ದೇಶ
ವಿಂಡೋಸ್ 10 ಬಳಕೆದಾರರಿಗೆ ಬಿಗ್ ಶಾಕ್; ಜಾಗತಿಕವಾಗಿ ಸ್ಥಗಿತಗೊಂಡು ಆತಂಕ ಸೃಷ್ಟಿಸಿದ ಸಾಫ್ಟ್ವೇರ್!

- /home/u521927855/domains/hosasuddi.in/public_html/wp-content/plugins/mvp-social-buttons/mvp-social-buttons.php on line 27
https://hosasuddi.in/wp-content/uploads/2024/07/Microsoft-Windows-3.jpg&description=ವಿಂಡೋಸ್ 10 ಬಳಕೆದಾರರಿಗೆ ಬಿಗ್ ಶಾಕ್; ಜಾಗತಿಕವಾಗಿ ಸ್ಥಗಿತಗೊಂಡು ಆತಂಕ ಸೃಷ್ಟಿಸಿದ ಸಾಫ್ಟ್ವೇರ್!', 'pinterestShare', 'width=750,height=350'); return false;" title="Pin This Post">
- Share
- Tweet /home/u521927855/domains/hosasuddi.in/public_html/wp-content/plugins/mvp-social-buttons/mvp-social-buttons.php on line 72
https://hosasuddi.in/wp-content/uploads/2024/07/Microsoft-Windows-3.jpg&description=ವಿಂಡೋಸ್ 10 ಬಳಕೆದಾರರಿಗೆ ಬಿಗ್ ಶಾಕ್; ಜಾಗತಿಕವಾಗಿ ಸ್ಥಗಿತಗೊಂಡು ಆತಂಕ ಸೃಷ್ಟಿಸಿದ ಸಾಫ್ಟ್ವೇರ್!', 'pinterestShare', 'width=750,height=350'); return false;" title="Pin This Post">
ವಿಂಡೋಸ್ 10, ಮೈಕ್ರೋಸಾಫ್ಟ್ ಅಭಿವೃದ್ಧಿ ಪಡಿಸಿರುವ ಹೊಸ ಸಾಫ್ಟ್ವೇರ್ ಈಗ ಜಾಗತಿಕವಾಗಿ ದೊಡ್ಡ ಸಮಸ್ಯೆಯಾಗಿ ಕಾಡಲು ಆರಂಭಿಸಿದೆ. ವಿಂಡೋಸ್ 10 ಬಳಕೆದಾರರು ಅದು ನೀಡುತ್ತಿರುವ ಹೊಸ ಸಮಸ್ಯೆಗೆ ಹೈರಾಣಾಗಿ ಹೋಗಿದ್ದಾರೆ. ವಿಶ್ವದ ಹಲವು ಕಡೆ ಬಿಎಸ್ಒಡಿ ಅಂದ್ರೆ ಬ್ಲೂ ಸ್ಕ್ರೀನ್ ಆಪ್ ಡೆತ್ ಅನ್ನೋ ಸಮಸ್ಯೆಯೊಂದು ಸೃಷ್ಟಿಯಾಗಿದೆ.
