ದೇಶ
ವಿಂಡೋಸ್ 10 ಬಳಕೆದಾರರಿಗೆ ಬಿಗ್ ಶಾಕ್; ಜಾಗತಿಕವಾಗಿ ಸ್ಥಗಿತಗೊಂಡು ಆತಂಕ ಸೃಷ್ಟಿಸಿದ ಸಾಫ್ಟ್ವೇರ್!

ವಿಂಡೋಸ್ 10, ಮೈಕ್ರೋಸಾಫ್ಟ್ ಅಭಿವೃದ್ಧಿ ಪಡಿಸಿರುವ ಹೊಸ ಸಾಫ್ಟ್ವೇರ್ ಈಗ ಜಾಗತಿಕವಾಗಿ ದೊಡ್ಡ ಸಮಸ್ಯೆಯಾಗಿ ಕಾಡಲು ಆರಂಭಿಸಿದೆ. ವಿಂಡೋಸ್ 10 ಬಳಕೆದಾರರು ಅದು ನೀಡುತ್ತಿರುವ ಹೊಸ ಸಮಸ್ಯೆಗೆ ಹೈರಾಣಾಗಿ ಹೋಗಿದ್ದಾರೆ. ವಿಶ್ವದ ಹಲವು ಕಡೆ ಬಿಎಸ್ಒಡಿ ಅಂದ್ರೆ ಬ್ಲೂ ಸ್ಕ್ರೀನ್ ಆಪ್ ಡೆತ್ ಅನ್ನೋ ಸಮಸ್ಯೆಯೊಂದು ಸೃಷ್ಟಿಯಾಗಿದೆ.
ವಿಂಡೋಸ್ 10 ಸಾಫ್ಟ್ವೇರ್ ಅಳವಡಿಸಿಕೊಂಡ ಜಗತ್ತಿನ ಅನೇಕ ಕಂಪ್ಯೂಟರ್ಗಳಲ್ಲಿ ಈ ಸಮಸ್ಯೆಯೊಂದು ಕಾಡುತ್ತಿದೆ. ವಿಶ್ವಾದ್ಯಂತ ಲಕ್ಷ, ಲಕ್ಷ ಜನರು ಈ ಸಮಸ್ಯೆಯಿಂದಾಗಿ ಹೈರಾಣಾಗಿದ್ದಾರೆ.. ಅಸಲಿಗೆ ಏನಿದು ಬಿಎಸ್ಓಡಿ ಅಂತ ನೋಡಿದ್ರೆ, ವಿಂಡೋಸ್ 10 ಅಳವಡಿಸಿಕೊಂಡ ಕಂಪ್ಯೂಟರ್ಗಳು ಸಾಮೂಹಿಕವಾಗಿ ಸ್ಟ್ರೈಕ್ ಆಗುತ್ತಿವೆ. ನೀಲಿ ತೆರೆಯೊಂದು ಕಂಪ್ಯೂಟರ್ ಸ್ಕ್ರೀನ್ ಮೇಲೆ ಪ್ರತ್ಯಕ್ಷವಾಗಿ ಹಲವು ಗಂಟೆಗಳ ಕಾಲ ಕಂಪ್ಯೂಟರ್ ಬಳಕೆದಾರರನ್ನು ಪೀಡಿಸುತ್ತಿದೆ. ಇದು ಕೇವಲ ಜನರಿಗೆ ಮಾತ್ರವಲ್ಲ ವಿಶ್ವಾದ್ಯಂತ ಹಲವು ಕಂಪನಿಗಳಲ್ಲೂ ಈ ಸಮಸ್ಯೆ ಶುರುವಾಗಿದೆ.
ಏರ್ಪೋರ್ಟ್ಗಳಲ್ಲಿ ಈ ಬಿಎಸ್ಓಡಿ ಯಿಂದಾಗಿ ವಿಮಾನ ಹಾರಾಟಗಳ ನಿರ್ವಹಣೆಗೆ ತೊಂದರೆಯಾಗಿ ಸರ್ಕಾರಿ ಕಚೇರಿಗಳು, ಖಾಸಗಿ ಕಂಪನಿಗಳು ಯಾವೆಲ್ಲಾ ವಿಂಡೋಸ್ 10 ಅಳವಡಿಸಿಕೊಂಡಿವೆಯೋ ಅವೆಲ್ಲವೂ ಸಾಮೂಹಿಕವಾಗಿ ಇಂತಹದೊಂದು ತೊಂದರೆಯನ್ನು ಅನುಭವಿಸುತ್ತಿವೆ. ಈ ಒಂದು ಸಮಸ್ಯೆ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟು ಹಾಕಿದ್ದು, ಸಾಫ್ಟ್ವೇರ್ನಿಂದ ತೊಂದರೆ ಅನುಭವಿಸಿದವರೆಲ್ಲಾ, ಕಂಪ್ಯೂಟರ್ ಡಿಸ್ಪ್ಲೇಗಳ ಫೋಟೋ ತೆಗೆದು ಪೋಸ್ಟ್ ಮಾಡಿ ತಮ್ಮ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ. ದೆಹಲಿ ಏರ್ಪೋರ್ಟ್ನಲ್ಲೂ ವಿಮಾನ ಸಂಚಾರ ಸ್ಥಗಿತವಾಗಿದ್ದು, ವಿಸ್ತಾರ, ಇಂಡಿಗೋ ಏರ್ಲೈನ್ಸ್ ಸಿಬ್ಬಂದಿ ಕೈಯಲ್ಲಿ ಬರೆದ ಬೋರ್ಡಿಂಗ್ ಪಾಸ್ಗಳನ್ನು ನೀಡುತ್ತಿದ್ದಾರೆ.
