Connect with us

ಕ್ರೀಡೆ

Latest News ಪ್ಯಾರಿಸ್ ಒಲಿಂಪಿಕ್ಸ್: ಭಾರತದ 117 ಕ್ರೀಡಾಪಟುಗಳು, 140 ಸಿಬ್ಬಂದಿಯ ಪಟ್ಟಿ ಬಿಡುಗಡೆ – Paris Olympics

ನವದೆಹಲಿ: ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತವನ್ನು 117 ಕ್ರೀಡಾಪಟುಗಳು ಪ್ರತಿನಿಧಿಸಲಿದ್ದಾರೆ. ಕೇಂದ್ರ ಕ್ರೀಡಾ ಸಚಿವಾಲಯ ಕ್ರೀಡಾಪಟುಗಳು ಜೊತೆಗೆ 140 ಸಹಾಯಕ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಒಳಗೊಂಡಿರುವ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ. ಸ್ಪರ್ಧಾಳುಗಳ ಅವಶ್ಯಕತೆಗಳನ್ನು ಪೂರೈಸಲು ಹೆಚ್ಚುವರಿಯಾಗಿ 72 ಜನರ ಪ್ರಯಾಣಕ್ಕೆ ಸರ್ಕಾರದ ವೆಚ್ಚದಲ್ಲಿ ಅನುಮೋದನೆ ನೀಡಲಾಗಿದೆ.

”2024ರ ಒಲಿಂಪಿಕ್ ಕ್ರೀಡಾಕೂಟಕ್ಕಾಗಿ ಪ್ಯಾರಿಸ್ ಸಂಘಟನಾ ಸಮಿತಿಯ ಮಾನದಂಡಗಳ ಪ್ರಕಾರ ಕ್ರೀಡಾ ಗ್ರಾಮದಲ್ಲಿ ಉಳಿಯಲು ಅನುಮತಿಸುವ ಸಿಬ್ಬಂದಿ ಮಿತಿ 67. ಇದರಲ್ಲಿ ವೈದ್ಯಕೀಯ ತಂಡದ ಐವರು ಸದಸ್ಯರು ಒಳಗೊಂಡಂತೆ ಭಾರತೀಯ ಒಲಿಂಪಿಕ್ಸ್ ಸಂಸ್ಥೆಯ 11 ಅಧಿಕಾರಿಗಳು ಸೇರಿದ್ದಾರೆ” ಎಂದು ಭಾರತೀಯ ಒಲಿಂಪಿಕ್ಸ್ ಸಂಸ್ಥೆಯ ಅಧ್ಯಕ್ಷೆ ಪಿ.ಟಿ.ಉಷಾ ಅವರಿಗೆ ಸಚಿವಾಲಯ ಬರೆದ ಪತ್ರದಲ್ಲಿ ತಿಳಿಸಲಾಗಿದೆ.

