ದೇಶ
ಈ ರಾಜ್ಯದಲ್ಲಿ ಮೊದಲ ವರ್ಷದ MBBSಗಿದೆ 13.73 ಲಕ್ಷ ಶುಲ್ಕ: ಅಗ್ಗದ ಕಾಲೇಜಿನಲ್ಲಿ ಜಸ್ಟ್ 10.77 ಲಕ್ಷ ರೂ.FEES – MINIMUM FEES FOR MBBS

- /home/u521927855/domains/hosasuddi.in/public_html/wp-content/plugins/mvp-social-buttons/mvp-social-buttons.php on line 27
https://hosasuddi.in/wp-content/uploads/2024/07/1200-675-21953400-276-21953400-1721015961801-1000x600.jpg&description=ಈ ರಾಜ್ಯದಲ್ಲಿ ಮೊದಲ ವರ್ಷದ MBBSಗಿದೆ 13.73 ಲಕ್ಷ ಶುಲ್ಕ: ಅಗ್ಗದ ಕಾಲೇಜಿನಲ್ಲಿ ಜಸ್ಟ್ 10.77 ಲಕ್ಷ ರೂ.FEES – MINIMUM FEES FOR MBBS', 'pinterestShare', 'width=750,height=350'); return false;" title="Pin This Post">
- Share
- Tweet /home/u521927855/domains/hosasuddi.in/public_html/wp-content/plugins/mvp-social-buttons/mvp-social-buttons.php on line 72
https://hosasuddi.in/wp-content/uploads/2024/07/1200-675-21953400-276-21953400-1721015961801-1000x600.jpg&description=ಈ ರಾಜ್ಯದಲ್ಲಿ ಮೊದಲ ವರ್ಷದ MBBSಗಿದೆ 13.73 ಲಕ್ಷ ಶುಲ್ಕ: ಅಗ್ಗದ ಕಾಲೇಜಿನಲ್ಲಿ ಜಸ್ಟ್ 10.77 ಲಕ್ಷ ರೂ.FEES – MINIMUM FEES FOR MBBS', 'pinterestShare', 'width=750,height=350'); return false;" title="Pin This Post">
ಲಖನೌ: ಉತ್ತರಪ್ರದೇಶದ ಖಾಸಗಿ ಕಾಲೇಜುಗಳು 2024-25ರ ಶೈಕ್ಷಣಿಕ ಅವಧಿಗೆ ಎಂಬಿಬಿಎಸ್ ಶುಲ್ಕವನ್ನು ಪ್ರಕಟಿಸಿವೆ. ಈ ಮಾಹಿತಿಯನ್ನು ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ (DGME) ವೆಬ್ಸೈಟ್ನಲ್ಲಿ ಲಭ್ಯವಿದೆ. ಉತ್ತರಪ್ರದೇಶದ ಎಲ್ಲ ಖಾಸಗಿ ಕಾಲೇಜುಗಳ ಶುಲ್ಕದ ಸಂಪೂರ್ಣ ವಿವರಗಳನ್ನು ಪಡೆಯಬಹುದಾಗಿದೆ. ಇನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎಷ್ಟು ಶುಲ್ಕ ವಿಧಿಸುತ್ತವೆ ಎಂಬ ಬಗ್ಗೆ ಡಿಜಿಎಂಜಿ (DGME) ವೆಬ್ಸೈಟ್ನಲ್ಲಿ ಮಾಹಿತಿ ನೀಡಲಾಗಿದೆ.