ವಿಂಡೋಸ್ 10 ಸಾಫ್ಟ್ವೇರ್ ಅಳವಡಿಸಿಕೊಂಡ ಜಗತ್ತಿನ ಅನೇಕ ಕಂಪ್ಯೂಟರ್ಗಳಲ್ಲಿ ಈ ಸಮಸ್ಯೆಯೊಂದು ಕಾಡುತ್ತಿದೆ. ವಿಶ್ವಾದ್ಯಂತ ಲಕ್ಷ, ಲಕ್ಷ ಜನರು ಈ ಸಮಸ್ಯೆಯಿಂದಾಗಿ ಹೈರಾಣಾಗಿದ್ದಾರೆ.. ಅಸಲಿಗೆ ಏನಿದು ಬಿಎಸ್ಓಡಿ ಅಂತ ನೋಡಿದ್ರೆ, ವಿಂಡೋಸ್ 10 ಅಳವಡಿಸಿಕೊಂಡ ಕಂಪ್ಯೂಟರ್ಗಳು ಸಾಮೂಹಿಕವಾಗಿ ಸ್ಟ್ರೈಕ್ ಆಗುತ್ತಿವೆ. ನೀಲಿ ತೆರೆಯೊಂದು ಕಂಪ್ಯೂಟರ್ ಸ್ಕ್ರೀನ್ ಮೇಲೆ ಪ್ರತ್ಯಕ್ಷವಾಗಿ ಹಲವು ಗಂಟೆಗಳ ಕಾಲ ಕಂಪ್ಯೂಟರ್ ಬಳಕೆದಾರರನ್ನು ಪೀಡಿಸುತ್ತಿದೆ. ಇದು ಕೇವಲ ಜನರಿಗೆ ಮಾತ್ರವಲ್ಲ ವಿಶ್ವಾದ್ಯಂತ ಹಲವು ಕಂಪನಿಗಳಲ್ಲೂ ಈ ಸಮಸ್ಯೆ ಶುರುವಾಗಿದೆ.
ಏರ್ಪೋರ್ಟ್ಗಳಲ್ಲಿ ಈ ಬಿಎಸ್ಓಡಿ ಯಿಂದಾಗಿ ವಿಮಾನ ಹಾರಾಟಗಳ ನಿರ್ವಹಣೆಗೆ ತೊಂದರೆಯಾಗಿ ಸರ್ಕಾರಿ ಕಚೇರಿಗಳು, ಖಾಸಗಿ ಕಂಪನಿಗಳು ಯಾವೆಲ್ಲಾ ವಿಂಡೋಸ್ 10 ಅಳವಡಿಸಿಕೊಂಡಿವೆಯೋ ಅವೆಲ್ಲವೂ ಸಾಮೂಹಿಕವಾಗಿ ಇಂತಹದೊಂದು ತೊಂದರೆಯನ್ನು ಅನುಭವಿಸುತ್ತಿವೆ. ಈ ಒಂದು ಸಮಸ್ಯೆ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟು ಹಾಕಿದ್ದು, ಸಾಫ್ಟ್ವೇರ್ನಿಂದ ತೊಂದರೆ ಅನುಭವಿಸಿದವರೆಲ್ಲಾ, ಕಂಪ್ಯೂಟರ್ ಡಿಸ್ಪ್ಲೇಗಳ ಫೋಟೋ ತೆಗೆದು ಪೋಸ್ಟ್ ಮಾಡಿ ತಮ್ಮ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ. ದೆಹಲಿ ಏರ್ಪೋರ್ಟ್ನಲ್ಲೂ ವಿಮಾನ ಸಂಚಾರ ಸ್ಥಗಿತವಾಗಿದ್ದು, ವಿಸ್ತಾರ, ಇಂಡಿಗೋ ಏರ್ಲೈನ್ಸ್ ಸಿಬ್ಬಂದಿ ಕೈಯಲ್ಲಿ ಬರೆದ ಬೋರ್ಡಿಂಗ್ ಪಾಸ್ಗಳನ್ನು ನೀಡುತ್ತಿದ್ದಾರೆ.