”ಕ್ರೀಡಾಪಟುಗಳ ಅಗತ್ಯತೆಗಳನ್ನು ಪೂರೈಸಲು, ಹೆಚ್ಚುವರಿ ತರಬೇತುದಾರರು ಮತ್ತು ಇತರ ಸಹಾಯಕ ಸಿಬ್ಬಂದಿ ಸೇರಿ 72 ಜನರಿಗೆ ಸರ್ಕಾರಕ್ಕೆ ವೆಚ್ಚದಲ್ಲಿ ಅನುಮೋದಿಸಲಾಗಿದೆ. ವಾಸ್ತವ್ಯಕ್ಕಾಗಿ ಕ್ರೀಡಾ ಗ್ರಾಮದ ಹೊರಗಿನ ಹೋಟೆಲ್‌ಗಳಲ್ಲಿ ವ್ಯವಸ್ಥೆ ಮಾಡಲಾಗಿದೆ” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಕ್ರೀಡಾಪಟುಗಳ ವಿವರ: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ತೆರಳುತ್ತಿರುವವರಲ್ಲಿ ಅಥ್ಲೀಟ್​​ಗಳ ಸಂಖ್ಯೆಯೇ ಹೆಚ್ಚು. 11 ಮಹಿಳೆಯರು ಮತ್ತು 18 ಪುರುಷರು ಸೇರಿ 29 ಅಥ್ಲೀಟ್​​ಗಳಿದ್ದಾರೆ. ನಂತರದ ಶೂಟಿಂಗ್ (21) ಮತ್ತು ಹಾಕಿ (19), ಟೇಬಲ್ ಟೆನಿಸ್​ನಲ್ಲಿ 8 ಆಟಗಾರರು ಪ್ರತಿನಿಧಿಸುತ್ತಾರೆ. ಬ್ಯಾಡ್ಮಿಂಟನ್​ನಲ್ಲಿ ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ ಪಿ.ವಿ.ಸಿಂಧು ಸೇರಿದಂತೆ ಏಳು ಸ್ಪರ್ಧಿಗಳಿದ್ದಾರೆ. ಕುಸ್ತಿ, ಬಿಲ್ಲುಗಾರಿಕೆ ಮತ್ತು ಬಾಕ್ಸಿಂಗ್ ತಲಾ ಆರು ಮಂದಿ ಪ್ರತಿನಿಧಿಸಲಿದ್ದಾರೆ. ನಂತರದಲ್ಲಿ ಗಾಲ್ಫ್ (4), ಟೆನಿಸ್ (3), ಈಜು (2), ನೌಕಾಯಾನ (2) ಮತ್ತು ರೋಯಿಂಗ್ ಮತ್ತು ವೇಟ್ ಲಿಫ್ಟಿಂಗ್, ಕುದುರೆ ಸವಾರಿ, ಜೂಡೋನಲ್ಲಿ ತಲಾ ಒಬ್ಬರು ಪ್ರತಿನಿಧಿಸಲಿದ್ದಾರೆ.

ಅಭಾ ಖತುವಾ ಹೆಸರು ಕಾಣೆ: ಒಲಿಂಪಿಕ್ಸ್‌ ಭಾರತೀಯ ಕ್ರೀಡಾಪಟುಗಳ ಪಟ್ಟಿಯಲ್ಲಿ ಅಭಾ ಖತುವಾ ಹೆಸರು ಕಾಣೆಯಾಗಿದೆ. ಶಾಟ್​ ಪುಟ್​ನಲ್ಲಿ ಏಕೈಕ ಅರ್ಹ ಅಥ್ಲೀಟ್ ಆಗಿದ್ದರು. ವಿಶ್ವ ಶ್ರೇಯಾಂಕದ ಕೋಟಾದ ಮೂಲಕ ಅವರು ಅರ್ಹತೆ ಪಡೆದಿದ್ದರು. ಕೆಲವು ದಿನಗಳ ಹಿಂದೆ ವಿಶ್ವ ಅಥ್ಲೆಟಿಕ್ಸ್‌ನ ಒಲಿಂಪಿಕ್ ಭಾಗವಹಿಸುವವರ ಪಟ್ಟಿಯಿಂದ ಅವರ ಹೆಸರು ಕಾಣೆಯಾಗಿತ್ತು. ಈಗಲೂ ಯಾವುದೇ ವಿವರಣೆಯಿಲ್ಲದೆ ಅವರನ್ನು ಕೈಬಿಡಲಾಗಿದೆ.

ಟೋಕಿಯೊ ಒಲಿಂಪಿಕ್ಸ್‌ನಲ್ಲಿ 119 ಕ್ರೀಡಾಪಟು ತಂಡ ಭಾರತವನ್ನು ಪ್ರತಿನಿಧಿಸಿತ್ತು. ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಐತಿಹಾಸಿಕ ಚಿನ್ನ ಗೆದ್ದಿದ್ದರು. ಒಟ್ಟಾರೆ ಏಳು ಪದಕಗಳ ಅತ್ಯುತ್ತಮ ಸಾಧನೆಯೊಂದಿಗೆ ಸ್ಪರ್ಧಾಳುಗಳು ತವರಿಗೆ ಮರಳಿದ್ದರು.