ಉತ್ತರಪ್ರದೇಶದ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಎಂಬಿಬಿಎಸ್ ಮೊದಲ ವರ್ಷದ ಶುಲ್ಕ ಎಷ್ಟಿದೆ ಎಂಬುದನ್ನು ಪ್ರಕಟಿಸಲಾಗಿದೆ. ಬರೇಲಿ ಮೂಲದ ಶ್ರೀ ರಾಮ್ ಮೂರ್ತಿ ಸ್ಮಾರಕ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್, ಮೊದಲ ವರ್ಷಕ್ಕೆ ಸುಮಾರು 13,73,760 ರೂ. ಶುಲ್ಕ ನಿಗದಿ ಮಾಡಿದೆ. ಅದೇ ಸಮಯದಲ್ಲಿ ಸೀತಾಪುರದ ಹಿಂದ್ ಇನ್ಸ್ಟಿಟ್ಯೂಟ್ ಮೆಡಿಕಲ್ ಸೈನ್ಸಸ್ನಲ್ಲಿ ಕಡಿಮೆ ಶುಲ್ಕ ಅಂದರೆ 10,77,229 ರೂ. ನಿಗದಿ ಮಾಡಿದೆ. ಮತ್ತೊಂದೆಡೆ, ಗಾಜಿಯಾಬಾದ್ನ ಐಟಿಎಸ್ ಡೆಂಟಲ್ ಕಾಲೇಜು ಬಿಡಿಎಸ್ಗೆ 3,84,000 ರೂ. ಶುಲ್ಕವನ್ನು ನಿಗದಿ ಮಾಡಿದೆ. ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ಗಳ ಶುಲ್ಕದ ವಿವರಗಳು ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ (ಡಿಜಿಎಂಇ) ವೆಬ್ಸೈಟ್ನಲ್ಲಿ ಲಭ್ಯವಿದೆ.
ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಾರ್ಥ ಸಾರಥಿ ಸೇನ್ ಶರ್ಮಾ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಖಾಸಗಿ ಕಾಲೇಜುಗಳಲ್ಲಿ ಶುಲ್ಕ ನಿರ್ಧರಿಸಲು ಸಮಿತಿ ರಚಿಸಲಾಗಿದೆ. ಯಾವುದೇ ಖಾಸಗಿ ಕಾಲೇಜಿನಲ್ಲಿ ಕೋರ್ಸ್ನ ಶುಲ್ಕವನ್ನು ಸಮಿತಿಯ ಶಿಫಾರಸಿನ ಮೇರೆಗೆ ಮಾತ್ರ ನಿರ್ಧರಿಸಲಾಗುತ್ತದೆ. ಇದರ ನಂತರ, ಶುಲ್ಕ ಪಟ್ಟಿಯನ್ನು ಇಲಾಖೆಯ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾಗುತ್ತದೆ. ಇದರಿಂದ ಅಭ್ಯರ್ಥಿಗಳು ಪ್ರವೇಶ ಪಡೆಯುವ ಮೊದಲು ಕೌನ್ಸೆಲಿಂಗ್ ಸಮಯದಲ್ಲಿ ಪ್ರತಿ ಕಾಲೇಜಿನ ಶುಲ್ಕದ ಬಗ್ಗೆ ತಿಳಿದುಕೊಳ್ಳುತ್ತಾರೆ. ಪ್ರಸಕ್ತ ಅಧಿವೇಶನದಲ್ಲಿ ಜುಲೈ 10ರಿಂದ ನೀಟ್ ಎಂಡಿಎಸ್ ಕೌನ್ಸೆಲಿಂಗ್ ಆರಂಭವಾಗಿದ್ದು, ಪ್ರತಿ ವರ್ಷದಂತೆ ಕಾಲೇಜುಗಳಿಂದ ಶುಲ್ಕದ ವಿವರ ಕೇಳಲಾಗಿದ್ದು, ಕಾಲೇಜುಗಳು ನೀಡಿರುವ ನಿಗದಿತ ಶುಲ್ಕದ ಪಟ್ಟಿಯನ್ನು ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ವೆಬ್ಸೈಟ್ನಲ್ಲಿ ಲಭ್ಯ ಇರುವ ಶುಲ್ಕದ ವಿವರಗಳು: ಇಲಾಖೆಯ ವೆಬ್ಸೈಟ್ನಲ್ಲಿ 26 ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಎಂಬಿಬಿಎಸ್ಗೆ ಕಟ್ಟಬೇಕಾದ ಶುಲ್ಕದ ವಿವರಗಳಿದ್ದು, 19 ಖಾಸಗಿ ದಂತ ವೈದ್ಯಕೀಯ ಕಾಲೇಜುಗಳು ಬಿಡಿಎಸ್ಗೆ ಶುಲ್ಕದ ಮಾಹಿತಿಯನ್ನು ನೀಡಿವೆ ಎಂದು ಜನರಲ್ ವೈದ್ಯಕೀಯ ಶಿಕ್ಷಣ ನಿರ್ದೇಶಕ ಕಿಂಜಲ್ ಸಿಂಗ್ ತಿಳಿಸಿದ್ದಾರೆ. ಇದಲ್ಲದೇ 22 ವೈದ್ಯಕೀಯ ಕಾಲೇಜುಗಳು ಎಂಡಿ ಮತ್ತು ಎಂಎಸ್ ಕೋರ್ಸ್ಗಳ ಶುಲ್ಕದ ಮಾಹಿತಿಯನ್ನು ಕಳುಹಿಸಿವೆ. 17 ದಂತ ವೈದ್ಯಕೀಯ ಕಾಲೇಜುಗಳು ಎಂಡಿಎಸ್ಗೆ ಶುಲ್ಕವನ್ನು ರವಾನೆ ಮಾಡಿವೆ. ಪಿಜಿ ಕೋರ್ಸ್ಗಳಲ್ಲಿ ಕ್ಲಿನಿಕ್, ಪೆಥಾಲಜಿ ಮತ್ತು ನಾನ್ ಕ್ಲಿನಿಕಲ್ ವಿಭಾಗಗಳಿಗೆ ನಿಗದಿಪಡಿಸಿದ ಶುಲ್ಕದ ಪ್ರತ್ಯೇಕ ವಿವರಗಳು ಕೂಡಾ ಲಭ್ಯವಿವೆ.
ಸರ್ಕಾರಿ ಕಾಲೇಜುಗಳಲ್ಲಿ ಎಷ್ಟು ಶುಲ್ಕ ನಿಗದಿ ಮಾಡಲಾಗಿದೆ?: ಸರ್ಕಾರಿ ಕಾಲೇಜುಗಳಲ್ಲಿ ಮೊದಲ ವರ್ಷದ ಶುಲ್ಕ ವರ್ಷಕ್ಕೆ 18,000 ರೂ.ನಿಂದ 54,000 ರೂ. ನಿಗದಿ ಮಾಡಲಾಗಿದೆ. ಸರ್ಕಾರದಿಂದ ಕಾಲಕಾಲಕ್ಕೆ ಇದರಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತದೆ. ಉತ್ತರಪ್ರದೇಶದಲ್ಲಿ ಅತ್ಯಂತ ದುಬಾರಿ ಶುಲ್ಕವೆಂದರೆ ಲಖನೌದ ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯ. ಇದು ವರ್ಷಕ್ಕೆ ಅಂದಾಜು 54,600 ರೂ. ನಿಗದಿ ಮಾಡಿದೆ. ಆದರೆ ಅಗ್ಗದ ಕಾಲೇಜು ಎಂದರೆ ಗ್ರೇಟರ್ ನೋಯ್ಡಾದ ಸರ್ಕಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಾಗಿದೆ. ಇಲ್ಲಿ ವಾರ್ಷಿಕ ಶುಲ್ಕ 18,000 ರೂ. ನಿಗದಿಪಡಿಸಲಾಗಿದೆ.
