Connect with us

ದೇಶ

ನಂದಿನಿ ತುಪ್ಪ ಪೂರೈಸಿ ನಷ್ಟ ಅನುಭವಿಸಲು ಸಾಧ್ಯವಿಲ್ಲ’ ಕೆಎಂಎಫ್ ಅಧ್ಯಕ್ಷರು

ನಂದಿನಿ ತುಪ್ಪ ಪೂರೈಸಿ ನಷ್ಟ ಅನುಭವಿಸಲು ಸಾಧ್ಯವಿಲ್ಲ' ಕೆಎಂಎಫ್ ಅಧ್ಯಕ್ಷರು
ನಂದಿನಿ ತುಪ್ಪ ಪೂರೈಸಿ ನಷ್ಟ ಅನುಭವಿಸಲು ಸಾಧ್ಯವಿಲ್ಲ' ಕೆಎಂಎಫ್ ಅಧ್ಯಕ್ಷರು

ತಿರುಪತಿ ಲಡ್ಡು ತಯಾರಿಕೆಗೆ ನಂದಿನಿ ತುಪ್ಪ ಪೂರೈಸಿ ನಷ್ಟ ಅನುಭವಿಸುವ ಪ್ರಶ್ನೆಯೇ ಇಲ್ಲ ಎಂದು ಕರ್ನಾಟಕ ಹಾಲು ಮಹಾಮಂಡಳದ ಅಧ್ಯಕ್ಷ ಭೀಮಾ ನಾಯ್ಕ ಹೇಳಿದ್ದಾರೆ. ನಗರದಲ್ಲಿ ಸೋಮವಾರ ನಡೆದ ರಾಯಚೂರು, ಬಳ್ಳಾರಿ ಕೊಪ್ಪಳ ಹಾಗೂ ವಿಜಯನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವಾರ್ಷಿಕ ಮಹಾಸಭೆಯಲ್ಲಿ ಪಾಲ್ಗೊಂಡು ಮಾಧ್ಯಮದವರೊಂದಿಗೆ ಅವರು
ಇದು ಕೆಎಂಎಫ್  ರೈತರ ಒಕ್ಕೂಟವಾಗಿದೆ. ನಷ್ಟದಲ್ಲಿ ತಿರುಪತಿಗೆ ತುಪ್ಪ ಸರಬರಾಜು ಮಾಡಲು ಸಾಧ್ಯವೇ? ಮಾರುಕಟ್ಟೆಯಲ್ಲಿ ನಂದಿನಿ ತುಪ್ಪಕ್ಕೆ ಅಪಾರ ಬೇಡಿಕೆಯಿದೆ. ಗ್ರಾಹಕರು 610 ರೂ.ಗೆ ಒಂದು ಲೀಟರ್ ತುಪ್ಪವನ್ನು ಖರೀದಿಸುತ್ತಿದ್ದಾರೆ.” ಹೀಗಿರುವಾಗ ನಾವು ನಷ್ಟದಲ್ಲಿ ತುಪ್ಪ ನೀಡಲು   ಆಗುವುದಿಲ್ಲ.  ನಂದಿನಿ ಹೆಸರಿನಲ್ಲಿ ತುಪ್ಪದ ರಾಜಕಾರಣ ಮಾಡಲಾಗುತ್ತಿದೆ ಎಂದರು. ‘ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ರಾಜ್ಯದಲ್ಲಿ ಆಡಳಿತ ನಡೆಸಿದ್ದು ಯಾರು, ತಿರುಪತಿಗೆ ಎಷ್ಟು ಲೀಟರ್ ತುಪ್ಪ ಪೂರೈಸಿದ್ದಾರೆ’ ಎಂದು ನಾಯಕ್ ಪ್ರಶ್ನಿಸಿದರು.    ಬಿಜೆಪಿಯ ನಾಲ್ಕು ವರ್ಷಗಳ ಆಡಳಿತದಲ್ಲಿ ಒಂದು ಲೀಟರ್ ತುಪ್ಪವನ್ನು (ತಿರುಪತಿಗೆ) ಸರಬರಾಜು ಮಾಡಲಿಲ್ಲ. KMF ಒಂದು ವರ್ಷದಲ್ಲಿ ಸರಾಸರಿ 30,000 ಟನ್ ತುಪ್ಪವನ್ನು ಉತ್ಪಾದಿಸುತ್ತದೆ. ಆದರೆ, ಇನ್ನೂ 10,000 ಟನ್‌ಗೆ ಬೇಡಿಕೆ ಇದೆ. ಹಾಲಿನ ಪ್ರೋತ್ಸಾಹಧನವನ್ನು ಲೀಟರ್‌ಗೆ 3 ರೂಪಾಯಿ ಹೆಚ್ಚಿಸಿದ ನಂತರ, ಸಂಗ್ರಹಣೆಯು ದಿನಕ್ಕೆ 86 ಲಕ್ಷ ಲೀಟರ್‌ನಿಂದ 87 ಲಕ್ಷ ಲೀಟರ್‌ಗೆ ಏರಿದೆ ಎಂದು ಅವರು ಹೇಳಿದರು, ತಿರುಪತಿಯಲ್ಲಿ ಪ್ರಸಾದದ ರೂಪದಲ್ಲಿ ವಿತರಿಸುತ್ತಿದ್ದ ಪ್ರಸಿದ್ಧ ಲಾಡುಗಳಲ್ಲಿ ಇನ್ಮುಂದೆ ನಿಮಗೆ ನಂದಿನಿ ತುಪ್ಪದ ಘಮ ಸಿಗುವುದಿಲ್ಲ. ಸುಮಾರು 50 ವರ್ಷಗಳ ಬಳಿಕ ತಿರುಪತಿ ತಿರುಮಲ ದೇವಸ್ಥಾನ (TTD) ಮಂಡಳಿ ಕೆಎಂಎಫ್‌ನಿಂದ ನಂದಿನಿ ತುಪ್ಪದ ಖರೀದಿಯನ್ನು ಸ್ಥಗಿತಗೊಳಿಸಿದೆ. ಈ ಮೂಲಕ ಲಾಡುಗಳ ತಯಾರಿಕೆಯಲ್ಲಿ ನಂದಿನಿ ತುಪ್ಪದ ಬಳಕೆಯನ್ನು ಟಿಟಿಡಿ ನಿಲ್ಲಿಸಿದೆ. ಆಗಸ್ಟ್ 1 ರಿಂದ ಹಾಲಿನ ಬೆಲೆ ಹೆಚ್ಚಾಗಿರುವುದರಿಂದ ಸಹಜವಾಗಿಯೇ ತುಪ್ಪಕ್ಕೆ ಹೆಚ್ಚಿನ ಬೆಲೆ ನೀಡುವಂತೆ ಬೇಡಿಕೆ ಇಟ್ಟಿದ್ದೇವು. ಆದರೆ, ಟಿಟಿಡಿ ತುಪ್ಪ ಪೂರೈಸಲು ಇ-ಪ್ರೊಕ್ಯೂರ್‌ಮೆಂಟ್ ಸೈಟ್ ಮೂಲಕ ಕಡಿಮೆ ಬೆಲೆಯನ್ನು ನಮೂದಿಸಿದ ಕಂಪನಿಯನ್ನು ಆಯ್ಕೆ ಮಾಡಿದೆ. ಗುಣಮಟ್ಟದ ಕಾರಣದಿಂದ ನಂದಿನಿ ತುಪ್ಪ ಅಂತಾರಾಷ್ಟ್ರೀಯ ಮಾರುಕಟ್ಟೆಯನ್ನು ಹೊಂದಿದೆ. ಕಡಿಮೆ ಬೆಲೆಯಲ್ಲಿ ಬಿಡ್‌ ಮಾಡುವ ಕಂಪನಿ ತುಪ್ಪದ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳುವುದು ಸ್ಪಷ್ಟ ಎಂಬುದು ಗೊತ್ತಾಗುತ್ತದೆ ಎಂದಿದ್ದಾರೆ. ವಿಶ್ವ ಪ್ರಸಿದ್ಧ ತಿರುಪತಿಗೆ ಹೋದ ಭಕ್ತರಿಗೆ ಟಿಟಿಡಿಯಿಂದ ಪ್ರಸಾದವನ್ನಾಗಿ ಲಾಡನ್ನು ವಿತರಿಸಲಾಗುತ್ತಿದೆ. ತಿರುಪತಿ ಅಂದ್ರೇ ಲಾಡು, ಲಾಡು ಅಂದ್ರೇ ತಿರುಪತಿ ಎಂಬರ್ಥದಲ್ಲಿ ಲಾಡು ಪ್ರಸಿದ್ಧಿ ಹೊಂದಿದೆ. ಇಂತಹ ಪ್ರಸಿದ್ಧ ಲಾಡು ತಯಾರಿಕೆಯಲ್ಲಿ ಇಷ್ಟು ದಿನ ನಂದಿನಿ ತುಪ್ಪವನ್ನೇ ಬಳಸಲಾಗುತ್ತಿತ್ತು. ಇದರಿಂದ ತಿರುಪತಿ ಲಾಡು ಬಹಳ ರುಚಿಕರವಾಗಿ ಇರುತ್ತಿತ್ತು. ಈ ಬಗ್ಗೆ ಹಲವು ಬಾರಿ ಟಿಟಿಡಿಯೇ ನಂದಿನಿ ತುಪ್ಪದಿಂದಲೇ ಲಾಡು ಇಷ್ಟೊಂದು ರುಚಿಯಾಗಿರಲು ಸಾಧ್ಯ ಎಂದು ಕೂಡ ಹೇಳಿತ್ತು. ಆದರೆ, ಈಗ ಬೆಲೆಯ ಕಾರಣದಿಂದ ತಿರುಪತಿ ಲಾಡಲ್ಲಿ ನಂದಿನಿ ತುಪ್ಪದ ಘಮ ಬರುವುದಿಲ್ಲ.