ವಿಂಡೋಸ್ 10 ಸರಿಯಾಗಿ ಲೋಡ್ ಆಗುತ್ತಿಲ್ಲ. ಪದೇ ಪದೇ ಕಂಪ್ಯೂಟರ್ಗಳನ್ನ ರಿಸ್ಟಾರ್ಟ್ ಹಾಗೂ ಶಟ್ ಡೌನ್ ಮಾಡಿ ಮತ್ತೆ ಆನ್ ಮಾಡುವ ಅನಿವಾರ್ಯತೆಗಳು ಸೃಷ್ಟಿಯಾಗಿವೆ. ಬ್ಯಾಕ್ ಬಗ್, ಬ್ಲ್ಯೂ ಸ್ಕ್ರೀನ್ನಂತಹ ಎರರ್ ಸಮಸ್ಯೆಗಳು ಫಾಲ್ಕಾನ್ ಸೆನ್ಸಾರ್ಗೆ ಸಂಬಂಧಿಸಿದ ಸಮಸ್ಯೆಗಳಾಗಿವೆ, ಸದ್ಯದಲ್ಲಿಯೇ ನಮ್ಮ ಎಂಜನೀಯರಿಂಗ್ ಟೀಮ್ ಎಲ್ಲ ಸಮಸ್ಯೆಗಳನ್ನು ಪರಿಹರಿಸಲಿದೆ ಎಂದು ಮೈಕ್ರೋಸಾಫ್ಟ್ ಕಂಪನಿ ಹೇಳಿದೆ.
ಈ ಹಿಂದೆಯೂ ಹೀಗೆ ಸಮಸ್ಯೆ ಸೃಷ್ಟಿಸಿತ್ತು ವಿಂಡೋಸ್ 10
ಕಳೆದ ನಾಲ್ಕೈದು ವರ್ಷಗಳ ಹಿಂದೆಯೂ ಕೂಡ ಇಂತಹದೊಂದು ಸಮಸ್ಯೆಯು ವಿಂಡೋ 10ನಲ್ಲಿ ಕಂಡು ಬಂದಿತ್ತು. ಇದಕ್ಕೆ ಅಸಲಿ ಕಾರಣ ಏನು ಅನ್ನೋದು ಇನ್ನೂ ಕೂಡ ತಿಳಿದು ಬಂದಿಲ್ಲ. ಅದನ್ನು ಪರಿಣಿತರು ಸದ್ಯದಲ್ಲಿಯೇ ಕಂಡು ಹಿಡಿದು, ಆಗಿರುವ ಸಮಸ್ಯೆಗಳನ್ನು ಆದಷ್ಟು ಬೇಗ ಬಗೆಹರಿಸಲಿದ್ದಾರೆ ಅಂತ ಎಐ ಹಾಗೂ ಟೆಕ್ ಎಕ್ಸಪರ್ಟ್ ಅಂಕುಶ್ ಸಬ್ಹರ್ವಾಲಾ ಹೇಳಿದ್ದಾರೆ.