ಉತ್ತರಪ್ರದೇಶದಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜುಗಳು
- ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯ, ಲಖನೌ
- ಗಣೇಶ್ ಶಂಕರ್ ವಿದ್ಯಾರ್ಥಿ ಸ್ಮಾರಕ ವೈದ್ಯಕೀಯ ಕಾಲೇಜು, ಕಾನ್ಪುರ
- ಸರೋಜಿನಿ ನಾಯ್ಡು ವೈದ್ಯಕೀಯ ಕಾಲೇಜು, ಆಗ್ರಾ
- ಮೋತಿ ಲಾಲ್ ನೆಹರು ವೈದ್ಯಕೀಯ ಕಾಲೇಜು, ಪ್ರಯಾಗರಾಜ್
- ಲಾಲಾ ಲಜಪತ್ ರಾಯ್ ಸ್ಮಾರಕ ವೈದ್ಯಕೀಯ ಕಾಲೇಜು, ಮೀರತ್
- ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜು, ಝಾನ್ಸಿ
- ಬಾಬಾ ರಾಗಬವದಾಸ್ ವೈದ್ಯಕೀಯ ಕಾಲೇಜು, ಗೋರಖ್ಪುರ
- ಉತ್ತರ ಪ್ರದೇಶ ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯ, ಸೈಫೈ, ಇಟಾವಾ
- ಸರ್ಕಾರಿ ವೈದ್ಯಕೀಯ ಕಾಲೇಜು, ಅಜಂಗಢ
- ಸರ್ಕಾರಿ ವೈದ್ಯಕೀಯ ಕಾಲೇಜು, ಬಂಡಾ
ಇದಲ್ಲದೇ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಗೋಮ್ತಿ ನಗರ, ಲಖನೌ, ಸರ್ಕಾರಿ ವೈದ್ಯಕೀಯ ಕಾಲೇಜು, ಬದೌನ್, ಸರ್ಕಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆ, ಗ್ರೇಟರ್ ನೋಯ್ಡಾ ಸೇರಿದಂತೆ ಹಲವು ವೈದ್ಯಕೀಯ ಕಾಲೇಜುಗಳು ಸೇರಿವೆ.
ದೇಶ
ಅಮೆರಿಕ-ರಷ್ಯಾ ವ್ಯವಹಾರ: ಭಾರತದ ಟೀಕೆಗೆ ಟ್ರಂಪ್ ನುಣುಚು ಪ್ರತಿಕ್ರಿಯೆ
ವಾಷಿಂಗ್ಟನ್: ರಷ್ಯಾದಿಂದ ಈಗಲೂ ವ್ಯವಹಾರ ನಡೆಸುತ್ತಿರುವ ಅಮೆರಿಕದ ಕುರಿತಾಗಿ ಭಾರತ ಮಾಡಿರುವ ಗಂಭೀರ ಆರೋಪಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನುಣುಚು ಪ್ರತಿಕ್ರಿಯೆ ನೀಡಿದ್ದಾರೆ.
ಭಾರತ ಆರೋಪಿಸಿದಂತೆ, ಅಮೆರಿಕ 2024ರಲ್ಲಿ 1.1 ಶತಕೋಟಿ ಡಾಲರ್ ಮೌಲ್ಯದ ರಸಗೊಬ್ಬರ, 878 ಮಿಲಿಯನ್ ಡಾಲರ್ ಮೌಲ್ಯದ ಪಲ್ಲಾಡಿಯಮ್ ಸೇರಿದಂತೆ ಹಲವು ಅಮೂಲ್ಯ ಲೋಹಗಳನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಯುರೇನಿಯಂ ಹೆಕ್ಸಾಫ್ಲೋರೈಡ್ನಂತಹ ಪರಮಾಣು ಉತ್ಪನ್ನಗಳ ಆಮದು ಕೂಡ ಮುಂದುವರಿದಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಟ್ರಂಪ್, “ನನಗೆ ಈ ವ್ಯಾಪಾರದ ವಿವರಗಳು ತಿಳಿದಿಲ್ಲ, ನಾನು ಪರಿಶೀಲನೆ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.