ಕ್ರೀಡೆ

ಕುಮಾರಸ್ವಾಮಿ ಸಿಡಿಸಿದ ಬಾಂಬ್‌ಗೆ ಗೋವಿಂದರಾಜ್ ತಲೆದಂಡ!

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಬೆಳಗ್ಗೆ ಸುದ್ದಿಗೋಷ್ಠಿಯಲ್ಲಿ ಸಿಡಿಸಿದ ಬಾಂಬ್‌ಗೆ ಗೋವಿಂದರಾಜ್ (Govindraj) ತಲೆದಂಡವಾಗಿದೆ. ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೆ (Chinnaswamy Stadium Stampede Case) ಸಂಬಂಧಿಸಿದಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್ ಅವರನ್ನು ಬಿಡುಗಡೆ ಮಾಡಲಾಗಿದೆ.

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ತಕ್ಷಣದಿಂದ ಬಿಡುಗಡೆ ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಆದೇಶ ಹೊರಡಿಸಿದ್ದಾರೆ.

ಗೋವಿಂದರಾಜ್ ಅವರು ಜೂನ್‌ 1, 2023 ರಿಂದ ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿತ್ತು. ಆರ್‌ಸಿಬಿ ಆಟಗಾರರಿಗೆ ವಿಧಾನಸೌಧದಲ್ಲಿ ಸನ್ಮಾನ ಮಾಡುವಂತೆ ಸಿದ್ದರಾಮಯ್ಯನವರಿಗೆ ಒತ್ತಡ ಹೇರಿದ್ದೇ ಗೋವಿಂದರಾಜ್‌ ಎಂಬ ಆರೋಪ ಈಗ ಕೇಳಿ ಬಂದಿದೆ.

ಕುಮಾರಸ್ವಾಮಿ ಹೇಳಿದ್ದೇನು?
ಜೂನ್‌ 4ರ ಬೆಳಗ್ಗೆ ಸಿಎಂ (CM Siddaramaiah) ಅವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್‌ ಅವರು ಪೊಲೀಸ್‌ ಆಯುಕ್ತರಿಗೆ ಕರೆ ಮಾಡಿ ವಿಧಾನಸೌಧದ ಕಾರ್ಯಕ್ರಮಕ್ಕೆ ಭದ್ರತೆ ನೀಡಬೇಕು ಎಂದು ಒತ್ತಡ ಹಾಕುತ್ತಾರೆ. ಇದಕ್ಕೆ ಆಯುಕ್ತರು, ಬೆಳಗ್ಗೆಯವರೆಗೆ ಪೊಲೀಸರು ನಿದ್ದೆಗೆಟ್ಟು ಕೆಲಸ ಮಾಡಿದ್ದಾರೆ. ಎರಡು ಮೂರು ಕಡೆ ಕಾರ್ಯಕ್ರಮ ಮಾಡಿದರೆ ಭದ್ರತೆ ನೀಡಲು ಕಷ್ಟವಾಗುತ್ತದೆ. ಒಂದು ಕಡೆ ಕಾರ್ಯಕ್ರಮ ಮಾಡಿದರೆ ಬಂದೋಬಸ್ತ್‌ ಕಲ್ಪಿಸಲು ಸಾಧ್ಯವಾಗುತ್ತದೆ. ವಿಧಾನಸೌಧದ ಕಾರ್ಯಕ್ರಮಕ್ಕೆ ಭದ್ರತೆ ನೀಡಲು ಸಾಧ್ಯವಿಲ್ಲ ಎಂದು ಹೇಳುತ್ತಾರೆ.