ವಿಂಡೋಸ್ 10 ಸರಿಯಾಗಿ ಲೋಡ್ ಆಗುತ್ತಿಲ್ಲ. ಪದೇ ಪದೇ ಕಂಪ್ಯೂಟರ್ಗಳನ್ನ ರಿಸ್ಟಾರ್ಟ್ ಹಾಗೂ ಶಟ್ ಡೌನ್ ಮಾಡಿ ಮತ್ತೆ ಆನ್ ಮಾಡುವ ಅನಿವಾರ್ಯತೆಗಳು ಸೃಷ್ಟಿಯಾಗಿವೆ. ಬ್ಯಾಕ್ ಬಗ್, ಬ್ಲ್ಯೂ ಸ್ಕ್ರೀನ್ನಂತಹ ಎರರ್ ಸಮಸ್ಯೆಗಳು ಫಾಲ್ಕಾನ್ ಸೆನ್ಸಾರ್ಗೆ ಸಂಬಂಧಿಸಿದ ಸಮಸ್ಯೆಗಳಾಗಿವೆ, ಸದ್ಯದಲ್ಲಿಯೇ ನಮ್ಮ ಎಂಜನೀಯರಿಂಗ್ ಟೀಮ್ ಎಲ್ಲ ಸಮಸ್ಯೆಗಳನ್ನು ಪರಿಹರಿಸಲಿದೆ ಎಂದು ಮೈಕ್ರೋಸಾಫ್ಟ್ ಕಂಪನಿ ಹೇಳಿದೆ.
ಈ ಹಿಂದೆಯೂ ಹೀಗೆ ಸಮಸ್ಯೆ ಸೃಷ್ಟಿಸಿತ್ತು ವಿಂಡೋಸ್ 10
ಕಳೆದ ನಾಲ್ಕೈದು ವರ್ಷಗಳ ಹಿಂದೆಯೂ ಕೂಡ ಇಂತಹದೊಂದು ಸಮಸ್ಯೆಯು ವಿಂಡೋ 10ನಲ್ಲಿ ಕಂಡು ಬಂದಿತ್ತು. ಇದಕ್ಕೆ ಅಸಲಿ ಕಾರಣ ಏನು ಅನ್ನೋದು ಇನ್ನೂ ಕೂಡ ತಿಳಿದು ಬಂದಿಲ್ಲ. ಅದನ್ನು ಪರಿಣಿತರು ಸದ್ಯದಲ್ಲಿಯೇ ಕಂಡು ಹಿಡಿದು, ಆಗಿರುವ ಸಮಸ್ಯೆಗಳನ್ನು ಆದಷ್ಟು ಬೇಗ ಬಗೆಹರಿಸಲಿದ್ದಾರೆ ಅಂತ ಎಐ ಹಾಗೂ ಟೆಕ್ ಎಕ್ಸಪರ್ಟ್ ಅಂಕುಶ್ ಸಬ್ಹರ್ವಾಲಾ ಹೇಳಿದ್ದಾರೆ.
ಭಾರತೀಯ ವಿಮಾನಯಾನ ಕಂಪನಿಗಳಿಗೂ ತೊಂದರೆ
ಆದರೂ ಕೂಡ ವಿಶ್ವದ ಅನೇಕ ಸಂಸ್ಥೆಗಳು ಅದರಲ್ಲಿಯೂ ಪ್ರಮುಖವಾಗಿ ವಿಮಾನ ಕಂಪನಿಗಳಿಗೆ ಈ ಬ್ಲ್ಯೂ ಸ್ಕ್ರೀನ್ ಆಫ್ ಡೆತ್ ಅನೇಕ ಸಂಕಷ್ಟಗಳನ್ನು ತಂದಿಟ್ಟಿದೆ. ಭಾರತದ ಪ್ರಮುಖ ಏರ್ಲೈನ್ಸ್ ಕಂಪನಿಗಳಲ್ಲೊಂದಾದ ಸ್ಪೈಸ್ ಜೆಟ್ ಸಂಸ್ಥೆಯೂ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು ವಿಂಡೋಸ್ 10 ಕ್ರೌಡ್ಸ್ಟ್ರೈಕ್ ಬಗ್ಗೆ ಹೇಳಿಕೊಂಡಿದೆ. ಸದ್ಯ ನಾವು ಅನೇಕ ತಾಂತ್ರಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ವಿಮಾನಗಳ ಹಾರಾಟದ ಬಗ್ಗೆ ತಿಳಿಸಲು ಅನೇಕ ತೊಂದರೆಗಳು ಉಂಟಾಗುತ್ತಿದೆ, ಈ ಬಗ್ಗೆ ನಮ್ಮ ಟೆಕ್ನಿಕಲ್ ಟೀಮ್ ಕಾರ್ಯಪ್ರವೃತ್ತವಾಗಿದ್ದು, ಶೀಘ್ರದಲ್ಲಿಯೇ ಸಮಸ್ಯೆಗಳನ್ನು ಬಗೆಹರಿಸಲಿದೆ ಎಂದು ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆ ತನ್ನ ಎಕ್ಸ್ ಖಾತೆಯಲ್ಲಿ ಹೇಳಿಕೊಂಡಿದೆ. ಅಕಾಸಾ ಏರ್ ಕೂಡ ಇದೇ ಮಾದರಿಯಲ್ಲಿಯೇ ತನ್ನ ಸಮಸ್ಯೆಗಳನ್ನು ಹೇಳಿಕೊಂಡಿದೆ, ತಾಂತ್ರಿಕ ಸಮಸ್ಯೆಗಳ ಕಾರಣದಿಂದಾಗಿ ಆನ್ಲೈನ್ ಸೇವೆಗಳಲ್ಲಿ ಕೊಂಚ ಸಮಸ್ಯೆಯುಂಟಾಗಿದೆ, ಹೀಗಾಗಿ ಪ್ರಯಾಣಿಕರು ದಯವಿಟ್ಟು ಸಹಕರಿಸಬೇಕು ಎಂದು ಹೇಳಿದೆ.
ಆರಂಭಿಕ ಮಾಹಿತಿಯ ಪ್ರಕಾರ, ವಿಂಡೋಸ್ 10 ಸಾಫ್ಟ್ವೇರ್ ಸದ್ಯ ಅಪ್ಡೇಟ್ ಮಾಡಲಾಗುತ್ತಿದೆ. ಹೀಗಾಗಿಯೇ ಇಂತಹದೊಂದು ತಾಂತ್ರಿಕ ಸಮಸ್ಯೆಗಳು ಸೃಷ್ಟಿಯಾಗಿವೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಸಮಸ್ಯೆಯ ಗಂಭೀರತೆಯನ್ನು ಅರಿತಿರುವ ಮೈಕ್ರೋಸಾಫ್ಟ್ ಸಂಸ್ಥೆ ಶೀಘ್ರ ಪರಿಹಾರಕ್ಕೆ ಮುಂದಾಗಿದೆ. ಆಗಿರುವ ಸಮಸ್ಯೆಯನ್ನು ಸಾಧ್ಯವಾದಷ್ಟು ಬೇಗ ಪರಿಹರಿಸುವುದಾಗಿ ಸಂಸ್ಥೆ ಭರವಸೆಯನ್ನು ಕೊಟ್ಟಿದೆ. ಅದು ಅಲ್ಲದೇ ಈ ಜಾಗತಿಕ ಸಮಸ್ಯೆಗೆ ಕಾರಣವಾಗಿದ್ದು ಒಂದು ಬಗ್ ಹೀಗಾಗಿ ಅದನ್ನು ನಿವಾರಿಸುವತ್ತ ನಮ್ಮ ತಾಂತ್ರಿಕಪಡೆ ನಿರತವಾಗಿದೆ ಎಂದೂ ಕೂಡ ಭರವಸೆಯನ್ನು ನೀಡಲಾಗಿದೆ.