ಭಾರತದ ಖಡಕ್ ಪ್ರತಿಕ್ರಿಯೆ:
ಭಾರತ, ತನ್ನ ರಷ್ಯಾ ತೈಲ ಆಮದು ಬಗ್ಗೆ ಅಮೆರಿಕದ ಟೀಕೆಗೆ ಅಂಕಿ-ಅಂಶಗಳೊಂದಿಗೆ ತಿರುಗೇಟು ನೀಡಿದೆ. ಯುರೋಪ್ ದೇಶಗಳೇ ರಷ್ಯಾದಿಂದ ಭಾರಿ ಪ್ರಮಾಣದಲ್ಲಿ ಎಲ್ಎನ್ಜಿ, ರಸಗೊಬ್ಬರ, ಲೋಹಗಳನ್ನು ಆಮದು ಮಾಡಿಕೊಳ್ಳುತ್ತಿವೆ. 2024ರಲ್ಲಿ ಯುರೋಪಿಯನ್ ಒಕ್ಕೂಟವು 67.5 ಬಿಲಿಯನ್ ಯುರೋಗಳಷ್ಟು ಸರಕು ವ್ಯಾಪಾರ ಹಾಗೂ 17.2 ಬಿಲಿಯನ್ ಯುರೋಗಳಷ್ಟು ಸೇವಾ ವ್ಯಾಪಾರವನ್ನು ರಷ್ಯಾ ಜೊತೆ ನಡೆಸಿದೆ.
ಟ್ರಂಪ್ ಅವರ ಆರೋಪ:
ಟ್ರಂಪ್ ಹೇಳುವಂತೆ, ಭಾರತ ರಷ್ಯಾದ ತೈಲವನ್ನು ಖರೀದಿ ಮಾಡುತ್ತಿದ್ದು, ಅದನ್ನು ಮುಕ್ತ ಮಾರುಕಟ್ಟೆಯಲ್ಲಿ ಲಾಭಕ್ಕಾಗಿ ಮಾರಾಟ ಮಾಡುತ್ತಿದೆ. ಅವರು ಈ ಕಾರಣಕ್ಕಾಗಿ ಭಾರತದಿಂದ ಸಂಗ್ರಹಿಸಬೇಕಾದ ಸುಂಕವನ್ನು ಹೆಚ್ಚಿಸುವುದಾಗಿ ಹೇಳಿದ್ದಾರೆ.
ಭಾರತದ ನಿಲುವು:
ಭಾರತ, ತನ್ನ ರಾಷ್ಟ್ರೀಯ ಹಿತಾಸಕ್ತಿಗಳನ್ನು ಕಾಪಾಡುವ ಸಲುವಾಗಿ ಕಚ್ಚಾ ತೈಲವನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಇಂಧನದ ದರಗಳನ್ನು ಜನತೆಗೆ ಕೈಗೆಟುಕುವಂತೆ ಇರಿಸಲು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಕ್ರೀಡೆ
ರಿಷಭ್ ಪಂತ್ ಮಾನವೀಯತೆ: ಬಡ ವಿದ್ಯಾರ್ಥಿನಿಗೆ BCA ಪ್ರವೇಶಕ್ಕೆ ₹40,000 ನೆರವು!
ಬಾಗಲಕೋಟೆ: ಟೀಂ ಇಂಡಿಯಾದ ವಿಕೆಟ್ ಕೀಪರ್ ಹಾಗೂ ತೀಕ್ಷ್ಣ ಬ್ಯಾಟ್ಸ್ಮನ್ ರಿಷಭ್ ಪಂತ್ ಅವರು ಕ್ರೀಡಾಕ್ಷೇತ್ರದಷ್ಟೇ ದಾನಶೀಲತೆಯಲ್ಲೂ ಮಾದರಿಯಾಗಿದ್ದಾರೆ. ಇತ್ತೀಚೆಗೆ ಅವರು ಬಾಗಲಕೋಟೆ ಜಿಲ್ಲೆಯ ಬಡ ವಿದ್ಯಾರ್ಥಿನಿಯೊಬ್ಬಳಿಗೆ ಆರ್ಥಿಕ ನೆರವು ನೀಡಿ ಜನಮನ ಗೆದ್ದಿದ್ದಾರೆ.
ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರಮಠ ದ್ವಿತೀಯ ಪಿಯುಸಿಯಲ್ಲಿ 85% ಅಂಕ ಗಳಿಸಿದ್ದರೂ, ಮನೆ ಪರಿಸ್ಥಿತಿಯಿಂದ BCA ಕೋರ್ಸ್ಗೆ ಸೇರುವ ಕನಸು ತೊಡೆತಗೊಂಡಿತ್ತು. ತಂದೆ ಚಿಕ್ಕ ಟೀ ಅಂಗಡಿ ನಡೆಸುವವರಾಗಿದ್ದು ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ.