ಭಾರತೀಯ ವಿಮಾನಯಾನ ಕಂಪನಿಗಳಿಗೂ ತೊಂದರೆ
ಆದರೂ ಕೂಡ ವಿಶ್ವದ ಅನೇಕ ಸಂಸ್ಥೆಗಳು ಅದರಲ್ಲಿಯೂ ಪ್ರಮುಖವಾಗಿ ವಿಮಾನ ಕಂಪನಿಗಳಿಗೆ ಈ ಬ್ಲ್ಯೂ ಸ್ಕ್ರೀನ್ ಆಫ್ ಡೆತ್ ಅನೇಕ ಸಂಕಷ್ಟಗಳನ್ನು ತಂದಿಟ್ಟಿದೆ. ಭಾರತದ ಪ್ರಮುಖ ಏರ್ಲೈನ್ಸ್ ಕಂಪನಿಗಳಲ್ಲೊಂದಾದ ಸ್ಪೈಸ್ ಜೆಟ್ ಸಂಸ್ಥೆಯೂ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು ವಿಂಡೋಸ್ 10 ಕ್ರೌಡ್ಸ್ಟ್ರೈಕ್ ಬಗ್ಗೆ ಹೇಳಿಕೊಂಡಿದೆ. ಸದ್ಯ ನಾವು ಅನೇಕ ತಾಂತ್ರಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ವಿಮಾನಗಳ ಹಾರಾಟದ ಬಗ್ಗೆ ತಿಳಿಸಲು ಅನೇಕ ತೊಂದರೆಗಳು ಉಂಟಾಗುತ್ತಿದೆ, ಈ ಬಗ್ಗೆ ನಮ್ಮ ಟೆಕ್ನಿಕಲ್ ಟೀಮ್ ಕಾರ್ಯಪ್ರವೃತ್ತವಾಗಿದ್ದು, ಶೀಘ್ರದಲ್ಲಿಯೇ ಸಮಸ್ಯೆಗಳನ್ನು ಬಗೆಹರಿಸಲಿದೆ ಎಂದು ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆ ತನ್ನ ಎಕ್ಸ್ ಖಾತೆಯಲ್ಲಿ ಹೇಳಿಕೊಂಡಿದೆ. ಅಕಾಸಾ ಏರ್ ಕೂಡ ಇದೇ ಮಾದರಿಯಲ್ಲಿಯೇ ತನ್ನ ಸಮಸ್ಯೆಗಳನ್ನು ಹೇಳಿಕೊಂಡಿದೆ, ತಾಂತ್ರಿಕ ಸಮಸ್ಯೆಗಳ ಕಾರಣದಿಂದಾಗಿ ಆನ್ಲೈನ್ ಸೇವೆಗಳಲ್ಲಿ ಕೊಂಚ ಸಮಸ್ಯೆಯುಂಟಾಗಿದೆ, ಹೀಗಾಗಿ ಪ್ರಯಾಣಿಕರು ದಯವಿಟ್ಟು ಸಹಕರಿಸಬೇಕು ಎಂದು ಹೇಳಿದೆ.
ಆರಂಭಿಕ ಮಾಹಿತಿಯ ಪ್ರಕಾರ, ವಿಂಡೋಸ್ 10 ಸಾಫ್ಟ್ವೇರ್ ಸದ್ಯ ಅಪ್ಡೇಟ್ ಮಾಡಲಾಗುತ್ತಿದೆ. ಹೀಗಾಗಿಯೇ ಇಂತಹದೊಂದು ತಾಂತ್ರಿಕ ಸಮಸ್ಯೆಗಳು ಸೃಷ್ಟಿಯಾಗಿವೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಸಮಸ್ಯೆಯ ಗಂಭೀರತೆಯನ್ನು ಅರಿತಿರುವ ಮೈಕ್ರೋಸಾಫ್ಟ್ ಸಂಸ್ಥೆ ಶೀಘ್ರ ಪರಿಹಾರಕ್ಕೆ ಮುಂದಾಗಿದೆ. ಆಗಿರುವ ಸಮಸ್ಯೆಯನ್ನು ಸಾಧ್ಯವಾದಷ್ಟು ಬೇಗ ಪರಿಹರಿಸುವುದಾಗಿ ಸಂಸ್ಥೆ ಭರವಸೆಯನ್ನು ಕೊಟ್ಟಿದೆ. ಅದು ಅಲ್ಲದೇ ಈ ಜಾಗತಿಕ ಸಮಸ್ಯೆಗೆ ಕಾರಣವಾಗಿದ್ದು ಒಂದು ಬಗ್ ಹೀಗಾಗಿ ಅದನ್ನು ನಿವಾರಿಸುವತ್ತ ನಮ್ಮ ತಾಂತ್ರಿಕಪಡೆ ನಿರತವಾಗಿದೆ ಎಂದೂ ಕೂಡ ಭರವಸೆಯನ್ನು ನೀಡಲಾಗಿದೆ.
