Connect with us

ರಾಜಕೀಯ

ಕಾವೇರಿ ನೀರು ಬಿಟ್ಟಿದ್ದಕ್ಕೆ ಶಹಬ್ಬಾಶ್‍ಗಿರಿ ಕೊಡಲು ಸಭೆಗೆ ಹೋಗ್ಬೇಕಿತ್ತಾ?: ಹೆಚ್‍ಡಿಕೆ ಕಿಡಿ

ಬೆಂಗಳೂರು: ಕೆಆರ್‌ಎಸ್ ಡ್ಯಾಂನಿಂದ (KRS Dam) ರೈತರ ಹೆಸರಿನಲ್ಲಿ ತಮಿಳುನಾಡಿಗೆ (Tamil Nadu) ನೀರು ಹರಿಸಲಾಗಿದೆ. ನೀರು ಬಿಟ್ಟು ಕಾಟಾಚಾರಕ್ಕೆ ಸಭೆ ಕರೆದಿದ್ದಾರೆ. ನೀರು ಬಿಟ್ಟಿದ್ದಕ್ಕೆ ಶಹಬ್ಬಾಶ್‍ಗಿರಿ ಕೊಡಲು ಹೋಗಬೇಕಿತ್ತಾ? ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (H.D Kumaraswamy) ಪ್ರಶ್ನೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿಗೆ ಕಾವೇರಿ ನೀರು (Cauvery Water) ಹರಿಸುವ ವಿಚಾರವಾಗಿ ನಡೆದ ಸರ್ವಪಕ್ಷಗಳ ಸಭೆಗೆ ಗೈರಾದ ವಿಚಾರಕ್ಕೆ ಅವರು ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ಸಿಡಬ್ಲ್ಯೂಆರ್‌ಸಿ ಶಿಫಾರಸು ಹಿನ್ನೆಲೆ ಸಭೆ ಕರೆದಿದ್ದರು. ಯಾವ ವಿಚಾರ ಚರ್ಚಿಸಲು ಅವರು ಸಭೆ ಕರೆದಿದ್ದರು? ಚರ್ಚೆಗೂ ಮುನ್ನವೇ ತಮಿಳುನಾಡಿಗೆ ನೀರು ಹರಿದು ಹೋಗಿದೆ. ಕಬಿನಿಯಿಂದ ನೀರು ಹರಿದಿದೆ. ಸಭೆಯಲ್ಲಿ ಕೊಡುವ ಗೊಡಂಬಿ, ಬಾದಾಮಿ ತಿನ್ನೋಕೆ ಹೋಗಬೇಕಿತ್ತಾ? ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ಯಾಕೆ ಸಭೆ ಮಾಡಿದ್ದೀರಿ? ಏನು ನಿರ್ಧಾರ ಮಾಡಿದ್ದೀರಿ? ಸಭೆ ಮಾಡಿದ ಮೇಲೂ ಕಡಿಮೆ ಪ್ರಮಾಣದ ನೀರು ಬಿಡಲು ಒಪ್ಪಿಗೆ ಸೂಚಿಸಿದೆ. ತೆಲಂಗಾಣಕ್ಕೆ ಹೋದರೆ ಅಲ್ಲಿ ಸಿಎಂ ಫೋನ್ ಮಾಡಿ ಸಹಕಾರ ಕೇಳ್ತಾರೆ. ಆದರೆ ನಾನು ರಾಜ್ಯದ ಯೋಜನೆಗಳಿಗೆ ಸಹಿ ಹಾಕಿದರೆ ಅದನ್ನು ನಿಲ್ಲಿಸುತ್ತಾರೆ ಎಂದು ಅವರು ಕಿಡಿಕಾರಿದ್ದಾರೆ.