Continue Reading
Click to comment

Leave a Reply

Your email address will not be published. Required fields are marked *

ದೇಶ

ನಾವು ಉಗ್ರವಾದ ಪೋಷಿಸಿದ್ದು ನಿಜ ಎಂದು ತಪ್ಪೊಪ್ಪಿಕೊಂಡ ಪಾಕ್ ನಾಯಕಿ!

ಪಾಕಿಸ್ತಾನವು ಉಗ್ರರನ್ನು ಹಾಗೂ ಉಗ್ರರ ಚಟುವಟಿಕೆಯನ್ನು ಪೋಷಿಸಿಕೊಂಡು ಬಂದಿರುವುದು ಸತ್ಯ ಎಂದು ಪಾಕಿಸ್ತಾನ ಪೀಪಲ್ಸ್ ಪಾರ್ಟಿ ನಾಯಕಿ ಹಾಗೂ ಸಂಸದೆ ಶೆರ್ರಿ ರೆಹಮಾನ್ ಅವರು ಒಪ್ಪಿಕೊಂಡಿದ್ದಾರೆ,
ಸ್ಕೈ ನ್ಯೂಸ್ ನಡೆಸಿದ ವಿಶೇಷ ಸಂದರ್ಶನದಲ್ಲಿ ಸಂಸದೆ ಶೆರ್ರಿ ರೆಹಮಾನ್ ಭಾಗಿಯಾಗಿದ್ದು, ನಿರೂಪಕಿ ಹಾಗೂ ಸಂಸದೆಯ ನಡುವೆ ಮಾತಿನ ಚಕಮಕಿ ನಡೆದಿದೆ, ಸಂದರ್ಶನದ ಬಿರುಸಿನ ನಡುವೆ ನಿರೂಪಕಿ ಸಾಕ್ಷ್ಯಾಧಾರಗಳನ್ನು ತೋರಿಸಿದ್ದು, ಈ ವೇಳೆ ಪಾಕಿಸ್ತಾನದ ಸಂಸದೆಯ ಬಾಯಿಂದ ಪಾಕಿಸ್ತಾನ ಹಾಗೂ ಉಗ್ರರಿಗೂ ಇರುವ ನಂಟಿನ ಅಸಲಿ ವಿಚಾರಗಳು ಬಹಿರಂಗೊಂಡಿದೆ,
ನಿರೂಪಕಿ ಯಾಲ್ದಾ ಹಕೀಮ್ ಬ್ರಿಗೇಡ್ 313 ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶೆರ್ರಿ ರೆಹಮಾನ್ ಈ ಹಿಂದೆ ಪಾಕಿಸ್ತಾನವು ಭಯೋತ್ಪಾದನೆಯನ್ನು ಪೋಷಿಸಿಕೊಂಡು ಬಂದಿದ್ದು ನಿಜ, ಆದರೆ ನಾವು ಈಗ ಉಗ್ರವಾದ ವಿರುದ್ಧ ಹೋರಾಟ ನಡೆಸುತ್ತಿದ್ದೇವೆ, ಪಾಕಿಸ್ತಾನ ರಾಷ್ಟ್ರವು ಬದಲಾಗಿದೆ ಎಂದರು,
ಇನ್ನು ಕಾಶ್ಮೀರವನ್ನು ಗುರಯಾಗಿಸಿಕೊಂಡು ಭಾರತದಲ್ಲಿ ನಡೆಯುತ್ತಿರುವ ದಾಳಿ ಬಗ್ಗೆ ನಿರೂಪಕಿ ಪ್ರಸ್ತಾಪಿಸದಾಗ ಉತ್ತರಿಸಿದ ಶೆರ್ರಿ ರೆಹಮಾನ್ ಭಾರತದಲ್ಲೂ ಆಂತರಿಕ ಸಂಘರ್ಷಗಳು ನಡೆಯುತ್ತಿವೆ, ಅಲ್ಲಿನ ಭದ್ರತೆಗೆ ಏನಾದರೂ ಸಮಸ್ಯೆಯಾದರೆ ಅದಕ್ಕೆ ನಾವು ಜವಾಬ್ದಾರರೇ? ಎಂದು ಪ್ರಶ್ನಿಸಿದರು,

Continue Reading

ಕ್ರೀಡೆ

ಒಂದೇ ತಿಂಗಳಲ್ಲಿ 6 ಕ್ರಿಕೆಟಿಗರು ನಿವೃತ್ತಿ-ಲಿಸ್ಟ್ ನಲ್ಲಿದ್ದಾರೆ ಭಾರತದ ದಿಗ್ಗಜರು!

