ ಪರಿಷತ್ತಿನ ಸದಸ್ಯರಾಗಿ ಜಮೀರ್ ಅಹ್ಮದ್ ಅವರನ್ನು ನೇಮಿಸಲಾಗಿದೆ. ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆಲುವಿಗೆ ಕೇರಳದಲ್ಲಿ ಹೆಚ್ಚಿನ ಮಹತ್ವ ನೀಡಲಾಗುತ್ತಿದ್ದು, ಭವಿಷ್ಯದಲ್ಲಿ ನಾಯಕತ್ವದ ಮಟ್ಟದಲ್ಲೂ ಬದಲಾವಣೆ ಸಾಧ್ಯತೆಗಳಿವೆ ಎಂಬ ಚರ್ಚೆ ನಡೆಯುತ್ತಿದೆ.

ಅಲ್ಪಸಂಖ್ಯಾತ ಸಮುದಾಯದ ನಾಯಕರನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸುವ ಉದ್ದೇಶದಿಂದ ಈ ನೇಮಕಾತಿ ನಡೆದಿದ್ದು, ಜಮೀರ್ ಅವರ ಜನಪ್ರಿಯತೆ ದಿನೇದಿನೇ ಏರುತ್ತಿರುವುದಕ್ಕೆ ಇದು ಸಾಕ್ಷಿಯಾಗಿದೆ. ರಾಜ್ಯದಲ್ಲೂ ಉಪಚುನಾವಣೆಗಳ ನಡುವೆ ಅವರ ಗೈರುಹಾಜರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ.

Continue Reading

ದೇಶ

ಸೋಮಣ್ಣ ವಿರುದ್ಧ ಸಿಎಂ ಸಿಡಿತ: “ಕೆಲಸವಿಲ್ಲದ ಮಂತ್ರಿ!”

Published

on

By

ಬಾಗಲಕೋಟೆ: ಬಿಜೆಪಿ ನಾಯಕ V. Somanna ವಿರುದ್ಧ ಮುಖ್ಯಮಂತ್ರಿ Siddaramaiah ತೀವ್ರ ವಾಗ್ದಾಳಿ ನಡೆಸಿದ್ದು, “ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದ ಮಂತ್ರಿ, ಅವರಿಗೆ ಯಾವುದೇ ಕಡತ ಹೋಗುವುದಿಲ್ಲ” ಎಂದು ಟೀಕಿಸಿದರು.

ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಸಂದರ್ಭದಲ್ಲಿ ಮಾತನಾಡಿದ ಸಿಎಂ, “ನಾವು ಸೋಲುತ್ತೇವೆ ಎಂಬ ಭಯದಿಂದ ಬಿಜೆಪಿ ನಾಯಕರು ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸೋಮಣ್ಣ ಅವರಿಗೆ ಕ್ಷೇತ್ರದಲ್ಲಿ ಪ್ರಚಾರ ಮಾಡಲು ಸಮಯವಿಲ್ಲ” ಎಂದು ಕಿಡಿಕಾರಿದರು. ಮುಖ್ಯಮಂತ್ರಿಗಳ ಸ್ಥಾನ ಕುರಿತು ಬಿಜೆಪಿ ನಾಯಕರು ಮಾತನಾಡುವುದಕ್ಕೆ ಯಾವುದೇ ಅರ್ಥವಿಲ್ಲ, ಅವರು ಕಾಂಗ್ರೆಸ್ ಹೈಕಮಾಂಡ್ ಅಲ್ಲ ಎಂದರು.

ಬಿಜೆಪಿಯ ಮೇಲೆ ವಾಗ್ದಾಳಿ ಮುಂದುವರೆಸಿದ ಸಿದ್ದರಾಮಯ್ಯ, “ಬಿಜೆಪಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಮಾತಿನಲ್ಲಿ ಸತ್ಯವಿಲ್ಲ, ನಡೆದಲ್ಲಿ ನಂಬಿಕೆ ಇಲ್ಲ” ಎಂದು ಟೀಕಿಸಿದರು. ಜೊತೆಗೆ, ಪಕ್ಷದಿಂದ ಉಚ್ಛಾಟನೆಯಾದ Basanagouda Patil Yatnal ಅವರನ್ನು ಮತ್ತೆ ಪ್ರಚಾರಕ್ಕೆ ಕರೆತಂದು ಬಳಸಿಕೊಳ್ಳುತ್ತಿರುವುದು ಬಿಜೆಪಿ ದ್ವಂದ್ವ ನೀತಿಗೆ ಉದಾಹರಣೆ ಎಂದು ಹೇಳಿದರು.

ಇಂಧನ ಹಾಗೂ ಗ್ಯಾಸ್ ಸಿಲಿಂಡರ್ ಸಮಸ್ಯೆ ಕುರಿತು ಮಾತನಾಡಿದ ಅವರು, “ಇದು ಕೇಂದ್ರ ಸರ್ಕಾರದ ಜವಾಬ್ದಾರಿ. ರಾಜ್ಯ ಸರ್ಕಾರ ಕೇವಲ ವಿತರಣೆಯನ್ನು ಮಾಡುತ್ತದೆ” ಎಂದು ಸ್ಪಷ್ಟಪಡಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ Narendra Modi ಅವರ ಮನೆಗೆ ಮುತ್ತಿಗೆ ಹಾಕಬೇಕು ಎಂಬ ಹೇಳಿಕೆಯನ್ನೂ ನೀಡಿದರು.

ಇನ್ನೂ, ಕಾಂಗ್ರೆಸ್ ಹೈಕಮಾಂಡ್ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ, Rahul Gandhi, Sonia Gandhi, Mallikarjun Kharge ಮತ್ತು Priyanka Gandhi ಅವರೇ ಪಕ್ಷದ ಹೈಕಮಾಂಡ್ ಎಂದು ಹೇಳಿದರು.

ಒಟ್ಟಿನಲ್ಲಿ, ಉಪಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ವಾಗ್ವಾದ ಮತ್ತಷ್ಟು ತೀವ್ರಗೊಂಡಿದೆ.

Continue Reading

Trending