ಆಮೇಲೆ ಈ ರೀತಿಯ ಸಮಸ್ಯೆಗಳು ಆಗಾಗ ಮರುಕಳಿಸುತ್ತಲೇ ಇರುತ್ತವೆ ಅದು ಮೈಕ್ರೋಸಾಫ್ಟ್ಗೆ ಸಂಬಂಧಿಸಿದ ಸಾಫ್ಟ್ವೇರ್ಗಳೇ ಇರಲಿ ಅಥವಾ ಬೇರೆಯದ್ದೇ ಸಾಫ್ಟ್ವೇರ್ಗಳಿರಲಿ, ವರ್ಷದಲ್ಲಿ ಒಂದೆರೆಡು ಬಾರಿ ಈ ರೀತಿಯ ಸಮಸ್ಯೆಗಳನ್ನು ಎದುರಿಸುವ ಅನಿವಾರ್ಯತೆ ಎಲ್ಲ ಸಾಫ್ಟ್ವೇರ್ ಕಂಪನಿಗಳಿಗೂ ಒದಗಿ ಬರುತ್ತದೆ. ಜಾಗತಿಕವಾಗಿ ಇಂತಹದೊಂದು ಸಮಸ್ಯೆಗಳು ಆಗಾಗ ಎದುರುಗಾತ್ತವೆ. ಹೀಗಾಗಿ ಅಂತಹ ಟೆಕ್ ಕಂಪನಿಗಳು ಆಗಿರುವ ಸಮಸ್ಯೆಯನ್ನು ಬಗೆಹರಿಸಲು ಕೆಲವೊಂದಿಷ್ಟು ಸಮಯಗಳನ್ನು ತೆಗೆದುಕೊಳ್ಳುತ್ತವೆ. ಕನಿಷ್ಠ ಮೂರರಿಂದ ನಾಲ್ಕು ತಾಸುಗಳ ಮಟ್ಟಿಗೆ ಈ ಬ್ಲ್ಯೂ ಸ್ಕ್ರೀನ್ ಆಫ್ ಡೆತ್ ಅನ್ನೋ ಸಮಸ್ಯೆಯನ್ನು ಎದುರಿಸುವುದು ಅನಿವಾರ್ಯ ಎಂದೇ ಹೇಳಲಾಗುತ್ತಿದೆ.
ದೇಶ
ದೆಹಲಿ ತಲುಪಿದ DCM ಡಿಕೆ.ಶಿವಕುಮಾರ್: ಹೈಕಮಾಂಡ್ ಭೇಟಿ, ಊಹಾಪೋಹ ಶುರು..!

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡುವ ಸಾಧ್ಯತೆಯಿದ್ದು, ಭಾನುವಾರ ಸಂಜೆಯೇ ದೆಹಲಿ ತಲುಪಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ರಾಜಕೀಯ ವಲಯದಲ್ಲಿ ಊಹಾಪೋಹಗಳು ಶುರುವಾಗಿವೆ.
ಡಿಕೆ.ಶಿವಕುಮಾರ್ ಅವರ ದೆಹಲಿ ಭೇಟಿ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಕೂಡ ಜೂ.13ರಂದು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿದ್ದಾರೆಂದು ತಿಳಿದುಬಂದಿದೆ.
ರಾಜ್ಯದ ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಇಬ್ಬರೂ ನಾಯಕರ ವರಿಷ್ಠರ ಭೇಟಿ ಮಾಡುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ.
ಇಂದು ಬೆಳಗ್ಗೆ 11ಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳೊದಿಗೆ ದೆಹಲಿ ಮಹಾನಗರ ಪಾಲಿಕೆ ಅಧಿಕಾರಿಗಳ ಜತೆ ಆಡಳಿತ ಹಾಗೂ ಘನ ತ್ಯಾಜ್ಯ ನಿರ್ವಹಣೆ ಕುರಿತು ಡಿ.ಕೆ.ಶಿವಕುಮಾರ್ ಸಭೆ ನಡೆಸಲಿದ್ದಾರೆ.ಬಳಿಕ ಜಲಶಕ್ತಿ ಸಚಿವರು, ಇಂಧನ ಸಚಿವರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಇದರ ನಡುವೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸೇರಿ ಇತ್ತೀಚಿನ ರಾಜ್ಯದ ಬೆಳವಣಿಗೆಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.
ಇದರ ಬೆನ್ನಲ್ಲೇ ಜೂ.12ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಜೂ.13 ರಂದು ಹಣಕಾಸು ಆಯೋಗದ ಸಭೆಯಲ್ಲಿ ಭಾಗವಹಿಸಲಿದ್ದು, ಬಳಿಕ ಎಐಸಿಸಿ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ. ಈ ವೇಳೆ ರಾಜ್ಯದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚಿಸ ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ನಡುವೆ ದೆಹಲಿ ಭೇಟಿ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ.ಶಿವಕುಮಾರ್ ಅವರು, ದೆಹಲಿ ಭೇಟಿ ಸಂಪೂರ್ಣವಾಗಿ ತಾಂತ್ರಿಕವಾಗಿದೆ ಎಂದು ಹೇಳಿದರು.
