ಕ್ರೀಡೆ
ಕೊಹ್ಲಿ ಮೇಲಿನ ಸಿಟ್ಟಿಗೆ ರಾಹುಲ್ ವಿರುದ್ಧ ದ್ವೇಷ ಸಾಧಿಸಿದ ಗಂಭೀರ್.. ಕನ್ನಡಿಗನಿಗೆ ಭಾರೀ ಅನ್ಯಾಯ!

ಕಳೆದ ವರ್ಷ ಟೀಮ್ ಇಂಡಿಯಾವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಕನ್ನಡಿಗ ಕೆಎಲ್ ರಾಹುಲ್ ಸೌತ್ ಆಫ್ರಿಕಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯನ್ನು 2-1 ರಿಂದ ಗೆದ್ದು ಸಂಭ್ರಮಿಸಿದ್ರು. ಈ ಮೂಲಕ ಬರೋಬ್ಬರಿ 21 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ಬಳಿಕ ಹರಿಣಿಗಳ ನಾಡಿನಲ್ಲಿ ಸೌತ್ ಆಫ್ರಿಕಾ ತಂಡವನ್ನು ಮಣಿಸಿದ 2ನೇ ಟೀಮ್ ಇಂಡಿಯಾ ನಾಯಕ ಎಂಬ ದಾಖಲೆ ನಿರ್ಮಿಸಿದ್ರು. ಹಾಗಾಗಿ ರೋಹಿತ್ ಶರ್ಮಾ ಉಪಸ್ಥಿತಿಯಲ್ಲಿ ಶ್ರೀಲಂಕಾ ವಿರುದ್ದ ಕೆ.ಎಲ್ ರಾಹುಲ್ ಅವರೇ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ ಅನ್ನೋ ಮಾತುಗಳು ಕೇಳಿ ಬಂದಿದ್ದವು.
ಶ್ರೀಲಂಕಾ ವಿರುದ್ಧ ಜೂನ್ 27ನೇ ತಾರೀಕಿನಿಂದ 3 ಟಿ20 ಪಂದ್ಯ ಮತ್ತು 3 ಏಕದಿನ ಪಂದ್ಯಗಳ ಸರಣಿ ಶುರುವಾಗಲಿದೆ. ಈಗಾಗಲೇ ಶ್ರೀಲಂಕಾ ವಿರುದ್ಧದ ಸರಣಿಗೆ ಬಲಿಷ್ಠ ಟೀಮ್ ಇಂಡಿಯಾ ಅನೌನ್ಸ್ ಆಗಿದೆ. ಟೀಮ್ ಇಂಡಿಯಾ ವಿಶ್ವಕಪ್ ಗೆದ್ದ ಬೆನ್ನಲ್ಲೇ ವಿರಾಟ್ ಕೊಹ್ಲಿ, ರೋಹಿತ್ 20 ಅಂತರಾಷ್ಟ್ರೀಯ ಕ್ರಿಕೆಟ್ಗೆ ಗುಡ್ ಬೈ ಹೇಳಿದ್ರು. ಅಷ್ಟೇ ಅಲ್ಲದೇ ಶ್ರೀಲಂಕಾ ಪ್ರವಾಸದಿಂದ ರೆಸ್ಟ್ ಕೂಡ ಕೇಳಿದ್ದರು. ಬಿಸಿಸಿಐ ಕೊಹ್ಲಿ, ರೋಹಿತ್ ಮತ್ತು ಬುಮ್ರಾಗೆ ರೆಸ್ಟ್ ನೀಡಿತ್ತು. ಗಂಭೀರ್ ಕೋಚ್ ಆದ ಬಳಿಕ ಇದು ಮೊದಲ ಸರಣಿ ಆಗಿದ್ದು, ಮೂವರು ಸ್ಟಾರ್ ಆಟಗಾರರು ಶ್ರೀಲಂಕಾ ವಿರುದ್ಧ ಏಕದಿನ ಸೀರೀಸ್ ಆಡಲೇಬೇಕು ಎಂದು ಮನವಿ ಮಾಡಿಕೊಂಡಿದ್ದರು. ಇದಕ್ಕೆ ವಿರಾಟ್ ಕೊಹ್ಲಿ, ರೋಹಿತ್ ಸಮ್ಮತಿಸಿದ್ದು, ಈಗ ತಂಡಕ್ಕೆ ವಾಪಸ್ಸಾಗಿದ್ದಾರೆ. ಇನ್ನು, ಟಿ20 ವಿಶ್ವಕಪ್ನಿಂದ ದೂರ ಉಳಿದಿದ್ದ ಕೆ.ಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಕೂಡ ಏಕದಿನ ಸರಣಿಗೆ ಆಯ್ಕೆಯಾಗಿದ್ದಾರೆ. ಬುಮ್ರಾ ಮಾತ್ರ ರೆಸ್ಟ್ನಲ್ಲಿದ್ದಾರೆ.