ನವದೆಹಲಿ: ರೋಹಿತ್ ಶರ್ಮಾ ಟೆಸ್ಟ್ ನಿವೃತ್ತಿಯೊಂದಿಗೆ ಶುರುವಾದ ಸ್ಟಾರ್ ಆಟಗಾರರ ಗುಡ್ ಬೈ ಪರ್ವ ಮುಂದುವರೆದಿದೆ, ಅದರಲ್ಲೂ ಮೇ ಮತ್ತು ಜೂನ್ ತಿಂಗಳ ನಡುವೆ ಒಟ್ಟು 6 ಆಟಗಾರರು ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ,
ರೋಹಿತ್ ಶರ್ಮಾ: ಭಾರತದ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಕಳೆದ ತಿಂಗಳು ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದರು, ಈಗಾಗಲೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿರುವ ಹಿಟ್ ಮ್ಯಾನ್ ಇನ್ಮುಂದೆ ಏಕದಿನದಲ್ಲಿ ಮಾತ್ರ ಟೀಮ್ ಇಂಡಿಯಾ ಪ್ರತಿನಿಧಿಸಲಿದ್ದಾರೆ,
ವಿರಾಟ್ ಕೊಹ್ಲಿ: ರೋಹಿತ್ ಶರ್ಮಾ ಬೆನ್ನಲ್ಲೇ ವಿರಾಟ್ ಕೊಹ್ಲಿನ ಕೂಡ ಟೆಸ್ಟ್ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ, ಮೇ 12 ರಂದು ಟೆಸ್ಟ್ ಗೆ ನಿವೃತ್ತಿ ಪ್ರಕಟಿಸಿದ್ರು, ಕಿಂಗ್ ಕೊಹ್ಲಿ ಇನ್ನು ಏಕದಿನ ಕ್ರಿಕೆಟ್ ನಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ,
ಏಂಜೆಲೊ ಮ್ಯಾಥ್ಯೂಸ್: ಶ್ರೀಲಂಕಾ ತಂಡದ ಸ್ಟಾರ್ ಆಲ್‍ರೌಂಡರ್ ಏಂಜೆಲೊ ಮ್ಯಾಥ್ಯೂಸ್ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ, ಆಸ್ಟ್ರೇಲಿಯಾ ತಂಡದ ಪ್ರಮುಖ ಆಟಗಾರ ಗ್ಲೆನ್ ಮ್ಯಾಕ್ಸ್‍ವೆಲ್ ಏಕದಿನ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ,
ಆದರೂ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಮುಂದುವರೆಯಲಿದ್ದಾರೆ,
ಹೆನ್ರಿಕ್ ಕ್ಲಾಸೆನ್: ಸೌತ್ ಆಫ್ರಿಕಾದ ಹೊಡಿಬಡಿ ದಾಂಡಿಗ ಹೆನ್ರಿಕ್ ಕ್ಲಾಸೆನ್ ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ, ಕೇವಲ 33 ವರ್ಷದ ಕ್ಲಾಸೆನ್, ಮುಂಬರುವ ದಿನಗಳಲ್ಲಿ ಟಿ20 ಲೀಗ್ ಗಳಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ,
ನಿಕೋಲಸ್ ಪೂರನ್: ವೆಸ್ಟ್ ಇಂಡೀಸ್ ನ ವಿಕೆಟ್ ಕೀಪರ್ ಬ್ಯಾಟರ್ ನಿಕೋಲಸ್ ಪೂರನ್ ಕೂಡ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ, ಅದು ಕೂಡ 29 ನೇ ವಯಸ್ಸಿನಲ್ಲಿ ಎಂಬುದು ಅಚ್ಚರಿ.

Continue Reading

ಕ್ರೀಡೆ

ಬ್ಯಾಡ್ಮಿಂಟನ್ ಆಡುತ್ತಾ ಬೆಳೆದವಳಾಗಿ ಜೀವನವನ್ನು ದೈಹಿಕವಾಗಿ, ಮಾನಸಿಕವಾಗಿ ಹೇಗೆ ರೂಪಿಸುತ್ತದೆ ನಾನು ನೇರವಾಗಿ ಅನುಭವಿಸಿದ್ದೇನೆ ದೀಪಿಕಾ

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಮ್ಮ ತಂದೆ, ಬ್ಯಾಡ್ಮಿಂಟನ್ ಲೆಜೆಂಡ್​​ ಪ್ರಕಾಶ್ ಪಡುಕೋಣೆ ಅವರ 70ನೇ ಹುಟ್ಟುಹಬ್ಬವನ್ನಿಂದು ಬಹಳ ವಿಶೇಷವಾಗಿ ಆಚರಿಸಿದರು.