ಹೈದರಾಬಾದ್, ಚೆನ್ನೈ ಮತ್ತು ಈಗ ದೆಹಲಿಯಲ್ಲಿ ಈಗಾಗಲೇ ಜಾರಿಯಲ್ಲಿರುವ ಘನತ್ಯಾಜ್ಯ ನಿರ್ವಹಣಾ ತಂತ್ರಜ್ಞಾನಗಳನ್ನು ಪರಿಶೀಲಿಸಲು ನಿರ್ಧರಿಸಿದ್ದೆ. ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಬಳಸಲಾಗುತ್ತಿರುವ ತಂತ್ರಜ್ಞಾನವನ್ನು ವೀಕ್ಷಿಸಲು ನಾನು ಹಾಗೂ ಬೆಂಗಳೂರು ಪಾಲಿಕೆಯಿಂದ ಸುಮಾರು 15 ಸದಸ್ಯರ ತಂಡ ದೆಹಲಿಗೆ ಆಗಮಿಸಿದ್ದೇವೆ. ಇಲ್ಲಿ ನಗರದ ಹೊರಭಾಗದಲ್ಲಿ ವಾಸನೆ ರಹಿತವಾಗಿ ತ್ಯಾಜ್ಯ ವಿಲೇವಾರಿ ಕೇಂದ್ರ ಮಾಡಿದ್ದಾರೆ ಎಂದು ಕೇಳಿದ್ದೇನೆ.
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಂಬಂಧ ಟೆಂಡರ್ ಕರೆಯಲಾಗಿದ್ದು, ಕಸದಿಂದ ಇಂಧನ, ಅನಿಲ ಉತ್ಪಾದನೆ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ಈಗಾಗಲೇ ಹೈದರಾಬಾದ್ ಹಾಗೂ ಚೆನ್ನೈಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದ್ದೇನೆ. ದೆಹಲಿಯಲ್ಲಿನ ತಂತ್ರಜ್ಞಾನ ಅಳವಡಿಕೆ ಬಗ್ಗೆ ನಮಗೆ ಪ್ರಸ್ತಾವನೆ ಬಂದಿದ್ದು, ಹೀಗಾಗಿ ಅದನ್ನು ವೀಕ್ಷಣೆ ಮಾಡುತ್ತೇವೆ. ದೆಹಲಿಯಲ್ಲಿ ನಗರ ಯೋಜನಾ ಪ್ರಾಧಿಕಾರದಲ್ಲಿ ರಸ್ತೆ ವಿಚಾರವಾಗಿ ಪ್ರತ್ಯೇಕ ನೀತಿ ಹೊಂದಿದ್ದು, ಇದನ್ನು ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದರು.
ಹೈಕಮಾಂಡ್ ನಾಯಕರ ಭೇಟಿ ಸಧ್ಯಕ್ಕೆ ಇಲ್ಲ. ಸಮಯ ಸಿಕ್ಕರೆ ಭೇಟಿ ಮಾಡುತ್ತೇನೆ. ಜೂನ್.10 ರಂದು ಎತ್ತಿನಹೊಳೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ಕರೆದಿದ್ದಾರೆ. ಹೀಗಾಗಿ ನಾಳೆ ಸಂಜೆ ಬೆಂಗಳೂರಿಗೆ ವಾಪಸ್ಸಾಗುತ್ತೇವೆ ಎಂದರು
ದೇಶ
ಆಪರೇಷನ್ ಸಿಂಧೂರ್ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಪ್ರಧಾನಿ ಮೋದಿ!

ಪಹಲ್ಗಾಮ್ ದಾಳಿಗೆ (Pahalgam Attack) ಭಾರತ ಆಪರೇಷನ್ ಸಿಂಧೂರ್ (Operation Sindoor) ಮೂಲಕ ಪ್ರತೀಕಾರ (Revenge) ತೀರಿಸಿಕೊಂಡಿತು. ಆಪರೇಷನ್ ಸಿಂಧೂರ್ ಸಮಯದಲ್ಲಿ, ಭಾರತ ಕನಿಷ್ಠ ಆರು ಪಾಕಿಸ್ತಾನಿ ಜೆಟ್ಗಳು (Pakistan Jet Destroy) ಮತ್ತು ಒಂದು ಮಿಲಿಟರಿ ವಿಮಾನವನ್ನು ಹೊಡೆದುರುಳಿಸಿದೆ ಎಂದು ಉನ್ನತ ರಕ್ಷಣಾ ಮೂಲಗಳು ಮಾಹಿತಿ ನೀಡಿವೆ. ಏಪ್ರಿಲ್ 23 ರಂದು, ಅಂದರೆ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಒಂದು ದಿನದ ನಂತರ, ನರೇಂದ್ರ ಮೋದಿ ಸರ್ಕಾರ ಪಾಕಿಸ್ತಾನದ ಬಹಾವಲ್ಪುರ್ ಮತ್ತು ಮುರಿಡ್ಕೆಯಲ್ಲಿರುವ ಭಯೋತ್ಪಾದಕ ಪ್ರಧಾನ ಕಚೇರಿಗಳನ್ನು ಪ್ರಮುಖ ಗುರಿಗಳಾಗಿ ಆಯ್ಕೆ ಮಾಡಿಕೊಂಡಿತ್ತು ಎಂದು ಹೇಳಲಾಗಿದೆ.