ಆಮೇಲೆ ಈ ರೀತಿಯ ಸಮಸ್ಯೆಗಳು ಆಗಾಗ ಮರುಕಳಿಸುತ್ತಲೇ ಇರುತ್ತವೆ ಅದು ಮೈಕ್ರೋಸಾಫ್ಟ್ಗೆ ಸಂಬಂಧಿಸಿದ ಸಾಫ್ಟ್ವೇರ್ಗಳೇ ಇರಲಿ ಅಥವಾ ಬೇರೆಯದ್ದೇ ಸಾಫ್ಟ್ವೇರ್ಗಳಿರಲಿ, ವರ್ಷದಲ್ಲಿ ಒಂದೆರೆಡು ಬಾರಿ ಈ ರೀತಿಯ ಸಮಸ್ಯೆಗಳನ್ನು ಎದುರಿಸುವ ಅನಿವಾರ್ಯತೆ ಎಲ್ಲ ಸಾಫ್ಟ್ವೇರ್ ಕಂಪನಿಗಳಿಗೂ ಒದಗಿ ಬರುತ್ತದೆ. ಜಾಗತಿಕವಾಗಿ ಇಂತಹದೊಂದು ಸಮಸ್ಯೆಗಳು ಆಗಾಗ ಎದುರುಗಾತ್ತವೆ. ಹೀಗಾಗಿ ಅಂತಹ ಟೆಕ್ ಕಂಪನಿಗಳು ಆಗಿರುವ ಸಮಸ್ಯೆಯನ್ನು ಬಗೆಹರಿಸಲು ಕೆಲವೊಂದಿಷ್ಟು ಸಮಯಗಳನ್ನು ತೆಗೆದುಕೊಳ್ಳುತ್ತವೆ. ಕನಿಷ್ಠ ಮೂರರಿಂದ ನಾಲ್ಕು ತಾಸುಗಳ ಮಟ್ಟಿಗೆ ಈ ಬ್ಲ್ಯೂ ಸ್ಕ್ರೀನ್ ಆಫ್ ಡೆತ್ ಅನ್ನೋ ಸಮಸ್ಯೆಯನ್ನು ಎದುರಿಸುವುದು ಅನಿವಾರ್ಯ ಎಂದೇ ಹೇಳಲಾಗುತ್ತಿದೆ.
ದೇಶ
ಪಿಎಂ ಮೋದಿ ಆಗಸ್ಟ್ 10ರಂದು ಬೆಂಗಳೂರಿಗೆ: ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ

ಬೆಂಗಳೂರು: ನಮ್ಮ ಮೆಟ್ರೋ (Namma Metro) ಹಳದಿ ಮಾರ್ಗದ (Yellow Line) ಉದ್ಘಾಟನೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು (PM Modi) ಆಗಸ್ಟ್ 10ರಂದು ಬೆಂಗಳೂರಿಗೆ ಬರುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಧಾನಿಯವರು ಆಗಸ್ಟ್ 10ರಂದು ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟನೆ ಮಾಡುವ ಉದ್ದೇಶದಿಂದ ಬರುತ್ತಿದ್ದಾರೆ. ಅವರ ಭೇಟಿಗೆ ಸಿದ್ಧತೆಗಳು ನಡೆಯುತ್ತಿವೆ. ಟೈಮ್ ಟು ಟೈಮ್ ಕಾರ್ಯಕ್ರಮಗಳ ಬಗ್ಗೆ ಇನ್ನೂ ವಿವರ ಬಾಕಿಯಿದೆ,” ಎಂದು ಹೇಳಿದರು.
ವೈಭವದಿಂದ ಕಾರ್ಯಕ್ರಮ?
ಆದರೆ, ಮೂಲ ಯೋಜನೆಗೆ ಬದಲಾವಣೆ ಆಗಿದೆ. ಈಗ ಪ್ರಧಾನಿಯವರು ಕೇವಲ ಹಳದಿ ಮಾರ್ಗದ ಮೆಟ್ರೋ ಮತ್ತು ವಂದೇ ಭಾರತ್ ರೈಲು ಉದ್ಘಾಟನೆಗೆ ಮಾತ್ರ ಭಾಗಿಯಾಗಲಿದ್ದಾರೆ. ಬಿಜೆಪಿ ಕಾರ್ಯಕರ್ತರ ಸಮಾವೇಶ ಮತ್ತು ರೋಡ್ ಶೋ ಕಾರ್ಯಾಚರಣೆಗಳು ರದ್ದುಪಡಿಸಲಾಗಿದೆ.