ಮಂಡ್ಯದಲ್ಲಿ ಜನತಾ ದರ್ಶನ ಮಾಡಿದರೆ, ಅಧಿಕಾರಿಗಳು ಭಾಗಿಯಾಗಬಾರದು ಎಂದು ಆದೇಶ ಮಾಡಿದ್ದಾರೆ. ಅಧಿಕಾರಿಗಳ ಸಭೆ ನಡೆಸಬಾರದು ಎಂದು ಆದೇಶ ಮಾಡಿದ ಮೇಲೆ ನಮ್ಮಿಂದ ಏನು ಬಯಸುತ್ತೀರಾ? ಪಾಂಡವಪುರದಲ್ಲಿ ಮತ ಕೊಟ್ಟ ಜನರಿಗೆ ಧನ್ಯವಾದ ಹೇಳಬೇಕಿತ್ತು ಹೋಗಿದ್ದೆ. ಯಾವ ಸಂದರ್ಭದಲ್ಲಿ ಯಾವ ಕಾರ್ಯಕ್ರಮಕ್ಕೆ ಹೋಗಬೇಕು ಎಂದು ನನಗೆ ಗೊತ್ತಿದೆ. ನಾನು ಇವರ ಅನುಮತಿ ಪಡೆಯಬೇಕಾ? ಎಂದು ಕಿಡಿಕಾರಿದ್ದಾರೆ.

ಯಾವುದೇ ಕಾರ್ಯಕ್ರಮ ಮಾಡಿದರೂ ನಾವು ಪ್ರಾಮಾಣಿಕವಾಗಿ ಮಾಡುತ್ತೇವೆ. ಇವರಂತೆ ಕಾನೂನು ಬಾಹಿರ ಕೆಲಸ ಮಾಡಿಲ್ಲ. ಮುಖ್ಯಮಂತ್ರಿ ಮಾಡಲು ಯಾರು ಇವರ ಹಿಂದೆ ನಿಂತರೊ ಅವರ ಬದುಕಲ್ಲೇ ಚೆಲ್ಲಾಟ ಆಡುತ್ತಿದ್ದಾರೆ. ಅವರು ಎಷ್ಟು ಶಾಪ ಹಾಕ್ತಿದ್ದಾರೆ ಗೊತ್ತಿದೆ. ನೀವ ಸಿಎಂ ಆಗಲೆಂದು ಬಯಸಿದವರಿಗೆ ನಿಮ್ಮ ಆಡಳಿತದಲ್ಲಿ ಏನಾಗಿದೆ ಎಂದು ಗೊತ್ತಿದೆ ಎಂದು ಹೇಳಿದ್ದಾರೆ.

ಕಾರ್ಪೋರೆಷನ್‌ ಕಸ ಎತ್ತಿದ್ದೇನೆ:
ನಾನು ಕಾರ್ಪೋರೆಷನ್‌ ಕಸ ಎತ್ತಿದ್ದೇನೆ. ಸಿನಿಮಾ ಡಬ್ಬಾ ಹೊತ್ತಿದ್ದೇನೆ, ನಮ್ಮ ಕಾಲದಲ್ಲಿ ಸಿಡಿ ಇರಲಿಲ್ಲ. ಕಂಡಕಂಡಲ್ಲಿ ಕೊಳ್ಳೆ ಹೊಡೆದು ಜೀವನ ಮಾಡಿಲ್ಲ. ಭಾನುವಾರವೂ ಸಭೆ ನಡೆಸಿ ನನ್ನ ವಿರುದ್ಧ ದಾಖಲೆ ಹುಡುಕುತ್ತಿದ್ದಾರೆ. ಸಣ್ಣ ಪುಟ್ಟ ಸಮಸ್ಯೆ ಇವೆಯೇ ಎಂದು ಹುಡುಕುತ್ತಿದ್ದಾರೆ. 41 ವರ್ಷದಿಂದ ಕಷ್ಟಪಟ್ಟಿರುವ ಆಸ್ತಿ ನಮ್ಮದು ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ

ಬೆಂಗಳೂರು

ವೇತನ ವಿವಾದದಲ್ಲಿ ಸಿಎಂ ಸ್ಪಷ್ಟನೆ: 14 ತಿಂಗಳ ಹಿಂಬಾಕಿಗೆ ಮಾತ್ರ ಸರ್ಕಾರ ಸಿದ್ಧ

ಬೆಂಗಳೂರು: ಸಾರಿಗೆ ನೌಕರರ 38 ತಿಂಗಳ ವೇತನ ಹಿಂಬಾಕಿ ಪಾವತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. “ಈ ಬೇಡಿಕೆ ಸಮಂಜಸವಲ್ಲ. ಸರ್ಕಾರ ಕೇವಲ 14 ತಿಂಗಳ ಹಿಂಬಾಕಿಗೆ ಸಿದ್ಧ” ಎಂದು ಅವರು ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಂಧಾನ ಸಭೆಯಲ್ಲಿ ತಿಳಿಸಿದ್ದಾರೆ.

2020ರಿಂದ 2023ರ ಫೆಬ್ರವರಿವರೆಗಿನ ಬಾಕಿ ವೇತನ ಪಾವತಿಗೆ ನೌಕರ ಸಂಘಗಳು ಒತ್ತಾಯಿಸಿದ್ದರೊಂದಿಗೆ, 2024ರಿಂದ ನೂತನ ವೇತನವನ್ನೂ ಜಾರಿಗೆ ತರುವಂತೆ ಒತ್ತಾಯಿಸಲಾಗಿದೆ. ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, “ನಿಗಮಗಳ ಆರ್ಥಿಕ ಪರಿಸ್ಥಿತಿ ಮತ್ತು ಹಿಂದಿನ ಸರ್ಕಾರದ ಆದೇಶಗಳ ದೋಷಗಳನ್ನು ಪರಿಗಣಿಸಿ 14 ತಿಂಗಳ ವೇತನ ಹಿಂಬಾಕಿಗೆ ಸಮ್ಮತಿಯಿದೆ,” ಎಂದು ಸ್ಪಷ್ಟಪಡಿಸಿದರು.

ವೇತನ ಪರಿಷ್ಕರಣೆ ಪಶ್ಚಾತ್ಪಟ
2016ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ 12.5% ವೇತನ ಹೆಚ್ಚಳ ಜಾರಿಗೆ ಬಂದಿತ್ತು. ಆದರೆ 2020ರ ಕೋವಿಡ್ ಕಾರಣದಿಂದ ಆ ವೇಳೆಗೆ ಯಾವುದೇ ಪರಿಷ್ಕರಣೆ ಆಗಿರಲಿಲ್ಲ. ನಂತರದ ಕಾಂಗ್ರೆಸ್ ಸರ್ಕಾರದಲ್ಲಿ ಶ್ರೀನಿವಾಸ ಮೂರ್ತಿ ಸಮಿತಿ ಶಿಫಾರಸ್ಸಿನಂತೆ 2022ರ ಜೂನ್‌ 01ರಿಂದ 2023ರ ಫೆಬ್ರವರಿವರೆಗೆ ಹಿಂಬಾಕಿ ಪಾವತಿ ಮಾಡಲು ತೀರ್ಮಾನಿಸಲಾಗಿತ್ತು.