ಇದನ್ನು ಗುತ್ತಿಗೆದಾರ ಅನಿಲ್ ಹುಣಸಿಕಟ್ಟಿ ಅವರು ಗಮನಿಸಿ, ತಮ್ಮ ಸಂಪರ್ಕಗಳಿಂದ ರಿಷಭ್ ಪಂತ್ ಅವರ ಗಮನಕ್ಕೆ ತಂದರು. ಇದನ್ನು ಕೇಳಿದ ಪಂತ್, ಜುಲೈ 17ರಂದು ₹40,000 ನೇರವಾಗಿ BLDE ಕಾಲೇಜಿನ ಖಾತೆಗೆ ವರ್ಗಾಯಿಸಿ, ಜ್ಯೋತಿಯ ಮೊದಲ ಸೆಮಿಸ್ಟರ್ ಶುಲ್ಕವನ್ನು ಭರಿಸಿದರು.
ಜ್ಯೋತಿ ಎಮೋಶನಲ್ ಆಗಿ, “ರಿಷಭ್ ಪಂತ್ ಸಹಾಯದಿಂದ ನನ್ನ ಕನಸು ಸಾಧ್ಯವಾಯಿತು. ಅವರಿಗೆ ದೇವರು ಆಯುಷ್ಯ ಕೊಡಲಿ,” ಎಂದಿದ್ದಾರೆ.
ದೇಶ
ಪಿಎಂ ಮೋದಿ ಆಗಸ್ಟ್ 10ರಂದು ಬೆಂಗಳೂರಿಗೆ: ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ
ಬೆಂಗಳೂರು: ನಮ್ಮ ಮೆಟ್ರೋ (Namma Metro) ಹಳದಿ ಮಾರ್ಗದ (Yellow Line) ಉದ್ಘಾಟನೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು (PM Modi) ಆಗಸ್ಟ್ 10ರಂದು ಬೆಂಗಳೂರಿಗೆ ಬರುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಧಾನಿಯವರು ಆಗಸ್ಟ್ 10ರಂದು ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟನೆ ಮಾಡುವ ಉದ್ದೇಶದಿಂದ ಬರುತ್ತಿದ್ದಾರೆ. ಅವರ ಭೇಟಿಗೆ ಸಿದ್ಧತೆಗಳು ನಡೆಯುತ್ತಿವೆ. ಟೈಮ್ ಟು ಟೈಮ್ ಕಾರ್ಯಕ್ರಮಗಳ ಬಗ್ಗೆ ಇನ್ನೂ ವಿವರ ಬಾಕಿಯಿದೆ,” ಎಂದು ಹೇಳಿದರು.
ವೈಭವದಿಂದ ಕಾರ್ಯಕ್ರಮ?
ಆದರೆ, ಮೂಲ ಯೋಜನೆಗೆ ಬದಲಾವಣೆ ಆಗಿದೆ. ಈಗ ಪ್ರಧಾನಿಯವರು ಕೇವಲ ಹಳದಿ ಮಾರ್ಗದ ಮೆಟ್ರೋ ಮತ್ತು ವಂದೇ ಭಾರತ್ ರೈಲು ಉದ್ಘಾಟನೆಗೆ ಮಾತ್ರ ಭಾಗಿಯಾಗಲಿದ್ದಾರೆ. ಬಿಜೆಪಿ ಕಾರ್ಯಕರ್ತರ ಸಮಾವೇಶ ಮತ್ತು ರೋಡ್ ಶೋ ಕಾರ್ಯಾಚರಣೆಗಳು ರದ್ದುಪಡಿಸಲಾಗಿದೆ.
ಇದರ ಪರಿಣಾಮವಾಗಿ, ಒಂದು ವರ್ಷದಿಂದ ಮೋದಿಯವರ ಆಗಮನದ ನಿರೀಕ್ಷೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರು ನಿರಾಸೆಗೊಳಗಾಗಿದ್ದಾರೆ ಎಂದು ವರದಿಯಾಗಿದೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