ಇದರ ಪರಿಣಾಮವಾಗಿ, ಒಂದು ವರ್ಷದಿಂದ ಮೋದಿಯವರ ಆಗಮನದ ನಿರೀಕ್ಷೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರು ನಿರಾಸೆಗೊಳಗಾಗಿದ್ದಾರೆ ಎಂದು ವರದಿಯಾಗಿದೆ.
ದೇಶ
ಭಾರತ vs ಅಮೆರಿಕ: ರಷ್ಯಾದ ತೈಲದ ಬಗ್ಗೆ ಉದ್ವಿಗ್ನತೆ, ಸೇನೆಯಿಂದ ತಿರುಗೇಟು

ಬೆಂಗಳೂರು: ರಷ್ಯಾದಿಂದ ಕಚ್ಚಾ ತೈಲ ಖರೀದಿಯ ಕುರಿತು ಭಾರತ-ಅಮೆರಿಕ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಂತಾಗಿದೆ. ಭಾರತ ರಷ್ಯಾದಿಂದ ತೈಲ ಆಮದು ಮಾಡುತ್ತಿರುವುದಕ್ಕೆ ಅಮೆರಿಕ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, ಭಾರತೀಯ ಸೇನೆ ಅಮೆರಿಕದ ದ್ವೇಧಾಚರಣೆ ವಿರುದ್ಧ ತಿರುಗೇಟು ನೀಡಿದೆ.
ಸೋಷಿಯಲ್ ಮೀಡಿಯಾದಲ್ಲಿ “ಈ ದಿನ ಆ ವರ್ಷ – ಯುದ್ಧದ ನಿರ್ಮಾಣ – 05 ಆಗಸ್ಟ್ 1971” ಎಂಬ ಶೀರ್ಷಿಕೆಯಡಿ ಸೇನೆಯು 1971ರ ಯುದ್ಧದ ಕಾಲದ ಪತ್ರಿಕಾ ಕಟಿಂಗ್ ಹಂಚಿಕೊಂಡಿದೆ. 1954ರಿಂದ 1971ರವರೆಗೆ ಅಮೆರಿಕ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ಪೂರೈಸಿದ ಬಗ್ಗೆ ಪೇಪರ್ ಕಟಿಂಗ್ ಉಲ್ಲೇಖಿಸುತ್ತಾ, “ಅಮೆರಿಕ ಪಾಕ್ ಪರ ಕೆಲಸ ಮಾಡಿತ್ತಲ್ಲವೆ?” ಎಂದು ಪ್ರಶ್ನಿಸಿದೆ.
ಇದು ಉಕ್ರೇನ್ ವಿರುದ್ಧದ ಯುದ್ಧಕ್ಕೆ ಭಾರತ ಹಣ ಒದಗಿಸುತ್ತಿದೆ ಎಂಬ ಅಮೆರಿಕದ ಆರೋಪಕ್ಕೆ ಪ್ರತಿಕ್ರಿಯೆಯಾಗಿದೆ. ಭಾರತವು ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟದ ಟೀಕೆಗಳನ್ನು ‘ಅಸಮರ್ಥನೀಯ ಹಾಗೂ ಅಸಮಂಜಸ’ವೆಂದು ತಿರಸ್ಕರಿಸಿದೆ. ಭಾರತ ತನ್ನ ತೈಲ ನೀತಿಯನ್ನು ಆರ್ಥಿಕ ಶಕ್ತಿಯ ದೃಷ್ಟಿಯಿಂದ ಮುಂದುವರಿಸುತ್ತಿದೆ.