ಆಯುಕ್ತರ ಪ್ರತಿಕ್ರಿಯೆ ಬಳಿಕ ಗೋವಿಂದರಾಜ್‌ ಅವರು ಸಿಎಂ ಬಳಿಗೆ ಹೋಗುತ್ತಾರೆ. ಸಿಎಂ ಅವರು ಆಯುಕ್ತರನ್ನು ಕರೆಸಿ, ನಾನು ಈ ರಾಜ್ಯದ ಸಿಎಂ. ಆದೇಶ ಮಾಡುತ್ತಿದ್ದೇನೆ ವಿಧಾನಸೌಧದ ಕಾರ್ಯಕ್ರಮಕ್ಕೆ ಭದ್ರತೆ ಕೊಡಿ ಎಂದು ಸೂಚಿಸುತ್ತಾರೆ. ಅನಿವಾರ್ಯವಾಗಿ ಪೊಲೀಸ್ ಕಮಿಷನರ್ ವಿಧಾನಸೌಧಕ್ಕೆ ಬಿಗಿ ಭದ್ರತೆ ಹಾಕುತ್ತಾರೆ. ಆದರೆ ಯಾರಿಗೂ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸೂಚನೆ ಕೊಟ್ಟಿರುವುದಿಲ್ಲ. ಕಾಟಾಚಾರಕ್ಕೆ ಮೂರ್ನಾಲ್ಕು ತುಕಡಿ ಭದ್ರತೆ ಹಾಕಿರುತ್ತಾರೆ. ವಿಧಾನಸೌಧದಲ್ಲೇ ಕಾರ್ಯಕ್ರಮ ಮಾಡಬೇಕು, ನಾನು ಚಿನ್ನಸ್ವಾಮಿಗೆ ಹೋಗುವುದಿಲ್ಲ ಎಂದು ಸಿಎಂ ಹೇಳಿದ್ದರಿಂದ ಹೆಚ್ಚಿನ ಸಂಖ್ಯೆ ಪೊಲೀಸರನ್ನು ನಿಯೋಜಿಸಲಾಗುತ್ತದೆ ಎಂದು ಗಂಭೀರವಾದ ಆರೋಪ ಮಾಡಿದ್ದರು.

Continue Reading

ಕ್ರೀಡೆ

2026 ರ ಫುಟ್ ಬಾಲ್ ವಿಶ್ವಕಪ್ ಗೆ ಅರ್ಹತೆ ಪಡೆದ 48 ತಂಡಗಳು, ಭಾರತದ ಕಥೆ ಏನು?