ಇನ್ನೂ ಮೇ.10 ರಂದು ಪಾಕಿಸ್ತಾನದೊಂದಿಗೆ ಕದನ ವಿರಾಮಕ್ಕೆ ಭಾರತ ಅಮೆರಿಕ ಅಥವಾ ಡೊನಾಲ್ಡ್ ಟ್ರಂಪ್ನಿಂದ ಒತ್ತಡಕ್ಕೆ ಒಳಗಾಗಿತ್ತು ಎಂಬುದು ಸುಳ್ಳು ಎಂದು ಉನ್ನತ ರಕ್ಷಣಾ ಮೂಲಗಳು ತಿಳಿಸಿವೆ. “ಟ್ರಂಪ್ ಮತ್ತು ಪ್ರಧಾನಿ ಮೋದಿ ಎಂದಿಗೂ ಮಾತನಾಡಲಿಲ್ಲ ಎಂಬುದೇ ಸತ್ಯ. ಜೆಡಿ ವ್ಯಾನ್ಸ್ ಕರೆ ಮಾಡಿ ಮಾತನಾಡಿದಾಗಲೂ ಪ್ರಧಾನಿ ತುಂಬಾ ದೃಢವಾಗಿದ್ದರು ಎನ್ನಲಾಗಿದೆ.
ಆಪರೇಷನ್ ಸಿಂಧೂರ್ ವಿಚಾರವಾಗಿ ಕಾಂಗ್ರೆಸ್ ಮತ್ತು ನಾಯಕ ರಾಹುಲ್ ಗಾಂಧಿ ಪ್ರಧಾನಿ ಮೋದಿಯವರನ್ನು ಗುರಿಯಾಗಿಸಿಕೊಂಡಿದ್ದಾರೆ. ಮೋದಿಯವರು ‘ಅಮೆರಿಕದ ಒತ್ತಡಕ್ಕೆ ಮಣಿದರು’ ಎಂದು ಕಾಂಗ್ರೆಸ್ ನಾಯಕರು ಲೇವಡಿ ಮಾಡಿದರು. ಇದೀಗ ಇದಕ್ಕೆ ಉತ್ತರ ಕೊಟ್ಟಿದ್ದು, ಯಾವುದೇ ಕಾರಣಕ್ಕೂ ನಾವು ಟ್ರಂಪ್ ಒತ್ತಡಕ್ಕೆ ಮಣಿದಿಲ್ಲ ಎಂದು ಬಿಜೆಪಿ ಕೇಂದ್ರ ಸರ್ಕಾರ ಹೇಳಿದೆ.
ಆಪರೇಷನ್ ಸಿಂಧೂರ್ ಯೋಜನೆ ಹೇಗೆ ಮಾಡಲಾಯಿತು?
ಪಹಲ್ಗಾಮ್ನಲ್ಲಿ ಭಯೋತ್ಪಾದಕ ದಾಳಿ ನಂತರ ಮುರಿಡ್ಕೆ ಮತ್ತು ಬಹವಾಲ್ಪುರ ಭಾರತದ ಪ್ರಮುಖ ಗುರಿಗಳಾಗಿದ್ವು ಎಂದು ಮೂಲಗಳು ತಿಳಿಸಿವೆ. ಏಪ್ರಿಲ್ 23 ರ ಸಭೆಯಲ್ಲಿಯೇ ಇದನ್ನು ನಿರ್ಧರಿಸಲಾಯಿತು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಏಪ್ರಿಲ್ 23 ರ ಬೆಳಿಗ್ಗೆ ಮೂರು ಸೇನಾ ಮುಖ್ಯಸ್ಥರು, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಜನರಲ್ ಅನಿಲ್ ಚೌಹಾಣ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್ಎಸ್ಎ) ಅಜಿತ್ ದೋವಲ್ ಅವರೊಂದಿಗೆ ದೀರ್ಘ ಸಭೆ ನಡೆಸಿದರು.