ದೇಶ
ಸೇನೆ ಕುರಿತ ಹೇಳಿಕೆ: ಸುಪ್ರೀಂ ಕೋರ್ಟ್ ಟೀಕೆಗೆ ಪ್ರಿಯಾಂಕಾ ಗಾಂಧಿಯಿಂದ ಕಠಿಣ ಪ್ರತಿಕ್ರಿಯೆ

ನವದೆಹಲಿ: ಭಾರತೀಯ ಸೇನೆ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಇದೀಗ ಅವರ ಸಹೋದರಿ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.
ರಾಹುಲ್ ಗಾಂಧಿಯ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ ಟೀಕೆಗೆ ಪ್ರತಿಕ್ರಿಯಿಸಿ ಪ್ರಿಯಾಂಕಾ ಗಾಂಧಿ,
“ಯಾರು ನಿಜವಾದ ಭಾರತೀಯರು ಎಂಬುದನ್ನು ನಿರ್ಧರಿಸಲು ನ್ಯಾಯಾಧೀಶರು ಯೋಗ್ಯರಲ್ಲ. ರಾಹುಲ್ ಗಾಂಧಿಗೆ ಭಾರತೀಯ ಸೇನೆಯ ಬಗ್ಗೆ ಅಪಾರ ಗೌರವವಿದೆ. ಅವರು ಎಂದಿಗೂ ಸೇನೆಯ ವಿರುದ್ಧ ಕೆಟ್ಟ ಮಾತುಗಳನ್ನು ಮಾತನಾಡಲ್ಲ,” ಎಂದು ತಿಳಿಸಿದ್ದಾರೆ.
ಗಲ್ವಾನ್ ಕಣಿವೆ ಸಂಘರ್ಷ ಕುರಿತು ಮಾತನಾಡಿದ ವೇಳೆ ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ‘ಅನುಚಿತ’ ಎಂದು ಖಂಡಿಸಿದ್ದು, “ನಿಜವಾದ ಭಾರತೀಯರು ಈ ರೀತಿ ಮಾತನಾಡುವುದಿಲ್ಲ” ಎಂದು ಹೇಳಿದ್ದಾರೆ. ಇದನ್ನು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದು, “ವಿರೋಧ ಪಕ್ಷದ ನಾಯಕರಾಗಿ ಸರ್ಕಾರವನ್ನು ಪ್ರಶ್ನಿಸುವುದು ರಾಹುಲ್ ಅವರ ಕರ್ತವ್ಯ. ನ್ಯಾಯಮೂರ್ತಿಗಳು ಇಂತಹ ಹೇಳಿಕೆ ನೀಡುವುದು ಸರಿಯಲ್ಲ,” ಎಂದಿದ್ದಾರೆ.
ಅದೇ ರೀತಿ, ಪ್ರಿಯಾಂಕಾ ಗಾಂಧಿ ಸರ್ಕಾರದ ನಡೆಗೆ ಶಂಕೆ ವ್ಯಕ್ತಪಡಿಸಿ,
“ರಾಹುಲ್ ಗಾಂಧಿಯ ಪ್ರಶ್ನೆಗಳಿಗೆ ಸರ್ಕಾರದ ಬಳಿ ಉತ್ತರಗಳಿಲ್ಲ. ಅವರು ಚರ್ಚೆಗೆ ತಯಾರಿಲ್ಲ. ಸಂಸತ್ತನ್ನು ಸರಿಯಾಗಿ ನಡೆಸಲಾಗುತ್ತಿಲ್ಲ. ಇದನ್ನೆಲ್ಲಾ ಮರೆಮಾಚಲು ಈ ರೀತಿಯ ತಂತ್ರಗಳನ್ನು ಬಳಸುತ್ತಿದ್ದಾರೆ,” ಎಂದು ವಾಗ್ದಾಳಿ ನಡೆಸಿದ್ದಾರೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