‘ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್’ (ಪಿಎಸ್​ಬಿ) ಬೆಂಗಳೂರು, ಎನ್​​ಸಿಆರ್, ಮುಂಬೈ, ಚೆನ್ನೈ, ಜೈಪುರ, ಪುಣೆ, ನಾಸಿಕ್, ಮೈಸೂರು, ಪಾಣಿಪತ್, ಡೆಹ್ರಾಡೂನ್, ಉದಯಪುರ, ಕೊಯಮತ್ತೂರು, ಸಾಂಗ್ಲಿ ಮತ್ತು ಸೂರತ್ ಸೇರಿದಂತೆ 18 ನಗರಗಳಲ್ಲಿ 75ಕ್ಕೂ ಹೆಚ್ಚು ತರಬೇತಿ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಮಹತ್ವದ ಮೈಲಿಗಲ್ಲು ಸಾಧಿಸಿದೆ ಎಂದು ಇನ್​​​ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳಲಾದ ಮಾಧ್ಯಮ ಪ್ರಕಟಣೆ ಮೂಲಕ ಹೇಳಿದ್ದಾರೆ.

“ಬ್ಯಾಡ್ಮಿಂಟನ್‌ನ ಸಂತೋಷ ಮತ್ತು ಶಿಸ್ತನ್ನು ಎಲ್ಲಾ ವರ್ಗದ ಜನರಿಗೆ ತಲುಪಿಸುವುದು ನಮ್ಮ ಆಶಯ” ಎಂದೂ ಸಹ ದೀಪಿಕಾ ತಿಳಿಸಿದ್ದಾರೆ. ಈ ಮೂಲಕ ಕೇಂದ್ರಗಳ ಸಂಖ್ಯೆ ವಿಸ್ತರಿಸುವ ಬಗ್ಗೆ ಮಾಹಿತಿ ಒದಗಿಸಿದ್ದಾರೆ.

ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್​​ನಲ್ಲಿ, “ಬ್ಯಾಡ್ಮಿಂಟನ್ ಆಡುತ್ತಾ ಬೆಳೆದವಳಾಗಿ, ಈ ಕ್ರೀಡೆಯು ಒಬ್ಬರ ಜೀವನವನ್ನು ದೈಹಿಕವಾಗಿ, ಮಾನಸಿಕವಾಗಿ ಮತ್ತು ಭಾವನಾತ್ಮಕವಾಗಿ ಹೇಗೆ ರೂಪಿಸುತ್ತದೆ ಎಂಬುದನ್ನು ನಾನು ನೇರವಾಗಿ ಅನುಭವಿಸಿದ್ದೇನೆ. ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ (PSB) ಮೂಲಕ, ಬ್ಯಾಡ್ಮಿಂಟನ್‌ನ ಸಂತೋಷ ಮತ್ತು ಶಿಸ್ತನ್ನು ಎಲ್ಲಾ ಹಂತದ ಜನರಿಗೆ ತಲುಪಿಸಲು ಮತ್ತು ಆರೋಗ್ಯಕರ, ಫೋಕಸ್ಡ್​​ ಮತ್ತು ಕ್ರೀಡೆಯಿಂದ ಪ್ರೇರಿತವಾದ ಪೀಳಿಗೆಯನ್ನು ನಿರ್ಮಿಸಲು ನಾವು ಆಶಿಸುತ್ತೇವೆ. ಅಪ್ಪಾ, ನಿಮ್ಮನ್ನು ಚೆನ್ನಾಗಿ ತಿಳಿದಿರುವವರಿಗೆ ಈ ಕ್ರೀಡೆಯ ಬಗ್ಗೆ ನಿಮ್ಮ ಉತ್ಸಾಹವೂ ತಿಳಿದಿದೆ. 70ನೇ ವಯಸ್ಸಿನಲ್ಲಿಯೂ ನೀವು ಬ್ಯಾಡ್ಮಿಂಟನ್​ಗೆ ನಿಮ್ಮನ್ನು ಸಮರ್ಪಿಸಿದ್ದೀರಿ. ನಿಮ್ಮ ಉತ್ಸಾಹವನ್ನು ನಿಜವಾಗಿಸಲು ನಾವು ಬದ್ಧರಾಗಿದ್ದೇವೆ. ಎಲ್ಲರಿಗಾಗಿ ಬ್ಯಾಡ್ಮಿಂಟನ್! 70ನೇ ಹುಟ್ಟುಹಬ್ಬದ ಶುಭಾಶಯಗಳು ಪಪ್ಪಾ!” ಎಂದು ಬರೆದುಕೊಂಡಿದ್ದಾರೆ.