ಮುರಿಡ್ಕೆ ಮತ್ತು ಬಹವಾಲ್ಪುರದ ನಾಶದ ಯೋಜನೆಯಲ್ಲಿ ಈ ಸಭೆಯಲ್ಲಿಯೇ ನಿರ್ಧರಿಸಲಾಯ್ತು. ಇದು ಪಹಲ್ಗಾಮ್ ದಾಳಿಯ ಒಂದು ದಿನದ ನಂತರವೇ ಪ್ಲಾನ್ ಮಾಡಲಾಗಿತ್ತು. ಪಹಲ್ಗಾಮ್ ದಾಳಿಗೆ ಪ್ರತಿಕ್ರಿಯಿಸಲು ನಾವು ಸಂಪೂರ್ಣವಾಗಿ ಸಿದ್ಧರಿದ್ದೇವೆ ಎಂದು ಸೇನಾ ಮುಖ್ಯಸ್ಥರು ಈ ಸಭೆಯಲ್ಲಿ ಹೇಳಿದ್ದರು. ಏಪ್ರಿಲ್ 23ರ ಸಂಜೆ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆಯಲ್ಲಿ ಈ ಆಯ್ಕೆಗಳನ್ನು ಮುಂದಿಡಲಾಯಿತು ಎಂದು ಹೇಳಲಾಗಿದೆ.
ದಾಳಿ ರಾತ್ರಿ ವೇಳೆಯೇ ಏಕೆ ನಿರ್ಧರಿಸಲಾಯಿತು?
ರಕ್ಷಣಾ ಮೂಲಗಳ ಪ್ರಕಾರ, ಆಪರೇಷನ್ ಸಿಂಧೂರ್ ಅಡಿಯಲ್ಲಿ ದಾಳಿಗೆ ಹಲವಾರು ದಿನಾಂಕಗಳನ್ನು ಪರಿಗಣಿಸಲಾಗಿತ್ತು. ಮತ್ತು ಸಮಯವನ್ನು 12.30 ರಿಂದ 2 ರ ನಡುವೆ ನಿಗದಿಪಡಿಸಲಾಯಿತು. ರಾತ್ರಿಯ ಕತ್ತಲೆಯಲ್ಲಿಯೂ ಸಹ ಗುರಿಗಳ ಮೇಲೆ ಉಂಟಾದ ವಿನಾಶವನ್ನು ಕ್ಯಾಮೆರಾಗಳು ಸೆರೆಹಿಡಿಯಬಹುದೆಂದು ಖಚಿತಪಡಿಸಿಕೊಳ್ಳಲಾಯಿತು. ಅದಾಗ್ಯೂ, ಅಂತರರಾಷ್ಟ್ರೀಯ ಗಡಿ ಅಥವಾ ನಿಯಂತ್ರಣ ರೇಖೆಯನ್ನು (LoC) ದಾಟಬಾರದು ಎಂಬುದು ಸಭೆಯಲ್ಲಿ ನಿರ್ಧಾರವಾಗಿತ್ತು.
ಅಂತಿಮವಾಗಿ, ಭಾರತವು ಮೇ 7 ರಂದು ಬೆಳಗಿನ ಜಾವ 1.05 ರಿಂದ 1.30 ರ ನಡುವಿನ 22 ನಿಮಿಷಗಳ ಒಳಗೆ ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಹಲವಾರು ಭಯೋತ್ಪಾದಕ ಕೇಂದ್ರಗಳ ಮೇಲೆ ದಾಳಿ ಮಾಡಿತು. ಈ ಕಾರ್ಯಾಚರಣೆಯ ಆರಂಭಿಕ ಹಂತದಲ್ಲಿ ‘ಕಾರ್ಯತಂತ್ರದ ತಪ್ಪು’ಗಳಿಂದಾಗಿ ಭಾರತ ಕೆಲವು ಜೆಟ್ಗಳನ್ನು ಕಳೆದುಕೊಂಡಿದೆ ಎಂದು ಸಿಡಿಎಸ್ ಇತ್ತೀಚೆಗೆ ಒಪ್ಪಿಕೊಂಡಿತು, ಆದರೆ ಎಲ್ಲಾ ಭಾರತೀಯ ಪೈಲಟ್ಗಳು ಸುರಕ್ಷಿತವಾಗಿ ಮರಳಿದರು.
ಪಾಕಿಸ್ತಾನಕ್ಕೆ ಎಷ್ಟು ನಷ್ಟ?