ರಾಹುಲ್ ಭಾರೀ ಮೋಸ!
ರೋಹಿತ್ ಶರ್ಮಾ ಏಕದಿನ ಸೀರೀಸ್ನಿಂದ ರೆಸ್ಟ್ ತೆಗೆದುಕೊಂಡಿದ್ದಾರೆ ಎನ್ನಲಾಗಿತ್ತು. ಹಾಗಾಗಿ ಏಕದಿನ ಮಾದರಿಯಲ್ಲಿ ಭಾರತ ತಂಡವನ್ನು ರಾಹುಲ್ ಅವರೇ ಮುನ್ನಡೆಸಲಿದ್ದಾರೆ. ಕೋಚ್ ಗೌತಮ್ ಗಂಭೀರ್ ಕೂಡ ಕೆ.ಎಲ್ ರಾಹುಲ್ ಭಾರತ ಏಕದಿನ ತಂಡದ ಕ್ಯಾಪ್ಟನ್ ಆಗಲಿ ಎಂಬ ಅಭಿಪ್ರಾಯ ಕೂಡ ವ್ಯಕ್ತಪಡಿಸಿದ್ದಾರೆ ಅನ್ನೋ ವಿಚಾರ ತಿಳಿದು ಬಂದಿತ್ತು. ಆದರೀಗ, ರೋಹಿತ್ ವಾಪಸ್ ಬಂದಿದ್ದು, ಅವರೇ ಮುನ್ನಡೆಸುತ್ತಿದ್ದಾರೆ. ವಿಚಿತ್ರ ಎಂದರೆ ಶುಭ್ಮನ್ ಗಿಲ್ ಉಪನಾಯಕನ ಪಟ್ಟ ಕಟ್ಟಲಾಗಿದೆ. ಈ ಮೂಲಕ ಟೀಮ್ ಇಂಡಿಯಾ ಮುಂದಿನ ಕ್ಯಾಪ್ಟನ್ ಆಗಬೇಕಿದ್ದ ಕೆ.ಎಲ್ ರಾಹುಲ್ಗೆ ಬಿಗ್ ಶಾಕ್ ನೀಡಲಾಗಿದೆ.
ವಿರಾಟ್ ಕೊಹ್ಲಿ ಮೇಲೆ ಸಿಟ್ಟಿಗೆ ಹೀಗೆ ಮಾಡಿದ್ರಾ ಗಂಭೀರ್..?
ಸದ್ಯ ಗಂಭೀರ್ ಮಾತಾಡಿರೋ ಹಳೆ ವಿಡಿಯೋ ಒಂದು ವೈರಲ್ ಆಗಿದೆ. ನಾನು ಉಪನಾಯಕ ಆಗಿದ್ದೆ, ಧೋನಿ ಕ್ಯಾಪ್ಟನ್ ಇದ್ದರು. ಬಾಂಗ್ಲಾದೇಶ ವಿರುದ್ಧ ಸರಣಿಗೆ ಟೀಮ್ ಇಂಡಿಯಾ ಪ್ರಕಟ ಆಯ್ತು. ಆಗ ಒಂದೇ ಒಂದು ಚೇಂಜಸ್ ಆಗಿದ್ದು, ನನ್ನನ್ನು ಉಪನಾಯಕನ ಸ್ಥಾನದಿಂದ ತೆಗೆದು ಹಾಕಲಾಯ್ತು. ವಿರಾಟ್ ಕೊಹ್ಲಿಗೆ ವೈಎಸ್ ಕ್ಯಾಪ್ಟನ್ಸಿ ನೀಡಲಾಗಿತ್ತು. ಕ್ಯಾಪ್ಟನ್ ಇರುವಾಗ ಉಪನಾಯಕನನ್ನು ಬದಲಿಸಿದ್ದು ಕ್ರಿಕೆಟ್ ಇತಿಹಾಸದಲ್ಲೇ ಅದೇ ಮೊದಲು ಎಂದಿದ್ದರು. ಹಾಗಾಗಿ ಕೊಹ್ಲಿ, ಧೋನಿ ಮೇಲಿನ ಸಿಟ್ಟಿಗಾಗಿ ಗಂಭೀರ್ ಕೆ.ಎಲ್ ರಾಹುಲ್ ಅವರ ಉಪನಾಯಕನ ಪಟ್ಟ ಕಿತ್ತುಕೊಂಡಿದ್ದಾರೆ ಅನ್ನೋ ಮಾತುಗಳು ಕೇಳಿ ಬಂದಿವೆ.
ಇದನ್ನೂ ಓದಿ: ಗಂಭೀರ್ ಆಡಿದ ಗೇಮ್ಗೆ ಬೆಂಡ್ ಆದ ಕೊಹ್ಲಿ.. ಆರಂಭದಲ್ಲೇ ಜುಟ್ಟು ಹಿಡಿದು ಬಿಗಿಗೊಳಿಸಿದ ಗೌತಿ..!