ಸರ್ಕಾರದ ಆರ್ಥಿಕ ಹೊಣೆಗಾರಿಕೆ
ಸಿದ್ದರಾಮಯ್ಯ ಅವರು ಹೇಳಿದ್ದಾರೆ: “ನಾವು ಅಧಿಕಾರಕ್ಕೆ ಬಂದಾಗ ನಿಗಮಗಳಿಗೆ ಒಟ್ಟಾರೆ ₹4000 ಕೋಟಿ ಸಾಲ ಇತ್ತು. 2018 ರಲ್ಲಿ ಈ ಮೊತ್ತ ಕೇವಲ ₹14 ಕೋಟಿ ಮಾತ್ರ ಇತ್ತು. ಯಾವುದೇ ನಿಗಮ ಲಾಭದಲ್ಲಿ ಇಲ್ಲ.” ಅಂತಹ ಪರಿಸ್ಥಿತಿಯಲ್ಲಿ ಎಲ್ಲಾ ನೌಕರರ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಸಂಘದ ಚುನಾವಣೆ ಮತ್ತು ಮುಂದಿನ ಕ್ರಮ
ಸಾರಿಗೆ ನೌಕರರ ಸಂಘದ ಚುನಾವಣೆ ಹಾಗೂ ಬೇಡಿಕೆಗಳ ಕುರಿತಂತೆ ಸರ್ಕಾರ ಪರಿಶೀಲನೆ ನಡೆಸಲಿದ್ದು, ಮಾತುಕತೆ ಮೂಲಕ ಎಲ್ಲ ಅಹವಾಲುಗಳನ್ನು ಬಗೆಹರಿಸಲು ಸಿದ್ಧವಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

Continue Reading

ಬೆಂಗಳೂರು

ಸಾರಿಗೆ ನೌಕರರ ಮುಷ್ಕರ ಆರಂಭ: ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ – “ಹಠವಿಲ್ಲದೆ ಸಹಕಾರ ನೀಡಿ”

ಬೆಂಗಳೂರು: ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಸಾರಿಗೆ ನೌಕರರು ಮುಷ್ಕರಕ್ಕೆ (Transport Employees Strike) ಇಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಸಾರಿಗೆ ನೌಕರರು ಕೇಳಿರುವ ಬೇಡಿಕೆಯಲ್ಲಿ ತಪ್ಪಿಲ್ಲ. ಆದರೆ ಸರ್ಕಾರದ ಪರಿಸ್ಥಿತಿಯನ್ನೂ ಅವರು ಗಮನದಲ್ಲಿಟ್ಟುಕೊಳ್ಳಬೇಕು. ಹಠವಿಲ್ಲದೆ ಸಹಕಾರ ನೀಡಬೇಕು” ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಸಚಿವರು ನೌಕರರೊಂದಿಗೆ ಸಭೆ ನಡೆಸಿದ್ದಾರೆ ಎಂಬುದನ್ನು ಅವರು ನೆನಪಿಸಿದ್ದಾರೆ.

“ಸಾರ್ವಜನಿಕರ ಹಿತವೇ ಮೊದಲಾದ್ದು. ಕೆಲವು ನೌಕರರು ಈಗಾಗಲೇ ಕೆಲಸಕ್ಕೆ ಹಾಜರಾಗಿದ್ದಾರೆ. ಅವರಿಗೆ ಅಭಿನಂದನೆ” ಎಂದು ಡಿಸಿಎಂ ಹೇಳಿದ್ದಾರೆ.

ಇತ್ತ, ಹಳದಿ ಮೆಟ್ರೊ ಮಾರ್ಗದ (Yellow Metro Line) ಉದ್ಘಾಟನೆಯ ಕುರಿತು ಮಾತನಾಡಿದ ಡಿ.ಕೆ.ಶಿವಕುಮಾರ್, “ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಸ್ಟ್ 10ರಂದು ಬರುವ ಸಾಧ್ಯತೆ ಇದೆ. ನಾವು ಈಗಾಗಲೇ ತಯಾರಿ ಪರಿಶೀಲನೆ ಆರಂಭಿಸಿದ್ದೇವೆ. ಕಾರ್ಯಕ್ರಮದ ಅಧಿಕೃತ ಸಮಯ ಇನ್ನೂ ಘೋಷಣೆಯಾಗಿಲ್ಲ” ಎಂದು ತಿಳಿಸಿದ್ದಾರೆ.