2026ರಲ್ಲಿ ನಡೆಯಲಿರುವ ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿಗೆ ಅಮೆರಿಕ, ಮೆಕ್ಸಿಕೊ ಮತ್ತು ಕೆನಡಾ ಜಂಟಿಯಾಗಿ ಆತಿಥ್ಯವಹಿಸಲಿವೆ, ಈ ಬಾರಿಯ ವಿಶ್ವಕಪ್ ನಲ್ಲಿ ಬರೋಬ್ಬರಿ 48 ತಂಡಗಳು ಭಾಗವಹಿಸಲಿವೆ,
2026 ಫುಟ್ಬಾಲ್ ವಿಶ್ವಕಪ್ ಅರ್ಹತಾ ಪಂದ್ಯಗಳು ಮುಗಿದ್ದು, ಉಜ್ಬಿಕಿಸ್ತಾನ್, ಜೋರ್ಡಾನ್, ಮತ್ತು ದಕ್ಷಿಣ ಕೊರಿಯಾ ಅರ್ಹತೆ ಪಡೆದಿದೆ, ಭಾರತ ಅರ್ಹತೆ ಪಡೆಯುವಲ್ಲಿ ವಿಫಲವಾಗಿದೆ,
43 ದೇಶದ ತಂಡಗಳು ಅರ್ಹತಾ ಪ್ರಕ್ರಿಯೆಯ ತಮ್ಮ ಸ್ಧಾನಗಳನ್ನು ಪಡೆಯುತ್ತವೆ, ಆರು ತಂಡಗಳನ್ನು ಅಂತಾರಾಷ್ಟ್ರೀಯ ಫ್ಲೇಆಫ್ ಗಳಲ್ಲಿ ಇನ್ನೆರಡು ತಮ್ಮ ಸ್ಧಾನವನ್ನು ಭದ್ರಪಡಿಸಿಕೊಳ್ಳುತ್ತವೆ, ಅಮೆರಿಕ, ಮೆಕ್ಸಿಕೋ, ಕೆನಡಾ ದೇಶಗಳು ಆತಿಥೇಯ ತಂಡವಾರುವುದರಿಂದ ನೇರವಾಗಿ ಅರ್ಹತೆ ಪಡೆದಿವೆ,
ಏಷ್ಯಾದ ಎಂಟು, ಆಫ್ರಿಕಾ ಖಂಡದಿಂದ ಒಂಬತ್ತು ತಂಡಗಳು ನೇರವಾಗಿ ಸ್ಧಾನ ಪಡೆದಿವೆ, ಉತ್ತರ ಮತ್ತು ಮಧ್ಯ ಅಮೆರಿಕ ಮತ್ತು ಕೆರಿಬಿಯನ್ ಮೂರು ದೇಶಗಳು ಸ್ಧಾನ ಪಡೆದಿವೆ,
ದಕ್ಷಿಣ ಅಮೆರಿಕಾ ಆರು ತಂಡಗಳು ನೇರವಾಗಿ ಆರ್ಹತೆ ಪಡೆದಿದ್ದರೆ, ಇನ್ನೊಂದು ತಂಡವನ್ನು ಇಂಟರ್ ಕಾಂಟಿನೆಂಟಲ್ ಫ್ಲೇಆಫ್ ಗೆ ಕಳುಹಿಸುತ್ತದೆ, ನ್ಯೂಜಿಲ್ಯಾಂಡ್ ಜೊತೆಗೆ ಯುರೋಪ್ ನ 16 ತಂಡಗಳು ವಿಶ್ವಕಪ್ ಆಡಲಿವೆ

Continue Reading

ಕ್ರೀಡೆ

ಬೆಂಗಳೂರು ಕಾಲ್ತುಳಿತ ದುರಂತ; RCB ಮಾರ್ಕೆಟಿಂಗ್ ಹೆಡ್‌ ಸೇರಿ ನಾಲ್ವರ ಬಂಧನ

ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆಯ (Bengaluru Stampede) ವೇಳೆ ಉಂಟಾದ ಕಾಲ್ತುಳಿದಲ್ಲಿ 11 ಜನರು ಮೃತಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಸಿಬಿ,ಡಿಎನ್ ಎ,ಕೆಎಸ್ ಸಿಎ ಪ್ರತಿನಿಧಿಸುವವರನ್ನ ಅರೆಸ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದರು. ಸಿಎಂ ಆದೇಶದ ಬೆನ್ನಲ್ಲೇ ಇದೀಗ ಪೊಲೀಸರು ಇದೀಗ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಆರ್ ಸಿ ಬಿ ಮಾನ್ಯೇಜ್ ಮೆಂಟ್ ನ ಇಬ್ಬರು ಆಯೋಜಕರನ್ನು ಬಂಧಿಸಿದ್ದಾರೆ.

ಆರ್ ಸಿಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ನಿಖಲ್ ಸೋಸಲೆ, DNA ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ ಲಾಕ್ ಸೇರಿದಂತೆ ಇನ್ನಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ KSCA ಕಾಯರ್ದರ್ಶಿ, ಖಜಾಂಚಿ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ನಿನ್ನೆ ರಾತ್ರಿ KSCA ಕಾಯರ್ದರ್ಶಿ ಶಂಕರ್ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. KSCA ಖಜಾಂಚಿ ಜಯರಾಮ್ ಮನೆ ಮೇಲೂ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಇಬ್ಬರೂ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

Continue Reading

Trending