ಅದಾಗ್ಯೂ, ಮೇ 7 ಮತ್ತು ಮೇ 10 ರ ಬೆಳಿಗ್ಗೆ ಭಾರತೀಯ ದಾಳಿಯಲ್ಲಿ ಆರಕ್ಕೂ ಹೆಚ್ಚು ಪಾಕಿಸ್ತಾನಿ ಜೆಟ್ಗಳನ್ನು ಹೊಡೆದುರುಳಿಸಲಾಗಿದೆ ಎಂದು ಭಾರತ ದೃಢಪಡಿಸಿದೆ. ಪಾಕಿಸ್ತಾನಿ ಸೇನೆಯ C-130J ಮಿಲಿಟರಿ ಸಾರಿಗೆ ವಿಮಾನವನ್ನು ಸಹ ಹೊಡೆದುರುಳಿಸಲಾಗಿದೆ. ಇವುಗಳಲ್ಲಿ ಪಾಕಿಸ್ತಾನ ವಾಯುಪಡೆಯ F-16 ಮತ್ತು JF-17 ಫೈಟರ್ ಜೆಟ್ಗಳು ಮತ್ತು ಪಾಕಿಸ್ತಾನಿ SAAB-2000 AWACS ಸೇರಿವೆ ಎಂದು ಉನ್ನತ ರಕ್ಷಣಾ ಮೂಲಗಳು ತಿಳಿಸಿವೆ. ಭಾರತೀಯ ನೌಕಾಪಡೆಯು ವಾಸ್ತವವಾಗಿ ಯುದ್ಧಕ್ಕೆ ಪ್ರವೇಶಿಸಲಿಲ್ಲ, ಆದರೆ ಅದನ್ನು ಸಿದ್ಧಪಡಿಸಲಾಗಿತ್ತು. ಭಾರತೀಯ ನೌಕಾಪಡೆಯು ಕರಾಚಿ ಬಂದರಿನ ಮೇಲೆ ದಾಳಿ ಮಾಡಬಹುದೆಂದು ಪಾಕಿಸ್ತಾನ ಭಯಪಟ್ಟಿತ್ತು ಎಂದು ಮೂಲಗಳು ತಿಳಿಸಿವೆ.
ದೇಶ
ನೀರಿಗಾಗಿ ಭಿಕ್ಷೆ ಬೇಡುತ್ತಿರುವ ಪಾಕಿಸ್ತಾನ- ಭಾರತಕ್ಕೆ 4 ಬಾರಿ ಪತ್ರ!

ನವದೆಹಲಿ: ಸಿಂಧೂ ನದಿ ನೀರು ಒಪ್ಪಂದವನ್ನು ಮರು ಸ್ಧಾಪಿಸುವಂತೆ ಬೇಡಿಕೊಂಡು ಇದುವರೆಗೂ ಪಾಕಿಸ್ತಾನ ಭಾರತಕ್ಕೆ ನಾಲ್ಕು ಬಾರಿ ಪತ್ರ ಬರೆದಿದೆ, ಪೂರ್ತಿಯಾಗಿ ನಡು ಬಗ್ಗಿಸಿರುವ ಪಾಕಿಸ್ತಾನ ಈಗ ಸಿಂಧೂ ನದಿಯ ನೀರಿಲ್ಲದೇ ಹೆಣಗಾಡುವ ಪರಿಸ್ಧಿತಿ ಎದುರಿಸುತ್ತಿದೆ,
ನಾಲ್ಕು ಪತ್ರಗಳ ಪೈಕಿ ಮೂರು ಪತ್ರಗಳು ಆಪರೇಷನ್ ಸಿಂಧೂರ್ ಬಳಿಕ ಕಳಿಸಲಾಗಿದೆ ಎಂದು ತಿಳಿದುಬಂದಿದೆ,
1960 ರಲ್ಲಿ ಭಾರತವು ಪಾಕಿಸ್ತಾನದೊಂದಿಗೆ ಸಿಂಧೂ ನದಿ ನೀರು ಹಂಚಿಕೆಯ ಬಗ್ಗೆ ದ್ವಿಪಕ್ಷೀಯ ಸೌಹಾರ್ದ ಒಪ್ಪಂದ ಮಾಡಿಕೊಂಡಿತ್ತು, ಆದರೆ ಪಾಕಿಸ್ತಾನದಲ್ಲಿ ಸೌಹಾರ್ದತೆ ಎಂಬ ಇಲ್ಲದಿದ್ದ ಕಾರಣ ಪಹಲ್ಗಾಮ್ ದಾಳಿಯ ಬಳಿಕ ಈ ಒಪ್ಪಂದವನ್ನು ರದ್ದುಪಡಿಸಲಾಯಿತು,
-
ಬಿಬಿಎಂಪಿ4 weeks ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು1 year ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು7 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