ಇದೇ ದಿನ ಬಿಜೆಪಿ ವತಿಯಿಂದ ರೈಲ್ವೆ ಸಂಬಂಧಿತ ಕಾರ್ಯಕ್ರಮವೂ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

Continue Reading

ಬೆಂಗಳೂರು

ಕೆಆರ್‌ಎಸ್ ಡ್ಯಾಂ ಕಟ್ಟಲು ಮೈಸೂರಿನ ರಾಜಮಾತೆಯ ತ್ಯಾಗ: ಟಿಪ್ಪು ವಿವಾದದ ನಡುವೆ ಪೀಠಾಧಿಪತಿಯ ಸ್ಪಷ್ಟನೆ!

ರಾಯಚೂರು: ಕಾವೇರಿ ನದೀಪ್ರಾಂತ್ಯದ ಜನರಿಗೆ ನೀರಿನ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಮೈಸೂರಿನ ರಾಜಮಾತೆ ತಮ್ಮ ಆಭರಣಗಳನ್ನು ಮಾರಾಟ ಮಾಡಿ ಕೆಆರ್‌ಎಸ್ ಡ್ಯಾಂವನ್ನು ನಿರ್ಮಿಸಿದರು ಎಂದು ಗುರುರಾಘವೇಂದ್ರ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಮಂತ್ರಾಲಯದಲ್ಲಿ ಮಾತನಾಡಿದ ಅವರು, ಕೆಆರ್‌ಎಸ್ ಜಲಾಶಯಕ್ಕೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ದಾರೆ ಎಂಬ ಸಚಿವ ಮಹಾದೇವಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, “ಇದು ರಾಜಮನೆತನದ ತ್ಯಾಗದ ಫಲ. ಇತಿಹಾಸವನ್ನು ನಿಖರವಾಗಿ ತಿಳಿದುಕೊಳ್ಳಬೇಕಾದದ್ದು ಇತಿಹಾಸ ತಜ್ಞರ ಕೆಲಸ” ಎಂದು ಹೇಳಿದರು.

ಇದೇ ವೇಳೆ ಧರ್ಮಸ್ಥಳದ ತಾತ್ಕಾಲಿಕ ವಿವಾದಗಳ ಕುರಿತು ಮಾತನಾಡಿದ ಶ್ರೀಗಳು, “ಧಾರ್ಮಿಕ ಕ್ಷೇತ್ರಗಳ ಪಾವಿತ್ರ್ಯತೆಗಿಂತ ವ್ಯವಸ್ಥೆ ಬಗ್ಗೆ ಚರ್ಚೆ ಮಾಡಬೇಕು. ಜನ ಭಕ್ತಿಯಿಂದ ನಂಬುವ ಕ್ಷೇತ್ರಗಳನ್ನು ರಾಜಕೀಯವಾಗಿಸಬಾರದು” ಎಂದು ಎಚ್ಚರಿಸಿದರು.

ಸಾರಿಗೆ ನೌಕರರ ಮುಷ್ಕರದ ವಿಚಾರಕ್ಕೂ ಪ್ರತಿಕ್ರಿಯೆ ನೀಡಿದ ಅವರು, “ಅವರ ಬೇಡಿಕೆಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಭಕ್ತರಿಗೆ ತೊಂದರೆಯಾಗದಂತೆ ಸೂಕ್ತ ಪರಿಹಾರ ಒದಗಿಸಲಿ” ಎಂದಿದ್ದಾರೆ.

ಇದಕ್ಕೂ ಮುನ್ನ ಸಚಿವ ಎಚ್.ಸಿ. ಮಹಾದೇವಪ್ಪ ಟಿಪ್ಪು ಸುಲ್ತಾನ್ ಕನ್ನಂಬಾಡಿ ಡ್ಯಾಂಗೆ ಅಡಿಗಲ್ಲು ಹಾಕಿದರೆಂದು ಹೇಳಿಕೆ ನೀಡಿದ್ದರು. ಆದರೆ, ಇತಿಹಾಸವನ್ನ ತಿರುವುಮಾಡುವುದು ಸರಿಯಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Continue Reading

Trending