ನಟಿ ಶೇರ್ ಮಾಡಿದ ಪ್ರಕಟಣೆಯಲ್ಲಿ, ಪಿಎಸ್‌ಬಿಯ ಮಾರ್ಗದರ್ಶಕ ಮತ್ತು ಸಲಹೆಗಾರ ಪ್ರಕಾಶ್ ಪಡುಕೋಣೆ ತಮ್ಮ ಮನದಾಳವನ್ನೂ ಹಂಚಿಕೊಂಡರು. “ಕ್ರೀಡೆಯು ಬೆಳವಣಿಗೆಯ ಅವಿಭಾಜ್ಯ ಅಂಗವಾಗಿದೆ. ಇದು ಶಿಸ್ತು, ಸ್ಥಿತಿಸ್ಥಾಪಕತ್ವ ಮತ್ತು ಗೆಲುವಿನ ಮನಸ್ಥಿತಿಯನ್ನು ಹುಟ್ಟಿಸುತ್ತದೆ. ಪಿಎಸ್‌ಬಿಯೊಂದಿಗೆ, ಗುಣಮಟ್ಟದ ತರಬೇತಿಯನ್ನು ಸುಲಭವಾಗಿ ಮತ್ತು ಕೈಗೆಟುಕುವಂತೆ ಮಾಡುವುದು, ತಳಮಟ್ಟದಿಂದ ಪ್ರತಿಭೆಯನ್ನು ಪೋಷಿಸುವುದು ಮತ್ತು ಭಾರತೀಯ ಬ್ಯಾಡ್ಮಿಂಟನ್‌ನ ಭವಿಷ್ಯಕ್ಕೆ ಬಲವಾದ ಅಡಿಪಾಯವನ್ನು ಹಾಕುವುದು ನಮ್ಮ ಗುರಿ” ಎಂದು ಹೇಳಿದರು.

ಭಾರತದ 18 ನಗರಗಳಲ್ಲಿ 75 ಕೇಂದ್ರಗಳು ಆರಂಭಗೊಂಡಿದ್ದು, ಈ ವರ್ಷದ ಕೊನೆಗೆ 100 ಕೇಂದ್ರಗಳು ಮತ್ತು 2027ರ ಹೊತ್ತಿಗೆ 250 ಕೇಂದ್ರಗಳಿಗೆ ವಿಸ್ತರಿಸುವ ಗುರಿಯನ್ನು ‘ಪಡುಕೋಣೆ ಸ್ಕೂಲ್​ ಆಫ್​​ ಬ್ಯಾಡ್ಮಿಂಟನ್’ ಹೊಂದಿದೆ. ದೀಪಿಕಾ ಪಡುಕೋಣೆ ಇದರ ಸಂಸ್ಥಾಪಕಿಯಾದರೆ, ಪ್ರಕಾಶ್​ ಪಡುಕೋಣೆ ಮಾರ್ಗದರ್ಶಕರಾಗಿ ಪಿಎಸ್​ಬಿಯ ಭಾಗವಾಗಿದ್ದಾರೆ

Continue Reading

Trending